ಕರಾವಳಿ

ದಕ್ಷಿಣ ಕನ್ನಡದಲ್ಲಿ ನಿಫಾಃ ಪತ್ತೆಯಾಗಿಲ್ಲ: ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ ► ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್

(ನ್ಯೂಸ್ ಕಡಬ) newskadaba.com ಮಂಗಳೂರು, ಮೇ.24. ಕೇರಳ ರಾಜ್ಯವನ್ನೇ ತಲ್ಲಣಗೊಳಿಸಿದ್ದ ನಿಪಾಹ್ ವೈರಸ್ ಕರ್ನಾಟಕಕ್ಕೆ ಕಾಲಿಟ್ಟಿಲ್ಲ. ಕೇವಲ ವದಂತಿ ಮಾತ್ರವಾಗಿದ್ದು, ಸಾರ್ವಜನಿಕರು ಆತಂಕ ಪಡುವ ಅಗತ್ಯವಿಲ್ಲ ಎಂದು ಜಿಲ್ಲಾಧಿಕಾರಿ ಸಸಿಕಾಂತ್‌ ಸೆಂಥಿಲ್‌ ಸ್ಪಷ್ಟಪಡಿಸಿದ್ದಾರೆ. ಶಂಕಿತ ನಿಪಾಃ ಹಿನ್ನೆಲೆಯಲ್ಲಿ ಮಂಗಳೂರಿನ ಆಸ್ಪತ್ರೆಗೆ ದಾಖಲಾಗಿದ್ದ ರೋಗಿಗಳಿಬ್ಬರ ವೈದ್ಯಕೀಯ ಪರೀಕ್ಷೆಯ ವರದಿ ಬಂದಿದ್ದು, ಎರಡೂ ಪ್ರಕರಣಗಳಲ್ಲಿ ಋಣಾತ್ಮಕ ಫಲಿತಾಂಶ ಕಂಡುಬಂದಿದೆ. ಆದುದರಿಂದ ಯಾರೂ ಈ ಬಗ್ಗೆ ಭಯಪಡುವ ಅಗತ್ಯವಿಲ್ಲ. ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುವ ಸುಳ್ಳು ಸುದ್ದಿಗಳನ್ನು ಯಾರೂ ನಂಬಬಾರದೆಂದು ಸೆಂಥಿಲ್‌ ತಿಳಿಸಿದ್ದಾರೆ.

ದಕ್ಷಿಣ ಕನ್ನಡದಲ್ಲಿ ನಿಫಾಃ ಪತ್ತೆಯಾಗಿಲ್ಲ: ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ ► ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ Read More »

ಕರಾವಳಿ

ಕುಂತೂರು: ಶಾಲೆಗೆಂದು ತೆರಳಿದ ಬಾಲಕ ನಾಪತ್ತೆ

(ನ್ಯೂಸ್ ಕಡಬ) newskadaba.com ಕಡಬ, ಮೇ.24. ಶಾಲೆಗೆಂದು ತೆರಳಿದ ಬಾಲಕನೋರ್ವ ಮನೆಗೆ ಬಾರದೆ ನಾಪತ್ತೆಯಾಗಿರುವ ಘಟನೆ ಕಡಬ ಠಾಣಾ ವ್ಯಾಪ್ತಿಯ ಕುಂತೂರಿನಲ್ಲಿ ಬುಧವಾರದಂದು ನಡೆದಿದೆ. ನಾಪತ್ತೆಯಾಗಿರುವ ಬಾಲಕನನ್ನು ಕುಂತೂರು ಗ್ರಾಮದ ಕಂಡತ್ತಡ್ಕ ನಿವಾಸಿ ಜಯಂತಿ ಎಂಬವರ ಪುತ್ರ, ಪದವು ಸೈಂಟ್ ಜಾರ್ಜ್ ಪ್ರೌಢಶಾಲೆಯ ಹತ್ತನೇ ತರಗತಿ ವಿದ್ಯಾರ್ಥಿ ಶರತ್ ಕುಮಾರ್ ಎಂದು‌ ಗುರುತಿಸಲಾಗಿದೆ. ಈತ ಬುಧವಾರದಂದು ಶಾಲೆಗೆಂದು ಮನೆಯಿಂದ ತೆರಳಿದ್ದು, ಆ ಬಳಿಕ ಮನೆಗೆ ಬಾರದೆ ನಾಪತ್ತೆಯಾಗಿದ್ದಾನೆ. ಸಂಬಂಧಿಕರ ಮನೆಯಲ್ಲೆಲ್ಲಾ ಹುಡುಕಾಡಿದ್ದು, ಪತ್ತೆಯಾಗದ ಕಾರಣ ಆತನ ತಾಯಿ

