ಕರಾವಳಿ

ವೀರಮಂಗಲ: ಮಹಾಲಿಂಗೇಶ್ವರ ದೇವರ ಅವಭೃತ ಸ್ನಾನ

(ನ್ಯೂಸ್ ಕಡಬ) newskadaba.com ನರಿಮೊಗರು, ಎ.19.  ಇತಿಹಾಸ ಪ್ರಸಿದ್ದ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಬ್ರಹ್ಮರಥೋತ್ಸವದ ಮಾರನೆ ದಿನ ಎ.18ರಂದು ಸಂಜೆ ಶ್ರೀದೇವರು ಅವಭೃತ ಸ್ನಾನಕ್ಕೆ ಹೊರಟು ಎ.19ರಂದು ಮುಂಜಾನೆ ಹೊತ್ತಿಗೆ ವೀರಮಂಗಲಕ್ಕೆ ತಲುಪಿ ಅಲ್ಲಿ ಕುಮಾರಧಾರ ಹೊಳೆಯಲ್ಲಿ ಧಾರ್ಮಿಕ ಸಂಪ್ರದಾಯದಂತೆ ಶ್ರೀ ದೇವರ ಅವಭೃತ ಸ್ನಾನ ನಡೆಯಿತು. ಕುಂಟಾರು ಶ್ರೀಧರ್ ತಂತ್ರಿಗಳ ನೇತೃತ್ವದಲ್ಲಿ ಶ್ರೀ ದೇವರ ಬ್ರಹ್ಮವಾಹಕರಾದ ಪ್ರೀತಂ ಪುತ್ತೂರಾಯ, ಗೋಪಾಲಕೃಷ್ಣ ಅಡಿಗ, ಕೇಶವ ಅಡಿಗ ಮತ್ತು ದೇವಳದ ಪ್ರಧಾನ ಅರ್ಚಕರಾದ ವಸಂತ ಕುಮಾರ್ ಕೆದಿಲಾಯ, ಇತರ ಅರ್ಚಕರಾದ […]

ವೀರಮಂಗಲ: ಮಹಾಲಿಂಗೇಶ್ವರ ದೇವರ ಅವಭೃತ ಸ್ನಾನ Read More »

ಕರಾವಳಿ

ಕುಂತೂರು ಬಳಿ ಕಾರುಗಳ ಮುಖಾಮುಖಿ ಡಿಕ್ಕಿ ► ತಾಯಿ, ಮಗುವಿಗೆ ಏಟು

(ನ್ಯೂಸ್ ಕಡಬ) newskadaba.com ಪೆರಾಬೆ, ಎ.19. ಪೆರಾಬೆ ಗ್ರಾಮದ ಕುಂತೂರು ಎಂಬಲ್ಲಿ ಎರಡು ಕಾರುಗಳು ಪರಸ್ಪರ ಡಿಕ್ಕಿಯಾಗಿದ್ದು, ಘಟನೆಯಲ್ಲಿ ತಾಯಿ, ಮಗುವಿಗೆ ಗಾಯವಾಗಿದೆ. ಕುಂತೂರಿನ ಏರ್ಮಾಳದಲ್ಲಿ ಈ ಘಟನೆಯು ಸಂಭವಿಸಿದ್ದು, ಕಡಬದಿಂದ ಉಪ್ಪಿನಂಗಡಿಗೆ ತೆರಳುತಿದ್ದ ನ್ಯಾನೋ ಹಾಗು ಉಪ್ಪಿನಂಗಡಿಯಿಂದ ಕಡಬಕ್ಕೆ ಬರುತ್ತಿದ್ದ ವ್ಯಾಗನರ್ ಕಾರುಗಳ ನಡುವೆ ಉಪ್ಪಿನಂಗಡಿ-ಕಡಬ ರಾಜ್ಯ ಹೆದ್ದಾರಿಯಲ್ಲಿ ಡಿಕ್ಕಿ ಸಂಭವಿಸಿದೆ. ಗಾಯಾಳುಗಳಾದ ತಾಯಿ, ಮಗುವು ನ್ಯಾನೋ ಕಾರಿನಲ್ಲಿ ಪ್ರಯಾಣ ಮಾಡುತ್ತಿದ್ದರು, ಇವರನ್ನು ಚಿಕಿತ್ಸೆಗಾಗಿ ತಾಲೂಕಿನ ಖಾಸಗಿ ಅಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯ ಕುರಿತು ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ

ಕುಂತೂರು ಬಳಿ ಕಾರುಗಳ ಮುಖಾಮುಖಿ ಡಿಕ್ಕಿ ► ತಾಯಿ, ಮಗುವಿಗೆ ಏಟು Read More »

ಕರಾವಳಿ

ಚುನಾವಣೆ: ದ.ಕ.- ಕಾಸರಗೋಡು ಜಿಲ್ಲಾಡಳಿತ ಸಭೆ

(ನ್ಯೂಸ್ ಕಡಬ) newskadaba.com ಮಂಗಳೂರು ಎ.19. ರಾಜ್ಯ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಹಾಗೂ ಕಾಸರಗೋಡು ಜಿಲ್ಲಾಡಳಿತ ಸಭೆ ಬುಧವಾರ ಮಂಗಳೂರಲ್ಲಿ ನಡೆಯಿತು. ಮಂಗಳೂರು ವಿಶ್ವವಿದ್ಯಾನಿಲಯದ ಅತಿಥಿ ಗೃಹದಲ್ಲಿ ನಡೆದ ಈ ಸಭೆಯಲ್ಲಿ ಕಾಸರಗೋಡು ಜಿಲ್ಲಾಧಿಕಾರಿ ಜೀವನ್ ಬಾಬು ಸೇರಿದಂತೆ ಅಲ್ಲಿನ ಉನ್ನತ ಅಧಿಕಾರಿಗಳು ಭಾಗವಹಿಸಿದ್ದರು. ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ. ಸಸಿಕಾಂತ್ ಸೆಂಥಿಲ್ ಮಾತನಾಡಿ ಚುನಾವಣಾ ಸಂದರ್ಭದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವುದು ಹಾಗೂ ಹಣ ಮತ್ತು ಸರಕು ಸಾಗಾಣಿಕೆಯ ವೇಳೆ ಗಡಿ ಪ್ರದೇಶಗಳಲ್ಲಿ ನಿಗಾ ಇಡುವುದು ಅಗತ್ಯವಾಗಿದೆ.

ಚುನಾವಣೆ: ದ.ಕ.- ಕಾಸರಗೋಡು ಜಿಲ್ಲಾಡಳಿತ ಸಭೆ Read More »

ಕರಾವಳಿ

ವಿಧಾನಸಭಾ ಚುನಾವಣೆ: ವೆಚ್ಚ ವೀಕ್ಷಕರ ನೇಮಕಾತಿ

(ನ್ಯೂಸ್ ಕಡಬ) newskadaba.com ಮಂಗಳೂರು ಎ.19. ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರಕ್ಕೆ ಚುನಾವಣಾ ಖರ್ಚು ವೆಚ್ಚ ವೀಕ್ಷಕರಾಗಿ ವಿನೋದ್ ಶರ್ಮಾ ಅವರು ಆಗಮಿಸಿದ್ದಾರೆ ಇವರು ಸಕ್ರ್ಯುಟ್ ಹೌಸ್‍ನಲ್ಲಿ ತನ್ನ ವಾಸ್ತವ್ಯ ಹೂಡಿದ್ದಾರೆ. ಸಾರ್ವಜನಿಕರು ಚುನಾವಣಾ ಖರ್ಚುವೆಚ್ಚಗಳಿಗೆ ಸಂಬಂಧಿಸಿದ ಮಾಹಿತಿ ಹಾಗೂ ಅಹವಾಲುಗಳನ್ನು ನೀಡಬಹುದಾಗಿದ್ದು, ವೀಕ್ಷಕರ ಮೊಬೈಲ್ ಸಂಖ್ಯೆ 8277807209 ಸಂಪರ್ಕಿಸಬಹುದಾಗಿದೆ ಎಂದು ಮಂಗಳೂರು ದಕ್ಷಿಣ ಚುನಾವಣಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

