ಕರಾವಳಿ

ಕೊಣಾಜೆಯ ವ್ಯಕ್ತಿಯ ಮೃತದೇಹ ಕುಮಾರಧಾರಾ ನದಿಯಲ್ಲಿ ಪತ್ತೆ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಎ.26. ಕಡಬ ತಾಲೂಕಿನ ಕೊಣಾಜೆ ನಿವಾಸಿಯ ಮೃತದೇಹವೊಂದು ಕುಮಾರಧಾರಾ ನದಿಯಲ್ಲಿ ಬುಧವಾರದಂದು ಪತ್ತೆಯಾಗಿದೆ. ಮೃತ ವ್ಯಕ್ತಿಯನ್ನು ಕಡಬ ತಾಲೂಕಿನ ಕೊಣಾಜೆ‌ ಗ್ರಾಮದ ಪಟ್ಟೆ ನಿವಾಸಿ ಡೀಕಯ್ಯ ಎಂದು ಗುರುತಿಸಲಾಗಿದೆ. ಒಬ್ಬಂಟಿಯಾಗಿ ವಾಸಿಸುತ್ತಿದ್ದ ಡೀಕಯ್ಯ ಎರಡು ವಾರಗಳಿಗೊಮ್ಮೆ ತನ್ನ ಪತ್ನಿಯ ಊರಾದ ಬಂಟ್ವಾಳ ತಾಲೂಕಿನ ಬಿಳಿಯೂರಿಗೆ ಹೋಗಿ ಬರುತ್ತಿದ್ದರೆನ್ನಲಾಗಿದೆ. ಸೋಮವಾರದಂದು ನೀರಿಗೆ ಬಿದ್ದು ಮೃತಪಟ್ಟಿರಬಹುದೆಂದು ಶಂಕಿಸಲಾಗಿದೆ. ಮೃತರ ಪತ್ನಿ ಯಶೋಧ ನೀಡಿದ ದೂರಿನಂತೆ ಸ್ಥಳಕ್ಕೆ ಉಪ್ಪಿನಂಗಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, […]

ಕೊಣಾಜೆಯ ವ್ಯಕ್ತಿಯ ಮೃತದೇಹ ಕುಮಾರಧಾರಾ ನದಿಯಲ್ಲಿ ಪತ್ತೆ Read More »

ಕರಾವಳಿ

ಕಡಬ: ಯುವತಿಯೊಂದಿಗೆ ಕಾಡಿನಲ್ಲಿ ಅನೈತಿಕ ಚಟುವಟಿಕೆ ► ಬೀದಿ ಕಾಮಣ್ಣನನ್ನು ಬಂಧಿಸುವಂತೆ ಆಗ್ರಹಿಸಿ ಪೊಲೀಸರಿಗೆ ದೂರು

(ನ್ಯೂಸ್ ಕಡಬ) newskadaba.com ಕಡಬ, ಎ.26. ಇಚ್ಲಂಪಾಡಿ ಗ್ರಾಮದ ಯುವಕನೋರ್ವ ಸಮೀಪದ ಪರಿಶಿಷ್ಟ ವರ್ಗಕ್ಕೆ ಸೇರಿದ ಯುವತಿಯೊಂದಿಗೆ ಅನೈತಿಕ ಚಟುವಟಿಕೆ ನಡೆಸುತ್ತಿದ್ದ ವೇಳೆ ಸ್ಥಳೀಯರಿಗೆ ಮಾಹಿತಿ ದೊರೆತು ಅವರು ಆಗಮಿಸುವ ವೇಳೆಗೆ ಯುವಕ ತನ್ನ ಬೈಕನ್ನು ಬಿಟ್ಟು ಪರಾರಿಯಾಗಿರುವ ಘಟನೆ ಕೆಲ ದಿನಗಳ ಹಿಂದೆ ನಡೆದಿದ್ದು ಈ ಪ್ರಕರಣಕ್ಕೆ ಸಂಬಂಧಿಸಿ ಅಲ್ಲಿನ ಸುಮಾರು 25ಕ್ಕೂ ಹೆಚ್ಚು ನೊಂದ ಗ್ರಾಮಸ್ಥರು ಎಂಬ ಹೆಸರಿನಲ್ಲಿ ಯುವಕನ ವಿರುದ್ದ ಗುರುವಾರದಂದು ಕಡಬ ಠಾಣೆಗೆ ದೂರು ನೀಡಿದ್ದಾರೆ. ಇಚ್ಲಂಪಾಡಿ-ದೇರಾಜೆ ರಸ್ತೆಯ ಕೊಕ್ಕೊ ಕಾಡಿನಲ್ಲಿ

