ಕರಾವಳಿ

ಪುತ್ತೂರು: ವಿದ್ಯುತ್ ತಂತಿ ತುಂಡಾಗಿ 900 ಅಡಿಕೆ ಗಿಡಗಳು ಸುಟ್ಟು ಭಸ್ಮ

(ನ್ಯೂಸ್‌ ಕಡಬ) newskadaba.com,ಜ.07 ಪುತ್ತೂರು: ಕುರಿಯ ಗ್ರಾಮದ ಬೂದಿಯಾರು ಎಂಬಲ್ಲಿ ಮಂಗಳವಾರ ವಿದ್ಯುತ್ ತಂತಿ ತುಂಡಾಗಿ ತೋಟದ ಮೇಲೆ ಬಿದ್ದ ಪರಿಣಾಮ 900 ಕ್ಕೂ ಹೆಚ್ಚು ಅಡಿಕೆ ಸಸಿಗಳು ಸುಟ್ಟು ಭಸ್ಮವಾಗಿವೆ.ತೋಟ ಬೂದಿಯಾರು ನಿವಾಸಿ ಗಣೇಶ್ ರೈ ಅವರಿಗೆ ಸೇರಿದ್ದು, ಸುಮಾರು ಒಂದು ವರ್ಷದ ಹಿಂದೆ ನೆಟ್ಟಿದ್ದ ಸಸಿಗಳು ಚೆನ್ನಾಗಿ ಬೆಳೆದಿದ್ದವು ಎಂದು ವರದಿಯಾಗಿದೆ. ಮೂಲಗಳ ಪ್ರಕಾರ, ಮಂಗಳವಾರ ಮಧ್ಯಾಹ್ನ ವಿದ್ಯುತ್ ತಂತಿ ಹಠಾತ್ತನೆ ತುಂಡಾಯಿತು. ಬಿದ್ದ ತಂತಿಯಿಂದ ಬೆಂಕಿ ಹೊತ್ತಿಕೊಂಡಿತು, ಅದು ಬೇಗನೆ ತೋಟದಾದ್ಯಂತ ಹರಡಿ, […]

ಪುತ್ತೂರು: ವಿದ್ಯುತ್ ತಂತಿ ತುಂಡಾಗಿ 900 ಅಡಿಕೆ ಗಿಡಗಳು ಸುಟ್ಟು ಭಸ್ಮ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ನೇಮಕಾತಿ; 1146 ಹುದ್ದೆಗಳಿಗೆ ಅರ್ಜಿ ಆಹ್ವಾನ

(ನ್ಯೂಸ್‌ ಕಡಬ) newskadaba.com,ಜ.07 : ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ದೇಶಾದ್ಯಂತ ತನ್ನ ಶಾಖೆಗಳ ವಿವಿಧ ಇಲಾಖೆಗಳಲ್ಲಿ ಗುತ್ತಿಗೆ ಆಧಾರದ ಮೇಲೆ ಸ್ಪೆಷಲಿಸ್ಟ್ ಕೇಡರ್ ಆಫೀಸರ್ (SCO) ಹುದ್ದೆಗಳ ನೇಮಕಾತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸುವ ಅಧಿಸೂಚನೆಯನ್ನು ಹೊರಡಿಸಿದೆ. ಈ ಅಧಿಸೂಚನೆಯ ಅಡಿಯಲ್ಲಿ ಒಟ್ಟು 1146 ಸ್ಪೆಷಲಿಸ್ಟ್ ಕೇಡರ್ ಆಫೀಸರ್ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ. ಒಟ್ಟು ಹುದ್ದೆಗಳಲ್ಲಿ, 582 VP ವೆಲ್ತ್ (SRM) ಹುದ್ದೆಗಳು, 237 AVP ವೆಲ್ತ್ (RM) ಹುದ್ದೆಗಳು ಮತ್ತು 327 ಗ್ರಾಹಕ ಸಂಬಂಧ

