ಕರಾವಳಿ

ಮಿತ್ತಮಜಲು: ನಕ್ಸಲರ ಆಗಮನದ ಹಿನ್ನೆಲೆ ► ನಕ್ಸಲ್ ನಿಗ್ರಹ ದಳದ ಕೂಂಬಿಂಗ್ ಸ್ಥಗಿತ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಜ.20. ಶಿರಾಡಿ ಗ್ರಾಮದ ಮಿತ್ತಮಜಲು ಎಂಬಲ್ಲಿ ನಕ್ಸಲರು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅರಣ್ಯ ಪ್ರದೇಶದಲ್ಲಿ ನಡೆಯುತ್ತಿದ್ದ ಕೂಂಬಿಂಗನ್ನು ಶುಕ್ರವಾರದಂದು ಅಂತ್ಯಗೊಂಡಿತು. ಜ.14 ರಂದು ಮಿತ್ತಮಜಲಿನ ಮೋಹನ, ಲೀಲಾ ಹಾಗೂ ಸುರೇಶ ಎಂಬವರ ಮನೆಗೆ ನಕ್ಸಲರು ಬಂದು ಅಕ್ಕಿ, ಪಡಿತರ ಸಾಮಾಗ್ರಿ ಪಡೆದುಕೊಂಡು ಹೋಗಿದ್ದರು. ಈ ಬಗ್ಗೆ ಪೊಲೀಸರಿಗೆ ಸೋಮವಾರ ರಾತ್ರಿ ಮಾಹಿತಿ ದೊರೆತು, ಸ್ಥಳಕ್ಕೆ ನಕ್ಸಲ್ ನಿಗ್ರಹ ಪಡೆಯನ್ನು ಕರೆಸಿ, ಜ.16 ಮಧ್ಯಾಹ್ನದಿಂದ ಶಿಶಿಲ, ಶಿರಾಡಿ ರಕ್ಷಿತಾರಣ್ಯದಲ್ಲಿ ಕೂಂಬಿಂಗ್ ಆರಂಭಿಸಲಾಗಿತ್ತು. ಹೆಬ್ರಿ ಎಎನ್ಎಫ್  […]

ಮಿತ್ತಮಜಲು: ನಕ್ಸಲರ ಆಗಮನದ ಹಿನ್ನೆಲೆ ► ನಕ್ಸಲ್ ನಿಗ್ರಹ ದಳದ ಕೂಂಬಿಂಗ್ ಸ್ಥಗಿತ Read More »

ಕರಾವಳಿ

ಅಡ್ಡಹೊಳೆ: ನಿಲ್ಲಿಸಿದ್ದ ಜೀಪಿಗೆ ಲಾರಿ ಢಿಕ್ಕಿ ► ಪ್ರಯಾಣಿಕನಿಗೆ ಗಾಯ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಜ.20. ರಸ್ತೆಯ ಬದಿಯಲ್ಲಿ ನಿಲ್ಲಿಸಿದ್ದ ಜೀಪಿಗೆ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ಪ್ರಯಾಣಿಕ ಗಾಯಗೊಂಡ ಘಟನೆ ಶಿರಾಡಿ ಗ್ರಾಮದ ಅಡ್ಡಹೊಳೆಯಲ್ಲಿ ಶುಕ್ರವಾರದಂದು ನಡೆದಿದೆ. ಅಪಘಾತದಲ್ಲಿ ಗಾಯಗೊಂಡ ಪ್ರಯಾಣಿಕನನ್ನು ಕುಕ್ಕೇ ಸುಬ್ರಹ್ಮಣ್ಯ ನಿವಾಸಿ ವೇಣುಗೋಪಾಲ್ ಎಂದು ಗುರುತಿಸಲಾಗಿದೆ. ಇವರು ಮೈಸೂರಿನ ನವೀನ್ ಎಂಬವರೊಂದಿಗೆ ಜೀಪಿನಲ್ಲಿ ಶಿರಾಡಿಯಿಂದ ಗುಂಡ್ಯಕ್ಕೆ ಹೋಗುತ್ತಿದ್ದ ಸಂದರ್ಭ ಅಡ್ಡಹೊಳೆಯಲ್ಲಿ ನವೀನ್ ಅವರು ಜೀಪು ನಿಲ್ಲಿಸಿ ಮೊಬೈಲ್ ನಲ್ಲಿ ಮಾತನಾಡುತ್ತಿದ್ದರು. ಆಗ ಹಿಂಬದಿಯಿಂದ ಬಂದ ಲಾರಿ ಇವರ ಜೀಪಿಗೆ ಡಿಕ್ಕಿ ಹೊಡೆದಿದೆ.

