ಕರಾವಳಿ

ನಿರುದ್ಯೋಗಿಗಳಿಗೊಂದು ಸುವರ್ಣಾವಕಾಶ ► ಇಂದು ಮಂಗಳೂರಿನಲ್ಲಿ ಉದ್ಯೋಗ ಮೇಳ, ವಿವಿಧ ಕಂಪೆನಿಗಳು ಭಾಗಿ

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ.03. ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ದಕ್ಷಿಣಕನ್ನಡ ಜಿಲ್ಲೆ, ಮಂಗಳೂರು ಹಾಗೂ ಯೆನೆಪೋಯ ಕಾಲೇಜು, ಬಲ್ಮಠ ಮಂಗಳೂರು, ಇವರುಗಳ ಸಂಯುಕ್ತಾಶ್ರಯದಲ್ಲಿ ಇಂದು (ಫೆಬ್ರವರಿ 03) ಬೆಳಿಗ್ಗೆ 10.30 ರಿಂದ ಯೆನಪೋಯಾ ಕಾಲೇಜು, ಬಲ್ಮಠ, ಮಂಗಳೂರು ಇಲ್ಲಿ ಉದ್ಯೋಗ ಮೇಳ ನಡೆಯಲಿದೆ. ಈ ಮೇಳದಲ್ಲಿ ಖಾಸಗಿ ಕಂಪೆನಿಗಳು ಭಾಗವಹಿಸಿ ತಮ್ಮಲ್ಲಿ ಖಾಲಿ ಇರುವ ಹುದ್ದೆಗಳಿಗೆ ನೇರ ಸಂದರ್ಶನದ ಮೂಲಕ ಅಭ್ಯರ್ಥಿಗಳ ಆಯ್ಕೆ ಮಾಡಿಕೊಳ್ಳಲಿದ್ದು, ಈ ಉದ್ಯೋಗಮೇಳದಲ್ಲಿ ಎಸ್.ಎಸ್.ಎಲ್.ಸಿ.ಗಿಂತ ಕಡಿಮೆ, ಎಸ್.ಎಸ್.ಎಲ್.ಸಿ, ಪಿ.ಯು.ಸಿ, ಐ.ಟಿ.ಐ, […]

ನಿರುದ್ಯೋಗಿಗಳಿಗೊಂದು ಸುವರ್ಣಾವಕಾಶ ► ಇಂದು ಮಂಗಳೂರಿನಲ್ಲಿ ಉದ್ಯೋಗ ಮೇಳ, ವಿವಿಧ ಕಂಪೆನಿಗಳು ಭಾಗಿ Read More »

ಕರಾವಳಿ

ಅಡ್ಡಹೊಳೆಯಿಂದ ಸಂಪಾಜೆಗೆ ಆಗಮಿಸಿದರೇ ನಕ್ಸಲರು…? ► ಕಾಡು ಪ್ರದೇಶದ ಎರಡು ಮನೆಗಳಿಗೆ ಭೇಟಿ ನೀಡಿದ ಮೂವರ ತಂಡ

(ನ್ಯೂಸ್ ಕಡಬ) newskadaba.com ಸುಳ್ಯ, ಫೆ.03. ಚುನಾವಣೆ ಹತ್ತಿರವಾಗುತ್ತಿರುವಂತೆಯೇ ಇತ್ತೀಚಿಗೆ ಶಿರಾಡಿ ಗ್ರಾಮದ ಅಡ್ಡಹೊಳೆ ಪರಿಸರಕ್ಕೆ ಆಗಮಿಸಿದ್ದ ನಕ್ಸಲರ ತಂಡ ಶುಕ್ರವಾರದಂದು ಸಂಪಾಜೆಯಲ್ಲಿ ಎರಡು ಮನೆಗಳಿಗೆ ಭೇಟಿ ನೀಡಿದ್ದಾರೆ. ನಕ್ಸಲರ ಆಗಮನದ ಹಿನ್ನೆಲೆಯಲ್ಲಿ ಇತ್ತೀಚೆಗೆ ಶಿರಾಡಿ ಗ್ರಾಮದ ಅಡ್ಡಹೊಳೆ ಪರಿಸರದಲ್ಲಿ ನಕ್ಸಲ್ ನಿಗ್ರಹ ದಳದಿಂದ ಕೂಂಬಿಂಗ್ ನಡೆಸಲಾಗಿದ್ದು, ತಮ್ಮ ಕಾರ್ಯಕ್ಷೇತ್ರವನ್ನು ಬದಲಾಯಿಸಿರುವ ನಕ್ಸಲರು ಇದೀಗ ಕೊಡಗು ಜಿಲ್ಲೆಯ ಗಡಿಭಾಗವಾದ ಸಂಪಾಜೆಯಲ್ಲಿ ಕಂಡುಬಂದಿದ್ದಾರೆ. ಸಂಪಾಜೆ ಗ್ರಾಮದ ಕೊಯಿನಾಡು ನಿವಾಸಿ ದಯಾನಂದ ಹಾಗೂ ಇನ್ನೆರಡು ಮನೆಗಳಿಗೆ ಮೂವರ ತಂಡ ಭೇಟಿ

