ಕರಾವಳಿ

ಕಟಪಾಡಿ: ಬೈಕಿಗೆ ಹಿಂದಿನಿಂದ ಢಿಕ್ಕಿ ಹೊಡೆದ ಟ್ಯಾಂಕರ್ ► ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ) newskadaba.com ಕಾಪು, ಫೆ.22. ಬೈಕಿಗೆ ಟ್ಯಾಂಕರೊಂದು ಹಿಂದಿನಿಂದ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಬುಧವಾರ ರಾತ್ರಿ ರಾಷ್ಟ್ರೀಯ ಹೆದ್ದಾರಿ 66 ರ ಕಟಪಾಡಿಯಲ್ಲಿ ನಡೆದಿದೆ. ಮೃತ ಬೈಕ್ ಸವಾರನನ್ನು ಕಟಪಾಡಿ ನಿವಾಸಿ ಗುರುಪ್ರಸಾದ್(26) ಎಂದು ಗುರುತಿಸಲಾಗಿದೆ. ಇತ್ತೀಚೆಗಷ್ಟೇ ವಿದೇಶದಿಂದ ಆಗಮಿಸಿದ್ದ ಗುರುಪ್ರಸಾದ್ ತನ್ನ ಬೈಕಿನಲ್ಲಿ ಬುಧವಾರ ರಾತ್ರಿ ತೆರಳುತ್ತಿದ್ದಾಗ ಹಿಂದಿನಿಂದ ಅತೀ ವೇಗವಾಗಿ ಆಗಮಿಸಿದ ಟ್ಯಾಂಕರ್ ಢಿಕ್ಕಿ ಹೊಡೆದಿದೆಯೆನ್ನಲಾಗಿದೆ. ಘಟನೆಯಿಂದ ಸವಾರ ಗುರುಪ್ರಸಾದ್ ರಸ್ತೆಗೆಸೆಯಲ್ಪಟ್ಟು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸ್ಥಳಕ್ಕೆ […]

ಕಟಪಾಡಿ: ಬೈಕಿಗೆ ಹಿಂದಿನಿಂದ ಢಿಕ್ಕಿ ಹೊಡೆದ ಟ್ಯಾಂಕರ್ ► ಬೈಕ್ ಸವಾರ ಸ್ಥಳದಲ್ಲೇ ಮೃತ್ಯು Read More »

ಕರಾವಳಿ

ಕೋರಿಯಾರ್: ಕುಮಾರಧಾರಾ ನದಿಗೆ ಬಿದ್ದು ವ್ಯಕ್ತಿ ಮೃತ್ಯು

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಫೆ.21. ಕುಮಾರಧಾರಾ ನದಿಯ ಕೋರಿಯಾರ್ ಸಮೀಪದ ಸಂಪದಕಲ್ಲು ಎಂಬಲ್ಲಿ ವ್ಯಕ್ತಿಯೋರ್ವರು ಆಯತಪ್ಪಿ ನದಿಗೆ ಬಿದ್ದು ಮೃತಪಟ್ಟ ಘಟನೆ ಬುಧವಾರದಂದು ಬೆಳಕಿಗೆ ಬಂದಿದೆ. ಮೃತರನ್ನು ಬಳ್ಪ ಗ್ರಾಮದ ಕಟ್ಟ ನಿವಾಸಿ ಈಶ್ವರ ಗೌಡ(47) ಎಂದು ಗುರುತಿಸಲಾಗಿದೆ. ಇವರು ಸೋಮವಾರದಂದು ಬೆಳಿಗ್ಗೆ ಸೊಪ್ಪು ತರಲೆಂದು ಕುಮಾರಧಾರಾ ನದಿ ತಟಕ್ಕೆ ತೆರಳಿದ್ದು, ಬಳಿಕ ಕಣ್ಮರೆಯಾಗಿದ್ದರು. ಮನೆಯವರು ಪರಿಸರದಲ್ಲೆಡೆ ಹುಡುಕಾಡಿದ್ದರೂ ಯಾವುದೇ ಸುಳಿವು ಲಭ್ಯವಾಗಿರಲಿಲ್ಲ‌. ಬುಧವಾರದಂದು ಬೆಳಿಗ್ಗೆ ಮೃತದೇಹವು ನದಿಯಲ್ಲಿ ಕಂಡುಬಂದಿದ್ದು, ಸ್ಥಳಕ್ಕೆ ಭೇಟಿ ನೀಡಿರುವ ಸುಬ್ರಹ್ಮಣ್ಯ

