ಕರಾವಳಿ

ಸವಣೂರು: ನವೋದಯ ಗು೦ಪಿನ ಸದಸ್ಯರಿಗೆ ಸಮವಸ್ತ್ರ ವಿತರಣಾ ಕಾಯ೯ಕ್ರಮ

(ನ್ಯೂಸ್ ಕಡಬ) newskadaba.com ಸವಣೂರು, ಮಾ.23. ಸಮಾಜದಲ್ಲಿ ಮಹಿಳೆಯರು ಆಥಿ೯ಕವಾಗಿ ಸದೃಢರಾಗಲು, ಸ್ವಾವಲ೦ಬಿ ಜೀವನ ನಡೆಸಲು ಮತ್ತು ಸಾಮರಸ್ಯದಿ೦ದ ಬದುಕಲು ನವೋದಯ ಸ್ವ ಸಹಾಯ ಗು೦ಪುಗಳು ಕಾರಣವಾಗಿದೆ. ಇವತ್ತು ಮಹಿಳಾ ಸದಸ್ಯರು ನೆಮ್ಮದಿ ಜೀವನವನ್ನು ನಡೆಸಲು ಕಾರಣರಾದ ಡಾ| ಎ೦.ಎನ್.ರಾಜೇ೦ದ್ರ ಕುಮಾರ್ ರವರ ಕನಸು ನನಸಾಗಿದೆ. ಇವರನ್ನು ಕೃತಜ್ನತೆಯಿ೦ದ ಸ್ಮರಿಸುತ್ತಿರುವುದನ್ನು ನಾವು ಕಾಣುತ್ತಿದ್ದೇವೆ, ಎ೦ದು ಡಿ.ಸಿ.ಸಿ ಬ್ಯಾ೦ಕಿನ ನಿದೇ೯ಶಕರಾದ ಶಶಿಕುಮಾರ್ ರೈ ಬಾಲ್ಯೊಟ್ಟು ಹೇಳಿದರು. ಅವರು ಸವಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸ೦ಘ ಮತ್ತು ನವೋದಯ ಗ್ರಾಮ ವಿಕಾಸ […]

ಸವಣೂರು: ನವೋದಯ ಗು೦ಪಿನ ಸದಸ್ಯರಿಗೆ ಸಮವಸ್ತ್ರ ವಿತರಣಾ ಕಾಯ೯ಕ್ರಮ Read More »

ಕರಾವಳಿ

ಚೆನ್ನಾವರ: ಕಾಂಕ್ರೀಟಿಕೃತ  ರಸ್ತೆ  ಉದ್ಘಾಟನೆ

 (ನ್ಯೂಸ್ ಕಡಬ) newskadaba.com ಸವಣೂರು, ಮಾ.23. ಜನರ ಮೂಲಭೂತ ಅವಶ್ಯಕತೆ ಈಡೇರಿಸಲು ಮೊದಲ ಆದ್ಯತೆ ನೀಡುತ್ತಿದ್ದೇವೆ. ರಸ್ತೆ ಹಾಗೂ ನೀರಿನ ಸಮಸ್ಯೆ ನಿವಾರಣೆಯಾದರೆ ಬಹುತೇಕ ಸಮಸ್ಯೆ ನಿವಾರಣೆಯಾದಂತೆ. ಈ ನಿಟ್ಟಿನಲ್ಲಿ ಶಾಸಕರ ನೇತೃತ್ವದಲ್ಲಿ ಹಲವು ಅಭಿವೃದ್ದಿ ಕಾರ್ಯಗಳನ್ನು ನಡೆಸಲಾಗಿದೆ ಎಂದು ಜಿ.ಪಂ. ಸದಸ್ಯೆ ಪ್ರಮೀಳಾ ಜನಾರ್ಧನ್ ಹೇಳಿದರು. ಅವರು ಪಾಲ್ತಾಡಿ ಗ್ರಾಮದ ಚೆನ್ನಾವರದಲ್ಲಿ  ಕಾಂಕ್ರೀಟಿಕೃತ ರಸ್ತೆಯನ್ನು ಉದ್ಘಾಟಿಸಿ ಮಾತನಾಡಿದರು. ಜನಪ್ರತಿನಿಧಿಗಳೊಂದಿಗೆ ಸಾರ್ವಜನಿಕರೂ ಸಹಕಾರ ನೀಡಿದರೆ ಅಭಿವೃದ್ದಿಯ ವೇಗ ಹೆಚ್ಚಳವಾಗುತ್ತದೆ. ಇಲ್ಲಿನ ರಸ್ತೆಗೆ ಸಂಸದರು 5 ಲಕ್ಷ,ಶಾಸಕರು 10

