ಕರಾವಳಿ

ಕಡಬ: ರಬ್ಬರ್ ನಿಗಮದ ಜಮೀನು ಒತ್ತುವರಿ ► ತಡೆಯಲು ಹೋದ ಸಿಬ್ಬಂದಿಗಳಿಗೆ ಜೀವ ಬೆದರಿಕೆ

(ನ್ಯೂಸ್ ಕಡಬ) newskadaba.com ಕಡಬ, ಮೇ.20. ರಾಜ್ಯ ರಬ್ಬರ್ ಅಭಿವೃದ್ಧಿ ನಿಗಮಕ್ಕೆ ಸೇರಿದ ಜಮೀನನ್ನು ಒತ್ತುವರಿ ಮಾಡಿದ್ದನ್ನು ತಡೆಯಲು ಹೋದ ನಿಗಮದ ಸಿಬ್ಬಂದಿಗಳಿಗೆ ಕುಟುಂಬವೊಂದು ಅವ್ಯಾಚ್ಯ ಶಬ್ದಗಳಿಂದ ನಿಂದಿಸಿ ಜೀವ ಬೆದರಿಕೆಯೊಡ್ಡಿದ ಬಗ್ಗೆ ಕಡಬ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸುಬ್ರಹ್ಮಣ್ಯ ರಬ್ಬರ್ ವಿಭಾಗದ ಮೂಜೂರು ಘಟಕದ ಮಂಡೆಕರ ಎಂಬಲ್ಲಿ ಮೀಸಲು ಅರಣ್ಯ ಪ್ರದೇಶದ 28.10 ಹೆಕ್ಟೇರ್ ವ್ಯಾಪ್ತಿಯಲ್ಲಿ ಕರ್ನಾಟಕ ರಾಜ್ಯ ರಬ್ಬರ್ ಅಭಿವೃದ್ಧಿ ನಿಗಮದ ವತಿಯಿಂದ ರಬ್ಬರ್ ಗಿಡಗಳನ್ನು ಮರು ನಾಟಿ ಮಾಡಲು ಹಿಟಾಚಿ ಯಂತ್ರದಲ್ಲಿ ಗುಂಡಿ […]

ಕಡಬ: ರಬ್ಬರ್ ನಿಗಮದ ಜಮೀನು ಒತ್ತುವರಿ ► ತಡೆಯಲು ಹೋದ ಸಿಬ್ಬಂದಿಗಳಿಗೆ ಜೀವ ಬೆದರಿಕೆ Read More »

ಕರಾವಳಿ

ಕುಂತೂರು: ವಾಟ್ಸ್ಅಪ್ ನಲ್ಲಿ ಫೋಟೊ ಹಾಕಿ ಪ್ರಚೋದನಕಾರಿ ಸಂದೇಶ ರವಾನೆ ► ಯುವಕನಿಂದ‌ ಕಡಬ ಠಾಣೆಗೆ ದೂರು

