ಕರಾವಳಿ

ಆಲಂಕಾರು: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ ► ತಪ್ಪಿದ ಭಾರೀ ಅನಾಹುತ

(ನ್ಯೂಸ್ ಕಡಬ) newskadaba.com ಕಡಬ, ಮಾ.14. ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಢಿಕ್ಕಿಯಾಗಿದ್ದು, ಪ್ರಯಾಣಿಕರು ಪವಾಡಸದೃಶವಾಗಿ ಅಪಾಯದಿಂದ ಪಾರಾದ ಘಟನೆ ಉಪ್ಪಿನಂಗಡಿ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಆಲಂಕಾರಿನಲ್ಲಿ ಬುಧವಾರ ರಾತ್ರಿ ನಡೆದಿದೆ. ಕಡಬದಿಂದ ಉಪ್ಪಿನಂಗಡಿ ಕಡೆಗೆ ತೆರಳುತ್ತಿದ್ದ KA.02.ME.3434 ನೋಂದಣಿಯ ಕಾರು ಮಳೆಯಿದ್ದ ಕಾರಣದಿಂದಾಗಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಢಿಕ್ಕಿಯಾಗಿದೆ. ಘಟನೆಯಲ್ಲಿ ಕಾರಿನಲ್ಲಿದ್ದ ಮಹಿಳೆಯರು, ಮಕ್ಕಳು ಪವಾಡಸದೃಶವಾಗಿ ಅಪಾಯದಿಂದ ಪಾರಾಗಿದ್ದಾರೆ. ಘಟನೆಯ ತೀವ್ರತೆಗೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ವಿದ್ಯುತ್ […]

ಆಲಂಕಾರು: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ ► ತಪ್ಪಿದ ಭಾರೀ ಅನಾಹುತ Read More »

ಕರಾವಳಿ

ಕುಕ್ಕೇ ಸುಬ್ರಹ್ಮಣ್ಯಕ್ಕೆ ಎರಡೂವರೆ ಕೋಟಿಯ ಬ್ರಹ್ಮರಥ ಸಮರ್ಪಿಸಲಿರುವ ► ಮುತ್ತಪ್ಪ ರೈ ಪಾಲುದಾರಿಕೆಯಲ್ಲಿ ಕಡಬದ ಉದ್ಯಮಿ ಅಜಿತ್ ಶೆಟ್ಟಿ

(ನ್ಯೂಸ್ ಕಡಬ) newskadaba.com ಕಡಬ, ಮಾ.14. ದಕ್ಷಿಣ ಭಾರತದ ಪ್ರಸಿದ್ಧ ಧಾರ್ಮಿಕ ಕೇಂದ್ರವಾದ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕರಾವಳಿ ಮೂಲದ, ಬೆಂಗಳೂರಿನ ಉದ್ಯಮಿಗಳಿಬ್ಬರು ಪಾಲುದಾರಿಕೆಯಲ್ಲಿ ಎರಡೂವರೆ ಕೋಟಿ ರೂ. ಮೌಲ್ಯದ ಬ್ರಹ್ಮರಥವನ್ನು ನೀಡಲಿದ್ದಾರೆ. ಬೆಂಗಳೂರಿನ ಬಿಡದಿ ರಿಯಾಲಿಟಿ ವೆಂಚರ್ ಪಾಲುದಾರರಾದ ಜಯಕರ್ನಾಟಕ ಸಂಘಟನೆಯ ಮುಖ್ಯಸ್ಥ ಮುತ್ತಪ್ಪ ರೈ ಹಾಗೂ ಕಡಬದ ಅಜಿತ್ ಶೆಟ್ಟಿ ಪಾಲುದಾರಿಕೆಯಲ್ಲಿ ಬ್ರಹ್ಮರಥವನ್ನು ನೀಡಲು ನಿರ್ಧರಿಸಿದ್ದು, ಅದರಂತೆ ಮಾರ್ಚ್ 15 ಗುರುವಾರದಂದು ಅಮೃತಸಿದ್ಧಿ ಯೋಗದ ಶುಭ ಮುಹೂರ್ತದಲ್ಲಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ವಿಶೇಷ ಪೂಜೆ