ಕೋರಿಯಾರ್: ಕುಮಾರಧಾರಾ ನದಿಗೆ ಬಿದ್ದು ವ್ಯಕ್ತಿ ಮೃತ್ಯು Read More »

ಕರಾವಳಿ

ಆರೋಗ್ಯ ಸಮಸ್ಯೆಗಳಿಗೆ ಪರದಾಡುವಂತಹ ಪರಿಸ್ಥಿತಿ ► ಕೊಂಬಾರಿನಲ್ಲಿ ಸಮುದಾಯ ಆರೋಗ್ಯ ಕೇಂದ್ರ ಆರಂಭಿಸಲು ಆಗ್ರಹ

(ನ್ಯೂಸ್ ಕಡಬ) newskadaba.com ಕಡಬ, ಫೆ.21. ಕೊಂಬಾರು, ಬಿಳಿನೆಲೆ, ಕೆಂಜಾಳ, ಸಿರಿಬಾಗಿಲು ಭಾಗಗಳ ಗ್ರಾಮಸ್ಥರಿಗೆ ಆರೋಗ್ಯ ಸಮಸ್ಯೆಗಳುಂಟಾದಲ್ಲಿ ವೈದ್ಯಕೀಯ ಚಿಕಿತ್ಸೆಗೆ ಪರದಾಡುವಂತಹ ಪರಿಸ್ಥಿತಿ ಇದ್ದು, ಕೊಂಬಾರಿನಲ್ಲಿ ಸಮುದಾಯ ಆರೋಗ್ಯ ಕೇಂದ್ರ ಆರಂಭಿಸಬೇಕೆಂದು ಆಗ್ರಹಿಸಿದ ಘಟನೆ ಕೊಂಬಾರು ಗ್ರಾ.ಪಂ.ನ ಗ್ರಾಮ ಸಭೆಯಲ್ಲಿ ನಡೆದಿದೆ. ಕೊಂಬಾರು ಗ್ರಾ.ಪಂ.ಸಭಾಭವನದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಅಜಿತ್ ಎಸ್. ರವರ ಅಧ್ಯಕ್ಷತೆಯಲ್ಲಿ ನಡೆದ ಗ್ರಾಮ ಸಭೆಯಲ್ಲಿ ಹಿರಿಯ ಆರೋಗ್ಯ ಸಹಾಯಕಿ ಲಲಿತಾರವರು ಆರೋಗ್ಯ ಇಲಾಖೆಯ ಮಾಹಿತಿಯನ್ನು ನೀಡುತ್ತಿದ್ದಂತೆ ಮಾತನಾಡಿದ ಗ್ರಾ.ಪಂ.ಮಾಜಿ ಸದಸ್ಯ ಚಿದಾನಂದ ದೇವುಪಾಲ್,

ಆರೋಗ್ಯ ಸಮಸ್ಯೆಗಳಿಗೆ ಪರದಾಡುವಂತಹ ಪರಿಸ್ಥಿತಿ ► ಕೊಂಬಾರಿನಲ್ಲಿ ಸಮುದಾಯ ಆರೋಗ್ಯ ಕೇಂದ್ರ ಆರಂಭಿಸಲು ಆಗ್ರಹ Read More »