ಅಡ್ಡಹೊಳೆ: ನಿಲ್ಲಿಸಿದ್ದ ಜೀಪಿಗೆ ಲಾರಿ ಢಿಕ್ಕಿ ► ಪ್ರಯಾಣಿಕನಿಗೆ ಗಾಯ Read More »

ಕರಾವಳಿ

ಕಡಬ ತಾಲೂಕಾಗಿ ಅಂತಿಮ ಅಧಿಸೂಚನೆ ► ಕಡಬ ತಹಶೀಲ್ದಾರ್ ಕಛೇರಿಗೆ ಬಂತು ಆದೇಶ ಪತ್ರ

(ನ್ಯೂಸ್ ಕಡಬ) newskadaba.com ಕಡಬ, ಜ.19. ಜನರ ಬಹುಕಾಲದ ಬೇಡಿಕೆಯಾದ ಕಡಬ ತಾಲೂಕು ಅನುಷ್ಠಾನಕ್ಕೆ  ಕೊನೆಗೂ ಅಧಿಕೃತ ಆದೇಶ ಹೊರಬಿದ್ದಿದ್ದು, ಕಡಬ ತಹಶೀಲ್ದಾರರವರಿಗೆ ಕರ್ನಾಟಕ ರಾಜ್ಯ ಪತ್ರದಲ್ಲಿ ಜನವರಿ 12 ರಿಂದ ಅನ್ವಯವಾಗುವಂತೆ ಹೊರಡಿಸಲಾದ ಆದೇಶ ಪತ್ರದಲ್ಲಿ ಕಡಬವನ್ನು ಅಧಿಕೃತ ತಾಲೂಕೆಂದು  ಘೋಷಿಸಲಾಗಿದೆ. ಕಡಬ ತಾಲೂಕಿಗೆ 42 ಗ್ರಾಮಗಳ್ನು ಸೇರ್ಪಡೆಗೊಳಿಸಿ ಅಧಿಸೂಚನೆ ಹೊರಡಿಸಲಾಗಿದ್ದು, ಈ ಹಿನ್ನೆಲೆಯಲ್ಲಿ ಮುಂದಿನ ದಿನಗಳಲ್ಲಿ ಕಡಬವು ಪೂರ್ಣಪ್ರಮಾಣದ ತಾಲೂಕಾಗಿ ಕಾರ್ಯಾರಂಭ ಮಾಡಲಿದೆ. ಈ ಹಿಂದೆ ಪ್ರಸ್ತಾವನೆಯಲ್ಲಿದ್ದ ಬೆಳ್ತಂಗಡಿ ತಾಲೂಕಿನ ಗ್ರಾಮಗಳನ್ನು ಕೈಬಿಟ್ಟು  ಪುತ್ತೂರು ತಾಲೂಕಿನ 35

ಕಡಬ ತಾಲೂಕಾಗಿ ಅಂತಿಮ ಅಧಿಸೂಚನೆ ► ಕಡಬ ತಹಶೀಲ್ದಾರ್ ಕಛೇರಿಗೆ ಬಂತು ಆದೇಶ ಪತ್ರ Read More »

