ಕರಾವಳಿ

ಇಚಿಲಂಪಾಡಿ: ಮನೆಗೆ ನುಗ್ಗಿ ಬೆದರಿಸಿ ನಗ, ನಗದು ದರೋಡೆ ಪ್ರಕರಣ ► ಆರೋಪಿಗಳಿಬ್ಬರ ಬಂಧನ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಎ.12. ನಿವೃತ್ತ ಯೋಧರೋರ್ವರ ಮನೆಗೆ ನುಗ್ಗಿ ದರೋಡೆ ಸೇರಿದಂತೆ ಬೆಳ್ತಂಗಡಿ ಹಾಗೂ ಪುತ್ತೂರು ತಾಲೂಕಿನ ವಿವಿಧೆಡೆ ನಡೆದ ದರೋಡೆ ಪ್ರಕರಣವನ್ನು ಭೇದಿಸಿರುವ ಉಪ್ಪಿನಂಗಡಿ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿರುವ ಘಟನೆ ಠಾಣಾ ವ್ಯಾಪ್ತಿಯ ಪೆರಿಯಶಾಂತಿ ಎಂಬಲ್ಲಿ ಸೋಮವಾರ ರಾತ್ರಿ ನಡೆದಿದೆ. ಬಂಧಿತ ಆರೋಪಿಗಳನ್ನು ಕೇರಳ ರಾಜ್ಯದ ತ್ರಿಶೂರ್ ಜಿಲ್ಲೆಯ ನೆಲ್ಸನ್(30) ಹಾಗೂ ಇಲ್ಯಾಸ್(34) ಎಂದು ಗುರುತಿಸಲಾಗಿದೆ. ಕಳೆದ ಮಾರ್ಚ್ 21 ರಂದು ಇಚಿಲಂಪಾಡಿಯ ನಿವೃತ್ತ ಯೋಧ ನಾರಾಯಣ ಪಿಳ್ಳೆ ಎಂಬವರ ಮನೆಗೆ […]

ಇಚಿಲಂಪಾಡಿ: ಮನೆಗೆ ನುಗ್ಗಿ ಬೆದರಿಸಿ ನಗ, ನಗದು ದರೋಡೆ ಪ್ರಕರಣ ► ಆರೋಪಿಗಳಿಬ್ಬರ ಬಂಧನ Read More »

ಕರಾವಳಿ

ಕೊಣಾಜೆ: ಯುವಕನಿಗೆ ಚೂರಿ ಇರಿತ ► ಆರೋಪಿ ಪರಾರಿ

(ನ್ಯೂಸ್ ಕಡಬ) newskadaba.com ಮಂಗಳೂರು, ಎ.12. ಪೂರ್ವದ್ವೇಷದ ಹಿನ್ನೆಲೆಯಲ್ಲಿ ಯುವಕನೋರ್ವನಿಗೆ ಚೂರಿಯಿಂದ ಇರಿದ ಘಟನೆ ಕೊಣಾಜೆ ಠಾಣಾ ವ್ಯಾಪ್ತಿಯ ನಾಟೆಕಲ್‌ನಲ್ಲಿ ಮಂಗಳವಾರ ರಾತ್ರಿ ನಡೆದಿದೆ. ಇರಿತಕ್ಕೊಳಗಾದ ಯುವಕನನ್ನು ನಾಟೆಕಲ್ ಸೈಟ್ ನಿವಾಸಿ ಇಬ್ರಾಹಿಂ ಖಲೀಲ್ ಎಂದು ಗುರುತಿಸಲಾಗಿದೆ. ಪೂರ್ವದ್ವೇಷಕ್ಕೆ ಸಂಬಂಧಿಸಿ ನಾಟೆಕಲ್ ನಿವಾಸಿ ಅಜ್ಮಲ್ ಎಂಬಾತ ಇಬ್ರಾಹಿಂ ಖಲೀಲ್ ಗೆ ಚೂರಿಯಿಂದ ಇರಿದು ಪರಾರಿಯಾಗಿದ್ದಾನೆ ಎನ್ನಲಾಗಿದೆ. ಗಾಯಾಳುವನ್ನು ದೇರಳಕಟ್ಟೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಕೊಣಾಜೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಕೊಣಾಜೆ: ಯುವಕನಿಗೆ ಚೂರಿ ಇರಿತ ► ಆರೋಪಿ ಪರಾರಿ Read More »