ಅಡ್ಡಹೊಳೆಯಿಂದ ಸಂಪಾಜೆಗೆ ಆಗಮಿಸಿದರೇ ನಕ್ಸಲರು…? ► ಕಾಡು ಪ್ರದೇಶದ ಎರಡು ಮನೆಗಳಿಗೆ ಭೇಟಿ ನೀಡಿದ ಮೂವರ ತಂಡ Read More »

ಕರಾವಳಿ

ಮಾಣಿ: ಬಸ್ – ಕಾರು ಢಿಕ್ಕಿ ► ಕಾರು ಚಾಲಕ ಗಂಭೀರ

(ನ್ಯೂಸ್ ಕಡಬ) newskadaba.com ವಿಟ್ಲ, ಫೆ.02. ಹಠಾತ್ತನೆ ರಸ್ತೆಗೆ ಬಂದ ನಾಗರ ಹಾವು ಚಕ್ರದಡಿಗೆ ಬೀಳುವುದನ್ನು ತಪ್ಪಿಸಿದ ಕಾರಿನ ಹಿಂದಿದ್ದ ಬಸ್ ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಓಮ್ನಿ ಕಾರಿಗೆ ಢಿಕ್ಕಿಯಾದ ಪರಿಣಾಮ ಕಾರು ಚಾಲಕ ಗಂಭೀರ ಗಾಯಗೊಂಡ ಘಟನೆ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಮಾಣಿ ಸಮೀಪ ನಡೆದಿದೆ. ಉಪ್ಪಿನಂಗಡಿಯಿಂದ ಮಂಗಳೂರಿಗೆ ತೆರಳುತ್ತಿದ್ದ ಬಸ್ಸಿನ ಮುಂಭಾಗದಿಂದ ಸಂಚರಿಸುತ್ತಿದ್ದ ಕಾರಿಗೆ ಹಠಾತ್ತನೆ ಅಡ್ಡ ಬಂದ ನಾಗರಹಾವನ್ನು ತಪ್ಪಿಸಲು ಕಾರು ಚಾಲಕ ಬ್ರೇಕ್ ಹಾಕಿದ್ದು, ಈ ಸಂದರ್ಭದಲ್ಲಿ ಹಿಂದಿನಿಂದ

ಮಾಣಿ: ಬಸ್ – ಕಾರು ಢಿಕ್ಕಿ ► ಕಾರು ಚಾಲಕ ಗಂಭೀರ Read More »

ಕರಾವಳಿ

ಪಂಚಾಯತ್ ಅಭಿವೃದ್ಧಿ ಅಧಿಕಾರಿಯನ್ನೇ ಬಿಡದ ಬೀದಿನಾಯಿಗಳು ► ಬೀದಿನಾಯಿಗಳ ಹಾವಳಿಯಿಂದ ಬೈಕ್ ಪಲ್ಟಿ

(ನ್ಯೂಸ್ ಕಡಬ) newskadaba.com ಕಡಬ, ಫೆ.01. ಬೀದಿನಾಯಿಗಳ ಕಾಟವನ್ನು ಜನಸಾಮಾನ್ಯರು ಅನುಭವಿಸುತ್ತಿರುವ ಮಧ್ಯೆಯೇ ಬೀದಿನಾಯಿಗಳು ಪಂಚಾಯತ್ ಅಭಿವೃದ್ಧಿ ಅಧಿಕಾರಿಯನ್ನು ಸುಮ್ಮನೆ ಬಿಟ್ಟಿಲ್ಲ. ನಾಯಿ ಅಡ್ಡ ಬಂದಿದ್ದರಿಂದಾಗಿ ಕಡಬ ಗ್ರಾಮ ಪಂಚಾಯತಿನ ಅಭಿವೃದ್ಧಿ ಅಧಿಕಾರಿಯವರ ಬೈಕ್ ರಸ್ತೆಗುರುಳಿದ ಘಟನೆ ಗುರುವಾರದಂದು ಕಡಬ ಪೇಟೆಯಲ್ಲಿ ನಡೆದಿದೆ. ಘಟನೆಯಿಂದಾಗಿ ಕಡಬ ಗ್ರಾಮ ಪಂಚಾಯತ್ ನ ಅಭಿವೃದ್ಧಿ ಅಧಿಕಾರಿ ಚೆನ್ನಪ್ಪ ಗೌಡ ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದು, ಕಡಬ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಬೈಕ್ ಬಿಟ್ಟು ಆಟೋರಿಕ್ಷಾದಲ್ಲಿ ಮನೆಗೆ ತೆರಳಿದರು.

