ಕರಾವಳಿ

ಪಣಂಬೂರು ಹೆದ್ದಾರಿ ದರೋಡೆಗೆ ಯತ್ನಿಸಿದ ಮೂವರ ಬಂಧನ

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ.17. ಹೆದ್ದಾರಿಯಲ್ಲಿ ಸಾಗುವ ವಾಹನಗಳನ್ನು ತಡೆದು ಮಾರಕಾಸ್ತ್ರಗಳೊಂದಿಗೆ ಬೆದರಿಸಿ, ಹಣ ಹಾಗೂ ಚಿನ್ನಾಭರಣ ದರೋಡೆಗೆ ಸಂಚು ರೂಪಿಸುತ್ತಿದ್ದ ಪ್ರಕರಣವನ್ನು ಬೇಧಿಸಿರುವ ಪಣಂಬೂರು ಪೊಲೀಸರು ಶುಕ್ರವಾರದಂದು ಮೂವರನ್ನು ಬಂಧಿಸಿದ್ದು, ಇಬ್ಬರು ಆರೋಪಿಗಳು ಪರಾರಿಯಾಗಿದ್ದಾರೆ. ಬಂಧಿತರನ್ನು ಉಡುಪಿ ಅಂಬಲಪಾಡಿ ನಿವಾಸಿ ಪ್ರದೀಪ್ ಕುಮಾರ್(47), ಕುದ್ರೋಳಿ ನಿವಾಸಿ ಸುನೀಲ್(20), ಬೋಳಾರ ನಿವಾಸಿ ಚರಣ್(32) ಎಂದು ಗುರುತಿಸಲಾಗಿದೆ. ಬಂಧಿತರಿಂದ ತಲವಾರು, ಮೆಣಸಿನ ಹುಡಿ, ರೋಪ್ ವಶಪಡಿಸಿಕೊಂಡಿದ್ದಾರೆ. ತಣ್ಣೀರುಬಾವಿಯಲ್ಲಿ ಇತ್ತೀಚೆಗೆ ನಡೆದ ಶಿವರಾಜ್‌ ಕೊಲೆ ಪ್ರಕರಣಕ್ಕೆ ಪ್ರತೀಕಾರವಾಗಿ ಆರೋಪಿ […]

ಪಣಂಬೂರು ಹೆದ್ದಾರಿ ದರೋಡೆಗೆ ಯತ್ನಿಸಿದ ಮೂವರ ಬಂಧನ Read More »

ಕರಾವಳಿ

ನೇತ್ರಾವತಿ ನದಿಗೆ ಹಾರಿ ಅಪರಿಚಿತ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಫೆ.17. ಅಪರಿಚಿತ ಯುವಕನೋರ್ವ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಶುಕ್ರವಾರ ಸಂಜೆ ಪಾಣೆಮಂಗಳೂರಿನಲ್ಲಿ ನಡೆದಿದೆ. ನೇತ್ರಾವತಿ ನದಿಗೆ ಯುವಕ ಹಾರುವುದನ್ನು ಗಮನಿಸಿದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದು, ಅದರಂತೆ ಘಟನಾ ಸ್ಥಳಕ್ಕೆ ಬಂಟ್ವಾಳ ಪೊಲೀಸರು ಹಾಗೂ ಅಗ್ನಿ ಶಾಮಕ ದಳದ ಸಿಬ್ಬಂದಿಗಳು ಧಾವಿಸಿ ಯುವಕನ ಮೃತ ದೇಹದ ಹುಡುಕಾಟ ನಡೆಸಲು ವ್ಯವಸ್ಥೆ ಕಲ್ಪಿಸಿದರು. ಸ್ಥಳೀಯ ಈಜುಗಾರರ ತಂಡದ ಯುವಕರು ಕಾರ್ಯಾಚರಣೆ ನಡೆಸಿ ಮೃತ ದೇಹವನ್ನು ಮೇಲೆತ್ತಿದ್ದಾರೆ. ಯುವಕನ ಮೃತ ದೇಹದ

ನೇತ್ರಾವತಿ ನದಿಗೆ ಹಾರಿ ಅಪರಿಚಿತ ಆತ್ಮಹತ್ಯೆ Read More »

