ಕರಾವಳಿ

ಬಲ್ಯ: ನಾಪತ್ತೆಯಾಗಿದ್ದ ಯುವತಿಯನ್ನು ಪತ್ತೆಹಚ್ಚಿದ ಪೊಲೀಸರು

ಕಡಬ, ಜೂ.12. ಕೆಲಸಕ್ಕೆಂದು ತೆರಳಿ ನಾಪತ್ತೆಯಾದ್ದ ಯುವತಿಯನ್ನು ಕಡಬ ಪೊಲೀಸರು ಮಂಗಳವಾರದಂದು ಪತ್ತೆಹಚ್ಚಿ ಕರೆದುಕೊಂಡು ಬಂದಿದ್ದಾರೆ. ಕೂಲಿ ಕೆಲಸಕ್ಕೆ ತೆರಳುತ್ತಿದ್ದ ಬಲ್ಯ ಗ್ರಾಮದ ದೇರಾಜೆ ಪನ್ಯಾಡಿ ನಿವಾಸಿ ದಿ.ಗುರುವ ಎಂಬವರ ಪುತ್ರಿ ಕು|ಸುಂದರಿ(30)‌ ಎಂಬಾಕೆ ಕಳೆದ ಸುಮಾರು ಒಂದು ತಿಂಗಳ ಹಿಂದೆ ಕೆಲಸಕ್ಕೆಂದು ತೆರಳಿದ್ದು, ಆ ಬಳಿಕ ಮನೆಗೆ ಬಾರದೆ ನಾಪತ್ತೆಯಾಗಿರುವುದಾಗಿ ಈಕೆಯ ತಾಯಿ ಚೋಮು ಕಡಬ ಠಾಣೆಗೆ ದೂರು ನೀಡಿದ್ದರು. ಅದರಂತೆ ಪ್ರಕರಣ ದಾಖಲಿಸಿಕೊಂಡ ಕಡಬ ಪೊಲೀಸರು ಪೊಳಲಿ ಕೈಕಂಬ ಸಮೀಪದ ಮನೆಯೊಂದರಲ್ಲಿ ಕೆಲಸಕ್ಕೆ ಸೇರಿದ್ದ […]

ಬಲ್ಯ: ನಾಪತ್ತೆಯಾಗಿದ್ದ ಯುವತಿಯನ್ನು ಪತ್ತೆಹಚ್ಚಿದ ಪೊಲೀಸರು Read More »

ಕರಾವಳಿ

ನಂತೂರು: ಟೆಂಪೋ – ಡಿಯೋ ಢಿಕ್ಕಿ ► ಪತಿ – ಪತ್ನಿ ಇಬ್ಬರೂ ಮೃತ್ಯು

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ.12. ಟೆಂಪೋ ಮತ್ತು ಹೋಂಡಾ ಡಿಯೋ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ದಂಪತಿ ಮೃತಪಟ್ಟ ದಾರುಣ ಘಟನೆ ನಗರದ ನಂತೂರು ಸರ್ಕಲ್ ನಲ್ಲಿ ಮಂಗಳವಾರ ಸಂಜೆ‌ ನಡೆದಿದೆ. ಮೃತ ದುರ್ದೈವಿಗಳನ್ನು ಉಡುಪಿ ಜಿಲ್ಲೆಯ ಕಾಪು ನಿವಾಸಿ ಮೊಹಮ್ಮದ್ ಸಮೀರ್ (30) ಹಾಗೂ ಅವರ ಪತ್ನಿ ಬೆಳ್ತಂಗಡಿಯ ಸಮ್ರೀನ್(26) ಎಂದು ಗುರುತಿಸಲಾಗಿದೆ. ಇವರು ಮಂಗಳವಾರ ಸಂಜೆ ತಮ್ಮ ದ್ವಿಚಕ್ರ ವಾಹನದಲ್ಲಿ ಕಾಪುವಿನಿಂದ ಬೆಳ್ತಂಗಡಿಗೆ ತೆರಳುತ್ತಿದ್ದಾಗ ನಂತೂರ್ ಸರ್ಕಲ್ ಬಳಿ ಗೂಡ್ಸ್ ಟೆಂಪೋವೊಂದು ಇವರಿದ್ದ