ಕರಾವಳಿ

ಕಡಬ: ಬೋರ್‍ವೆಲ್ ಲಾರಿ ಪಲ್ಟಿ ► ಅಪಾಯದಿಂದ ಪಾರಾದ ಕಾರ್ಮಿಕರು

(ನ್ಯೂಸ್ ಕಡಬ) newskadaba.com ಕಡಬ, ಜ.19. ಚಾಲಕನ ನಿಯಂತ್ರಣ ತಪ್ಪಿದ ಬೋರ್‍ವೆಲ್ ಲಾರಿಯೊಂದು ರಸ್ತೆ ಬದಿಗೆ ಉರುಳಿ ಬಿದ್ದ ಘಟನೆ ಕಡಬದ ಇಂಡಿಯನ್ ಆಯಿಲ್ ಪೆಟ್ರೋಲ್ ಬಂಕ್ ಮುಂಭಾಗದಲ್ಲಿ ಶುಕ್ರವಾರ ಸಂಜೆ ನಡೆದಿದೆ. ಕಳಾರ ಕಡೆಯಿಂದ ಕಡಬಕ್ಕೆ ಆಗಮಿಸುತ್ತಿದ್ದ ಲಾರಿ ತಿರುವಿನಲ್ಲಿ ನಿಯಂತ್ರಣ ಕಳೆದುಕೊಂಡು ಅಡ್ಡವಾಗಿ ಬಿದ್ದ ಪರಿಣಾಮ ಲಾರಿಯಲ್ಲಿದ್ದ ಮೂವರು ಕಾರ್ಮಿಕರು ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ. ಗಾಯಾಳು ಕಾರ್ಮಿಕರಿಗೆ ಕಡಬ ಸಮುದಾಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ.

ಕಡಬ: ಬೋರ್‍ವೆಲ್ ಲಾರಿ ಪಲ್ಟಿ ► ಅಪಾಯದಿಂದ ಪಾರಾದ ಕಾರ್ಮಿಕರು Read More »

ಕರಾವಳಿ

ಮಿತ್ತಬೈಲು: ಶಾರ್ಟ್ ಸರ್ಕ್ಯೂಟ್ ನಿಂದ ಮನೆಗೆ ಬೆಂಕಿ

(ನ್ಯೂಸ್ ಕಡಬ) newskadaba.com ಕಡಬ, ಜ.19. ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಮನೆಯೊಂದು ಬೆಂಕಿಗಾಹುತಿಯಾದ ಘಟನೆ ಕೊಂಬಾರು ಗ್ರಾಮದ ಮಿತ್ತಬೈಲು‌ ಎಂಬಲ್ಲಿ ಶುಕ್ರವಾರದಂದು ನಡೆದಿದೆ. ದಲಿತ ಮುಖಂಡ ದಯಾನಂದ ಮಿತ್ತಬೈಲು ಎಂಬವರ ಮನೆ ಗುರುವಾರ ರಾತ್ರಿ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂಕಿಗಾಹುತಿಯಾಗಿದ್ದು, ಮನೆಯೊಳಗಿದ್ದ ಸೊತ್ತುಗಳು ಸುಟ್ಟು ಕರಕಲಾಗಿವೆ. ಕೊಂಬಾರು ಪರಿಸರದಲ್ಲಿ ಕಾಡಾನೆ ಹಾವಳಿ ಇರುವುದರಿಂದ ದಯಾನಂದ ಹಾಗೂ ಪತ್ನಿ ರಾತ್ರಿ ಮಲಗಲು ಬೇರೆಡೆಗೆ ಹೋಗಿದ್ದು, ಶುಕ್ರವಾರದಂದು ಮನೆಗೆ ಬಂದಾಗ ವಿಷಯ ತಿಳಿದಿದೆ. ಸ್ಥಳಕ್ಕೆ ಕಡಬ ಠಾಣಾಧಿಕಾರಿ‌ ಪ್ರಕಾಶ್

ಮಿತ್ತಬೈಲು: ಶಾರ್ಟ್ ಸರ್ಕ್ಯೂಟ್ ನಿಂದ ಮನೆಗೆ ಬೆಂಕಿ Read More »