ಕರಾವಳಿ

ಏಣಿತ್ತಡ್ಕ: ಕುಮಾರಧಾರಾ ನದಿಯಲ್ಲಿ ಅಕ್ರಮ ಮರಳುಗಾರಿಕೆ ಅಡ್ಡೆಗೆ ದಾಳಿ ► ಟಿಪ್ಪರ್, ಪಿಕಪ್, 3 ದೋಣಿಗಳು ಸೇರಿದಂತೆ ಮೂವರು ವಶಕ್ಕೆ

(ನ್ಯೂಸ್ ಕಡಬ) newskadaba.com ಕಡಬ, ಫೆ.21. ಅಕ್ರಮ ಮರಳು ಅಡ್ಡೆಗೆ ದಾಳಿ‌ ನಡೆಸಿರುವ ಮೂರು ನಾಡದೋಣಿ, ಒಂದು ಟಿಪ್ಪರ್, ಒಂದು ಪಿಕಪ್ ವಾಹನ ಹಾಗೂ ಮರಳು ತೆಗೆಯಲು ಉಪಯೋಗಿಸುತ್ತಿದ್ದ ಕೆಲವು ಸಾಮಾಗ್ರಿಗಳನ್ನು ವಶಪಡಿಸಿಕೊಂಡು ಮೂವರನ್ನು ವಶಕ್ಕೆ ಪಡೆದುಕೊಂಡ ಘಟನೆ ಬುಧವಾರದಂದು ಕುಮಾರಧಾರಾ ನದಿಯ ಏಣಿತ್ತಡ್ಕ ಎಂಬಲ್ಲಿ ನಡೆದಿದೆ. ಕಡಬ ತಾಲೂಕಿನ ಕೊಯಿಲ ಗ್ರಾಮದ ಏಣಿತಡ್ಕ ಎಂಬಲ್ಲಿ ಕುಮಾರಧಾರ ನದಿಯ ಅಂಚಿನಲ್ಲಿ ಯತೀಶ್ ಗೌಡ ಎಂಬವರಿಗೆ ಸೇರಿದ ರ್ಯಾಂಪ್ ನಲ್ಲಿ ಅಕ್ರಮವಾಗಿ ಮರಳು ತೆಗೆಯುತಿದ್ದ ಖಚಿತ ವರ್ತಮಾನದ ಮೇರೆಗೆ

ಏಣಿತ್ತಡ್ಕ: ಕುಮಾರಧಾರಾ ನದಿಯಲ್ಲಿ ಅಕ್ರಮ ಮರಳುಗಾರಿಕೆ ಅಡ್ಡೆಗೆ ದಾಳಿ ► ಟಿಪ್ಪರ್, ಪಿಕಪ್, 3 ದೋಣಿಗಳು ಸೇರಿದಂತೆ ಮೂವರು ವಶಕ್ಕೆ Read More »