ಕುಕ್ಕೇ ಸುಬ್ರಹ್ಮಣ್ಯಕ್ಕೆ ಎರಡೂವರೆ ಕೋಟಿಯ ಬ್ರಹ್ಮರಥ ಸಮರ್ಪಿಸಲಿರುವ ► ಮುತ್ತಪ್ಪ ರೈ ಪಾಲುದಾರಿಕೆಯಲ್ಲಿ ಕಡಬದ ಉದ್ಯಮಿ ಅಜಿತ್ ಶೆಟ್ಟಿ Read More »

ಕರಾವಳಿ

ಮಾಣಿ: ಮೊದಲ ಮಳೆಗೆ ಕೆಎಸ್ಸಾರ್ಟಿಸಿ ಬಸ್ ಪಲ್ಟಿ ► ಗರ್ಭಿಣಿ ಮಹಿಳೆ ಸೇರಿ ಇಬ್ಬರು ಗಂಭೀರ, ಹಲವರಿಗೆ ಗಾಯ

(ನ್ಯೂಸ್ ಕಡಬ) newskadaba.com ವಿಟ್ಲ, ಮಾ.14. ಸರ್ಕಾರಿ ಬಸ್ಸೊಂದು ಚಾಲಕನ ನಿಯಂತ್ರಣ ಕಳೆದು ರಸ್ತೆ ಬದಿಗೆ ಉರುಳಿ ಇಬ್ಬರು ಗಂಭೀರ ಗಾಯಗೊಂಡ ಘಟನೆ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಮಾಣಿಯಲ್ಲಿ ಸಂಭವಿಸಿದೆ. ಘಟನೆಯಲ್ಲಿ ಬಸ್ಸಿನಲ್ಲಿದ್ದ ಗರ್ಭಿಣಿ ಮಹಿಳೆ ಸೇರಿದಂತೆ ಇಬ್ಬರು ಗಾಯಗೊಂಡಿದ್ದು, ಹತ್ತಕ್ಕೂ ಅಧಿಕ ಮಂದಿ ಪ್ರಯಾಣಿಕರು ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ. ಉಪ್ಪಿನಂಗಡಿ ಕಡೆಯಿಂದ ಮಂಗಳೂರಿಗೆ ತೆರಳುತ್ತಿದ್ದ ಬಸ್ ಸುರಿಯುತ್ತಿರುವ ಮಳೆಯ ಅಬ್ಬರಕ್ಕೆ ಚಾಲಕನ ನಿಯಂತ್ರಣ ಕಳೆದು ರಸ್ತೆಗೆ ಉರುಳಿದೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು

ಮಾಣಿ: ಮೊದಲ ಮಳೆಗೆ ಕೆಎಸ್ಸಾರ್ಟಿಸಿ ಬಸ್ ಪಲ್ಟಿ ► ಗರ್ಭಿಣಿ ಮಹಿಳೆ ಸೇರಿ ಇಬ್ಬರು ಗಂಭೀರ, ಹಲವರಿಗೆ ಗಾಯ Read More »

