ಕರಾವಳಿ

ಕಡಬ: ಇಬ್ಬರು ಮಕ್ಕಳೊಂದಿಗೆ ತಾಯಿ ನಾಪತ್ತೆ

(ನ್ಯೂಸ್ ಕಡಬ) newskadaba.com ಕಡಬ, ಜೂ.01. ಮಹಿಳೆಯೋರ್ವರು ತನ್ನ ಇಬ್ಬರು ಮಕ್ಕಳೊಂದಿಗೆ ನಾಪತ್ತೆಯಾಗಿರುವ ಘಟನೆ ಗುರುವಾರದಂದು ಕುಂತೂರಿನಿಂದ ವರದಿಯಾಗಿದೆ. ಐತ್ತೂರು ಗ್ರಾಮದ ಮಾಯಿಪತ್ತೆಪಾಲು ನಿವಾಸಿ ಹುಕ್ರಪ್ಪ ಗೌಡ ಎಂಬವರ ಪುತ್ರಿ ಯಶೋಧಾ(37) ಎಂಬಾಕೆಯನ್ನು ಕುಂತೂರು ಗ್ರಾಮದ ಬಾಚಡ್ಕ‌ ಎಂಬಲ್ಲಿಗೆ ಸುಮಾರು ಹದಿನೈದು ವರ್ಷಗಳ ಹಿಂದೆ ಮದುವೆ ಮಾಡಿಕೊಡಲಾಗಿತ್ತು. ಗುರುವಾರದಂದು ಆಕೆಯ ಮನೆಯವರು ಕರೆ ಮಾಡಿದಾಗ ಕರೆಯನ್ನು ಸ್ವೀಕರಿಸದ ಹಿನ್ನೆಲೆಯಲ್ಲಿ ಅನುಮಾನಗೊಂಡು ಕುಂತೂರಿನ ಮನೆಗೆ ತೆರಳಿದ ಆಕೆಯ ಹೆತ್ತವರಿಗೆ ಬೀಗ ಹಾಕಿರುವುದು ಕಂಡುಬಂದಿದ್ದು, ಬಳಿಕ ಆಕೆ ಕೆಲಸ ನಿರ್ವಹಿಸುತ್ತಿದ್ದ […]

ಕಡಬ: ಇಬ್ಬರು ಮಕ್ಕಳೊಂದಿಗೆ ತಾಯಿ ನಾಪತ್ತೆ Read More »

ಕರಾವಳಿ

ಬೆಂಗಾಲ್ ವಾರಿಯರ್ಸ್‌ ತಂಡಕ್ಕೆ ಆಯ್ಕೆಯಾದ ಮಿಥಿನ್ ಗೆ ಹುಟ್ಟೂರ ಅಭಿನಂದನೆ ► ತೆರೆದ ವಾಹನದಲ್ಲಿ ಕಡಬ ಪೇಟೆಯಾದ್ಯಂತ ಮೆರವಣಿಗೆ

(ನ್ಯೂಸ್ ಕಡಬ) newskadaba.com ಕಡಬ, ಜೂ.01. ಮುಂಬರುವ ಪ್ರೋ ಕಬಡ್ಡಿ ಟೂರ್ನಿಯಲ್ಲಿ ಬೆಂಗಾಲ್ ವಾರಿಯರ್ಸ್ ಪರ ಆಡಲು ಆಯ್ಕೆಯಾದ ಕಡಬದ ಯುವಕನಿಗೆ ಜನಪ್ರಿಯ ಆರ್ಟ್ಸ್ & ಸ್ಪೋರ್ಟ್ಸ್ ಕ್ಲಬ್ (ರಿ) ಹಾಗೂ ಊರಿನ ಕಬಡ್ಡಿ ಅಭಿಮಾನಿಗಳ ವತಿಯಿಂದ ಅಭಿನಂದನಾ ಮೆರವಣಿಗೆಯು ಕಡಬ ಪೇಟೆಯಲ್ಲಿ ಶುಕ್ರವಾರ ಸಂಜೆ‌ ನಡೆಯಿತು. ಕಡಬ ತಾಲೂಕಿನ ಐತ್ತೂರು ಗ್ರಾಮದ ಕಲ್ಲಾಜೆ ನಿವಾಸಿ ಅನ್ನಯ್ಯ – ಪ್ರೇಮ ದಂಪತಿಯ ಪುತ್ರ ಉಜಿರೆಯ ಎಸ್ಡಿಎಂ ಕಾಲೇಜಿನ ವಿದ್ಯಾರ್ಥಿ ಮಿಥಿನ್ ಕುಮಾರ್ ಪ್ರೋ ಕಬಡ್ಡಿ 2018 ರಲ್ಲಿ