ಕುಂತೂರು: ಶಾಲೆಗೆಂದು ತೆರಳಿದ ಬಾಲಕ ನಾಪತ್ತೆ Read More »

ಕರಾವಳಿ

ಚಂಡಮಾರುತದ ಭೀತಿಯಲ್ಲಿ ಕರಾವಳಿ..!! ► ಹವಾಮಾನ ಇಲಾಖೆ ಮುನ್ಸೂಚನೆ

(ನ್ಯೂಸ್ ಕಡಬ) newskadaba.com ನವದೆಹಲಿ, ಮೇ.24. ಯೆಮನ್ ನ ಏಡೆನ್ ನಗರದ ಈಶಾನ್ಯ ಮತ್ತು 560 ಕಿಮೀ ಸೊಕೊಟ್ರಾ ದ್ವೀಪಗಳ ಗಡಿ ಭಾಗದಲ್ಲಿ ನೆಲೆಯಾಗಿರುವ ಚಂಡಮಾರುತವು ಭಾರತದ ಕರಾವಳಿ ಪ್ರದೇಶಗಳಿಗೆ ಅಪ್ಪಳಿಸುವ ಸಾಧ್ಯತೆ ಇದೆಯೆಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅಡೆನ್ ಕೊಲ್ಲಿಯಲ್ಲಿ ಕೇಂದ್ರಿಕೃತವಾಗಿರುವ ಸಾಗರ್ ಚಂಡಮಾರುತವು ತಮಿಳುನಾಡು, ಕೇರಳ, ಕರ್ನಾಟಕ, ಗೋವಾ, ಮಹಾರಾಷ್ಟ್ರ ಮತ್ತು ದ್ವೀಪ ಸಮೂಹಗಳಿಗೆ ಹಾಗೂ ಕರಾವಳಿ ಪ್ರದೇಶಗಳಿಗೆ ಅಪ್ಪಳಿಸುವ ಸಾಧ್ಯತೆ ಇದ್ದು, ಮೀನುಗಾರರು ಮೀನುಗಾರಿಕೆಗೆ ತೆರಳದಂತೆ ಹವಾಮಾನ ಇಲಾಖೆಯು ಎಚ್ಚರಿಕೆ ನೀಡಿದೆ.

ಚಂಡಮಾರುತದ ಭೀತಿಯಲ್ಲಿ ಕರಾವಳಿ..!! ► ಹವಾಮಾನ ಇಲಾಖೆ ಮುನ್ಸೂಚನೆ Read More »

ಕರಾವಳಿ

ಕಬಕ: ಮನೆಯ ಬೀಗ ಮುರಿದು ಒಳ ನುಗ್ಗಿದ ಕಳ್ಳರು ► ನಗ, ನಗದಿನೊಂದಿಗೆ ಪರಾರಿ

(ನ್ಯೂಸ್ ಕಡಬ) newskadaba.com ಪುತ್ತೂರು, ಮೇ.23. ಮನೆಯಲ್ಲಿ ಯಾರೂ ಇಲ್ಲದ ವೇಳೆ ಮುಂಬಾಗಿಲ ಚಿಲಕ ಒಡೆದು ಒಳನುಗ್ಗಿದ ಕಳ್ಳರು ನಗ, ನಗದನ್ನು ದೋಚಿರುವ ಘಟನೆ ಪುತ್ತೂರಿನ ಕಬಕದಲ್ಲಿ ಮಂಗಳವಾರದಂದು ನಡೆದಿದೆ. ಕಬಕ ಗ್ರಾಮದ ಪೋಳ್ಯದಕಟ್ಟೆ ನಿವಾಸಿ ಅಬ್ದುಲ್ ರಹಿಮಾನ್ ಎಂಬವರ ಮನೆಯಲ್ಲಿ ಸೋಮವಾರ ಸಂಜೆಯಿಂದ ಮಂಗಳವಾರ ಮಧ್ಯಾಹ್ನದ ನಡುವೆ ಯಾರೂ ಇಲ್ಲದ ವೇಳೆ ಒಳನುಗ್ಗಿದ ಕಳ್ಳರು ಮನೆಯಲ್ಲಿಟ್ಟಿದ್ದ ಮೂರೂವರೆ ಪವನ್ ಚಿನ್ನಾಭರಣ ಹಾಗೂ ಅರುವತ್ತು ಸಾವಿರ ರೂ. ನಗದನ್ನು ದೋಚಿದ್ದಾರೆ. ಮನೆಯವರು ಅಪರಾಹ್ನ ಮನೆಗೆ ಬಂದಾಗ ಘಟನೆ

