ಕರಾವಳಿ

ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಷಾರನ್ನು ‘ಬಂಡಲ್ ಷಾ’ ಎಂದ ಪುತ್ತೂರಿನ ಕಾಲೇಜು ವಿದ್ಯಾರ್ಥಿ ಸಸ್ಪೆಂಡ್ ► ಚರ್ಚೆಗೆ ಗ್ರಾಸವಾದ ಆಡಳಿತ ಮಂಡಳಿಯ ನಡೆ

(ನ್ಯೂಸ್ ಕಡಬ) newskadaba.com ಪುತ್ತೂರು, ಫೆ.24. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರನ್ನು ಸಾಮಾಜಿಕ ಜಾಲತಾಣಗಳಲ್ಲಿ ‘ಬಂಡಲ್ ಷಾ’ ಎಂದು ಟೀಕಿಸಿದ ಪುತ್ತೂರಿನ ವಿವೇಕಾನಂದ ಕಾಲೇಜಿನ ವಿದ್ಯಾರ್ಥಿಯೊಬ್ಬನನ್ನು ಒಂದು ವಾರಗಳ ಕಾಲ ಸಸ್ಪೆಂಡ್ ಮಾಡಿದ ಘಟನೆ ಇದೀಗ ವರದಿಯಾಗಿದೆ. ಕಳೆದ ಮಂಗಳವಾರದಂದು ಪುತ್ತೂರಿನ ವಿವೇಕಾನಂದ ವಿದ್ಯಾಸಂಸ್ಥೆಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರ ಕಾರ್ಯಕ್ರಮ ನಡೆದಿತ್ತು. ವಿವೇಕಾನಂದ ಕಾಲೇಜಿನ ವಿದ್ಯಾರ್ಥಿಯೊಬ್ಬ ಅಮಿತ್ ಷಾ ಅವರನ್ನು ‘ಬಂಡಲ್ ಷಾ’ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿರುವ […]

ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಷಾರನ್ನು ‘ಬಂಡಲ್ ಷಾ’ ಎಂದ ಪುತ್ತೂರಿನ ಕಾಲೇಜು ವಿದ್ಯಾರ್ಥಿ ಸಸ್ಪೆಂಡ್ ► ಚರ್ಚೆಗೆ ಗ್ರಾಸವಾದ ಆಡಳಿತ ಮಂಡಳಿಯ ನಡೆ Read More »

ಕರಾವಳಿ

ಆಲಂಕಾರು: ಪಾರ್ಸೆಲ್ ನಲ್ಲಿ ಸ್ಮಾರ್ಟ್ ಫೋನ್ ಬದಲಿಗೆ ಸಿಹಿತಿಂಡಿ ಮತ್ತು ದೇವರ ಮೂರ್ತಿ ಕಳುಹಿಸಿ ವಂಚನೆ ► ಯುವತಿಯ ಮಾತಿಗೆ ಮರುಳಾಗಿ ಮೋಸ ಹೋದ ಕಾಲೇಜು ವಿದ್ಯಾರ್ಥಿ

