ಕರಾವಳಿ

ಫೆಬ್ರವರಿ 18 ರಿಂದ 22 ರವರೆಗೆ ನೆಕ್ಕಿತ್ತಡ್ಕ ಮಖಾಂ ಉರೂಸ್ ► ಉರೂಸ್ ಅಂಗವಾಗಿ ಸಾರ್ವಜನಿಕ ಉಚಿತ ದಂತ ವೈದ್ಯಕೀಯ ಶಿಬಿರ

(ನ್ಯೂಸ್ ಕಡಬ) newskadaba.com ಕಡಬ, ಫೆ.11. ಮರ್ಧಾಳ ತಕ್ವೀಯತ್ತುಲ್ ಇಸ್ಲಾಂ ಜುಮಾ ಮಸೀದಿಯ ಅಧೀನದಲ್ಲಿರುವ ನೆಕ್ಕಿತ್ತಡ್ಕ ಮಖಾಂನಲ್ಲಿ ಫೆಬ್ರವರಿ 18 ರಿಂದ 22 ರ ವರೆಗೆ ನಡೆಯಲಿರುವ ಉರೂಸ್ ಅಂಗವಾಗಿ ದೇರಳಕಟ್ಟೆ ಯೇನೆಪೋಯ ದಂತ ವೈದ್ಯಕೀಯ ಕಾಲೇಜಿನ ಸಹಯೋಗದೊಂದಿಗೆ ಸಾರ್ವಜನಿಕ ಉಚಿತ ದಂತ ವೈದ್ಯಕೀಯ ಶಿಬಿರ ಹಾಗೂ YEN ಆರೋಗ್ಯ ಕಾರ್ಡ್ ನೋಂದಾವಣೆ ಶಿಬಿರವು ಭಾನುವಾರದಂದು ಮರ್ಧಾಳ ಮದರಸ ಹಾಲ್‌ನಲ್ಲಿ ನಡೆಯಿತು. 70 ಕ್ಕೂ ಅಧಿಕ ಸಾರ್ವಜನಿಕರು ದಂತ ವೈದ್ಯಕೀಯ ಶಿಬಿರದ ಪ್ರಯೋಜನವನ್ನು ಪಡೆದರು. ಸಭಾಧ್ಯಕ್ಷತೆಯನ್ನು ಮರ್ಧಾಳ […]

ಫೆಬ್ರವರಿ 18 ರಿಂದ 22 ರವರೆಗೆ ನೆಕ್ಕಿತ್ತಡ್ಕ ಮಖಾಂ ಉರೂಸ್ ► ಉರೂಸ್ ಅಂಗವಾಗಿ ಸಾರ್ವಜನಿಕ ಉಚಿತ ದಂತ ವೈದ್ಯಕೀಯ ಶಿಬಿರ Read More »

ಕರಾವಳಿ

ಹಾರೆಯಿಂದ ಹೊಡೆದು ವ್ಯಕ್ತಿಯ ಕೊಲೆ ► ಭಾನುವಾರ ಬೆಳಿಗ್ಗೆ ಘಟನೆ ಬೆಳಕಿಗೆ

(ನ್ಯೂಸ್ ಕಡಬ) newskadaba.com ಕಾಪು, ಫೆ.11. ಠಾಣಾ ವ್ಯಾಪ್ತಿಯ ಕಟಪಾಡಿ ಸಮೀಪದ ಎಂಬಲ್ಲಿ ಶನಿವಾರ ರಾತ್ರಿ ಹಾರೆಯಿಂದ ಬಡಿದು ವ್ಯಕ್ತಿಯೋರ್ವರನ್ನು ಕೊಲೆಗೈಲಾಗಿದ್ದು, ಭಾನುವಾರ ಬೆಳಿಗ್ಗೆ ಬೆಳಕಿಗೆ ಬಂದಿದೆ. ಕೊಲೆಗೀಡಾದ ವ್ಯಕ್ತಿಯನ್ನು ಉತ್ತರಭಾರತದ ಕಾರ್ಮಿಕ ಎಂದು ಶಂಕಿಸಲಾಗಿದ್ದು, ವಿವರ ಇನ್ನಷ್ಟೇ ಪತ್ತೆಯಾಗಬೇಕಾಗಿದೆ. ಕಟಪಾಡಿಯ ಅಚ್ಚಡ ಕ್ರಾಸ್ ಬಳಿ ಮರಳಿನ ರಾಶಿಯ ಮೇಲೆ ಮೃತದೇಹವು ಬಿದ್ದಿರುವುದು ಕಂಡುಬಂದಿದೆ. ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ತನಿಖೆಯನ್ನು ಕೈಗೆತ್ತಿಕೊಂಡಿದ್ದಾರೆ.

