ಕರಾವಳಿ

ವಿಟ್ಲ: ಮಹಿಳೆಯ ಜೊತೆ ಅನುಚಿತ ವರ್ತನೆ ► ಯುವಕ ಪೊಲೀಸ್ ವಶಕ್ಕೆ

(ನ್ಯೂಸ್ ಕಡಬ) newskadaba.com ವಿಟ್ಲ, ಜ.24. ಜೆರಾಕ್ಸ್ ಮಾಡಿಸಲೆಂದು ಅಂಗಡಿಗೆ ಬಂದಿದ್ದ ಅನ್ಯ ಕೋಮಿನ ಯುವಕನೋರ್ವ ಅಂಗಡಿ ಮಾಲಕಿಯ ಜತೆ ಅಸಭ್ಯವಾಗಿ ವರ್ತಿಸಿ ಪೊಲೀಸ್‌ ಠಾಣೆಯ ಮೆಟ್ಟಿಲೇರಿದ ಘಟನೆ ವಿಟ್ಲದಲ್ಲಿ ಬುಧವಾರ ರಾತ್ರಿ ನಡೆದಿದೆ. ವಿಟ್ಲ – ಮಂಗಳೂರು ರಸ್ತೆಯ ಜೆರಾಕ್ಸ್ ಅಂಗಡಿಯೊಂದಕ್ಕೆ ಬಂದ ಯುವಕನಿಗೆ ಮಹಿಳೆ ವಿದ್ಯುತ್ ಇಲ್ಲದೆ ಇರುವುದರಿಂದ ಬೇರೆ ಅಂಗಡಿಗೆ ತೆರಳಲು ಸೂಚಿಸಿದ್ದಾರೆ. ಆದರೆ ಯುವಕ ಮಹಿಳೆಯ ಮೊಬೈಲ್ ನಂಬರ್ ಕೇಳಿ ಅನುಚಿತವಾಗಿ ವರ್ತಿಸಿದ್ದಾನೆ ಎನ್ನಲಾಗಿದೆ. ತಕ್ಷಣ ಮಹಿಳೆಯು ಅಂಗಡಿಯ ಮುಂಭಾಗದಲ್ಲಿದ್ದ ತನ್ನ […]

ವಿಟ್ಲ: ಮಹಿಳೆಯ ಜೊತೆ ಅನುಚಿತ ವರ್ತನೆ ► ಯುವಕ ಪೊಲೀಸ್ ವಶಕ್ಕೆ Read More »

ಕರಾವಳಿ

ಸುಬ್ರಹ್ಮಣ್ಯ: ಕಾರು – ಆಟೋರಿಕ್ಷಾ ಢಿಕ್ಕಿ ► ಮೂವರು ವಿದ್ಯಾರ್ಥಿಗಳು ಸೇರಿದಂತೆ ನಾಲ್ವರಿಗೆ ಗಾಯ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಜ.24. ಕಾರು ಹಾಗೂ ಆಟೋರಿಕ್ಷಾ ನಡುವೆ ಢಿಕ್ಕಿ ಸಂಭವಿಸಿ ಶಾಲಾ ವಿದ್ಯಾರ್ಥಿಗಳು ಸೇರಿ ನಾಲ್ವರು ಗಾಯಗೊಂಡ ಘಟನೆ ಸುಬ್ರಹ್ಮಣ್ಯದ ಪರ್ವತಮುಖಿ ಎಂಬಲ್ಲಿ ಬುಧವಾರ ಸಂಜೆ ನಡೆದಿದೆ. ಸುಬ್ರಹ್ಮಣ್ಯದ ಶಾಲೆಯೊಂದರ ವಿದ್ಯಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಆಟೋರಿಕ್ಷಾಕ್ಕೆ ಪರ್ವತಮುಖಿ ಎಂಬಲ್ಲಿ ಮಾರುತಿ 800 ಕಾರು ಢಿಕ್ಕಿ ಹೊಡೆದ ಪರಿಣಾಮ ಮೂವರು ವಿದ್ಯಾರ್ಥಿಗಳು ಹಾಗೂ ರಿಕ್ಷಾ ಚಾಲಕ ಗಾಯಗೊಂಡಿದ್ದಾರೆ. ಗಾಯಾಳುಗಳಿಗೆ ಸುಬ್ರಹ್ಮಣ್ಯ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಸ್ಥಳಕ್ಕೆ ಸುಬ್ರಹ್ಮಣ್ಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಸುಬ್ರಹ್ಮಣ್ಯ: ಕಾರು – ಆಟೋರಿಕ್ಷಾ ಢಿಕ್ಕಿ ► ಮೂವರು ವಿದ್ಯಾರ್ಥಿಗಳು ಸೇರಿದಂತೆ ನಾಲ್ವರಿಗೆ ಗಾಯ Read More »