(ನ್ಯೂಸ್ ಕಡಬ) newskadaba.com ಕಡಬ, ಫೆ.23. ಕಂಪೆನಿಯ ಪ್ರಚಾರಾರ್ಥವಾಗಿ ನಡೆದ ಅದೃಷ್ಟ ಶಾಲಿಗಳ ಆಯ್ಕೆಯಲ್ಲಿ ನಿಮ್ಮ ಮೊಬೈಲ್ ನಂಬರ್ ಬಹುಮಾನದ ರೂಪದಲ್ಲಿ ಸ್ಮಾರ್ಟ್ ಫೋನನ್ನು ಗೆದ್ದಿದೆ ಎಂದು ಗ್ರಾಹಕರನ್ನು ನಂಬಿಸಿ ಸಿಹಿತಿಂಡಿಯನ್ನು ಕಳುಹಿಸಿದ ಘಟನೆ ಆಲಂಕಾರಿನಲ್ಲಿ ಕಂಡುಬಂದಿದೆ. ಪೆರಾಬೆ ಗ್ರಾಮದ ಮಾಪಲ ನಿವಾಸಿ ಕಾಲೇಜು ಯುವಕನ ಮೊಬೈಲ್ ಗೆ ಒಂದು ವಾರದ ಹಿಂದೆ ಕರೆಯೊಂದು ಬಂದಿದ್ದು, ಬೆಂಗಳೂರಿನ HHM ಮಾರ್ಕೆಟಿಂಗ್ ಕಂಪೆನಿಯ ಪ್ರಚಾರಾರ್ಥವಾಗಿ ನಮ್ಮ ಕಂಪೆನಿಯು ನಡೆಸಿದ ಅದೃಷ್ಟಶಾಲಿಗಳ ಆಯ್ಕೆಯಲ್ಲಿ ನಿಮ್ಮ ಮೊಬೈಲ್ ಸಂಖ್ಯೆ ಬಹುಮಾನವನ್ನು ಗೆದ್ದುಕೊಂಡಿದೆ.

ಆಲಂಕಾರು: ಪಾರ್ಸೆಲ್ ನಲ್ಲಿ ಸ್ಮಾರ್ಟ್ ಫೋನ್ ಬದಲಿಗೆ ಸಿಹಿತಿಂಡಿ ಮತ್ತು ದೇವರ ಮೂರ್ತಿ ಕಳುಹಿಸಿ ವಂಚನೆ ► ಯುವತಿಯ ಮಾತಿಗೆ ಮರುಳಾಗಿ ಮೋಸ ಹೋದ ಕಾಲೇಜು ವಿದ್ಯಾರ್ಥಿ Read More »

ಕರಾವಳಿ

ಕಡಬ: ಬೀಗ ಮುರಿದು ಮನೆಯೊಳಗೆ ನುಗ್ಗಿದ ಕಳ್ಳರು ► ಲಕ್ಷಾಂತರ ರೂ. ಮೌಲ್ಯದ ನಗ, ನಗದು ದೋಚಿ ಪರಾರಿ

(ನ್ಯೂಸ್ ಕಡಬ) newskadaba.com ಕಡಬ, ಫೆ.23. ಮನೆಯಲ್ಲಿ ಯಾರೂ ಇಲ್ಲದ ವೇಳೆಯಲ್ಲಿ ಮನೆಯೊಳಗೆ ನುಗ್ಗಿರುವ ಕಳ್ಳರು ಲಕ್ಷಾಂತರ ಮೌಲ್ಯದ ನಗ, ನಗದನ್ನು‌ ದೋಚಿರುವ ಘಟನೆ ಠಾಣಾ ವ್ಯಾಪ್ತಿಯ ಕೇಪು ಎಂಬಲ್ಲಿ ಶುಕ್ರವಾರದಂದು ಬೆಳಕಿಗೆ ಬಂದಿದೆ. ಕುಟ್ರುಪ್ಪಾಡಿ ಗ್ರಾಮದ ಕೇಪು ನಿವಾಸಿ ಹಾರೂನ್ ಸಾಹೇಬ್ ಹಾಗೂ ಅವರ ಮನೆಯವರು ನೀರಿನ ಅಭಾವ ವಿದ್ದುದರಿಂದ ಸುಮಾರು ಹನ್ನೆರಡು ದಿನಗಳಿಂದ ಕೆರ್ಮಾಯಿ ಎಂಬಲ್ಲಿ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದು, ಕೇಪು ಮನೆಯಲ್ಲಿ ಕಳೆದ ಕೆಲ ದಿನಗಳಿಂದ ಯಾರೂ ಇಲ್ಲದೆ ಇದ್ದುದನ್ನು ಅರಿತ ಕಳ್ಳರು