ಕರಾವಳಿ

ಕಂದಾಯ ಇಲಾಖೆಯಲ್ಲಿ ಭೂಪರಿವರ್ತನೆಗೆ ಹೊಸ ಆಟ ► ಸರಕಾರದ ಸುತ್ತೋಲೆಯಿಂದಾಗಿ ಜನಸಾಮಾನ್ಯರ ಪರದಾಟ

(ನ್ಯೂಸ್ ಕಡಬ) newskadaba.com ಕಡಬ, ಫೆ.21. ಕಳೆದ ಹದಿನೈದು ದಿನಗಳಿಂದ ಸಾರ್ವಜನಿಕರಿಂದ ಭೂಪರಿವರ್ತನೆ ಕಾರ್ಯಕ್ಕೆ ಅರ್ಜಿ ಸ್ವೀಕಾರ ಮಾಡದೆ ಭೂಪರಿವರ್ತನೆಯನ್ನು ಸ್ಥಗಿತಗೊಳಿಸಲಾಗಿದ್ದು, ಇಡೀ ರಾಜ್ಯದಲ್ಲೇ ಭೂಪರಿವರ್ತನೆ ಕಾರ್ಯ ನಡೆಯುತ್ತಿಲ್ಲ ಎನ್ನುವ ಮಾತು ಕೇಳಿ ಬರುತ್ತಿದೆ. ಈ ಹಿಂದೆ ಅರ್ಜಿ ನೀಡಿದವರಿಗೆ ಮಾತ್ರ ಭೂಪರಿವರ್ತನೆ ಕಾರ್ಯ ನಡೆಯುತ್ತಿದೆ ಹೊರತು, ಹೊಸದಾಗಿ ಅರ್ಜಿಯನ್ನು ಸ್ವೀಕಾರ ಮಾಡುತ್ತಿಲ್ಲ. ಇದರಿಂದಾಗಿ ಮನೆ ಕಟ್ಟುವವರಿಗೆ, ಬ್ಯಾಂಕ್ ಸಾಲ ಮಾಡುವವರಿಗೆ ಇನ್ನಿಲ್ಲದ ತೊಂದರೆ ಉಂಟಾಗಿದೆ. ಸಾರ್ವಜನಿಕರಿಗೆ ಮನೆ ಕಟ್ಟಲು ಪಂಚಾಯಿತಿಯಿಂದ ಅನುಮತಿ ಪಡೆಯುವುದು ಹಾಗೂ ಮುಖ್ಯವಾಗಿ

ಕಂದಾಯ ಇಲಾಖೆಯಲ್ಲಿ ಭೂಪರಿವರ್ತನೆಗೆ ಹೊಸ ಆಟ ► ಸರಕಾರದ ಸುತ್ತೋಲೆಯಿಂದಾಗಿ ಜನಸಾಮಾನ್ಯರ ಪರದಾಟ Read More »

ಕರಾವಳಿ

ದೇಶಕ್ಕೇ ಮಾದರಿಯಾದ ದಕ್ಷಿಣ ಕನ್ನಡ ಜಿಲ್ಲೆಯಲ್ಲೊಂದು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ► ಸುಸಜ್ಜಿತ ಕಟ್ಟಡಕ್ಕೆ 1.25 ಕೋಟಿ ವೆಚ್ಚ ಮಾಡಿದ ಇಬ್ಬರು ಹಳೆ ವಿದ್ಯಾರ್ಥಿಗಳು

(ನ್ಯೂಸ್ ಕಡಬ) newskadaba.com ವಿಟ್ಲ, ಫೆ.21. ಕನ್ನಡ ಶಾಲೆಗಳಲ್ಲಿ ಕಲಿತ ವಿದ್ಯಾರ್ಥಿಗಳು ಸಮಾಜದಲ್ಲಿ ಉನ್ನತ ಸ್ಥಾನಕ್ಕೇರಿದರೂ ಬಳಿಕ ಅವರು ತಾವು ಕಲಿತ ಶಾಲೆಗಳತ್ತ ಮುಖ ಮಾಡಲ್ಲ. ಆದರೆ ವಿಟ್ಲದ ಸರ್ಕಾರಿ ಶಾಲೆಯ ಇಬ್ಬರು ಹಳೆ ವಿದ್ಯಾರ್ಥಿಗಳು ತಾವು ಕಲಿತ ಶಾಲೆಗೆ ಕೋಟ್ಯಾಂತರ ರೂ. ಹಣವನ್ನು ದೇಣಿಗೆ ನೀಡುವುದರ ಮೂಲಕ ಶಾಲೆಗೆ ಅಭ್ಯುದಯಕ್ಕೆ ಶ್ರಮಿಸಿ, ಇಡೀ ರಾಜ್ಯದ ಜನರ ಪ್ರಶಂಸೆಗೆ ಪಾತ್ರರಾಗಿದ್ದಾರೆ. ವಿಟ್ಲದ ಸರ್ಕಾರಿ ಶಾಲೆಯ ಹಳೆ ವಿದ್ಯಾರ್ಥಿಗಳಿಬ್ಬರ ಪೈಕಿ ಒಬ್ಬರು ಶಾಲೆಯನ್ನು ದತ್ತು ಪಡೆದು ಶಾಲೆಯನ್ನು ಅಭಿವೃದ್ಧಿಪಡಿಸುವುದರ