ನಂತೂರು: ಟೆಂಪೋ – ಡಿಯೋ ಢಿಕ್ಕಿ ► ಪತಿ – ಪತ್ನಿ ಇಬ್ಬರೂ ಮೃತ್ಯು Read More »

ಕರಾವಳಿ

ಚಾರ್ಮಾಡಿ ಘಾಟ್ ನಲ್ಲಿ ಮಣ್ಣು ಕುಸಿತ ಪರಿಣಾಮ ► ಎರಡು ದಿನಗಳ ಕಾಲ ಸಂಚಾರ ನಿಷೇಧ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಜೂ.12. ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಚಾರ್ಮಾಡಿ ಘಾಟ್ ರಸ್ತೆಯ ಅಲ್ಲಲ್ಲಿ ಮಣ್ಣು ಕುಸಿದು ಬೀಳುತ್ತಿರುವುದರಿಂದ ಎರಡು ದಿನಗಳ ಕಾಲ ಸಂಚಾರ ನಿಷೇಧಿಸಿ ದಕ್ಷಿಣ ಕನ್ನಡ ಜಿಲ್ಲಾ ಎಸ್ಪಿ ಡಾ.ರವಿಕಾಂತೇಗೌಡ ಆದೇಶ ಹೊರಡಿಸಿದ್ದಾರೆ. ಚಾರ್ಮಾಡಿ ಘಾಟ್ ನ 11 ನೇ ಕ್ರಾಸ್ ನಲ್ಲಿ ಉಂಟಾದ ಭೂಕುಸಿತದಿಂದಾಗಿ ರಸ್ತೆಯು ಸಂಪೂರ್ಣ ಬಂದಾಗಿರುವುದರಿಂದ ಮಣ್ಣನ್ನು ತೆರವುಗೊಳಿಸಲು ಕಾಲಾವಕಾಶ ಬೇಕಾಗಿರುವುದರಿಂದ ಗುರುವಾರದವರೆಗೆ ಎರಡು ದಿನಗಳ ಕಾಲ ದಕ್ಷಿಣ ಕನ್ನಡ ಜಿಲ್ಲೆಯ ಚಾರ್ಮಾಡಿ ಹಾಗೂ

ಚಾರ್ಮಾಡಿ ಘಾಟ್ ನಲ್ಲಿ ಮಣ್ಣು ಕುಸಿತ ಪರಿಣಾಮ ► ಎರಡು ದಿನಗಳ ಕಾಲ ಸಂಚಾರ ನಿಷೇಧ Read More »

