ಕರಾವಳಿ

ಬಲ್ಯ: ಜಾಗದ ವಿಚಾರದಲ್ಲಿ ಪರಸ್ಪರ ಹಲ್ಲೆ ► ದೂರು – ಪ್ರತಿ ದೂರು

(ನ್ಯೂಸ್ ಕಡಬ) newskadaba.com ಕಡಬ, ಜೂ.08. ಜಾಗದ ತಕರಾರಿನ ಹಿನ್ನೆಲೆಯಲ್ಲಿ ವ್ಯಕ್ತಿಗಳಿಬ್ಬರು ಪರಸ್ಪರ ಹಲ್ಲೆ‌ ಮಾಡಿಕೊಂಡ ಘಟನೆ ಠಾಣಾ ವ್ಯಾಪ್ತಿಯ ಬಲ್ಯ ಗ್ರಾಮದ ದೇರಾಜೆ ಕ್ರಾಸ್ ಎಂಬಲ್ಲಿ ಗುರುವಾರದಂದು ನಡೆದಿದೆ. ಬಲ್ಯ ಗ್ರಾಮದ ಸಂಪಡ್ಕ ನಿವಾಸಿ, ದೇರಾಜೆ ಕ್ರಾಸ್ ಬಳಿಯ ಅಂಗಡಿ ವ್ಯಾಪಾರಿ ಗೋಪಾಲಕೃಷ್ಣ ಎಂಬವರಿಗೆ ದೇರಾಜೆ ಕ್ರಾಸ್ ನಿವಾಸಿ ಗಿರೀಶ್ ಎಂಬವರು ಅವಾಚ್ಯ ಶಬ್ದಗಳಿಂದ ನಿಂದಿಸಿ ಅಂಗಡಿಯೊಳಗೆ ನುಗ್ಗಿ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ಇವರಿಬ್ಬರ ಜಾಗ ಅಕ್ಕಪಕ್ಕದಲ್ಲಿದ್ದು ಜಾಗದ ಒಂದು ಭಾಗದ ವಿಚಾರದಲ್ಲಿ ಕಳೆದ ಕೆಲವು […]

ಬಲ್ಯ: ಜಾಗದ ವಿಚಾರದಲ್ಲಿ ಪರಸ್ಪರ ಹಲ್ಲೆ ► ದೂರು – ಪ್ರತಿ ದೂರು Read More »

ಕರಾವಳಿ

ಮಾಣಿ: ಖಾಸಗಿ ಬಸ್ಸಿನಡಿಗೆ ಬಿದ್ದ ಬೈಕ್ ► ಪವಾಡ ಸದೃಶ ಪಾರಾದ ಸವಾರ

(ನ್ಯೂಸ್ ಕಡಬ) newskadaba.com ವಿಟ್ಲ, ಜೂ.08. ಖಾಸಗಿ ಬಸ್ ಹಾಗೂ ಬೈಕ್‌ ನಡುವೆ ಢಿಕ್ಕಿ ಸಂಭವಿಸಿ ಬೈಕ್ ಸವಾರ ಪವಾಡ ಸದೃಶ ಪಾರಾದ ಘಟನೆ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ‌ ಮಾಣಿ ಜಂಕ್ಷನ್ ನಲ್ಲಿ ಶುಕ್ರವಾರ ಬೆಳಿಗ್ಗೆ ನಡೆದಿದೆ. ಮಂಗಳೂರಿನಿಂದ ಉಪ್ಪಿನಂಗಡಿಗೆ ತೆರಳುತ್ತಿದ್ದ ಮಹೇಶ್ ಸಂಸ್ಥೆಯ ಖಾಸಗಿ ಬಸ್ ಹಾಗೂ ಬೈಕ್‌ ನಡುವೆ ಮಾಣಿಯಲ್ಲಿ ಅಪಘಾತವಾಗಿದ್ದು, ಬೈಕ್ ಬಸ್ಸಿನ ಅಡಿಗೆ ಬಿದ್ದು ಜಖಂಗೊಂಡಿದೆ. ಬೈಕ್ ಸವಾರ ಅನಂತಾಡಿ ನಿವಾಸಿ ಮೋಹನ್ ಪವಾಡ ಸದೃಶವಾಗಿ ಅಪಾಯದಿಂದ ಪಾರಾಗಿದ್ದಾರೆ.