ಕಡಬ: ಯುವತಿಯೊಂದಿಗೆ ಕಾಡಿನಲ್ಲಿ ಅನೈತಿಕ ಚಟುವಟಿಕೆ ► ಬೀದಿ ಕಾಮಣ್ಣನನ್ನು ಬಂಧಿಸುವಂತೆ ಆಗ್ರಹಿಸಿ ಪೊಲೀಸರಿಗೆ ದೂರು Read More »

ಕರಾವಳಿ

ನೇತ್ರಾವತಿ ನದಿಯಲ್ಲಿ ಅಪರಿಚಿತ ಮೃತದೇಹ ಪತ್ತೆ ► ಸಾರ್ವಜನಿಕರು ವಾಹನಗಳನ್ನು ಸೇತುವೆಯಲ್ಲೇ ನಿಲ್ಲಿಸಿದ್ದರಿಂದ ಹೈರಾಣಾದ ಪೊಲೀಸರು

(ನ್ಯೂಸ್ ಕಡಬ) newskadaba.com ಮಂಗಳೂರು, ಎ.26. ನೇತ್ರಾವತಿ ನದಿಯಲ್ಲಿ ಮೃತದೇಹವೊಂದು ತೇಳುತ್ತಿರುವುದನ್ನು ಕಂಡು ಕುತೂಹಲದಿಂದ ವಾಹನಗಳನ್ನು ಸೇತುವೆಯಲ್ಲೇ ನಿಲ್ಲಿಸಿ ಸಾರ್ವಜನಿಕರು ನದಿಗೆ ಇಣುಕಿ ನೋಡುತ್ತಿದ್ದುದರಿಂದಾಗಿ ಕೆಲಕಾಲ ಸಂಚಾರ ದಟ್ಟಣೆ ಉಂಟಾದ ಘಟನೆ ಗುರುವಾರದಂದು ಉಳ್ಳಾಲ ನೇತ್ರಾವತಿ ಸೇತುವೆಯಲ್ಲಿ ನಡೆದಿದೆ. ನದಿಯಲ್ಲಿ ಮೃತದೇಹವೊಂದು ತೇಲುತ್ತಿರುವುದು ಸೇತುವೆಯಲ್ಲಿ ಸಂಚರಿಸುತ್ತಿದ್ದ ಸಾರ್ವಜನಿಕರು ಗಮನಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದರು. ಈ ನಡುವೆ ಮೃತದೇಹ ತೇಲುತ್ತಿರುವ ವಿಷಯ ತಿಳಿಯುತ್ತಿದ್ದಂತೆ ಕುತೂಹಲದಿಂದ ವಾಹನ ಪ್ರಯಾಣಿಕರು ಸೇತುವೆಯಲ್ಲಿ ವಾಹನಗಳನ್ನು ನಿಲ್ಲಿಸಿ ನದಿಗೆ ಇಣುಕಿ ನೋಡಲು ಆರಂಭಿಸಿದ್ದಾರೆ. ಇದರಿಂದಾಗಿ

ನೇತ್ರಾವತಿ ನದಿಯಲ್ಲಿ ಅಪರಿಚಿತ ಮೃತದೇಹ ಪತ್ತೆ ► ಸಾರ್ವಜನಿಕರು ವಾಹನಗಳನ್ನು ಸೇತುವೆಯಲ್ಲೇ ನಿಲ್ಲಿಸಿದ್ದರಿಂದ ಹೈರಾಣಾದ ಪೊಲೀಸರು Read More »

ಕರಾವಳಿ

ಪುತ್ತೂರು: ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ಪ್ರಕರಣ ► ಠಾಣೆಯಲ್ಲಿ ಆತ್ಮಹತ್ಯೆಗೆ ಯತ್ನಿಸಿದ ಆರೋಪಿ