ಕರಾವಳಿ

ನೂಜಿಬಾಳ್ತಿಲ: ಚರ್ಚ್ ನ ಕಲ್ಲು ಗೋಪುರ ಕಿತ್ತೆಸೆದ ದುಷ್ಕರ್ಮಿಗಳು ► ಸ್ಥಳದಲ್ಲಿ ಜಮಾಯಿಸಿರುವ ಊರವರು

(ನ್ಯೂಸ್ ಕಡಬ) newskadaba.com ಕಡಬ, ಫೆ.16. ಇಲ್ಲಿನ ನೂಜಿಬಾಳ್ತಿಲ ಸೈಂಟ್ ಮೇರಿಸ್ ಪ್ರೊ ಕ್ಯಾಥೆಡ್ರಲ್ ದೇವಾಲಯದ ಶಿಲುಬೆ ಗೋಪುರದ ಮುಂಭಾಗದಲ್ಲಿ ಇರುವ ಕಲ್ಲಿನ ದೀಪವನ್ನು ಯಾರೋ ಸಮಾಜಘಾತುಕರು ಒಡೆದ ಘಟನೆ ಶುಕ್ರವಾರ ರಾತ್ರಿ ನಡೆದಿದೆ. ಧರ್ಮಸ್ಥಳ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿ ಬದಿಯಲ್ಲಿರುವ ನೂಜಿಬಾಳ್ತಿಲ ಸೈಂಟ್ ಮೇರಿಸ್ ಪ್ರೊ ಕ್ಯಾಥೆಡ್ರಲ್ ದೇವಾಲಯದ ಮುಂಭಾಗದಲ್ಲಿನ ಕಲ್ಲಿನ ದೀಪವನ್ನು ಕಿಡಿಗೇಡಿಗಳು ಕಿತ್ತೆಸೆದಿದ್ದು, ಸ್ಥಳದಲ್ಲಿ ಸ್ಥಳೀಯರು ಜಮಾವಣೆಗೊಂಡಿದ್ದು, ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ. ಸ್ಥಳಕ್ಕೆ ಕಡಬ ಜಿಲ್ಲಾ ಪಂಚಾಯತ್ ಸದಸ್ಯ ಪಿ.ಪಿ. ವರ್ಗೀಸ್

ನೂಜಿಬಾಳ್ತಿಲ: ಚರ್ಚ್ ನ ಕಲ್ಲು ಗೋಪುರ ಕಿತ್ತೆಸೆದ ದುಷ್ಕರ್ಮಿಗಳು ► ಸ್ಥಳದಲ್ಲಿ ಜಮಾಯಿಸಿರುವ ಊರವರು Read More »

ಕರಾವಳಿ

ಯುವತಿಯನ್ನು ಗ್ಯಾಂಗ್ ರೇಪ್ ಮಾಡಿ ತಡರಾತ್ರಿ ಉಪ್ಪಿನಂಗಡಿ ಬಸ್ ನಿಲ್ದಾಣದಲ್ಲಿ ಬಿಟ್ಟು ಹೋದ ಕಾಮುಕರು ► ಜಾತ್ರೆಗೆಂದು‌ ಕರೆಸಿ ವಂಚಿಸಿ ಅತ್ಯಾಚಾರ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಫೆ.16. ದಲಿತ ಯುವತಿಯ ಮೇಲೆ ಗ್ಯಾಂಗ್ ರೇಪ್ ನಡೆಸಿದ ಕಾಮುಕರು ಉಪ್ಪಿನಂಗಡಿ ಬಸ್ ನಿಲ್ದಾಣದಲ್ಲಿ ಬಿಟ್ಟು ಹೋದ ವಿಲಕ್ಷಣ ಘಟನೆ ಗುರುವಾರ ತಡರಾತ್ರಿ ನಡೆದಿದೆ. ಗುರುವಾರ ರಾತ್ರಿ ಬೆಟ್ಟಂಪಾಡಿಯ ಯುವತಿಯೋರ್ವಳನ್ನು ಕರೆತಂದು ನೆಲ್ಯಾಡಿ ಬಳಿಯ ಖಾಲಿ ಮನೆಯಲ್ಲಿ ಅತ್ಯಾಚಾರ ನಡೆಸಿದ ಕಾಮುಕರು ಆ ಬಳಿಕ ತಡರಾತ್ರಿ ಉಪ್ಪಿನಂಗಡಿ ಬಸ್ ನಿಲ್ದಾಣದಲ್ಲಿ ಯುವತಿಯನ್ನು ಬಿಟ್ಟು ಹೋಗಿದ್ದಾರೆನ್ನಲಾಗಿದೆ. ಘಟನೆಯ ಬಗ್ಗೆ ಸಂತ್ರಸ್ಥೆ ಯುವತಿಯು ಧನಂಜಯ ಹಾಗೂ ಇನ್ನೋರ್ವ ಆರೋಪಿಯ ವಿರುದ್ಧ ಶುಕ್ರವಾರದಂದು ಉಪ್ಪಿನಂಗಡಿ ಪೊಲೀಸರಿಗೆ