ಕರಾವಳಿ

ಮತ್ತೆ ಮುಳುಗಿದ ಹೊಸ್ಮಠ ಸೇತುವೆ ► ಪ್ರಯಾಣಿಕರ ಪರದಾಟ

ಕಡಬ, ಜೂ.12. ಕಳೆದ ಕೆಲವು ದಿನಗಳಿಂದ ಘಟ್ಟ ಪ್ರದೇಶ ಹಾಗೂ ಸ್ಥಳೀಯವಾಗಿ ಎಡೆಬಿಡದೆ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಉಪ್ಪಿನಂಗಡಿ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಗೆ ಅಡ್ಡಲಾಗಿರುವ ಗುಂಡ್ಯ ಹೊಳೆಯ ಹೊಸಮಠ ಮುಳುಗು ಸೇತುವೆಯು ಮಂಗಳವಾರದಂದು ಮತ್ತೆ ಮುಳುಗಿದೆ. ಸೋಮವಾರದಂದು ಬೆಳಗ್ಗೆ ನೆರೆ ನೀರಿನಿಂದ ಮುಳುಗಡೆಗೊಂಡು ರಾತ್ರಿಯವರೆಗೆ ಸಂಚಾರದಲ್ಲಿ ವ್ಯತ್ಯಯ ಉಂಟಾಗಿತ್ತು. ಇದರಿಂದಾಗಿ ಸುಬ್ರಹ್ಮಣ್ಯ, ಕಡಬದಿಂದ ಉಪ್ಪಿನಂಗಡಿ ಪರಿಸರಕ್ಕೆ ತೆರಳುವವರು ಇಚ್ಲಂಪಾಡಿ -ನೆಲ್ಯಾಡಿ ಮೂಲಕ ಸುತ್ತು ಬಳಸಿ ಸಂಚರಿಸುವಂತಾಗಿದೆ. ಮುಳುಗಡೆಗೊಂಡ ಸೇತುವೆಯ ಪಕ್ಕದಲ್ಲಿ ನಿರ್ಮಾಣವಾದ ನೂತನ ಸೇತುವೆಯ ಸಂಪರ್ಕ

ಮತ್ತೆ ಮುಳುಗಿದ ಹೊಸ್ಮಠ ಸೇತುವೆ ► ಪ್ರಯಾಣಿಕರ ಪರದಾಟ Read More »

ಕರಾವಳಿ

ಧರ್ಮಸ್ಥಳ: ರಸ್ತೆಗೆ ಉರುಳಿದ ಕೆಎಸ್ಸಾರ್ಟಿಸಿ ಬಸ್

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಜೂ.12. ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ  ಕೆಎಸ್ಸಾರ್ಟಿಸಿ ಬಸ್ಸೊಂದು ರಸ್ತೆಗೆ ಉರುಳಿದ ಘಟನೆ ಧರ್ಮಸ್ಥಳದಲ್ಲಿ ಸೋಮವಾರ ನಡೆದಿದೆ. ಬೆಳಗಿನ ಜಾವ ಧರ್ಮಸ್ಥಳ- ಕಡೂರು ರಸ್ತೆಯಾಗಿ ಬೆಳ್ತಂಗಡಿ ತಾಲೂಕು ಧರ್ಮಸ್ಥಳ ಗ್ರಾಮದ ಮಡ್ಯೋಳ ಚೆಡವು ಎಂಬಲ್ಲಿಗೆ ತಲುಪುತ್ತಿದ್ದಂತೆ ಚಾಲಕನು ಅತೀವೇಗ ಮತ್ತು ಅಜಾಗರೂಕತೆಯಿಂದ ಚಲಾಯಿಸಿರುವುದರಿಂದ ಬಸ್‌ ನಿಯಂತ್ರಣ ತಪ್ಪಿ ರಸ್ತೆಯ ಎಡಬದಿಗೆ ಮಗುಚಿ ಬಿದ್ದದೆ. ಘಟನೆಯಲ್ಲಿ ಪ್ರಯಾಣಿಕ ಕೃಷ್ಣಪ್ಪ ಪೂಜಾರಿ (38)ಎಂಬುವವರು ಗಂಭೀರ ಗಾಯಗೊಂಡಿದ್ದು, ಉಜಿರೆಯ ಖಾಸಗಿ ಆಸ್ಫತ್ರೆಗೆ ದಾಖಲಿಸಲಾಗಿದೆ. ಬಸ್‌ ಚಾಲಕ

ಧರ್ಮಸ್ಥಳ: ರಸ್ತೆಗೆ ಉರುಳಿದ ಕೆಎಸ್ಸಾರ್ಟಿಸಿ ಬಸ್ Read More »

ಕರಾವಳಿ

ಚಾರ್ಮಾಡಿ ಘಾಟ್ ನಲ್ಲಿ ಮಣ್ಣು ಕುಸಿದು ಸಂಚಾರಕ್ಕೆ ಸಂಚಕಾರ ► ಬೆಂಗಳೂರು ಪ್ರಯಾಣಿಸುವವರಿಗೆ ಸಂಪಾಜೆಯೇ ಉಪಕಾರ

