ಕರಾವಳಿ

ಬಂಟ್ವಾಳ: ವಾಹನ ಚಾಲಕರ ದರೋಡೆಗೆ ಹೊಂಚು ► ಖಾರದ ಪುಡಿ, ಆಯುಧಗಳ ಸಮೇತ ಇಬ್ಬರ ಬಂಧನ

(ನ್ಯೂಸ್ ಕಡಬ) newskadaba.com ಮಂಗಳೂರು, ಮೇ.06. ದರೋಡೆಗೈಯಲು ಹೊಂಚು ಹಾಕಿ ಕುಳಿತಿದ್ದ ಆರು ಮಂದಿ ಆರೋಪಿಗಳ ಪೈಕಿ ಇಬ್ಬರನ್ನು ಬಂಧಿಸಿರುವ ಬಂಟ್ವಾಳ ಗ್ರಾಮಾಂತರ ಪೊಲೀಸರು ಚಾಕು, ಕಬ್ಬಿಣದ ರಾಡ್ ಹಾಗೂ ಖಾರದ ಪುಡಿಯನ್ನು ವಶಪಡಿಸಿಕೊಂಡಿದ್ದಾರೆ. ಬಂಧಿತ ಆರೋಪಿಗಳನ್ನು ಉಳ್ಳಾಲ ಮಿಲ್ಲತ್ ನಗರದ ಫಲಾಲ್ ಮಂಝಿಲ್‌ ನಿವಾಸಿ ಮಹಮ್ಮದ್ ಅರ್ಪಾಜ್(19) ಹಾಗೂ ಉಳ್ಳಾಲ ಮುಕ್ಕಚ್ಚೇರಿ ನಿವಾಸಿ ಮಹಮ್ಮದ್ ಸುಹೈಲ್(27) ಎಂದು ಗುರುತಿಸಲಾಗಿದೆ. ಶುಕ್ರವಾರ ತಡರಾತ್ರಿ ಫರಂಗಿಪೇಟೆ, ಮಾರಿಪಳ್ಳ ಪರಿಸರದಲ್ಲಿ ಗಸ್ತು ತಿರುಗುತ್ತಿದ್ದ ವೇಳೆ ರೊಟ್ಟಿಗುಡ್ಡೆ ಎಂಬಲ್ಲಿ ಆರು ಮಂದಿಯ […]

ಬಂಟ್ವಾಳ: ವಾಹನ ಚಾಲಕರ ದರೋಡೆಗೆ ಹೊಂಚು ► ಖಾರದ ಪುಡಿ, ಆಯುಧಗಳ ಸಮೇತ ಇಬ್ಬರ ಬಂಧನ Read More »

ಕರಾವಳಿ

ಅಭಿವೃದ್ಧಿ ಕಾಣದ ಪದವು – ಕೆದ್ದೋಟೆ – ಕುಂತೂರು ಕಚ್ಚಾ ರಸ್ತೆ ► ಮುಂದಿನ ಹೆಜ್ಜೆಯ ಬಗ್ಗೆ ಸಭೆ ಸೇರಿದ ಗ್ರಾಮಸ್ಥರು

(ನ್ಯೂಸ್ ಕಡಬ) newskadaba.com ಕಡಬ, ಮೇ.06. ಕಳೆದ ಹಲವು ವರ್ಷಗಳಿಂದ ಬೇಡಿಕೆಯಾದ ಪದವಿನಿಂದ ಕೆದ್ದೋಟೆ – ಇಡಾಳ – ಕುಂಟ್ಯಾನ ಮೂಲಕ ಕುಂತೂರಿಗೆ ಸಂಪರ್ಕ ಕಲ್ಪಿಸುವ ಗ್ರಾಮೀಣ ಕಚ್ಚಾ ರಸ್ತೆಯನ್ನು ದುರಸ್ಥಿ ಮಾಡದ ವಿಚಾರದಲ್ಲಿ ಇಡೀ ಗ್ರಾಮಸ್ಥರಿಗೆ ಚುನಾವಣೆಯ ಬಗ್ಗೆ ಅರಿವು ಮೂಡಿಸುವ ಸಲುವಾಗಿ ಕೆದ್ದೋಟೆ ಶ್ರೀ ರಾಮ ಭಜನಾ ಮಂದಿರದಲ್ಲಿ ಗ್ರಾಮಸ್ಥರ ಸಭೆಯು ಶನಿವಾರ ನಡೆಯಿತು. ಗ್ರಾಮೀಣ ಯುವಕರು ರಸ್ತೆ ಅಭಿವೃದ್ಧಿಯ ವಿಚಾರದಲ್ಲಿ ವಾಟ್ಸಪ್ ಗ್ರೂಪ್ ರಚಿಸಿಕೊಂಡು ಚರ್ಚಿಸಿ ಕೊನೆಗೆ ಶನಿವಾರ ರಾತ್ರಿ ಸಭೆ ಕರೆದಿದ್ದರು.