ಚೆನ್ನಾವರ: ಕಾಂಕ್ರೀಟಿಕೃತ  ರಸ್ತೆ  ಉದ್ಘಾಟನೆ Read More »

ಕರಾವಳಿ

ಸುಬ್ರಹ್ಮಣ್ಯ: ಅಪರಿಚಿತ ವ್ಯಕ್ತಿ ಮೃತ್ಯು

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಮಾ.23. ದಕ್ಷಿಣ ಭಾರತದ ಪ್ರಸಿದ್ಧ ಕುಕ್ಕೇ ಸುಬ್ರಹ್ಮಣ್ಯ ದೇವಸ್ಥಾನಕ್ಕೆಂದು ಬಂದಿದ್ದ ಅಪರಿಚಿತ ಯಾತ್ರಾರ್ಥಿಯೋರ್ವರು ಅನಾರೋಗ್ಯದಿಂದಾಗಿ ಮೃತಪಟ್ಟ ಘಟನೆ ಶುಕ್ರವಾರದಂದು ನಡೆದಿದೆ. ಮೃತರನ್ನು ಆಂಧ್ರಪ್ರದೇಶ ಮೂಲದವರೆಂದು ಗುರುತಿಸಲಾಗಿದ್ದು, ಇವರು ತೀವ್ರ ತರದ ಅನಾರೋಗ್ಯದಿಂದ ಬಳಲುತ್ತಿದ್ದರೆನ್ನಲಾಗಿದೆ. ಶುಕ್ರವಾರದಂದು ಸುಬ್ರಹ್ಮಣ್ಯ ಬಸ್ ನಿಲ್ದಾಣದಲ್ಲಿ ಮೃತಪಟ್ಟಿದ್ದಾರೆ. ಸ್ಥಳಕ್ಕೆ ಸುಬ್ರಹ್ಮಣ್ಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ‌.

ಸುಬ್ರಹ್ಮಣ್ಯ: ಅಪರಿಚಿತ ವ್ಯಕ್ತಿ ಮೃತ್ಯು Read More »