ಬೆಂಗಾಲ್ ವಾರಿಯರ್ಸ್‌ ತಂಡಕ್ಕೆ ಆಯ್ಕೆಯಾದ ಮಿಥಿನ್ ಗೆ ಹುಟ್ಟೂರ ಅಭಿನಂದನೆ ► ತೆರೆದ ವಾಹನದಲ್ಲಿ ಕಡಬ ಪೇಟೆಯಾದ್ಯಂತ ಮೆರವಣಿಗೆ Read More »

ಕರಾವಳಿ

ಐವರ್ನಾಡು: ರಿಕ್ಷಾ ಪಲ್ಟಿ ► ಚಾಲಕ ಸೇರಿ ಇಬ್ಬರಿಗೆ ಗಾಯ

(ನ್ಯೂಸ್ ಕಡಬ) newskadaba.com ಸುಳ್ಯ, ‌ಜೂ.01. ಚಾಲಕನ ನಿಯಂತ್ರಣ ತಪ್ಪಿದ ಆಟೋರಿಕ್ಷಾವೊಂದು ಪಲ್ಟಿಯಾದ ಪರಿಣಾಮ ಚಾಲಕ ಹಾಗೂ ಪ್ರಯಾಣಿಕ ಮಹಿಳೆಯೋರ್ವರು ಗಾಯಗೊಂಡ ಘಟನೆ ಸುಳ್ಯ – ಬೆಳ್ಳಾರೆ ರಸ್ತೆಯ ಐವರ್ನಾಡಿನಲ್ಲಿ‌ ಶುಕ್ರವಾರದಂದು ನಡೆದಿದೆ. ಬೆಳ್ಳಾರೆಯಿಂದ ಜಾಲ್ಸೂರು ಕಡೆಗೆ ತೆರಳುತ್ತಿದ್ದ ಆಟೋರಿಕ್ಷಾ ಐವರ್ನಾಡಿನ ಮರುವತ್ತಡ್ಕ ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ ರಸ್ತೆ ಬದಿಯಲ್ಲಿ ಬಿದ್ದಿದೆ. ಘಟನೆಯಲ್ಲಿ ರಿಕ್ಷಾ ಚಾಲಕ ಜಾಲ್ಸೂರು ನಿವಾಸಿ ಮಣಿ ಹಾಗೂ ಪ್ರಯಾಣಿಕ ಮಹಿಳೆ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.ಗಾಯಾಳುಗಳನ್ನು ಸುಳ್ಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಐವರ್ನಾಡು: ರಿಕ್ಷಾ ಪಲ್ಟಿ ► ಚಾಲಕ ಸೇರಿ ಇಬ್ಬರಿಗೆ ಗಾಯ Read More »

ಕರಾವಳಿ

ಚರ್ಚ್ ದಾಳಿ ಎಂಬ ಸುಳ್ಳು ಸುದ್ದಿಯನ್ನು ಹರಡಿದ ಆರೋಪ ► ಇಬ್ಬರ ಬಂಧನ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ.01. ಮಂಗಳೂರಲ್ಲಿ ಚರ್ಚ್ ದಾಳಿಯಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿಸಿದ ಆರೋಪದಲ್ಲಿ ಇಬ್ಬರು ಆರೋಪಿಗಳನ್ನು ಮಂಗಳೂರು ಸೆಂಟ್ರಲ್ ಉಪ ವಿಭಾಗದ ಎಸಿಪಿಯವರು ಗುರುವಾರದಂದು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್.ಪುರ ತಾಲೂಕು ನಿವಾಸಿಗಳಾದ ಸುನಿಲ್ ವೇಗಸ್ ಹಾಗೂ ಸಚಿತ್ ಪಿ.ಪಿ ಎಂದು ಗುರುತಿಸಲಾಗಿದೆ. ಇವರು ಚರ್ಚ್ ದಾಳಿಯಾಗಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿಗಳನ್ನು ಹಬ್ಬಿಸಿ ಕೋಮು ಪ್ರಚೋದನಕಾರಿಯಾಗಿ ವರ್ತಿಸಿದ್ದರು. ಈ ಬಗ್ಗೆ ತನಿಖೆ ನಡೆಸಿದ ಮಂಗಳೂರು ಸೆಂಟ್ರಲ್ ಉಪ