ಕರಾವಳಿ

ಎ.14 : ಪಾದೆಬಂಬಿಲದಲ್ಲಿ ವಾರ್ಷಿಕ ಭಜನೆ,ಸಾರ್ವಜನಿಕ ಶನೈಶ್ಚರ ಪೂಜೆ

(ನ್ಯೂಸ್ ಕಡಬ) newskadaba.com ಸವಣೂರು, ಎ.10. ಪಾಲ್ತಾಡಿ ಗ್ರಾಮದ ಪಾದೆಬಂಬಿಲ ಶಕ್ತಿನಗರ ದುರ್ಗಾ ಭಜನಾ ಮಂಡಳಿಯ 18ನೇ ವಾರ್ಷಿಕ ಭಜನಾ ಕಾರ್ಯಕ್ರಮ ಮತ್ತು ಸಾರ್ವಜನಿಕ ಶ್ರೀ ಶನೈಶ್ಚರ ಪೂಜೆ ಎ.14ರಂದು ಭಜನಾ ಮಂದಿರದ ವಠಾರದಲ್ಲಿ ನಡೆಯಲಿದೆ. ಎ.14ರಂದು ಬೆಳಿಗ್ಗೆ 8ಕ್ಕೆ ಗಣಹೋಮ,ಸಂಜೆ 4ರಿಂದ ಭಜನಾ ಕಾರ್ಯಕ್ರಮ ನಡೆಯಲಿದೆ. ಭಜನಾ ಕಾರ್ಯಕ್ರಮದಲ್ಲಿ ಹರಿಭಜನ ಮಂಡಳಿ ಹರಿನಗರ ದೇವಶ್ಯ ಪುಣ್ಚಪ್ಪಾಡಿ, ಚಾರ್ವಾಕ ಕಪಿಲೇಶ್ವರ ಭಜನಾ ಮಂಡಳಿ, ಪೆರುಯಡ್ಕ ಆದಿಶಕ್ತಿ ಭಜನಾ ಮಂಡಳಿ, ಕುಮಾರಮಂಗಲ ಅರ್ಪಿತಾ ಯುವತಿ ಮಂಡಲ, ನರಿಮೊಗರು ಪ್ರಖ್ಯಾತಿ ಯುವತಿ

ಎ.14 : ಪಾದೆಬಂಬಿಲದಲ್ಲಿ ವಾರ್ಷಿಕ ಭಜನೆ,ಸಾರ್ವಜನಿಕ ಶನೈಶ್ಚರ ಪೂಜೆ Read More »