ಕರಾವಳಿ

ನೆಲ್ಯಾಡಿ: ಪ್ರಧಾನಿ ಮೋದಿಯನ್ನು ಅವಹೇಳನಕಾರಿಯಾಗಿ ಚಿತ್ರಿಸಿ ವಾಟ್ಸಪ್ ಗ್ರೂಪಿನಲ್ಲಿ ಹಂಚಿಕೆ ► ಗ್ರೂಪ್ ಅಡ್ಮಿನ್ ಹಾಗೂ ಸದಸ್ಯನ ವಿರುದ್ದ ಉಪ್ಪಿನಂಗಡಿ ಠಾಣೆಯಲ್ಲಿ ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಮಾ.23. ಪ್ರಧಾನಿ ಮೋದಿಯವರ ಭಾವಚಿತ್ರವನ್ನು ವಿರೂಪಗೊಳಿಸಿ ವಾಟ್ಸಪ್ ಗ್ರೂಪ್ ನಲ್ಲಿ ಹಂಚಿದ ಹಿನ್ನೆಲೆಯಲ್ಲಿ ಗ್ರೂಪ್ ಅಡ್ಮಿನ್ ಹಾಗೂ ಸದಸ್ಯನೋರ್ವನ ವಿರುದ್ಧ ಉಪ್ಪಿನಂಗಡಿ ಠಾಣೆಯಲ್ಲಿ ದೂರು ದಾಖಲಾಗಿದೆ. ಫ್ರೆಂಡ್ಸ್ ಪಡುಬೆಟ್ಟು ಎಂಬ ಗ್ರೂಪ್ ನಲ್ಲಿ ಮಾರ್ಚ್ 20 ರಂದು ಅಪರಾಹ್ನ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಮುಖವನ್ನು ಹಂದಿಯ ಮುಖದಂತೆ ಚಿತ್ರಿಸಿ ಹಂಚಿಕೊಂಡಿದ್ದಾರೆನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಗ್ರೂಪ್ ಅಡ್ಮಿನ್ ಹಾಗೂ ಓರ್ವ ಸದಸ್ಯನ ವಿರುದ್ಧ ‘ನಮ್ಮ ಪ್ರಧಾನಿಯ ಘನತೆಗೆ ಧಕ್ಕೆ ಉಂಟಾಗಿದ್ದು, ಈ

ನೆಲ್ಯಾಡಿ: ಪ್ರಧಾನಿ ಮೋದಿಯನ್ನು ಅವಹೇಳನಕಾರಿಯಾಗಿ ಚಿತ್ರಿಸಿ ವಾಟ್ಸಪ್ ಗ್ರೂಪಿನಲ್ಲಿ ಹಂಚಿಕೆ ► ಗ್ರೂಪ್ ಅಡ್ಮಿನ್ ಹಾಗೂ ಸದಸ್ಯನ ವಿರುದ್ದ ಉಪ್ಪಿನಂಗಡಿ ಠಾಣೆಯಲ್ಲಿ ಪ್ರಕರಣ ದಾಖಲು Read More »

ಕರಾವಳಿ

ಧರ್ಮಸ್ಥಳ: ಸ್ನಾನಕ್ಕೆಂದು ನದಿಗಿಳಿದ ಯುವಕ‌ ನೀರುಪಾಲು

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಮಾ.22. ಸ್ನಾನಕ್ಕೆಂದು ನದಿಗಿಳಿದ ಯುವಕನೋರ್ವ ನೀರುಪಾಲಾದ ಘಟನೆ ಧರ್ಮಸ್ಥಳ ಸಮೀಪ ಕುದ್ರಾಯ ಎಂಬಲ್ಲಿ ಗುರುವಾರದಂದು ನಡೆದಿದೆ. ಮೃತ ಯುವಕನನ್ನು ಧರ್ಮಸ್ಥಳ ನಿವಾಸಿ ಗಿರೀಶ್ (30) ಎಂದು ಗುರುತಿಸಲಾಗಿದೆ. ಈತ ಗುರುವಾರದಂದು ತನ್ನ ಸ್ನೇಹಿತರೊಂದಿಗೆ ಸ್ನಾನಕ್ಕೆಂದು ನದಿಗೆ ತೆರಳಿದ್ದು, ನೀರಿಗೆ ಇಳಿಯುವ ಮುಂಚೆ ಮದ್ಯ ಸೇವಿಸಿದ್ದನೆನ್ನಲಾಗಿದೆ. ಇದರಿಂದಾಗಿ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾನೆ. ವಿಷಯ ತಿಳಿದ ಧರ್ಮಸ್ಥಳ ಪೋಲೀಸರು ಸ್ಥಳೀಯರ ಸಹಕಾರದೊಂದಿಗೆ ಮೃತದೇಹವನ್ನು ಮೇಲಕ್ಕೆತ್ತಿದ್ದಾರೆ‌. ಈ ಬಗ್ಗೆ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಧರ್ಮಸ್ಥಳ: ಸ್ನಾನಕ್ಕೆಂದು ನದಿಗಿಳಿದ ಯುವಕ‌ ನೀರುಪಾಲು Read More »