ದೇಶಕ್ಕೇ ಮಾದರಿಯಾದ ದಕ್ಷಿಣ ಕನ್ನಡ ಜಿಲ್ಲೆಯಲ್ಲೊಂದು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ► ಸುಸಜ್ಜಿತ ಕಟ್ಟಡಕ್ಕೆ 1.25 ಕೋಟಿ ವೆಚ್ಚ ಮಾಡಿದ ಇಬ್ಬರು ಹಳೆ ವಿದ್ಯಾರ್ಥಿಗಳು Read More »

ಕರಾವಳಿ

ಕಾಣಿಯೂರು: ಟಿಪ್ಪರ್ ಗಳ ನಡುವೆ ಢಿಕ್ಕಿ ► ರೈಲ್ವೇ ಮೇಲ್ಸೇತುವೆಯಲ್ಲಿ ತಪ್ಪಿದ ಅನಾಹುತ

(ನ್ಯೂಸ್ ಕಡಬ) newskadaba.com ಕಾಣಿಯೂರು, ಫೆ.21. ಜಲ್ಲಿ ಸಾಗಾಟದ ಟಿಪ್ಪರ್ ಮತ್ತು ಮರಳು ಸಾಗಾಟಕ್ಕೆಂದು ತೆರಳುತ್ತಿದ್ದ ಟಿಪ್ಪರ್ ನಡುವೆ ಪುತ್ತೂರು – ಕಾಣಿಯೂರು ರೈಲ್ವೇ ಮೇಲ್ಸೇತುವೆ ಬಳಿ ಢಿಕ್ಕಿಯುಂಟಾಗಿದ್ದು, ಜಲ್ಲಿ ಸಾಗಾಟದ ಟಿಪ್ಪರ್ ಚಾಲಕನ ಸಮಯ ಪ್ರಜ್ಞೆಯಿಂದಾಗಿ ಸಂಭಾವ್ಯ ಅಪಾಯವೊಂದು ತಪ್ಪಿದಂತಾಗಿದೆ. ಪುತ್ತೂರಿನಿಂದ ಕಾಣಿಯೂರು ಕಡೆಗೆ ತೆರಳುತ್ತಿದ್ದ ಜಲ್ಲಿ ಸಾಗಾಟದ ಟಿಪ್ಪರ್ ಗೆ ಕಾಣಿಯೂರು ಸಮೀಪದ ಗಡಿಪಿಲ ಎಂಬಲ್ಲಿ ತಿರುವಿನಲ್ಲಿ ಅತೀ ವೇಗವಾಗಿ ಬಂದ ಟಿಪ್ಪರ್ ಢಿಕ್ಕಿ ಹೊಡೆದಿದ್ದು, ಜಲ್ಲಿ ಸಾಗಾಟದ ಟಿಪ್ಪರ್ ಚಾಲಕ ರಸ್ತೆ ಬಿಟ್ಟು

ಕಾಣಿಯೂರು: ಟಿಪ್ಪರ್ ಗಳ ನಡುವೆ ಢಿಕ್ಕಿ ► ರೈಲ್ವೇ ಮೇಲ್ಸೇತುವೆಯಲ್ಲಿ ತಪ್ಪಿದ ಅನಾಹುತ Read More »

ಕರಾವಳಿ

ಅರಂತೋಡು: ಕಾರಿನೆದುರು ನಿಂತು ಮೊಬೈಲ್ ನಲ್ಲಿ ಮಾತನಾಡುತ್ತಿದ್ದ ಯುವಕ ಸ್ಥಳದಲ್ಲೇ ಮೃತ್ಯು ► ಅಮಾಯಕ ಯುವಕನ ಪ್ರಾಣಕ್ಕೆ ಮುಳುವಾದ ತನ್ನದೇ ತಂಡದ ಯುವಕ