ಮಾಣಿ: ಖಾಸಗಿ ಬಸ್ಸಿನಡಿಗೆ ಬಿದ್ದ ಬೈಕ್ ► ಪವಾಡ ಸದೃಶ ಪಾರಾದ ಸವಾರ Read More »

ಕರಾವಳಿ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಭಾರೀ ಮಳೆ ಸುರಿಯುತ್ತಿರುವ ಹಿನ್ನೆಲೆ ► ಎರಡು ದಿನ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ.08. ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿರುವುದರಿಂದ ಶುಕ್ರವಾರ ಹಾಗೂ ಶನಿವಾರದಂದು ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಗುರುವಾರದಿಂದ ಎಡೆಬಿಡದೆ ಮಳೆ ಸುರಿಯುತ್ತಿರುವುದರಿಂದ ಉಭಯ ಜಿಲ್ಲಾಧಿಕಾರಿಗಳು ಮುಂಜಾಗ್ರತಾ ಕ್ರಮವಾಗಿ ಎರಡು ದಿನಗಳ ರಜೆ‌ ನೀಡಿ ಆದೇಶಿಸಿದ್ದಾರೆ. ಭಾನುವಾರದ ವರೆಗೆ ಕರಾವಳಿ ಪ್ರದೇಶಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯ‌ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿತ್ತು.

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಭಾರೀ ಮಳೆ ಸುರಿಯುತ್ತಿರುವ ಹಿನ್ನೆಲೆ ► ಎರಡು ದಿನ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ Read More »

ಕರಾವಳಿ

ಬಲ್ಯ: ಕೆಲಸಕ್ಕೆಂದು ತೆರಳಿದ ಯುವತಿ ನಾಪತ್ತೆ

(ನ್ಯೂಸ್ ಕಡಬ) newskadaba.com ಕಡಬ, ಜೂ.07. ಕೆಲಸಕ್ಕೆಂದು ತೆರಳಿದ್ದ ಯುವತಿಯೋರ್ವಳು ನಾಪತ್ತೆಯಾಗಿರುವ ಘಟನೆ ಠಾಣಾ ವ್ಯಾಪ್ತಿಯ ಬಲ್ಯದಲ್ಲಿ ನಡೆದಿದೆ. ನಾಪತ್ತೆಯಾಗಿರುವ ಯುವತಿಯನ್ನು ಬಲ್ಯ ಗ್ರಾಮದ ದೇರಾಜೆ ಪನ್ಯಾಡಿ ನಿವಾಸಿ ದಿ.ಗುರುವ ಎಂಬವರ ಪುತ್ರಿ ಕು|ಸುಂದರಿ(30)‌ ಎಂದು ಗುರುತಿಸಲಾಗಿದೆ. ಕೂಲಿ ಕೆಲಸ ಮಾಡುತ್ತಿದ್ದ ಈಕೆ ಕಳೆದ ಸುಮಾರು ಒಂದು ತಿಂಗಳ ಹಿಂದೆ ಕೆಲಸಕ್ಕೆಂದು ತೆರಳಿದ್ದು, ಆ ಬಳಿಕ ಮನೆಗೆ ಬಾರದೆ ನಾಪತ್ತೆಯಾಗಿರುವುದಾಗಿ ಈಕೆಯ ತಾಯಿ ಚೋಮು ದೂರು ನೀಡಿದ ದೂರಿನಂತೆ ಕಡಬ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬಲ್ಯ: ಕೆಲಸಕ್ಕೆಂದು ತೆರಳಿದ ಯುವತಿ ನಾಪತ್ತೆ Read More »