ಹಾರೆಯಿಂದ ಹೊಡೆದು ವ್ಯಕ್ತಿಯ ಕೊಲೆ ► ಭಾನುವಾರ ಬೆಳಿಗ್ಗೆ ಘಟನೆ ಬೆಳಕಿಗೆ Read More »

ಕರಾವಳಿ

ಆದ್ಯಪಾಡಿ ಮಹಿಳಾ ಸಿಬ್ಬಂದಿಗೆ ಲೈಂಗಿಕ‌ ಕಿರುಕುಳ ಪ್ರಕರಣಕ್ಕೆ ಹೊಸ ತಿರುವು ► ಬೈಕಿಗೆ ಢಿಕ್ಕಿ ಹೊಡೆದಿರುವುದನ್ನು ವಿಚಾರಿಸಿದ್ದಕ್ಕೆ ಕಾರಿನಲ್ಲಿದ್ದವರು ಹಲ್ಲೆ ನಡೆಸಿದ್ದಾರೆಂದು ಮರು ದೂರು

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ.11. ಇಲ್ಲಿನ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಸಿಬ್ಬಂದಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಕ್ಕೆ ಮಹತ್ವದ ತಿರುವು ದೊರೆತಿದ್ದು, ಪರಸ್ಪರ ವಿರುದ್ದ ದೂರುಗಳು ಬಜ್ಪೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ. ಲೈಂಗಿಕ ಕಿರುಕುಳ ಆರೋಪ ಮಾಡಿದ ಯುವತಿ ಹಾಗೂ ಆಕೆಯ ಜೊತೆಯಲ್ಲಿದ್ದ ಯುವಕನ ಕಡೆಯವರು ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ ಎಂದು ರಕ್ಷಿತ್ ಎಂಬುವರು ಶನಿವಾರದಂದು ಬಜ್ಪೆ ಠಾಣೆಗೆ ಮರು ದೂರು ನೀಡಿದ್ದಾರೆ. ವಿಮಾನ‌ ನಿಲ್ದಾಣದ ಮಹಿಳಾ ಸಿಬ್ಬಂದಿಯಾಗಿ ಕೆಲಸ ನಿರ್ವಹಿಸುತ್ತಿರುವ ಯುವತಿ ಶುಕ್ರವಾರ ರಾತ್ರಿ

ಆದ್ಯಪಾಡಿ ಮಹಿಳಾ ಸಿಬ್ಬಂದಿಗೆ ಲೈಂಗಿಕ‌ ಕಿರುಕುಳ ಪ್ರಕರಣಕ್ಕೆ ಹೊಸ ತಿರುವು ► ಬೈಕಿಗೆ ಢಿಕ್ಕಿ ಹೊಡೆದಿರುವುದನ್ನು ವಿಚಾರಿಸಿದ್ದಕ್ಕೆ ಕಾರಿನಲ್ಲಿದ್ದವರು ಹಲ್ಲೆ ನಡೆಸಿದ್ದಾರೆಂದು ಮರು ದೂರು Read More »

