ಕರಾವಳಿ

ಕಡಬ: ಜಾತಿ ನಿಂದನೆ ಆರೋಪಿಗೆ ಜಾಮೀನು

(ನ್ಯೂಸ್ ಕಡಬ) newskadaba.com ಕಡಬ, ಜ.27. ಜಾತಿ ನಿಂದನೆ ಆರೋಪದಲ್ಲಿ ಬಂಧಿತನಾಗಿದ್ದ ಕಡಬ ತಾಲೂಕಿನ ಬಲ್ಯ ಗ್ರಾಮದ ಪುತ್ತಿಲ ನಿವಾಸಿ ನಾಟಿ ವೈದ್ಯ ಅನುರಾಧ ಗೌಡರಿಗೆ ಶನಿವಾರದಂದು ನ್ಯಾಯಾಲಯವು ಜಾಮೀನು ಮಂಜೂರು ಮಾಡಿದೆ. ಆಲಂಕಾರು ಗ್ರಾಮದ ಕೇಪುಳು ನಿವಾಸಿ ರಾಘವ ಎಂಬವರು ಕಳೆದ ಮಂಗಳವಾರ ಸೊಂಟ ನೋವಿನ ಸಮಸ್ಯೆಗೆ ಮಸಾಜ್ ಮಾಡಿಸಲು ಹೋದ ಸಂದರ್ಭದಲ್ಲಿ ಅನುರಾಧ ಗೌಡರು ತಮ್ಮ ಮನೆಯೊಳಗೆ ಪ್ರವೇಶಿಸುವುದನ್ನು ತಡೆದು ನೀನು ಯಾವ ಜಾತಿಯವನು ಎಂದು ಕೇಳಿ ಅಪಹಾಸ್ಯ ಮಾಡಿ ಅವಾಚ್ಯವಾಗಿ ಬೈದು ಜಾತಿ […]

ಕಡಬ: ಜಾತಿ ನಿಂದನೆ ಆರೋಪಿಗೆ ಜಾಮೀನು Read More »

ಕರಾವಳಿ

ಝೈಬುನ್ನಿಸಾ ನಿಗೂಢ ಸಾವಿನ ಸಮಗ್ರ ತನಿಖೆಗೆ ಆಗ್ರಹ ► ಕ್ಯಾಂಪಸ್ ಫ್ರಂಟ್ ಪುತ್ತೂರು ತಾಲೂಕು ವತಿಯಿಂದ ಪ್ರತಿಭಟನೆ

(ನ್ಯೂಸ್ ಕಡಬ) newskadaba.com ಪುತ್ತೂರು, ಜ.27. ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಪುತ್ತೂರು ತಾಲೂಕು ಸಮಿತಿಯ ವತಿಯಿಂದ ಮೈಸೂರಿನ ಕೆ.ಆರ್. ಪೇಟೆಯ ಅಲ್ಪಸಂಖ್ಯಾತ ವಸತಿ ಶಾಲೆಯಲ್ಲಿ ನಿಗೂಢ ಸಾವನ್ನಪ್ಪಿದ ವಿದ್ಯಾರ್ಥಿನಿ ಝೈಬುನ್ನೀಸಾಳ ಸಾವಿನ ಸಮಗ್ರ ತನಿಖೆ ಹಾಗು ಹೆಚ್ಚಿನ ಪರಿಹಾರ ಮೊತ್ತ ನೀಡುವಂತೆ ಆಗ್ರಹಿಸಿ ಪುತ್ತೂರಿನ ದರ್ಬೆ ವೃತ್ತದ ಬಳಿ ಪ್ರತಿಭಟನೆ ನಡೆಯಿತು. ಪ್ರತಿಭಟನೆಯನ್ನುದ್ದೇಶಿಸಿ ಕ್ಯಾಂಪಸ್ ಫ್ರಂಟ್ ಪುತ್ತೂರು ತಾಲೂಕು ಸಮಿತಿ ಅಧ್ಯಕ್ಷ ಸವಾದ್ ಕಲ್ಲರ್ಪೆ ಮಾತನಾಡಿ, ರಾಜ್ಯದಲ್ಲಿ ವಿದ್ಯಾರ್ಥಿಗಳ ಮೇಲಿನ ದೌರ್ಜನ್ಯ ಮಿತಿಮೀರುತ್ತಿದೆ. ಸರಕಾರ ಎಚ್ಚೆತ್ತುಕೊಂಡು