ಯುವತಿಯನ್ನು ಗ್ಯಾಂಗ್ ರೇಪ್ ಮಾಡಿ ತಡರಾತ್ರಿ ಉಪ್ಪಿನಂಗಡಿ ಬಸ್ ನಿಲ್ದಾಣದಲ್ಲಿ ಬಿಟ್ಟು ಹೋದ ಕಾಮುಕರು ► ಜಾತ್ರೆಗೆಂದು‌ ಕರೆಸಿ ವಂಚಿಸಿ ಅತ್ಯಾಚಾರ Read More »

ಕರಾವಳಿ

‘ನ್ಯೂಸ್ ಕಡಬ’ ವರದಿ ಫಲಶ್ರುತಿ ► ಕಡಬ ಬಸ್ ಸ್ಟಾಂಡ್ ಬಳಿಯ ಶೌಚಾಲಯ ಸಾರ್ವಜನಿಕ ಉಪಯೋಗಕ್ಕೆ ಲಭ್ಯ

(ನ್ಯೂಸ್ ಕಡಬ) newskadaba.com ಕಡಬ, ಫೆ.16. ಇಲ್ಲಿಯ ಪೇಟೆಯ ಬಸ್ ನಿಲ್ದಾಣದ ಬಳಿ ಗ್ರಾಮ ಪಂಚಾಯತ್ ವಾಣಿಜ್ಯ ಕಟ್ಟಡದ ಎದುರು ನಿರ್ಮಿಸಲಾಗಿದ್ದ ಶೌಚಾಲಯವು  ದುರಸ್ಥಿಯಲ್ಲಿದ್ದು ಸಾರ್ವಜನಿಕರ ಉಪಯೋಗಕ್ಕೆ ಕಳೆದ ಒಂದು ವಾರದಿಂದ ಅಡಚನೆ ಉಂಟಾಗಿದ್ದು ಗ್ರಾಮ ಪಂಚಾಯತ್ ತುರ್ತಾಗಿ ದುರಸ್ಥಿ ಕಾರ್ಯ ಕೈಗೊಂಡು ಫೆ.17 ರಿಂದ ಸಾರ್ವಜನಿಕ ಉಪಯೋಗಕ್ಕೆ ತೆರೆಯಲಾಗಿದೆ ಎಂದು ಕಡಬ ಗ್ರಾ.ಪಂ. ಅಧ್ಯಕ್ಷರಾದ ಬಾಬು ಮುಗೇರ ಹಾಗೂ ಪಿಡಿಒ ಚೆನ್ನಪ್ಪ ಗೌಡ ತಿಳಿಸಿದ್ದಾರೆ. ಕಡಬ ಪೇಟೆಯಲ್ಲಿ ಸಾರ್ವಜನಿಕ ಶೌಚಾಲಯಕ್ಕೆ ಪೂರಕವಾದ ಸ್ಥಳಾವಕಾಶದ ಕೊರತೆಯಿದ್ದರೂ ಪೇಟೆಯಲ್ಲಿ ಇದ್ದ ಸ್ಥಳವನ್ನು

‘ನ್ಯೂಸ್ ಕಡಬ’ ವರದಿ ಫಲಶ್ರುತಿ ► ಕಡಬ ಬಸ್ ಸ್ಟಾಂಡ್ ಬಳಿಯ ಶೌಚಾಲಯ ಸಾರ್ವಜನಿಕ ಉಪಯೋಗಕ್ಕೆ ಲಭ್ಯ Read More »

