ಕರಾವಳಿ

ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಮಂಗಳೂರಿನ ಅಂಕಿತಾ ರಾಜ್ಯಕ್ಕೆ ದ್ವಿತೀಯ

(ನ್ಯೂಸ್ ಕಡಬ) newskadaba.com ಬೆಂಗಳೂರು, ಎ.30. ದ್ವಿತೀಯ ಪಿಯುಸಿ ಪರೀಕ್ಷೆಯ ವಿಭಾಗದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ವಿದ್ಯಾರ್ಥಿನಿಯೋರ್ವಳು ರಾಜ್ಯಕ್ಕೆ ದ್ವಿತೀಯ ಹಾಗೂ ಜಿಲ್ಲೆಗೆ ಪ್ರಥಮ ಸ್ಥಾನವನ್ನು ಪಡೆದಿದ್ದಾಳೆ. ಇಲ್ಲಿನ ಸುರತ್ಕಲ್ ಗೋವಿಂದ ದಾಸ್ ಪಿ.ಯು ಕಾಲೇಜಿನ ಸುರತ್ಕಲ್ ಹಳೆಯ ಅಂಚೆ ಕಛೇರಿ ರಸ್ತೆಯ ಶ್ರೀಧಾಮ ನಿವಾಸಿ ಪ್ರಸಾದ್ ಹಾಗೂ ಭಾರತಿ ದಂಪತಿಯ ಪುತ್ರಿ ಅಂಕಿತಾ 600 ಅಂಕಗಳಲ್ಲಿ 595 ಅಂಕಗಳನ್ನು ಗಳಿಸಿ ರಾಜ್ಯದಲ್ಲಿ ದ್ವಿತೀಯ ಸ್ಥಾನ ಹಾಗೂ ಜಿಲ್ಲೆಯಲ್ಲಿ ಪ್ರಥಮ ಸ್ಥಾನವನ್ನು ತನ್ನದಾಗಿಸಿಕೊಂಡಿದ್ದಾಳೆ. ಈಕೆ ಮಂಗಳೂರಿನ ಎಕ್ಸ್ […]

ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಮಂಗಳೂರಿನ ಅಂಕಿತಾ ರಾಜ್ಯಕ್ಕೆ ದ್ವಿತೀಯ Read More »

ಕರಾವಳಿ

ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಪ್ರಥಮ ಸ್ಥಾನ ಪಡೆದ ದಕ್ಷಿಣ ಕನ್ನಡ ► ಕೊನೆಯ ಸ್ಥಾನ ಯಾವ ಜಿಲ್ಲೆಗೆ ಗೊತ್ತೇ…?

(ನ್ಯೂಸ್ ಕಡಬ) newskadaba.com ಬೆಂಗಳೂರು, ಎ.30. ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು, ಪ್ರಥಮ ಸ್ಥಾನವನ್ನು ದಕ್ಷಿಣ ಕನ್ನಡ ಜಿಲ್ಲೆ ಹಾಗೂ ದ್ವಿತೀಯ ಸ್ಥಾನವನ್ನು ಉಡುಪಿ ಜಿಲ್ಲೆ ತನ್ನದಾಗಿಸಿಕೊಂಡಿದೆ. ಕೊಡಗು ಜಿಲ್ಲೆ ಮೂರನೇ ಸ್ಥಾನವನ್ನು ಪಡೆದಿದ್ದು, ಚಿಕ್ಕೋಡಿ ಕೊನೆಯ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿದೆ. ಎಂದಿನಂತೆ ಈ ಬಾರಿಯೂ ಬಾಲಕಿಯರೇ ಮೇಲುಗೈ ಸಾಧಿಸಿದ್ದು, ಈ ಬಾರಿ ಒಟ್ಟು ಶೇ.59.56 ರಷ್ಟು ಫಲಿತಾಂಶದೊಂದಿಗೆ ಕಳೆದ ಬಾರಿಗಿಂತ ಫಲಿತಾಂಶದಲ್ಲಿ ಹೆಚ್ಚಳ ಕಂಡು ಬಂದಿದೆ. ವಿಜ್ಞಾನ ವಿಭಾಗದಲ್ಲಿ ಬೆಂಗಳೂರಿನ ವಿವಿ ಸರ್ದಾರ್ ಪಟೇಲ್ ಕಾಲೇಜಿನ ವಿಜ್ಞಾನ

ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಪ್ರಥಮ ಸ್ಥಾನ ಪಡೆದ ದಕ್ಷಿಣ ಕನ್ನಡ ► ಕೊನೆಯ ಸ್ಥಾನ ಯಾವ ಜಿಲ್ಲೆಗೆ ಗೊತ್ತೇ…? Read More »

ಕರಾವಳಿ

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 47 ನೇ ವರ್ಷದ ಸಾಮೂಹಿಕ ವಿವಾಹ ಸಮಾರಂಭ ► ಪರಸ್ಪರ ನಂಬಿಕೆಯಿದ್ದಲ್ಲಿ ವಿಚ್ಚೇದನಕ್ಕೆ ಕಡಿವಾಣ ಹಾಕಬಹುದು: ವೀರೇಂದ್ರ ಹೆಗ್ಗಡೆ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಎ.29. ಸಂತೋಷ, ಸಂಭ್ರಮ, ಪ್ರೀತಿಯಿಂದ ಮಾಡುವ ಸಮಾರಂಭಗಳಲ್ಲಿ ವಿವಾಹವೂ ಒಂದಾಗಿದ್ದು, ಜೀವನದ ಪ್ರತೀಕ ಆದರ್ಶ ಎಂದು ಭಾವಿಸುತ್ತಿರುವ ನಾವು ದಾಂಪತ್ಯಕ್ಕೆ ವಿಶೇಷವಾದ ಗೌರವವನ್ನು ನೀಡಿದ್ದೇವೆ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆ ಹೇಳಿದರು. ಅವರು ಭಾನುವಾರದಂದು ಶ್ರೀ ಕ್ಷೇತ್ರ ಧರ್ಮಸ್ಥಳದ ಅಮೃತವರ್ಷಿಣಿ ಸಭಾಭವನದಲ್ಲಿ ನಡೆದ 47 ನೇ ವರ್ಷದ ಸಾಮೂಹಿಕ ಉಚಿತ ವಿವಾಹ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿ, ಇಲ್ಲಿ 23 ಜೋಡಿಗಳು ಅಂತರ್ಜಾತಿಯ ವಿವಾಹವಾಗಿದ್ದು, ಅವರು

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 47 ನೇ ವರ್ಷದ ಸಾಮೂಹಿಕ ವಿವಾಹ ಸಮಾರಂಭ ► ಪರಸ್ಪರ ನಂಬಿಕೆಯಿದ್ದಲ್ಲಿ ವಿಚ್ಚೇದನಕ್ಕೆ ಕಡಿವಾಣ ಹಾಕಬಹುದು: ವೀರೇಂದ್ರ ಹೆಗ್ಗಡೆ Read More »

ಕರಾವಳಿ

ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ನಾಳೆ (ಮೇ.01) ಬೆಳ್ಳಾರೆಗೆ

(ನ್ಯೂಸ್ ಕಡಬ) newskadaba.com ಸುಳ್ಯ, ಎ.30. ಕೆಲವು ದಶಕಗಳ ಸೋಲಿನಿಂದ ಕಂಗಾಲಾಗಿ ಈ ಬಾರಿ ಸುಳ್ಯ ಕ್ಷೇತ್ರವನ್ನು ಹೇಗಾದರೂ ಮಾಡಿ ಗೆಲ್ಲಲೇಬೇಕೆಂದು ಕಾಂಗ್ರೆಸ್ ಪಣತೊಟ್ಟಿದ್ದು, ನಾಳೆ (ಮೇ 01) ರಂದು ಬೆಳ್ಳಾರೆಯಲ್ಲಿ ನಡೆಯಲಿರುವ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದಲ್ಲಿ ಮಾಜಿ ಮುಖ್ಯಮಂತ್ರಿ, ಪ್ರಣಾಳಿಕೆ ಸಮಿತಿ ಅಧ್ಯಕ್ಷ ಎಂ ವೀರಪ್ಪ ಮೊಯ್ಲಿ ಭಾಗವಹಿಸಲಿದ್ದಾರೆ. ಸುಳ್ಯ ವಿಧಾನಸಭಾ ಕ್ಷೇತ್ರದಲ್ಲಿ ಕಳೆದ ಇಪ್ಪತ್ತೈದು ವರ್ಷಗಳಿಂದ ಸತತ ಸೋಲುಣ್ಣುತ್ತಿರುವ ಕಾಂಗ್ರೆಸ್ ಈ ಬಾರಿ ಹೇಗಾದರೂ ಮಾಡಿ ಗೆಲ್ಲಲೇಬೇಕೆಂದು ಸಿದ್ಧತೆ ಮಾಡಿಕೊಂಡಿದ್ದು, ಅದರಂತೆ ಮಂಗಳವಾರದಂದು ಬೆಳ್ಳಾರೆಯ

ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ನಾಳೆ (ಮೇ.01) ಬೆಳ್ಳಾರೆಗೆ Read More »

ಕರಾವಳಿ

ಮರ್ಧಾಳ: ಬೈಕ್ – ಬೈಕ್ ಢಿಕ್ಕಿ ► ಸವಾರನಿಗೆ ಗಾಯ

(ನ್ಯೂಸ್ ಕಡಬ) newskadaba.com ಕಡಬ, ಎ.29. ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಬೈಕಿಗೆ ಹಿಂದಿನಿಂದ ಬೈಕೊಂದು ಢಿಕ್ಕಿ ಹೊಡೆದ ಪರಿಣಾಮ ಸವಾರ ಗಾಯಗೊಂಡ ಘಟನೆ ಧರ್ಮಸ್ಥಳ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಪಾಲೆತ್ತಡ್ಕ ಎಂಬಲ್ಲಿ ಭಾನುವಾರ ರಾತ್ರಿ ನಡೆದಿದೆ. ಘಟನೆಯಲ್ಲಿ ಬೈಕ್ ಸವಾರರಿಬ್ಬರು ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ. ಮರ್ಧಾಳದಿಂದ ಇಚಿಲಂಪಾಡಿ ಕಡೆಗೆ ತೆರಳುತ್ತಿದ್ದ ಬೈಕ್ ಹಿಂದಿನಿಂದ ಢಿಕ್ಕಿ ಹೊಡೆದುದರಿಂದಾಗಿ ಈ ಘಟನೆ ಸಂಭವಿಸಿದೆ.

ಮರ್ಧಾಳ: ಬೈಕ್ – ಬೈಕ್ ಢಿಕ್ಕಿ ► ಸವಾರನಿಗೆ ಗಾಯ Read More »

ಕರಾವಳಿ

ಕಡಬ: ಚಾಲಕಿಯ ನಿಯಂತ್ರಣ ತಪ್ಪಿದ ಆಲ್ಟೋ ಕಾರು ► ಮಹಿಳೆ ಹಾಗೂ ಮಗು ಅಪಾಯದಿಂದ ಪಾರು

(ನ್ಯೂಸ್ ಕಡಬ) newskadaba.com ಕಡಬ, ಎ.29. ಆಲ್ಟೋ ಕಾರೊಂದು ಚಾಲಕಿಯ ನಿಯಂತ್ರಣ ತಪ್ಪಿ ರಸ್ತೆ ಬದಿಯ ಚರಂಡಿಗೆ ಇಳಿದ ಘಟನೆ ಉಪ್ಪಿನಂಗಡಿ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಕಳಾರ ಬಳಿಯ ಇಂಡಿಯನ್ ಆಯಿಲ್ ಪೆಟ್ರೋಲ್ ಬಂಕ್‌ ಮುಂಭಾಗದಲ್ಲಿ ಭಾನುವಾರ ಅಪರಾಹ್ನ ನಡೆದಿದೆ. ಕಡಬದಿಂದ ಉಪ್ಪಿನಂಗಡಿ ಕಡೆಗೆ ತೆರಳುತ್ತಿದ್ದ ಆಲ್ಟೋ ಕಾರಿನ್ನು ಮಹಿಳೆ ಚಲಾಯಿಸುತ್ತಿದ್ದು, ಪಕ್ಕದಲ್ಲೇ ಮಗು ಇತ್ತೆನ್ನಲಾಗಿದೆ‌. ಅದೃಷ್ಟವಶಾತ್ ಸಣ್ಣಪುಟ್ಟ ಗಾಯಗಳೊಂದಿಗೆ ಮಹಿಳೆ ಹಾಗೂ ಮಗು ಅಪಾಯದಿಂದ ಪಾರಾಗಿದ್ದಾರೆ.