ಅಭಿವೃದ್ಧಿ ಕಾಣದ ಪದವು – ಕೆದ್ದೋಟೆ – ಕುಂತೂರು ಕಚ್ಚಾ ರಸ್ತೆ ► ಮುಂದಿನ ಹೆಜ್ಜೆಯ ಬಗ್ಗೆ ಸಭೆ ಸೇರಿದ ಗ್ರಾಮಸ್ಥರು Read More »

ಕರಾವಳಿ

ರಾಜ್ಯದಲ್ಲಿ ಬಿಜೆಪಿ ಪಕ್ಷವು ಬಹುಮತದೊಂದಿಗೆ ಆಡಳಿತದ ಚುಕ್ಕಾಣಿ ಹಿಡಿಯಲಿದೆ ► ಮಂಗಳೂರಿನಲ್ಲಿ ಪ್ರಧಾನಿ ನರೇಂದ್ರ ಮೋದಿ

(ನ್ಯೂಸ್ ಕಡಬ) newskadaba.com ಮಂಗಳೂರು, ಮೇ.06. ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವು ನೀರಿಲ್ಲದ ಮೀನಿನಂತೆ ಒದ್ದಾಡುತ್ತಿದ್ದು, ಮೇ 12 ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯು ಸಂಪೂರ್ಣ ಬಹುಮತದೊಂದಿಗೆ ಅಧಿಕಾರದ ಚುಕ್ಕಾಣಿ ಹಿಡಿಯಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಅವರು ವಿಧಾನಸಭಾ ಚುನಾವಣಾ ಹಿನ್ನೆಲೆಯಲ್ಲಿ ಜಿಲ್ಲಾ ಬಿಜೆಪಿ ವತಿಯಿಂದ ನಗರದ ನೆಹರೂ ಮೈದಾನದಲ್ಲಿ ಆಯೋಜಿಸಲಾಗಿದ್ದ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿ, ರಾಜ್ಯದಲ್ಲಿ ಸಮ್ಮಿಶ್ರ ಸರಕಾರ ಆಡಳಿತಕ್ಕೆ ಬರಲಿದೆ ಎಂದು ಪ್ರಚಾರ ಪಡಿಸಿ ಮತದಾರರನ್ನು ಅತಂತ್ರರನ್ನಾಗಿಸುವ ಪ್ರಯತ್ನ ನಡೆಯುತ್ತಿದ್ದು, ರಾಜ್ಯದಲ್ಲಿ ಆಡಳಿತ

ರಾಜ್ಯದಲ್ಲಿ ಬಿಜೆಪಿ ಪಕ್ಷವು ಬಹುಮತದೊಂದಿಗೆ ಆಡಳಿತದ ಚುಕ್ಕಾಣಿ ಹಿಡಿಯಲಿದೆ ► ಮಂಗಳೂರಿನಲ್ಲಿ ಪ್ರಧಾನಿ ನರೇಂದ್ರ ಮೋದಿ Read More »

ಕರಾವಳಿ

ಅಡ್ಡಹೊಳೆ: ಸೈಂಟ್ ಜಾರ್ಜ್ ಜಾಕೋಬೈಟ್ ಸಿರಿಯನ್ ಚರ್ಚ್‌ನ ► ಇಂದು ಮತ್ತು ನಾಳೆ ಸಂತ ಜಾರ್ಜರ ಸ್ಮರಣೆ ಹಬ್ಬ

