ಸಮಸ್ಯೆಗಳ ಸುರಿಮಳೆಯಲ್ಲಿ ಮುಳುಗಿದ ಕಡಬದ ಮೆಸ್ಕಾಂ ಜನಸಂಪರ್ಕ ಸಭೆ ►ಗ್ರಾಹಕರ ಪ್ರಶ್ನೆಗಳಿಗೆ ಉತ್ತರಿಸಿ ಮೆಸ್ಕಾಂ ಅಧಿಕಾರಿಗಳು ಕಂಗಾಲು
(ನ್ಯೂಸ್ ಕಡಬ) newskadaba.com ಕಡಬ, ಜ.18. ಮಂಗಳೂರು ವಿದ್ಯುತ್ ಸರಬರಾಜು ಕಂಪನಿಯ ಕಡಬ ಉಪವಿಭಾಗಮಟ್ಟದ ವಿದ್ಯುತ್ ಗ್ರಾಹಕರ ಜನಸಂಪರ್ಕ ಸಭೆ ಅಕ್ಷರಶಃ ಸಮಸ್ಯೆಗಳ ಆಗರವನ್ನೇ ಅನಾವರಣಗೊಳಿಸಿತು. ಮೆಸ್ಕಾಂ ಮಂಗಳೂರು ವೃತ್ತ ಕಚೇರಿಯ ಅಧೀಕ್ಷಕ ಇಂಜಿನಿಯರ್ ಮಂಜಪ್ಪರವರ ನೇತೃತ್ವದಲ್ಲಿ ನಡೆದ ಜನಸಂಪರ್ಕ ಸಭೆಯಲ್ಲಿ ಗ್ರಾಹಕರು ಬರಪೂರ ಸಮಸ್ಯೆಗಳ ಪಟ್ಟಿಯನ್ನೇ ಮುಂದಿಟ್ಟರು. ಕಡಬ ಅನುಗ್ರಹ ಸಭಾಭವನದಲ್ಲಿ ನಡೆದ ಸಭೆಯಲ್ಲಿ ಗ್ರಾಹಕರು ಭಾರಿ ಸಂಖ್ಯೆಯಲ್ಲಿ ತಮ್ಮ ತಮ್ಮ ಭಾಗದ ಹತ್ತು ಹಲವು ವಿದ್ಯುತ್ ಸಮಸ್ಯೆಗಳನ್ನು ಮೆಸ್ಕಾಂ ಅಧಿಕಾರಿಗಳಿಗೆ ಮನವರಿಕೆ ಮಾಡಿದರು. ರೈತ […]