ಕರಾವಳಿ

ಗಂಡಿಬಾಗಿಲು ಮಸೀದಿಯಲ್ಲಿ ಜುಮಾ ನಮಾಜು ನಿರ್ವಹಿಸಿದ ಖ್ಯಾತ ಮಲಯಾಳಂ ನಟ ಮಮ್ಮುಟ್ಟಿ

(ನ್ಯೂಸ್ ಕಡಬ) newskadaba.com ಕಡಬ, ಫೆ.16. ‘ಮಾಮಾಂಗಂ’ ಮಲಯಾಳಂ ಚಿತ್ರದಲ್ಲಿ ನಟಿಸಲು ದಕ್ಷಿಣ ಕನ್ನಡ ಜಿಲ್ಲೆಗೆ ಆಗಮಿಸಿರುವ ಖ್ಯಾತ ಚಿತ್ರನಟ ಮಮ್ಮುಟ್ಟಿ ಕೊಯಿಲದ ಗಂಡಿಬಾಗಿಲು ಖುತುಬಿಯ್ಯಾ ಜುಮ್ಮಾ ಮಸೀದಿಯಲ್ಲಿ ಶುಕ್ರವಾರದ ಜುಮಾ ನಮಾಜು ನಿರ್ವಹಿಸಿದರು. ಕೊಯಿಲ ಫಾರ್ಮ್ ನಲ್ಲಿ ಕಳೆದ ಕೆಲವು ದಿನಗಳ ಹಿಂದೆ ಆರಂಭಗೊಂಡಿರುವ ಬಹುಕೋಟಿ ಬಜೆಟ್ ನಲ್ಲಿ ಸುಮಾರು 400 ವರ್ಷಗಳ ಹಿಂದಿನ ಕಥೆಯನ್ನು ಆಧರಿಸಿ ನಿರ್ಮಾಣಗೊಳ್ಳುತ್ತಿರುವ ‘ಮಾಮಾಂಗಂ’ ಚಿತ್ರದ ಚಿತ್ರೀಕರಣಕ್ಕಾಗಿ ಮಮ್ಮುಟ್ಟಿ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಕೊಯಿಲಕ್ಕೆ ಆಗಮಿಸಿದ್ದು, ಸುಬ್ರಹ್ಮಣ್ಯದಲ್ಲಿ

ಗಂಡಿಬಾಗಿಲು ಮಸೀದಿಯಲ್ಲಿ ಜುಮಾ ನಮಾಜು ನಿರ್ವಹಿಸಿದ ಖ್ಯಾತ ಮಲಯಾಳಂ ನಟ ಮಮ್ಮುಟ್ಟಿ Read More »

ಕರಾವಳಿ

ನಾಳೆ (ಫೆ.17) ಪಾಪ್ಯುಲರ್ ಫ್ರಂಟ್ ಡೇ ಪ್ರಯುಕ್ತ ಸುಳ್ಯದಲ್ಲಿ ಯುನಿಟಿ ಮಾರ್ಚ್ ಹಾಗೂ ಸಮಾವೇಶ ► ರಾಷ್ಟ್ರೀಯ ಸಮಿತಿ ಸದಸ್ಯ ಕೆ.ಎಂ. ಶರೀಫ್ ಸುಳ್ಯಕ್ಕೆ

ಸಾಂದರ್ಭಿಕ ಚಿತ್ರ (ನ್ಯೂಸ್ ಕಡಬ) newskadaba.com ಸುಳ್ಯ, ಫೆ.16. ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ 11 ನೇ ವರ್ಷಾಚರಣೆಯ ಅಂಗವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದಲ್ಲಿ ಅಪರಾಹ್ನ 2.30 ಕ್ಕೆ ಯುನಿಟಿ ಮಾರ್ಚ್ ಹಾಗೂ ಸಂಜೆ 3.30 ಕ್ಕೆ ಬೃಹತ್ ಸಾರ್ವಜನಿಕ ಸಭೆಯು ನಡೆಯಲಿದೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ರಾಜ್ಯ ಪ್ರಧಾನ ಕಾರ್ಯದರ್ಶಿ ಯಾಸಿನ್ ಹಸನ್ ವಹಿಸಲಿದ್ದು, ರಾಷ್ಟ್ರೀಯ ಸಮಿತಿ ಸದಸ್ಯರಾದ ಕೆ.ಎಂ. ಶರೀಫ್ ಮುಖ್ಯ ಪ್ರಭಾಷಣ ಮಾಡಲಿದ್ದಾರೆ. ಜ್ಞಾನ ಪ್ರಕಾಶ ಸ್ವಾಮೀಜಿ ಮೈಸೂರು, ಎಸ್ಡಿಪಿಐ ಉಪಾಧ್ಯಕ್ಷರಾದ ಅಬ್ದುಲ್ ಮಜೀದ್