ಕರಾವಳಿ

ಪುದು ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಎಸ್‌ಡಿಪಿಐ – ಬಿಜೆಪಿ ಒಳ ಒಪ್ಪಂದ ► ಕಾಂಗ್ರೆಸ್ ಮುಖಂಡ ಪ್ರಕಾಶ್ ಕಾಜವ ಆರೋಪ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಫೆ.10. ಪುದು ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಎಸ್‌ಡಿಪಿಐ ಹಾಗೂ ಬಿಜೆಪಿ ಒಳ ಒಪ್ಪಂದ ಮಾಡಿಕೊಂಡಿವೆ ಎಂದು ಮುಡಿಪು ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಪ್ರಶಾಂತ್ ಕಾಜವ ಆರೋಪಿಸಿದ್ದಾರೆ. ಅವರು ಶನಿವಾರ ಸಂಜೆ ಬಿ.ಸಿ.ರೋಡಿನ ಪ್ರೆಸ್ ಕ್ಲಬ್‌ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಪುದು ಚುನಾವಣೆಯಲ್ಲಿ ಬಿಜೆಪಿಯೊಂದಿಗೆ ಒಪ್ಪಂದ ಮಾಡುವ ಮೂಲಕ ಕಾಂಗ್ರೆಸ್ ಮೇಲೆ ಸುಳ್ಳು ಆರೋಪ ಮಾಡುತ್ತಿದೆ ಎಂದು ಹೇಳಿದರು. ಪುದು ಗ್ರಾಮ ಪಂಚಾಯತ್‌ಗೆ ಫೆ.18 ರಂದು ನಡೆಯುವ ಚುನಾವಣೆಯಲ್ಲಿ 28 ರಿಂದ 30

ಪುದು ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಎಸ್‌ಡಿಪಿಐ – ಬಿಜೆಪಿ ಒಳ ಒಪ್ಪಂದ ► ಕಾಂಗ್ರೆಸ್ ಮುಖಂಡ ಪ್ರಕಾಶ್ ಕಾಜವ ಆರೋಪ Read More »

ಕರಾವಳಿ

ಬಜ್ಪೆ ವಿಮಾನ ನಿಲ್ದಾಣದ ಮಹಿಳಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ ► ಪರ್ಸ್, ಎಟಿಎಂ ಕಾರ್ಡ್ ಕಿತ್ತು ಪರಾರಿಯಾದ ದುಷ್ಕರ್ಮಿಗಳು

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ.10. ಇಲ್ಲಿನ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಮಹಿಳಾ ಸಿಬ್ಬಂದಿಗೆ ದುಷ್ಕರ್ಮಿಗಳ ತಂಡವೊಂದು ಲೈಂಗಿಕ ಕಿರುಕುಳ ನೀಡಿದ ಘಟನೆ ಶುಕ್ರವಾರದಂದು ತಡರಾತ್ರಿ ನಡೆದಿದೆ. ಮಂಗಳೂರಿನ ಮರವೂರು ಬಳಿ ಶುಕ್ರವಾರ ತಡರಾತ್ರಿ ಮಹಿಳಾ ಸಿಬ್ಬಂದಿ ಇರುವ ಕಾರನ್ನು ಅಡ್ಡಗಟ್ಟಿದ ಏಳು ಮಂದಿ ದುಷ್ಕರ್ಮಿಗಳ ತಂಡ ಮಹಿಳೆಯ ಜೊತೆ ಅನುಚಿತವಾಗಿ ವರ್ತಿಸಿದ್ದಲ್ಲದೆ ಪರ್ಸ್, ಎಟಿಎಮ್ ಕಾರ್ಡ್ ಕಿತ್ತು ಪರಾರಿಯಾಗಿದ್ದಾರೆ ಎಂದು ಸಂತ್ರಸ್ತ ಮಹಿಳೆ ಬಜ್ಪೆ ಠಾಣೆಗೆ ದೂರು ನೀಡಿದ್ದಾರೆ. ನಂತರ ದುಷ್ಕರ್ಮಿಗಳ ತಂಡ ಕಾರಿಗೆ ಕಲ್ಲು