ವಿಧಾನಸಭಾ ಚುನಾವಣೆ: ವೆಚ್ಚ ವೀಕ್ಷಕರ ನೇಮಕಾತಿ Read More »

ಕರಾವಳಿ

ಸಿಇಟಿ ಪರೀಕ್ಷೆ ► ಇಲ್ಲಿದೆ ವಿದ್ಯಾರ್ಥಿಗಳ ಮೊದಲ ದಿನದ ಹಾಜರಾತಿ

(ನ್ಯೂಸ್ ಕಡಬ) newskadaba.com ಮಂಗಳೂರು ಏ.19.  ಪ್ರಸಕ್ತ ಶೈಕ್ಷಣಿಕ ವರ್ಷದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ)ಯು ಬುಧವಾರ ಆರಂಭಗೊಂಡಿತು. ಬುಧವಾರ ಬೆಳಿಗ್ಗೆ ನಡೆದ ಜೀವಶಾಸ್ತ್ರ ವಿಷಯ ಪರೀಕ್ಷೆಗೆ 9751 ವಿದ್ಯಾರ್ಥಿಗಳು ಹಾಜರಾಗಿದ್ದು, 4668 ಮಂದಿ ಗೈರು ಹಾಜರಾಗಿದ್ದಾರೆ. ಮಧ್ಯಾಹ್ನ ನಡೆದ ಗಣಿತ ಪರೀಕ್ಷೆಗೆ 13984 ಮಂದಿ ಹಾಜರಾಗಿದ್ದು, 435 ಮಂದಿ ಗೈರು ಹಾಜರಾಗಿದ್ದಾರೆ ಎಂದು ಪದವಿಪೂರ್ವ ಶಿಕ್ಷಣ ಇಲಾಖೆ ಪ್ರಕಟಣೆ ತಿಳಿಸಿದೆ. ಇಂದು ಬೆಳಗ್ಗೆ ಭೌತಶಾಸ್ತ್ರ ವಿಷಯದ ಪರೀಕ್ಷೆ ಹಾಗು ಮಧ್ಯಾಹ್ನ  ರಸಾಯನ ಶಾಸ್ತ್ರ ವಿಷಯದ ಪರೀಕ್ಷೆಯು ನಡೆಯಲಿದೆ. ನಾಳೆ  ಹೊರನಾಡು

ಸಿಇಟಿ ಪರೀಕ್ಷೆ ► ಇಲ್ಲಿದೆ ವಿದ್ಯಾರ್ಥಿಗಳ ಮೊದಲ ದಿನದ ಹಾಜರಾತಿ Read More »