ಕಡಬ: ಚಾಲಕಿಯ ನಿಯಂತ್ರಣ ತಪ್ಪಿದ ಆಲ್ಟೋ ಕಾರು ► ಮಹಿಳೆ ಹಾಗೂ ಮಗು ಅಪಾಯದಿಂದ ಪಾರು Read More »

ಕರಾವಳಿ

ಉಡುಪಿ: ಪೆಂಡಾಲ್ ಸಾಗಾಟದ ಲಾರಿ ಪಲ್ಟಿ – ಮೂವರು ಮೃತ್ಯು ► ಪ್ರಧಾನಿ ಮೋದಿ ಕಾರ್ಯಕ್ರಮಕ್ಕೆ ಪೆಂಡಾಲ್ ಸಾಗಿಸುತ್ತಿದ್ದ ಲಾರಿ

(ನ್ಯೂಸ್ ಕಡಬ) newskadaba.com ಉಡುಪಿ, ಎ.29. ಕಾರ್ಯಕ್ರಮಕ್ಕೆ ಹಾಕುವ ಪೆಂಡಲ್ ಸಾಗಿಸುತ್ತಿದ್ದ ಟೆಂಪೋವೊಂದು ಪಲ್ಟಿಯಾದ ಪರಿಣಾಮ ಅಸ್ಸಾಂ ಮೂಲದ ಮೂವರು ಕಾರ್ಮಿಕರು ಮೃತಪಟ್ಟ ಘಟನೆ ಭಾನುವಾರದಂದು ಪೆರ್ಡೂರಿನಲ್ಲಿ ಸಂಭವಿಸಿದೆ. ಮೇ 01 ರಂದು ಉಡುಪಿಯ ಎಂಜಿಎಂ ಕಾಲೇಜು ಮೈದಾನದಲ್ಲಿ ನಡೆಯಲಿರುವ ಪ್ರಧಾನಿ ನರೇಂದ್ರ ಮೋದಿಯವರ ಕಾರ್ಯಕ್ರಮಕ್ಕೆ ಚಿತ್ರದುರ್ಗದಿಂದ ಪೆಂಡಲ್ ಸಾಗಿಸುತ್ತಿದ್ದ ಟೆಂಪೊ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದು ಉರುಳಿಬಿದ್ದಿದೆ. ಪರಿಣಾಮ ಟೆಂಪೋದಲ್ಲಿದ್ದ ಮೂವರು ಕಾರ್ಮಿಕರು ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ. ಹಿರಿಯಡ್ಕ

ಉಡುಪಿ: ಪೆಂಡಾಲ್ ಸಾಗಾಟದ ಲಾರಿ ಪಲ್ಟಿ – ಮೂವರು ಮೃತ್ಯು ► ಪ್ರಧಾನಿ ಮೋದಿ ಕಾರ್ಯಕ್ರಮಕ್ಕೆ ಪೆಂಡಾಲ್ ಸಾಗಿಸುತ್ತಿದ್ದ ಲಾರಿ Read More »

ಕರಾವಳಿ

ಮಂಗಳೂರು: ಲಾರಿ – ಬೈಕ್ ಢಿಕ್ಕಿ ► ಸವಾರ ಮೃತ್ಯು, ಸಹ ಸವಾರ ಗಂಭೀರ

(ನ್ಯೂಸ್ ಕಡಬ) newskadaba.com ಮಂಗಳೂರು, ಎ.29. ಲಾರಿ ಮತ್ತು ಬೈಕ್ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟು, ಸಹ ಸವಾರ ಗಂಭೀರ ಗಾಯಗೊಂಡ ಘಟನೆ ಪಂಪ್‌ವೆಲ್ ನಲ್ಲಿ ಭಾನುವಾರದಂದು ನಡೆದಿದೆ. ಮೃತ ಸವಾರನನ್ನು ತೊಕ್ಕೊಟ್ಟು ಸಮೀಪದ ಕುಂಪಲ ಮೂರುಕಟ್ಟೆ ನಿವಾಸಿ ಅಕ್ಷಯ್ (26) ಎಂದು ಗುರುತಿಸಲಾಗಿದೆ. ಸಹ ಸವಾರ ಪುನೀತ್ ಗಂಭೀರ ಗಾಯಗೊಂಡಿದ್ದು, ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾಸರಗೋಡಿನಿಂದ ಮಂಗಳೂರಿಗೆ ಬರುತ್ತಿದ್ದ ಸರಕು ಸಾಗಾಟದ ಲಾರಿ ಮತ್ತು ಬೈಕ್ ನಡುವೆ ಢಿಕ್ಕಿ

ಮಂಗಳೂರು: ಲಾರಿ – ಬೈಕ್ ಢಿಕ್ಕಿ ► ಸವಾರ ಮೃತ್ಯು, ಸಹ ಸವಾರ ಗಂಭೀರ Read More »