ಕಡಬ: ಬೀಗ ಮುರಿದು ಮನೆಯೊಳಗೆ ನುಗ್ಗಿದ ಕಳ್ಳರು ► ಲಕ್ಷಾಂತರ ರೂ. ಮೌಲ್ಯದ ನಗ, ನಗದು ದೋಚಿ ಪರಾರಿ Read More »

ಕರಾವಳಿ

ಕಡಬದಲ್ಲಿ ಪದೇ ಪದೇ ಕಾಡುತ್ತಿರುವ ವಿದ್ಯುತ್ ಸಮಸ್ಯೆ ► ಫೆಬ್ರವರಿ 28 ರಂದು ಕಡಬ ಬಿಜೆಪಿಯಿಂದ ಕ್ಯಾಂಡಲ್ ಉರಿಸಿ ಮೆಸ್ಕಾಂ ಸಬ್ ಸ್ಟೇಶನ್ ಗೆ ಮುತ್ತಿಗೆ

(ನ್ಯೂಸ್ ಕಡಬ) newskadaba.com ಕಡಬ, ಫೆ.23. ಪದೇ ಪದೇ ಕಾಡುತ್ತಿರುವ ವಿದ್ಯುತ್ ಸಮಸ್ಯೆಯ ವಿರುದ್ಧ ಫೆಬ್ರವರಿ 28 ರಂದು ಸಂಜೆ 6 ಗಂಟೆಗೆ ಕಡಬ ಮೆಸ್ಕಾಂ ಸಬ್ ಸ್ಟೇಶನ್ ಗೆ ಮುತ್ತಿಗೆ ಹಾಕಲಾಗುವುದು ಎಂದು ಕಡಬ ಬಿಜೆಪಿ ವತಿಯಿಂದ ಸಾಮಾಜಿಕ ಜಾಲತಾಣಗಳಲ್ಲಿ ಪ್ರಕಟಿಸಲಾಗಿದೆ. ವಿದ್ಯುತ್ ಕಡಿತ ಹಾಗೂ ಲೋ ವೋಲ್ಟೇಜ್ ಸಮಸ್ಯೆಯಿಂದ ಕೃಷಿಕರು, ವಿದ್ಯಾರ್ಥಿಗಳು, ಉದ್ದಿಮೆದಾರರು ಸೇರಿದಂತೆ ವಿದ್ಯುತ್ ಬಳಕೆದಾರರು ತೀವ್ರ ತೊಂದರೆ ಎದುರಿಸುತ್ತಿದ್ದಾರೆ. ಆದರೆ ಮೆಸ್ಕಾಂ ಅಧಿಕಾರಿಗಳು ಸಮಸ್ಯೆ ಬಗೆಹರಿಸಲು ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ ಎಂದು ದೂರಿರುವ

ಕಡಬದಲ್ಲಿ ಪದೇ ಪದೇ ಕಾಡುತ್ತಿರುವ ವಿದ್ಯುತ್ ಸಮಸ್ಯೆ ► ಫೆಬ್ರವರಿ 28 ರಂದು ಕಡಬ ಬಿಜೆಪಿಯಿಂದ ಕ್ಯಾಂಡಲ್ ಉರಿಸಿ ಮೆಸ್ಕಾಂ ಸಬ್ ಸ್ಟೇಶನ್ ಗೆ ಮುತ್ತಿಗೆ Read More »