ಕರಾವಳಿ

ಪಾಲ್ತಾಡಿ :ಬಿಜೆಪಿ ಪೇಜ್ ಪ್ರಮುಖರ ಸಭೆ

(ನ್ಯೂಸ್ ಕಡಬ) newskadaba.com ಸವಣೂರು, ಎ.9. ಬಿಜೆಪಿ ಪಕ್ಷದ ಗೆಲುವಿನಲ್ಲಿ ಪೇಜ್ ಪ್ರಮುಖರ ಪಾತ್ರ ಮಹತ್ವದ್ದು. ಪ್ರತಿಯೊಬ್ಬರೂ ಮತದಾರರನ್ನು ಗುರುತಿಸಿ ಮತ ಚಲಾವಣೆಗೆ ಕರೆತರುವ ಮೂಲಕ ಬಿಜೆಪಿಗೆ ಅತ್ಯಧಿಕ ಮತಗಳು ದೊರಕುವಂತೆ ಮಾಡಬೇಕು. ಬಿಜೆಪಿ ಪಕ್ಷ ಕಾರ್ಯಕರ್ತರ ಪಕ್ಷ, ಪಕ್ಷಕ್ಕೆ ಕಾರ್ಯಕರ್ತರೇ ಜೀವಾಳ ಎಂದು ಸುಳ್ಯ ಬಿಜೆಪಿ ಮಂಡಲ ಸಮಿತಿ ಮಾಜಿ ಪ್ರಧಾನ ಕಾರ್ಯದರ್ಶಿ, ಜಿಲ್ಲಾ ಬಿಜೆಪಿ ಸದಸ್ಯ ರಾಕೇಶ್ ರೈ ಕೆಡೆಂಜಿ ಹೇಳಿದರು. ಅವರು ಬೆಳಂದೂರು ಮಹಾಶಕ್ತಿ ಕೇಂದ್ರದ ಪಾಲ್ತಾಡಿಯ ಕುಂಜಾಡಿಯಲ್ಲಿ ನಡೆದ ಬಿಜೆಪಿ ಪೇಜ್ ಪ್ರಮುಖರ

ಪಾಲ್ತಾಡಿ :ಬಿಜೆಪಿ ಪೇಜ್ ಪ್ರಮುಖರ ಸಭೆ Read More »

ಕರಾವಳಿ

ರಾಷ್ಟ್ರೀಯ ಯುವ ಸಪ್ತಾಹದ ಅಂಗವಾಗಿ ಕುದ್ಮಾರಿನಲ್ಲಿ ಹೆಣದೂರು ಬೀದಿ ನಾಟಕ

(ನ್ಯೂಸ್ ಕಡಬ) newskadaba.com ಸವಣೂರು, ಎ.9. ಯುವ ಸಮುದಾಯ ಮದ್ಯವ್ಯಸನಕ್ಕೆ ಬಲಿಯಾಗದೇ ಗೌರವಯುತ ಬದುಕನ್ನು ಕಟ್ಟಿಕೊಳ್ಳಬೇಕು. ಮದ್ಯಪಾನವು ಆರೋಗ್ಯವನ್ನು ಕೆಡಿಸುವ ಜೊತೆಯಲ್ಲಿ ಇಡೀ ಕುಟುಂಬವನ್ನೇ ಬೀದಿಪಾಲಾಗಿಸುವುದು. ಈ ನಿಟ್ಟಿನಲ್ಲಿ ಸವಣೂರು ಶ್ರವಣರಂಗ ಶಿಕ್ಷಕ ಕಲಾವಿದರು ಜಿಲ್ಲೆಯಾದ್ಯಂತ ಹೆಣದೂರು ಬೀದಿನಾಟಕ ಪ್ರದರ್ಶಿಸುವ ಮೂಲಕ ಜಾಗೃತಿ ಮೂಡಿಸುತ್ತಿರುವುದು ಶ್ಲಾಘನೀಯ ಕಾರ್ಯವೆಂದು ಪುತ್ತೂರು ವಕೀಲರ ಸಂಘದ ಅಧ್ಯಕ್ಷ ಕೆ. ಭಾಸ್ಕರ ಕೋಡಿಂಬಾಳ ಹೇಳಿದರು. ಅವರು ಭಾನುವಾರ ರಾಷ್ಟ್ರೀಯ ಯುವ ಸಪ್ತಾಹದ ಅಂಗವಾಗಿ ಸವಣೂರು ಯುವಕ ಮಂಡಲದ ವತಿಯಿಂದ ಸ್ಕಂದಶ್ರೀ ಯುವಕ ಮಂಡಲ ಕುದ್ಮಾರು ಇದರ ಸಹಕಾರದೊಂದಿಗೆ

ರಾಷ್ಟ್ರೀಯ ಯುವ ಸಪ್ತಾಹದ ಅಂಗವಾಗಿ ಕುದ್ಮಾರಿನಲ್ಲಿ ಹೆಣದೂರು ಬೀದಿ ನಾಟಕ Read More »