(ನ್ಯೂಸ್ ಕಡಬ) newskadaba.com ಕಡಬ, ಮೇ.05. ಅಡ್ಡಹೊಳೆ‌ ಸೈಂಟ್ ಜಾರ್ಜ್ ಜಾಕೋಬೈಟ್ ಸಿರಿಯನ್ ಚರ್ಚ್‌ನಲ್ಲಿ ಸಂತ ಜಾರ್ಜರ ಸ್ಮರಣೆ ಹಬ್ಬವು ಇಂದು (ಮೇ 05) ಆರಂಭಗೊಂಡಿದ್ದು, ಭಾನುವಾರ ಅಪರಾಹ್ನ ಸಮಾಪನಗೊಳ್ಳಲಿದೆ. ಇಂದು ಪೂರ್ವಾಹ್ನ‌ 7 ಗಂಟೆಗೆ ಪ್ರಭಾತ ಪ್ರಾರ್ಥನೆಯೊಂದಿಗೆ ಆರಂಭಗೊಂಡಿದ್ದು, ದಿವ್ಯ ಬಲಿಪೂಜೆ, ಹಾಗೂ ಧ್ವಜಾರೋಹಣ ನೆರವೇರಿದೆ. ಸಂಜೆ 06.30 ಕ್ಕೆ ಸಂಧ್ಯಾ ಪ್ರಾರ್ಥನೆ ನಡೆಯಲಿದ್ದು, ರಾತ್ರಿ 8 ಗಂಟೆಗೆ ಅಡ್ಡಹೊಳೆ ಮಲಂಕರ ಚರ್ಚಿಗೆ ವರ್ಣರಂಜಿತ ಮೆರವಣಿಗೆ ನಡೆಯಲಿದೆ. ಮೇ 06 ರಂದು ಪೂರ್ವಾಹ್ನ 8 ಗಂಟೆಗೆ

ಅಡ್ಡಹೊಳೆ: ಸೈಂಟ್ ಜಾರ್ಜ್ ಜಾಕೋಬೈಟ್ ಸಿರಿಯನ್ ಚರ್ಚ್‌ನ ► ಇಂದು ಮತ್ತು ನಾಳೆ ಸಂತ ಜಾರ್ಜರ ಸ್ಮರಣೆ ಹಬ್ಬ Read More »

ಕರಾವಳಿ

ಮೇ.7ರ ಒಳಗಾಗಿ ಮತದಾರರಿಗೆ ಫೋಟೋ ವೋಟರ್ ಸ್ಲಿಪ್‌ ವಿತರಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಮೇ.5. ಜಿಲ್ಲೆಯಲ್ಲಿ ಫೋಟೋ ವೋಟರ್ ಸ್ಲಿಪ್‌ ಗಳನ್ನು ನಾಳೆ( ಮೇ.6)ಯ ವರೆಗೆ ಬಿ.ಎಲ್‌.ಒ.ಗಳು ಮತದಾರರ ಮನೆಗೆ ತೆರಳಿ ವಿತರಿಸಲಿದ್ದಾರೆ. ಒಂದು ವೇಳೆ ಮತದಾರರು ಫೋಟೋ ವೋಟರ್ ಸ್ಲಿಪ್‌ ಪಡೆಯದೇ ಇದ್ದಲ್ಲಿ ಮೇ.7ರಂದು ಮತಗಟ್ಟೆಗೆ ತೆರಳಿ ಅಲ್ಲಿ ಬಿ.ಎಲ್‌.ಒ. ಗಳಿಂದ ತಮ್ಮ ಫೋಟೋ ವೋಟರ್ ಸ್ಲಿಪ್‌ ಅನ್ನು ಪಡೆದುಕೊಳ್ಳಬಹುದಾಗಿದೆ. ಮೇ.7ರ ಒಳಗಾಗಿ ಸ್ಲಿಪ್ ಪಡೆಯದೇ ಇದ್ದಲ್ಲಿ ಸ್ಲಿಪ್ ನ್ನು ಮತದಾರರ ನೋಂದಾವಣಾಧಿಕಾರಿ ಬಳಿ ಕಳುಹಿಸಲಾಗುವುದು ಹಾಗೂ ಮತದಾನದ ದಿನದಂದು ಸ್ಲಿಪ್‌ ಪಡೆಯಲು ಯಾವುದೇ ಅವಕಾಶವಿರುವುದಿಲ್ಲ.

