ಕರಾವಳಿ

ಪಿಜಕ್ಕಳ ಸರಕಾರಿ ಶಾಲೆಗೆ ಮಾತಿನ ಮಂಟಪ ನೀಡಿದ ಹಳೆ ವಿದ್ಯಾರ್ಥಿಗಳು

(ನ್ಯೂಸ್ ಕಡಬ) newskadaba.com ಕಡಬ, ಜ.31. ಪಿಜಕ್ಕಳ ಕಿರಿಯ ಪ್ರಾಥಮಿಕ ಶಾಲೆಯ ಹಳೆಯ ವಿದ್ಯಾರ್ಥಿಗಳು ಕೆಲವರು ಸೇರಿ ಮಾತಿನ ಮಂಟಪ(ಡಯಾಸ್) ವನ್ನು ಶಾಲೆಗೆ ಶನಿವಾರದಂದು ಕೊಡುಗೆಯಾಗಿ ನೀಡಿದ್ದಾರೆ. ಪಿಜಕ್ಕಳ ಶಾಲೆಯ ಹಳೆಯ ವಿದ್ಯಾರ್ಥಿಗಳಾದ ನಿವೃತ್ತ ಸೈನಿಕ ಕಮಲಾಕ್ಷಿ ಅರುಣ್ ಕುಮಾರ್, ಬೆಳ್ತಂಗಡಿ ಕಾಯರ್ತಡ್ಕ ಶಾಲಾ ದೈಹಿಕ ಶಿಕ್ಷಕರಾದ ಪ್ರಕಾಶ್ ಎ.ಜೆ., ಆಲೂರು ಸರಕಾರಿ ಶಾಲಾ ದೈಹಿಕ ಶಿಕ್ಷಕರಾದ ವಸಂತಿ ತುಳಸಿ ಪ್ರಸಾದ್, ಬೆಂಗಳೂರು ರಾಮಯ್ಯ ಆಸ್ಪತ್ರೆಯ ಶುಶ್ರೂಷಕರಾದ ಉಷಾ ಜಯಪ್ರಕಾಶ್, ರಮ್ಯ ತಿರುಮಲೇಶ್ ನೆಟ್ಟಣ ಮೊದಲಾದವರು ಸೇರಿ […]

ಪಿಜಕ್ಕಳ ಸರಕಾರಿ ಶಾಲೆಗೆ ಮಾತಿನ ಮಂಟಪ ನೀಡಿದ ಹಳೆ ವಿದ್ಯಾರ್ಥಿಗಳು Read More »

ಕರಾವಳಿ

ಚಿನ್ನದ ಸರದೊಂದಿಗೆ ಪರಾರಿಯಾಗುತ್ತಿದ್ದ ಆರೋಪಿಯ ಬಂಧನ ► ತಡೆಯಲು ಬಂದ ಪೊಲೀಸ್ ಸಿಬ್ಬಂದಿಗೆ ಹಲ್ಲೆ

(ನ್ಯೂಸ್ ಕಡಬ) newskadaba.com ಧರ್ಮಸ್ಥಳ, ಜ.30. ಚಿನ್ನದ ಸರವನ್ನು ದರೋಡೆ ಮಾಡಿ ಪರಾರಿಯಾಗುತ್ತಿದ್ದ ಆರೋಪಿಗಳನ್ನು ತಡೆಯಲು ಬಂದ ಪೊಲೀಸ್ ಸಿಬ್ಬಂದಿಗೆ ಆರೋಪಿಗಳು ಹಲ್ಲೆ ನಡೆಸಿದ ಘಟನೆ ಮಂಗಳವಾರದಂದು ಸಂಜೆ ಚಾರ್ಮಾಡಿ ಚೆಕ್ ಪೋಸ್ಟ್ ನಲ್ಲಿ ನಡೆದಿದೆ. ಚಿಕ್ಕಮಗಳೂರು ಜಿಲ್ಲೆಯ ಬಣಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಚಿನ್ನದ ಸರವನ್ನು ಸುಲಿಗೆ ಮಾಡಿಕೊಂಡು ಬರುತ್ತಿರುವ ಬಗ್ಗೆ ಮಾಹಿತಿ ಬಂದ ಮೇರೆಗೆ ಚಾರ್ಮಾಡಿ ಚೆಕ್ ಪೋಸ್ಟ್ ನಲ್ಲಿ ವಾಹನ ತಪಾಸಣೆ ಮಾಡುತ್ತಿದ್ದಾಗ ಆರೋಪಿಗಳಿದ್ದ ಬೈಕನ್ನು ತಡೆದ ಸಂದರ್ಭದಲ್ಲಿ ಆರೋಪಿಗಳಲ್ಲೋರ್ವ ಪೊಲೀಸ್ ಸಿಬ್ಬಂದಿ