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ನೇಮಕಾತಿ; 1146 ಹುದ್ದೆಗಳಿಗೆ ಅರ್ಜಿ ಆಹ್ವಾನ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕಡಬ: ಕುಕ್ಕೆ ಸುಬ್ರಹ್ಮಣ್ಯ ದೇವಾಲಯದಲ್ಲಿ ದಾಖಲೆಯ 1,400ಕ್ಕೂ ಅಧಿಕ ಆಶ್ಲೇಷ ಬಲಿ ಸೇವೆ

(ನ್ಯೂಸ್‌ ಕಡಬ) newskadaba.com,ಜ.07 ಕಡಬ :  ಆಶ್ಲೇಷ ನಕ್ಷತ್ರದ ಶುಭ ದಿನದಂದು ಮಂಗಳವಾರ ಪ್ರಸಿದ್ಧ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ದಾಖಲೆಯ 1,400 ಕ್ಕೂ ಹೆಚ್ಚು ಭಕ್ತರು ಆಶ್ಲೇಷ ಬಲಿ ಸೇವೆಯನ್ನು ನೆರವೇರಿಸಿದರು.ಮಂಗಳವಾರ ಸುಬ್ರಹ್ಮಣ್ಯ ದೇವರಿಗೆ ವಿಶೇಷ ದಿನವೆಂದು ಪರಿಗಣಿಸಲ್ಪಟ್ಟಿದ್ದು, ಆಶ್ಲೇಷಾ ನಕ್ಷತ್ರವೂ ಅದೇ ದಿನ ಬಂದಿದ್ದರಿಂದ, ರಾಜ್ಯದ ವಿವಿಧ ಭಾಗಗಳಿಂದ ಮತ್ತು ಹೊರಗಿನಿಂದ ಬಂದ ಭಕ್ತರು ದೇವಾಲಯಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದ್ದರು. ಆಶ್ಲೇಷ ಬಲಿ ಆಚರಣೆಯು ಬೆಳಿಗ್ಗೆ 6.30 ಕ್ಕೆ ಪ್ರಾರಂಭವಾಯಿತು ಮತ್ತು ಐದು ತಂಡಗಳಾಗಿ ಬೆಳಿಗ್ಗೆ

ಕಡಬ: ಕುಕ್ಕೆ ಸುಬ್ರಹ್ಮಣ್ಯ ದೇವಾಲಯದಲ್ಲಿ ದಾಖಲೆಯ 1,400ಕ್ಕೂ ಅಧಿಕ ಆಶ್ಲೇಷ ಬಲಿ ಸೇವೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಉಪ್ಪಿನಂಗಡಿ: ಇಂದಿನಿಂದ ಇತಿಹಾಸ ಪ್ರಸಿದ್ದ ಮೂಡಡ್ಕ ಉರೂಸ್ ಗೆ ಚಾಲನೆ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಜ. 07. ಇತಿಹಾಸ ಪ್ರಸಿದ್ಧ ಹಲವಾರು ಪವಾಡಗಳಿಂದ ಪ್ರಸಿದ್ದಿ ಪಡೆದ ಮೂಡಡ್ಕ ಮಖಾಮ್ ಉರೂಸ್ ಕಾರ್ಯಕ್ರಮಕ್ಕೆ ಜನವರಿ 7ರಂದು ಸಂಭ್ರಮದ ಚಾಲನೆ ದೊರಕಲಿದೆ. ಇಂದಿನಿಂದ ಜನವರಿ 11ರ ವರೆಗೆ ಐದು ದಿನಗಳಲ್ಲಿ ನಡೆಯಲಿರುವ ಬೃಹತ್ ಉರೂಸ್ ಕಾರ್ಯಕ್ರಮದಲ್ಲಿ ವಿವಿಧ ಗಣ್ಯಾತಿ ಗಣ್ಯ ಉಲಮಾಗಳು ಬಾಗವಹಿಸಲಿದ್ದಾರೆ. ಉದ್ಘಾಟನಾ ದಿನವಾದ ಇಂದು ಬುಧವಾರ ಅಸ್ಸಯ್ಯದ್ ಬಾಯಾರ್ ತಂಙಳ್ ದುವಾಶೀರ್ವಚನ ಮತ್ತು ಮುಖ್ಯ ಪ್ರಭಾಷಣ ನಡೆಸಲಿದ್ದಾರೆ. ಮೂಡಡ್ಕ ವಿದ್ಯಾಸಂಸ್ಥೆಯ ಅಧ್ಯಕ್ಷ ಉಜಿರೆ ಇಸ್ಮಾಯಿಲ್ ತಂಙಳ್ ನೇತೃತ್ವ