(ನ್ಯೂಸ್ ಕಡಬ) newskadaba.com ಕಡಬ, ಮೇ.20. ಸಾಮಾಜಿಕ ಜಾಲತಾಣಗಳಲ್ಲಿ ಅಪಪ್ರಚಾರ ನಡೆಸುತ್ತಿದ್ದಾರೆ‌ ಎಂದು ಆರೋಪಿಸಿ ಯುವಕನೋರ್ವ ಕಡಬ ಠಾಣೆಗೆ ದೂರು ನೀಡಿದ್ದಾನೆ. ಪುತ್ತೂರಿನ ಖಾಸಗಿ ಕಾಲೇಜು ವಿದ್ಯಾರ್ಥಿ, ಕುಂತೂರು ಗ್ರಾಮದ ಮುಡಿಪಿನಡ್ಕ ನಿವಾಸಿ ಅಬ್ದುಲ್‌ ಕುಂಞಿ‌ ಎಂಬವರ ಪುತ್ರ ಮಹಮ್ಮದ್ ನಿಝಾರ್ ಎಂಬಾತನ ಫೋಟೊದೊಂದಿಗೆ ಪ್ರಚೋದನಕಾರಿ ಆಡಿಯೋ ಸಂದೇಶವೊಂದು ವಾಟ್ಸ್ಅಪ್ ಗ್ರೂಪ್‌ಗಳಲ್ಲಿ ಹರಿದಾಡುತ್ತಿರುವುದನ್ನು ಕಂಡು ಆತಂಕಗೊಂಡು ಕಡಬ ಪೊಲೀಸರಿಗೆ ದೂರು ನೀಡಿದ್ದಾನೆ. ತಾನು ನಿರಪರಾಧಿಯಾಗಿದ್ದು, ಈ ಪ್ರಚೋದನಕಾರಿ ಸಂದೇಶಕ್ಕೂ ತನಗೂ ಯಾವುದೇ ಸಂಬಂಧವಿರುವುದಿಲ್ಲವಾದುದರಿಂದ ಈ ಪ್ರಕರಣವನ್ನು ಬೆಳಕಿಗೆ

ಕುಂತೂರು: ವಾಟ್ಸ್ಅಪ್ ನಲ್ಲಿ ಫೋಟೊ ಹಾಕಿ ಪ್ರಚೋದನಕಾರಿ ಸಂದೇಶ ರವಾನೆ ► ಯುವಕನಿಂದ‌ ಕಡಬ ಠಾಣೆಗೆ ದೂರು Read More »

ಕರಾವಳಿ

ಜಿಲ್ಲೆಯ ಕೆಲವೆಡೆ ಘರ್ಷಣೆ ಹಿನ್ನೆಲೆ ► ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಮುಂದುವರಿಕೆ‌

(ನ್ಯೂಸ್ ಕಡಬ) newskadaba.com ಮಂಗಳೂರು, ಮೇ.20. ನಿಷೇಧಾಜ್ಞೆಯ‌ ನಡುವೆಯೂ ಅಹಿತಕರ ಘಟನೆ ನಡೆದ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮೇ‌ 22 ಮಂಗಳವಾರ ಬೆಳಗ್ಗೆ 10 ಗಂಟೆಯವರೆಗೆ 144 ಸೆಕ್ಷನ್ ನಿಷೇದಾಜ್ಞೆ ಮುಂದುವರಿಕೆಯಾಗಲಿದೆ ಎಂದು ದ.ಕ. ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ತಿಳಿಸಿದ್ದಾರೆ. ವಿಶ್ವಾಸಮತ ಯಾಚನೆ ಹಿನ್ನೆಲೆ ಶನಿವಾರದಿಂದ ನಿಷೇಧಾಜ್ಞೆ ಜಾರಿಗೊಳಿಸಲಾಗಿತ್ತಾದರೂ ಬಂಟ್ವಾಳ ತಾಲೂಕಿನ ವಿಟ್ಲ ಪರಿಸರದಲ್ಲಿ ಘರ್ಷಣೆ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್, ಮೇ 22 ರವರೆಗೆ ನಿಷೇಧಾಜ್ಞೆಯನ್ನು ಮುಂದುವರಿಸಿ ಆದೇಶಿಸಿದ್ದಾರೆ.

ಜಿಲ್ಲೆಯ ಕೆಲವೆಡೆ ಘರ್ಷಣೆ ಹಿನ್ನೆಲೆ ► ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಮುಂದುವರಿಕೆ‌ Read More »