ಕರಾವಳಿ

ಬೀಟಿಗೆ: ಟ್ರಾನ್ಸ್‌ಫಾರ್ಮರ್ ನಿಂದಾಗಿ ಗುಡ್ಡೆಗೆ ಬೆಂಕಿ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಫೆ.23. ವಿದ್ಯುತ್ ಟ್ರಾನ್ಸ್‌ಫಾರ್ಮರ್ ನಿಂದ ಬೆಂಕಿಯ ಕಿಡಿಯೊಂದು ಗುಡ್ಡೆಗೆ ಬಿದ್ದ ಪರಿಣಾಮ ಸುಮಾರು 2 ಎಕರೆ ಗುಡ್ಡೆ ಬೆಂಕಿಗಾಹುತಿಯಾದ ಘಟನೆ ಶುಕ್ರವಾರ ಮಧ್ಯಾಹ್ನ ಬೀಟಿಗೆ ಎಂಬಲ್ಲಿ ನಡೆದಿದೆ. ಪೇರಮೊಗರು ಸಮೀಪದ ಬೀಟಿಗೆ ಎಂಬಲ್ಲಿ ಶುಕ್ರವಾರ ಮಧ್ಯಾಹ್ನ ಶೇಖರ್ ಭಟ್ ಎಂಬವರ ಗುಡ್ಡೆಗೆ ಬಿದ್ದ ಬೆಂಕಿಯ ಕಿಡಿಯೊಂದು ಕ್ಷಣಮಾತ್ರದಲ್ಲಿ ಪರಿಸರವನ್ನು ಆವರಿಸಿತು‌. ವಿಷಯ ತಿಳಿದ ಸ್ಥಳೀಯ ಕೆಲವು ಯುವಕರು ಸ್ಥಳಕ್ಕಾಗಮಿಸಿ ಬೆಂಕಿಯನ್ನು ನಂದಿಸಲು ಪ್ರಯತ್ನಿಸಿದರು‌. ಶುಕ್ರವಾರ ಮಸೀದಿಗೆಂದು ತೆರಳಿದ್ದ ಯುವಕರೂ ಬೆಂಕಿ ನಂದಿಸುವಲ್ಲಿ

ಬೀಟಿಗೆ: ಟ್ರಾನ್ಸ್‌ಫಾರ್ಮರ್ ನಿಂದಾಗಿ ಗುಡ್ಡೆಗೆ ಬೆಂಕಿ Read More »

ಕರಾವಳಿ

ವೇಣೂರು: ಪೊಲೀಸ್ ಬಸ್ ಗೆ ಢಿಕ್ಕಿ ಹೊಡೆದು ಬೈಕ್‌ ಮೇಲೆ ಮಗುಚಿ ಬಿದ್ದ ಕೋಳಿ ಸಾಗಾಟದ ಲಾರಿ ► ಬೈಕ್ ಸವಾರ ಮೃತ್ಯು, ಇಬ್ಬರಿಗೆ ಗಾಯ

(ನ್ಯೂಸ್ ಕಡಬ) newskadaba.com ವೇಣೂರು, ಫೆ.23. ಹೆದ್ದಾರಿಯ ಬದಿ ನಿಲ್ಲಿಸಲಾಗಿದ್ದ ಪೊಲೀಸ್ ವಾಹನಕ್ಕೆ ಕೋಳಿ ಸಾಗಾಟದ ಲಾರಿಯೊಂದು ಢಿಕ್ಕಿ ಹೊಡೆದು ಚಲಿಸುತ್ತಿದ್ದ ಬೈಕ್ ಮೇಲೆ ಮಗುಚಿ ಬಿದ್ದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ಶುಕ್ರವಾರದಂದು ವೇಣೂರಿನಲ್ಲಿ ನಡೆದಿದೆ. ಮೃತ ಬೈಕ್ ಸವಾರನನ್ನು ವೇಣೂರು ಕರಿಮಣೇಲು ನಿವಾಸಿ ಉದಯ ಕುಮಾರ್ ಸೇಮಿತ ಎಂದು ಗುರುತಿಸಲಾಗಿದೆ. ಅವರು ಇಬ್ಬರು ಮಕ್ಕಳನ್ನು ಬೈಕ್‌ನಲ್ಲಿ ಕುಳ್ಳಿರಿಸಿ ಕರಿಮಣೇಲುವಿನಿಂದ ವೇಣೂರು ಮುಖ್ಯಪೇಟೆಗೆ ತಲುಪುತ್ತಿದ್ದಂತೆ ವೇಗವಾಗಿ ಆಗಮಿಸಿದ ಕೋಳಿ ಸಾಗಾಟದ ವಾಹನ ವೇಣೂರು ಶ್ರೀರಾಮ