(ನ್ಯೂಸ್ ಕಡಬ) newskadaba.com ಪುತ್ತೂರು, ಎ.26. ಅಪ್ರಾಪ್ತ ವಯಸ್ಸಿನ ಬಾಲಕಿಗೆ ಕಳೆದ ಒಂದು ವರ್ಷದಿಂದ ಸಂದರ್ಭ ಸಿಕ್ಕಿದಾಗಲೆಲ್ಲ ಲೈಂಗಿಕ ಕಿರುಕುಳ ನೀಡುತ್ತಿದ್ದುದಲ್ಲದೆ ಯಾರಲ್ಲಾದರೂ ತಿಳಿಸಿದರೆ ಕೊಲ್ಲುವುದಾಗಿ ಬೆದರಿಕೆ ಹಾಕುತ್ತಿದ್ದ ಆರೋಪಿಯನ್ನು ಪುತ್ತೂರು ಪೊಲೀಸರು ಮಂಗಳವಾರದಂದು ಬಂಧಿಸಿದ್ದರು. ಬಂಧಿತ ಆರೋಪಿಯನ್ನು ಪುತ್ತೂರು ಕಸಬಾ ಗ್ರಾಮದ ನೆಹರೂ ನಗರ ಮುರ ನಿವಾಸಿ ಶಂಷೇರ್ ಖಾನ್(50) ಎಂದು ಗುರುತಿಸಲಾಗಿದೆ. ಆರೋಪಿಯು ಬಂಧನದ ನಂತರ ಲಾಕಪ್ ಸರಳಿಗೆ ತನ್ನ ತಲೆಯನ್ನು ಗುದ್ದಿಕೊಂಡು ಆತ್ಮಹತ್ಯೆಗೆ ಯತ್ನಿಸಿ ತಲೆಗೆ ಗಾಯಗಳಾಗಿದ್ದು, ಚಿಕಿತ್ಸೆ ಕೊಡಿಸಲಾಗಿದೆ. ಈತ ಕಳೆದ

ಪುತ್ತೂರು: ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ಪ್ರಕರಣ ► ಠಾಣೆಯಲ್ಲಿ ಆತ್ಮಹತ್ಯೆಗೆ ಯತ್ನಿಸಿದ ಆರೋಪಿ Read More »

ಕರಾವಳಿ

ವಿಟ್ಲ ಪೊಲೀಸರ ಮೇಲೆ ದಾಂಧಲೆ ನಡೆಸಿದ್ದ ನಾಲ್ವರ ಬಂಧನ ► ಆರೋಪಿಗಳಿಗೆ ಉರುಳಾದ ತಾವೇ ತೆಗೆದ ಗೂಂಡಾ ಕೃತ್ಯದ ವೀಡಿಯೋ

(ನ್ಯೂಸ್ ಕಡಬ) newskadaba.com ವಿಟ್ಲ, ಎ.26. ಪೊಲೀಸ್ ಇಲಾಖೆಗೆ ಸೇರಿದ ಬೊಲೆರೋ ವಾಹನವನ್ನು ಅಡ್ಡಗಟ್ಟಿ ಸಿಬ್ಬಂದಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿದ ಬಾಲಾಪರಾಧಿ ಸಹಿತ ನಾಲ್ವರು ಆರೋಪಿಗಳನ್ನು ಮಂಜೇಶ್ವರ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಪೈವಳಿಕೆ ಗ್ರಾಮದ ಸುಂಕದಕಟ್ಟೆ ನಿವಾಸಿಗಳಾದ ಕುಂಞ ಅಹಮ್ಮದ್‌ ಎಂಬವರ ಪುತ್ರ ರಾಝಿಕ್ ಎ.ಕೆ.(20), ಮೊಹಮ್ಮದ್‌ ಎಂಬವರ ಪುತ್ರ ನೌಫಲ್(19), ಅಬ್ದುಲ್ಲ ಎಂಬವರ ಪುತ್ರ ಹೈದರಾಲಿ(36) ಹಾಗೂ 17ರ ಹರೆಯದ ಓರ್ವ ಅಪ್ರಾಪ್ತ ಬಾಲಕ ಎಂದು ಗುರುತಿಸಲಾಗಿದೆ. ಆರೋಪಿಗಳು ಇತ್ತೀಚೆಗೆ ಜಮ್ಮು ಕಾಶ್ಮೀರದ ಕಥುವಾದ ಬಾಲಕಿ

ವಿಟ್ಲ ಪೊಲೀಸರ ಮೇಲೆ ದಾಂಧಲೆ ನಡೆಸಿದ್ದ ನಾಲ್ವರ ಬಂಧನ ► ಆರೋಪಿಗಳಿಗೆ ಉರುಳಾದ ತಾವೇ ತೆಗೆದ ಗೂಂಡಾ ಕೃತ್ಯದ ವೀಡಿಯೋ Read More »