ಕರಾವಳಿ

ವಿಟ್ಲ: ಬೈಕ್‌ – ಜೀಪ್ ಢಿಕ್ಕಿ ► ಬಸ್ಸಿನಡಿಗೆ ಬಿದ್ದ ಸಹ ಸವಾರ ಸ್ಥಳದಲ್ಲೇ‌ ಮೃತ್ಯು

(ನ್ಯೂಸ್ ಕಡಬ) newskadaba.com ವಿಟ್ಲ, ಮೇ.20. ಬೈಕ್ ಸವಾರನೊಬ್ಬ ಬಸ್ಸಿನಡಿಗೆ ಬಿದ್ದು ಸ್ಥಳದಲ್ಲೇ ಮೃತಪಟ್ಟ ಘಟನೆ ವಿಟ್ಲ – ಮಂಗಳೂರು ರಸ್ತೆಯ ಒಕ್ಕೆತ್ತೂರು ಎಂಬಲ್ಲಿ ಭಾನುವಾರದಂದು ನಡೆದಿದೆ. ಮೃತ ಸವಾರನನ್ನು ವಿಟ್ಲ ಕಸಬಾ ಗ್ರಾಮದ ಒಕ್ಕೆತ್ತೂರು ನಿವಾಸಿ ಕುಂಞಮೋನು ಎಂಬವರ ಪುತ್ರ ಮಹಮ್ಮದ್ ಅಫ್ರಿದ್(17) ಎಂದು ಗುರುತಿಸಲಾಗಿದೆ. ವಿಟ್ಲದ ಚಿನ್ನಾಭರಣ ಮಳಿಗೆಯಲ್ಲಿ ಕೆಲಸ ಮಾಡುತ್ತಿದ್ದ ಈತ ಭಾನುವಾರದಂದು ತನ್ನ ಸ್ನೇಹಿತನೊಂದಿಗೆ ಹಿಂಬದಿ ಸವಾರನಾಗಿ ಬೈಕಿನಲ್ಲಿ ವಿಟ್ಲ ಕಡೆಗೆ ತೆರಳುತ್ತಿದ್ದ ವೇಳೆ ಒಕ್ಕೆತ್ತೂರು ಸೇತುವೆ ಬಳಿಯ ಅಪಾಯಕಾರಿ ತಿರುವಿನಲ್ಲಿ

ವಿಟ್ಲ: ಬೈಕ್‌ – ಜೀಪ್ ಢಿಕ್ಕಿ ► ಬಸ್ಸಿನಡಿಗೆ ಬಿದ್ದ ಸಹ ಸವಾರ ಸ್ಥಳದಲ್ಲೇ‌ ಮೃತ್ಯು Read More »

ಕರಾವಳಿ

ಸುಳ್ಯ: ಹಾಲು ಸಾಗಾಟದ ಮಿನಿ ಲಾರಿ ಪಲ್ಟಿ ► ರಸ್ತೆಯಲ್ಲಿ ಹರಡಿದ್ದ ಹಾಲಿನ ಪ್ಯಾಕೆಟನ್ನು ಕೊಂಡೊಯ್ಯಲು ಮುಗಿಬಿದ್ದ ಸಾರ್ವಜನಿಕರು

(ನ್ಯೂಸ್ ಕಡಬ) newskadaba.com ಸುಳ್ಯ, ಮೇ.20. ಹಾಲು ಸಾಗಾಟದ ಮಿನಿ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಉರುಳಿ ಬಿದ್ದ ಪರಿಣಾಮ ಹಾಲು ಹಾಗೂ ಹಾಲಿನ ಉತ್ಪನ್ನಗಳು ಚೆಲ್ಲಾಪಿಲ್ಲಿಯಾದ ಘಟನೆ ಶನಿವಾರ ತಡರಾತ್ರಿ ಸುಳ್ಯ ತಾಲೂಕಿನ ಜಾಲ್ಸೂರಿನಲ್ಲಿ ನಡೆದಿದೆ. ಮಂಗಳೂರಿನಿಂದ ಸುಳ್ಯಕ್ಕೆ ತೆರಳುತ್ತಿದ್ದ ನಂದಿನಿ ಹಾಲು ಸಾಗಾಟದ ವಾಹನ ಜಾಲ್ಸೂರು ಸಮೀಪದ ಬೊಳುಬೈಲು ಎಂಬಲ್ಲಿ ತಲುಪಿದಾಗ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿ ಪಲ್ಟಿಯಾಗಿ ಬಿದ್ದಿದೆ. ಘಟನೆಯಲ್ಲಿ ಚಾಲಕ ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದು, ಅವರನ್ನು ಸ್ಥಳೀಯ ಖಾಸಗಿ