ಕಬಕ: ಮನೆಯ ಬೀಗ ಮುರಿದು ಒಳ ನುಗ್ಗಿದ ಕಳ್ಳರು ► ನಗ, ನಗದಿನೊಂದಿಗೆ ಪರಾರಿ Read More »

ಕರಾವಳಿ

ಕುಂತೂರು: ಬಾವಿಗೆ ಬಿದ್ದು ಮಹಿಳೆ ಮೃತ್ಯು

(ನ್ಯೂಸ್ ಕಡಬ) newskadaba.com ಕಡಬ, ಮೇ.23. ಮಹಿಳೆಯೋರ್ವರು ನೀರು ಸೇದುತ್ತಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ ಬಾವುಗೆ ಬಿದ್ದು ಮೃತಪಟ್ಟ ಘಟನೆ ಬುಧವಾರ ಅಪರಾಹ್ನ ಕುಂತೂರಿನಲ್ಲಿ ನಡೆದಿದೆ. ಮೃತ ಮಹಿಳೆಯನ್ನು ಪೆರಾಬೆ ಗ್ರಾಮದ ಕುಂತೂರು ಅನ್ನಡ್ಕ ನಿವಾಸಿ ವಿಶ್ವನಾಥ್ ಗೌಡ ಎಂಬವರ ಪತ್ನಿ ಶಶಿಕಲಾ (46) ಎಂದು ಗುರುತಿಸಲಾಗಿದೆ. ಇವರು ಬುಧವಾರ ಅಪರಾಹ್ನ ತನ್ನ ಮನೆಯ ಅಂಗಳದಲ್ಲಿದ್ದ ಆವರಣ ಗೋಡೆಯಿಲ್ಲದ ಬಾವಿಯಿಂದ ನೀರು ಸೇದುತ್ತಿದ್ದಾಗ ಆಕಸ್ಮಿಕವಾಗಿ ಇಪ್ಪತ್ರೈದು ಅಡಿ ಆಳದ ಬಾವಿಗೆ ಬಿದ್ದು ಮೃತಪಟ್ಟಿದ್ದಾರೆ. ಸ್ಥಳಕ್ಕೆ ಕಡಬ

ಕುಂತೂರು: ಬಾವಿಗೆ ಬಿದ್ದು ಮಹಿಳೆ ಮೃತ್ಯು Read More »

ಕರಾವಳಿ

ಇಂದು ಮುಖ್ಯಮಂತ್ರಿಯಾಗಿ ಕುಮಾರಸ್ವಾಮಿ, ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣ ವಚನ ► ಉತ್ತರದಿಂದ ದಕ್ಷಿಣದವರೆಗಿನ ಗಣ್ಯಾತಿಗಣ್ಯರು ಭಾಗಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಮೇ.23. ರಾಜ್ಯದ 24 ನೆಯ ಮುಖ್ಯಮಂತ್ರಿಯಾಗಿ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ಹಾಗೂ ಉಪ ಮುಖ್ಯಮಂತ್ರಿಯಾಗಿ ಕಾಂಗ್ರೆಸ್ ಮುಖಂಡ ಡಾ.ಜಿ. ಪರಮೇಶ್ವರ್ ಇಂದು ಸಂಜೆ 4.30 ಗಂಟೆಗೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಪದಗ್ರಹಣ ಸಮಾರಂಭಕ್ಕೆ ವಿಧಾನ ಸೌಧದ ಮುಂಭಾಗದಲ್ಲಿ ಬೃಹತ್ ವೇದಿಕೆ ಸಿದ್ಧಪಡಿಸಲಾಗಿದ್ದು, ಬಿಜೆಪಿ ವಿರೋಧಿ ಬಣ ಹಾಗೂ ತೃತೀಯ ರಂಗದ ನಾಯಕರು ಸೇರಿದಂತೆ ಉತ್ತರದಿಂದ ದಕ್ಷಿಣದವರೆಗಿನ ಗಣ್ಯಾತಿಗಣ್ಯರು ಕಾರ್ಯಕ್ರಮಕ್ಕೆ ಸಾಕ್ಷಿಯಾಗಲಿದ್ದಾರೆ. ಸ್ಪೀಕರ್ ಆಗಿ ಶ್ರೀನಿವಾಸಪುರ ಕ್ಷೇತ್ರದ ಕಾಂಗ್ರೆಸ್ ಶಾಸಕ ರಮೇಶ್

