ಕರಾವಳಿ

ಬಹಳ ವಿಜೃಂಭಣೆಯಿಂದ ನಡೆದ ಕಡಬದ ಆಯನ ► ಕಡಂಬಳಿತ್ತಾಯ ದೈವದ ನೇಮೋತ್ಸವ, ಶ್ರೀಪುರುಷ ದೈವದ ಪೇಟೆ ಸವಾರಿ

(ನ್ಯೂಸ್ ಕಡಬ) newskadaba.com ಕಡಬ, ಎ.22. ಕಡಬದ ಆಯನದಲ್ಲಿ ರಾಜ ದೈವಗಳೆಂದೇ ಪ್ರಸಿದ್ದಿ ಪಡೆದ ಶ್ರೀ ಕಡಂಬಳಿತ್ತಾಯ ಸ್ವಾಮಿ ಮತ್ತು ಶ್ರೀ ಪುರುಷ ದೈವದ ಹಾಗೂ ಇತರ ದೈವಗಳ ನೇಮೋತ್ಸವವು ಶನಿವಾರದಂದು ಬಹಳ ವಿಜೃಂಭಣೆಯಿಂದ ಜರುಗಿತು. ಬೆಳಿಗ್ಗೆ ಶ್ರೀಕಡಂಬಳಿತ್ತಾಯ ದೈವದ ಭಂಡಾರ ತೆಗೆದು ಮಾಡದಿಂದ ಪ್ರಧಾನ ಆಡಳಿತದಾರ ರಾಜೇಂದ್ರ ಹೆಗ್ಡೆಯವರ ನೇತೃತ್ವದಲ್ಲಿ ಸಾವಿರಾರು ಭಕ್ತಾದಿಗಳೊಂದಿಗೆ ಮುಡಿಯಾಗುವ ಮಜಲಿಗೆ ಹೋಗಿ ಅಲ್ಲಿ ಶ್ರೀಕಡಂಬಳಿತ್ತಾಯ ಸ್ವಾಮಿ ಮುಡಿಯಾಗುವುದರೊಂದಿಗೆ ಕಡಬ ಪೇಟೆಯಲ್ಲಿ ದೈವದ ಕಟ್ಟೆಯಲ್ಲಿ ಕಟ್ಟೆ ಪೂಜೆ ನಡೆದು ಬಳಿಕ ರಾಜ […]

ಬಹಳ ವಿಜೃಂಭಣೆಯಿಂದ ನಡೆದ ಕಡಬದ ಆಯನ ► ಕಡಂಬಳಿತ್ತಾಯ ದೈವದ ನೇಮೋತ್ಸವ, ಶ್ರೀಪುರುಷ ದೈವದ ಪೇಟೆ ಸವಾರಿ Read More »

ಕರಾವಳಿ

ಮಾರ್ ಇವಾನಿಯೋಸ್ ಕಾಲೇಜು: ಪೋಷಕ-ಶಿಕ್ಷಕ ಸಂಘದ ಸಭೆ

(ನ್ಯೂಸ್ ಕಡಬ) newskadaba.com ಕುಂತೂರು, ಎ.21. ಇಲ್ಲಿನ ಮಾರ್ ಇವಾನಿಯೋಸ್ ಕಾಲೇಜಿನ ಪದವಿ ವಿಭಾಗದ ವಿದ್ಯಾರ್ಥಿಗಳ ಪೋಷಕ- ಶಿಕ್ಷಕ ಸಂಘದ ಸಭೆಯು ಇತ್ತೀಚಿಗೆ ನಡೆಯಿತು. ಕಾಲೇಜಿನ ಪ್ರಾಚಾರ್ಯ ವಂ|ಫಾ| ಫಿಲಿಪ್ ನೆಲ್ಲಿವಿಳ ಅವರು ಸಭೆಯ ಅಧ್ಯಕ್ಷೆತೆಯನ್ನು ವಹಿಸಿ ವಿದ್ಯಾರ್ಥಿಗಳ ಶೈಕ್ಷಣಿಕ ನಿರ್ವಹಣೆಯನ್ನು ಉತ್ತಮ ಪಡಿಸಿ ಮುಂಬರುವ ಅಂತಿಮ ಪರೀಕ್ಷೆಗೆ ಸಿದ್ಧಪಡಿಸುವಲ್ಲಿ ಸೂಕ್ತ ಸಲಹೆ ಹಾಗೂ ಮಾರ್ಗದರ್ಶನಗಳನ್ನು ಪೋಷಕರಿಗೆ ನೀಡಿದರು. ವೇದಿಕೆಯಲ್ಲಿ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ, ಉಪನ್ಯಾಸಕ ಶ್ರೀ. ಕೆ. ರಘುನಂದನ್ ಅವರು ಉಪಸ್ಥಿತರಿದ್ದು ಸ್ವಾಗತಿಸಿದರು. ಉಪನ್ಯಾಸಕಿಯಾದ ಶ್ರೀಮತಿ. ನೆಸಿಯಾ ಅವರು ವಂದಿಸಿ,