ಕರಾವಳಿ

ಬೇಟೆಗೆಂದು‌ ಕರಿಂಜ ಕಾಡಿಗೆ ತೆರಳಿ ನಾಪತ್ತೆಯಾಗಿದ್ದವರ ಮೃತದೇಹ ಪತ್ತೆ ► ಸಂಶಯಕ್ಕೀಡುಮಾಡಿದ ನಿಗೂಢ ಸಾವು

(ನ್ಯೂಸ್ ಕಡಬ) newskadaba.com ಮೂಡುಬಿದಿರೆ, ಮಾ.22. ಕಳೆದ ಮೂರು ದಿನಗಳ ಹಿಂದೆ ಇಲ್ಲಿಗೆ ಸಮೀಪದ ಕರಿಂಜ ಕಾಡಿಗೆ ಬೇಟೆಗೆಂದು ತೆರಳಿ ನಾಪತ್ತೆಯಾಗಿದ್ದ ಇಬ್ಬರ ಮೃತದೇಹಗಳು ಗುರುವಾರದಂದು ಕರಿಂಜೆ ಗದ್ದೆಯ ಬಳಿ ಪತ್ತೆಯಾಗಿದೆ. ಮೃತರನ್ನು ಕರಿಂಜೆಯ ಕಕ್ಕೆಬೆಟ್ಟು ನಿವಾಸಿ ಕೃಷಿಕರಾಗಿರುವ ಪ್ರವೀಣ್ ತೌರೋ (32) ಮತ್ತು ಪ್ರಾಂತ್ಯ ಗ್ರಾಮದ ಪೇಪರ್‌ಮಿಲ್‌ ನಿವಾಸಿ ಉದ್ಯಮಿ ಗ್ರೇಶನ್ ರೊಡ್ರಿಗಸ್ (34) ಎಂದು ಗುರುತಿಸಲಾಗಿದೆ. ಇವರು ಮಂಗಳವಾರ ರಾತ್ರಿ ಬೇಟೆಗೆಂದು ತೆರಳಿದ್ದು, ನಂತರ ನಾಪತ್ತೆಯಾಗಿದ್ದರು. ಆದರೆ ಆದರೆ ಬೇಟೆಗೆಂದಜ ಮನೆಯಿಂದ ತೆರಳಿದ್ದ ಬೊಲೇರೋ

ಬೇಟೆಗೆಂದು‌ ಕರಿಂಜ ಕಾಡಿಗೆ ತೆರಳಿ ನಾಪತ್ತೆಯಾಗಿದ್ದವರ ಮೃತದೇಹ ಪತ್ತೆ ► ಸಂಶಯಕ್ಕೀಡುಮಾಡಿದ ನಿಗೂಢ ಸಾವು Read More »

ಕರಾವಳಿ

►► ಪ್ರಕಟಣೆ: ‘ಜೋಗಿಬೆಟ್ಟು ನಿಲಯ’ ಗೃಹಪ್ರವೇಶ ಮುಂದೂಡಿಕೆ

(ನ್ಯೂಸ್ ಕಡಬ) newskadaba.com ಕಡಬ, ಮಾ.22. ಕೋಡಿಂಬಾಳ ಸಮೀಪದ ಜೋಗಿಬೆಟ್ಟು ಎಂಬಲ್ಲಿ ಮಾರ್ಚ್ 23 ನೇ ಶುಕ್ರವಾರದಂದು ನಡೆಯಬೇಕಿದ್ದ ‘ಜೋಗಿಬೆಟ್ಟು ನಿಲಯ’ ಗೃಹಪ್ರವೇಶವನ್ನು ಕಾರಣಾಂತರಗಳಿಂದ ಮುಂದೂಡಲಾಗಿದೆ ಎಂದು ಮಾಲಕರಾದ ನಾರಾಯಣ ಗೌಡರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ 9448100502 ಸಂಖ್ಯೆಯನ್ನು ಸಂಪರ್ಕಿಸುವಂತೆ ಕೋರಲಾಗಿದೆ.