ಕರಾವಳಿ

ಕಡಬ ಸೇರಿದಂತೆ ಕರಾವಳಿಯ ಹಲವೆಡೆ ಭಾರೀ ಗುಡುಗು ► ಕಾದು ಕೆಂಪಾಗಿದ್ದ ಇಳೆಗೆ ತಂಪೆರೆದ ಮಳೆ

(ನ್ಯೂಸ್ ಕಡಬ) newskadaba.com ಸುಳ್ಯ, ಮಾ.14. ಕೇರಳ ಹಾಗೂ ಲಕ್ಷದ್ವೀಪಗಳಲ್ಲಿನ ಚಂಡಮಾರುತದ ಪರಿಣಾಮವಾಗಿ ಕಡಬ, ಪುತ್ತೂರು ಸೇರಿದಂತೆ ಕರಾವಳಿ ಭಾಗದಲ್ಲಿ ಗುಡುಗು ಸಹಿತ ಭಾರೀ ಮಳೆಯಾಗಿದೆ. ಬುಧವಾರ ಮಧ್ಯಾಹ್ನದಿಂದಲೇ ಮೋಡ ಕವಿದ ವಾತಾವರಣದಿಂದಿದ್ದು, ಸಂಜೆಯಾಗುತ್ತಲೇ ಭಾರೀ ಮಳೆಯಾಗಿದೆ. ಕಡಬ, ಪುತ್ತೂರು, ಉಪ್ಪಿನಂಗಡಿ, ಬೆಳ್ಳಾರೆ, ಸುಳ್ಯ ಸೇರಿದಂತೆ ಹಲವೆಡೆ ಗುಡುಗು ಮಿಂಚಿನೊಂದಿಗೆ ಭಾರೀ ಮಳೆಯಾಗಿದ್ದು, ಶಾಲಾ ಮಕ್ಕಳು ಸೇರಿದಂತೆ ಸಾರ್ವಜನಿಕರು ಪರದಾಡುವಂತಾಯಿತು. ಹವಾಮಾನ ವೈಪರೀತ್ಯದ ಹಿನ್ನೆಲೆಯಲ್ಲಿ ಕರಾವಳಿ ಪ್ರದೇಶಗಳಲ್ಲಿ ಭಾರಿ ಮಳೆಯಾಗುವ ಸಂಭವವಿದ್ದು, ಅರಬ್ಬೀ ಸಮುದ್ರದ ಆಗ್ನೇಯ ಭಾಗ

ಕಡಬ ಸೇರಿದಂತೆ ಕರಾವಳಿಯ ಹಲವೆಡೆ ಭಾರೀ ಗುಡುಗು ► ಕಾದು ಕೆಂಪಾಗಿದ್ದ ಇಳೆಗೆ ತಂಪೆರೆದ ಮಳೆ Read More »

ಕರಾವಳಿ

ಚಂಡಮಾರುತದಿಂದಾಗಿ ಹವಾಮಾನ ವೈಪರೀತ್ಯದ ಹಿನ್ನೆಲೆ ► ಸುಳ್ಯ ಪರಿಸರದಲ್ಲಿ ಗುಡುಗು ಮಿಶ್ರಿತ ಭಾರೀ ಮಳೆ

ಸಾಂದರ್ಭಿಕ ಚಿತ್ರ (ನ್ಯೂಸ್ ಕಡಬ) newskadaba.com ಸುಳ್ಯ, ಮಾ.14. ಕೇರಳ ಹಾಗೂ ಲಕ್ಷದ್ವೀಪಗಳಲ್ಲಿನ ಚಂಡಮಾರುತದ ಪರಿಣಾಮವಾಗಿ ಕರಾವಳಿ ಪ್ರದೇಶಗಳ ಅಲ್ಲಲ್ಲಿ ಮಳೆಯಾಗಿದ್ದು, ಸುಳ್ಯ ಪರಿಸರದಲ್ಲಿ ಗುಡುಗು ಸಹಿತ ಭಾರೀ ಮಳೆಯಾಗಿದೆ. ಬುಧವಾರ ಸಂಜೆ ಸಮಯದಲ್ಲಿ ಗುಡುಗು ಮಿಂಚಿನೊಂದಿಗೆ ಭಾರೀ ಮಳೆಯಾಗಿದ್ದು, ಶಾಲಾ ಮಕ್ಕಳು ಸೇರಿದಂತೆ ಸಾರ್ವಜನಿಕರು ಪರದಾಡುವಂತಾಯಿತು. ಕಡಬ ಪರಿಸರದಲ್ಲಿ ಬುಧವಾರ ಅಪರಾಹ್ನದಿಂದ ಮೋಡ ಕವಿದ ವಾತಾವರಣ ಕಂಡುಬಂದಿದೆ. ಹವಾಮಾನ ವೈಪರೀತ್ಯದ ಹಿನ್ನೆಲೆಯಲ್ಲಿ ಕರಾವಳಿ ಪ್ರದೇಶಗಳಲ್ಲಿ ಭಾರಿ ಮಳೆಯಾಗುವ ಸಂಭವವಿದ್ದು, ಅರಬ್ಬೀ ಸಮುದ್ರದ ಆಗ್ನೇಯ ಭಾಗ ಮಾಲ್ಡೀವ್ಸ್ ಕರಾವಳಿ