ಕರಾವಳಿ

ಬಿಳಿನೆಲೆ: ಕಾರು ಮರಕ್ಕೆ ಢಿಕ್ಕಿ ► ಚಾಲಕನಿಗೆ ಗಾಯ

(ನ್ಯೂಸ್ ಕಡಬ) newskadaba.com ಕಡಬ, ಜೂ.07. ಚಾಲಕನ ನಿಯಂತ್ರಣ ತಪ್ಪಿದ ಮಾರುತಿ ಓಮ್ನಿ ಕಾರೊಂದು ರಸ್ತೆ ಬದಿಯಲ್ಲಿನ ಮರಕ್ಕೆ ಢಿಕ್ಕಿಯಾದ ಪರಿಣಾಮ ಚಾಲಕ ಗಾಯಗೊಂಡ ಘಟನೆ ಧರ್ಮಸ್ಥಳ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಬಿಳಿನೆಲೆಯಲ್ಲಿ ಗುರುವಾರದಂದು ನಡೆದಿದೆ. ಶಿವಮೊಗ್ಗದ ತೀರ್ಥಹಳ್ಳಿಯಿಂದ ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ದೇವರ ದರ್ಶನ ಪಡೆದು ಬಳಿಕ ಸುಬ್ರಹ್ಮಣ್ಯಕ್ಕೆ ತೆರಳುತ್ತಿದ್ದಾಗ ಬಿಳಿನೆಲೆ ಸಿಪಿಸಿಆರ್ಐ ಬಳಿ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮರಕ್ಕೆ ಢಿಕ್ಕಿ ಹೊಡೆದಿದೆ. ಘಟನೆಯಲ್ಲಿ ಕಾರು ಚಾಲಕ‌ ತೀರ್ಥಹಳ್ಳಿ ನಿವಾಸಿ

ಬಿಳಿನೆಲೆ: ಕಾರು ಮರಕ್ಕೆ ಢಿಕ್ಕಿ ► ಚಾಲಕನಿಗೆ ಗಾಯ Read More »

ಕರಾವಳಿ

ಮಾರ್ ಇವಾನಿಯೋಸ್ ಕಾಲೇಜು: ಚಿತ್ರಕಲಾ ತರಬೇತಿ

(ನ್ಯೂಸ್ ಕಡಬ) newskadaba.com ಕಡಬ ಜೂ.06. ಕುಂತೂರು ಗ್ರಾಮದ ಮಾರ್ ಇವಾನಿಯೋಸ್ ಶಿಕ್ಷಕ ಶಿಕ್ಷಣ ಮಹಾವಿದ್ಯಾಲಯದಲ್ಲಿ ಪ್ರಶಿಕ್ಷಣಾರ್ಥಿಗಳಿಗಾಗಿ ಒಂದು ದಿನದ ಚಿತ್ರಕಲಾ ತಯಾರಿ ಕಾರ್ಯಕ್ರಮವನ್ನು ನಡೆಸಲಾಯಿತು. ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಚಿತ್ರಕಲಾ ಶಿಕ್ಷಕ ಶ್ರೀಪತಿ ರಾವ್ ವಿವಿಧ ಆಕೃತಿ, ರೇಖಾಚಿತ್ರ, ವರ್ಣಚಿತ್ರ, ಪೆನ್ಸಿಲ್ ಷೇಡಿಂಗ್ ಇತ್ಯಾದಿಗಳ ಮೂಲಕ ಸರಳವಾಗಿ ಆಕರ್ಷಕ ರೀತಿಯ ಚಿತ್ರ ರಚನೆಯ ಕುರಿತು ತರಬೇತಿ ಕಾಯರ್ಾಗಾರವನ್ನು ನಡೆಸಿಕೊಟ್ಟರು. ಉಪನ್ಯಾಸಕ ಶ್ರೀ ರಘುನಂದನ್ ಸಹಕರಿಸಿದರು.

ಮಾರ್ ಇವಾನಿಯೋಸ್ ಕಾಲೇಜು: ಚಿತ್ರಕಲಾ ತರಬೇತಿ Read More »