ಪಂಚಾಯತ್ ಅಭಿವೃದ್ಧಿ ಅಧಿಕಾರಿಯನ್ನೇ ಬಿಡದ ಬೀದಿನಾಯಿಗಳು ► ಬೀದಿನಾಯಿಗಳ ಹಾವಳಿಯಿಂದ ಬೈಕ್ ಪಲ್ಟಿ Read More »

ಕರಾವಳಿ

ಪ್ರೀತಿಸಿ ಮದುವೆಯಾಗಿದ್ದ ಪತ್ನಿಯನ್ನೇ ಕಡಿದು ಕೊಲೆಗೆ ಯತ್ನಿಸಿದ ಭೂಪ ► ಪ್ರೀತಿಯನ್ನು ಉಳಿಸಲು ಮದುವೆಗೂ ಮೊದಲೇ ನಡೆದಿತ್ತು ತಲವಾರು ಕಾರುಬಾರು

(ನ್ಯೂಸ್ ಕಡಬ) newskadaba.com ಕಾರ್ಕಳ, ಫೆ.01. ಕಳೆದ ಒಂದು ವರ್ಷದ ಹಿಂದೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ವ್ಯಕ್ತಿಯೋರ್ವ ತನ್ನ ಪತ್ನಿಯನ್ನು ಕಡಿದು ಕೊಲೆಗೆ ಪ್ರಯತ್ನಿಸಿದ ಘಟನೆ ಹೆರ್ಮುಂಡೆಯ ಕುಕ್ಕುದಡಿಯಲ್ಲಿ ನಡೆದಿದೆ. ಹಲ್ಲೆಗೊಳಗಾದ ಯುವತಿಯನ್ನು ಹೆರ್ಮುಂಡೆ ಕರ್‍ಜಿಪಲ್ಕೆ ನಿವಾಸಿ ಶ್ರೀಧರ್ ಪೂಜಾರಿ ಮತ್ತು ಸುಗುಣ ಪೂಜಾರಿ ದಂಪತಿಗಳ ಅನುಶ್ರೀ (23) ಎಂದು ಗುರುತಿಸಲಾಗಿದ್ದು, ಘಟನೆಯಿಂದ ತನ್ನ ಎರಡು ಕೈಗಳು ಹಾಗೂ ಕಾಲುಗಳಿಗೆ ಗಂಭೀರ ಸ್ವರೂಪದ ಗಾಯಗಳಾಗಿದ್ದು ಜೀವನ್ಮರಣ ಸ್ಥಿತಿಯಲ್ಲಿರುವ ಮಹಿಳೆಯನ್ನು ಮಣಿಪಾಲ ಆಸ್ಪತ್ರೆಯ ತೀವ್ರ ನಿಗಾ ವಿಭಾಗದಲ್ಲಿ ದಾಖಲಿಸಲಾಗಿದೆ. ಆಕೆಯ ಪತಿ ಹೆರ್ಮುಂಡೆಯ

ಪ್ರೀತಿಸಿ ಮದುವೆಯಾಗಿದ್ದ ಪತ್ನಿಯನ್ನೇ ಕಡಿದು ಕೊಲೆಗೆ ಯತ್ನಿಸಿದ ಭೂಪ ► ಪ್ರೀತಿಯನ್ನು ಉಳಿಸಲು ಮದುವೆಗೂ ಮೊದಲೇ ನಡೆದಿತ್ತು ತಲವಾರು ಕಾರುಬಾರು Read More »