ಕರಾವಳಿ

ಪುಣ್ಚತ್ತಾರು: ನೇಣು ಬಿಗಿದು ಯುವತಿ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಬೆಳ್ಳಾರೆ, ಜ.24. ಮೂರ್ಛೆ ರೋಗ ಕಾಯಿಲೆಯಿಂದ ಬಳಲುತ್ತಿದ್ದ ಯುವತಿಯೋರ್ವಳು ತನ್ನ ಮನೆಯೊಳಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾಣಿಯೂರಿನಲ್ಲಿ ಬುಧವಾರದಂದು ನಡೆದಿದೆ. ಆತ್ಮಹತ್ಯೆ ಮಾಡಿಕೊಂಡಾಕೆಯನ್ನು ಪುಣ್ಚತ್ತಾರು ಸಮೀಪದ ನೋಲ್ಮೆ ನಿವಾಸಿ ಕುಶಾಲಪ್ಪ ಗೌಡರ ಪುತ್ರಿ ಪವಿತ್ರ (19) ಎಂದು ಗುರುತಿಸಲಾಗಿದೆ. ಪುಣ್ಚತ್ತಾರು ಎಂಬಲ್ಲಿ ಟೈಲರಿಂಗ್ ವೃತ್ತಿ ನಿರ್ವಹಿಸುತ್ತಿದ್ದ ಪವಿತ್ರ ಬುಧವಾರದಂದು ಮನೆಯಲ್ಲಿ ಯಾರು ಇಲ್ಲದ ಸಮಯದಲ್ಲಿ ಮನೆ ಛಾವಣಿಯ ಅಡ್ಡಕ್ಕೆ ಚೂಡಿದಾರ್ ಶಾಲು ಹಾಕಿ ಅವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಪುಣ್ಚತ್ತಾರು: ನೇಣು ಬಿಗಿದು ಯುವತಿ ಆತ್ಮಹತ್ಯೆ Read More »

ಕರಾವಳಿ

ಬಲ್ಯ: ನಾಟಿ ಮದ್ದಿಗೆ ತೆರಳಿದವರಿಗೆ ಜಾತಿ ನಿಂದನೆಯ ಆರೋಪ ► ದಲಿತ ದೌರ್ಜನ್ಯ ಕಾಯ್ದೆಯಡಿ ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba.com ಕಡಬ, ಜ.24. ನಾಟಿ ಮದ್ದಿಗೆಂದು ತೆರಳಿದ್ದ ಸಂದರ್ಭದಲ್ಲಿ ಜಾತಿ ನಿಂದನೆಗೈದಿದ್ದಾರೆ ಎಂದು ಆರೋಪಿಸಿ ವ್ಯಕ್ತಿಯೋರ್ವರು ಕಡಬ ಠಾಣೆಗೆ ದೂರು ನೀಡಿದ ಘಟನೆ ಬುಧವಾರದಂದು ನಡೆದಿದೆ. ಆಲಂಕಾರು ಗ್ರಾಮದ ಕೇಪುಳು ನಿವಾಸಿ ರಾಘವ ಎಂಬವರು ಸೊಂಟ ನೋವಿಗೆ ಮಸಾಜ್ ಮಾಡಿಸಲೆಂದು ಮಂಗಳವಾರದಂದು ಬಲ್ಯ ಗ್ರಾಮದ ಪುತ್ತಿಲ ನಿವಾಸಿ ಅನುರಾಧ ಗೌಡ ಎಂಬವರ ಮನಯೊಳಗಡೆ ಹೋದದ್ದಕ್ಕೆ ಅನುರಾಧ ಗೌಡರು ಯಾವ ಜಾತಿಯವನೆಂದು ಕೇಳಿ ಹೀಯಾಳಿಸಿ ಅವ್ಯಾಚ್ಯವಾಗಿ ಬೈದು ಜಾತಿ ನಿಂದನೆ ಮಾಡಿದರೆಂದು ರಾಘವರು ಕಡಬ ಠಾಣೆಗೆ

