ಕರಾವಳಿ

ಇಂದಿನ ರಾಜ್ಯದ ಹವಾಮಾನ ವರದಿ

(ನ್ಯೂಸ್‌ ಕಡಬ) newskadaba.com,  ಜ.16 :  ತಮಿಳುನಾಡಿನ ಕರಾವಳಿಯಲ್ಲಿ ಉಂಟಾಗಿರುವ ಚಂಡಮಾರುತದ ಪರಿಣಾಮವಾಗಿ ಕರ್ನಾಟಕದ ಕೆಲ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉಡುಪಿ, ಉತ್ತರ ಕನ್ನಡ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರಿನಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಾಗಲಕೋಟೆ, ಬೀದರ್, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ರಾಮನಗರ, ಶಿವಮೊಗ್ಗದಲ್ಲಿ ಒಣಹವೆ ಇರಲಿದೆ. ಬೆಂಗಳೂರಿನಲ್ಲಿ ಮೋಡಕವಿದ […]

ಇಂದಿನ ರಾಜ್ಯದ ಹವಾಮಾನ ವರದಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ರಾಜ್ಯದ ವಿವಿಧ ಮಾರುಕಟ್ಟೆಯಲ್ಲಿ ಅಡಿಕೆ ಧಾರಣೆ ಮತ್ತೆ ಭರ್ಜರಿ ಏರಿಕೆ

(ನ್ಯೂಸ್‌ ಕಡಬ) newskadaba.com,  ಜ.15 :  ರಾಜ್ಯದ ವಿವಿಧ ಮಾರುಕಟ್ಟೆಯಲ್ಲಿ ಅಡಿಕೆ ಧಾರಣೆ  ಗುರುವಾರ (ಜನವರಿ 15) ಭರ್ಜರಿ ಏರಿಕೆ ಕಂಡಿದೆ. ರಾಜ್ಯದ ಕೆಲವು ಮಾರುಕಟ್ಟೆಯಲ್ಲಿ ರಾಶಿ ಅಡಿಕೆ 60 ಸಾವಿರ ರೂ.ನ ಗಡಿ ದಾಟಿದೆ. ಅಡಿಕೆ ಧಾರಣೆ ಉತ್ತಮ ಸ್ಥಿತಿಯಲ್ಲಿರುವುದರಿಂದ ಬೆಳೆಗಾರರ ಮೊಗದಲ್ಲಿ ಮಂದಹಾಸ ಮೂಡಿದೆ. ಬೇಡಿಕೆ ಹೆಚ್ಚಾಗಿರುವ ಕಾರಣ ಅಡಿಕೆ ಧಾರಣೆ ಮತ್ತಷ್ಟು ಏರಿಕೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ಅಲ್ಲದೆ ಪ್ರತಿ ದಿನವೂ ಬೆಲೆಗಳಲ್ಲಿ ಏರಿಳಿತವಾಗುತ್ತಿರುತ್ತದೆ. ಶಿವಮೊಗ್ಗದಲ್ಲಿ ರಾಶಿ ಅಡಿಕೆ 57,100ರೂ.

ರಾಜ್ಯದ ವಿವಿಧ ಮಾರುಕಟ್ಟೆಯಲ್ಲಿ ಅಡಿಕೆ ಧಾರಣೆ ಮತ್ತೆ ಭರ್ಜರಿ ಏರಿಕೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಜ.22ರಿಂದ 31ರ ವರೆಗೆ ವಿಧಾನಮಂಡಲದ ಜಂಟಿ ಅಧಿವೇಶನ