ಮಾರ್ ಇವಾನಿಯೋಸ್ ಕಾಲೇಜು: ಪೋಷಕ-ಶಿಕ್ಷಕ ಸಂಘದ ಸಭೆ Read More »

ಕರಾವಳಿ

ಲೋಕಾಯುಕ್ತರಿಂದ ಸಾರ್ವಜನಿಕರ ದೂರು ಸ್ವೀಕಾರ

(ನ್ಯೂಸ್ ಕಡಬ) newskadaba.com ಮಂಗಳೂರು, ಎ.21.  ಮಂಗಳೂರು ಲೋಕಾಯುಕ್ತ ವಿಭಾಗದ ಪೊಲೀಸ್ ಅಧೀಕ್ಷಕರು, ಪೊಲೀಸ್ ಉಪಾಧೀಕ್ಷಕರು ಹಾಗೂ ಪೊಲೀಸ್ ನಿರೀಕ್ಷಕರು  ವಿವಿಧ ದಿನ ವಿವಿಧ ಸ್ಥಳಗಳಿಗೆ ಭೇಟಿ ನೀಡಿ, ಕರ್ನಾಟಕ ಲೋಕಾಯುಕ್ತ ಕಾಯಿದೆ ಅಡಿ ದೂರು ಅರ್ಜಿಯ ನಮೂನೆಗಳನ್ನು ವಿತರಿಸಲಾಗುವುದು. ಭರ್ತಿ ಮಾಡಿ, ನೋಟರಿಯಿಂದ ಅಫಿದಾವಿತ್ ಮಾಡಿಸಿದ ಸದ್ರಿ ದೂರು ಅರ್ಜಿಗಳನ್ನು ಸ್ವೀಕರಿಸಲಾಗುವುದು. ಸರ್ಕಾರಿ ಕಛೇರಿಗಳಲ್ಲಿ ಅಧಿಕೃತ ಕೆಲಸಗಳಲ್ಲಿ ವಿಳಂಬ ಹಾಗೂ  ಇನ್ನಿತರೇ ತೊಂದರೆ ನೀಡುತ್ತಿರುವ ಸರಕಾರಿ ಅಧಿಕಾರಿ/ನೌಕರರ ವಿರುದ್ಧ ಸಾರ್ವಜನಿಕರು ದೂರುಗಳನ್ನು ನಿಗಧಿತ ಪ್ರಪತ್ರದಲ್ಲಿ ನೀಡಬಹುದಾಗಿದೆ. ಸಾರ್ವಜನಿಕರು

ಲೋಕಾಯುಕ್ತರಿಂದ ಸಾರ್ವಜನಿಕರ ದೂರು ಸ್ವೀಕಾರ Read More »