ಕರಾವಳಿ

ಎಪ್ರಿಲ್ 29 ರಂದು ಉಪರಾಷ್ಟ್ರಪತಿ ಮಂಗಳೂರಿಗೆ ► ಕರಾವಳಿಯಲ್ಲಿ ವಾಸ್ತವ್ಯ ಹೂಡಲಿರುವ ಎಂ. ವೆಂಕಯ್ಯ ನಾಯ್ಡು

(ನ್ಯೂಸ್ ಕಡಬ) newskadaba.com ಮಂಗಳೂರು, ಎ.26. ಭಾರತದ ಉಪರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡುರವರು ಎಪ್ರಿಲ್ 29 ರಂದು ಬೆಳಿಗ್ಗೆ 9.40ಕ್ಕೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದು, ಬಳಿಕ ಹೆಲಿಕಾಪ್ಟರ್ ನಲ್ಲಿ ಕಾಸರಗೋಡಿಗೆ ತೆರಳಲಿದ್ದಾರೆ. ಮಧ್ಯಾಹ್ನ 01 ಗಂಟೆಗೆ ಮಂಗಳೂರಿಗೆ ಹಿಂದಿರುಗುವ ಉಪರಾಷ್ಟ್ರಪತಿಗಳು ಅಂದು ರಾತ್ರಿ ನಗರದಲ್ಲಿ ವಾಸ್ತವ್ಯ ಹೂಡಲಿದ್ದು, ಎ.30 ರಂದು ಮಧ್ಯಾಹ್ನ 12.20 ಗಂಟೆಗೆ ವಿಶೇಷ ವಿಮಾನದ ಮೂಲಕ ಕೊಚ್ಚಿನ್‍ಗೆ ತೆರಳಲಿದ್ದಾರೆ. ಉಪರಾಷ್ಟ್ರಪತಿಗಳ ಪ್ರವಾಸ ನಿಮಿತ್ತ ಬುಧವಾರದಂದು ಜಿಲ್ಲಾಧಿಕಾರಿ ಡಾ. ಸಸಿಕಾಂತ್ ಸೆಂಥಿಲ್ ಅಧ್ಯಕ್ಷತೆಯಲ್ಲಿ ಉನ್ನತ ಅಧಿಕಾರಿಗಳ

ಎಪ್ರಿಲ್ 29 ರಂದು ಉಪರಾಷ್ಟ್ರಪತಿ ಮಂಗಳೂರಿಗೆ ► ಕರಾವಳಿಯಲ್ಲಿ ವಾಸ್ತವ್ಯ ಹೂಡಲಿರುವ ಎಂ. ವೆಂಕಯ್ಯ ನಾಯ್ಡು Read More »

ಕರಾವಳಿ

ಜಿಲ್ಲೆಯಲ್ಲಿ ಸಲ್ಲಿಕೆಯಾದ ಒಟ್ಟು 98 ನಾಮಪತ್ರಗಳ ಪೈಕಿ 66 ಕ್ರಮಬದ್ಧ ► ಯಾವೆಲ್ಲಾ ನಾಮಪತ್ರಗಳು ಕ್ರಮಬದ್ಧ ಎಂದು ತಿಳಿಯಬೇಕೇ…?