ಕರಾವಳಿ

ಕಲ್ಮಡ್ಕ: ಅಮಾನುಷ ರೀತಿಯಲ್ಲಿ ಜಾನುವಾರು ಸಾಗಾಟ ಪತ್ತೆ ► ಓಮ್ನಿ, ಬೈಕ್ ಸೇರಿ ನಾಲ್ವರು ಆರೋಪಿಗಳು ಪೊಲೀಸ್ ವಶಕ್ಕೆ

(ನ್ಯೂಸ್ ಕಡಬ) newskadaba.com ಬೆಳ್ಳಾರೆ, ಫೆ.01. ಯಾವುದೇ ಪರವಾನಗಿ ಇಲ್ಲದೆ ಅಕ್ರಮವಾಗಿ ಎಲ್ಲಿಂದಲೋ ಕಳ್ಳತನ ಮಾಡಿ ಹಿಂಸಾತ್ಮಕ ರೀತಿಯಲ್ಲಿ ಕೈಕಾಲು ಕಟ್ಟಿ ಮಾರುತಿ ಓಮ್ನಿ ಕಾರಿನಲ್ಲಿ ಜಾನುವಾರು ಸಾಗಾಟ ಮಾಡುತ್ತಿದ್ದುದನ್ನು ಪತ್ತೆ ಹಚ್ಚಿರುವ ಬೆಳ್ಳಾರೆ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿದ ಘಟನೆ ಗುರುವಾರ ಬೆಳಗಿನ ಜಾವ ನಡೆದಿದೆ. ಮಾರುತಿ ಓಮ್ನಿ (KA. 21.N.1129) ಕಾರಿನಲ್ಲಿ ಅಮಾನುಷವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದಾರೆ ಎಂಬ ಖಚಿತ ಮಾಹಿತಿಯ ಮೇರೆಗೆ ಬೆಳ್ಳಾರೆ ಪೊಲೀಸರು ಠಾಣಾ ವ್ಯಾಪ್ತಿಯ ಕಲ್ಮಡ್ಕ ಗ್ರಾಮದ ಅಡಿಬಾಯಿ ಎಂಬಲ್ಲಿ

ಕಲ್ಮಡ್ಕ: ಅಮಾನುಷ ರೀತಿಯಲ್ಲಿ ಜಾನುವಾರು ಸಾಗಾಟ ಪತ್ತೆ ► ಓಮ್ನಿ, ಬೈಕ್ ಸೇರಿ ನಾಲ್ವರು ಆರೋಪಿಗಳು ಪೊಲೀಸ್ ವಶಕ್ಕೆ Read More »

ಕರಾವಳಿ

ಕಾಲು ಮುರಿತಕ್ಕೊಳಗಾಗಿ ನರಳಾಡುತ್ತಿದ್ದ ಮಂಡ್ಯದ ಮಹಿಳೆಗೆ ನೆರವು ► ಮಾನವೀಯ ಮೌಲ್ಯವನ್ನು ಎತ್ತಿ ಹಿಡಿದ ಪುತ್ತೂರು ಶಾಸಕಿ ಶಕುಂತಲಾ ಶೆಟ್ಟಿ

(ನ್ಯೂಸ್ ಕಡಬ) newskadaba.com ಪುತ್ತೂರು, ಫೆ.01. ಕಾಲು ಮುರಿತಕ್ಕೊಳಗಾಗಿ ಚಿಕಿತ್ಸೆ ಪಡೆಯಲೆಂದು ಆಂಧ್ರಪ್ರದೇಶದ ಪುತ್ತೂರಿಗೆ ತೆರಳಬೇಕಿದ್ದ ಮಹಿಳೆಯೋರ್ವರು ವಿಳಾಸದ ಗೊಂದಲದಿಂದಾಗಿ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿಗೆ ಆಗಮಿಸಿ ಇತ್ತ ವಿಳಾಸ ಸಿಗದೆ, ಅತ್ತ ಊರಿಗೂ ಹೋಗಲು ದುಡ್ಡಿಲ್ಲದೆ ಒದ್ದಾಡುತ್ತಿದ್ದ ಮಹಿಳೆಯೋರ್ವರಿಗೆ ಪುತ್ತೂರು ಶಾಸಕಿ ಸಹಾಯಹಸ್ತ ನೀಡಿದ ಘಟನೆ ಬುಧವಾರದಂದು ಸಂಜೆ ನಡೆದಿದೆ. ಮುರಿತಕ್ಕೊಳಗಾಗಿದ್ದ ಮಂಡ್ಯ ಮೂಲದ ಬಡ ಮಹಿಳೆ ಚಿಕಿತ್ಸೆಗೆಂದು ಪ್ರಸಿದ್ಧ ನಾಟಿ ಮದ್ದು ನೀಡಲಾಗುವ ಆಂಧ್ರಪ್ರದೇಶದ ಪುತ್ತೂರಿಗೆಂದು ಹೊರಟಿದ್ದರು. ಆದರೆ ವಿಳಾಸದ ಗೊಂದಲದಿಂದಾಗಿ ದಕ್ಷಿಣ ಕನ್ನಡದ