ಕರಾವಳಿ

ಜಗದೀಶ್ ಅಮ್ಮುಂಜೆ ಸ್ಮಾರಕ ಪ್ರಶಸ್ತಿಗೆ ಛಾಯಗ್ರಾಹಕ ಕೇಶವ ವಿಟ್ಲ ಆಯ್ಕೆ

(ನ್ಯೂಸ್ ಕಡಬ) newskadaba.com ಮಂಗಳೂರು, ಎ.18. ಕಲಾವಿದ ಜಗದೀಶ್ ಅಮ್ಮುಂಜೆ ಸ್ಮಾರಕ ಆರ್ಟ್ ಗ್ಯಾಲರಿ ವತಿಯಿಂದ ನೀಡಲಾಗುವ ಜಗದೀಶ್ ಅಮ್ಮುಂಜೆ ಸ್ಮಾರಕ ಪ್ರಶಸ್ತಿಗೆ ಖ್ಯಾತ ಛಾಯಾಗ್ರಾಹಕ ಕೇಶವ ವಿಟ್ಲ ಅವರನ್ನು ಆಯ್ಕೆ ಮಾಡಲಾಗಿದೆ. ಪ್ರಶಸ್ತಿಯು ಹತ್ತು ಸಾವಿರ ರೂಪಾಯಿ ನಗದು ಹಾಗೂ ಪ್ರಶಸ್ತಿ ಫಲಕವನ್ನು ಹೊಂದಿದೆ. ಪ್ರಶಸ್ತಿ ಪ್ರಧಾನ ಸಮಾರಂಭವು ಏ.21 ರಂದು ಸಂಜೆ 4.30 ಕ್ಕೆ ಮಂಗಳೂರು ಉರ್ವಾಸ್ಟೋರ್ನ ತುಳು ಭವನದ ಸಿರಿ ಚಾವಡಿಯಲ್ಲಿ ನಡೆಯಲಿದೆ. ಗ್ರಾಮೀಣ ಪ್ರದೇಶವಾದ ವಿಟ್ಲದಲ್ಲಿ 1961 ರಲ್ಲಿ ಜನಿಸಿದ ಕೇಶವ ವಿಟ್ಲ ಅವರು

ಜಗದೀಶ್ ಅಮ್ಮುಂಜೆ ಸ್ಮಾರಕ ಪ್ರಶಸ್ತಿಗೆ ಛಾಯಗ್ರಾಹಕ ಕೇಶವ ವಿಟ್ಲ ಆಯ್ಕೆ Read More »

ಕರಾವಳಿ

ಏ.20 ರಂದು ‘ರಾಜನೋಟ’ ಕೃತಿ ಬಿಡುಗಡೆ

(ನ್ಯೂಸ್ ಕಡಬ) newskadaba.com ಮಂಗಳೂರು ಎ.18. ಪತ್ರಕರ್ತ ಪಿ.ಬಿ.ಹರೀಶ್ ರೈ ಅವರ ಕೃತಿ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ 1952ರಿಂದ 2014 ರವರೆಗಿನ ರಾಜಕೀಯ ಚುನಾವಣಾ ಮಾಹಿತಿ ಕೋಶ ‘ರಾಜನೋಟ ‘ ಇದರ ಬಿಡುಗಡೆ ಸಮಾರಂಭ ಎ.20ರಂದು ಬೆಳಗ್ಗೆ 11ಕ್ಕೆ ಮಂಗಳೂರು ಪ್ರೆಸ್ ಕ್ಲಬ್‌ನಲ್ಲಿ ನಡೆಯಲಿದೆ. ಆಕೃತಿ ಆಶಯ ಪಬ್ಲಿಕೇಷನ್ಸ್ ಪ್ರಕಟಿಸಿರುವ ಈ ಕೃತಿಯನ್ನು ಮೂಡುಬಿದಿರೆಯ ಆಳ್ವಾಸ್ ಎಜ್ಯುಕೇಶನ್ ಫೌಂಡೇಶನ್‌ನ ಅಧ್ಯಕ್ಷ ಡಾ.ಎಂ.ಮೋಹನ ಆಳ್ವ ಬಿಡುಗಡೆ ಮಾಡಲಿದ್ದಾರೆ. ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ ಅಧ್ಯಕ್ಷ  ಡಾ.ಎಂ.ಎನ್.ರಾಜೇಂದ್ರ ಕುಮಾರ್ ಅವರು ಕಾರ್ಯಕ್ರಮ

ಏ.20 ರಂದು ‘ರಾಜನೋಟ’ ಕೃತಿ ಬಿಡುಗಡೆ Read More »