ಬಜ್ಪೆ ವಿಮಾನ ನಿಲ್ದಾಣದ ಮಹಿಳಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ ► ಪರ್ಸ್, ಎಟಿಎಂ ಕಾರ್ಡ್ ಕಿತ್ತು ಪರಾರಿಯಾದ ದುಷ್ಕರ್ಮಿಗಳು Read More »

ಕರಾವಳಿ

ಇಂದು ಕೇಂದ್ರ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಕಲ್ಲಡ್ಕಕ್ಕೆ

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ.10. ಕೇಂದ್ರ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇಂದು (ಫೆಬ್ರವರಿ 10) ಬೆಳಿಗ್ಗೆ 8.55 ಕ್ಕೆ ವಿಮಾನದ ಮೂಲಕ ಬಜ್ಪೆ ಮಂಗಳೂರು ಅಂತರ್ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂದಿಳಿಯಲಿದ್ದಾರೆ. 9.45 ಕಲ್ಲಡ್ಕ ಶ್ರೀರಾಮ ವಿದ್ಯಾಲಯದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಭಾಗವಹಿಸುವ ಅವರು 4.20 ಕ್ಕೆ ಹಿಂತಿರುಗಿ ಮಂಗಳೂರು ವಿಮಾನ ನಿಲ್ದಾಣದಿಂದ ವಿಮಾನದ ಮೂಲಕ ಮುಂಬೈಗೆ ಪ್ರಯಾಣಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ಇಂದು ಕೇಂದ್ರ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಕಲ್ಲಡ್ಕಕ್ಕೆ Read More »

ಕರಾವಳಿ

ಶಾಶ್ವತ ಸೇತುವೆಗಾಗಿ ಕಾದು ಸುಸ್ತಾದ ಕಡಬದ ಗ್ರಾಮಸ್ಥರು ► ಊರವರ ಶ್ರಮದಿಂದ ನಿರ್ಮಾಣವಾಯ್ತು 120 ಮೀ. ಉದ್ದದ ಸೇತುವೆ

(ನ್ಯೂಸ್ ಕಡಬ) newskadaba.com ಕಡಬ, ಫೆ.09. ಕುಮಾರಧಾರಾ ನದಿಗೆ ಕಡಬ ಗ್ರಾಮದ ಪಿಜಕ್ಕಳದ ಪಾಲೋಳಿಯಲ್ಲಿ ಊರವರೇ ಸೇರಿಕೊಂಡು ಶ್ರಮದಾನದ ಮೂಲಕ ಬೇಸಗೆಯಲ್ಲಿ ಮಾತ್ರ ಉಪಯೋಗಕ್ಕೆ ಬರುವ ತಾತ್ಕಾಲಿಕ ಸೇತುವೆಯನ್ನು ನಿರ್ಮಿಸಿ, ಸುಳ್ಯ ತಾಲೂಕಿನ ಎಡಮಂಗಲಕ್ಕೆ ಸಂಪರ್ಕ ಕಲ್ಪಿಸುವ ವ್ಯವಸ್ಥೆಯನ್ನು ನಾಲ್ಕನೇ ಬಾರಿಯೂ ಮಾಡಿಕೊಂಡಿದ್ದಾರೆ. ಪಾಲೋಳಿಯಲ್ಲಿ ಸರ್ವಋತು ಸೇತುವೆ ನಿರ್ಮಾಣವಾಗಬೇಕೆಂಬ ಬೇಡಿಕೆ ಇಂದು ನಿನ್ನೆಯದಲ್ಲ. ಎರಡೂವರೆ ದಶಕಗಳಿಂದ ಈ ಬಗ್ಗೆ ಪರಿಸರದ ಜನರು ಜನಪ್ರತಿನಿಧಿಗಳಿಗೆ ಮನವಿ ಸಲ್ಲಿಸುತ್ತಲೇ ಬಂದಿದ್ದರೂ ಸೇತುವೆ ನಿರ್ಮಾಣದ ನಿಟ್ಟಿನಲ್ಲಿ ಯಾವುದೇ ರೀತಿಯ ಪ್ರಗತಿ ಕಂಡು