ಚಂಡಮಾರುತದಿಂದಾಗಿ ಹವಾಮಾನ ವೈಪರೀತ್ಯದ ಹಿನ್ನೆಲೆ ► ಸುಳ್ಯ ಪರಿಸರದಲ್ಲಿ ಗುಡುಗು ಮಿಶ್ರಿತ ಭಾರೀ ಮಳೆ Read More »

ಕರಾವಳಿ

ಕೈಕಂಬ: ಭಾಗ್ಯ ರಕ್ಷಿತಾರಣ್ಯದಲ್ಲಿ ಕಾಡ್ಗಿಚ್ಚು ► ಎಕರೆ ಗಟ್ಟಲೆ ಅರಣ್ಯ ಬೆಂಕಿಗಾಹುತಿ

(ನ್ಯೂಸ್ ಕಡಬ) newskadaba.com ಕಡಬ, ಮಾ.14. ಕೈಕಂಬ ಸಮೀಪದ ಭಾಗ್ಯ ರಕ್ಷಿತಾರಣ್ಯದಲ್ಲಿ ಮಂಗಳವಾರದಿಂದ ಕಾಡ್ಗಿಚ್ಚು ಹರಡಿದ್ದು, ಎಕರೆಗಟ್ಟಲೆ ಅರಣ್ಯ ಭೂಮಿ ಬೆಂಕಿಗಾಹುತಿಯಾಗಿವೆ. ಹೆದ್ದಾರಿಯಿಂದ ಏಳೆಂಟು ಕಿಲೋಮೀಟರ್ ದೂರದಲ್ಲಿರುವ ಭಾಗ್ಯ ರಕ್ಷಿತಾರಣ್ಯದ ಮೂಲೆಮನೆ ಎಂಬಲ್ಲಿ ಮಂಗಳವಾರದಂದು ಆರಂಭವಾದ ಕಾಡ್ಗಿಚ್ಚನ್ನು ರಾತ್ರಿ ವೇಳೆಗೆ ಅರಣ್ಯ ಇಲಾಖೆಯ ಸಿಬ್ಬಂದಿಗಳು ಊರವರ ಸಹಕಾರದೊಂದಿಗೆ ಹತೋಟಿಗೆ ತಂದಿದ್ದರೆನ್ನಲಾಗಿದೆ. ಬುಧವಾರದಂದು ಬೆಳಗ್ಗಿನ ಜಾವ ಕಾಡ್ಗಿಚ್ಚು ಮುಂದುವರಿದಿದ್ದು, ಎಕರೆಗಟ್ಟಲೆ ಪ್ರದೇಶ ಬೆಂಕಿಗೆ ಆಹುತಿಯಾಗಿವೆ. 40 ಕ್ಕೂ ಹೆಚ್ಚು ಅರಣ್ಯ ಇಲಾಖೆಯ ಸಿಬ್ಬಂದಿಗಳು ಹಾಗೂ ಊರವರು ಬೆಂಕಿ ನಂದಿಸುವ

ಕೈಕಂಬ: ಭಾಗ್ಯ ರಕ್ಷಿತಾರಣ್ಯದಲ್ಲಿ ಕಾಡ್ಗಿಚ್ಚು ► ಎಕರೆ ಗಟ್ಟಲೆ ಅರಣ್ಯ ಬೆಂಕಿಗಾಹುತಿ Read More »