►► ಪ್ರಕಟಣೆ: ‘ಜೋಗಿಬೆಟ್ಟು ನಿಲಯ’ ಗೃಹಪ್ರವೇಶ ಮುಂದೂಡಿಕೆ Read More »

ಕರಾವಳಿ

ಕುಂತೂರು: ಹೋಟೇಲ್‌ಗಳಿಗೆ ನುಗ್ಗಿದ ಕಳ್ಳರು ► ಚಿಲ್ಲರೆ ದುಡ್ಡಿನೊಂದಿಗೆ ಹರಿಕೆ‌ ಡಬ್ಬಿಯನ್ನು ಹೊತ್ತೊಯ್ದ ಕಳ್ಳರು

(ನ್ಯೂಸ್ ಕಡಬ) newskadaba.com ಕಡಬ, ಮಾ.22. ಠಾಣಾ ವ್ಯಾಪ್ತಿಯ ಕುಂತೂರು ಎಂಬಲ್ಲಿ ಹೊಟೇಲ್ ಗಳಿಗೆ ನುಗ್ಗಿರುವ ಪುಡಿಗಳ್ಳರು ತಮ್ಮ‌ ಕೈಚಳಕವನ್ನು ತೋರಿಸಿದ ಘಟನೆ ಬುಧವಾರ ರಾತ್ರಿ ವರದಿಯಾಗಿದೆ. ಕುಂತೂರು ಪೇಟೆಯಲ್ಲಿರುವ ನಾಸಿರ್ ಎಂಬವರಿಗೆ ಸೇರಿದ ಹೊಟೇಲ್ ಗೆ ನುಗ್ಗಿದ ಕಳ್ಳರು ಸುಮಾರು ಹತ್ತು ಸಾವಿರದಷ್ಟು ನಗದು ಹಾಗೂ ಹರಿಕೆ ಡಬ್ಬಿಗಳನ್ನು ದೋಚಿದ್ದಾರೆ. ಪಕ್ಕದಲ್ಲಿನ ಮತ್ತೊಂದು ಹೊಟೇಲಿನಲ್ಲೂ ತಮ್ಮ ಕೈಚಳಕವನ್ನು ತೋರಿಸಿರುವ ಕಳ್ಳರು ಸಿಗರೇಟ್ ಪ್ಯಾಕೆಟ್ ಸೇರಿದಂತೆ ಚಿಲ್ಲರೆ ಹಣವನ್ನು ಕೊಂಡು ಹೋಗಿದ್ದಾರೆ ಎನ್ನಲಾಗಿದೆ. ಗುರುವಾರ ಬೆಳಿಗ್ಗೆ ಘಟನೆ

ಕುಂತೂರು: ಹೋಟೇಲ್‌ಗಳಿಗೆ ನುಗ್ಗಿದ ಕಳ್ಳರು ► ಚಿಲ್ಲರೆ ದುಡ್ಡಿನೊಂದಿಗೆ ಹರಿಕೆ‌ ಡಬ್ಬಿಯನ್ನು ಹೊತ್ತೊಯ್ದ ಕಳ್ಳರು Read More »