ಚರ್ಚ್ ದಾಳಿ ಎಂಬ ಸುಳ್ಳು ಸುದ್ದಿಯನ್ನು ಹರಡಿದ ಆರೋಪ ► ಇಬ್ಬರ ಬಂಧನ Read More »

ಕರಾವಳಿ

ಸುಳ್ಯದ ನ್ಯಾಯವಾದಿ ಬಿ.ಎಸ್.ಶರೀಫ್ ಆತ್ಮಹತ್ಯೆಗೆ ಶರಣು

(ನ್ಯೂಸ್ ಕಡಬ) newskadaba.com ಸುಳ್ಯ, ಜೂ.01. ನ್ಯಾಯವಾದಿ, ಸುಳ್ಯ ನಗರ ರೋಟರಿ ಕ್ಲಬ್ ಅಧ್ಯಕ್ಷ ಬಿ.ಎಸ್.ಶರೀಫ್ ತನ್ನ ಮನೆಯಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಶುಕ್ರವಾರ ಬೆಳಿಗ್ಗೆ ನಡೆದಿದೆ. ರಂಝಾನ್ ಸಮಯವಾದುದರಿಂದ ಬೆಳಿಗ್ಗೆ 4.30 ರ ನಂತರ ತನ್ನ ಅರಂಬೂರಿನಲ್ಲಿರುವ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬೆಳಿಗ್ಗೆ 8 ಗಂಟೆಯ ಕೃತ್ಯವು ಮನೆಯವರ ಗಮನಕ್ಕೆ ಬಂದಿದೆ. ಸ್ಥಳಕ್ಕೆ ಸುಳ್ಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೊರಿಯರ್ ಉದ್ಯಮ ನಡೆಸುತ್ತಿದ್ದ ಶರೀಫ್ ಇತ್ತೀಚೆಗೆ ಆರ್ಥಿಕ ಸಂಕಷ್ಟಕ್ಕೆ

ಸುಳ್ಯದ ನ್ಯಾಯವಾದಿ ಬಿ.ಎಸ್.ಶರೀಫ್ ಆತ್ಮಹತ್ಯೆಗೆ ಶರಣು Read More »

ಕರಾವಳಿ

ಹೀರೋ ಅಧಿಕೃತ ಮಾರಾಟ ಸಂಸ್ಥೆ ಕೀರ್ತಿ ಮೋಟಾರ್ ರವರ ಸಹಸಂಸ್ಥೆ ► ಕೀರ್ತಿ ಸರ್ವೀಸಸ್ ಇಂದು (ಜೂ.01) ಕುಕ್ಕೇ ಸುಬ್ರಹ್ಮಣ್ಯದಲ್ಲಿ ಶುಭಾರಂಭ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಜೂ.01. ಹೀರೋ ದ್ವಿಚಕ್ರ ವಾಹನಗಳ ಅಧಿಕೃತ ಮಾರಾಟ ಸಂಸ್ಥೆಯಾದ ಕೀರ್ತಿ ಮೋಟಾರ್ ರವರ ಸಹ ಸಂಸ್ಥೆ ಹೀರೋ ಸರ್ವೀಸಸ್ ಇಂದು ಕುಕ್ಕೇ ಸುಬ್ರಹ್ಮಣ್ಯದಲ್ಲಿ ಶುಭಾರಂಭಗೊಳ್ಳಲಿದೆ. ಸುಬ್ರಹ್ಮಣ್ಯ ಸಂಪುಟ ಶ್ರೀ ನರಸಿಂಹ ಸ್ವಾಮಿ ಮಠದ ಶ್ರೀ ಶ್ರೀ ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿಯವರ ಶುಭಾಶೀರ್ವಾದದೊಂದಿಗೆ ಆದಿ ಸುಬ್ರಹ್ಮಣ್ಯ ರಸ್ತೆಯ ನಾಗಹಿತ್ಲುವಿನಲ್ಲಿ ಜೂನ್ 01 ಶುಕ್ರವಾರದಂದು ಪೂರ್ವಾಹ್ನ 11 ಗಂಟೆಗೆ ನೂತನ ಸಂಸ್ಥೆಯು ಆರಂಭಗೊಳ್ಳಲಿದೆ. ಎಲ್ಲಾ ಹೀರೋ ದ್ವಿಚಕ್ರ ವಾಹನಗಳ ಪ್ರದರ್ಶನ, ಮಾರಾಟ ಮತ್ತು