ಕರಾವಳಿ

ಧರ್ಮದ ಹೆಸರಿನಲ್ಲಿ ನಡೆಯುವ ಕೊಲೆಗಳು ► ಸಾಮರಸ್ಯದ ಬೆಳಕು ಚೆಲ್ಲಿದ ‘ಕೆಂಪುಕಾಡು’ ಬೀದಿನಾಟಕ

(ನ್ಯೂಸ್ ಕಡಬ) newskadaba.com ಸವಣೂರು, ಎ.18. ಸಮಾಜದಲ್ಲಿ ಸಾಮರಸ್ಯ ಮೂಡಲು ಮೊದಲು ನಾವು ಮಾನವರಾಗೋಣ ಎಂದು ಪ್ರಧಾನ ಹಿರಿಯ ನ್ಯಾಯಾದೀಶ ಬಸವರಾಜ್ ನುಡಿದರು. ಸವಣೂರು ಶ್ರವಣರಂಗ ಪ್ರತಿಷ್ಠಾನದ ಶಿಕ್ಷಕರ ಬಳಗ ಪುತ್ತೂರು ಜಾತ್ರಾ ಗದ್ದೆಯಲ್ಲಿ ಪುತ್ತೂರು ವಕೀಲರ ಸಂಘದ ವತಿಯಿಂದ ಪ್ರಸ್ತುತ ಪಡಿಸಿದ ಕೆಂಪುಕಾಡು ಎಂಬ ಬೀದಿನಾಟಕವನ್ನು ಚೆಂಡೆ ಬಾರಿಸಿ ಉದ್ಘಾಟಿಸಿ ಮಾತನಾಡಿದರು. ಪ್ರಧಾನ ಸಿವಿಲ್ ನ್ಯಾಯಾದೀಶ ಪ್ರಕಾಶ್ ಪಿ. ಎಂ. ಹಿರಿಯರಾದ ಡೆನ್ನಿಸ್ಸ ಮಸ್ಸರೇನಸ್ ಸೇಡಿಯಾಪು, ವಕೀಲರ ಸಂಘದ ಆದ್ಯಕ್ಷ ಭಾಸ್ಕರ ಕೋಡಿಂಬಾಳ, ಕಾರ್ಯದರ್ಶಿ ಕೃಷ್ಣ ಪ್ರಸಾದ್ ರೈ ಕೋಶಾಕಾರಿ

ಧರ್ಮದ ಹೆಸರಿನಲ್ಲಿ ನಡೆಯುವ ಕೊಲೆಗಳು ► ಸಾಮರಸ್ಯದ ಬೆಳಕು ಚೆಲ್ಲಿದ ‘ಕೆಂಪುಕಾಡು’ ಬೀದಿನಾಟಕ Read More »

ಕರಾವಳಿ

 ಬಂಬಿಲ ಮಹಾದೇವಿ ದೇವಸ್ಥಾನದ ಜಾತ್ರೆಗೆ ಗೊನೆಮುಹೂರ್ತ

(ನ್ಯೂಸ್ ಕಡಬ) newskadaba.com ಸವಣೂರು, ಎ.18.ಪಾಲ್ತಾಡಿ ಗ್ರಾಮದ ಬಂಬಿಲ ಮಹಾದೇವಿ ದೇವಸ್ಥಾನದ ವರ್ಷಾವಧಿ ಜಾತ್ರೆಯ ಪೂರ್ವಭಾವಿಯಾಗಿ  ಗೊನೆಮುಹೂರ್ತ ನೆರವೇರಿಸಲಾಯಿತು. ಈ ಸಂದರ್ಭ ಮಹಾದೇವಿ ದೇವಸ್ಥಾನದ ಆಡಳಿತ ಸಮಿತಿ ಅಧ್ಯಕ್ಷ ,ಗ್ರಾ.ಪಂ.ಉಪಾಧ್ಯಕ್ಷ ಬಿ.ಕೆ.ರವಿಕುಮಾರ್,ಕಾರ್ಯದರ್ಶಿ ರವಿ.ಬಿ,ದೇವಸ್ಥಾನದ ಮೊಕ್ತೇಸರರಾದ ಬಲ್ಲು ಬಂಬಿಲ,ಆಡಳಿತ ಸಮಿತಿ ಸದಸ್ಯರಾದ ಬಾಬು ಬಂಬಿಲ,ಅಣ್ಣಪ್ಪ ,ಕುಮಾರ ಕುಂತೂರು,ಎಲುಂಬ,ಕುಶಾಲಪ್ಪ,ಸುಂದರ ಬಿ.ಯಂ,ಕಿನ್ನಿಯಪ್ಪ,ಹುಕ್ರ ಹಾಗೂ ಕ್ಷೇತ್ರದ ಭಕ್ತಾದಿಗಳು ಉಪಸ್ಥಿತರಿದ್ದರು.