ಇಂದು ಮುಖ್ಯಮಂತ್ರಿಯಾಗಿ ಕುಮಾರಸ್ವಾಮಿ, ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣ ವಚನ ► ಉತ್ತರದಿಂದ ದಕ್ಷಿಣದವರೆಗಿನ ಗಣ್ಯಾತಿಗಣ್ಯರು ಭಾಗಿ Read More »

ಕರಾವಳಿ

ಜಿಲ್ಲೆಯಾದ್ಯಂತ ಸೆಕ್ಷನ್ 144 ಅನ್ವಯ ನಿಷೇಧಾಜ್ಞೆ ಮುಂದುವರಿಕೆ ► ಕಾರಣವೇನು ಗೊತ್ತೇ..?

(ನ್ಯೂಸ್ ಕಡಬ) newskadaba.com ಮಂಗಳೂರು, ಮೇ.23. ಇಂದು ನಿಯೋಜಿತ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅಧಿಕಾರ ಸ್ವೀಕಾರ ಹಿನ್ನೆಲೆಯಲ್ಲಿ ಕಮಿಷನರೇಟ್ ವ್ಯಾಪ್ತಿ ಹೊರತುಪಡಿಸಿ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮೇ 25ರ ಬೆಳಗ್ಗೆ 6 ಗಂಟೆಯವರೆಗೆ ನಿಷೇಧಾಜ್ಞೆ ಮುಂದುವರಿಕೆಯಾಗಲಿದೆ ಎಂದು ದ.ಕ. ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ತಿಳಿಸಿದ್ದಾರೆ. ವಿಶ್ವಾಸಮತ ಯಾಚನೆ ಹಿನ್ನೆಲೆಯಲ್ಲಿ ನಿಷೇಧಾಜ್ಞೆಯನ್ನು ಜಾರಿಗೊಳಿಸಲಾಗಿತ್ತು. ನಿಷೇಧಾಜ್ಞೆಯ ನಡುವೆಯೂ ಬಂಟ್ವಾಳ ತಾಲೂಕಿನ ವಿಟ್ಲ ಭಾಗದಲ್ಲಿ ಘರ್ಷಣೆ ನಡೆದಿತ್ತು.

ಜಿಲ್ಲೆಯಾದ್ಯಂತ ಸೆಕ್ಷನ್ 144 ಅನ್ವಯ ನಿಷೇಧಾಜ್ಞೆ ಮುಂದುವರಿಕೆ ► ಕಾರಣವೇನು ಗೊತ್ತೇ..? Read More »

ಕರಾವಳಿ

‘ನಿಪಾಹ್ ವೈರಸ್’: ದಕ್ಷಿಣ ಕನ್ನಡದಾದ್ಯಂತ ಹೈ ಅಲೆರ್ಟ್ ► ದ.ಕ.ದಲ್ಲಿ ಯಾವುದೇ ಪ್ರಕರಣ ದೃಢಪಟ್ಟಿಲ್ಲ: ಯು.ಟಿ.ಖಾದರ್

(ನ್ಯೂಸ್ ಕಡಬ) newskadaba.com ಮಂಗಳೂರು, ಮೇ.23. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈ ವರೆಗೆ ನಿಪಾಹ್ ವೈರಸ್ ದೃಢಪಟ್ಟಿಲ್ಲವಾದರೂ ರೋಗ ಲಕ್ಷಣಗಳು ಕಂಡುಬಂದ ಹಿನ್ನೆಲೆಯಲ್ಲಿ ಸಂಶಯದ ದೃಷ್ಟಿಯಿಂದ ಇಬ್ಬರು ರೋಗಿಗಳ ಬಗ್ಗೆ ನಿಗಾ ವಹಿಸಲಾಗಿದೆ. ಸಾರ್ವಜನಿಕರು ಈ ಬಗ್ಗೆ ಆತಂಕಗೊಳ್ಳುವ ಅಗತ್ಯವಿಲ್ಲ ಎಂದು ಮಂಗಳೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಯು.ಟಿ. ಖಾದರ್ ಹೇಳಿದ್ದಾರೆ. ಅವರು ಜಿಲ್ಲಾ ಆರೋಗ್ಯಾಧಿಕಾರಿಗಳಿಂದ ಮಾಹಿತಿ ಪಡೆದು, ವೆನ್ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಬೇಕಾದ ಎಲ್ಲಾ ವ್ಯವಸ್ಥೆಗಳನ್ನು ಸಜ್ಜುಗೊಳಿಸುವಂತೆ ಹಾಗೂ ಕೇರಳ ಮೂಲದವರು ಮಂಗಳೂರು ಸೆಂಟ್ರಲ್ ರೈಲ್ವೇ

