ಕರಾವಳಿ

ಆಲಂಕಾರು: ಜಾಗದ ತಕರಾರಿನ ಹಿನ್ನೆಲೆಯಲ್ಲಿ ವ್ಯಕ್ತಿಗೆ ಹಲ್ಲೆ

(ನ್ಯೂಸ್ ಕಡಬ) newskadaba.com ಕಡಬ, ಮೇ.31. ಜಾಗದ ತಕರಾರಿಗೆ ಸಂಬಂಧಿಸಿದಂತೆ ವ್ಯಕ್ತಿಯೋರ್ವರಿಗೆ ತಂಡವೊಂದು ಹಲ್ಲೆ ನಡೆಸಿದ ಘಟನೆ ಗುರುವಾರದಂದು ಅಲಂಕಾರಿನಲ್ಲಿ ನಡೆದಿದೆ. ಆಲಂಕಾರು ನಿವಾಸಿ ಸಂದೀಪ್ ಭಟ್ ಹಾಗೂ ಯೋಗೀಶ್ ಆಚಾರ್ಯ ಎಂಬವರ ಮಧ್ಯೆ ಜಾಗದ ಬಗ್ಗೆ ತಕರಾರಿದ್ದು, ಪ್ರಕರಣ ನ್ಯಾಯಾಲಯದಲ್ಲಿದೆ. ಈ ನಡುವೆ ಯೋಗೀಶ್ ಆಚಾರ್ಯರು ಗುರುವಾರದಂದು ಕೆಸಿಬಿ ಮೂಲಕ‌ ಮಣ್ಣು ಅಗೆಯುತ್ತಿದ್ದಾಗ ಸಂದೀಪ್ ಭಟ್ ಆಕ್ಷೇಪಿಸಿದ್ದಕ್ಕೆ ಯೋಗೀಶ್ ಆಚಾರ್ಯರು ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ಗಾಯಗೊಂಡ ಸಂದೀಪ್ ಭಟ್ ರವರನ್ನು ಕಡಬ ಸಮುದಾಯ ಆಸ್ಪತ್ರೆಗೆ ದಾಖಲಿಸಲಾಗಿದೆ. […]

ಆಲಂಕಾರು: ಜಾಗದ ತಕರಾರಿನ ಹಿನ್ನೆಲೆಯಲ್ಲಿ ವ್ಯಕ್ತಿಗೆ ಹಲ್ಲೆ Read More »

ಕರಾವಳಿ

ಹಿಂದೂ ಯುವಕನಿಂದ ಮರ್ಧಾಳ ಮಸೀದಿಯಲ್ಲಿ ಇಫ್ತಾರ್ ಕೂಟ ► ಸೌಹಾರ್ದತೆಗೆ ಸಾಕ್ಷಿಯಾದ ಯುವಕನ ಕಾರ್ಯ

(ನ್ಯೂಸ್ ಕಡಬ) newskadaba.com ಕಡಬ, ಮೇ.31. ಹಿಂದೂ ಯುವಕನೋರ್ವ ತನ್ನ ಮುಸ್ಲಿಂ ಗೆಳೆಯರಿಗಾಗಿ ಗುರುವಾರದಂದು ಮರ್ಧಾಳ ಮಸೀದಿಯಲ್ಲಿ ಇಫ್ತಾರ್ ಕೂಟವನ್ನು ಏರ್ಪಡಿಸಿದ್ದು, ಸಾರ್ವಜನಿಕ ಮೆಚ್ಚುಗೆಗೆ ಪಾತ್ರವಾಗಿದೆ. ಮರ್ಧಾಳ ಪೂಜಾರಿ ಕಾಂಪ್ಲೆಕ್ಸ್ ನಲ್ಲಿರುವ ಶ್ರೀ ಭಗವತೀ ಹೋಟೆಲ್ ಮಾಲಕ ಗೋಪಾಲಕೃಷ್ಣ ಕಳೆದ ಮೂರು ವರ್ಷಗಳಿಂದ ತನ್ನ‌ ಹೋಟೆಲ್‌ನಲ್ಲಿ ಇಫ್ತಾರ್ ಕೂಟವನ್ನು ಏರ್ಪಡಿಸುತ್ತಿದ್ದು, ಈ ವರ್ಷ ಮರ್ಧಾಳ ಮಸೀದಿಯಲ್ಲಿ ಏರ್ಪಡಿಸಿದ್ದಾರೆ. ಗೋಪಾಲಕೃಷ್ಣರವರ ಈ ಕಾರ್ಯಕ್ಕೆ ಸಾರ್ವಜನಿಕ ವಲಯದಲ್ಲಿ ತೀವ್ರ ಮೆಚ್ಚುಗೆ ವ್ಯಕ್ತವಾಗಿದೆ. ಇತ್ತೀಚಿನ ದಿನಗಳಲ್ಲಿ ಕರಾವಳಿಯಲ್ಲಿ ಧರ್ಮ ಧರ್ಮಗಳ ನಡುವೆ