(ನ್ಯೂಸ್ ಕಡಬ) newskadaba.com ಸುಳ್ಯ, ಫೆ.21. ತಾನು ಕೆಲಸಕ್ಕೆಂದು ತೆರಳಿದ್ದ ಕಾರಿನ ಮುಂಭಾಗದಲ್ಲಿ ನಿಂತು ಫೋನ್ ನಲ್ಲಿ ಮಾತನಾಡುತ್ತಿದ್ದ ವೇಳೆ ತನ್ನದೇ ತಂಡದಲ್ಲಿದ್ದ ಯುವಕನೋರ್ವ ಕಾರನ್ನು ಚಲಾಯಿಸಿದ ಪರಿಣಾಮ ಯುವಕನೋರ್ವ ಮೃತಪಟ್ಟ ಘಟನೆ ಮಂಗಳವಾರದಂದು ಸಂಪಾಜೆ – ಭಾಗಮಂಡಲ ನಡುವಿನ ಚೇರಂಬಾಣೆ ಎಂಬಲ್ಲಿ ನಡೆದಿದೆ. ಮೃತ ಯುವಕನನ್ನು ಅರಂತೋಡು ಸಮೀಪದ ಪಾತೆಟ್ಟಿ ನಿವಾಸಿ ಸುರೇಶ್ ಎಂದು ಗುರುತಿಸಲಾಗಿದೆ. ಈತ ಮಂಗಳವಾರ ಮಧ್ಯಾಹ್ನ ಊಟದ ನಂತರ ತಾನು ತೆರಳಿದ್ದ ಕಾರಿನ ಬೋನೆಟ್ ಬಳಿ ನಿಂತು ಫೋನ್‌ನಲ್ಲಿ ಮಾತನಾಡುತ್ತಿದ್ದ ಸಂದರ್ಭದಲ್ಲಿ

ಅರಂತೋಡು: ಕಾರಿನೆದುರು ನಿಂತು ಮೊಬೈಲ್ ನಲ್ಲಿ ಮಾತನಾಡುತ್ತಿದ್ದ ಯುವಕ ಸ್ಥಳದಲ್ಲೇ ಮೃತ್ಯು ► ಅಮಾಯಕ ಯುವಕನ ಪ್ರಾಣಕ್ಕೆ ಮುಳುವಾದ ತನ್ನದೇ ತಂಡದ ಯುವಕ Read More »

ಕರಾವಳಿ

ಮಂಗಳೂರು: ಬಿಜೆಪಿ ಕಾರ್ಯಕರ್ತರಿದ್ದ ಬಸ್ ಮೇಲೆ ದುಷ್ಕರ್ಮಿಗಳಿಂದ ದಾಳಿ

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ.21. ಬಿ.ಜೆ.ಪಿ. ರಾಷ್ಟ್ರಾಧ್ಯಕ್ಷ ಅಮಿತ್ ಶಾ ಭಾಗವಹಿಸಿದ್ದ ಸಮಾವೇಶವನ್ನು ಮುಗಿಸಿ ಹಿಂತಿರುಗುತ್ತಿದ್ದ ಪಕ್ಷದ ಕಾರ್ಯಕರ್ತರ ಬಸ್ ಮೇಲೆ ದುಷ್ಕರ್ಮಿಗಳು ದಾಳಿ ನಡೆಸಿದ ಘಟನೆ ಮಂಗಳವಾರ ರಾತ್ರಿ ಬೆಂಗ್ರೆಯಲ್ಲಿ ನಡೆದಿದೆ. ಕಾರ್ಯಕ್ರಮ ಮುಗಿಸಿ ತೆರಳುತ್ತಿದ್ದ ಬಿ.ಜೆ.ಪಿ. ಕಾರ್ಯಕರ್ತರ ಬಸ್ ಬೆಂಗರೆ ತಲುಪಿದಾಗ ಅಲ್ಲಿದ್ದ ದುಷ್ಕರ್ಮಿಗಳ ತಂಡ ಬಸ್ ಮೇಲೆ ದಾಳಿ ನಡೆಸಿದ್ದಾರೆ ಎನ್ನಲಾಗಿದೆ. ಘಟನೆಯಲ್ಲಿ ಹಲವರಿಗೆ ಗಾಯಗಳಾಗಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ತಕ್ಷಣವೇ ಸ್ಥಳಕ್ಕಾಗಮಿಸಿದ ಪೊಲೀಸರು ಗುಂಪು ಚದುರಿಸಲು ಲಘು ಲಾಠಿ ಪ್ರಹಾರ