ಚಿನ್ನದ ಸರದೊಂದಿಗೆ ಪರಾರಿಯಾಗುತ್ತಿದ್ದ ಆರೋಪಿಯ ಬಂಧನ ► ತಡೆಯಲು ಬಂದ ಪೊಲೀಸ್ ಸಿಬ್ಬಂದಿಗೆ ಹಲ್ಲೆ Read More »

ಕರಾವಳಿ

‘ಮುಳುಗು ಸೇತುವೆ’ ಖ್ಯಾತಿಯ ಹೊಸ್ಮಠ ಸೇತುವೆಗೆ ಕೊನೆಗೂ ಮುಕ್ತಿ

(ನ್ಯೂಸ್ ಕಡಬ) newskadaba.com ಕಡಬ, ಜ.30. ಮುಳುಗು ಸೇತುವೆಯೆಂದೇ ಖ್ಯಾತಿಯನ್ನು ಪಡೆದಿರುವ ಉಪ್ಪಿನಂಗಡಿ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಮೂಲಕ ತಾ| ಕೇಂದ್ರವಾಗಿರುವ ಕಡಬವನ್ನು ಮಳೆಗಾಲದಲ್ಲಿ ಸಂಪರ್ಕಿಸಲು ಪ್ರಮುಖ ತೊಡಕಾಗಿದ್ದ ಹೊಸಮಠ ಸೇತುವೆಯಿಂದ ಜನರಿಗೆ ಕೊನೆಗೂ ಮುಕ್ತಿ ಸಿಗುವ ಕಾಲ ಸನ್ನಿಹಿತವಾಗಿದೆ. ಹೊಸಮಠ ಮುಳುಗು ಸೇತುವೆಯ ಪಕ್ಕ ನೂತನ ಸೇತುವೆ ನಿರ್ಮಾಣ ಕಾಮಗಾರಿಯು ಮುಗಿದಿದ್ದು, ಸಂಪರ್ಕ ರಸ್ತೆಯ ಭೂ ಸ್ವಾಧೀನ ಪ್ರಕ್ರಿಯೆಗಳು ಮುಗಿದು ಗುಂಡ್ಯ ಹೊಳೆಗೆ ನಿರ್ಮಾಣಗೊಂಡಿರುವ ನೂತನ ಸರ್ವಋತು ಸೇತುವೆಯು ಮಾರ್ಚ್‌ನಲ್ಲಿ ಲೋಕಾರ್ಪಣೆಗೊಳ್ಳುವ ಸಾಧ್ಯತೆ ಇದೆ.

‘ಮುಳುಗು ಸೇತುವೆ’ ಖ್ಯಾತಿಯ ಹೊಸ್ಮಠ ಸೇತುವೆಗೆ ಕೊನೆಗೂ ಮುಕ್ತಿ Read More »

ಕರಾವಳಿ

ದೀಪಕ್, ಬಶೀರ್ ರಕ್ಷಿಸಲು ಯತ್ನಿಸಿ ಮಾನವೀಯತೆ ಮೆರೆದವರಿಗೆ ನಗದು ಪುರಸ್ಕಾರ ► ತಲಾ 50 ಸಾವಿರ ನಗದು ನೀಡಿ ಗೌರವಿಸಿದ ಗುಲ್ಬರ್ಗದ‌ ವಕೀಲ ವಿಲಾಸ್ ಕುಮಾರ್