ನಾಳೆ (ಫೆ.17) ಪಾಪ್ಯುಲರ್ ಫ್ರಂಟ್ ಡೇ ಪ್ರಯುಕ್ತ ಸುಳ್ಯದಲ್ಲಿ ಯುನಿಟಿ ಮಾರ್ಚ್ ಹಾಗೂ ಸಮಾವೇಶ ► ರಾಷ್ಟ್ರೀಯ ಸಮಿತಿ ಸದಸ್ಯ ಕೆ.ಎಂ. ಶರೀಫ್ ಸುಳ್ಯಕ್ಕೆ Read More »

ಕರಾವಳಿ

ಹಲವು ದಶಕಗಳ ಬೇಡಿಕೆಯಿಂದ ಕೊನೆಗೂ ಬಂತು ಕಡಬಕ್ಕೆ ತಾಲೂಕು ಭಾಗ್ಯ ► ಮಾ. 18 ರಂದು ಕಂದಾಯ ಸಚಿವರಿಂದ ನೂತನ ಕಡಬ ತಾಲೂಕು ಉದ್ಘಾಟನೆ

(ನ್ಯೂಸ್ ಕಡಬ) newskadaba.com ಕಡಬ, ಫೆ.16. ರಾಜ್ಯ ಕಂದಾಯ ಸಚಿವ ಕಾಗೋಡು ತಿಮ್ಮಪ್ಪ ಅವರು ನೂತನ ಕಡಬ ತಾಲೂಕನ್ನು ಅಧಿಕೃತವಾಗಿ ಉದ್ಘಾಟಿಸಲು ಮಾ. 18 ರಂದು ದಿನ ನಿಗದಿಯಾಗಿದ್ದು, ತಾಲೂಕು ಅನುಷ್ಠಾನದ ಕುರಿತು ಕಡಬ ಪರಿಸರದ ಜನರ ಮನಸ್ಸಿನಲ್ಲಿ ಮೂಡಿದ್ದ ಆತಂಕಗಳು ದೂರವಾಗಿದೆ. ಫೆ. 14 ರಂದು ಬೈಂದೂರು, ಬ್ರಹ್ಮಾವರ ಹಾಗೂ ಕಾಪು ತಾಲೂಕುಗಳ ಉದ್ಘಾಟನೆಗೆ ಆಗಮಿಸಿದ್ದ ಕಂದಾಯ ಸಚಿವರನ್ನು ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಅವರ ಸೂಚನೆಯಂತೆ ಭೇಟಿ ಮಾಡಿದ ಕಡಬ ಜಿ.ಪಂ. ಕ್ಷೇತ್ರದ ಸದಸ್ಯ

ಹಲವು ದಶಕಗಳ ಬೇಡಿಕೆಯಿಂದ ಕೊನೆಗೂ ಬಂತು ಕಡಬಕ್ಕೆ ತಾಲೂಕು ಭಾಗ್ಯ ► ಮಾ. 18 ರಂದು ಕಂದಾಯ ಸಚಿವರಿಂದ ನೂತನ ಕಡಬ ತಾಲೂಕು ಉದ್ಘಾಟನೆ Read More »

ಕರಾವಳಿ

ಲಷ್ಕರ್ – ಎ – ತೋಯ್ಬಾ ಉಗ್ರರನ್ನು ಸದೆಬಡಿದ ತಂಡದಲ್ಲಿ ತುಳುನಾಡಿನ ವೀರ ಯೋಧ ► ಕಡಬ ತಾಲೂಕಿಗೆ ಹೆಮ್ಮೆಯ ಕಿರೀಟವನ್ನು ತಂದಿತ್ತ ವೀರ ಯೋಧ ಝುಬೈರ್ ನೇರೆಂಕಿ