ಕರಾವಳಿ

ನೆಕ್ಕಿಲಾಡಿ: ಅತ್ಯಾಚಾರ ಪ್ರಕರಣದ ಆರೋಪಿ ಬಂಧನ ► ಸುಮಾರು ಹದಿನಾಲ್ಕು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಮಾ.22. ಸುಮಾರು 14 ವರ್ಷಗಳ ಹಿಂದೆ ಅತ್ಯಾಚಾರ ನಡೆಸಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಉಪ್ಪಿನಂಗಡಿ ಪೊಲೀಸರು ಬಂಧಿಸಿದ ಘಟನೆ ಗುರುವಾರದಂದು ನಡೆದಿದೆ. ಬಂಧಿತ ಆರೋಪಿಯನ್ನು 34ನೇ ನೆಕ್ಕಿಲಾಡಿ ಗ್ರಾಮದ ಬೀತಲಪ್ಪು ನಿವಾಸಿ ಹಿತೇಶ್ ಎಂದು ಗುರುತಿಸಲಾಗಿದೆ. 2004 ರಲ್ಲಿ ಉಪ್ಪಿನಂಗಡಿ ಸಮೀಪದ ಕರಾಯ ಎಂಬಲ್ಲಿ ವಿವಾಹಿತ ಮಹಿಳೆಯ ಮೇಲೆ ಅತ್ಯಾಚಾರ ನಡೆಸಿ ಪರಾರಿಯಾಗಿದ್ದನೆನ್ನಲಾಗಿದೆ. ಆ ಬಳಿಕ ಆರೋಪಿಯು ಹೆಸರು ಬದಲಾಯಿಸಿ ಬೆಂಗಳೂರಿನಲ್ಲಿ ತಲೆಮರೆಸಿಕೊಂಡಿದ್ದ ನೆನ್ನಲಾಗಿದ್ದು, ಗುರುವಾರದಂದು ಖಚಿತ ಮಾಹಿತಿಯ ಮೇರೆಗೆ ಉಪ್ಪಿನಂಗಡಿ ಪೊಲೀಸರು

ನೆಕ್ಕಿಲಾಡಿ: ಅತ್ಯಾಚಾರ ಪ್ರಕರಣದ ಆರೋಪಿ ಬಂಧನ ► ಸುಮಾರು ಹದಿನಾಲ್ಕು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ Read More »

ಕರಾವಳಿ

ಇಚಿಲಂಪಾಡಿ: ಮನೆಗೆ ನುಗ್ಗಿ ಬೆದರಿಸಿ ನಗ, ನಗದು ದರೋಡೆಗೈದ ಆಗಂತುಕರ ತಂಡ ► ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ದರೋಡೆ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಮಾ.21. ಮನೆಗೆ ನುಗ್ಗಿದ ತಂಡವೊಂದು ಮನೆಯಲ್ಲಿದ್ದವರನ್ನು ಚಾಕು, ಚೂರಿ, ಪಿಸ್ತೂಲ್ ತೋರಿಸಿ ಬೆದರಿಸಿ ನಗ- ನಗದು ದರೋಡೆ ಮಾಡಿದ ಘಟನೆ ಇಚಿಲಂಪಾಡಿಯಲ್ಲಿ ಬುಧವಾರ ರಾತ್ರಿ ನಡೆದಿದೆ. ಇಚಿಲಂಪಾಡಿ ಗ್ರಾಮದ ಮಾನಡ್ಕ ನಿವಾಸಿ ನಿವೃತ್ತ ಸೈನಿಕ ನಾರಾಯಣ ಪಿಳ್ಳೆ ಎಂಬವರ ಮನೆಗೆ ನುಗ್ಗಿದ ಇಬ್ಬರು ಆಗಂತುಕರು ಮನೆಯವರನ್ನು ಬೆದರಿಸಿ 35,000 ನಗದು ಹಾಗೂ 8 ಪವನ್ ಚಿನ್ನ, 2 ಮೊಬೈಲ್ ದೋಚಿದ್ದಾರೆ ಎನ್ನಲಾಗಿದೆ. ಈ ಸಂದರ್ಭದಲ್ಲಿ ಮನೆಯಲ್ಲಿ ನಾರಾಯಣ ಪಿಳ್ಳೆ ಮತ್ತು ಅವರ

ಇಚಿಲಂಪಾಡಿ: ಮನೆಗೆ ನುಗ್ಗಿ ಬೆದರಿಸಿ ನಗ, ನಗದು ದರೋಡೆಗೈದ ಆಗಂತುಕರ ತಂಡ ► ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ದರೋಡೆ Read More »

ಕರಾವಳಿ
Scroll to Top