ಹಿಂದೂ ಯುವಕನಿಂದ ಮರ್ಧಾಳ ಮಸೀದಿಯಲ್ಲಿ ಇಫ್ತಾರ್ ಕೂಟ ► ಸೌಹಾರ್ದತೆಗೆ ಸಾಕ್ಷಿಯಾದ ಯುವಕನ ಕಾರ್ಯ Read More »

ಕರಾವಳಿ

ಮಂಗಳೂರು: ಎಂಟನೇ ಮಹಡಿಯಿಂದ ಕೆಳಗೆ ಬಿದ್ದು ಐದು ವರ್ಷದ ಮಗು ಮೃತ್ಯು

(ನ್ಯೂಸ್ ಕಡಬ) newskadaba.com ಮಂಗಳೂರು, ಮೇ.31. ಐದು ವರ್ಷದ ಮಗುವೊಂದು ಎಂಟನೇ ಮಹಡಿಯಿಂದ ಕೆಳಕ್ಕೆ ಮೃತಪಟ್ಟ ಘಟನೆ ಮಂಗಳೂರಿನಲ್ಲಿ ಗುರುವಾರದಂದು ನಡೆದಿದೆ. ಮೃತ ಮಗುವನ್ನು ಇಲ್ಲಿನ ಶಾಂತಿನಗರ ನಿವಾಸಿ ವಿಲ್ಸನ್ – ಆಲಿತಾ ದಂಪತಿಯ ಪುತ್ರಿ ಶಾನೆಲ್ ಜೆನಿಶೀಯಾ ಡಿಸೋಜಾ (5) ಎಂದು ಗುರುತಿಸಲಾಗಿದೆ. ಗುರುವಾರ ಬೆಳಿಗ್ಗೆ ಎಂಟನೇ ಮಹಡಿಯಲ್ಲಿನ ತನ್ನ ನಿವಾಸದ ಸ್ಲೈಡರ್ ಕಿಟಕಿ ಮೂಲಕ ಕೆಳಗೆ ಇಣುಕಿದ ಮಗು ಆಯತಪ್ಪಿ ಬಿದ್ದ ಪರಿಣಾಮ ಗಂಭೀರ ಗಾಯಗೊಂಡಿದ್ದು, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದೆ ಎಂದು ತಿಳಿದುಬಂದಿದೆ.

ಮಂಗಳೂರು: ಎಂಟನೇ ಮಹಡಿಯಿಂದ ಕೆಳಗೆ ಬಿದ್ದು ಐದು ವರ್ಷದ ಮಗು ಮೃತ್ಯು Read More »

ಕರಾವಳಿ

ರಾಜರಾಜೇಶ್ವರಿ ನಗರ ವಿಧಾನ ಸಭಾ ಚುನಾವಣೆ ► ಕಾಂಗ್ರೆಸ್ ಅಭ್ಯರ್ಥಿ ಮುನಿರತ್ನ 25 ಸಾವಿರ ಮತಗಳ ಅಂತರದಿಂದ ಭರ್ಜರಿ ಗೆಲವು