ಕರಾವಳಿ

ಕುಂತೂರು: ಬೈಕ್ ಸ್ಕಿಡ್ ಆಗಿ ಪಲ್ಟಿ ► ಬಾಲಕ ಗಂಭೀರ, ಸವಾರ ಪಾರು

(ನ್ಯೂಸ್ ಕಡಬ) newskadaba.com ಕಡಬ, ಮಾ.14. ಬೈಕೊಂದು ಸ್ಕಿಡ್ ಆಗಿ ಉರುಳಿ ಬಿದ್ದ ಪರಿಣಾಮ ಬಾಲಕನೋರ್ವ ಗಂಭೀರ ಗಾಯಗೊಂಡ ಘಟನೆ ಕುಂತೂರಿನ ಪೆರಾಬೆ ಎಂಬಲ್ಲಿ ಬುಧವಾರದಂದು ನಡೆದಿದೆ. ಗಾಯಾಳು ಬಾಲಕನನ್ನು ಪೆರಾಬೆ ಗ್ರಾಮದ ಪಾಲೆಚಾರು ನಿವಾಸಿ ವಿಶ್ವನಾಥ ಗೌಡ ಎಂಬವರ ಪುತ್ರ ಪೆರಾಬೆ ಶಾಲೆಯ ಒಂದನೇ ತರಗತಿಯ ಬಾಲಕ ಜಯಕುಮಾರ್ ಎಂದು ಗುರುತಿಸಲಾಗಿದೆ. ಈತ ತನ್ನ ತಂದೆಯೊಂದಿಗೆ ಬುಧವಾರದಂದು ಶಾಲೆಗೆ ಆಗಮಿಸುತ್ತಿದ್ದಾಗ ಪೆರಾಬೆ ಬಳಿ ಬೈಕ್ ಸ್ಕಿಡ್ ಆಗಿ ದಿರ್ಘಟನೆ ಸಂಭವಿಸಿದೆ. ಗಾಯಾಳುಗಳಿಗೆ ಕಡಬ ಸಮುದಾಯ ಆಸ್ಪತ್ರೆಯಲ್ಲಿ

ಕುಂತೂರು: ಬೈಕ್ ಸ್ಕಿಡ್ ಆಗಿ ಪಲ್ಟಿ ► ಬಾಲಕ ಗಂಭೀರ, ಸವಾರ ಪಾರು Read More »

ಕರಾವಳಿ

ಬೆಳ್ತಂಗಡಿ: ಆಕಾಶದಿಂದ ಭೂಮಿಗೆ ಬಿದ್ದ ಪ್ಯಾರಾಚೂಟ್ ಇದ್ದ ಯಂತ್ರ ► ಸ್ಥಳೀಯರಲ್ಲಿ ಆತಂಕ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಮಾ.14. ಆಕಾಶದಿಂದ ಪ್ಯಾರಾಚೂಟ್ ಇರುವಂತಹ ಯಂತ್ರವೊಂದು ಭೂಮಿಗೆ ಬಿದ್ದು, ಸ್ಥಳೀಯರನ್ನು ಆತಂಕಗೊಳಿಸಿದ ಘಟನೆ ಮಂಗಳವಾರದಂದು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಪುಂಜಾಲಕಟ್ಟೆ ಸಮೀಪದ ಇರ್ವತ್ತೂರು ಎಂಬಲ್ಲಿ ನಡೆದಿದೆ. ಎಡ್ತೂರಿನ ಕೃಷಿಕ ನಿರಂಜನ್ ಜೈನ್ ಎಂಬವರು ನೀರು ಬಿಡಲೆಂದು ತೋಟಕ್ಕೆ ತೆರಳಿದಾಗ ಪ್ಯಾರಾಚೂಟ್ ಇರುವ ಯಂತ್ರವೊಂದು ಕಂಡುಬಂದಿದೆ. ವಾಹನದ ಬ್ಯಾಟರಿಯನ್ನು ಹೋಲುವ ಈ ಯಂತ್ರದ ಜತೆಗೆ ಪುಟ್ಟ ಪ್ಯಾರಾಚೂಟ್ ಕೂಡಾ ಅಳವಡಿಸಲಾಗಿದ್ದು, ಅದರ ಪಕ್ಕದಲ್ಲೇ ತಯಾರಿಕಾ ಕಂಪನಿಯ ಹೆಸರನ್ನು ಬರೆಯಲಾಗಿತ್ತು. ಕೆಲಕಾಲ

ಬೆಳ್ತಂಗಡಿ: ಆಕಾಶದಿಂದ ಭೂಮಿಗೆ ಬಿದ್ದ ಪ್ಯಾರಾಚೂಟ್ ಇದ್ದ ಯಂತ್ರ ► ಸ್ಥಳೀಯರಲ್ಲಿ ಆತಂಕ Read More »