 ಬಂಬಿಲ ಮಹಾದೇವಿ ದೇವಸ್ಥಾನದ ಜಾತ್ರೆಗೆ ಗೊನೆಮುಹೂರ್ತ Read More »

ಕರಾವಳಿ

ಪಾಲ್ತಾಡಿ ಚಾಕೋಟೆತ್ತಡಿ : ಜಾತ್ರೋತ್ಸವಕ್ಕೆ ಗೊನೆಮುಹೂರ್ತ

(ನ್ಯೂಸ್ ಕಡಬ) newskadaba.com ಸವಣೂರು, ಎ.18. ಪಾಲ್ತಾಡಿ ಗ್ರಾಮದ ಚಾಕೋಟೆತ್ತಡಿ ಶ್ರೀಧರ್ಮರಸು ಉಳ್ಳಾಕುಲು ದೈವಸ್ಥಾನದ ವರ್ಷಾವಧಿ ಜಾತ್ರೋತ್ಸವವು ಎ.22ರಿಂದ ಎ.24ರವರೆಗೆ ನಡೆಯಲಿದ್ದು ಇದರ ಪೂರ್ವಭಾವಿಯಾಗಿ ದೈವಸ್ಥಾನದಲ್ಲಿ ಗೊನೆಮುಹೂರ್ತ ನೆರವೇರಸಿಲಾಯಿತು. ಈ ಸಂದರ್ಭ ದೈವಸ್ಥಾನದ ಜೀರ್ಣೋದ್ದಾರ ಸಮಿತಿ ಗೌರವಾಧ್ಯಕ್ಷ ಸಂತೋಷ್ ಕುಮಾರ್ ರೈ ನಳೀಲು,ಅಧ್ಯಕ್ಷ ಸಂಜೀವ ಗೌಡ ಪಾಲ್ತಾಡಿ,ವಿನೋದ್ ರೈ ಪಾಲ್ತಾಡು,ಉಪಾಧ್ಯಕ್ಷರಾದ ರಘುನಾಥ ರೈ ನಡುಕೂಟೇಲು,ಸೀತಾರಾಮ ರೈ ಕಲಾಯಿ, ವಿಠಲ ಶೆಟ್ಟಿ ಪಾಲ್ತಾಡಿ , ,ಪ್ರವೀಣ್ ರೈ ನಡುಕೂಟೇಲು,ಕಾರ್ಯದರ್ಶಿ ವಿನಯಚಂದ್ರ ಕೆಳಗಿನ ಮನೆ,ಕೋಶಾ„ಕಾರಿ ಜಯರಾಮ ಗೌಡ ದೊಡ್ಡಮನೆ, ದೈವಸ್ಥಾನಕ್ಕೆ ಸಂಬಂದಪಟ್ಟ ಆರು ಮನೆಯ

ಪಾಲ್ತಾಡಿ ಚಾಕೋಟೆತ್ತಡಿ : ಜಾತ್ರೋತ್ಸವಕ್ಕೆ ಗೊನೆಮುಹೂರ್ತ Read More »

ಕರಾವಳಿ
Scroll to Top