(ನ್ಯೂಸ್ ಕಡಬ) newskadaba.com ಬೆಂಗಳೂರು, ಮೇ.31. ಭಾರೀ ಸಂಖ್ಯೆಯಲ್ಲಿ ವೋಟರ್ ಐಡಿ ಪತ್ತೆಯಾದ ಕಾರಣ ಮುಂದೂಡಲಾಗಿದ್ದ ಬೆಂಗಳೂರಿನ ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಮತ ಎಣಿಕೆ ಕಾರ್ಯವು ಗುರುವಾರ ಬೆಳಗ್ಗೆ ಆರಂಭವಾಗಿದ್ದು, ಕಾಂಗ್ರೆಸ್ ಅಭ್ಯರ್ಥಿ ಮುನಿರತ್ನ 25 ಸಾವಿರ ಮತಗಳ ಭಾರೀ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಮುನಿರತ್ನ 9ನೇ ಸುತ್ತಿನ ಅಂತ್ಯದಲ್ಲಿ 75,282 ಮತಗಳನ್ನು ಪಡೆದಿದ್ದಾರೆ. ಬಿಜೆಪಿಯ ತುಳಸಿ ಮುನಿರಾಜುಗೌಡ 31,182 ಹಾಗೂ ಜೆಡಿಎಸ್‌ನ ಜಿ.ಎಚ್. ರಾಮಚಂದ್ರ 19,509 ಮತಗಳನ್ನು ಪಡೆದಿದ್ದಾರೆ. ಮುನಿರತ್ನ ಗೆಲುವು ಖಚಿತವಾದ ತಕ್ಷಣ

ರಾಜರಾಜೇಶ್ವರಿ ನಗರ ವಿಧಾನ ಸಭಾ ಚುನಾವಣೆ ► ಕಾಂಗ್ರೆಸ್ ಅಭ್ಯರ್ಥಿ ಮುನಿರತ್ನ 25 ಸಾವಿರ ಮತಗಳ ಅಂತರದಿಂದ ಭರ್ಜರಿ ಗೆಲವು Read More »

ಕರಾವಳಿ

ಪಡುಬಿದ್ರಿ: ನೆರೆ ನೀರಿನಲ್ಲಿ ಕೊಚ್ಚಿ ಹೋಗಿದ್ದ ಬಾಲಕಿಯ ಮೃತದೇಹ ಪತ್ತೆ ► ಮುಗಿಲು ಮುಟ್ಟಿದ ಹೆತ್ತವರ ಆಕ್ರಂದನ

(ನ್ಯೂಸ್ ಕಡಬ) newskadaba.com ಪಡುಬಿದ್ರೆ, ಮೇ.30. ಮಂಗಳವಾರ ಸುರಿದ ಭಾರೀ ಮಳೆಗೆ ಕೃತಕ ನೆರೆ ನೀರಿನಲ್ಲಿ ನಾಪತ್ತೆಯಾಗಿದ್ದ ಬಾಲಕಿಯ ಮೃತದೇಹ ಬುಧವಾರದಂದು 100 ಮೀಟರ್ ದೂರದಲ್ಲಿ ಪತ್ತೆಯಾಗಿದೆ. ಮೃತ ಬಾಲಕಿಯನ್ನು ಪಾದೆಬೆಟ್ಟುವಿನ ಉಮೇಶ್ ಆಚಾರ್ಯ ಮತ್ತು ಆಶಾ ದಂಪತಿಯ ಪುತ್ರಿ, ಪಡುಬಿದ್ರೆಯ ಎಸ್‌ಬಿವಿಪಿ ಹಿರಿಯ ಪ್ರಾಥಮಿಕ ಶಾಲೆಯ ನಾಲ್ಕನೇ ತರಗತಿಯ ವಿದ್ಯಾರ್ಥಿನಿ ನಿಧಿ ಆಚಾರ್ಯ (9) ಎಂದು ಗುರುತಿಸಲಾಗಿದೆ. ಮಂಗಳವಾರ ಬೆಳಗ್ಗೆಯಿಂದಲೇ ಭಾರೀ ಮಳೆ ಸುರಿದ ಹಿನ್ನೆಲೆಯಲ್ಲಿ ಮಧ್ಯಾಹ್ನ 3 ಗಂಟೆಗೆ ಶಾಲೆ ಬಿಟ್ಟಿದ್ದು, ನಿಧಿ ತನ್ನ ಸಹೋದರಿ

