ಇಂದು (ಮಾ.20) ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ರಾಹುಲ್ ಗಾಂಧಿ ಮಂಗಳೂರಿಗೆ ► ಲಕ್ಷಕ್ಕೂ ಹೆಚ್ಚು ಜನ ಸೇರುವ ನಿರೀಕ್ಷೆ
(ನ್ಯೂಸ್ ಕಡಬ) newskadaba.com ಮಂಗಳೂರು, ಮಾ.20. ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ರಾಹುಲ್ ಗಾಂಧಿ ಇಂದು (ಮಾ. 20) ಮಂಗಳೂರಿಗೆ ಭೇಟಿ ನೀಡಲಿದ್ದು, ಜನಾಶೀರ್ವಾದ ಯಾತ್ರೆ ಆರಂಭಿಸಲಿದ್ದಾರೆ ಎಂದು ಸಚಿವರಾದ ರಮಾನಾಥ ರೈ ಹಾಗೂ ಯು.ಟಿ.ಖಾದರ್ ಹೇಳಿದರು. ಅವರು ಕಾಂಗ್ರೆಸ್ ಪಕ್ಷದ ಜಿಲ್ಲಾ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಬೆಳಿಗ್ಗೆ 11:30ಕ್ಕೆ ವಿಶೇಷ ವಿಮಾನದಲ್ಲಿ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಲಿರುವ ರಾಹುಲ್ ಗಾಂಧಿ ಬಳಿಕ ಉಡುಪಿಯ ಕಾಪುವಿನಲ್ಲಿ ನಡೆಯುವ ಸೇವಾದಳದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಜನಾಶೀರ್ವಾದ ಯಾತ್ರೆ ಆರಂಭಿಸಲಿದ್ದಾರೆ. 3.30ಕ್ಕೆ ಮುಲ್ಕಿ […]