(ನ್ಯೂಸ್ ಕಡಬ) newskadaba.com ಮಂಗಳೂರು, ಎ.25. ರಾಜ್ಯ ಸಾರ್ವತ್ರಿಕ ವಿಧಾನಸಭಾ ಚುನಾವಣೆಗೆ ಜಿಲ್ಲೆಯಲ್ಲಿ ಸಲ್ಲಿಕೆಯಾದ ನಾಮಪತ್ರಗಳ ಪರಿಶೀಲನೆ ಬುಧವಾರ ನಡೆದಿದ್ದು, ಜಿಲ್ಲೆಯಲ್ಲಿ ಸಲ್ಲಿಕೆಯಾದ 98 ನಾಮಪತ್ರಗಳ ಪೈಕಿ 66 ನಾಮಪತ್ರಗಳು ಕ್ರಮಬದ್ಧವಾಗಿವೆ. ನಾಮಪತ್ರ ಹಿಂದೆಗೆಯಲು ಎಪ್ರಿಲ್ 27 ಅಂತಿಮ ದಿನವಾಗಿದ್ದು, ಕ್ರಮಬದ್ಧ ನಾಮಪತ್ರ ಸಲ್ಲಿಸಿದ ಅಭ್ಯರ್ಥಿಗಳ ವಿವರ ಇಂತಿವೆ. ಬೆಳ್ತಂಗಡಿ ಕ್ಷೇತ್ರ – ಕೆ. ವಸಂತ ಬಂಗೇರ(ಕಾಂಗ್ರೆಸ್), ಸುಮತಿ ಎಸ್. ಹೆಗ್ಡೆ(ಜೆ.ಡಿ.ಎಸ್), ಹರೀಶ್ ಪೂಂಜಾ (ಬಿ.ಜೆ.ಪಿ), ವೆಂಕಟೇಶ್ ಬೆಂಡೆ (ಪಕ್ಷೇತರ), ಜಗನ್ನಾಥ(ಎಂಇಪಿ), ಪ್ರಸಾದ್ ಕುಮಾರ್(ಶಿವಸೇನೆ), ಸೈಯದ್ ಹಸನ್(ಪಕ್ಷೇತರ) ಮೂಡುಬಿದಿರೆ ಕ್ಷೇತ್ರ –

ಜಿಲ್ಲೆಯಲ್ಲಿ ಸಲ್ಲಿಕೆಯಾದ ಒಟ್ಟು 98 ನಾಮಪತ್ರಗಳ ಪೈಕಿ 66 ಕ್ರಮಬದ್ಧ ► ಯಾವೆಲ್ಲಾ ನಾಮಪತ್ರಗಳು ಕ್ರಮಬದ್ಧ ಎಂದು ತಿಳಿಯಬೇಕೇ…? Read More »

ಕರಾವಳಿ

ಪುತ್ತೂರು ಕಟ್ಟಡ ದುರಂತದಲ್ಲಿ ಮೃತದೇಹದ ಮುಂದೆ ತೆಗೆದ ಸೆಲ್ಫಿ ಇದೀಗ ವೈರಲ್ ► ಯುವಕನ ನಡೆಗೆ ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಆಕ್ರೋಶ

(ನ್ಯೂಸ್ ಕಡಬ) newskadaba.com ಪುತ್ತೂರು, ಎ.25. ಮಂಗಳವಾರದಂದು ಪುತ್ತೂರಿನಲ್ಲಿ ಕಟ್ಟಡ ನಿರ್ಮಾಣ ವೇಳೆ ನಡೆದ ದುರಂತದ ಸಂದರ್ಭದಲ್ಲಿ ಯುವಕನೋರ್ವ ಮೃತದೇಹದ ಮುಂದೆ ನಿಂತು ಸೆಲ್ಫಿ ತೆಗೆದಿರುವುದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ‌. ಎಲ್ಲರೂ ರಕ್ಷಣಾ ಕಾರ್ಯಚರಣೆಯಲ್ಲಿ ನಿರತರಾಗಿದ್ದಾಗ ಕಾರ್ಯಚರಣೆಗೆ ಬಂದ ವ್ಯಕ್ತಿಯೋರ್ವ ಮೃತದೇಹದ ಮುಂಭಾಗದಲ್ಲಿ ಸೆಲ್ಫಿ ತೆಗೆಯುತ್ತಿರುವ ದೃಶ್ಯವನ್ನು ಯಾರೋ ಕ್ಲಿಕ್ಕಿಸಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಯಬಿಟ್ಟಿದ್ದು, ಯುವಕನ ಕೃತ್ಯಕ್ಕೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ದುರಂತದ ಸಂದರ್ಭದಲ್ಲಿ ರಕ್ಷಣಾ ಕಾರ್ಯಾಚರಣೆ ಮಾಡುವುದನ್ನು ಬಿಟ್ಟು ಸೆಲ್ಫಿ ತೆಗೆದುಕೊಂಡು ಹರ್ಷ

ಪುತ್ತೂರು ಕಟ್ಟಡ ದುರಂತದಲ್ಲಿ ಮೃತದೇಹದ ಮುಂದೆ ತೆಗೆದ ಸೆಲ್ಫಿ ಇದೀಗ ವೈರಲ್ ► ಯುವಕನ ನಡೆಗೆ ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಆಕ್ರೋಶ Read More »