ಕಾಲು ಮುರಿತಕ್ಕೊಳಗಾಗಿ ನರಳಾಡುತ್ತಿದ್ದ ಮಂಡ್ಯದ ಮಹಿಳೆಗೆ ನೆರವು ► ಮಾನವೀಯ ಮೌಲ್ಯವನ್ನು ಎತ್ತಿ ಹಿಡಿದ ಪುತ್ತೂರು ಶಾಸಕಿ ಶಕುಂತಲಾ ಶೆಟ್ಟಿ Read More »

ಕರಾವಳಿ

ಸುಂಕದಕಟ್ಟೆ: ರಸ್ತೆ ಬದಿ ನಿಂತಿದ್ದ ಯುವಕನಿಗೆ ಕೆಎಸ್ಸಾರ್ಟಿಸಿ ಬಸ್ ಢಿಕ್ಕಿ ► ಯುವಕ ಗಂಭೀರ

(ನ್ಯೂಸ್ ಕಡಬ) newskadaba.com ಕಡಬ, ಜ.31. ರಸ್ತೆ ಬದಿ ನಿಂತಿದ್ದ ಯುವಕನೋರ್ವನಿಗೆ ಕೆಎಸ್ಸಾರ್ಟಿಸಿ ಬಸ್ಸೊಂದು ಢಿಕ್ಕಿ ಹೊಡೆದ ಪರಿಣಾಮ ಯುವಕ ಗಂಭೀರ ಗಾಯಗೊಂಡ ಘಟನೆ ಸುಬ್ರಹ್ಮಣ್ಯ – ಧರ್ಮಸ್ಥಳ ರಾಜ್ಯ ಹೆದ್ದಾರಿಯ ಸುಂಕದಕಟ್ಟೆ ಎಂಬಲ್ಲಿ ಬುಧವಾರ ರಾತ್ರಿ ನಡೆದಿದೆ. ಗಾಯಾಳು ಯುವಕನನ್ನು ಸುಂಕದಕಟ್ಟೆ ಸಮೀಪದ ಮೂಜೂರು ನಿವಾಸಿ ಆಸಿಫ್ ಎಂದು ಗುರುತಿಸಲಾಗಿದೆ. ಈತ ಸುಂಕದಕಟ್ಟೆ ದರ್ಗಾ ಬಳಿ ರಸ್ತೆ ಬದಿಯಲ್ಲಿ ನಿಂತಿದ್ದಾಗ ಸುಬ್ರಹ್ಮಣ್ಯ ಕಡೆಗೆ ತೆರಳುತ್ತಿದ್ದ ಕೆಎಸ್ಸಾರ್ಟಿಸಿ ಬಸ್ ಢಿಕ್ಕಿ ಹೊಡೆದಿದ್ದು, ಗಂಭೀರ ಗಾಯಗೊಂಡ ಯುವಕನಿಗೆ ಕಡಬ

ಸುಂಕದಕಟ್ಟೆ: ರಸ್ತೆ ಬದಿ ನಿಂತಿದ್ದ ಯುವಕನಿಗೆ ಕೆಎಸ್ಸಾರ್ಟಿಸಿ ಬಸ್ ಢಿಕ್ಕಿ ► ಯುವಕ ಗಂಭೀರ Read More »