ಮಂಗಳೂರು: ಬಿಜೆಪಿ ಕಾರ್ಯಕರ್ತರಿದ್ದ ಬಸ್ ಮೇಲೆ ದುಷ್ಕರ್ಮಿಗಳಿಂದ ದಾಳಿ Read More »

ಕರಾವಳಿ

ಭಗ್ನ ಪ್ರೇಮಿಯ ಇರಿತಕ್ಕೆ ಪ್ರಾಣ ಕಳೆದುಕೊಂಡ ಕಾಲೇಜು ವಿದ್ಯಾರ್ಥಿನಿ ► ಪ್ರೀತಿ, ಪ್ರೇಮದ ಗುಂಗಿನಲ್ಲಿ‌ ಇನ್ನೊಬ್ಬರ ಜೀವನದಲ್ಲಿ ಚೆಲ್ಲಾಟವಾಡುವ ಸ್ವಾರ್ಥಿಗಳು

(ನ್ಯೂಸ್ ಕಡಬ) newskadaba.com ಸಂಪಾದಕೀಯ: ತನ್ನ ಪ್ರೀತಿ ನಿವೇದನೆಯನ್ನು ನಿರಾಕರಿಸಿದ ಒಂದೇ ಒಂದು ಕಾರಣಕ್ಕಾಗಿ ಸಿಟ್ಟಿನಿಂದ ಭಗ್ನ ಪ್ರೇಮಿಯೊಬ್ಬ ಸಹಪಾಠಿ ವಿದ್ಯಾರ್ಥಿನಿಯೋರ್ವಳನ್ನು ಚೂರಿಯಿಂದ ಇರಿದು ಕೊಲೆಗೈದ ಹೃದಯ ವಿದ್ರಾವಕ ಘಟನೆ ಸುಳ್ಯದಲ್ಲಿ ಮಂಗಳವಾರದಂದು ಸಂಜೆ ನಡೆದು ಹೋಯ್ತು. ತಾನು ವ್ಯಾಸಂಗ ಮಾಡಿ ಉನ್ನತ ಸ್ಥಾನಕ್ಕೇರಬೇಕೆಂಬ ಆಸೆಯನ್ನಿಟ್ಟು ದೂರದ ಕಾಸರಗೋಡು ಜಿಲ್ಲೆಯ ಮುಳ್ಳೇರಿಯಾದ ಶಾಂತಿ ನಗರದಿಂದ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ನೆಹರೂ ಮೆಮೋರಿಯಲ್ ಕಾಲೇಜಿಗೆ ಆಗಮಿಸಿ ದ್ವಿತೀಯ ಬಿಎಸ್ಸಿ ಓದುತ್ತಿದ್ದ ಸೌಮ್ಯ ಸ್ವಭಾವದ ವಿದ್ಯಾರ್ಥಿನಿ ಅಕ್ಷತಾ

ಭಗ್ನ ಪ್ರೇಮಿಯ ಇರಿತಕ್ಕೆ ಪ್ರಾಣ ಕಳೆದುಕೊಂಡ ಕಾಲೇಜು ವಿದ್ಯಾರ್ಥಿನಿ ► ಪ್ರೀತಿ, ಪ್ರೇಮದ ಗುಂಗಿನಲ್ಲಿ‌ ಇನ್ನೊಬ್ಬರ ಜೀವನದಲ್ಲಿ ಚೆಲ್ಲಾಟವಾಡುವ ಸ್ವಾರ್ಥಿಗಳು Read More »

ಕರಾವಳಿ
Scroll to Top