ಕರಾವಳಿ

ಕಾಪು: ಅಲೆಗಳ ಸೆಳೆತಕ್ಕೆ ಯುವಕ ಸಮುದ್ರ ಪಾಲು

(ನ್ಯೂಸ್ ಕಡಬ) newskadaba.com ಕಾಪು, ಎ.29. ಪ್ರವಾಸಕ್ಕೆಂದು ಆಗಮಿಸಿದ್ದ ತಂಡವೊಂದು ನೀರಿನಲ್ಲಿ ಆಡುತ್ತಿದ್ದಾಗ ಯುವಕನೋರ್ವ ನೀರು ಪಾಲಾದ ಘಟನೆ ಕಾಪು ಬೀಚ್ ನಲ್ಲಿ ಶನಿವಾರದಂದು ಸಂಜೆ ನಡೆದಿದೆ. ನೀತು ಪಾಲಾದ ಯುವಕನನ್ನು ಕಿಶೋರ್ (17) ಎಂದು ಗುರುತಿಸಲಾಗಿದೆ. ಮೂವರು ಮಹಿಳೆಯರು ಹಾಗೂ ನಾಲ್ವರು ಪುರುಷರ ತಂಡ ಕಾಪು ಬೀ‍ಚ್ ನಲ್ಲಿ ಸಮುದ್ರಕ್ಕಿಳಿದು ನೀರಾಟದಲ್ಲಿ ತೊಡಗಿದ್ದ ಸಂದರ್ಭದಲ್ಲಿ ಕಿಶೋರ್ ಹಾಗೂ ಭರತ್ ಸಮುದ್ರದ ಅಲೆಗಳ ಸೆಳೆತಕ್ಕೆ ಸಿಲುಕಿ ಕಿಶೋರ್ ನೀರು ಪಾಲಾಗಿದ್ದು, ಭರತ್ ನನ್ನು ರಕ್ಷಿಸಲಾಗಿದೆ‌. ಕಿಶೋರ್ ದೇಹಕ್ಕೆ

ಕಾಪು: ಅಲೆಗಳ ಸೆಳೆತಕ್ಕೆ ಯುವಕ ಸಮುದ್ರ ಪಾಲು Read More »

ಕರಾವಳಿ

ಕಡಬ: ಜೀವಾವಧಿ ಶಿಕ್ಷೆಗೊಳಗಾಗಿ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ ► ಚಿಕ್ಕಮಗಳೂರಿನಿಂದ ಬಂದು ಕಡಬದಲ್ಲಿ ಮದುವೆಯಾಗಿದ್ದ ಕೊಲೆ ಆರೋಪಿ

(ನ್ಯೂಸ್ ಕಡಬ) newskadaba.com ಕಡಬ, ಎ.28. ಕೊಲೆ‌ ಪ್ರಕರಣವೊಂದರಲ್ಲಿ ಜೀವಾವಧಿ ಶಿಕ್ಷೆಗೊಳಗಾಗಿ 2006 ರಲ್ಲಿ ಪೆರೋಲ್ ಮೇಲೆ ಬಂದು ತಲೆಮರೆಸಿಕೊಂಡಿದ್ದ ಆರೋಪಿಯನ್ನು ಕಡಬ ಠಾಣಾ ಪೊಲೀಸರ ಸಹಕಾರದೊಂದಿಗೆ ಚಿಕ್ಕಮಗಳೂರು ಪೊಲೀಸರು ಶನಿವಾರದಂದು ಬಂಧಿಸಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ ಅಜ್ಜಂಪುರ ಠಾಣಾ ವ್ಯಾಪ್ತಿಯಲ್ಲಿ 2002 ರಲ್ಲಿ ಕೊಲೆ ಆರೋಪದ ಮೇಲೆ ಜೀವಾವಧಿ ಶಿಕ್ಷೆಗೆ ಒಳಗಾಗಿ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದ ಚಿಕ್ಕಮಗಳೂರು ಮೂಲದ ಮಹಮ್ಮದ್ ಕಾಸಿಂ ಎಂಬವರ ಪುತ್ರ ಅಬ್ದುಲ್ ಘನಿ (40) ಪೆರೋಲ್ ಮೇಲೆ ಬಂದಿದ್ದು, ಆ ನಂತರ

ಕಡಬ: ಜೀವಾವಧಿ ಶಿಕ್ಷೆಗೊಳಗಾಗಿ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ ► ಚಿಕ್ಕಮಗಳೂರಿನಿಂದ ಬಂದು ಕಡಬದಲ್ಲಿ ಮದುವೆಯಾಗಿದ್ದ ಕೊಲೆ ಆರೋಪಿ Read More »

ಕರಾವಳಿ
Scroll to Top