ಕರಾವಳಿ

ಅಕ್ರಮ ಮರಳು ಅಡ್ಡೆಗಳಿಗೆ ದಾಳಿ ► ಮರಳು ಸೇರಿದಂತೆ ಲಕ್ಷಾಂತರ ರೂ. ಮೌಲ್ಯದ ಸ್ವತ್ತುಗಳು ವಶಕ್ಕೆ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಜ.31. ತಾಲೂಕಿನ ಬರಿಮಾರು ಮತ್ತು ಸರಪಾಡಿ ಎಂಬಲ್ಲಿ ಪ್ರತ್ಯೇಕ ಅಕ್ರಮ ಮರಳು ಅಡ್ಡೆಗಳಿಗೆ ದಾಳಿ ನಡೆಸಿರುವ ಬಂಟ್ವಾಳ ಗ್ರಾಮಾಂತರ ಠಾಣಾ ಪೊಲೀಸರು ಹಾಗೂ ಗಣಿ ಇಲಾಖಾ ಅಧಿಕಾರಿಗಳು ಲಕ್ಷಾಂತರ ರೂ. ಮೌಲ್ಯದ ಮರಳು, ನಾಲ್ಕು ಯಾಂತ್ರೀಕೃತ ದೋಣಿ ಹಾಗೂ ೧ ಲಾರಿಯನ್ನು ವಶಪಡಿಸಿಕೊಂಡ ಘಟನೆ ಬುಧವಾರದಂದು ನಡೆದಿದೆ. ಬಂಟ್ವಾಳ ತಾಲೂಕಿನ ಬರಿಮಾರು ಮತ್ತು ಸರಪಾಡಿ ಎಂಬಲ್ಲಿ ಅಕ್ರಮವಾಗಿ ಮರಳುಗಾರಿಕೆ ನಡೆಸುತ್ತಿದ್ದಾರೆ ಎಂಬ ಖಚಿತ ಮಾಹಿತಿ ಆಧಾರದಲ್ಲಿ ಜಿಲ್ಲಾ ಎಸ್ಪಿ ರವಿಕಾಂತೇ ಗೌಡ

ಅಕ್ರಮ ಮರಳು ಅಡ್ಡೆಗಳಿಗೆ ದಾಳಿ ► ಮರಳು ಸೇರಿದಂತೆ ಲಕ್ಷಾಂತರ ರೂ. ಮೌಲ್ಯದ ಸ್ವತ್ತುಗಳು ವಶಕ್ಕೆ Read More »

ಕರಾವಳಿ

ದೀಪಕ್ ಹತ್ಯೆಗೆ ಪ್ರತೀಕಾರವಾಗಿ ಬಶೀರ್ ಹತ್ಯೆಯನ್ನು ಸಮರ್ಥಿಸಿದ ಆರೋಪ ► ವಿಹಿಂಪ ಜಿಲ್ಲಾಧ್ಯಕ್ಷ ಜಗದೀಶ್ ಶೇಣವ ವಿರುದ್ಧ ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba.com ಮಂಗಳೂರು, ಜ.31. ಅಮಾಯಕ ದೀಪಕ್ ರಾವ್ ಹತ್ಯೆಗೆ ಪ್ರತೀಕಾರವಾಗಿ ಕೊಟ್ಟಾರ ಚೌಕಿಯಲ್ಲಿ ಬಶೀರ್ ಹತ್ಯೆಯನ್ನು ಸಮರ್ಥಿಸಿ ಮಾತನಾಡಿದ್ದ ವಿಶ್ವ ಹಿಂದೂ ಪರಿಷತ್ ದ.ಕ. ಜಿಲ್ಲಾಧ್ಯಕ್ಷ ಜಗದೀಶ್ ಶೇಣವ ವಿರುದ್ಧ ಪೊಲೀಸರು ಸ್ವಯಂ ಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಬಂದರು ಪೊಲೀಸ್ ಠಾಣೆಯಲ್ಲಿ ಪಿಎಸ್‌ಐ ಅನಂತ ಮುರ್ಡೇಶ್ವರ ಅವರು ದೂರು ದಾಖಲಿಸಿಕೊಂಡಿದ್ದಾರೆ. ಭಾರತೀಯ ದಂಡ ಸಂಹಿತೆ 153 (ಎ), 116 ಸೆಕ್ಷನ್ಗಳಡಿಯಲ್ಲಿ ಜಗದೀಶ್ ಶೇಣವ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಜನವರಿ 28ರಂದು ನಗರದ ಖಾಸಗಿ ಸಭಾಂಗದಲ್ಲಿ

ದೀಪಕ್ ಹತ್ಯೆಗೆ ಪ್ರತೀಕಾರವಾಗಿ ಬಶೀರ್ ಹತ್ಯೆಯನ್ನು ಸಮರ್ಥಿಸಿದ ಆರೋಪ ► ವಿಹಿಂಪ ಜಿಲ್ಲಾಧ್ಯಕ್ಷ ಜಗದೀಶ್ ಶೇಣವ ವಿರುದ್ಧ ಪ್ರಕರಣ ದಾಖಲು Read More »

ಕರಾವಳಿ
Scroll to Top