ಕರಾವಳಿ

ಆಲಂಕಾರು: ಭಾರಿ ಗಾಳಿ ಮಳೆ ► ಮನೆಗೆ ಮರ ಬಿದ್ದು ಅಪಾರ ಹಾನಿ

(ನ್ಯೂಸ್ ಕಡಬ) newskadaba.com ಆಲಂಕಾರು, ಎ.21. ಸಿಡಿಲು ಮಳೆಯೊಂದಿಗೆ ಬೀಸಿದ ಗಾಳಿಗೆ ಮರವೊಂದು ಮನೆ ಮೇಲೆ ಬಿದ್ದು ಅಪಾರ ಪ್ರಮಾಣದ ನಷ್ಟ ಸಂಭವಿಸಿದೆ. ಆಲಂಕಾರು ಗ್ರಾಮದ ಕೇಪುಳು ಅಣ್ಣಿ ಪುಜಾರಿಯವರ ಮನೆಯ ಮೇಲೆ ಬೃಹತ್ ಗಾತ್ರದ ಮರ ತುಂಡಾಗಿ ಬಿದ್ದ ಪರಿಣಾಮ 600ಕ್ಕೂ ಅಧಿಕ ಹಂಚು, ಮಾಡಿನ ಪಕ್ಕಾಸು, ನೀರಿನ ಟ್ಯಾಂಕ್ ಸಂಪುರ್ಣ ನಾಶವಾಗಿದೆ. ಮರ ಬಿದ್ದ ಪರಿಣಾಮ ಮನೆಯ ಗೋಡೆಯು ಸಹ ಬಿರುಕು ಬಿಟ್ಟಿದೆ. ಘಟನಾ ಸ್ಥಳಕ್ಕೆ ಆಲಂಕಾರು ಗ್ರಾಮಕರಣಿಕ ರಮೇಶ್, ಸಹಾಯಕ ವಿಶ್ವನಾಥ ಗ್ರಾಮ ಪಂಚಾಯತ್ ಸದಸ್ಯ

ಆಲಂಕಾರು: ಭಾರಿ ಗಾಳಿ ಮಳೆ ► ಮನೆಗೆ ಮರ ಬಿದ್ದು ಅಪಾರ ಹಾನಿ Read More »

ಕರಾವಳಿ

ಮಾರ್ ಇವಾನಿಯೋಸ್ ಬಿ.ಎಡ್ ಕಾಲೇಜಿಗೆ ಶೇ. 100 ಫಲಿತಾಂಶ

(ನ್ಯೂಸ್ ಕಡಬ) newskadaba.com ಕುಂತೂರು, ಎ.21.  ಮಂಗಳೂರು ವಿಶ್ವವಿದ್ಯಾನಿಲಯ ನಡೆಸಿದ 2017 ನೇ ಸಾಲಿನ ಬಿ.ಎಡ್ ದ್ವಿತೀಯ ಸೆಮಿಸ್ಟರ್ ಪರೀಕ್ಷೆಯಲ್ಲಿ ಮಾರ್ ಇವಾನಿಯೋಸ್ ಬಿ.ಎಡ್. ಕಾಲೇಜಿನ ಒಟ್ಟು 20 ವಿದ್ಯಾರ್ಥಿಗಳು ಹಾಜರಾಗಿದ್ದು 18 ವಿದ್ಯಾರ್ಥಿಗಳು ಉನ್ನತ ಶ್ರೇಣಿಯಲ್ಲಿ 02 ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ. ಚತುರ್ಥ ಸೆಮಿಸ್ಟರ್ ಪರೀಕ್ಷೆಗೆ ಒಟ್ಟು 24 ವಿದ್ಯಾರ್ಥಿಗಳು ಹಾಜರಾಗಿದ್ದು ಎಲ್ಲರೂ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿ ಶೇ. 100 ಫಲಿತಾಂಶ ದಾಖಲಾಗಿದೆ ಎಂದು ಕಾಲೇಜಿನ ಪ್ರಕಟಣೆ ತಿಳಿಸಿದೆ.

ಮಾರ್ ಇವಾನಿಯೋಸ್ ಬಿ.ಎಡ್ ಕಾಲೇಜಿಗೆ ಶೇ. 100 ಫಲಿತಾಂಶ Read More »