ಝೈಬುನ್ನಿಸಾ ನಿಗೂಢ ಸಾವಿನ ಸಮಗ್ರ ತನಿಖೆಗೆ ಆಗ್ರಹ ► ಕ್ಯಾಂಪಸ್ ಫ್ರಂಟ್ ಪುತ್ತೂರು ತಾಲೂಕು ವತಿಯಿಂದ ಪ್ರತಿಭಟನೆ Read More »

ಕರಾವಳಿ

ಪಾಲ್ತಾಡು: ವ್ಯಕ್ತಿಯ ಅಪಹರಿಸಿ ಹಲ್ಲೆಗೈದ ಪ್ರಕರಣ ► ಮೂವರು ಆರೋಪಿಗಳ ಬಂಧನ

(ನ್ಯೂಸ್ ಕಡಬ) newskadaba.com ಬೆಳ್ಳಾರೆ, ಜ.27. ಕಳೆದ ಡಿಸೆಂಬರ್ ನಲ್ಲಿ ಬೆಳ್ಳಾರೆಯ ಪಾಲ್ತಾಡು ಎಂಬಲ್ಲಿ ವ್ಯಕ್ತಿಯೋರ್ವರನ್ನು ಅಪಹರಿಸಿದ್ದ ಪ್ರಕರಣವನ್ನು ಭೇದಿಸಿರುವ ಬೆಳ್ಳಾರೆ ಪೊಲೀಸರು ಮೂವರು ಆರೋಪಗಳನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಮಡಿಕೇರಿ ನಿವಾಸಿಗಳಾದ ಅಯ್ಯೂಬ್, ಮಹಮ್ಮದ್ ಮುಸ್ತಫಾ, ಪವನ್ ಎಂದು ಗುರುತಿಸಲಾಗಿದೆ. ಪಾಲ್ತಾಡು ನಿವಾಸಿ ಅಬ್ಬಾಸ್ ಎಂಬವರನ್ನು ಶಾನಿಫ್ ಅವಮಾನಿಸಿದ್ದಕ್ಕೆ ಪ್ರತೀಕಾರವಾಗಿ ಅಬ್ಬಾಸ್ ರ ಪುತ್ರ ಸಿದ್ದೀಕ್ ತನ್ನ ಗೆಳೆಯರ ಮೂಲಕ ಡಿಸೆಂಬರ್ 19 ರಂದು ಶಾನಿಫ್ ರನ್ನು ಬೆಳ್ಳಾರೆಯ ಪಾಲ್ತಾಡಿನಿಂದ ಅಪಹರಿಸಿದ್ದರು. ಪ್ರಕರಣದ ಜಾಡು ಹಿಡಿದ

ಪಾಲ್ತಾಡು: ವ್ಯಕ್ತಿಯ ಅಪಹರಿಸಿ ಹಲ್ಲೆಗೈದ ಪ್ರಕರಣ ► ಮೂವರು ಆರೋಪಿಗಳ ಬಂಧನ Read More »