ಬಲ್ಯ: ನಾಟಿ ಮದ್ದಿಗೆ ತೆರಳಿದವರಿಗೆ ಜಾತಿ ನಿಂದನೆಯ ಆರೋಪ ► ದಲಿತ ದೌರ್ಜನ್ಯ ಕಾಯ್ದೆಯಡಿ ಪ್ರಕರಣ ದಾಖಲು Read More »

ಕರಾವಳಿ

ಬಶೀರ್ ಹತ್ಯೆಗೆ ಜೈಲಿನಲ್ಲೇ ಸಂಚು ಹಾಕಿದ ಆರೋಪಿಗಳು ► ನಗರ ಪೊಲೀಸ್ ಆಯುಕ್ತ ಟಿ.ಆರ್.ಸುರೇಶ್ ಹೇಳಿಕೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜ.24. ಇತ್ತೀಚಿಗೆ ಕಾಟಿಪಳ್ಳದಲ್ಲಿ ನಡೆದ ದೀಪಕ್ ರಾವ್ ಹತ್ಯೆಗೆ ಪ್ರತೀಕಾರವಾಗಿ ನಡೆದಿದ್ದ ಬಶೀರ್ ಕೊಲೆಗೆ ಜೈಲಿನಲ್ಲೇ ಸಂಚು ರೂಪಿಸಲಾಗಿತ್ತು ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಟಿ.ಆರ್. ಸುರೇಶ್ ಅವರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ. ಬೇರೆ ಪ್ರಕರಣಗಳಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಮಿಥುನ್ ಕಲ್ಲಡ್ಕ, ತಿಲಕರಾಜ್ ಶೆಟ್ಟಿ, ರಾಜು ಅಲಿಯಾಸ್ ರಾಜೇಶ ಎಂಬವರು, ಜೈಲಿನಲ್ಲಿ ಇದ್ದುಕೊಂಡು ಕೊಟ್ಟಾರ ಚೌಕಿಯಲ್ಲಿ ಮುಸ್ಲಿಂ ವ್ಯಕ್ತಿಯ ಹತ್ಯೆಗೆ ಸಂಚು ರೂಪಿಸಿದ್ದರು. ಅದರಂತೆ ಬಶೀರ್ ಅವರ ಬಗ್ಗೆ ಮಾಹಿತಿ ಇದ್ದ

ಬಶೀರ್ ಹತ್ಯೆಗೆ ಜೈಲಿನಲ್ಲೇ ಸಂಚು ಹಾಕಿದ ಆರೋಪಿಗಳು ► ನಗರ ಪೊಲೀಸ್ ಆಯುಕ್ತ ಟಿ.ಆರ್.ಸುರೇಶ್ ಹೇಳಿಕೆ Read More »