ಮೇ.7ರ ಒಳಗಾಗಿ ಮತದಾರರಿಗೆ ಫೋಟೋ ವೋಟರ್ ಸ್ಲಿಪ್‌ ವಿತರಣೆ Read More »

ಕರಾವಳಿ

ಕಾಣಿಯೂರು: ಬಿಜೆಪಿ ಮಹಾಸಂಪರ್ಕ ಅಭಿಯಾನ

(ನ್ಯೂಸ್ ಕಡಬ) newskadaba.com ಕಾಣಿಯೂರು,ಮೇ.5. ಸುಳ್ಯ ವಿಧಾನ ಸಭಾ ಕ್ಷೇತ್ರದ ಕಾಣಿಯೂರು ಬೂತ್ 81ರಲ್ಲಿ ಬಿಜೆಪಿ ಮಹಾ ಸಂಪರ್ಕ ಅಭಿಯಾನಕ್ಕೆ ಚಾಲನೆ ನೀಡಲಾಯಿತು. ಈ ಸಂದರ್ಭ ಬೆಳಂದೂರು ಬಿಜೆಪಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಧರ್ಮೇಂದ್ರ ಗೌಡ ಕಟ್ಟತ್ತಾರು, ಕಾಣಿಯೂರು ಗ್ರಾಮ ಸಮಿತಿ ಅಧ್ಯಕ್ಷ ಪದ್ಮಯ್ಯ ಗೌಡ ಅನಿಲ, ಕಾಣಿಯೂರು ಬಿಜೆಪಿ ಸ್ಥಾನೀಯ ಸಮಿತಿ ಅಧ್ಯಕ್ಷ ಪುಟ್ಟಣ್ಣ ಗೌಡ ಮುಗರಂಜ,  ಗ್ರಾ.ಪಂ.ಸದಸ್ಯ ಸುರೇಶ್ ಓಡಬಾಯಿ, ಬೂತ್ ಪ್ರಮುಖ್ ರಾಮಣ್ಣ ಗೌಡ ಮುಗರಂಜ, ಪೇಜ್ ಪ್ರಮುಖರಾದ ಲಕ್ಷ್ಮಣ ಗೌಡ ಮುಗರಂಜ, ವಸಂತ ಪೆರ್ಲೋಡಿ,

ಕಾಣಿಯೂರು: ಬಿಜೆಪಿ ಮಹಾಸಂಪರ್ಕ ಅಭಿಯಾನ Read More »

ಕರಾವಳಿ

ಕಾಣಿಯೂರಿನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಡಾ| ರಘು ಮತಯಾಚನೆ

(ನ್ಯೂಸ್ ಕಡಬ) newskadaba.com ಕಾಣಿಯೂರು,ಮೇ.5.  ಸುಳ್ಯ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ| ರಘುರವರು ಮೇ.4ರಂದು ಕಾಣಿಯೂರಿನಲ್ಲಿ ಮತಯಾಚನೆ ನಡೆಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಕೆಡಿಪಿ ಸದಸ್ಯ ಸತೀಶ್ ಕುಮಾರ್ ಕೆಡೆಂಜಿ, ಸುಳ್ಯ ವಿಧಾನಸಭಾ ಕ್ಷೇತ್ರದ ಅಕ್ರಮ ಸಕ್ರಮ ಸದಸ್ಯ ಪ್ರವೀಣ್ ಕುಮಾರ್ ಕೆಡೆಂಜಿಗುತ್ತು, ಜಿ.ಪಂ ಮಾಜಿ ಸದಸ್ಯ ಶಿವಣ್ಣ ಗೌಡ ಇಡ್ಯಾಡಿ, ತಾ.ಪಂ ಮಾಜಿ ಉಪಾಧ್ಯಕ್ಷ ಶೀನಪ್ಪ ಗೌಡ ಬೈತಡ್ಕ, ಬೆಳಂದೂರು ಗ್ರಾ.ಪಂ ಮಾಜಿ ಅಧ್ಯಕ್ಷ ನಾರಾಯಣ ಗೌಡ ಬೈತಡ್ಕ, ಪ್ರಮುಖರಾದ ವಿಶ್ವನಾಥ ರೈ ಮಾಳ, ಬಾಲಕೃಷ್ಣ ಗೌಡ

ಕಾಣಿಯೂರಿನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಡಾ| ರಘು ಮತಯಾಚನೆ Read More »

ಕರಾವಳಿ

ಸವಣೂರು,ಕಾಣಿಯೂರಿನಲ್ಲಿ: ಬಿಜೆಪಿ ಮಹಿಳಾ ಮೋರ್ಚಾದಿಂದ ರೋಡ್‍ಶೋ

(ನ್ಯೂಸ್ ಕಡಬ) newskadaba.com ಸವಣೂರು,ಮೇ.5. ಸುಳ್ಯ ವಿಧಾನ ಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ, ಹಾಲಿ ಶಾಸಕ ಎಸ್.ಅಂಗಾರ ಬಿಜೆಪಿ ಪರ ಬೆಳಂದೂರು ಶಕ್ತಿ ಕೇಂದ್ರದ ಆಲಂಕಾರು, ಸವಣೂರು, ಕಾಣಿಯೂರಿನಲ್ಲಿ ರೋಡ್ ಶೋ ಮೂಲಕ ಮತಯಾಚಿಸಲಾಯಿತು. ಪ್ರತೀ ಅಂಗಡಿ ಮುಂಗಟ್ಟು, ಸಂಸ್ಥೆಗಳಿಗೆ ಬೇಟಿ ನೀಡಿ ಬಿಜೆಪಿ ಪರ ಮತ ಚಲಾಯಿಸುವಂತೆ ವಿನಂತಿಸಲಾಯಿತು. ಈ ಸಂದರ್ಭ ಜಿಲ್ಲಾ ಬಿಜೆಪಿ ಸದಸ್ಯ ರಾಕೇಶ್ ರೈ ಕೆಡೆಂಜಿ, ಬೆಳಂದೂರು ಬಿಜೆಪಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಧರ್ಮೇಂದ್ರ ಗೌಡ ಕಟ್ಟತ್ತಾರು, ಕಾರ್ಯದರ್ಶಿ ದಯಾನಂದ ಆಲಡ್ಕ, ಶಕ್ತಿ ಕೇಂದ್ರದ ಪ್ರಮುಖರಾದ

ಸವಣೂರು,ಕಾಣಿಯೂರಿನಲ್ಲಿ: ಬಿಜೆಪಿ ಮಹಿಳಾ ಮೋರ್ಚಾದಿಂದ ರೋಡ್‍ಶೋ Read More »

ಕರಾವಳಿ

ಬೆಳ್ತಂಗಡಿ: ಪ್ರಿಯಕರನ ಜೊತೆ ಸೇರಿ ಪತಿಯ ಕೊಲೆ ಸಾಬೀತು ►ಸಾಂದರ್ಭಿಕ ಸಾಕ್ಷಿಗಳ ಆಧಾರದಲ್ಲಿ ಸಾಬೀತಾದ ಗಮನಾರ್ಹ ಪ್ರಕರಣ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಮೇ.5. ನಾಲ್ಕು ವರ್ಷಗಳ ಹಿಂದೆ ಪ್ರಿಯಕರನ ಜೊತೆ ಸೇರಿ ತನ್ನ ಪತಿಯನ್ನು ಕೊಲೆ ಮಾಡಿರುವ ಪ್ರಕರಣದಲ್ಲಿ ಪತ್ನಿ ಹಾಗು ಆಕೆಯ ಪ್ರಿಯಕರನೇ ದೋಷಿಗಳು ಎಂದು ಮಂಗಳೂರಿನ 1 ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಲಯವು ತೀರ್ಪು ನೀಡಿದೆ. ಬೆಳ್ತಂಗಡಿ ತಾಲೂಕಿನ ಕಳೆಂಜ ಗ್ರಾಮದ ಶಾಲೆ ಮನೆಯ ಅಣ್ಣಯ್ಯ ಗೌಡ ಎಂಬಾತನ್ನು 2014 ಎಪ್ರಿಲ್‌ 19ರಂದು ರಾತ್ರಿ ವೇಳೆಯಲ್ಲಿ ಕೊಲೆ ಮಾಡಲಾಗಿತ್ತು. ಆರೋಪಿಗಳನ್ನು ಅಣ್ಣಯ್ಯ ಗೌಡ ಅವರ ಪತ್ನಿ ಅಮಿತಾ ಯಾನೆ ದೇವಕಿ (42)