ಕರಾವಳಿ

ಅತ್ಯಾಚಾರಿಗಳನ್ನು ಗಲ್ಲಿಗೇರಿಸಿ ಸಂತ್ರಸ್ತರಿಗೆ ನ್ಯಾಯ ಕೊಡಿ – ಹಾಜಿ ಸೈಯದ್ ಮೀರಾ ಸಾಹೇಬ್

(ನ್ಯೂಸ್ ಕಡಬ) newskadaba.com ಕಡಬ, ಎ.21. ಜಮ್ಮು ಕಾಶ್ಮೀರದಲ್ಲಿ 8 ವರ್ಷದ ಅಪ್ರಾಪ್ತ ಬಾಲಕಿಯ ಅತ್ಯಾಚಾರಗೈದು ಕೊಲೆ ಮಾಡಿರುವ ಕ್ರೂರಿಗಳನ್ನು ಕೂಡಲೆ ಗಲ್ಲಿಗೇರಿಸುವ ಮುಖಾಂತರ ಮಹಿಳೆಯರು ಹಾಗು ಹೆಣ್ಣುಮಕ್ಕಳನ್ನು ನೆಮ್ಮದಿಯಿಂದ ಬದುಕಲು ಬಿಡಬೇಕೆಂದು ಕರ್ನಾಟಕ ರಾಜ್ಯ ಮುಸ್ಲಿಂ ಕೌನ್ಸಿಲ್ನ ಪ್ರಧಾನ ಕಾರ್ಯದರ್ಶಿ ಹಾಜಿ ಸೈಯದ್ ಮೀರಾ ಸಾಹೇಬ್ ಒತ್ತಾಯಿಸಿದ್ದಾರೆ. ಅವರು ಅಪ್ರಾಪ್ತೆ ಆಸೀಫಾಳ ಅತ್ಯಾಚಾರ ಮಾಡಿ ಕೊಲೆಗೈದ ಕ್ರೂರ ಕೃತ್ಯವನ್ನು ಖಂಡಿಸಿ ಕಡಬ ಕೇಂದ್ರ ಜುಮ್ಮಾ ಮಸೀದಿಯ ವಠಾರದಲ್ಲಿ ಎ.20ರಂದು ಹಮ್ಮಿಕೊಂಡಿದ್ದ ಶಾಂತ ಪ್ರತಿಭಟನೆಯಲ್ಲಿ ಮಾತನಾಡಿ ದೇಶಕ್ಕೆ ಸ್ವಾತಂತ್ರ್ಯ

ಅತ್ಯಾಚಾರಿಗಳನ್ನು ಗಲ್ಲಿಗೇರಿಸಿ ಸಂತ್ರಸ್ತರಿಗೆ ನ್ಯಾಯ ಕೊಡಿ – ಹಾಜಿ ಸೈಯದ್ ಮೀರಾ ಸಾಹೇಬ್ Read More »

ಕರಾವಳಿ

ಹೊಸ್ಮಠ ಸೇತುವೆ ಬಳಿ ವಾಹನ ತೊಳೆದು ನೀರು ಕಲುಷಿತಗೊಳಿಸುತ್ತಿರುವವರ ವಿರುದ್ಧ ಕ್ರಮಕ್ಕೆ ಆಗ್ರಹ

(ನ್ಯೂಸ್ ಕಡಬ) newskadaba.com ಕಡಬ, ಎ.21. ಇಲ್ಲಿನ ಹೊಸ್ಮಠ ಸೇತುವೆಯ ಬಳಿ ಗುಂಡ್ಯ ಹೊಳೆಗೆ ವಾಹನಗಳನ್ನು ಇಳಿಸಿ ತೊಳೆಯುತ್ತಿರುವುದರಿಂದಾಗಿ ನೀರು ಕಲುಷಿತಗೊಂಡು ಹೊಳೆಯ ನೀರನ್ನು ಉಪಯೋಗಿಸುತ್ತಿರುವವರಿಗೆ ತೊಂದರೆಯಾಗುತ್ತಿರುವುದರಿಂದ ಸಂಬಂಧ ಪಟ್ಟವರು ಈ ಕುರಿತು ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಸ್ಥಳೀಯರು ಆಗ್ರಹಿಸಿದ್ದಾರೆ. ಬಿರು ಬೇಸಗೆಯಾಗಿರುವುದರಿಂದ ಹೊಳೆಯಲ್ಲಿ ನೀರಿನ ಹರಿವು ಕೂಡ ಕಡಿಮೆಯಾಗಿದೆ. ಹೊಳೆಯ ಬದಿಯ ನಿವಾಸಿಗಳು ತಮ್ಮ ಬಾವಿಗಳಲ್ಲಿ ನೀರಿನ ಕೊರತೆ ಎದುರಾಗಿರುವುದರಿಂದ ಕುಡಿಯುವುದಕ್ಕಾಗಿಯೂ ಹೊಳೆಯ ನೀರನ್ನು ಉಪಯೋಗಿಸುತ್ತಿದ್ದಾರೆ. ಅಡುಗೆಗೆ, ಜಾನುವಾರುಗಳಿಗೆ ಹಾಗೂ ಬಟ್ಟೆ ಒಗೆಯುವುದು ಇತ್ಯಾದಿಗಳಿಗೂ ಹೊಳೆಯ ನೀರನ್ನೇ