ಹೀರೋ ಅಧಿಕೃತ ಮಾರಾಟ ಸಂಸ್ಥೆ ಕೀರ್ತಿ ಮೋಟಾರ್ ರವರ ಸಹಸಂಸ್ಥೆ ► ಕೀರ್ತಿ ಸರ್ವೀಸಸ್ ಇಂದು (ಜೂ.01) ಕುಕ್ಕೇ ಸುಬ್ರಹ್ಮಣ್ಯದಲ್ಲಿ ಶುಭಾರಂಭ Read More »

ಕರಾವಳಿ

ಅಂತರ್ ರಾಜ್ಯ ಬೈಕ್‌ ಕಳ್ಳತನ ಪ್ರಕರಣ ಭೇದಿಸಿದ ಮಂಗಳೂರು ಪೊಲೀಸರು ► 17 ಬೈಕ್ ಗಳೊಂದಿಗೆ ಎಂಟು ಮಂದಿಯ ಬಂಧನ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ.01. ಐಷಾರಾಮಿ ಬದುಕಿಗಾಗಿ ಬೈಕ್ ಗಳನ್ನು ಕಳ್ಳತನ ಪ್ರಕರಣವನ್ನು ಭೇದಿಸಿರುವ ಮಂಗಳೂರು ಕೇಂದ್ರ ಉಪ ವಿಭಾಗದ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿ ಲಕ್ಷಾಂತರ ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಂಡಿರುವ ಘಟನೆ ಗುರುವಾರದಂದು ನಡೆದಿದೆ. ಬಂಧಿತ ಆರೋಪಿಗಳನ್ನು ಕೇರಳದ ಅರ್ಜುನ್ ಕೆ.ಬಿ, ರೋಬಿನ್ ಬೇಬಿ ಹಾಗೂ ಟಿಜೋ ಜೋಸೆಪ್ ಎಂದು ಗುರುತಿಸಲಾಗಿದೆ. ಇವರು ಮಂಗಳೂರಿನ ರಸ್ತೆ ಬದಿಯಲ್ಲಿ ನಿಲ್ಲಿಸಲಾಗಿದ್ದ ಲಕ್ಷಾಂತರ ರೂಪಾಯಿ ಬೆಲೆ ಬಾಳುವ ರಾಯಲ್ ಎನ್ ಫೀಲ್ಡ್ ಬುಲೇಟ್, ಕೆಟಿಎಮ್, ಯಮಹಾ ಆರ್15,

ಅಂತರ್ ರಾಜ್ಯ ಬೈಕ್‌ ಕಳ್ಳತನ ಪ್ರಕರಣ ಭೇದಿಸಿದ ಮಂಗಳೂರು ಪೊಲೀಸರು ► 17 ಬೈಕ್ ಗಳೊಂದಿಗೆ ಎಂಟು ಮಂದಿಯ ಬಂಧನ Read More »