ಸುಳ್ಯ: ಹಾಲು ಸಾಗಾಟದ ಮಿನಿ ಲಾರಿ ಪಲ್ಟಿ ► ರಸ್ತೆಯಲ್ಲಿ ಹರಡಿದ್ದ ಹಾಲಿನ ಪ್ಯಾಕೆಟನ್ನು ಕೊಂಡೊಯ್ಯಲು ಮುಗಿಬಿದ್ದ ಸಾರ್ವಜನಿಕರು Read More »

ಕರಾವಳಿ

ಬುಧವಾರದಂದು 24 ನೇ ಮುಖ್ಯಮಂತ್ರಿಯಾಗಿ ಕುಮಾರಸ್ವಾಮಿ ಅಧಿಕಾರಕ್ಕೆ ► ಸೋಮವಾರದಿಂದ ಬುಧವಾರಕ್ಕೆ ಮುಂದೂಡಲು ಕಾರಣವೇನು ಗೊತ್ತೇ..?

(ನ್ಯೂಸ್ ಕಡಬ) newskadaba.com ಬೆಂಗಳೂರು, ಮೇ.20. ರಾಜ್ಯದಲ್ಲಿ ಚುನಾವಣೆ ನಡೆದೂ ಆಯಿತು. ಯಡಿಯೂರಪ್ಪ ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿ ಅತ್ಯಲ್ಪ ಅವಧಿಯಲ್ಲೇ ರಾಜೀನಾಮೆ ನೀಡಿಯೂ ಆಯಿತು. ಇನ್ನೇನಿದ್ದರೂ ಕಾಂಗ್ರೆಸ್ ಬೆಂಬಲದೊಂದಿಗೆ ಜೆಡಿಎಸ್ ನ ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಲು ಬಾಕಿ ಇರುವುದು ಮಾತ್ರ. ಸೋಮವಾರದಂದು ಹೆಚ್.ಡಿ. ಕುಮಾರಸ್ವಾಮಿ ಪ್ರಮಾಣವಚನ ಸ್ವೀಕರಿಸುತ್ತಾರೆಂದು ಹೇಳಲಾಗಿತ್ತಾದರೂ ಕೊನೆಯ ಕ್ಷಣದಲ್ಲಿ ಸಮಾರಂಭವನ್ನು ಮುಂದೂಡಲಾಗಿದ್ದು, ಬುಧವಾರದಂದು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎನ್ನಲಾಗಿದೆ. ಸೋಮವಾರದಂದು ರಾಜೀವ್ ಗಾಂಧಿ ಪುಣ್ಯತಿಥಿಯಿರುವ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿ ಸಹಿತ ಪ್ರಮುಖ

ಬುಧವಾರದಂದು 24 ನೇ ಮುಖ್ಯಮಂತ್ರಿಯಾಗಿ ಕುಮಾರಸ್ವಾಮಿ ಅಧಿಕಾರಕ್ಕೆ ► ಸೋಮವಾರದಿಂದ ಬುಧವಾರಕ್ಕೆ ಮುಂದೂಡಲು ಕಾರಣವೇನು ಗೊತ್ತೇ..? Read More »