ಕರಾವಳಿ

ಬೆಳಂದೂರು ಗ್ರಾಮದ ಬೂತ್ 2ರ ಬಿಜೆಪಿ ಸಮಿತಿ ಸಭೆ

(ನ್ಯೂಸ್ ಕಡಬ) newskadaba.com ಸವಣೂರು, ಎ.9. ಗ್ರಾಮದ ಬೂತ್ 2ರ ಬಿಜೆಪಿ  ಸಮಿತಿಯ ಸಭೆಯು ಪ್ರತಿ 10 ದಿನಗಳಿಗೊಮ್ಮೆ ಪಕ್ಷದ ಕಾರ್ಯಕರ್ತರ ಮನೆಗಳಲ್ಲಿ ನಡೆಯುತ್ತಿದ್ದು ಈ ಬಾರಿಯ ಸಭೆಯು ದಕ್ಷಿಣ ಕನ್ನಡ ಜಿಲ್ಲಾ ಜನಾತ ಬಜಾರ್ ಇದರ ಅಧ್ಯಕ್ಷರಾದ ಉದಯ ರೈ ಮಾದೋಡಿಯವರ ಮನೆಯಲ್ಲಿ ಬೂತ್ ಸಮಿತಿಯ ಅಧ್ಯಕ್ಷರಾದ ಪ್ರಮೋದ್ ನೀರಜರಿಯವರ ಅಧ್ಯಕ್ಷತೆಯಲ್ಲಿ ನಡೆಯಿತು. ಸಭೆಯಲ್ಲಿ ಪಕ್ಷದ ಸಂಘಟನೆಯ ಬಗ್ಗೆ ಚರ್ಚೆ ನಡೆಸಿ ಪೇಜ್ ಪ್ರಮುಖರಿಗೆ ಜವಾಬ್ದಾರಿಯನ್ನು ಹಂಚಿಕೆ ಮಾಡಲಾಯಿತು. ಬೆಳಂದೂರು ಶಕ್ತಿ ಕೇಂದ್ರದ ಅಧ್ಯಕ್ಷರಾದ ದಿನೇಶ್ ಮೆದು

ಬೆಳಂದೂರು ಗ್ರಾಮದ ಬೂತ್ 2ರ ಬಿಜೆಪಿ ಸಮಿತಿ ಸಭೆ Read More »

ಕರಾವಳಿ

ಮುಕ್ವೆ ಮಜಲುಮಾರು ಉಮಾಮಹೇಶ್ವರ ದೇವಸ್ಥಾನದಲ್ಲಿ ವಿವಿಧ ಕಾಮಗಾರಿಗಳ ಉದ್ಘಾಟನೆ

(ನ್ಯೂಸ್ ಕಡಬ) newskadaba.com ನರಿಮೊಗರು ಎ.10. ಇಲ್ಲಿನ ಮುಕ್ವೆ ಮಜಲುಮಾರು ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಸುಮಾರು 24 ಲಕ್ಷ ರೂಪಾಯಿ ವೆಚ್ಚದಲ್ಲಿ ನಡೆದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ನಡೆಯಿತು. ಎಡನೀರು ಮಠದ ಶ್ರೀ ಕೇಶವಾನಂದ ಭಾರತೀ ಸ್ವಾಮೀಜಿಯವರು ದೀಪ ಬೆಳಗಿಸಿ ಉದ್ಘಾಟಿಸಿ ಆಶೀರ್ವಚನ ನೀಡಿದರು. ಶ್ರೀ ಉಮಾಮಹೇಶ್ವರ ಸೇವಾ ಟ್ರಸ್ಟ್‌ನ ಉಪಾಧ್ಯಕ್ಷ ಸುಬ್ರಹ್ಮಣ್ಯ ತಂತ್ರಿಯವರು ಸಭೆಯ ಅಧ್ಯಕ್ಷತೆ ವಹಿಸಿದ್ದರು. ಸನ್ಮಾನ: ಸಭೆಯಲ್ಲಿ ಬ್ರಹ್ಮವಾಹಕ ಹರೀಶ್ ಉಂಗ್ರುಪುಳಿತ್ತಾಯ ಮರೀಲು, ದೇವಸ್ಥಾನಕ್ಕೆ ಜಾಗ ದಾನ ಮಾಡಿದ ಉಮಾಮಹೇಶ್ವರ ಸೇವಾ ಟ್ರಸ್ಟ್‌ನ ಅಧ್ಯಕ್ಷ