ಕರಾವಳಿ

ಮೊರಾರ್ಜಿ ವಸತಿ ಶಾಲೆಗಳ ಪ್ರವೇಶ ಅರ್ಜಿ ಆಹ್ವಾನ ಕಾಲಾವಧಿ ವಿಸ್ತರಣೆ ►ಪ್ರಸ್ತುತ 5 ನೇ ತರಗತಿಯ ವಿದ್ಯಾರ್ಥಿಗಳಿಗೆ ಅರ್ಜಿ ಸಲ್ಲಿಸಲು ಅವಕಾಶ

(ನ್ಯೂಸ್ ಕಡಬ) newskadaba.com ಮಂಗಳೂರು, ಜ.19. ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಕಲ್ಲಬೆಟ್ಟು, ನೀರುಮಾರ್ಗ, ಕಮ್ಮಾಜೆ, ಗುರುಪುರ ಬೆಳ್ತಂಗಡಿಯ ಮಚ್ಚಿನ, ಮುಂಡಾಜೆ, ಹೊಸಂಗಡಿ ಬಂಟ್ವಾಳ ತಾಲೂಕಿನ ವಗ್ಗ, ಪುತ್ತೂರು ತಾಲೂಕಿನ ಬಲ್ನಾಡು, ಉಪ್ಪಿನಂಗಡಿ ಹಾಗೂ ಸುಳ್ಯ ತಾಲೂಕಿನ ಪಂಜ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಿಗೆ 6 ನೇ ತರಗತಿ ಪ್ರವೇಶಕ್ಕಾಗಿ ಅರ್ಜಿ ಸಲ್ಲಿಸುವ ದಿನವನ್ನು ಜನವರಿ 25 ರ ವರಗೆ ವಿಸ್ತರಿಸಲಾಗಿದೆ. ಪ್ರಸ್ತುತ 5ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದ್ದು, 6 ನೇ

ಮೊರಾರ್ಜಿ ವಸತಿ ಶಾಲೆಗಳ ಪ್ರವೇಶ ಅರ್ಜಿ ಆಹ್ವಾನ ಕಾಲಾವಧಿ ವಿಸ್ತರಣೆ ►ಪ್ರಸ್ತುತ 5 ನೇ ತರಗತಿಯ ವಿದ್ಯಾರ್ಥಿಗಳಿಗೆ ಅರ್ಜಿ ಸಲ್ಲಿಸಲು ಅವಕಾಶ Read More »

ಕರಾವಳಿ

ನಾಳೆ(ಜ.20) ಪುತ್ತೂರು ಕೋಟಿ-ಚೆನ್ನಯ್ಯ ಹೊನಲು ಬೆಳಕಿನ ಜೋಡುಕರೆ ಕಂಬಳ ► ಬೆಳ್ಳಿ ಹಬ್ಬದ ಸಂಭ್ರಮದಲ್ಲಿ ಭಾಗವಹಿಸಲಿದ್ದಾರೆ ಚಿತ್ರನಟ, ನಟಿಯರು

(ನ್ಯೂಸ್ ಕಡಬ) newskadaba.com ಪುತ್ತೂರು, ಜ.19. ಬೆಳ್ಳಿ ಹಬ್ಬದ ಸಂಭ್ರಮದಲ್ಲಿರುವ ಪುತ್ತೂರು ಕೋಟಿ- ಚೆನ್ನಯ್ಯ ಹೊನಲು ಬೆಳಕಿನ ಜೋಡುಕರೆ ಕಂಬಳವು ನಾಳೆ (ಜ.20) ಶನಿವಾರದಂದು ಪುತ್ತೂರು ಶ್ರೀಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ನಡೆಯಲಿದೆ ಎಂದು ಕಂಬಳ ಸಮಿತಿ ಅಧ್ಯಕ್ಷ ಎನ್‌. ಚಂದ್ರಹಾಸ ಶೆಟ್ಟಿ ಹೇಳಿದರು. ಕಂಬಳದ ಬಗ್ಗೆ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, 25ನೇ ವರ್ಷದ ಹಿನ್ನೆಲೆಯಲ್ಲಿ ಕಂಬಳದಲ್ಲಿ ಭಾಗವಹಿಸುವ ಎಲ್ಲಾ ಜೋಡಿ ಕೋಣಗಳಿಗೂ ಒಂದು ಮುಡಿ ಅಕ್ಕಿ ಹಾಗೂ ರಜತ ಫಲಕ ನೀಡಲಾಗುವುದು. ನಾಳೆ ಬೆಳಗ್ಗೆ 10.32ಕ್ಕೆ