ಕರಾವಳಿ

ವಿಟ್ಲ: ಕಾಂಗ್ರೆಸ್ – ಬಿಜೆಪಿ ಕಾರ್ಯಕರ್ತರ ನಡುವೆ ಮಾರಾಮಾರಿ ► ಹಲವರಿಗೆ ಗಾಯ

(ನ್ಯೂಸ್ ಕಡಬ) newskadaba.com ವಿಟ್ಲ, ಮೇ.20. ಮುಖ್ಯಮಂತ್ರಿ ಯಡಿಯೂರಪ್ಪ ಬಹುಮತ ಸಾಬೀತುಪಡಿಸದೆ ರಾಜೀನಾಮೆ ನೀಡಿದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಂಭ್ರಮಾಚರಣೆಯ ವೇಳೆ ಕಾಂಗ್ರೆಸ್ ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ಮಾರಾಮಾರಿ ನಡೆದ ಘಟನೆ ವಿಟ್ಲದಲ್ಲಿ ಶನಿವಾರ ರಾತ್ರಿ ನಡೆದಿದೆ. ಶನಿವಾರ ರಾತ್ರಿ ವಿಟ್ಲ ಪರಿಸರದ ಕೆಲಿಂಜ ಎಂಬಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ಕಾರ್ಯಕರ್ತರ ಸಂಭ್ರಮಾಚರಣೆಯ ವೇಳೆ ಬಿಜೆಪಿ ವಿರೋಧಿ ಘೋಷಣೆ ಕೂಗಿದ್ದು, ಈ ಸಂದರ್ಭದಲ್ಲಿ ಇಲ್ಲಿನ ಸ್ಥಳೀಯ ಬಿಜೆಪಿ ಕಾರ್ಯಕರ್ತರೂ ಪ್ರತಿಯಾಗಿ ಕಾಂಗ್ರೆಸ್ ವಿರೋಧಿ ಘೋಷಣೆ ಕೂಗಿದ್ದಾರೆ

ವಿಟ್ಲ: ಕಾಂಗ್ರೆಸ್ – ಬಿಜೆಪಿ ಕಾರ್ಯಕರ್ತರ ನಡುವೆ ಮಾರಾಮಾರಿ ► ಹಲವರಿಗೆ ಗಾಯ Read More »

ಕರಾವಳಿ

ಬಂಟ್ವಾಳ: ಬೈಕಿಗೆ ಹಿಂದಿನಿಂದ ಢಿಕ್ಕಿ ಹೊಡೆದ ಟಿಪ್ಪರ್ ► ಸವಾರ ಮೃತ್ಯು, ಸಹ ಸವಾರನಿಗೆ ಗಾಯ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಮೇ.19. ಟಿಪ್ಪರೊಂದು ಬೈಕಿಗೆ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟು, ಸಹ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಬ್ರಹ್ಮರಕೂಟ್ಲು ಟೋಲ್ ಗೇಟ್ ಬಳಿ ಶನಿವಾರ ರಾತ್ರಿ ನಡೆದಿದೆ. ಮೃತ ಸವಾರನನ್ನು ಬಂಟ್ವಾಳ ತಾಲೂಕಿನ ಪರ್ಲಿಯಾ ನಿವಾಸಿ ಇಕ್ಬಾಲ್(38) ಎಂದು ಗುರುತಿಸಲಾಗಿದೆ. ಸಹ ಸವಾರ ಬಶೀರ್(30) ಗಾಯಗೊಂಡಿದ್ದು, ಇಲ್ಲಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇವರು ಯಮಹಾ ಎಫ್ ಝಡ್ ಬೈಕ್ ನಲ್ಲಿ ಮಂಗಳೂರು ಕಡೆ

ಬಂಟ್ವಾಳ: ಬೈಕಿಗೆ ಹಿಂದಿನಿಂದ ಢಿಕ್ಕಿ ಹೊಡೆದ ಟಿಪ್ಪರ್ ► ಸವಾರ ಮೃತ್ಯು, ಸಹ ಸವಾರನಿಗೆ ಗಾಯ Read More »

ಕರಾವಳಿ

ಮಿತ್ತೂರು: ಕಂಟೈನರ್ ಪಲ್ಟಿಯಾಗಿ ಕಾರಿನ ಮೇಲೆ ಬಿದ್ದ ಕಬ್ಬಿಣದ ಬೃಹತ್ ರೋಲ್ ► ಕಾರು ಚಾಲಕನ ಸಮಯ ಪ್ರಜ್ಞೆಯಿಂದಾಗಿ ಅಪಾಯದಿಂದ ಪಾರಾದ ಪ್ರಯಾಣಿಕರು