(ನ್ಯೂಸ್ ಕಡಬ) newskadaba.com ಮಂಗಳೂರು, ಜ.30. ಇತ್ತೀಚೆಗೆ ಮತೀಯ ಸಂಘರ್ಷಕ್ಕೆ ಬಲಿಯಾದ ದೀಪಕ್ ರಾವ್ ಮತ್ತು ಬಶೀರ್ ರವರ ಪ್ರಾಣ ಉಳಿಸಲು ಪ್ರಯತ್ನಿಸಿದ ಅಬ್ದುಲ್ ಮಜೀದ್ ಹಾಗೂ ಶೇಖರ್ ಕುಲಾಲ್ ಅವರಿಗೆ ಗುಲ್ಬರ್ಗದ ವಕೀಲರೋರ್ವರು 50 ಸಾವಿರ ನಗದು ಪುರಸ್ಕಾರ ನೀಡಿ ಗೌರವಿಸಿದರು. ದುಷ್ಕರ್ಮಿಗಳ ದಾಳಿಗೆ ಬಲಿಯಾದ ದೀಪಕ್ ರಾವ್ ಕೊಲೆಯಾದ ಸಂದರ್ಭದಲ್ಲಿ ತಕ್ಷಣ ಘಟನಾ ಸ್ಥಳಕ್ಕೆ ಧಾವಿಸಿದ್ದ ಮಜೀದ್ ದೀಪಕ್ ನ ಪ್ರಾಣ ಉಳಿಸಲು ಯತ್ನಿಸಿದ್ದರು. ಅಂದು ರಾತ್ರಿ ದೀಪಕ್ ರಾವ್ ಹತ್ಯೆಗೆ ಪ್ರತಿಯಾಗಿ ನಡೆದ

ದೀಪಕ್, ಬಶೀರ್ ರಕ್ಷಿಸಲು ಯತ್ನಿಸಿ ಮಾನವೀಯತೆ ಮೆರೆದವರಿಗೆ ನಗದು ಪುರಸ್ಕಾರ ► ತಲಾ 50 ಸಾವಿರ ನಗದು ನೀಡಿ ಗೌರವಿಸಿದ ಗುಲ್ಬರ್ಗದ‌ ವಕೀಲ ವಿಲಾಸ್ ಕುಮಾರ್ Read More »

ಕರಾವಳಿ

ಝೈಬುನ್ನಿಸಾ ಆತ್ಮಹತ್ಯೆ ಪ್ರಕರಣ ► ಉನ್ನತ ಮಟ್ಟದ ತನಿಖೆಗೆ ಕಡಬ ಬ್ಲಾಕ್ ಕಾಂಗ್ರೆಸ್ ಆಗ್ರಹ

(ನ್ಯೂಸ್ ಕಡಬ) newskadaba.com ಕಡಬ, ಜ.30. ಇತ್ತೀಚೆಗೆ ಕೆ.ಆರ್. ಪೇಟೆ ವಸತಿ ಶಾಲೆಯಲ್ಲಿ ನಡೆದ ಹತ್ತನೇ ತರಗತಿ ವಿದ್ಯಾರ್ಥಿನಿ ಝೈಬುನ್ನಿಸಾ ನಿಗೂಢ ಸಾವು ಪ್ರಕರಣವನ್ನು ಸಮಗ್ರ ತನಿಖೆ ನಡೆಸಿ ಅಪರಾಧಿಗಳ ವಿರುದ್ದ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಕಡಬ ಬ್ಲಾಕ್ ಕಾಂಗ್ರೆಸ್ ಗೃಹ ಮಂತ್ರಿಗಳನ್ನು ಒತ್ತಾಯಿಸಿದೆ. ಒಬ್ಬ ಗುರುವಾಗಿ ಜ್ಞಾನ ಶಕ್ತಿಯನ್ನು ನೀಡಬೇಕಿದ್ದ ಶಿಕ್ಷಕ ರವಿ ಎಂಬಾತ ಪ್ರತಿಭಾನ್ವಿತ ವಿದ್ಯಾರ್ಥಿನಿ ಉತ್ತಮ ಗುಣನಡತೆಯವಳಾಗಿದ್ದ ಝೈಬುನ್ನಿಸಾಳಿಗೆ ಕಿರುಕುಳ ನೀಡಿರುವುದ ಬಗ್ಗೆ ದೂರಲಾಗಿದ್ದು, ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಸಿಒಡಿ ತನಿಖೆಗೆ