ಮುಕ್ವೆ ಮಜಲುಮಾರು ಉಮಾಮಹೇಶ್ವರ ದೇವಸ್ಥಾನದಲ್ಲಿ ವಿವಿಧ ಕಾಮಗಾರಿಗಳ ಉದ್ಘಾಟನೆ Read More »

ಕರಾವಳಿ

ಪೆರ್ನೋಡಿ: ಇನ್ನೋವಾ – ಓಮ್ನಿ ಮುಖಾಮುಖಿ ಢಿಕ್ಕಿ ► ತಾಯಿ, ಮಗ ಮೃತ್ಯು

(ನ್ಯೂಸ್ ಕಡಬ) newskadaba.com ಮೂಡುಬಿದಿರೆ, ಎ.09. ಓಮ್ನಿ ಹಾಗೂ ಇನ್ನೋವಾ ಕಾರುಗಳ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ತಾಯಿ – ಮಗ ಮೃತಪಟ್ಟ ಘಟನೆ ಮೂಡುಬಿದಿರೆ ಸಮೀಪದ ನೆಲ್ಲಿಕಾರು ಎಂಬಲ್ಲಿ ಸೋಮವಾರದಂದು ನಡೆದಿದೆ. ಮೃತರನ್ನು ಶಿವಮೊಗ್ಗ ಮೂಲದ ಸೋಮಶೇಖರ್(45) ಹಾಗೂ ಅವರ ತಾಯಿ ರತ್ನಮ್ಮ(70) ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಆರು ಮಂದಿ ಗಂಭೀರವಾಗಿ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಹೊಸ್ಮಾರು ಸಂಪರ್ಕ ರಸ್ತೆಯ ಪೆರ್ನೋಡಿ ಎಂಬಲ್ಲಿ ಈ ದುರ್ಘಟನೆ ಸಂಭವಿಸಿದೆ. ಸ್ಥಳಕ್ಕೆ ಮೂಡುಬಿದಿರೆ ಪೊಲೀಸರು ಭೇಟಿ ನೀಡಿ ಪರಿಶೀಲನೆ

ಪೆರ್ನೋಡಿ: ಇನ್ನೋವಾ – ಓಮ್ನಿ ಮುಖಾಮುಖಿ ಢಿಕ್ಕಿ ► ತಾಯಿ, ಮಗ ಮೃತ್ಯು Read More »