(ನ್ಯೂಸ್‌ ಕಡಬ) newskadaba.com,  ಜ.15  ಬೆಂಗಳೂರು: ಇದೇ ಜ.22ರಿಂದ ಜ.31ರ ತನಕ ಅಧಿವೇಶನ ನಡೆಸಲು ತುರ್ತು ಸಚಿವ ಸಂಪುಟ ಸಭೆ ತೀರ್ಮಾನಿಸಿದೆ. ರಜಾ ದಿನಗಳನ್ನ ಹೊರತುಪಡಿಸಿ ಎಷ್ಟು ದಿನ ಅಧಿವೇಶನ ನಡೆಯಬೇಕು ಎಂಬುದನ್ನ ಸ್ಪೀಕರ್ ತೀರ್ಮಾನಿಸಲಿದ್ದಾರೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಹೆಚ್.ಕೆ.ಪಾಟೀಲ್ ಮಾಹಿತಿ ನೀಡಿದ್ದಾರೆ. ಎರಡೂವರೆ ಗಂಟೆಗಳಿಗೂ ಹೆಚ್ಚು ಕಾಲ ನಡೆದ ಸಚಿವ ಸಂಪುಟ ಸಭೆಯಲ್ಲಿ ಮನ್ರೇಗಾ ವರ್ಸಸ್ ವಿಕಸಿತ ಭಾರತ್ ಜಿರಾಮಜಿ ಕಾಯ್ದೆಗಳನ್ನು ಹೋಲಿಕೆ ಮಾಡಿ, ಸುದೀರ್ಘವಾಗಿ ಕ್ಯಾಬಿನೆಟ್‌ನಲ್ಲಿ ಚರ್ಚಿಸಲಾಗಿದೆ. ಬಳಿಕ

ಜ.22ರಿಂದ 31ರ ವರೆಗೆ ವಿಧಾನಮಂಡಲದ ಜಂಟಿ ಅಧಿವೇಶನ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬೆಳ್ತಂಗಡಿ: 9ನೇ ತರಗತಿ ವಿದ್ಯಾರ್ಥಿ ಸುಮಂತ್ ನಿಗೂಢ ಸಾವು

(ನ್ಯೂಸ್‌ ಕಡಬ) newskadaba.com,  ಜ.15 ಬೆಳ್ತಂಗಡಿ: ಕಳಿಯ ಗ್ರಾಮದ ನಾಳ ದೇವಸ್ಥಾನಕ್ಕೆ ಇಂದು ಮುಂಜಾನೆ ಧನುಪೂಜೆಗೆ ಹೊರಟಿದ್ದ ಬಾಲಕನೊಬ್ಬ ನಿಗೂಢವಾಗಿ ನಾಪತ್ತೆಯಾಗಿದ್ದು, ಬಳಿಕ ಮನೆಯ ಸಮೀಪದ ಕೆರೆಯಲ್ಲಿ ಆತನ ಮೃತದೇಹ ಪತ್ತೆಯಾಗಿರುವ ಘಟನೆ ಬೆಳ್ತಂಗಡಿ ತಾಲೂಕಿನ ಕುವೆಟ್ಟು ಗ್ರಾಮದ ಸಂಬೋಳ್ಯ–ಬರಮೇಲು ಪ್ರದೇಶದಲ್ಲಿ ನಡೆದಿದೆ.ಮೃತ ಬಾಲಕನನ್ನು ಕುವೆಟ್ಟು ಗ್ರಾಮದ ಸಂಬೋಳ್ಯ ಬರಮೇಲು ನಿವಾಸಿ ಸುಬ್ರಹ್ಮಣ್ಯ ನಾಯಕ್ ಅವರ ಪುತ್ರ, ಗೇರುಕಟ್ಟೆ ಸರ್ಕಾರಿ ಪ್ರೌಢ ಶಾಲೆಯ 9ನೇ ತರಗತಿ ವಿದ್ಯಾರ್ಥಿ ಸುಮಂತ್ (15) ಎಂದು ಗುರುತಿಸಲಾಗಿದೆ. ಸುಮಂತ್ ಸೇರಿದಂತೆ ಮೂವರು ಬಾಲಕರು