ಕರಾವಳಿ

ದೀಪಕ್ ರಾವ್ ಕೊಲೆ ಪ್ರಕರಣ. ► ಆರು ಮಂದಿ ಆರೋಪಿಗಳ ಬಂಧನ

(ನ್ಯೂಸ್ ಕಡಬ) newskadaba.com ಮಂಗಳೂರು, ಜ.24. ಇತ್ತೀಚೆಗೆ ಹಾಡುಹಗಲೇ ಕಾಟಿಪಳ್ಳದಲ್ಲಿ ನಡೆದ ದೀಪಕ್ ರಾವ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಸಂಚು ರೂಪಿಸಿ ಪ್ರಮುಖ ಆರೋಪಿಗಳಿಗೆ ಸಹಾಯ ಮಾಡಿರುವ ಆರೋಪದಲ್ಲಿ ಮತ್ತೆ 6 ಮಂದಿಯನ್ನು ಬಂಧಿಸಲಾಗಿದೆ ಎಂದು ಮಂಗಳೂರು ಪೊಲೀಸ್ ಕಮಿಷನರ್ ಟಿ.ಆರ್. ಸುರೇಶ್ ತಿಳಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಸಂಚು ಹಾಗೂ ಕೃತ್ಯಕ್ಕೆ ನೆರವು ನೀಡಿದ ಆರೋಪದಲ್ಲಿ ಚೊಕ್ಕಬೆಟ್ಟುವಿನ ಮುಹಮ್ಮದ್ ರಫೀಕ್, ಇರ್ಫಾನ್, ಕಾಟಿಪಳ್ಳದ ಮುಹಮ್ಮದ್ ಅನಸ್, ಮುಹಮ್ಮದ್ ಝಾಹೀದ್, ಹಿದಾಯಿತುಲ್ಲಾ ಹಾಗೂ ಚೊಕ್ಕಬೆಟ್ಟುವಿನ ಇಮ್ರಾನ್

ದೀಪಕ್ ರಾವ್ ಕೊಲೆ ಪ್ರಕರಣ. ► ಆರು ಮಂದಿ ಆರೋಪಿಗಳ ಬಂಧನ Read More »

ಕರಾವಳಿ

‘ಕಲ್ಲಡ್ಕದಲ್ಲಿ ಮುಂದಿನ ಚುನಾವಣೆ ಅಲ್ಲಾಹು ಮತ್ತು ಶ್ರೀರಾಮನ ನಡುವೆ’ ► ಮಾತಿನ ಭರದಲ್ಲಿ ವಿವಾದ ಸೃಷ್ಟಿಸಿದ ಕಾರ್ಕಳ ಶಾಸಕ

(ನ್ಯೂಸ್ ಕಡಬ) newskadaba.com ಬಿ.ಸಿ.ರೋಡ್, ಜ.23. ರಾಜಕೀಯ ಪ್ರಚಾರದ ನಡುವೆ ಮಾತಿನ ಭರಾಟೆಯಲ್ಲಿ ಶಾಸಕರೋರ್ವರು ಎಡವಟ್ಟು ಮಾಡಿಕೊಂಡ ಘಟನೆ ಮಂಗಳವಾರದಂದು ಕಲ್ಲಡ್ಕದಲ್ಲಿ ನಡೆದಿದೆ. ಬಂಟ್ವಾಳ ವಿಧಾನ ಸಭಾ ಕ್ಷೇತ್ರದ ಬಿಜೆಪಿ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡುತ್ತಿದ್ದ ಕಾರ್ಕಳ ಶಾಸಕ ಸುನೀಲ್ ಕುಮಾರ್, ಇತ್ತೀಚಿಗೆ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಬಂಟ್ವಾಳ ಶಾಸಕ ರಮಾನಾಥ್ ರೈ ನೀಡಿದ್ದ ಅಲ್ಲಾಹನ ಕೃಪೆಯಿಂದ 7 ಬಾರಿ ಶಾಸಕನಾಗಿದ್ದೇನೆ ಎಂಬ ಹೇಳಿಕೆಗೆ ತಿರುಗೇಟು ನೀಡುವ ಭರದಲ್ಲಿ ‘ಮುಂದಿನ ಚುನಾವಣೆಯು ಅಲ್ಲಾಹು ಮತ್ತು ಶ್ರೀ

‘ಕಲ್ಲಡ್ಕದಲ್ಲಿ ಮುಂದಿನ ಚುನಾವಣೆ ಅಲ್ಲಾಹು ಮತ್ತು ಶ್ರೀರಾಮನ ನಡುವೆ’ ► ಮಾತಿನ ಭರದಲ್ಲಿ ವಿವಾದ ಸೃಷ್ಟಿಸಿದ ಕಾರ್ಕಳ ಶಾಸಕ Read More »

ಕರಾವಳಿ

ಕಡಬ: ಪ್ಲಾಸ್ಟಿಕ್ ತ್ಯಾಜ್ಯ ವಿಲೇವಾರಿಯಲ್ಲಿ ಗಮನ ಸೆಳೆದ ವಿದ್ಯಾರ್ಥಿಗಳು ► 1 ಸಾವಿರ ಕೆಜಿ ಪ್ಲಾಸ್ಟಿಕ್ ತ್ಯಾಜ್ಯ ಸಂಗ್ರಹಿಸಿದ ಶಾಲಾ ವಿದ್ಯಾರ್ಥಿಗಳು