ಕರಾವಳಿ

ಜನವರಿ 31ರಂದು ಚಂದ್ರ ಗ್ರಹಣದ ಹಿನ್ನೆಲೆ ► ಕುಕ್ಕೇ ಸುಬ್ರಹ್ಮಣ್ಯದಲ್ಲಿ ದರ್ಶನ ಸಮಯದಲ್ಲಿ ಬದಲಾವಣೆ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಜ.27. ಇದೇ 31ರ ಬುಧವಾರ ಸಂಜೆ ಪೂರ್ಣ ಚಂದ್ರ ಗ್ರಹಣ ಸಂಭವಿಸಲಿರುವುದರಿಂದ ನಾಗಾರಾಧನೆಯ ಪುಣ್ಯ ಕ್ಷೇತ್ರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಜ.31ರಂದು ಚಂದ್ರ ಗ್ರಹಣದ ನಿಮಿತ್ತ ಶ್ರೀ ದೇವರ ದರ್ಶನ ಸಮಯದಲ್ಲಿ ವ್ಯತ್ಯಯ ಉಂಟಾಗಲಿದೆ. ಜನವರಿ 31 ಬುಧವಾರದಂದು 6.30ರಿಂದ ಬೆಳಗ್ಗೆ 9 ಗಂಟೆಯ ತನಕ ಮಾತ್ರ ದರ್ಶನ ಇರುತ್ತದೆ. ಮಧ್ಯಾಹ್ನದ ಮಹಾಪೂಜೆಯು ಬೆಳಗ್ಗೆ 8 ಗಂಟೆಗೆ ನೆರವೇರಲಿದೆ. ಬೆಳಗ್ಗೆ 9 ಗಂಟೆಯ ನಂತರ ದೇವಳದಲ್ಲಿ ಯಾವುದೇ ಸೇವೆಗಳು ನೆರವೇರುವುದಿಲ್ಲ

ಜನವರಿ 31ರಂದು ಚಂದ್ರ ಗ್ರಹಣದ ಹಿನ್ನೆಲೆ ► ಕುಕ್ಕೇ ಸುಬ್ರಹ್ಮಣ್ಯದಲ್ಲಿ ದರ್ಶನ ಸಮಯದಲ್ಲಿ ಬದಲಾವಣೆ Read More »

ಕರಾವಳಿ

ಮಂಗಳೂರು, ಎಟಿಎಂ ದರೋಡೆಗೆ ವಿಫಲ ಯತ್ನ ► ಪತ್ರಕರ್ತನ ಸಮಯಪ್ರಜ್ಞೆಯಿಂದ ತಪ್ಪಿದ ದರೋಡೆ ಯತ್ನ

(ನ್ಯೂಸ್ ಕಡಬ) newskadaba.com ಮಂಗಳೂರು, ಜ.27. ನಗರದ ವೆಲೇನ್ಸಿಯಾದಲ್ಲಿರುವ ಎಟಿಎಮ್ ದರೋಡೆಯೊಂದು ಪತ್ರಕರ್ತರ ಸಮಯಪ್ರಜ್ಞೆಯಿಂದಾಗಿ ತಪ್ಪಿದ ಘಟನೆ ಶನಿವಾರ ತಡರಾತ್ರಿ ನಡೆದಿದೆ. ಶನಿವಾರ ಮಧ್ಯರಾತ್ರಿ ವೆಲೆನ್ಸಿಯಾ ಕೆನರಾ ಬ್ಯಾಂಕ್ ಎಟಿಎಮ್ ಬಳಿ ಬುರ್ಕಾ ಹಾಕಿಕೊಂಡು ಸಂಶಯಾಸ್ಪದ ರೀತಿಯಲ್ಲಿ ವ್ಯಕ್ತಿಯೋರ್ವ ಕುಳಿತುಕೊಂಡಿರುವುದನ್ನು ನೋಡಿದ ಪತ್ರಕರ್ತರೋರ್ವರು ತಕ್ಷಣವೇ ಪೋಲಿಸರಿಗೆ ಮಾಹಿತಿ ನೀಡಿದ್ದು, ಪೋಲಿಸರು ಸ್ಥಳಕ್ಕಾಗಮಿಸಿ ಎಟಿಎಂ ದರೋಡೆಯನ್ನು ವಿಫಲಗೊಳಿಸಿದ್ದಾರೆ. ಸ್ಥಳಕ್ಕೆ ಶ್ವಾನದಳ ಹಾಗೂ ಬೆರಳಚ್ಚು ತಜ್ಞರು ಆಗಮಿಸಿದ್ದು, ಘಟನೆಯ ತನಿಖೆ ನಡೆಯುತ್ತಿದೆ.