ಕರಾವಳಿ

ಬುಡೋಳಿ: ಆ್ಯಕ್ಟಿವಾ – ಲಾರಿ ಢಿಕ್ಕಿ ► ಸವಾರ ಗಂಭೀರ

(ನ್ಯೂಸ್ ಕಡಬ) newskadaba.com ವಿಟ್ಲ, ಜೂ.07. ಮರಳು ಸಾಗಾಟದ ಲಾರಿ ಹಾಗೂ ಹೋಂಡಾ ಆ್ಯಕ್ಟಿವಾ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಸವಾರ ಗಾಯಗೊಂಡ ಘಟನೆ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಬುಡೋಳಿ ಎಂಬಲ್ಲಿ ಗುರುವಾರದಂದು ನಡೆದಿದೆ. ಉಪ್ಪಿನಂಗಡಿ ಕಡೆಗೆ ಮರಳು ಸಾಗಾಟ ಮಾಡುತ್ತಿದ್ದ ಲಾರಿ ಮತ್ತು ಮಂಗಳೂರು ಕಡೆಗೆ ತೆರಳುತ್ತಿದ್ದ ಆ್ಯಕ್ಟಿವಾ ನಡುವೆ ಮುಖಾಮುಖಿ ಢಿಕ್ಕಿಯಾಗಿದೆ. ಘಟನೆಯಲ್ಲಿ ಆ್ಯಕ್ಟಿವಾ ಸವಾರ ಬೆಳ್ತಂಗಡಿ ನಿವಾಸಿ ಗಂಭೀರ ಗಾಯಗೊಂಡಿದ್ದು, ಗಾಯಾಳುವನ್ನು ಮಾಣಿಯ 108 ಆಂಬ್ಯುಲೆನ್ಸ್ ಮೂಲಕ ಮಂಗಳೂರಿನ ಆಸ್ಪತ್ರೆಗೆ

ಬುಡೋಳಿ: ಆ್ಯಕ್ಟಿವಾ – ಲಾರಿ ಢಿಕ್ಕಿ ► ಸವಾರ ಗಂಭೀರ Read More »

ಕರಾವಳಿ

ಜಾಲ್ಸೂರು ಪಯನೀರ್ ಪಬ್ಲಿಕ್ ಸ್ಕೂಲ್‌ನಲ್ಲಿ ‘ವಿಶ್ವ ಪರಿಸರ ದಿನಾಚರಣೆ’

(ನ್ಯೂಸ್ ಕಡಬ)‌ newskadaba.com ಸುಳ್ಯ, ಜೂ.06. ಜಾಲ್ಸೂರಿನ ಪಯನೀರ್ ಪಬ್ಲಿಕ್ ಸ್ಕೂಲ್‌ನಲ್ಲಿ ಗಿಡವನ್ನು ನೆಡುವುದರ ಮೂಲಕ ‘ವಿಶ್ವ ಪರಿಸರ ದಿನ’ವನ್ನು ಮಂಗಳವಾರದಂದು ಆಚರಿಸಲಾಯಿತು. ಸಂಸ್ಥೆಯ ಸ್ಥಾಪಕಾಧ್ಯಕ್ಷರಾದ ಅಬ್ದುಲ್ ರಝಾಕ್ ರವರು ಗಿಡ ನೆಟ್ಟು ಪರಿಸರ ಸಂರಕ್ಷಣೆಯ ಬಗ್ಗೆ ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸಿದರು. ಕಾರ್ಯಕ್ರಮದಲ್ಲಿ ಶಾಲಾ ಪ್ರಭಾರ ಮುಖ್ಯ ಶಿಕ್ಷಕಿ ವಿಜಯಲಕ್ಷ್ಮಿ, ಸಹ ಶಿಕ್ಷಕಿಯರಾದ ದೀಕ್ಷಿತ, ಜ್ಯೋತಿ ಲಕ್ಷ್ಮಿ, ಜ್ಯೋತಿ, ಜಯಂತಿ ಸೇರಿದಂತೆ ಶಾಲಾ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಜಾಲ್ಸೂರು ಪಯನೀರ್ ಪಬ್ಲಿಕ್ ಸ್ಕೂಲ್‌ನಲ್ಲಿ ‘ವಿಶ್ವ ಪರಿಸರ ದಿನಾಚರಣೆ’ Read More »