ಶಾಶ್ವತ ಸೇತುವೆಗಾಗಿ ಕಾದು ಸುಸ್ತಾದ ಕಡಬದ ಗ್ರಾಮಸ್ಥರು ► ಊರವರ ಶ್ರಮದಿಂದ ನಿರ್ಮಾಣವಾಯ್ತು 120 ಮೀ. ಉದ್ದದ ಸೇತುವೆ Read More »

ಕರಾವಳಿ

ವಿವಿಧ ಬೇಡಿಕೆಗೆ ಆಗ್ರಹಿಸಿ ಬಿಸಿಯೂಟ ನೌಕರರಿಂದ ಅಲ್ಲಲ್ಲಿ ಮುಷ್ಕರ

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ.09. ರಾಜ್ಯ ಅಕ್ಷರ ದಾಸೋಹ ನೌಕರರ ಸಂಘದ ನೇತೃತ್ವದಲ್ಲಿ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಕಚೇರಿಯ ಮುಂದೆ ಹಾಗೂ ಬಂಟ್ವಾಳ, ಪುತ್ತೂರು, ಬೆಳ್ತಂಗಡಿ, ಸುಳ್ಯ ತಾಲೂಕು ಕಚೇರಿಯೆದುರು ಶುಕ್ರವಾರದಂದು ಮುಷ್ಕರ ನಡೆಯಿತು. ಮುಷ್ಕರವನ್ನು ಸಿಐಟಿಯು ರಾಜ್ಯ ಉಪಾಧ್ಯಕ್ಷ ವಸಂತ ಆಚಾರಿ‌ ಉದ್ಘಾಟಿಸಿದರು. ಡಿವೈಎಫ್‌ಐ ರಾಜ್ಯಾಧ್ಯಕ್ಷ ಮುನೀರ್ ಕಾಟಿಪಳ್ಳ, ಸಿಪಿಎಂ ಮುಖಂಡ ಸುನೀಲ್ ಕುಮಾರ್ ಬಜಾಲ್, ಮಾಜಿ ಕಾರ್ಪೊರೇಟರ್ ಜಯಂತಿ ಬಿ.ಶೆಟ್ಟಿ ಮಾತನಾಡಿದರು. ಬಿಸಿಯೂಟ ನೌಕರರಿಗೆ 5

ವಿವಿಧ ಬೇಡಿಕೆಗೆ ಆಗ್ರಹಿಸಿ ಬಿಸಿಯೂಟ ನೌಕರರಿಂದ ಅಲ್ಲಲ್ಲಿ ಮುಷ್ಕರ Read More »

ಕರಾವಳಿ

ದಕ್ಷಿಣ ಕನ್ನಡದಲ್ಲಿ ಇನ್ಮುಂದೆ ಆನ್‌ಲೈನ್‌ನಲ್ಲಿ ಪ್ರಥಮ ಪಿಯುಸಿ ಫಲಿತಾಂಶ ► ಜಿಲ್ಲಾ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲರ ಸಂಘದಿಂದ ನೂತನ ಪ್ರಯೋಗ