ನಾಳೆ(ಜ.20) ಪುತ್ತೂರು ಕೋಟಿ-ಚೆನ್ನಯ್ಯ ಹೊನಲು ಬೆಳಕಿನ ಜೋಡುಕರೆ ಕಂಬಳ ► ಬೆಳ್ಳಿ ಹಬ್ಬದ ಸಂಭ್ರಮದಲ್ಲಿ ಭಾಗವಹಿಸಲಿದ್ದಾರೆ ಚಿತ್ರನಟ, ನಟಿಯರು Read More »

ಕರಾವಳಿ

ವಿಟ್ಲ: ವ್ಯಕ್ತಿಗೆ ಆ್ಯಸಿಡ್ ಎರಚಿದ ದಂಪತಿ

(ನ್ಯೂಸ್ ಕಡಬ) newskadaba.com ವಿಟ್ಲ, ಜ.18. ಜಾಗದ ತಕರಾರು ತಾರಕಕ್ಕೇರಿ ವ್ಯಕ್ತಿಯೊಬ್ಬರ ಮೇಲೆ ಆ್ಯಸಿಡ್ ಎರಚಿದ ಘಟನೆ ವಿಟ್ಲದ ಪುಣಚ ಸಮೀಪದ ಮಲ್ಲಿಕಟ್ಟೆ ಎಂಬಲ್ಲಿ ಗುರುವಾರದಂದು ನಡೆದಿದೆ. ಪುಣಚ ಗ್ರಾಮದ ಮಲ್ಲಿಕಟ್ಟೆ ನಿವಾಸಿ ಗಂಗಾಧರ್ ಹಾಗೂ ನೆರೆಮನೆಯ ರಾಮಚಂದ್ರ ಮಣಿ ಎಂಬವರಿಗೆ ಜಾಗದ ತಕರಾರಿತ್ತೆನ್ನಲಾಗಿದೆ. ಜಾಗದ ವಿಷಯದಲ್ಲಿ ಮಾತನಾಡುತ್ತಾ ರಾಮಚಂದ್ರರ ಮನೆಗೆ ಹೋದ ಗಂಗಾಧರ್ ರವರಿಗೆ ರಾಮಚಂದ್ರ ಮಣಿ ಹಾಗೂ ಅವರ ಪತ್ನಿ ಅನ್ನಪೂರ್ಣ ಎಂಬವರು ಆ್ಯಸಿಡ್ ಎರಚಿದ್ದು, ತಕ್ಷಣವೇ ಗಂಗಾಧರ್ ರವರನ್ನು ವಿಟ್ಲ ಆಸ್ಪತ್ರೆಗೆ ದಾಖಲಿಸಲಾಗಿದೆ.

ವಿಟ್ಲ: ವ್ಯಕ್ತಿಗೆ ಆ್ಯಸಿಡ್ ಎರಚಿದ ದಂಪತಿ Read More »

ಕರಾವಳಿ

ದೀಪಕ್ ರಾವ್ ಮನೆಗೆ ಭೇಟಿ ನೀಡಿದ ಕೇಂದ್ರ ಸಚಿವ ಅನಂತ್ ಕುಮಾರ್ ಹೆಗಡೆ ► ದೀಪಕ್ ಮನೆಯವರಿಗೆ ಧನ ಸಹಾಯ