ಹೊಸ್ಮಠ ಸೇತುವೆ ಬಳಿ ವಾಹನ ತೊಳೆದು ನೀರು ಕಲುಷಿತಗೊಳಿಸುತ್ತಿರುವವರ ವಿರುದ್ಧ ಕ್ರಮಕ್ಕೆ ಆಗ್ರಹ Read More »

ಕರಾವಳಿ

ಪುತ್ತೂರು: ಲಾರಿ – ಕಾರು ಢಿಕ್ಕಿ ► ಐವರು ಗಂಭೀರ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಎ.21. ಚಾಲಕನ ನಿಯಂತ್ರಣ ತಪ್ಪಿದ ಲಾರಿಯೊಂದು ಕಾರಿಗೆ ಢಿಕ್ಕಿ ಹೊಡೆದ ಪರಿಣಾಮ ಐವರು ಗಂಭೀರ ಗಾಯಗೊಂಡ ಘಟನೆ ವಿಟ್ಲ – ಪುತ್ತೂರು ರಸ್ತೆಯ ಚಂದಳಿಕೆ ಎಂಬಲ್ಲಿ ಶುಕ್ರವಾರ ಸಂಜೆ ನಡೆದಿದೆ. ಕುಂಬಳೆಯ ಕೆದೂರು ಸಮೀಪದ ಪಾದೆಕಲ್ಲು ನಿವಾಸಿ ಸದಾಶಿವ ಶೆಟ್ಟಿ ಎಂಬವರು ತನ್ನ ಕುಟುಂಬ ಸಮೇತ ಪುತ್ತೂರಿಗೆ ಆಗಮಿಸುತ್ತಿದ್ದ ವೇಳೆ ವಿಟ್ಲ ಸಮೀಪದ ಚಂದಳಿಕೆ ತಿರುವಿನಲ್ಲಿ ಪುತ್ತೂರು ಕಡೆಯಿಂದ ಬರುತ್ತಿದ್ದ ಕಲ್ಲು ಸಾಗಾಟದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಇವರಿದ್ದ ಕಾರಿಗೆ

ಪುತ್ತೂರು: ಲಾರಿ – ಕಾರು ಢಿಕ್ಕಿ ► ಐವರು ಗಂಭೀರ Read More »

ಕರಾವಳಿ

ಎಂಟರ ಹರೆಯದ ಬಾಲಕಿ ಆಸಿಫಾಳ ಹತ್ಯೆ ಪ್ರಕರಣ ► ಕಡಬ ವಲಯ ಎಸ್ಕೆಎಸ್ಸೆಸ್ಸೆಫ್ ವತಿಯಿಂದ ತಾಲೂಕು ಕಛೇರಿ ಮುಂಭಾಗದಲ್ಲಿ ಪ್ರತಿಭಟನೆ

(ನ್ಯೂಸ್ ಕಡಬ) newskadaba.com ಕಡಬ, ಎ.20. ಇತ್ತೀಚೆಗೆ ಜಮ್ಮು ಕಾಶ್ಮೀರದ ಕಥುವಾದಲ್ಲಿ ನಡೆದ ಎಂಟರ ಬಾಲೆ ಆಸಿಫಾಳ ಅತ್ಯಾಚಾರ ಹಾಗೂ ಕೊಲೆ ಪ್ರಕರಣವನ್ನು ಖಂಡಿಸಿ ಎಸ್ಕೆಎಸ್ಸೆಸ್ಸೆಫ್‌ ಕಡಬ ವಲಯದ ವತಿಯಿಂದ ಕಡಬ ತಹಶೀಲ್ದಾರ್ ಕಛೇರಿಯ ಮುಂಭಾಗದಲ್ಲಿ ಪ್ರತಿಭಟನೆಯು ಶುಕ್ರವಾರ ಅಪರಾಹ್ನ ನಡೆಯಿತು. ಪ್ರತಿಭಟನಾಕಾರರನ್ನು ಉದ್ದೇಶಿಸಿ ಕೇರಳದ ಜಾಮಿಯಾ ನೂರಿಯಾ ಅರೇಬಿಯಾ ವಿದ್ಯಾರ್ಥಿ ನಹೀಮ್ ಮುಕ್ವೆ ಮಾತನಾಡಿ, ದೇಶದಲ್ಲಿ ಅಮಾಯಕ ಹೆಣ್ಣುಮಕ್ಕಳು ದಿನನಿತ್ಯ ಲೈಂಗಿಕ ಶೋಷಣೆಗೊಳಗಾಗುತ್ತಿದ್ದು, ಇವುಗಳಿಗೆ ಕಡಿವಾಣ ಹಾಕಬೇಕಿದೆ. ಹೆಣ್ಣುಮಕ್ಕಳನ್ನು ರಕ್ಷಿಸಬೇಕಾದ ಸರಕಾರವೇ ಆರೋಪಿಗಳಿಗೆ ರಕ್ಷಣೆಯನ್ನು ನೀಡುತ್ತಿದೆ.