ಕರಾವಳಿ

ಬಂಟ್ವಾಳ ಪೊಲೀಸರ ಸಿನಿಮೀಯ ಶೈಲಿಯ ಕಾರ್ಯಾಚರಣೆ ► ಕಾರಿನ ಮೇಲೆ ಗುಂಡು ಹಾರಿಸಿ ಮೂವರ ಬಂಧನ, ಇಬ್ಬರು ಪರಾರಿ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಜೂ.01. ವೇಗವಾಗಿ ಬಂದ ವಾಹನವೊಂದನ್ನು‌ ನಿಲ್ಲಿಸಲು ಸೂಚಿಸಿದರೂ ನಿಲ್ಲಿದೆ ಪರಾರಿಯಾಗುವ ಯತ್ನದಲ್ಲಿದ್ದಾಗ ಸಿನಿಮೀಯ ಶೈಲಿಯಲ್ಲಿ ಫೈರಿಂಗ್ ಮಾಡಿ ಮೂವರನ್ನು ಬಂಧಿಸಿದ ಘಟನೆ ಬಂಟ್ವಾಳದಲ್ಲಿ ಗುರುವಾರ ತಡರಾತ್ರಿ ನಡೆದಿದೆ. ಬಂಧಿತ ಆರೋಪಿಗಳನ್ನು ಮಾರಿಪಳ್ಳ ನಿವಾಸಿ ಸದ್ದಾಂ, ಸುರತ್ಕಲ್ ನಿವಾಸಿ ಮೌಸೀನ್ ಹಾಗೂ ಬೊಳ್ಳಾಯಿ ನಿವಾಸಿ ಇರ್ಶಾದ್ ಎಂದು ಗುರುತಿಸಲಾಗಿದೆ. ಅಮ್ಮೆಮಾರ್ ನಿವಾಸಿಗಳಾದ ಮನ್ಸೂರ್ ಹಾಗೂ ಅಮ್ಮಿ ಪರಾರಿಯಾಗಿದ್ದಾರೆ. ಬೆಳ್ತಂಗಡಿ ಕಡೆಯಿಂದ ವೇಗವಾಗಿ ಬಂದ ಉಡುಪಿ ನೋಂದಣಿಯ ಸ್ವಿಫ್ಟ್ ಕಾರನ್ನು ಬೆಳ್ತಂಗಡಿ ಚೆಕ್ ಪೋಸ್ಟ್

ಬಂಟ್ವಾಳ ಪೊಲೀಸರ ಸಿನಿಮೀಯ ಶೈಲಿಯ ಕಾರ್ಯಾಚರಣೆ ► ಕಾರಿನ ಮೇಲೆ ಗುಂಡು ಹಾರಿಸಿ ಮೂವರ ಬಂಧನ, ಇಬ್ಬರು ಪರಾರಿ Read More »

ಕರಾವಳಿ

ನಿಫಾ ವೈರಸ್ ಮೂಲಕ್ಕಾಗಿ ಯಾವುದೇ ಕೋಳಿಗಳನ್ನು ಪರೀಕ್ಷೆಗೆ ಒಳಪಡಿಸಿಲ್ಲ ► ಮಣಿಪಾಲ ಕೇಂದ್ರದ ಹೆಸರನ್ನು ದುರುಪಯೋಗ ಪಡಿಸಲಾಗುತ್ತಿದೆ: ಡಾ| ಅರುಣ್

(ನ್ಯೂಸ್ ಕಡಬ) newskadaba.com ಉಡುಪಿ, ಜೂ.01. ‘ನಿಫಾ ವೈರಸ್ ಗೆ ಮೂಲ‌ ಕಾರಣ ಫಾರಂ ಕೋಳಿಗಳು’ ಎಂಬ ಸುಳ್ಳು ಸುದ್ದಿಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಡುತ್ತಿದ್ದು, ಈ ಬಗ್ಗೆ ಮಣಿಪಾಲ ಕೇಂದ್ರದಲ್ಲಿ ಯಾವುದೇ ಕೋಳಿಗಳನ್ನು ಪರೀಕ್ಷೆಗೆ ಒಳಪಡಿಸಿಲ್ಲ ಮತ್ತು ದೃಢಪಡಿಸಿರುವುದಿಲ್ಲ ಎಂದು ಮಣಿಪಾಲ ಸೆಂಟರ್ ಫಾರ್ ವೈರಸ್ ರಿಸರ್ಚ್ ಮುಖ್ಯಸ್ಥ ಡಾ. ಅರುಣ್ ಕುಮಾರ್ ಸ್ಪಷ್ಟಪಡಿಸಿದ್ದಾರೆ. ಮಣಿಪಾಲ ಸೆಂಟರ್ ಫಾರ್ ವೈರಸ್ ರಿಸರ್ಚ್ ಕೇಂದ್ರವು ನಿಫಾ ವೈರಸ್ ಅನ್ನು ಗುರುತಿಸುವಲ್ಲಿ ಮತ್ತು ಅದರ ಹರಡುವಿಕೆಯ ಮೂಲವನ್ನು ಪತ್ತೆ ಹಚ್ಚುವಲ್ಲಿ