ಕರಾವಳಿ

ಎ.9: ಸವಣೂರು ಯುವಕ‌ ಮಂಡಲದ ರಾಷ್ಟ್ರೀಯ ಯುವ ಸಪ್ತಾಹ ಸಮಾರೋಪ

(ನ್ಯೂಸ್ ಕಡಬ) newskadaba.com ಸವಣೂರು, ಎ.9.  ರಾಜ್ಯ ಪ್ರಶಸ್ತಿ ಪುರಸ್ಕೃತ, ಸವಣೂರು ಯುವಕ‌ ಮಂಡಲದ ರಾಷ್ಟ್ರೀಯ ಯುವ ಸಪ್ತಾಹ ಕಾರ್ಯಕ್ರಮದ ಸಮಾರೋಪ, ತಾ.ಅತ್ಯುತ್ತಮ ಯುವ ಮಂಡಲ ಹಾಗೂ ಯುವ ಪ್ರಶಸ್ತಿ ಪ್ರದಾನ ಎ. 9 ರಂದು ಯುವ ಸಭಾಭವನದ ವಠಾರದಲ್ಲಿ ನಡೆಯಲಿದೆ. ತಾಲೂಕು ಮಟ್ಟದ ಶ್ರವಣಕೀರ್ತಿ ಪ್ರಶಸ್ತಿಯನ್ನು ವಿವೇಕಾನಂದ ಯುವಕ ವೃಂದ ಕೌಡಿಚ್ಚಾರು ಮತ್ತು ಶ್ರವಣ ದೀಪ ಪ್ರಶಸ್ತಿಯನ್ನು ಕಮಲೇಶ್, ಷಣ್ಮುಖ ಯುವಕ ಮಂಡಲ ಸರ್ವೆ ಇವರಿಗೆ ಪ್ರದಾನ ಮಾಡಲಾಗುವುದು. ಇದೇ ಸಂದರ್ಭದಲ್ಲಿ ಅನೇಕ ಸಾಧಕರನ್ನು ಅಭಿನಂದಿಸಲಾಗುವುದು. ಕ್ರೀಡೆಯಲ್ಲಿ

ಎ.9: ಸವಣೂರು ಯುವಕ‌ ಮಂಡಲದ ರಾಷ್ಟ್ರೀಯ ಯುವ ಸಪ್ತಾಹ ಸಮಾರೋಪ Read More »

ಕರಾವಳಿ

ಸವಣೂರು ಯುವ ಸಪ್ತಾಹದಲ್ಲಿ ಕ್ರಿಕೆಟ್ ಪಂದ್ಯಾಟ

(ನ್ಯೂಸ್ ಕಡಬ) newskadaba.com ಸವಣೂರು ಎ.9. ಕ್ರೀಡೆಯಿಂದ ಸೌಹಾರ್ದಯುತ ವಾತಾವರಣ ನಿರ್ಮಾಣ ಸಾದ್ಯ, ಕ್ರೀಡೆಯಿಂದ ದೈಹಿಕ ಹಾಗೂ ಮಾನಸಿಕ ಬೆಳವಣಿಗೆ ಸಾಧ್ಯ. ಆಧುನಿಕ ಯುಗದಲ್ಲಿ ಅಂತರ್ಜಾಲದಲ್ಲೇ ಮುಳುಗಿರುವ ಯುವಜನತೆಯನ್ನು ಕ್ರೀಡೆಯತ್ತ ಸೆಳೆಯಲು ಪಂದ್ಯಕೂಟಗಳು ಅವಕಾಶ ಕಲ್ಪಿಸುತ್ತದೆ ಎಂದು ಸವಣೂರು ಗ್ರಾಮ ಪಂಚಾಯತ್ ಮಾಜಿ ಉಪಾಧ್ಯಕ್ಷ, ಪ್ರಗತಿ ಪರ ಕೃಷಿಕ ಪಿ.ಡಿ.ಗಂಗಾಧರ ರೈ ದೇವಸ್ಯ ಹೇಳಿದರು. ಅವರು ರಾಜ್ಯ ಪ್ರಶಸ್ತಿ ಪುರಸ್ಕೃತ ಸವಣೂರು ಯುವಕ ಮಂಡಲದ ವತಿಯಿಂದ ನಡೆಯುತ್ತಿರುವ ರಾಷ್ಟ್ರೀಯ ಯುವಸಪ್ತಾಹದ ಅಂಗವಾಗಿ ನಡೆದ ಕ್ರಿಕೆಟ್ ಪಂದ್ಯಾಟವನ್ನು ಉದ್ಘಾಟಿಸಿದರು. ಅತಿಥಿಗಳಾಗಿ ಸವಣೂರು

ಸವಣೂರು ಯುವ ಸಪ್ತಾಹದಲ್ಲಿ ಕ್ರಿಕೆಟ್ ಪಂದ್ಯಾಟ Read More »

ಕರಾವಳಿ
Scroll to Top