(ನ್ಯೂಸ್ ಕಡಬ) newskadaba.com ಕಡಬ, ಜ.23. ನಮ್ಮಲ್ಲಿ ಪ್ಲಾಸ್ಟಿಕ್ ಬಳಕೆಯ ವಿರುದ್ಧ ಎಷ್ಟೇ ಜಾಗೃತಿ ಮೂಡಿಸಿದರೂ ಜನ ಪ್ಲಾಸ್ಟಿಕ್ ಬಳಕೆ ಮಾಡಿ ಪರಿಸರವನ್ನು ಹಾಳುಗೆಡುವುದು ನಿಲ್ಲುವುದಿಲ್ಲ, ಆದ್ದರಿಂದ ಪ್ಲಾಸ್ಟಿಕ್ ಉತ್ಪಾದನೆಯನ್ನೇ ನಿಲ್ಲಿಸಿದರೆ ಅದಕ್ಕೆ ಪೂರ್ಣವಿರಾಮ ಹಾಕಬಹುದು ಎಂದು ಕಡಬ ಕ್ಷೇತ್ರದ ಜಿಲ್ಲಾ ಪಂಚಾಯಿತಿ ಸದಸ್ಯ ಪಿ.ಪಿ.ವರ್ಗೀಸ್ ಹೇಳಿದರು. ಅವರು ಮಂಗಳವಾರ ದ.ಕ ಜಿಲ್ಲಾ ಪಂಚಾಯಿತಿ, ಪುತ್ತೂರು ತಾಲೂಕು ಪಂಚಾಯಿತಿ, ಕಡಬ ಗ್ರಾಮ ಪಂಚಾಯಿತಿ ಹಾಗೂ ಜೇಸಿಐ ಕಡಬ ಕದಂಬ ಹಾಗೂ ಜೇಸಿಐ ಕಡಬ ಕದಂಬ ಚಾರಿಟೆಬಲ್ ಟ್ರಸ್ಟ್‌ನ ಸಂಯಕ್ತ

ಕಡಬ: ಪ್ಲಾಸ್ಟಿಕ್ ತ್ಯಾಜ್ಯ ವಿಲೇವಾರಿಯಲ್ಲಿ ಗಮನ ಸೆಳೆದ ವಿದ್ಯಾರ್ಥಿಗಳು ► 1 ಸಾವಿರ ಕೆಜಿ ಪ್ಲಾಸ್ಟಿಕ್ ತ್ಯಾಜ್ಯ ಸಂಗ್ರಹಿಸಿದ ಶಾಲಾ ವಿದ್ಯಾರ್ಥಿಗಳು Read More »

ಕರಾವಳಿ

ಬಿಜೆಪಿಯವರು 25 ವರ್ಷಗಳ ಅಭಿವೃದ್ಧಿಯ ಶ್ವೇತಪತ್ರ ಹೊರಡಿಸಲಿ ► ಸುಳ್ಯ ಶಾಸಕರಿಗೆ ಕಾಂಗ್ರೆಸ್ ಉಸ್ತುವಾರಿ ಸವಿತಾ ರಮೇಶ್ ಸವಾಲು