ನಿಫಾ ವೈರಸ್ ಮೂಲಕ್ಕಾಗಿ ಯಾವುದೇ ಕೋಳಿಗಳನ್ನು ಪರೀಕ್ಷೆಗೆ ಒಳಪಡಿಸಿಲ್ಲ ► ಮಣಿಪಾಲ ಕೇಂದ್ರದ ಹೆಸರನ್ನು ದುರುಪಯೋಗ ಪಡಿಸಲಾಗುತ್ತಿದೆ: ಡಾ| ಅರುಣ್ Read More »

ಕರಾವಳಿ

ಕಲ್ಲಾಜೆ: ಕ್ಷುಲ್ಲಕ ಕಾರಣಕ್ಕೆ ಪರಸ್ಪರ ಹಲ್ಲೆ ► ಇತ್ತಂಡದವರು ಆಸ್ಪತ್ರೆಗೆ ದಾಖಲು

(ನ್ಯೂಸ್ ಕಡಬ) newskadaba.com ಕಡಬ, ಮೇ.31. ಕ್ಷುಲ್ಲಕ ಕಾರಣಕ್ಕೆ ಪರಸ್ಪರ ಹಲ್ಲೆ‌ ನಡೆಸಿದ ಪರಿಣಾಮ ವ್ಯಕ್ತಿಯೋರ್ವರು ಗಂಭೀರ ಗಾಯಗೊಂಡ ಘಟನೆ ಠಾಣಾ ವ್ಯಾಪ್ತಿಯ ಐತ್ತೂರು ಗ್ರಾಮದ ಓಟಕಜೆ ಎಂಬಲ್ಲಿ ಗುರುವಾರದಂದು ನಡೆದಿದೆ. ಗಾಯಾಳುವನ್ನು ಐತ್ತೂರು ಗ್ರಾಮದ ಓಟಕಜೆ‌ ಕಾಲನಿ ನಿವಾಸಿ ಸೆಂದಿಲ್ ಕುಮಾರ್ ಎಂದು ಗುರುತಿಸಲಾಗಿದೆ. ಕಾಲನಿಯ ಮಹಿಳೆಯರ ನಡುವೆ ಅವ್ಯಾಚ್ಯ ಶಬ್ದಗಳಿಂದ ಬೈಗುಳಗಳುಂಟಾಗಿದ್ದು, ಪರಸ್ಪರ ಹಲ್ಲೆ‌ ನಡೆಸಿದ್ದಾರೆ ಎನ್ನಲಾಗಿದೆ. ನಡುವೆ ಕಾಲನಿ ನಿವಾಸಿ ವೀರಮುತ್ತು ಎಂಬವರು ಇತರರೊಂದಿಗೆ ಸೇರಿಕೊಂಡು ಹಲ್ಲೆ ನಡೆಸಿದ ಪರಿಣಾಮ ಗಂಭೀರ ಗಾಯಗೊಂಡಿರುವ

ಕಲ್ಲಾಜೆ: ಕ್ಷುಲ್ಲಕ ಕಾರಣಕ್ಕೆ ಪರಸ್ಪರ ಹಲ್ಲೆ ► ಇತ್ತಂಡದವರು ಆಸ್ಪತ್ರೆಗೆ ದಾಖಲು Read More »

ಕರಾವಳಿ
Scroll to Top