ವೇಣೂರು: ಪೊಲೀಸ್ ಬಸ್ ಗೆ ಢಿಕ್ಕಿ ಹೊಡೆದು ಬೈಕ್‌ ಮೇಲೆ ಮಗುಚಿ ಬಿದ್ದ ಕೋಳಿ ಸಾಗಾಟದ ಲಾರಿ ► ಬೈಕ್ ಸವಾರ ಮೃತ್ಯು, ಇಬ್ಬರಿಗೆ ಗಾಯ Read More »

ಕರಾವಳಿ

ಉದ್ಯಮಿಯನ್ನು ಉಸಿರುಗಟ್ಟಿಸಿ ಕೊಲೆಗೈದು ಮೃತದೇಹವನ್ನು ಶಿರಾಡಿ ಘಾಟ್ ನಲ್ಲಿ ಎಸೆದ ಹಂತಕರು

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಫೆ.23. ಸೋಮವಾರಪೇಟೆಯ ಉದ್ಯಮಿಯೋರ್ವರನ್ನು ತನ್ನ ನೌಕರರಿಬ್ಬರು ಉಪ್ಪಿನಂಗಡಿ ಸಮೀಪದ ಬುಡೋಳಿ ಎಂಬಲ್ಲಿ ಉಸಿರುಗಟ್ಟಿಸಿ ಕೊಲೆಗೈದು ಮೃತದೇಹವನ್ನು ಶಿರಾಡಿ ಘಾಟ್ ನಲ್ಲಿ ಎಸೆದ ಅಮಾನವೀಯ ಘಟನೆ ಬುಧವಾರದಂದು ನಡೆದಿದ್ದು, ಗುರುವಾರದಂದು ಬೆಳಕಿಗೆ ಬಂದಿದೆ. ಮೃತರನ್ನು ಕೊಡಗು ಜಿಲ್ಲೆಯ ಸೋಮವಾರಪೇಟೆಯ ಉದ್ಯಮಿ ಮಹೇಶ್ ಎಂದು ಗುರುತಿಸಲಾಗಿದೆ. ಇವರ ಜೊತೆಯಲ್ಲಿ ಕೆಲಸ ಮಾಡುತ್ತಿದ್ದ ಕಿರಣ್ ಹಾಗೂ ರಘ ಎಂಬವರು ಉಪ್ಪಿನಂಗಡಿಗೆ ಕರೆತಂದು ಬುಡೋಳಿ ಸಮೀಪದಲ್ಲಿ ಕೊಲೆಗೈದ ನಂತರ ಶಿರಾಡಿಯ ಕೆಂಪುಹೊಳೆ ಸಮೀಪ ಮೃತದೇಹವನ್ನು ಎಸೆದು ನೇರವಾಗಿ

ಉದ್ಯಮಿಯನ್ನು ಉಸಿರುಗಟ್ಟಿಸಿ ಕೊಲೆಗೈದು ಮೃತದೇಹವನ್ನು ಶಿರಾಡಿ ಘಾಟ್ ನಲ್ಲಿ ಎಸೆದ ಹಂತಕರು Read More »

ಕರಾವಳಿ

ಸೌಹಾರ್ದತೆ ಆತ್ಮದ ಒಳಗಿನಿಂದಲೇ ಬರಬೇಕಲ್ಲದೆ ತೋರ್ಪಡಿಕೆಗೆ ಮಾತ್ರ ಸೀಮಿತವಾಗಿರಬಾರದು: ಯಶವಂತ್ ರೈ ► ನೆಕ್ಕಿತ್ತಡ್ಕ ಮಖಾಂ ಉರೂಸ್ ಪ್ರಯುಕ್ತ ಸೌಹಾರ್ದ ಸಮ್ಮೇಳನ