ಉಪ್ಪಿನಂಗಡಿ: ಇಂದಿನಿಂದ ಇತಿಹಾಸ ಪ್ರಸಿದ್ದ ಮೂಡಡ್ಕ ಉರೂಸ್ ಗೆ ಚಾಲನೆ Read More »

ಕರಾವಳಿ

ಮಂಗಳೂರು: ವಿಕಲಚೇತನ ಕ್ರೀಡಾಪಟುಗಳಿಗೆ ಧನಸಹಾಯ : ಅರ್ಜಿ ಆಹ್ವಾನ

(ನ್ಯೂಸ್‌ ಕಡಬ) newskadaba.com,ಜ.07 ಮಂಗಳೂರು: 2025-26ನೇ ಸಾಲಿಗೆ ಸಾಧನೆ ಯೋಜನೆಯಡಿ     ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ರೀಡಾ ಸ್ಪರ್ಧೆಯಲ್ಲಿ ಭಾಗವಹಿಸಿರುವ ವಿಕಲಚೇತನರ ಕ್ರೀಡಾಪಟುಗಳಿಗೆ ಗರಿಷ್ಠ ರೂ.50 ಸಾವಿರ ಧನ ಸಹಾಯಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ವಿಕಲಚೇತನರ ಫಲಾನುಭವಿಗಳು ಆನ್‍ಲೈನ್ ಸೇವಾಸಿಂಧು ತಂತ್ರಾಂಶದ (https://sevasindhuservices.karnataka.gov.in) ಮೂಲಕ ಗ್ರಾಮ ಒನ್, ಕರ್ನಾಟಕ ಒನ್, ಮಂಗಳೂರು ಒನ್ ಹಾಗೂ ನೇರವಾಗಿಯೂ ಸಹ ತಮ್ಮ ಲಾಗಿನ್ ಬಳಸಿ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಕೊನೆಯ ದಿನ  ಜನವರಿ 31. ಈ ಯೋಜನೆಗೆ ವಿಕಲಚೇತನರ

ಮಂಗಳೂರು: ವಿಕಲಚೇತನ ಕ್ರೀಡಾಪಟುಗಳಿಗೆ ಧನಸಹಾಯ : ಅರ್ಜಿ ಆಹ್ವಾನ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಂಗಳೂರು: ನದಿಗೆ ಬಿದ್ದು ಛತ್ತೀಸ್‌ಗಢದ ಮೀನುಗಾರ ಸಾವು

(ನ್ಯೂಸ್‌ ಕಡಬ) newskadaba.com, ಮಂಗಳೂರು: ಮೀನುಗಾರಿಕಾ ದೋಣಿಯನ್ನು ಸುರಕ್ಷಿತವಾಗಿಡುವಾಗ ಆಕಸ್ಮಿಕವಾಗಿ ನದಿಗೆ ಬಿದ್ದು ಛತ್ತೀಸ್‌ಗಢದ ಮೀನುಗಾರ ಸಾವನ್ನಪ್ಪಿದ ಘಟನೆ ಸೋಮವಾರ ತಡರಾತ್ರಿ ಮಂಗಳೂರು ಬಂದರ್‌ನಲ್ಲಿ ನಡೆದಿದೆ. ಮೃತರನ್ನು ಛತ್ತೀಸ್‌ಗಢದ ಜಸ್ಪುರ್ ಜಿಲ್ಲೆಯ ಬರ್ಖಾಸ್ ಪಾಲಿ ಗ್ರಾಮದ ಪ್ರಹ್ಲಾದ್ ಚೌಹಾಣ್ (33) ಎಂದು ಗುರುತಿಸಲಾಗಿದೆ. ಅವರು ಸುಮಾರು ಒಂದು ವರ್ಷದ ಹಿಂದೆ ಮಂಗಳೂರಿಗೆ ಬಂದು ಮೀನುಗಾರಿಕೆ ವೃತ್ತಿಯಲ್ಲಿ ತೊಡಗಿಸಿಕೊಂಡಿದ್ದರು. ಮಂಗಳೂರು ಬಂದರ್‌ನ ಉಪ್ಪುಧಕ್ಕ ಪ್ರದೇಶದಲ್ಲಿ ರಾತ್ರಿ 11 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮಂಗಳೂರು: ನದಿಗೆ ಬಿದ್ದು ಛತ್ತೀಸ್‌ಗಢದ ಮೀನುಗಾರ ಸಾವು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕಟೀಲು ದುರ್ಗಾಪರಮೇಶ್ವರೀ ದೇವಸ್ಥಾನದ ಆದಾಯ ರಿವೀಲ್, ರಾಜ್ಯದಲ್ಲಿ 4ನೇ ಸ್ಥಾನ, ಕುಕ್ಕೆಗೆ ಮೊದಲ ಸ್ಥಾನ