ಮಂಗಳೂರು, ಎಟಿಎಂ ದರೋಡೆಗೆ ವಿಫಲ ಯತ್ನ ► ಪತ್ರಕರ್ತನ ಸಮಯಪ್ರಜ್ಞೆಯಿಂದ ತಪ್ಪಿದ ದರೋಡೆ ಯತ್ನ Read More »

ಕರಾವಳಿ

ಕದಂಬ ಹಿತರಕ್ಷಣಾ ಸಂಘಟನೆಯಿಂದ ರಕ್ತದಾನ ಶಿಬಿರ ► 108 ಆಂಬ್ಯುಲೆನ್ಸ್ ಸಿಬ್ಬಂದಿಗಳಿಗೆ ಸನ್ಮಾನ

(ನ್ಯೂಸ್ ಕಡಬ) newskadaba ಕಡಬ, ಜ.27. ಕದಂಬ ಸಾಮಾಜಿಕ ಹಿತರಕ್ಷಣಾ ಸಂಘಟನೆಯ 4ನೇ ವರ್ಷದ ಪಾದಾರ್ಪಣೆಯ ಪ್ರಯುಕ್ತ ಮಂಗಳೂರಿನ ಲೇಡಿಗೋಶನ್ ಆಸ್ಪತ್ರೆಯ ಇಂಡಿಯನ್ ರೆಡ್‌ಕ್ರಾಸ್ ರಕ್ತ ನಿಧಿ ಸೊಸೈಟಿಯ ಸಹಯೋಗದಲ್ಲಿ ಶುಕ್ರವಾರದಂದು ಕಡಬದ ಬಾಬು ಮತ್ತು ಭಾಗೀರಥಿ ಟವರ್‍ಸ್‌ನ ವಠಾರದಲ್ಲಿ ಬೃಹತ್ ರಕ್ತದಾನ ಶಿಬಿರ ಹಾಗೂ ಉಚಿತ ರಕ್ತವರ್ಗೀಕರಣ ಮತ್ತು ಮಧುಮೇಹ ಪರೀಕ್ಷೆ ನಡೆಯಿತು. ಕಾರ್ಯಕ್ರಮವನ್ನು ದಯಾನಂದ ನಾಯ್ಕ್ ಮೇಲಿನಮನೆ ಹಾಗೂ ಮಹಾಬಲ ನಾಯ್ಕ್ ಮೇಲಿನಮನೆ ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿ ಕಾರ್ಯಕ್ರಮಕ್ಕೆ ಶುಭಹಾರೈಸಿದರು. ಈ ಸಂದರ್ಭದಲ್ಲಿ

ಕದಂಬ ಹಿತರಕ್ಷಣಾ ಸಂಘಟನೆಯಿಂದ ರಕ್ತದಾನ ಶಿಬಿರ ► 108 ಆಂಬ್ಯುಲೆನ್ಸ್ ಸಿಬ್ಬಂದಿಗಳಿಗೆ ಸನ್ಮಾನ Read More »