ಬೆಳ್ತಂಗಡಿ: 9ನೇ ತರಗತಿ ವಿದ್ಯಾರ್ಥಿ ಸುಮಂತ್ ನಿಗೂಢ ಸಾವು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಇಂದಿನ ರಾಜ್ಯದ ಹವಾಮಾನ ವರದಿ

(ನ್ಯೂಸ್‌ ಕಡಬ) newskadaba.com,  ಜ.15: ತಮಿಳುನಾಡಿನ ಕರಾವಳಿಯಲ್ಲಿ ಚಂಡಮಾರುತ ರೂಪುಗೊಳ್ಳುತ್ತಿದ್ದು, ಕರ್ನಾಟಕದ ಅಲ್ಲಲ್ಲಿ ಮಳೆಯಾಗುತ್ತಿದೆ. ಹೀಗಾಗಿ ಚಳಿಯೂ ಕಡಿಮೆಯಾಗಿ ಮೋಡಕವಿದ ವಾತಾವರಣ ನಿರ್ಮಾಣವಾಗಿದೆ. ಉಡುಪಿ, ಉತ್ತರ ಕನ್ನಡ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರಿನಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಾಗಲಕೋಟೆ, ಬೀದರ್, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ರಾಮನಗರ, ಶಿವಮೊಗ್ಗದಲ್ಲಿ ಒಣಹವೆ ಇರಲಿದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು, ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ.

ಇಂದಿನ ರಾಜ್ಯದ ಹವಾಮಾನ ವರದಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸೋಲನ್‌: ಭೀಕರ ಅಗ್ನಿ ಅವಘಡ – 8 ವರ್ಷದ ಮಗು ಸಾವು, ಹಲವರಿಗೆ ಗಾಯ

(ನ್ಯೂಸ್‌ ಕಡಬ) newskadaba.com: ಹಿಮಾಚಲ ಪ್ರದೇಶದ ಸೋಲನ್ ಜಿಲ್ಲೆಯ ಅಪಾರ್ಟ್‌ಮೆಂಟ್ ಕಟ್ಟಡವೊಂದರಲ್ಲಿ ಭಾನುವಾರ ತಡರಾತ್ರಿ ಸಂಭವಿಸಿದ ಭಾರಿ ಅಗ್ನಿ ಅವಘಡದಲ್ಲಿ 8 ವರ್ಷದ ಮಗು ಸಾವನ್ನಪ್ಪಿದೆ. ಈ ದುರ್ಘಟನೆಯಲ್ಲಿ ನೇಪಾಳಿ ಮೂಲದ ವಲಸೆ ಕಾರ್ಮಿಕರು ಸೇರಿದಂತೆ ಹಲವರು ಕಟ್ಟಡದೊಳಗೆ ಸಿಲುಕಿಕೊಂಡಿರುವ ಘಟನೆ ಆತಂಕ ಮೂಡಿಸಿದೆ. ಬೆಂಕಿಯ ತೀವ್ರತೆಯಿಂದ ಕಟ್ಟಡದ ಕೆಳಭಾಗದಲ್ಲಿದ್ದ ಹಲವಾರು ಅಂಗಡಿಗಳು ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿವೆ. ಅಪಾರ್ಟ್‌ಮೆಂಟ್‌ನಲ್ಲಿ ಬೆಂಕಿ ಕಾಣಿಸಿಕೊಂಡ ಕೂಡಲೇ ಅಗ್ನಿಶಾಮಕ ಇಲಾಖೆಗೆ ಮಾಹಿತಿ ನೀಡಲಾಗಿತ್ತು. ಆದರೆ ಕಟ್ಟಡದಲ್ಲಿದ್ದ ಗ್ಯಾಸ್ ಸಿಲಿಂಡರ್‌ಗಳು ಒಂದರ ನಂತರ ಒಂದಾಗಿ

ಸೋಲನ್‌: ಭೀಕರ ಅಗ್ನಿ ಅವಘಡ – 8 ವರ್ಷದ ಮಗು ಸಾವು, ಹಲವರಿಗೆ ಗಾಯ Read More »