ಪಡುಬಿದ್ರಿ: ನೆರೆ ನೀರಿನಲ್ಲಿ ಕೊಚ್ಚಿ ಹೋಗಿದ್ದ ಬಾಲಕಿಯ ಮೃತದೇಹ ಪತ್ತೆ ► ಮುಗಿಲು ಮುಟ್ಟಿದ ಹೆತ್ತವರ ಆಕ್ರಂದನ Read More »

ಕರಾವಳಿ

ಬೆಳ್ತಂಗಡಿ:‌ ಎರ್ಮಾಯ್‌ ಫಾಲ್ಸ್‌ನಿಂದ ಕೆಳಗೆ ಬಿದ್ದು ಚಿತ್ರ ನಿರ್ದೇಶಕ ಮೃತ್ಯು

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಮೇ.30. ಇಲ್ಲಿನ ಎರ್ಮಾಯ್ ಫಾಲ್ಸ್ ನಿಂದ‌ ಕಾಲು ಜಾರಿ ಕೆಳಗಡೆ‌ ಬಿದ್ದು ಕನ್ನಡ ಚಿತ್ರ ನಿರ್ದೇಶಕರೋರ್ವರು ಜಲ ಸಮಾಧಿಯಾದ ಘಟನೆ ಬುಧವಾರದಂದು ನಡೆದಿದೆ. ‘ಕನಸು ಕಣ್ಣು ತೆರೆದಾಗ’ ಕನ್ನಡ ಚಿತ್ರದ ನಿರ್ದೇಶಕ ಸಂತೋಷ್ ಶೆಟ್ಟಿ ಕಟೀಲ್ ಎರ್ಮಾಯ್ ಫಾಲ್ಸ್‌ನಿಂದ ಕಾಲು ಜಾರಿ ಬಿದ್ದು ಮೃತಪಟ್ಟಿರುವ ದುರ್ದೈವಿ. ಇವರು ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಅರಣ್ಯ ವ್ಯಾಪ್ತಿಯ ಕಾಡಿನ ಮಧ್ಯದಲ್ಲಿರುವ ಎರ್ಮಾಯ್ ಫಾಲ್ಸ್‌ನಲ್ಲಿ ಫೋಟೊ ಶೂಟ್ ನಡೆಸಲು ತನ್ನ ತಂಡದೊಂದಿಗೆ ತೆರಳಿದ್ದು, ಸಂತೋಷ್ ಕಾಲಿಗೆ

ಬೆಳ್ತಂಗಡಿ:‌ ಎರ್ಮಾಯ್‌ ಫಾಲ್ಸ್‌ನಿಂದ ಕೆಳಗೆ ಬಿದ್ದು ಚಿತ್ರ ನಿರ್ದೇಶಕ ಮೃತ್ಯು Read More »

ಕರಾವಳಿ

ಭಾರೀ ಮಳೆಯಿಂದ ತತ್ತರಿಸಿದ ಕರಾವಳಿ ► ಜಿಲ್ಲಾಡಳಿತಕ್ಕೆ ಸಕಲ ನೆರವು ನೀಡಲಾಗುವುದು: ಮುಖ್ಯಮಂತ್ರಿ ಕುಮಾರಸ್ವಾಮಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಮೇ.30. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹಾಗೂ ರಾಜ್ಯದ ಕರಾವಳಿ ಪ್ರದೇಶಗಳಲ್ಲಿ ಸುರಿಯುತ್ತಿರುವ ತೀವ್ರ ಮಳೆಯ ಪರಿಸ್ಥಿತಿಯನ್ನು ರಾಜ್ಯ ಸರಕಾರ ನಿಕಟವಾಗಿ ಗಮನಿಸುತ್ತಿದ್ದು, ಸಂತ್ರಸ್ತರ ರಕ್ಷಣೆಗೆ ಜಿಲ್ಲಾಡಳಿತಕ್ಕೆ ರಾಜ್ಯ ಸರಕಾರ ಸಕಲ ನೆರವು ನೀಡಲಿದೆ ಎಂದು ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ತಿಳಿಸಿದ್ದಾರೆ. ದ.ಕ. ಜಿಲ್ಲೆಯಲ್ಲಿ ಅತಿವೃಷ್ಟಿ ಬಗ್ಗೆ ಇಂದು ಬೆಳಿಗ್ಗೆ ಅಲ್ಲಿನ ಜಿಲ್ಲಾಧಿಕಾರಿಗಳಿಂದ ತಾನು ಮಾಹಿತಿ ಪಡೆದಿದ್ದು, ಮಳೆ ಹಾನಿ ತೀವ್ರತೆ ಕಡಿಮೆಗೊಳಿಸಲು ಮತ್ತು ಸಂತ್ರಸ್ತರ ಪ್ರಾಣಹಾನಿ ತಪ್ಪಿಸಲು ಜನರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲು

ಭಾರೀ ಮಳೆಯಿಂದ ತತ್ತರಿಸಿದ ಕರಾವಳಿ ► ಜಿಲ್ಲಾಡಳಿತಕ್ಕೆ ಸಕಲ ನೆರವು ನೀಡಲಾಗುವುದು: ಮುಖ್ಯಮಂತ್ರಿ ಕುಮಾರಸ್ವಾಮಿ Read More »

ಕರಾವಳಿ

ಭಾರೀ ಮಳೆಯಿಂದಾಗಿ ಹವಾಮಾನದಲ್ಲಿ ಏರುಪೇರು ► ಮಂಗಳೂರಿನಲ್ಲಿ ಇಳಿಸಲು ಅಸಾಧ್ಯದ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಇಳಿದ ವಿಮಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಮೇ.30. ದುಬೈನಿಂದ ಹಾಗೂ ಮುಂಬಯಿಯಿಂದ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದ ಎರಡು ವಿಮಾನಗಳನ್ನು ವಿಪರೀತ ಮಳೆಯ ಹಿನ್ನೆಲೆಯಲ್ಲಿ ಬೆಂಗಳೂರು ಹಾಗೂ ಕೇರಳದಲ್ಲಿ ಇಳಿಸಿದ ಘಟನೆ ಮಂಗಳವಾರದಂದು ನಡೆದಿದೆ. ಮಂಗಳವಾರ ಬೆಳಿಗ್ಗೆಯಿಂದಲೇ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ನಗರದ ಜನಜೀವನ ಅಸ್ತವ್ಯಸ್ತಗೊಂಡಿದ್ದು, ಹವಾಮಾನ ವೈಪರೀತ್ಯದಿಂದಾಗಿ ವಿಮಾನಗಳನ್ನು ಇಳಿಸಲು ಅಸಾಧ್ಯವಾದ ಕಾರಣ ದುಬೈನಿಂದ ಮಂಗಳೂರಿಗೆ ಬರಬೇಕಾಗಿದ್ದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನವನ್ನು ಬೆಂಗಳೂರಿನಲ್ಲಿ ಇಳಿಸಬೇಕಾಯಿತು. ಅಲ್ಲದೆ, ಮುಂಬೈಯಿಂದ ಮಂಗಳೂರಿಗೆ ಬರಬೇಕಾಗಿದ್ದ ಏರ್ ಇಂಡಿಯಾ ವಿಮಾನವನ್ನು

ಭಾರೀ ಮಳೆಯಿಂದಾಗಿ ಹವಾಮಾನದಲ್ಲಿ ಏರುಪೇರು ► ಮಂಗಳೂರಿನಲ್ಲಿ ಇಳಿಸಲು ಅಸಾಧ್ಯದ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಇಳಿದ ವಿಮಾನ Read More »