ಕರಾವಳಿ

ತಣ್ಣೀರುಬಾವಿ ಶಿವರಾಜ್ ಹತ್ಯೆ ಪ್ರಕರಣ ► ಮತ್ತಿಬ್ಬರು ಆರೋಪಿಗಳು ಪೊಲೀಸ್‌ ವಶಕ್ಕೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜ.26. ಇತ್ತೀಚೆಗೆ ಪಣಂಬೂರು ಠಾಣಾ ವ್ಯಾಪ್ತಿಯ ತಣ್ಣೀರುಬಾವಿಯಲ್ಲಿ ನಡೆದ ಶಿವರಾಜ್ ಕರ್ಕೇರಾ ಎಂಬವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಮತ್ತಿಬ್ಬರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡ ಘಟನೆ ಶುಕ್ರವಾರದಂದು ನಡೆದಿದೆ. ಬಂಧಿತ‌ ಆರೋಪಿಗಳನ್ನು ತಣ್ಣೀರುಬಾವಿ ಕೋರ್ದಬ್ಬು ದೈವಸ್ಥಾನ ಬಳಿಯ ಜೀವನ್ ಪಿರೇರಾ(36) ಹಾಗೂ ಕುದ್ರೋಳಿ ಬೆಂಗ್ರೆ ನಿವಾಸಿ ಸತೀಶ್(29) ಎಂದು ಗುರುತಿಸಲಾಗಿದೆ. ಇವರನ್ನು ಕೊಲೆ ಕೃತ್ಯಕ್ಕೆ ಸಂಚು ರೂಪಿಸಲು ಸಹಕರಿಸಿದ್ದ ಆರೋಪದಲ್ಲಿ ವಶಕ್ಕೆ ಪಡೆಯಲಾಗಿದೆ.  

ತಣ್ಣೀರುಬಾವಿ ಶಿವರಾಜ್ ಹತ್ಯೆ ಪ್ರಕರಣ ► ಮತ್ತಿಬ್ಬರು ಆರೋಪಿಗಳು ಪೊಲೀಸ್‌ ವಶಕ್ಕೆ Read More »

ಕರಾವಳಿ

ಆಳ್ವಾಸ್ ಕಾಲೇಜು ವಿದ್ಯಾರ್ಥಿನಿ ರಚನಾ ಆತ್ಮಹತ್ಯೆ ಪ್ರಕರಣ ► ಅನುಮಾನ ವ್ಯಕ್ತಪಡಿಸಿದ ರಚನಾ ಪೋಷಕರು

(ನ್ಯೂಸ್ ಕಡಬ) newskadaba.com ಮೂಡಬಿದಿರೆ, ಜ.26. ಜನವರಿ 25 ನೇ ಗುರುವಾರ ಮೃತಪಟ್ಟ ಆಳ್ವಾಸ್ ವಿದ್ಯಾಸಂಸ್ಥೆಯ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ರಚನಾ ಆತ್ಮಹತ್ಯಯೆ ಬಗ್ಗೆ ಆಕೆಯ ಹೆತ್ತವರು ಅನುಮಾನ ವ್ಯಕ್ತಪಡಿಸಿದ್ದು, ಇದೀಗ ಹಲವು ಊಹಾಪೋಹಗಳು ಹುಟ್ಟಿಕೊಂಡಿವೆ. ಆಳ್ವಾಸ್ ನಲ್ಲಿ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದಲ್ಲಿ ಕಲಿಯುತ್ತಿದ್ದ ಚಿತ್ರದುರ್ಗ ಮೂಲದ ರಚನಾ ನಿನ್ನೆ 5ನೇ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಗಿ ಕಾಲೇಜು‌‌ ಆಡಳಿತ ಮಂಡಳಿಯವರು ಆಕೆಯ ಪೋಷಕರಿಗೆ ಮಾಹಿತಿ‌ ನೀಡಿದ್ದರು. ಆತ್ಮಹತ್ಯೆಗೆ ಮುನ್ನ ರಚನಾ ತನ್ನ ಡೆತ್ ನೋಟ್

ಆಳ್ವಾಸ್ ಕಾಲೇಜು ವಿದ್ಯಾರ್ಥಿನಿ ರಚನಾ ಆತ್ಮಹತ್ಯೆ ಪ್ರಕರಣ ► ಅನುಮಾನ ವ್ಯಕ್ತಪಡಿಸಿದ ರಚನಾ ಪೋಷಕರು Read More »