ಝೈಬುನ್ನಿಸಾ ಆತ್ಮಹತ್ಯೆ ಪ್ರಕರಣ ► ಉನ್ನತ ಮಟ್ಟದ ತನಿಖೆಗೆ ಕಡಬ ಬ್ಲಾಕ್ ಕಾಂಗ್ರೆಸ್ ಆಗ್ರಹ Read More »

ಕರಾವಳಿ

ಸೇತುವೆಯ ತಡೆಗೋಡೆಗೆ ಢಿಕ್ಕಿ ಹೊಡೆದ ಬಸ್ ► ನಿರ್ವಾಹಕ ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ) newskadaba.com ಚಾಮರಾಜನಗರ, ಜ.29. ನಿದ್ದೆಯ ಮಂಪರಿನಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಬಸ್ಸೊಂದು ಸೇತುವೆಯ ತಡೆಗೋಡೆಗೆ ಢಿಕ್ಕಿ ಹೊಡೆದ ಪರಿಣಾಮ ಕಂಡಕ್ಟರ್ ಮೃತಪಟ್ಟ ಘಟನೆ ಜಿಲ್ಲೆಯ ಗುಂಡ್ಲುಪೇಟೆಯಲ್ಲಿ ನಡೆದಿದೆ. ಮೈಸೂರಿನಿಂದ ಕ್ಯಾಲಿಕಟ್ ಹೋಗುತ್ತಿದ್ದ ಕೇರಳ ಸಾರಿಗೆ ಸಂಸ್ಥೆಗೆ ಸೇರಿದ ಬಸ್ ಗುಂಡ್ಲುಪೇಟೆಯ ಭೀಮನಬೀಡು ತಲುಪಿದಾಗ. ಸೇತುವೆಯ ತಡೆಗೋಡೆಗೆ ಢಿಕ್ಕಿ ಹೊಡೆದಿದೆ. ಢಿಕ್ಕಿಯ ರಭಸಕ್ಕೆ ಬಸ್‌ ನ ಆ್ಯಕ್ಸೆಲ್ ಕಟ್ ಆಗಿದ್ದು, ಹೊರಗೆಸೆಯಲ್ಪಟ್ಟ ಕಂಡಕ್ಟರ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಪ್ರಯಾಣಿಕರಿಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಗುಂಡ್ಲುಪೇಟೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆ

ಸೇತುವೆಯ ತಡೆಗೋಡೆಗೆ ಢಿಕ್ಕಿ ಹೊಡೆದ ಬಸ್ ► ನಿರ್ವಾಹಕ ಸ್ಥಳದಲ್ಲೇ ಮೃತ್ಯು Read More »

ಕರಾವಳಿ

ದಕ್ಷಿಣ ಕನ್ನಡ ಜಿಲ್ಲಾ ನೂತನ ಎಸ್ಪಿಯಾಗಿ ಎನ್ ಕೌಂಟರ್ ಸ್ಪೆಷಲಿಸ್ಟ್ ರವಿಕಾಂತೇಗೌಡ ಅಧಿಕಾರ ಸ್ವೀಕಾರ

(ನ್ಯೂಸ್ ಕಡಬ) newskadaba.com ಮಂಗಳೂರು, ಜ.29. ದಕ್ಷಿಣ ಕನ್ನಡ ಜಿಲ್ಲಾ ನೂತನ ಎಸ್ಪಿಯಾಗಿ 2005 ನೇ ಬ್ಯಾಚಿನ ಐಪಿಎಸ್ ಅಧಿಕಾರಿ, ಎನ್ ಕೌಂಟರ್ ಸ್ಪೆಷಲಿಸ್ಟ್, ಬೆಳಗಾವಿ ಜಿಲ್ಲಾ ಎಸ್ಪಿಯಾಗಿದ್ದ ಡಾ| ಬಿ‌.ಆರ್‌. ರವಿಕಾಂತೇಗೌಡರವರು ಸೋಮವಾರದಂದು ಅಧಿಕಾರ ಸ್ವೀಕರಿಸಿದರು. ಅಡಿಷನಲ್ ಎಸ್ಪಿ ವಿ.ಜೆ. ಸಜತ್ ನೂತನ ಎಸ್ಪಿಯವರನ್ನು ಬರಮಾಡಿಕೊಂಡರು. ಜಿಲ್ಲಾ ಎಸ್ಪಿಯಾಗಿ ಅಧಿಕಾರ ಸ್ವೀಕರಿಸಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ರವಿಕಾಂತೇ ಗೌಡರು, ಪೊಲೀಸ್ ಕೆಲಸ ಎಲ್ಲಾ ಸ್ಥಳಗಳಲ್ಲಿಯೂ ಒಂದೇ ರೀತಿಯಲ್ಲಿರುತ್ತದೆ. ಕೋಮು ಸೂಕ್ಷ್ಮ ಪ್ರದೇಶವಾದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ

ದಕ್ಷಿಣ ಕನ್ನಡ ಜಿಲ್ಲಾ ನೂತನ ಎಸ್ಪಿಯಾಗಿ ಎನ್ ಕೌಂಟರ್ ಸ್ಪೆಷಲಿಸ್ಟ್ ರವಿಕಾಂತೇಗೌಡ ಅಧಿಕಾರ ಸ್ವೀಕಾರ Read More »

ಕರಾವಳಿ

ಅಮಾಯಕ ದೀಪಕ್ ಹತ್ಯೆಗೆ ಪ್ರತೀಕಾರವಾಗಿ ನಡೆದ ಬಶೀರ್ ಹತ್ಯೆ ಬಗ್ಗೆ ನಮಗೆ‌ ಚಿಂತೆಯಿಲ್ಲ ► ಕೊಲೆಗಡುಕರಿಗೆ ಬೆಂಬಲ ಸೂಚಿಸಿದ ವಿಹಿಂಪ ಜಿಲ್ಲಾಧ್ಯಕ್ಷ ಜಗದೀಶ್ ಶೇಣವ ಹೇಳಿಕೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜ.28. ಅಮಾಯಕ ದೀಪಕ್ ರಾವ್ ಹತ್ಯೆಗೆ ಪ್ರತೀಕಾರವಾಗಿ ಬಶೀರ್ ಹತ್ಯೆಯಾಗಿದೆ. ಆದ್ದರಿಂದ ಬಶೀರ್ ಹತ್ಯೆಯ ಬಗ್ಗೆ ನಮಗೇನೂ ಚಿಂತೆಯಿಲ್ಲ ಎಂದು ವಿಶ್ವ ಹಿಂದೂ ಪರಿಷತ್ ಜಿಲ್ಲಾಧ್ಯಕ್ಷ ಜಗದೀಶ್ ಶೇಣವ ಪ್ರಚೋದನಾತ್ಮಕ ಹೇಳಿಕೆ ನೀಡಿದ್ದಾರೆ. ಮಂಗಳೂರಿನಲ್ಲಿ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮೊನ್ನೆ ದೀಪಕ್ ರಾವ್ ಕೊಲೆಗೆ ಪ್ರತೀಕಾರವಾಗಿ ಬಶೀರ್ ಕೊಲೆ ನಡೆಯಿತು. ಒಬ್ಬ ಅಮಾಯಕ, ಮುಗ್ದ ಮುಸ್ಲಿಮನ ಹತ್ಯೆಯಾಯಿತು ಎಂದು ಮಾಧ್ಯಮಗಳಲ್ಲಿ ಭಾರೀ ವರದಿ ಬಂತು. ಬಶೀರ್ ಹತ್ಯೆಗೂ ಮೊದಲು ಅಮಾಯಕ

ಅಮಾಯಕ ದೀಪಕ್ ಹತ್ಯೆಗೆ ಪ್ರತೀಕಾರವಾಗಿ ನಡೆದ ಬಶೀರ್ ಹತ್ಯೆ ಬಗ್ಗೆ ನಮಗೆ‌ ಚಿಂತೆಯಿಲ್ಲ ► ಕೊಲೆಗಡುಕರಿಗೆ ಬೆಂಬಲ ಸೂಚಿಸಿದ ವಿಹಿಂಪ ಜಿಲ್ಲಾಧ್ಯಕ್ಷ ಜಗದೀಶ್ ಶೇಣವ ಹೇಳಿಕೆ Read More »