(ನ್ಯೂಸ್ ಕಡಬ) newskadaba.com ಕಡಬ, ಫೆ.22. ಸೌಹಾರ್ದತೆ ಆತ್ಮದ ಒಳಗಿನಿಂದಲೇ ಬರಬೇಕಲ್ಲದೆ, ಕೇವಲ ತೋರ್ಪಡಿಕೆಗೆ ಮಾತ್ರ ಸೀಮಿತವಾಗಿರಬಾರದು. ಎಲ್ಲಿ ಶಾಂತಿ ಇದೆಯೋ ಅಲ್ಲಿ ಕ್ರಾಂತಿರಹಿತವಾಗಿ ಸುವ್ಯವಸ್ಥೆಯಿಂದ ಬಾಳಲು ಸಾಧ್ಯ ಎಂದು ಸುಬ್ರಹ್ಮಣ್ಯ ಪ್ರೌಢಶಾಲಾ ಮುಖ್ಯಗುರುಗಳಾದ ಯಶವಂತ್ ರೈ ಹೇಳಿದರು. ಅವರು ಮರ್ಧಾಳ ತಖ್ವಿಯತುಲ್ ಇಸ್ಲಾಂ ಜಮಾಅತ್ ಕಮಿಟಿಯ ಅಧೀನದಲ್ಲಿರುವ ನೆಕ್ಕಿತ್ತಡ್ಕ ಮಖಾಂ ವಠಾರದಲ್ಲಿ ನೆಕ್ಕಿತ್ತಡ್ಕ ವಲಿಯುಲ್ಲಾಹಿರವರ ಉರೂಸ್ ಸಮಾರಂಭದ ಅಂಗವಾಗಿ ಮಗ್ರಿಬ್ ನಮಾಜಿನ ನಂತರ ನಡೆದ ಸೌಹಾರ್ದ ಸಭೆಯಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು. ಸಭೆಯನ್ನುದ್ದೇಶಿಸಿ ಮಾತನಾಡಿದ

ಸೌಹಾರ್ದತೆ ಆತ್ಮದ ಒಳಗಿನಿಂದಲೇ ಬರಬೇಕಲ್ಲದೆ ತೋರ್ಪಡಿಕೆಗೆ ಮಾತ್ರ ಸೀಮಿತವಾಗಿರಬಾರದು: ಯಶವಂತ್ ರೈ ► ನೆಕ್ಕಿತ್ತಡ್ಕ ಮಖಾಂ ಉರೂಸ್ ಪ್ರಯುಕ್ತ ಸೌಹಾರ್ದ ಸಮ್ಮೇಳನ Read More »