ಬೆಳ್ತಂಗಡಿ: ಪ್ರಿಯಕರನ ಜೊತೆ ಸೇರಿ ಪತಿಯ ಕೊಲೆ ಸಾಬೀತು ►ಸಾಂದರ್ಭಿಕ ಸಾಕ್ಷಿಗಳ ಆಧಾರದಲ್ಲಿ ಸಾಬೀತಾದ ಗಮನಾರ್ಹ ಪ್ರಕರಣ Read More »

ಕರಾವಳಿ

ಶಾಸಕ ಅಂಗಾರರ ಮುಖವನ್ನೇ ನೋಡಿಲ್ಲ ಎಂಬ ಡಿ.ಕೆ.ಶಿವಕುಮಾರ್ ಹೇಳಿಕೆ ► ಕಾಂಗ್ರೆಸ್‌ನ ದಬ್ಬಾಳಿಕೆ ನೀತಿಯನ್ನು ತೋರಿಸುತ್ತದೆ: ಬಿಜೆಪಿ ಮುಖಂಡ ಮುಳಿಯ ಕೇಶವ ಭಟ್

(ನ್ಯೂಸ್ ಕಡಬ) newskadaba.com ಸುಳ್ಯ, ಮೇ.05. ಇಂಧನ ಸಚಿವ, ಕಾಂಗ್ರೆಸ್ ಮುಖಂಡ ಡಿ.ಕೆ ಶಿವಕುಮಾರ್ ಅವರು ಸುಳ್ಯ ಶಾಸಕ ಎಸ್.ಅಂಗಾರ ಮುಖವನ್ನೇ ನಾನು ಕಂಡಿಲ್ಲ ಎಂದು ಏಕವಚನದಲ್ಲಿ ಕೀಳಾಗಿ ಮಾತನ್ನಾಡಿದ್ದು, ಇದು ಕಾಂಗ್ರೆಸ್ಸಿನ ದಬ್ಬಾಳಿಕೆ ನೀತಿಯನ್ನು ತೋರಿಸುತ್ತದೆ ಎಂದು ಬಿಜೆಪಿ ಸುಳ್ಯ ಮಂಡಲ ಸಮಿತಿ ಮಾಧ್ಯಮ ಪ್ರಮುಖರಾದ ಮುಳಿಯ ಕೇಶವ ಭಟ್ ಹೇಳಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಹಿಂದುಳಿದ ವರ್ಗದ ಶಾಸಕರನ್ನು ಮೆಟ್ಟಿ ನಿಲ್ಲುವ ಕಾಂಗ್ರೆಸ್ಸಿನ ಇಂತಹ ಪ್ರವೃತ್ತಿಯನ್ನು ನಾವು ಖಂಡಿಸುತ್ತೇವೆ. ದಲಿತ ವರ್ಗದವರನ್ನು ಕಾಂಗ್ರೆಸ್‌ನವರು ಎಷ್ಟು

ಶಾಸಕ ಅಂಗಾರರ ಮುಖವನ್ನೇ ನೋಡಿಲ್ಲ ಎಂಬ ಡಿ.ಕೆ.ಶಿವಕುಮಾರ್ ಹೇಳಿಕೆ ► ಕಾಂಗ್ರೆಸ್‌ನ ದಬ್ಬಾಳಿಕೆ ನೀತಿಯನ್ನು ತೋರಿಸುತ್ತದೆ: ಬಿಜೆಪಿ ಮುಖಂಡ ಮುಳಿಯ ಕೇಶವ ಭಟ್ Read More »

ಕರಾವಳಿ
Scroll to Top