(ನ್ಯೂಸ್ ಕಡಬ) newskadaba.com ಕಡಬ, ಜೂ.12. ಮಳೆಯ ಪ್ರಮಾಣ ತೀವ್ರಗೊಂಡಿರುವ ಹಿನ್ನೆಲೆಯಲ್ಲಿ ಚಾರ್ಮಾಡಿ ಘಾಟ್ ರಸ್ತೆಯ ವಿವಿಧೆಡೆ ಗುಡ್ಡ ಕುಸಿದ ಪರಿಣಾಮ ಸಂಚಾರಕ್ಕೆ ತೊಡಕುಂಟಾಗಿದೆ. ಸೋಮವಾರದಂದು ಘಾಟ್ ರಸ್ತೆಯ ಎರಡನೇ ಹಾಗೂ ಮೂರನೇ ತಿರುವಿನ ಮಧ್ಯೆ ಮಣ್ಣು ಕುಸಿದು ಬಿದ್ದುದರಿಂದ ರಸ್ತೆ ತಡೆಯುಂಟಾಗಿ ಹಸನಬ್ಬ ಚಾರ್ಮಾಡಿ ಹಾಗೂ ಅವರ ತಂಡವು ಶ್ರಮವಹಿಸಿ ಒಂದು ಹಂತದ ತಡೆಯನ್ನು ತೆರವುಗೊಳಿಸಿದ ಪರಿಣಾಮ ಏಕಮುಖ ವಾಹನ ಸಂಚಾರಕ್ಕೆ ಅನುವು ಮಾಡಿ ಕೊಡಲಾಗಿತ್ತು. ಆದರೆ ಘಾಟಿ ಪ್ರದೇಶದಲ್ಲಿ ನಿರಂತರ ಮಳೆಯಾಗುತ್ತಿರುವುದರಿಂದ ಮಂಗಳವಾರದಂದು ಮತ್ತೆ

ಚಾರ್ಮಾಡಿ ಘಾಟ್ ನಲ್ಲಿ ಮಣ್ಣು ಕುಸಿದು ಸಂಚಾರಕ್ಕೆ ಸಂಚಕಾರ ► ಬೆಂಗಳೂರು ಪ್ರಯಾಣಿಸುವವರಿಗೆ ಸಂಪಾಜೆಯೇ ಉಪಕಾರ Read More »

ಕರಾವಳಿ

ಕುಂತೂರು: ಕಳ್ಳರ ಕೈಚಳಕ ► ಮೂರು ಅಂಗಡಿಗಳ ಒಳ ನುಗ್ಗಿದ ಕಳ್ಳರು

(ನ್ಯೂಸ್ ಕಡಬ) newskadaba.com ಕಡಬ, ಜೂ.12. ಅಂಗಡಿಗಳ ಬೀಗ ಒಡೆದು ಒಳನುಗ್ಗಿರುವ ಕಳ್ಳರು ಚಿಲ್ಲರೆ ಹಣವನ್ನು ದೋಚಿದ ಘಟನೆ ಠಾಣಾ ವ್ಯಾಪ್ತಿಯ ಕುಂತೂರಿನಲ್ಲಿ ಸೋಮವಾರ ರಾತ್ರಿ ನಡೆದಿದೆ. ಪೆರಾಬೆ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಜನಾರ್ದನ ಶೆಟ್ಟಿ ಎಂಬವರಿಗೆ ಸೇರಿದ ದಿನಸಿ ಅಂಗಡಿಯ ಒಳ ನುಗ್ಗಿರುವ ಕಳ್ಳರು ಒಂದು ಮೊಬೈಲ್ ಹಾಗೂ ಹಣವನ್ನು ಕದ್ದೊಯ್ದಿದ್ದಾರೆ. ಪಕ್ಕದಲ್ಲೇ ಇದ್ದ ಮೇಘನಾಥ ಎಂಬವರಿಗೆ ಸೇರಿದ ಮೊಬೈಲ್ ಸೆಂಟರ್ ನಿಂದ ಹಣವನ್ನು ದೋಚಿದ್ದಾರೆ. ದಯಾನಂದ ಎಂಬವರ ಗೂಡಂಗಡಿಯಿಂದಲೂ ಕಳ್ಳತನವಾಗಿದೆ ಎಂದು ತಿಳಿದುಬಂದಿದೆ. ಸ್ಥಳಕ್ಕೆ