(ನ್ಯೂಸ್ ಕಡಬ) newskadaba.com ಕಡಬ, ಫೆ.15. ಬಿಸಿಲು, ಮಳೆ, ಚಳಿಯನ್ನು ಲೆಕ್ಕಿಸದೆ ದೇಶದ ಗಡಿ ಕಾಯುವ ವೀರ ಯೋಧರು ಭಾರತೀಯರು ಎಂದು ಹೇಳಿಕೊಳ್ಳುವುದೇ ಒಂಥರಾ ಖುಷಿ. ಅವರು ನಮ್ಮ ರಾಜ್ಯದವರಾಗಿದ್ದರೆ ನಾವು ಹಮ್ಮೆ ಪಡುತ್ತೇವೆ. ಅಕಸ್ಮಾತ್ ನಮ್ಮ ಜಿಲ್ಲೆಯವರೇ ಆಗಿ ಬಿಟ್ಟರೆ ನಾವೇ ಭಯೋತ್ಪಾದಕರ ವಿರುದ್ಧ ಹೋರಾಡಿ ಗೆದ್ದಷ್ಟು ಸಂತಸ ಪಡುತ್ತೇವೆ. ಇಲ್ಲಿ ಆಗಿರುವುದೂ ಅದೇ. ನಾಲ್ಕು ದಿನಗಳ ಹಿಂದೆ ಜಮ್ಮು ಕಾಶ್ಮೀರದಲ್ಲಿ ಭಯೋತ್ಪಾದಕರನ್ನು ಸದೆಬಡಿಯುವಲ್ಲಿ ಯಶಸ್ವಿಯಾಗಿರುವ ವೀರ ಯೋಧರ ಪೈಕಿ ನಮ್ಮ ತುಳುನಾಡಿನ ಯೋಧರೊಬ್ಬರು ಇದ್ದಾರೆ.

ಲಷ್ಕರ್ – ಎ – ತೋಯ್ಬಾ ಉಗ್ರರನ್ನು ಸದೆಬಡಿದ ತಂಡದಲ್ಲಿ ತುಳುನಾಡಿನ ವೀರ ಯೋಧ ► ಕಡಬ ತಾಲೂಕಿಗೆ ಹೆಮ್ಮೆಯ ಕಿರೀಟವನ್ನು ತಂದಿತ್ತ ವೀರ ಯೋಧ ಝುಬೈರ್ ನೇರೆಂಕಿ Read More »

ಕರಾವಳಿ

ಆಲಂಕಾರು: ಮನೆಯಿಂದ ಹೊರಹೋದ ವ್ಯಕ್ತಿ ನಾಪತ್ತೆ

(ನ್ಯೂಸ್ ಕಡಬ) newskadaba.com‌ ಕಡಬ, ಫೆ.15. ಠಾಣಾ ವ್ಯಾಪ್ತಿಯ ಆಲಂಕಾರು ಗ್ರಾಮದ ಪಟ್ಟೆ ಮಜಲು ನಿವಾಸಿ ಶೀನಪ್ಪ ಪೂಜಾರಿ ಎಂಬವರ ಪುತ್ರ ರಾಜೀವ ಪೂಜಾರಿ (42) ಎಂಬವರು ಮನೆಯಿಂದ ಹೊರ ಹೋದವರು ಹಿಂತಿರುಗಿ ಬಾರದೆ ಕಾಣೆಯಾಗಿದ್ದಾರೆ ಎಂದು ಕಡಬ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.     ಇತ್ತೀಚೆಗೆ ಕಲ ಸಮಯದಿಂದ ಮಾನಸಿಕವಾಗಿ ವರ್ತಿಸುತ್ತಿದ್ದ ರಾಜೀವ್ ಪೂಜಾರಿ, ಆಗಾಗ ಕೆಲವು ಬಾರಿ ಮನೆ ಬಿಟ್ಟು ಹೋಗಿ ಬರುತ್ತಿದ್ದರು. ಫೆಬ್ರವರಿ 07 ರಂದು ಮತ್ತೊಮ್ಮೆ ಮನೆ ಬಿಟ್ಟು ಹೋದವರು ವಾಪಾಸು

ಆಲಂಕಾರು: ಮನೆಯಿಂದ ಹೊರಹೋದ ವ್ಯಕ್ತಿ ನಾಪತ್ತೆ Read More »

ಕರಾವಳಿ
Scroll to Top