(ನ್ಯೂಸ್ ಕಡಬ) newskadaba.com ಮಂಗಳೂರು, ಜ.18. ಇತ್ತೀಚೆಗೆ ಹಾಡುಹಗಲೇ ಕಾಟಿಪಳ್ಳದಲ್ಲಿ ದುಷ್ಕರ್ಮಿಗಳಿಂದ ಹತ್ಯೆಯಾದ ದೀಪಕ್ ರಾವ್ ಮನೆಗೆ ಕೇಂದ್ರ ಕೌಶಲ್ಯ ಅಭಿವೃದ್ಧಿ ಸಚಿವ ಅನಂತ ಕುಮಾರ್ ಹೆಗಡೆ ಭೇಟಿ ನೀಡಿ ದೀಪಕ್ ಕುಟುಂಬದವರಿಗೆ ಸಾಂತ್ವನ ಹೇಳಿದರು. ಗುರುವಾರದಂದು ದೀಪಕ್ ಮನೆಗೆ ಭೇಟಿ ನೀಡಿದ ಸಚಿವರು ವೈಯಕ್ತಿಕವಾಗಿ ಧನಸಹಾಯ ನೀಡಿ ದೀಪಕ್ ರಾವ್ ತಮ್ಮ ಸತೀಶ್ ಗೆ ಕುದುರೆಮುಖದ ಕಂಪೆನಿಯಲ್ಲಿ ಕೆಲಸ ಒದಗಿಸುವ ಭರವಸೆಯಿತ್ತರು. ಗುರುವಾರ ಬೆಳಿಗ್ಗೆ ಗುರುಪುರ ವಜ್ರದೇವಿ ಮಠಕ್ಕೆ ತೆರಳಿ ರಾಜಶೇಖರಾನಂದ ಸ್ವಾಮೀಜಿಯನ್ನು ಭೇಟಿ ಮಾಡಿದ

ದೀಪಕ್ ರಾವ್ ಮನೆಗೆ ಭೇಟಿ ನೀಡಿದ ಕೇಂದ್ರ ಸಚಿವ ಅನಂತ್ ಕುಮಾರ್ ಹೆಗಡೆ ► ದೀಪಕ್ ಮನೆಯವರಿಗೆ ಧನ ಸಹಾಯ Read More »

ಕರಾವಳಿ

ಬಾಲಕಿಗೆ ಲೈಂಗಿಕ ಕಿರುಕುಳ ನೀಡಿ ಹುಬ್ಬಳ್ಳಿಯಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ► ಉಪ್ಪಿನಂಗಡಿ ಪೊಲೀಸರಿಂದ ಬಂಧನ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಜ.18. ಸುಮಾರು ಒಂದೂವರೆ ತಿಂಗಳಿನಿಂದ ತಲೆಮರೆಸಿಕೊಂಡಿದ್ದ ಪೋಕ್ಸೋ ಪ್ರಕರಣದ ಆರೋಪಿಯನ್ನು ಹುಬ್ಬಳ್ಳಿಯಲ್ಲಿ ಬಂಧಿಸಿರುವ ಉಪ್ಪಿನಂಗಡಿ ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಬಂಧಿತ ಆರೋಪಿಯನ್ನು ಹಾಸನದ ಉಮೇಶ್(30) ಎಂದು ಗುರುತಿಸಲಾಗಿದೆ. ಶಿರಾಡಿ ಗ್ರಾಮದ ಗುಂಡ್ಯದ ಐದರ ಹರೆಯದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಬಗ್ಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಈತನ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು. ಬಳಿಕ ತಲೆಮರೆಸಿಕೊಂಡಿದ್ದ ಈತನನ್ನು ಉಪ್ಪಿನಂಗಡಿ ಪೊಲೀಸರು ಹುಬ್ಬಳ್ಳಿಯಲ್ಲಿ ಪತ್ತೆಹಚ್ಚಿ ಬಂಧಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಪುತ್ತೂರು ಗ್ರಾಮಾಂತರ

ಬಾಲಕಿಗೆ ಲೈಂಗಿಕ ಕಿರುಕುಳ ನೀಡಿ ಹುಬ್ಬಳ್ಳಿಯಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ► ಉಪ್ಪಿನಂಗಡಿ ಪೊಲೀಸರಿಂದ ಬಂಧನ Read More »

ಕರಾವಳಿ
Scroll to Top