(ನ್ಯೂಸ್ ಕಡಬ) newskadaba.com ಕಡಬ, ಜ.23. ಕಳೆದ ಇಪ್ಪತೈದು ವರ್ಷಗಳಿಂದ ಸುಳ್ಯ ವಿಧಾನ ಸಭಾಕ್ಷೆತ್ರವನ್ನು ಗೆದ್ದುಕೊಂಡು ಬಂದಿರುವ ಬಿಜೆಪಿ ಕನಿಷ್ಟ ಮೂಲಭೂತ ವ್ಯವಸ್ಥೆಯಾದ ರಸ್ತೆಗಳನ್ನು ಸರಿಪಡಿಸಲಾಗದೆ ಕೇವಲ ಜನರ ಭಾವನೆಗಳನ್ನು ಕೆರಳಿಸಿ ಅಧಿಕಾರ ಪಡೆಯುತ್ತಿದೆ. ಇಲ್ಲಿನ ಶಾಸಕರು 25 ವರ್ಷಗಳ ತಮ್ಮ ಸುಧೀರ್ಘ ಅವಧಿಯಲ್ಲಿ ಮಾಡಿರುವ ಅಭಿವೃದ್ಧಿಕಾರ್ಯಗಳ ಶ್ವೇತಪತ್ರ ಹೊರಡಿಸಲಿ ಎಂದು ಕೆ.ಪಿ.ಸಿ.ಸಿ ಕಾರ್ಯದರ್ಶಿ ಸುಳ್ಯ, ಪುತ್ತೂರು ವಿಧಾನಸಭಾಕ್ಷೇತ್ರದ ಕಾಂಗ್ರೇಸ್ ಪಕ್ಷದ ಉಸ್ತುವಾರಿ ಸವಿತಾ ರಮೇಶ್ ಸವಾಲು ಹಾಕಿದರು. ಅವರು ಸುಳ್ಯ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕುಂತೂರಿನಲ್ಲಿ

ಬಿಜೆಪಿಯವರು 25 ವರ್ಷಗಳ ಅಭಿವೃದ್ಧಿಯ ಶ್ವೇತಪತ್ರ ಹೊರಡಿಸಲಿ ► ಸುಳ್ಯ ಶಾಸಕರಿಗೆ ಕಾಂಗ್ರೆಸ್ ಉಸ್ತುವಾರಿ ಸವಿತಾ ರಮೇಶ್ ಸವಾಲು Read More »

ಕರಾವಳಿ

ಫೆ.03: ಅಬ್ಬಕ್ಕ ಉತ್ಸವದ ಅಂಗವಾಗಿ ಕ್ರೀಡೋತ್ಸವ ► ರಾಜ್ಯಮಟ್ಟದ ಮಹಿಳೆಯರ ಕುಸ್ತಿ ಪಂದ್ಯಾಟ

(ನ್ಯೂಸ್ ಕಡಬ) newskadaba.com ಮಂಗಳೂರು, ಜ.23. 2017-18ನೇ ಸಾಲಿನ ವೀರರಾಣಿ ಅಬ್ಬಕ್ಕ ಉತ್ಸವದ ಅಂಗವಾಗಿ ದ. ಕ. ಜಿಲ್ಲಾಡಳಿತ, ಅಬ್ಬಕ್ಕ ಉತ್ಸವ ಸಮಿತಿ ವತಿಯಿಂದ ರಾಜ್ಯಮಟ್ಟದ ಮಹಿಳೆಯರ ಕುಸ್ತಿ ಪಂದ್ಯಾಟವು ಫೆಬ್ರವರಿ 3 ರಂದು ಸೋಮೇಶ್ವರ ಗ್ರಾಮದ ಕೊಲ್ಯ ಮೈದಾನದಲ್ಲಿ ನಡೆಯಲಿದೆ. ಕುಸ್ತಿ ಪಂದ್ಯಾಟವು ಏಳು ವಿಭಾಗಗಳಲ್ಲಿ (44ಕೆ.ಜಿ, 48ಕೆ.ಜಿ., 53 ಕೆ.ಜಿ., 58ಕೆ. ಜಿ., 63ಕೆ.ಜಿ., 69ಕೆ.ಜಿ., 73ಕೆ. ಜಿ.) ನಡೆಯಲಿದ್ದು, 53 ಕೆ. ಜಿ. ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದ ವಿಜೇತರಿಗೆ ಅಬ್ಬಕ್ಕ ಶ್ರೀ ಗೌರವ ನೀಡಿ ಪುರಸ್ಕರಿಸಲಾಗುವುದು.

ಫೆ.03: ಅಬ್ಬಕ್ಕ ಉತ್ಸವದ ಅಂಗವಾಗಿ ಕ್ರೀಡೋತ್ಸವ ► ರಾಜ್ಯಮಟ್ಟದ ಮಹಿಳೆಯರ ಕುಸ್ತಿ ಪಂದ್ಯಾಟ Read More »

ಕರಾವಳಿ
Scroll to Top