(ನ್ಯೂಸ್‌ ಕಡಬ) newskadaba.com, ಮೂಲ್ಕಿ: ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನ 2024-25 ರ ಸಾಲಿನಲ್ಲಿ 36,24,791,35 ರು. ಆದಾಯ ದಾಖಲಿಸಿದ್ದು ಮುಜರಾಯಿ ದೇವಾಲಯಗಳ ರಾಜ್ಯದ ಈ ವರುಷದ ಆದಾಯಗಳ ಪಟ್ಟಿಯಲ್ಲಿ ನಾಲ್ಕನೇ ಸ್ಥಾನ ಹೊಂದಿದೆ. ಕುಕ್ಕೆ ಸುಬ್ರಹ್ಮಣ್ಯ, ಕೊಲ್ಲೂರು ಮೂಕಾಂಬಿಕೆ, ಮೈಸೂರಿನ ಚಾಮುಂಡಿ ಬೆಟ್ಟ ಮೊದಲ ಮೂರು ಸ್ಥಾನಗಳಲ್ಲಿದೆ. ಕಳೆದ ವರ್ಷ 2023-24 ರಲ್ಲಿ ಆದಾಯ 32.53 ಕೋಟಿ ಆಗಿದ್ದು, ಈ ವರ್ಷ ಮೂರೂವರೆ ಕೋಟಿ ರು. ಆದಾಯ ಹೆಚ್ಚಾಗಿದೆ…… ವಿವಿಧ ಸೇವೆಗಳಿಂದ 12 ಕೋಟಿ, ಕೋಣೆ ಬಾಡಿಗೆಯಿಂದ

ಕಟೀಲು ದುರ್ಗಾಪರಮೇಶ್ವರೀ ದೇವಸ್ಥಾನದ ಆದಾಯ ರಿವೀಲ್, ರಾಜ್ಯದಲ್ಲಿ 4ನೇ ಸ್ಥಾನ, ಕುಕ್ಕೆಗೆ ಮೊದಲ ಸ್ಥಾನ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕಡಬ: ಸರಸ್ವತೀ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸಪ್ತಶಕ್ತಿ ಸಂಗಮ ಕಾರ್ಯಕ್ರಮ