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ.09. ದಕ್ಷಿಣ ಕನ್ನಡ ಜಿಲ್ಲಾ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲರ ಸಂಘವು ಪ್ರಥಮ ಪಿಯುಸಿ ಫಲಿತಾಂಶಗಳ ಪ್ರಕಟನೆಗೆ ಏಕರೂಪದ ತಂತ್ರಜ್ಞಾನವನ್ನು ಅಭಿವೃದ್ಧಿಪಡಿಸಿದ್ದು, ನಗರದ ಸರೋಜಿನಿ ಮಧುಸೂದನ ಕುಶೆ ಶಿಕ್ಷಣ ಸಂಸ್ಥೆಗಳ ಕಟ್ಟಡದಲ್ಲಿ ಪ್ರಾಯೋಗಿಕವಾಗಿ ಅನುಷ್ಠಾನಗೊಳಿಸಲಾಯಿತು.   ರಾಜ್ಯದಲ್ಲಿಯೇ ಇದು ವಿನೂತನ ಪ್ರಯೋಗವಾಗಿದ್ದು, ಪ್ರಥಮ ಪಿಯುಸಿ ಫಲಿತಾಂಶ ಏಕರೂಪದಲ್ಲಿ, ಏಕಕಾಲದಲ್ಲಿ ‘ಸುವಿದ್ಯಾ’ ಪೋರ್ಟಲ್ ಮೂಲಕ ಆನ್‌ಲೈನ್‌ ನಲ್ಲಿ ಈ ಸಾಲಿನಿಂದ ಫಲಿತಾಂಶ ಲಭ್ಯವಾಗಲಿದೆ. ಪದವಿ ಪೂರ್ವ ಶಿಕ್ಷಣ ಇಲಾಖೆಯ ನಿರ್ದೇಶಕಿ ಸಿ.ಶಿಖಾ ಈ

ದಕ್ಷಿಣ ಕನ್ನಡದಲ್ಲಿ ಇನ್ಮುಂದೆ ಆನ್‌ಲೈನ್‌ನಲ್ಲಿ ಪ್ರಥಮ ಪಿಯುಸಿ ಫಲಿತಾಂಶ ► ಜಿಲ್ಲಾ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲರ ಸಂಘದಿಂದ ನೂತನ ಪ್ರಯೋಗ Read More »

ಕರಾವಳಿ

ಎಸ್ಸೆಸ್ಸೆಲ್ಸಿ ಪರೀಕ್ಷೆಯ ತಯಾರಿ ಬಗ್ಗೆ ನೇರ ಫೋನ್ ಇನ್ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ.09. ಮಾರ್ಚ್/ಏಪ್ರಿಲ್‍ನಲ್ಲಿ ನಡೆಯಲಿರುವ 2017-18ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆಯ ತಯಾರಿ ಬಗ್ಗೆ ಗಣಿತ ಮತ್ತು ವಿಜ್ಞಾನ ವಿಷಯಗಳಿಗೆ ಮಂಗಳೂರು ಟ್ಯೂಶನ್-ರಾಮನ್ ಪಬ್ಲಿಕೇಶನ್ ಇವರ ಪ್ರಯೋಜತ್ವದಲ್ಲಿ ಆಕಾಶವಾಣಿ, ಮಂಗಳೂರು ಇವರ ವತಿಯಿಂದ ನೇರ ಪೋನ್ ಇನ್ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ‌. ಫೆಬ್ರವರಿ 11 ರಂದು ಬೆಳಿಗ್ಗೆ 10.30 ರಿಂದ 11.30 ರವರೆಗೆ ವಿಜ್ಞಾನ ವಿಷಯದ ಬಗ್ಗೆ ಫೆಬ್ರವರಿ 18 ರಂದು ಬೆಳಿಗ್ಗೆ 10.30 ರಿಂದ 11.30 ರವರೆಗೆ ಎಸ್.ಎಸ್.ಎಲ್.ಸಿ. ಪರೀಕ್ಷೆಗೆ ಸಂಬಂಧಿಸಿದಂತೆ ನಡೆಯಲಿರುವ ಈ

ಎಸ್ಸೆಸ್ಸೆಲ್ಸಿ ಪರೀಕ್ಷೆಯ ತಯಾರಿ ಬಗ್ಗೆ ನೇರ ಫೋನ್ ಇನ್ ಕಾರ್ಯಕ್ರಮ Read More »

ಕರಾವಳಿ
Scroll to Top