ಕುಂತೂರು: ಕಳ್ಳರ ಕೈಚಳಕ ► ಮೂರು ಅಂಗಡಿಗಳ ಒಳ ನುಗ್ಗಿದ ಕಳ್ಳರು Read More »

ಕರಾವಳಿ

ಬಂಟ್ವಾಳ: ಹಾಡುಹಗಲೇ ತಲವಾರು ದಾಳಿ ► ಇಬ್ಬರಿಗೆ ಗಾಯ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಜೂ.11. ಪೂರ್ವ ದ್ವೇಷದ ಹಿನ್ನೆಲೆಯಲ್ಲಿ ಬಿಜೆಪಿ – ಕಾಂಗ್ರೆಸ್ ಕಾರ್ಯಕರ್ತರು ಹಾಡುಹಗಲೇ ಪರಸ್ಪರ ಹಲ್ಲೆ ನಡೆಸಿದ ಘಟನೆ ಬಿ.ಸಿ.ರೋಡ್ ನಲ್ಲಿ ಸೋಮವಾರದಂದು ನಡೆದಿದೆ. ತುಳು ಚಿತ್ರನಟ, ಕಾಂಗ್ರೆಸ್ ಪಕ್ಷದಲ್ಲಿ ಗುರುತಿಸಿಕೊಂಡಿದ್ದ ಸುರೇಂದ್ರ ಬಂಟ್ವಾಳರ ತಂಡದಲ್ಲಿ ಗುರುತಿಕೊಂಡಿದ್ದ ಯುವಕನೋರ್ವನಿಗೆ ಬಿಜೆಪಿ ಕಾರ್ಯಕರ್ತರ ತಂಡವೊಂದು ಫೇಸ್‍ಬುಕ್ ನಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಿದ್ದ ಕಾರಣಕ್ಕೆ ಭಾನುವಾರದಂದು ಸೆಲೂನ್ ಗೆ ನುಗ್ಗಿ ಹಲ್ಲೆ ನಡೆಸಿತ್ತೆನ್ನಲಾಗಿದೆ. ಇದೇ ವೈಷಮ್ಯದಲ್ಲಿ ಸೋಮವಾರದಂದು ಬಿ.ಸಿ.ರೋಡಿನ ಬಡ್ಡಕಟ್ಟೆಯ ಹೊಟೇಲೊಂದಕ್ಕೆ ಊಟಕ್ಕೆಂದು ತೆರಳಿದ್ದ ಬಿಜೆಪಿ

ಬಂಟ್ವಾಳ: ಹಾಡುಹಗಲೇ ತಲವಾರು ದಾಳಿ ► ಇಬ್ಬರಿಗೆ ಗಾಯ Read More »

ಕರಾವಳಿ

ನೆಟ್ಟಣ: ಸೇತುವೆ ಮುಳುಗಡೆ ► ಧರ್ಮಸ್ಥಳ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿ ಸಂಚಾರ ಬಂದ್