ಕರಾವಳಿ

ಕಡಬದಲ್ಲಿ ಮಿತಿ ಮೀರಿದ ವಿದ್ಯುತ್ ಸಮಸ್ಯೆ ► ಬಳಕೆದಾರರಿಂದ ಪ್ರತಿಭಟನೆಯ ಎಚ್ಚರಿಕೆ

(ನ್ಯೂಸ್ ಕಡಬ) newskadaba.com ಕಡಬ, ಫೆ.22. ಪರಿಸರದಲ್ಲಿ ಕಳೆದ ಕೆಲ ಸಮಯದಿಂದ ವಿದ್ಯುತ್ ಸಮಸ್ಯೆ ಮಿತಿ ಮೀರಿದ್ದು, ಪದೇ ಪದೇ ಕೈಕೊಡುವ ವಿದ್ಯುತ್ ಹಾಗೂ ಲೋ ವೋಲ್ಟೇಜ್ ಸಮಸ್ಯೆಯಿಂದ ಬೇಸತ್ತಿರುವ ವಿದ್ಯುತ್ ಬಳಕೆದಾರರು ಕಡಬ ಮೆಸ್ಕಾಂ ಕಚೇರಿಯ ಮುಂದೆ ಪ್ರತಿಭಟನೆ ನಡೆಸುವ ಎಚ್ಚರಿಕೆ ನೀಡಿದ್ದಾರೆ. ವಿದ್ಯುತ್ ಕಡಿತ ಹಾಗೂ ಲೋ ವೋಲ್ಟೇಜ್ ಸಮಸ್ಯೆಯಿಂದ ಕೃಷಿಕರು, ವಿದ್ಯಾರ್ಥಿಗಳು, ಉದ್ದಿಮೆದಾರರು ಸೇರಿದಂತೆ ವಿದ್ಯುತ್ ಬಳಕೆದಾರರು ತೀವ್ರ ತೊಂದರೆ ಎದುರಿಸುತ್ತಿದ್ದಾರೆ. ಪ್ರತಿ ಬಾರಿ ವಿದ್ಯುತ್ ಸಮಸ್ಯೆಯ ಕುರಿತು ವಿಚಾರಿಸಿದರೂ ಮೆಸ್ಕಾಂ ಅಧಿಕಾರಿಗಳಿಂದ ಸೂಕ್ತ

ಕಡಬದಲ್ಲಿ ಮಿತಿ ಮೀರಿದ ವಿದ್ಯುತ್ ಸಮಸ್ಯೆ ► ಬಳಕೆದಾರರಿಂದ ಪ್ರತಿಭಟನೆಯ ಎಚ್ಚರಿಕೆ Read More »

ಕರಾವಳಿ

ಫರಂಗಿಪೇಟೆ: ಚಾಕುವಿನಿಂದ ಇರಿತ ► ಇಬ್ಬರಿಗೆ ಗಾಯ

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ.22. ಯುವಕರಿಬ್ಬರಿಗೆ ತಂಡವೊಂದು ಚಾಕುವಿನಿಂದ ಇರಿದು ಕೊಲೆಗೆ ಯತ್ನಿಸಿದ ಘಟನೆ ಫರಂಗಿಪೇಟೆಯಲ್ಲಿ ಬುಧವಾರದಂದು ನಡೆದಿದೆ. ಗಾಯಾಳುಗಳಲ್ಲಿ ಓರ್ವನನ್ನು ಫರಂಗಿಪೇಟೆ ನಿವಾಸಿ ಇರ್ಫಾನ್ ಎಂದು ಗುರುತಿಸಲಾಗಿದ್ದು, ಇನ್ನೋರ್ವನ ಪರಿಚಯ ತಿಳಿದಿಲ್ಲ. ಫರಂಗಿಪೇಟೆಯ ಒಳಮಾರ್ಗದ ನದಿತಟದಲ್ಲಿದ್ದ ಗಾಯಾಳುಗಳನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಳೀಯರು ನೀಡಿದ ಮಾಹಿತಿಯಂತೆ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಚಾಕು ಹಾಗೂ ರಕ್ತಸಿಕ್ತ ವಸ್ತುಗಳನ್ನು ವಶಕ್ಕೆ ತೆಗೆದುಕೊಂಡು ತನಿಖೆ ಮುಂದುವರಿಸಿದ್ದಾರೆ. ಹಳೇ ದ್ವೇಷದ ಹಿನ್ನೆಲೆಯಲ್ಲಿ ಘಟನೆ ನಡೆದಿರುವ ಸಾಧ್ಯತೆಯಿದ್ದು, ಘಟನೆಗೆ ಯಾವುದೇ

ಫರಂಗಿಪೇಟೆ: ಚಾಕುವಿನಿಂದ ಇರಿತ ► ಇಬ್ಬರಿಗೆ ಗಾಯ Read More »

ಕರಾವಳಿ
Scroll to Top