ಕರಾವಳಿ

ಮಂಗಳೂರು ಮೂಲದ ಟೆಕ್ಕಿಕೊಲೆ ಪ್ರಕರಣ: ಆರೋಪಿ ಓರ್ವ ಅರೆಸ್ಟ್‌

(ನ್ಯೂಸ್‌ ಕಡಬ) newskadaba.com: ಮಂಗಳೂರು ಮೂಲದ ಟೆಕ್ಕಿ ಶರ್ಮಿಳಾ ಅವರ ನಿಗೂಢ ಸಾವಿನಲ್ಲಿ ಅಚ್ಚರಿಯ ತಿರುವು ಸಿಕ್ಕಿದೆ. ಅವರ ಸಾವು ಆರಂಭದಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಉಂಟಾದ ಬೆಂಕಿ ಅವಘಡದಿಂದ ಎಂದು ವರದಿಯಾಗಿತ್ತು. ಪೊಲೀಸ್ ತನಿಖೆ ನಡೆಸಿ ಯುವತಿಯ ಸಾವು ಪೂರ್ವನಿಯೋಜಿತ ಕೊಲೆ ಎಂದು ದೃಢಪಡಿಸಿವೆ ಮತ್ತು ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಕೇರಳ ಮೂಲದ ಕರ್ನಲ್ ಕುರಯ್‌ ಅವನನ್ನು ಬಂಧಿಸಲಾಗಿದೆ. ಮೂಲತಃ ಮಂಗಳೂರಿನವರಾದ ಶರ್ಮಿಳಾ ಒಂದು ವರ್ಷದ ಹಿಂದೆಯಷ್ಟೇ ಬೆಂಗಳೂರಿಗೆ ಬಂದು ಅಕ್ಸೆಂಚರ್ ಸಾಫ್ಟ್ವೇರ್ ಕಂಪನಿಯಲ್ಲಿ ಎಂಜಿನಿಯರ್ ಆಗಿ ಕೆಲಸ

ಮಂಗಳೂರು ಮೂಲದ ಟೆಕ್ಕಿಕೊಲೆ ಪ್ರಕರಣ: ಆರೋಪಿ ಓರ್ವ ಅರೆಸ್ಟ್‌ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

KSCCF ನೇಮಕಾತಿ 2026: ಕ್ಲರ್ಕ್, ಸಹಾಯಕ, ಫಾರ್ಮಸಿಸ್ಟ್ ಸೇರಿ 34 ಹುದ್ದೆಗಳಿಗೆ ಆನ್‌ಲೈನ್ ಅರ್ಜಿ ಆಹ್ವಾನ

(ನ್ಯೂಸ್‌ ಕಡಬ) newskadaba.com, ಕರ್ನಾಟಕ ರಾಜ್ಯ ಸಹಕಾರ ಗ್ರಾಹಕ ಮಹಾಮಂಡಳಿ ಲಿಮಿಟೆಡ್ (KSCCF) ವತಿಯಿಂದ 2026ನೇ ಸಾಲಿನ ನೇಮಕಾತಿ ಅಧಿಸೂಚನೆ ಪ್ರಕಟವಾಗಿದ್ದು, ಒಟ್ಟು 34 ಖಾಲಿ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಸಂಸ್ಥೆಯ ಹೆಸರು ಕರ್ನಾಟಕ ರಾಜ್ಯ ಸಹಕಾರ ಗ್ರಾಹಕ ಮಹಾಮಂಡಳಿ ಲಿಮಿಟೆಡ್ (KSCCF) ಉದ್ಯೋಗ ಸ್ಥಳ ಬೆಂಗಳೂರು, ಕರ್ನಾಟಕ ಹುದ್ದೆಗಳ ವಿವರ & ಖಾಲಿ ಹುದ್ದೆಗಳ ಸಂಖ್ಯೆ ಹುದ್ದೆ ಹೆಸರು ಹುದ್ದೆಗಳ ಸಂಖ್ಯೆ ವೇತನ (ಪ್ರತಿ ತಿಂಗಳು) ಫಾರ್ಮಸಿಸ್ಟ್- 7 ₹25,800 – ₹52,650 ಪ್ರಥಮ ದರ್ಜೆ ಸಹಾಯಕ