(ನ್ಯೂಸ್‌ ಕಡಬ) newskadaba.com, ಜ.06 ಕಡಬ: ಇಲ್ಲಿನ ಸರಸ್ವತಿ ಆಂಗ್ಲ ಮಾಧ್ಯಮ ಶಾಲೆ ಕಡಬದಲ್ಲಿ ಸಪ್ತಶಕ್ತಿ ಸಂಗಮ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಮಾತೆಯರನ್ನು ಆರತಿ ಬೆಳಗಿ, ಅರಿಶಿನ, ಕುಂಕುಮ ಬೆಲ್ಲ ನೀರನ್ನು ಕೊಟ್ಟು ಸತ್ಕರಿಸುವ ಮೂಲಕ ಈ ಕಾರ್ಯಕ್ರಮಕ್ಕೆ ಬರಮಾಡಿಕೊಳ್ಳಲಾಯಿತು. ಕಾರ್ಯಕ್ರಮಕ್ಕೆ ಆಗಮಿಸಿದ ಅತಿಥಿಗಳು ದೀಪ ಪ್ರಜ್ವಲಿಸುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ತದನಂತರ ವಿದ್ಯಾರ್ಥಿಗಳಿಂದ ಸರಸ್ವತಿ ವಂದನಾ ನಡೆಯಿತು. ಕಾರ್ಯಕ್ರಮದಲ್ಲಿ ದೇಶಭಕ್ತಿ ಗೀತೆಯನ್ನು ನೆರೆದಿದ್ದ ಮಾತೆಯರಿಗೆ ಮಾತಾಜಿ ಶ್ರೀಮತಿ ಪವಿತ್ರ ಎನ್ ರೈ ಇವರು ಹೇಳಿಕೊಟ್ಟರು. ಶ್ರೀಮತಿ

ಕಡಬ: ಸರಸ್ವತೀ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸಪ್ತಶಕ್ತಿ ಸಂಗಮ ಕಾರ್ಯಕ್ರಮ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

.ಗುರುಪುರ : ನದಿಗೆ ಹಾರಿ ಯುವತಿಯೊಬ್ಬರು ಆತ್ಮಹತ್ಯೆ

(ನ್ಯೂಸ್‌ ಕಡಬ) newskadaba.com, ಜ.06 ಮಂಗಳೂರು: ಗುರುಪುರ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ. ಸ್ಕೂಟರ್‌ನಲ್ಲಿ ಬಂದ ಯುವತಿ, ಸೇತುವೆಯ ಮೇಲೆ ವಾಹನವನ್ನು ನಿಲ್ಲಿಸಿ ನಂತರ ನದಿಗೆ ಜಿಗಿದಿರುವುದು ದೃಢಪಟ್ಟಿದೆ. ಮೃತ ಯುವತಿಯನ್ನು ಮೂಡಬಿದ್ರೆ ಅಲಂಗಾರು ಜ್ಯುವೆಲರ್ ಅಂಗಡಿಯಲ್ಲಿ ಸಿಬ್ಬಂದಿಯಾಗಿ ಕಾರ್ಯನಿರ್ವಹಿಸುತ್ತಿದ್ದ ನವ್ಯ ಎಂದು ಗುರುತಿಸಲಾಗಿದೆ. ಆತ್ಮಹತ್ಯೆಗೆ ಕಾರಣವೇನು ಎಂಬುದು ಇನ್ನೂ ತಿಳಿದುಬಂದಿಲ್ಲ. ಘಟನೆಯ ಮಾಹಿತಿ ದೊರಕುತ್ತಿದ್ದಂತೆ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ. ಯುವತಿಯ ಆತ್ಮಹತ್ಯೆಗೆ ಕಾರಣ

.ಗುರುಪುರ : ನದಿಗೆ ಹಾರಿ ಯುವತಿಯೊಬ್ಬರು ಆತ್ಮಹತ್ಯೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಇಂದಿನ ರಾಜ್ಯದ ಹವಾಮಾನ ವರದಿ

(ನ್ಯೂಸ್‌ ಕಡಬ) newskadaba.com, ಜ.06: ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಬಹುತೇಕ ಭಾಗಗಳಲ್ಲಿ ಕೆಲವು ದಿನಗಳಿಂದ ತಾಪಮಾನ ಕುಸಿದಿದೆ. ಇದರಿಂದ ಚಳಿ ಹೆಚ್ಚಾಗಿದೆ. ಇಂದು ಸಹ ಚಳಿಯ ವಾತಾವರಣ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಉಳಿದಂತೆ ಅಲ್ಲಲ್ಲಿ ಒಣಹವೆ ಇರಲಿದೆ ಎಂದು ಇಲಾಖೆ ವರದಿ ಮಾಡಿದೆ. ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 16 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ಇರಲಿದ್ದು,

ಇಂದಿನ ರಾಜ್ಯದ ಹವಾಮಾನ ವರದಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top