ಕರಾವಳಿ

ಪದವು: ಆಟೋರಿಕ್ಷಾ ಪಲ್ಟಿ ► ನಾಲ್ವರಿಗೆ ಗಾಯ

(ನ್ಯೂಸ್ ಕಡಬ) newskadaba.com ಕಡಬ, ಮಾ.13. ಆಟೋ ರಿಕ್ಷಾವೊಂದು ಚರಂಡಿಗಿಳಿದು ಪಲ್ಟಿಯಾದುದರಿಂದ ನಾಲ್ವರು ಗಾಯಗೊಂಡ ಘಟನೆ ಉಪ್ಪಿನಂಗಡಿ – ಕಡಬ ರಸ್ತೆಯ ಪದವು ಎಂಬಲ್ಲಿ ಮಂಗಳವಾರ ಸಂಜೆ ನಡೆದಿದೆ. ಪದವು ನಿಂದ ಆಲಂಕಾರು ಕಡೆಗೆ ತೆರಳುತ್ತಿದ್ದ ರಿಕ್ಷಾ ಎರ್ಮಾಳ ಎಂಬಲ್ಲಿಗೆ ತಲುಪಿದಾಗ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಚರಂಡಿಗಿಳಿದು ಪಕ್ಕದಲ್ಲಿದ್ದ ಮರಕ್ಕೆ ಢಿಕ್ಕಿ ಹೊಡೆದು ಪಲ್ಟಿಯಾಗಿದೆ. ಘಟನೆಯಲ್ಲಿ ಓರ್ವ ಗಂಭೀರ ಗಾಯಗೊಂಡಿದ್ದು, ಉಳಿದ ಮೂವರು ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ.

ಪದವು: ಆಟೋರಿಕ್ಷಾ ಪಲ್ಟಿ ► ನಾಲ್ವರಿಗೆ ಗಾಯ Read More »

ಕರಾವಳಿ

ಶಾಂತಿನಗರ: ಅಡಿಕೆ ಕಳವು ಆರೋಪಿಯ ಬಂಧನ ► ಉಂಡ ಮನೆಗೇ ದ್ರೋಹ ಬಗೆದ ಆರೋಪಿ

(ನ್ಯೂಸ್ ಕಡಬ) newskadaba.com ಪುತ್ತೂರು, ಮಾ.13. ತಾನು ಕಾರು ಚಾಲಕನಾಗಿ ಕೆಲಸ ಮಾಡುತ್ತಿದ್ದ ಮನೆಯಿಂದಲೇ ಅಡಿಕೆಯನ್ನು ಕಳವುಗೈದ ಘಟನೆ ಕೋಡಿಂಬಾಡಿ ಗ್ರಾಮದ ಶಾಂತಿನಗರದಲ್ಲಿ ನಡೆದಿದ್ದು ಆರೋಪಿ ಚಾಲಕನನ್ನು ಪುತ್ತೂರು ನಗರ ಠಾಣಾ ಪೊಲೀಸರು ಬಂಧಿಸಿದ ಘಟನೆ ಸೋಮವಾರದಂದು ನಡೆದಿದೆ. ಬಂಧಿತ ಆರೋಪಿಯನ್ನು ಬಂಟ್ವಾಳ ತಾಲೂಕು ವಾಮದಪದವು ನಿವಾಸಿ ರಮೇಶ್ ಎಂದು ಗುರುತಿಸಲಾಗಿದೆ. ಈತ ಪುತ್ತೂರಿನ ಹೊಟೇಲ್ ಉದ್ಯಮಿ ಕೋಡಿಂಬಾಡಿ ಗ್ರಾಮದ ಶಾಂತಿನಗರ‌ ನಿವಾಸಿ ಸುದೇಶ್ ಶೆಟ್ಟಿಯವರ ಮನೆಯಿಂದ ಸುಮಾರು 68 ಸಾವಿರ ರೂ. ಮೌಲ್ಯದ 280 ಕೆ.ಜಿ. ಅಡಿಕೆಯನ್ನು

ಶಾಂತಿನಗರ: ಅಡಿಕೆ ಕಳವು ಆರೋಪಿಯ ಬಂಧನ ► ಉಂಡ ಮನೆಗೇ ದ್ರೋಹ ಬಗೆದ ಆರೋಪಿ Read More »

ಕರಾವಳಿ
Scroll to Top