ಕರಾವಳಿ

ಮುಂಗಾರು ಮಳೆಗೆ ಮಹಿಳೆ ಮೃತ್ಯು ► ಮಂಗಳೂರಿನಲ್ಲಿ ಜನಜೀವನ ಅಸ್ತವ್ಯಸ್ತ

(ನ್ಯೂಸ್ ಕಡಬ) newskadaba.com ಮಂಗಳೂರು, ಮೇ.29. ಕರಾವಳಿಯಲ್ಲಿ ಮಂಗಳವಾರ ಬೆಳಗ್ಗೆಯಿಂದ ಸುರಿಯುತ್ತಿರುವ ಭಾರೀ ಮಳೆಗೆ ಮಹಿಳೆಯೋರ್ವರು ಮೃತಪಟ್ಟಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಮನೆಯ ಹಿಂಬದಿಯ ಕಾಂಪೌಂಡ್ ಗೋಡೆ ಕುಸಿದ ಪರಿಣಾಮ ಮಣ್ಣಿನಡಿಗೆ ಸಿಲುಕಿ ಕೊಂಡು ಕೆಪಿಟಿ ಬಳಿಯ ಉದಯ ನಗರ ನಿವಾಸಿ ಮೋಹಿಣಿ (60) ಮೃತಪಟ್ಟಿದ್ದಾರೆ. ಸುಮಾರು ಎಂಟು ಗಂಟೆಗಳ ಕಾಲ‌ ಮಣ್ಣಿನಡಿ ಸಿಲುಕಿದ್ದ ಇವರನ್ನು ರಕ್ಷಿಸಲು ಮಂಗಳೂರು ಪೂರ್ವ ಠಾಣೆ ಪೊಲೀಸರು, ಅಗ್ನಿಶಾಮಕ ದಳ, ಕಂದಾಯ ಇಲಾಖೆ ಮತ್ತು ಸ್ಥಳೀಯರು ಹರಸಾಹಸಪಟ್ಟರೂ ಬದುಕಿಸಲಾಗಲಿಲ್ಲ. ಇನ್ನೊಂದೆಡೆ ಅಡ್ಯಾರ್ ಕಣ್ಣೂರ್

ಮುಂಗಾರು ಮಳೆಗೆ ಮಹಿಳೆ ಮೃತ್ಯು ► ಮಂಗಳೂರಿನಲ್ಲಿ ಜನಜೀವನ ಅಸ್ತವ್ಯಸ್ತ Read More »

ಕರಾವಳಿ

ಕಡಬ: ವರದಕ್ಷಿಣೆ ತರುವಂತೆ ಕಿರುಕುಳ ► ಪತಿ, ಸಂಬಂಧಿಕರ ವಿರುದ್ಧ ದೂರು

(ನ್ಯೂಸ್ ಕಡಬ) newskadaba.com ಕಡಬ, ಮೇ.28. ವರದಕ್ಷಿಣೆ ನೀಡುವಂತೆ ಆಗ್ರಹಿಸಿ ತನ್ನ ಪತಿ ಮತ್ತು ಮನೆಯವರು ದೈಹಿಕ ಹಾಗೂ ಮಾನಸಿಕ ಹಿಂಸೆ ನೀಡುತ್ತಿದ್ದಾರೆ‌ ಎಂದು ಆರೋಪಿಸಿ ಮಹಿಳೆಯೋರ್ವರು ಕಡಬ ಠಾಣೆಗೆ ದೂರು‌ ನೀಡಿದ್ದಾರೆ. ಇಲ್ಲಿನ ಕೋಡಿಂಬಾಳ ಗ್ರಾಮದ ಹಳೆಸ್ಟೇಷನ್ ನಿವಾಸಿ ಸಕೀನಾ ಎಂಬವರನ್ನು ಕಳೆದ ಫೆಬ್ರವರಿಯಲ್ಲಿ ಕಾಸರಗೋಡು ಜಿಲ್ಲೆಯ ಉದುಮ ನಿವಾಸಿ ಅಹ್ಮದ್ ಶಕೀಬ್ ಎಂಬುವವರಿಗೆ ಮದುವೆ ಮಾಡಿಕೊಡಲಾಗಿತ್ತು. ಆ ನಂತರದ ದಿನಗಳಲ್ಲಿ ತನ್ನ ಗಂಡ, ಮಾವ ಅಹಮ್ಮದ್ ಸತ್ತಾರ್ ಹಾಗೂ ಅತ್ತೆ ಬೀಬಿಯವರು ಜೊತೆ ಸೇರಿ

ಕಡಬ: ವರದಕ್ಷಿಣೆ ತರುವಂತೆ ಕಿರುಕುಳ ► ಪತಿ, ಸಂಬಂಧಿಕರ ವಿರುದ್ಧ ದೂರು Read More »

ಕರಾವಳಿ
Scroll to Top