ಕರಾವಳಿ

ನೇತ್ರಾವತಿ ನದಿಯಲ್ಲಿ ಸ್ನಾನಕ್ಕಿಳಿದಿದ್ದ ಯುವಕರಿಬ್ಬರು ನೀರುಪಾಲು

(ನ್ಯೂಸ್ ಕಡಬ) newskadaba.com ತುಂಬೆ, ಜ.28. ಸ್ನಾನಕ್ಕೆಂದು ನೀರಿಗಿಳಿದಿದ್ದ ಯುವಕರಿಬ್ಬರು ನೀರುಪಾಲಾಗಿರುವ ಘಟನೆ ಭಾನುವಾರದಂದು ತುಂಬೆ ಸಮೀಪದ ಮಾರಿಪಳ್ಳದಲ್ಲಿ ನಡೆದಿದೆ. ಮೃತ ಯುವಕರನ್ನು ಮಾರಿಪಳ್ಳ ನಿವಾಸಿಗಳಾದ ಸವಾದ್ ಮತ್ತು ರಮ್ಲಾನ್ ಎಂದು ಗುರುತಿಸಲಾಗಿದೆ. ಇವರು ತನ್ನ ಸ್ನೇಹಿತರೊಂದಿಗೆ ತುಂಬೆಗೆ ಆಗಮಿಸಿ ಈಜಲು ನೇತ್ರಾವತಿ ನದಿಗಿಳಿದಿದ್ದರು. ಈ ಸಂದರ್ಭದಲ್ಲಿ ನೀರಿನ ಆಳ ತಿಳಿಯದೆ ಇವರಿಬ್ಬರು ನೀರುಪಾಲಾಗಿದ್ದಾರೆ ಎನ್ನಲಾಗಿದೆ.

ನೇತ್ರಾವತಿ ನದಿಯಲ್ಲಿ ಸ್ನಾನಕ್ಕಿಳಿದಿದ್ದ ಯುವಕರಿಬ್ಬರು ನೀರುಪಾಲು Read More »

ಕರಾವಳಿ

ಸಂಪ್ಯ: 18 ವರ್ಷಗಳ ಹಿಂದಿನ ಪ್ರಕರಣದ ಆರೋಪಿ ಬಂಧನ

(ನ್ಯೂಸ್ ಕಡಬ) newskadaba.com ಪುತ್ತೂರು, ಜ.28. ಸುಮಾರು 18 ವರುಷಗಳ ಹಿಂದೆ ಪ್ರಕರಣವೊಂದರಲ್ಲಿ ಭಾಗಿಯಾಗಿ ನ್ಯಾಯಾಲಯಕ್ಕೆ ಹಾಜರಾಗದೆ ತಲೆ ಮರೆಸಿಕೊಂಡಿದ್ದ ಎಲ್ ಪಿಸಿ ವಾರಂಟ್ ಆರೋಪಿಯೊಬ್ಬನನ್ನು ಸಂಪ್ಯ ಪೊಲೀಸರು ಬಂಧಿಸಿದ ಘಟನೆ ಶನಿವಾರದಂದು ನಡೆದಿದೆ. ಬಂಧಿತ ಆರೋಪಿಯನ್ನು ಕಾಸರಗೋಡಿನ ಇಂದಿರಾನಗರದ ಪೂಡಿಪಲ್ಲಿ ನಿವಾಸಿ ಅಹಮ್ಮದ್ ಎಂಬವರ ಪುತ್ರ ಹಾರೀಸ್(38) ಎಂದು ಗುರುತಿಸಲಾಗಿದೆ. ಆರೋಪಿಯು ಸುಮಾರು 18 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದು, ಈತನನ್ನು ಕೇರಳ ರಾಜ್ಯದ ಕಾಸರಗೋಡಿನಲ್ಲಿ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಆರೋಪಿಗೆ ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ.

ಸಂಪ್ಯ: 18 ವರ್ಷಗಳ ಹಿಂದಿನ ಪ್ರಕರಣದ ಆರೋಪಿ ಬಂಧನ Read More »

ಕರಾವಳಿ
Scroll to Top