ಕರಾವಳಿ

ಕಬಕ: ಕೆಎಸ್ಸಾರ್ಟಿಸಿ ಬಸ್ – ಕಾರು ಢಿಕ್ಕಿ ► ನಾಲ್ವರು ಗಂಭೀರ

(ನ್ಯೂಸ್ ಕಡಬ) newskadaba.com ಪುತ್ತೂರು, ಜ.26. ನಗರದ ಹೊರವಲಯದ ರಾಷ್ಟ್ರೀಯ ಹೆದ್ದಾರಿ 275 ಕಬಕ ಸಮೀಪ ರಾಜಹಂಸ ಬಸ್ ಮತ್ತು ಕಾರು ನಡುವೆ ಢಿಕ್ಕಿ ಸಂಭವಿಸಿ ಓರ್ವ ಮೃತಪಟ್ಟು, ನಾಲ್ವರು ಗಂಭೀರ ಗಾಯಗೊಂಡ ಘಟನೆ ಶುಕ್ರವಾರದಂದು ನಡೆದಿದೆ. ಮಂಗಳೂರಿನ ಕಡೆಯಿಂದ ಬರುತಿದ್ದ ಐ20 ಕಾರು ಹಾಗೂ ಪುತ್ತೂರು ಕಡೆಯಿಂದ ಆಗಮಿಸುತ್ತಿದ್ದ ಕೆಎಸ್ಸಾರ್ಟಿಸಿ ರಾಜಹಂಸ ಬಸ್ ನಡುವೆ ಮುಖಾಮುಖಿ ಢಿಕ್ಕಿಯಾಗಿ ಕಾರಿನಲ್ಲಿದ್ದ ಗೋವಾ ಮೂಲದ ಓರ್ವ ಮೃತಪಟ್ಟಿದ್ದು, ನಾಲ್ವರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಪುತ್ತೂರು

ಕಬಕ: ಕೆಎಸ್ಸಾರ್ಟಿಸಿ ಬಸ್ – ಕಾರು ಢಿಕ್ಕಿ ► ನಾಲ್ವರು ಗಂಭೀರ Read More »

ಕರಾವಳಿ

ಮಕ್ಕಳ ಪ್ರಗತಿಯಲ್ಲಿ ಪೋಷಕರು ಶಿಕ್ಷಕರೊಂದಿಗೆ ಕೈ ಜೋಡಿಸಿ: ಜಯಂತಿ ಆರ್. ಗೌಡ ► ಸಬಳೂರು: ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಉದ್ಘಾಟನೆ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಜ.26. ಪಠ್ಯದ ಜೊತೆಗೆ ಸಂಸ್ಕ್ರತಿ ಪಾಠ ಬೋಧಿಸುವ ಕಾರ್ಯವಾದಾಗ ಭವಿಷ್ಯದಲ್ಲಿ ಮಕ್ಕಳು ಉತ್ತಮ ಪ್ರಜೆಗಳಾಗಲು ಸಾಧ್ಯ. ಮಕ್ಕಳ ಪ್ರಗತಿಯಲ್ಲಿ ಶಿಕ್ಷಕರೊಂದಿಗೆ ಪೋಷಕರು ಕೈ ಜೋಡಿಸಬೇಕು ಎಂದು ತಾಲೂಕು ಪಂಚಾಯಿತಿ ಸದಸ್ಯೆ ಜಯಂತಿ ಆರ್. ಗೌಡ ಹೇಳಿದರು. ಅವರು ಕೊಯಿಲ ಗ್ರಾಮದ ಸಬಳೂರು ದ.ಕ.ಜಿ.ಪ. ಉನ್ನತ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಹಿರಿಯ ವಿದ್ಯಾರ್ಥಿ ಸಂಘದ ಸಹಯೋಗದಲ್ಲಿ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಶಿಕ್ಷಣ ಇಲಾಖಾ ಬಿ.ಅರ್.ಪಿ ಪ್ರದೀಪ್,

ಮಕ್ಕಳ ಪ್ರಗತಿಯಲ್ಲಿ ಪೋಷಕರು ಶಿಕ್ಷಕರೊಂದಿಗೆ ಕೈ ಜೋಡಿಸಿ: ಜಯಂತಿ ಆರ್. ಗೌಡ ► ಸಬಳೂರು: ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಉದ್ಘಾಟನೆ Read More »

ಕರಾವಳಿ
Scroll to Top