ಕರಾವಳಿ

ಬುಡೋಳಿ: ಸರಣಿ ಅಪಘಾತ ► ದ್ವಿಚಕ್ರ ವಾಹನ ಸವಾರ ಗಂಭೀರ

(ನ್ಯೂಸ್ ಕಡಬ) newskadaba.com ವಿಟ್ಲ, ಎ.25. ಮಾರುತಿ ಇಕೋ ಕಾರೊಂದು ಎರಡು ಅಕ್ಟಿವಾಗಳಿಗೆ ಢಿಕ್ಕಿ ಹಿಡೆದ ಪರಿಣಾಮ ಸವಾರನೋರ್ವ ಗಂಭೀರ ಗಾಯಗೊಂಡ ಘಟನೆ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಬುಡೋಳಿ ಎಂಬಲ್ಲಿ ಬುಧವಾರ ಸಂಜೆ ಸಂಭವಿಸಿದೆ. ಉಪ್ಪಿನಂಗಡಿಯಿಂದ ಮಂಗಳೂರಿಗೆ ತೆರಳುತ್ತಿದ್ದ ಮಾರುತಿ ಈಕೋ ಕಾರು ಚಾಲಕನ ನಿಯಂತ್ರಣ ತಪ್ಪಿ ವಿರುದ್ಧ ದಿಕ್ಕಿನಲ್ಲಿ ಸಾಗುತ್ತಿದ್ದ ಎರಡು ದ್ವಿಚಕ್ರ ವಾಹನಗಳಿಗೆ ಢಿಕ್ಕಿ ಹೊಡೆದಿದೆ. ಘಟನೆಯಲ್ಲಿ ಆಕ್ಟಿವಾ ಸವಾರ ಬುಡೋಳಿ ನಿವಾಸಿ ಸುಂದರ ಎಂಬವರು ಗಂಭೀರವಾಗಿ ಗಾಯಗೊಂಡಿದ್ದು, ಮಂಗಳೂರಿನ ಇಂಡಿಯಾನಾ

ಬುಡೋಳಿ: ಸರಣಿ ಅಪಘಾತ ► ದ್ವಿಚಕ್ರ ವಾಹನ ಸವಾರ ಗಂಭೀರ Read More »

ಕರಾವಳಿ

ಉಪ್ಪಿನಂಗಡಿ: ಬೈಕಿಗೆ ಲಾರಿ ಢಿಕ್ಕಿ ► ಸವಾರ ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಎ.25. ಲಾರಿಯೊಂದು ಬೈಕಿಗೆ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಉಪ್ಪಿನಂಗಡಿ – ಗುರುವಾಯನಕೆರೆ ರಾಜ್ಯ ಹೆದ್ದಾರಿಯ ಪೆದಮಲೆ ಎಂಬಲ್ಲಿ ಬುಧವಾರದಂದು ನಡೆದಿದೆ. ಮೃತ ಬೈಕ್ ಸವಾರನನ್ನು ಉಪ್ಪಿನಂಗಡಿ ಪಿಲಿಗೂಡಿನ ಮೂಡಬೈಲ್‌ ನಿವಾಸಿ ಅಶೋಕ್ ಪೂಜಾರಿ(29) ಎಂದು ಗುರುತಿಸಲಾಗಿದೆ. ಇವರು ಉಪ್ಪಿನಂಗಡಿಯಿಂದ ಬೆಳ್ತಂಗಡಿ ಕಡೆಗೆ ತನ್ನ ಬೈಕ್‌ನಲ್ಲಿ ತೆರಳುತ್ತಿದ್ದ ಸಂದರ್ಭ ಎದುರುಗಡೆಯಿಂದ ಬಂದ ಲಾರಿ ಬೈಕ್‌ಗೆ ಡಿಕ್ಕಿ ಹೊಡೆದು ಈ ದುರ್ಘಟನೆ ಸಂಭವಿಸಿದೆ. ಅಶೋಕ್ ಪೂಜಾರಿಗೆ ಎಪ್ರಿಲ್

ಉಪ್ಪಿನಂಗಡಿ: ಬೈಕಿಗೆ ಲಾರಿ ಢಿಕ್ಕಿ ► ಸವಾರ ಸ್ಥಳದಲ್ಲೇ ಮೃತ್ಯು Read More »

ಕರಾವಳಿ
Scroll to Top