ಕರಾವಳಿ

ನಾಳೆ (ಜೂ.07) ಪುತ್ತೂರಿನಲ್ಲಿ ತುಳು ಭಾಷಾ ವಿದ್ಯಾರ್ಥಿಗಳಿಗೆ ಅಭಿನಂದನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ.06. ಪ್ರಸಕ್ತ ಸಾಲಿನಲ್ಲಿ ನಡೆದ ಎಸ್.ಎಸ್.ಎಲ್.ಸಿ  ಪರೀಕ್ಷೆಯಲ್ಲಿ ತುಳು ಭಾಷೆಯ ಪಠ್ಯದಲ್ಲಿ ಶೇಕಡಾ 100 ಫಲಿತಾಂಶ ದಾಖಲಿಸಿದ ವಿದ್ಯಾರ್ಥಿಗಳು ಹಾಗೂ ಶಾಲೆಗಳ ಮುಖ್ಯಸ್ಥರನ್ನು ಅಭಿನಂದಿಸುವ ಕಾರ್ಯಕ್ರಮವು ಜೂನ್ 7 ರಂದು ಬೆಳಿಗ್ಗೆ 10 ಗಂಟೆಗೆ ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ನಟರಾಜ ವೇದಿಕೆಯಲ್ಲಿ ನಡೆಯಲಿದೆ. ದಕ್ಷಿಣ ಕನ್ನಡ ಜಿಲ್ಲೆಯ 22 ಶಾಲೆಗಳಲ್ಲಿ 417 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು ಎಲ್ಲರೂ ಉತ್ತೀರ್ಣರಾಗಿದ್ದಾರೆ. ಹೆಚ್ಚಿನ ಶಾಲೆಗಳು ಹಾಗೂ ವಿದ್ಯಾರ್ಥಿಗಳು ಪುತ್ತೂರು ತಾಲೂಕಿನವರಾಗಿರುವುದರಿಂದ ಪುತ್ತೂರಿನಲ್ಲಿ ಕರ್ನಾಟಕ ತುಳು

ನಾಳೆ (ಜೂ.07) ಪುತ್ತೂರಿನಲ್ಲಿ ತುಳು ಭಾಷಾ ವಿದ್ಯಾರ್ಥಿಗಳಿಗೆ ಅಭಿನಂದನೆ Read More »

ಕರಾವಳಿ

ವಿದ್ಯಾರ್ಥಿಗಳ ಉಚಿತ ಪಾಸ್ ಯೋಜನೆಗೆ ಸರಕಾರದಿಂದ ಕತ್ತರಿ ► ಕಾಸು ಕೊಟ್ರೆ ಮಾತ್ರ ಬಸ್ ಪಾಸ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಜೂ.06. ಈ ಹಿಂದಿನ ಸರಕಾರವು ಘೋಷಿಸಿದ್ದ ಮಹತ್ವಾಕಾಂಕ್ಷಿ ಯೋಜನೆಯಾದ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಪಾಸ್ ಯೋಜನೆಗೆ ನೂತನ ಸಮ್ಮಿಶ್ರ ಸರಕಾರ ಕತ್ತರಿ ಹಾಕಿದ್ದು, ಕಾಸು ಕೊಟ್ಟರೆ ಮಾತ್ರ ಪಾಸು ಎಂದ ನಿರ್ಧರಿಸಲಾಗಿದೆ. ರಾಜ್ಯದ 19.60 ಲಕ್ಷ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದರಿಂದ ಸುಮಾರು ಎರಡು ಸಾವಿರ ಕೋಟಿಗಳಷ್ಟು ಆರ್ಥಿಕ ಹೊರೆ ಬೀಳುತ್ತದೆ ಎಂಬ ಕಾರಣದಿಂದ ಸಾರಿಗೆ ಇಲಾಖೆಯ ಪ್ರಸ್ತಾವನೆಯನ್ನು ಹಣಕಾಸು ಇಲಾಖೆಯು ತಾತ್ಕಾಲಿಕವಾಗಿ ತಡೆ ಹಿಡಿದಿದೆ ಎನ್ನಲಾಗಿದೆ. ಈಗಾಗಲೇ 1

ವಿದ್ಯಾರ್ಥಿಗಳ ಉಚಿತ ಪಾಸ್ ಯೋಜನೆಗೆ ಸರಕಾರದಿಂದ ಕತ್ತರಿ ► ಕಾಸು ಕೊಟ್ರೆ ಮಾತ್ರ ಬಸ್ ಪಾಸ್ Read More »

ಕರಾವಳಿ
Scroll to Top