(ನ್ಯೂಸ್ ಕಡಬ) newskadaba.com ವಿಟ್ಲ, ಮೇ.19. ಕಂಟೈನರ್ ಲಾರಿಯೊಂದು ಪಲ್ಟಿಯಾಗಿ ಲಾರಿಯಿಂದ ಉರುಳಿದ ಕಬ್ಬಿಣದ ತುಂಡು ಕಾರಿನ ಮೇಲೆ ಬಿದ್ದ ಪರಿಣಾಮ ಕಾರನಲ್ಲಿದ್ದವರು ಪವಾಡ ಸದೃಶ ಪಾರಾದ ಘಟನೆ ಮಾಣಿ – ಮೈಸೂರು ರಾಜ್ಯ ಹೆದ್ದಾರಿಯ ಮಿತ್ರೂರು ಎಂಬಲ್ಲಿ ಶನಿವಾರ ಸಂಜೆ ನಡೆದಿದೆ. ಮಂಗಳೂರಿನಿಂದ ಮೈಸೂರು ಕಡೆಗೆ ಕಬ್ಬಿಣದ ರೋಲ್ ನ್ನು ಕೊಂಡೊಯ್ಯುತ್ತಿದ್ದ ಬೃಹತ್ ಕಂಟೈನರ್ ಲಾರಿ ಮಿತ್ತೂರು ಬಳಿ ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದಿದೆ. ಈ ಸಂದರ್ಭದಲ್ಲಿ ಲಾರಿಯಲ್ಲಿದ್ದ ಬೃಹತ್ ಗಾತ್ರದ ಕಬ್ಬಿಣದ ರೋಲೊಂದು

ಮಿತ್ತೂರು: ಕಂಟೈನರ್ ಪಲ್ಟಿಯಾಗಿ ಕಾರಿನ ಮೇಲೆ ಬಿದ್ದ ಕಬ್ಬಿಣದ ಬೃಹತ್ ರೋಲ್ ► ಕಾರು ಚಾಲಕನ ಸಮಯ ಪ್ರಜ್ಞೆಯಿಂದಾಗಿ ಅಪಾಯದಿಂದ ಪಾರಾದ ಪ್ರಯಾಣಿಕರು Read More »

ಕರಾವಳಿ

Big Breaking ► ಕೊನೆಗೂ ಬಿ.ಎಸ್.ಯಡಿಯೂರಪ್ಪ ರಾಜೀನಾಮೆ ಘೋಷಣೆ

ಕೊನೆಗೂ ಬಿ.ಎಸ್. ಯಡಿಯೂರಪ್ಪ ರಾಜೀನಾಮೆ ಘೋಷಣೆ ಮಾಡಿದ್ದಾರೆ. ವಿಶ್ವಾಸ ಮತಯಾಚನೆ ಮಾಡದೆ ಯಡಿಯೂರಪ್ಪ ಅವರು ರಾಜಿನಾಮೆ ಘೋಷಣೆ ಮಾಡಿದ್ದಾರೆ. ಕೇವಲ 55 ಗಂಟೆಗಳ ಕಾಲ ಮುಖ್ಯಮಂತ್ರಿಯಾದ ಬಿ.ಎಸ್.ವೈ ಅವರು ರಾಜ್ಯಪಾಲರಿಗೆ ರಾಜಿನಾಮ ಪತ್ರ ನೀಡಲಿದ್ದಾರೆ.

Big Breaking ► ಕೊನೆಗೂ ಬಿ.ಎಸ್.ಯಡಿಯೂರಪ್ಪ ರಾಜೀನಾಮೆ ಘೋಷಣೆ Read More »

ಕರಾವಳಿ
Scroll to Top