ಎಂಟರ ಹರೆಯದ ಬಾಲಕಿ ಆಸಿಫಾಳ ಹತ್ಯೆ ಪ್ರಕರಣ ► ಕಡಬ ವಲಯ ಎಸ್ಕೆಎಸ್ಸೆಸ್ಸೆಫ್ ವತಿಯಿಂದ ತಾಲೂಕು ಕಛೇರಿ ಮುಂಭಾಗದಲ್ಲಿ ಪ್ರತಿಭಟನೆ Read More »

ಕರಾವಳಿ

ಸುಳ್ಯ ವಿಧಾನಸಭಾ ಕ್ಷೇತ್ರದ ಎಸ್ಡಿಪಿಐ ಅಭ್ಯರ್ಥಿಯಾಗಿ ಆನಂದ್ ಮಿತ್ತಬೈಲ್ ► ಎಪ್ರಿಲ್ 24 ರಂದು ನಾಮಪತ್ರ ಸಲ್ಲಿಕೆ

(ನ್ಯೂಸ್ ಕಡಬ) newskadaba.com ಸುಳ್ಯ, ಎ.20. ಜಿಲ್ಲೆಯಲ್ಲಿ ವಿಧಾನಸಭಾ ಚುನಾವಣೆಯ ಕಾವು ರಂಗೇರಿರುವಂತೆಯೇ ಸುಳ್ಯ ಕ್ಷೇತ್ರದ ಎಸ್ಡಿಪಿಐ ಅಭ್ಯರ್ಥಿಯಾಗಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾದ ದಕ್ಷಿಣ ಕನ್ನಡ ಜಿಲ್ಲಾ ಉಪಾಧ್ಯಕ್ಷ, ದಲಿತ ಮುಖಂಡ ಆನಂದ ಮಿತ್ತಬೈಲ್ ಆಯ್ಕೆಯಾಗಿದ್ದಾರೆ. ಸುಳ್ಯ ಮೀಸಲು ಕ್ಷೇತ್ರದಲ್ಲಿ ಎಸ್ಡಿಪಿಐ ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸುವುದಿಲ್ಲ ಎಂಬ ಮಾತು ಕೇಳಿ ಬಂದಿತ್ತಾದರೂ ಇದೀಗ ಜಿಲ್ಲಾ ಉಪಾಧ್ಯಕ್ಷರನ್ನೇ ಅಭ್ಯರ್ಥಿಯನ್ನಾಗಿ ಘೋಷಿಸಿ ಜಾತ್ಯಾತೀತ ಪಕ್ಷಗಳಿಗೆ ಇನ್ನಿತರ ಪಕ್ಷಗಳಿಗೆ ಸಡ್ಡು ಹೊಡೆದಿದೆ. ಎಪ್ರಿಲ್ 24 ಮಂಗಳವಾರದಂದು ಪೂರ್ವಾಹ್ನ 10.30

ಸುಳ್ಯ ವಿಧಾನಸಭಾ ಕ್ಷೇತ್ರದ ಎಸ್ಡಿಪಿಐ ಅಭ್ಯರ್ಥಿಯಾಗಿ ಆನಂದ್ ಮಿತ್ತಬೈಲ್ ► ಎಪ್ರಿಲ್ 24 ರಂದು ನಾಮಪತ್ರ ಸಲ್ಲಿಕೆ Read More »

ಕರಾವಳಿ
Scroll to Top