(ನ್ಯೂಸ್ ಕಡಬ) newskadaba.com ಕಡಬ, ಜೂ.11. ಘಟ್ಟ ಪ್ರದೇಶದಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಸುಬ್ರಹ್ಮಣ್ಯ – ಧರ್ಮಸ್ಥಳ ರಾಜ್ಯ ಹೆದ್ದಾರಿಯ ಬಿಳಿನೆಲೆ ಸಂಪರ್ಕ ಸೇತುವೆಯು ಮುಳುಗಡೆಗೊಂಡಿದ್ದು, ಹೆದ್ದಾರಿ ತಡೆ ಉಂಟಾಗಿದೆ. ಇದರಿಂದಾಗಿ ದೂರದೂರುಗಳ ಯಾತ್ರಿಕರಿಗೆ ತೊಂದರೆಯುಂಟಾಗಿದೆ. ಬಸ್ಸು, ಲಾರಿ ಸೇರಿದಂತೆ ಘನ ವಾಹನಗಳ ಚಾಲಕರು ನೀರಿನ ಹರಿವು ಕಡಿಮೆಯಾಗುವವರೆಗೆ ರಸ್ತೆ ಬದಿಯಲ್ಲಿ ಕಾಯುತ್ತಿದ್ದಾರೆ. ಕಾರು, ಟೆಂಪೋ ಮೊದಲಾದ ವಾಹನಗಳು ಸುಂಕದಕಟ್ಟೆ, ಕೊಂಬಾರು, ಕೆಂಜಾಳ, ಕೈಕಂಬ ಮಾರ್ಗವಾಗಿ ಸುಬ್ರಹ್ಮಣ್ಯ ತೆರಳುವಂತಾಗಿದೆ.

ನೆಟ್ಟಣ: ಸೇತುವೆ ಮುಳುಗಡೆ ► ಧರ್ಮಸ್ಥಳ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿ ಸಂಚಾರ ಬಂದ್ Read More »

ಕರಾವಳಿ

ಹೊಸ್ಮಠ ಸೇತುವೆ ಮುಳುಗಡೆ ► ಉಪ್ಪಿನಂಗಡಿ – ಸುಬ್ರಹ್ಮಣ್ಯ ಸಂಚಾರ ಅಸ್ತವ್ಯಸ್ತ

(ನ್ಯೂಸ್ ಕಡಬ) newskadaba.com ಕಡಬ, ಜೂ.11. ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಮುಳುಗು ಸೇತುವೆಯೆಂದೇ ಖ್ಯಾತಿ ಪಡೆದಿರುವ ಹೊಸ್ಮಠ ಸೇತುವೆಯು ಮುಳುಗಡೆಗೊಂಡು ಸಂಚಾರಕ್ಕೆ ತಡೆಯುಂಟಾಗಿದೆ. ಹಲವು ದಶಕಗಳಿಂದ ಮಳೆಗೆ ಮುಳುಗಡೆಗೊಂಡು ಸಂಚಾರಕ್ಕೆ ಅಡಚಣೆಯುಂಟಾಗುವ ಹಿನ್ನೆಲೆಯಲ್ಲಿ ನೂತನ ಸೇತುವೆಯು ನಿರ್ಮಾಣ ಹಂತದಲ್ಲಿದ್ದು, ಇನ್ನೂ ಬಿಡುಗಡೆ ಭಾಗ್ಯ ಸಿಕ್ಕಿಲ್ಲ. ಸೇತುವೆ ಮುಳುಗಡೆಯಿಂದಾಗಿ ಉಪ್ಪಿನಂಗಡಿ – ಸುಬ್ರಹ್ಮಣ್ಯ ಕಡೆಗೆ ಪ್ರಯಾಣಿಸುವ ಶಾಲಾ – ಕಾಲೇಜುಗಳ ವಿದ್ಯಾರ್ಥಿಗಳು, ಉದ್ಯೋಗಿಗಳು ಸೇರಿ ಹಲವರು ತೊಂದರೆ ಅನುಭವಿಸುವಂತಾಯಿತು.

ಹೊಸ್ಮಠ ಸೇತುವೆ ಮುಳುಗಡೆ ► ಉಪ್ಪಿನಂಗಡಿ – ಸುಬ್ರಹ್ಮಣ್ಯ ಸಂಚಾರ ಅಸ್ತವ್ಯಸ್ತ Read More »

ಕರಾವಳಿ
Scroll to Top