‘ನಿಪಾಹ್ ವೈರಸ್’: ದಕ್ಷಿಣ ಕನ್ನಡದಾದ್ಯಂತ ಹೈ ಅಲೆರ್ಟ್ ► ದ.ಕ.ದಲ್ಲಿ ಯಾವುದೇ ಪ್ರಕರಣ ದೃಢಪಟ್ಟಿಲ್ಲ: ಯು.ಟಿ.ಖಾದರ್ Read More »

ಕರಾವಳಿ

ಕಡಬ: ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಯುವಕ

(ನ್ಯೂಸ್ ಕಡಬ) newskadaba.com ಕಡಬ, ಮೇ.22. ಯುವಕನೋರ್ವ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಠಾಣಾ ವ್ಯಾಪ್ತಿಯ ಮೀನಾಡಿಯಲ್ಲಿ ನಡೆದಿದೆ. ಆತ್ಮಹತ್ಯೆಗೆ ಯತ್ನಿಸಿದ ಯುವಕನನ್ನು ಕುಟ್ರುಪ್ಪಾಡಿ ಗ್ರಾಮದ ಮೀನಾಡಿ ನಿವಾಸಿ ಭರತ್(26) ಎಂದು ಗುರುತಿಸಲಾಗಿದೆ. ಈತ ಮಂಗಳವಾರದಂದು ತನ್ನ ಮನೆಯಲ್ಲಿ ಎಂಡೋಸಲ್ಫಾನ್ ಸೇವಿಸಿದ್ದು, ತಕ್ಷಣವೇ ಕಡಬ ಸಮುದಾಯ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಕಡಬ: ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಯುವಕ Read More »

ಕರಾವಳಿ

ಮಂಗಳೂರಿಗೂ ಕಾಲಿಟ್ಟ ‘ನಿಪಾಹ್’ ಮಹಾಮಾರಿ ► ಇಬ್ಬರು ರೋಗಿಗಳಲ್ಲಿ ಶಂಕಿತ ಸೋಂಕು ಪತ್ತೆ

(ನ್ಯೂಸ್ ಕಡಬ) newskadaba.com ಮಂಗಳೂರು, ಮೇ.22. ಕೇರಳ ರಾಜ್ಯವನ್ನೇ ತಲ್ಲಣಗೊಳಿಸಿರುವ ಮಹಾಮಾರಿ ನಿಪಾಹ್ ವೈರಸ್ ಮಂಗಳೂರಿಗೂ ಕಾಲಿಟ್ಟಿದ್ದು, ದಕ್ಷಿಣ ಕನ್ನಡ ಜಿಲ್ಲಾಡಳಿತದ ವತಿಯಿಂದ ಹೈ ಅಲೆರ್ಟ್ ಘೋಷಿಸಲಾಗಿದೆ‌. ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಇಬ್ಬರಲ್ಲಿ ಶಂಕಿತ ನಿಪಾಹ್ ಸೋಂಕಿನ ಲಕ್ಷಣ ಕಂಡುಬಂದಿದ್ದು, ವೈರಸ್ ಪತ್ತೆಗೆ ರಕ್ತ ಮಾದರಿಯನ್ನು ಮಣಿಪಾಲ ಕೆಎಂಸಿ ಆಸ್ಪತ್ರೆ ಪ್ರಯೋಗಾಲಯಕ್ಕೆ ರವಾನಿಸಲಾಗಿದೆ ಎಂದು ದ.ಕ. ಜಿಲ್ಲಾ ಆರೋಗ್ಯಾಧಿಕಾರಿ ಡಾ. ರಾಮಕೃಷ್ಣ ರಾವ್ ಮಾಹಿತಿ ನೀಡಿದ್ದಾರೆ.

ಮಂಗಳೂರಿಗೂ ಕಾಲಿಟ್ಟ ‘ನಿಪಾಹ್’ ಮಹಾಮಾರಿ ► ಇಬ್ಬರು ರೋಗಿಗಳಲ್ಲಿ ಶಂಕಿತ ಸೋಂಕು ಪತ್ತೆ Read More »

ಕರಾವಳಿ
Scroll to Top