KSCCF ನೇಮಕಾತಿ 2026: ಕ್ಲರ್ಕ್, ಸಹಾಯಕ, ಫಾರ್ಮಸಿಸ್ಟ್ ಸೇರಿ 34 ಹುದ್ದೆಗಳಿಗೆ ಆನ್‌ಲೈನ್ ಅರ್ಜಿ ಆಹ್ವಾನ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕಡಬ: ಎಡಮಂಗಲ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ- ಮನೆಯಂಗಳದಲ್ಲಿದ್ದ ನಾಯಿಯನ್ನು ಹೊತ್ತೊಯ್ದಿದ ದೃಶ್ಯ ಸಿಸಿಟಿವಿಯಲ್ಲಿ ಸೆರೆ

(ನ್ಯೂಸ್‌ ಕಡಬ) newskadaba.com, ಕಡಬ: ಪಂಜ ಮೀಸಲು ಅರಣ್ಯ ವ್ಯಾಪ್ತಿಗೆ ಒಳಪಟ್ಟ ಎಡಮಂಗಲ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ ವಾಗಿದ್ದು, ಸಾರ್ವಜನಿಕರಲ್ಲಿ ತೀವ್ರ ಆತಂಕ ಸೃಷ್ಟಿಸಿದೆ. ಜ.7 ರಂದು ಎಡಮಂಗಲ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷೆ ಹಾಗೂ ಹಾಲಿ ಸದಸ್ಯೆ ಸುಮ ನೂಜಿಲ ಅವರ ಮನೆಯಂಗಳಕ್ಕೆ ನುಗ್ಗಿದ ಬೃಹತ್ ಗಾತ್ರದ ಚಿರತೆಯೊಂದು ಸಾಕು ನಾಯಿಯನ್ನು ಬೇಟೆಯಾಡಿ ಹೊತ್ತೊಯ್ದಿದೆ. ಜ.7 ರಂದು ಸುಮ ನೂಜಿಲ ಅವರ ಕುಟುಂಬದವರು ಕಾರ್ಯಕ್ರಮವೊಂದಕ್ಕೆ ತೆರಳಿದ್ದರಿಂದ ಮನೆಗೆ ಬೀಗ ಹಾಕಲಾಗಿತ್ತು. ಸಾಯಂಕಾಲ ಸುಮಾರು 7 ಗಂಟೆಯ

ಕಡಬ: ಎಡಮಂಗಲ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ- ಮನೆಯಂಗಳದಲ್ಲಿದ್ದ ನಾಯಿಯನ್ನು ಹೊತ್ತೊಯ್ದಿದ ದೃಶ್ಯ ಸಿಸಿಟಿವಿಯಲ್ಲಿ ಸೆರೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಇಂದಿನ ಹವಾಮಾನ ವರದಿ

(ನ್ಯೂಸ್‌ ಕಡಬ) newskadaba.com, ಜ.14ರವರೆಗೂ ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಮಂಜಿನ ವಾತಾವರಣ ಮತ್ತು ಶೀತಗಾಳಿ ಬೀಸುವ ಸಾಧ್ಯತೆ ಇದ್ದು, ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಮುಂದಿನ ಎರಡು ದಿನಗಳ ಕಾಲ ಹಗುರ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ವರದಿ ಮಾಡಿದೆ. ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 24 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 19 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಚಿಕ್ಕಬಳ್ಳಾಪುರದಲ್ಲಿ ಗರಿಷ್ಠ ತಾಪಮಾನ 24 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 18 ಡಿಗ್ರಿ ಸೆಲ್ಸಿಯಸ್

ಇಂದಿನ ಹವಾಮಾನ ವರದಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top