ಕರಾವಳಿ

ಜಕ್ರಿಬೆಟ್ಟು: ಮರಕ್ಕೆ ಢಿಕ್ಕಿ ಹೊಡೆದ ಆಮ್ನಿ ಕಾರು ►ಪುಟಾಣಿ ಮಗು ಮೃತ್ಯು, ಆರು ಮಂದಿ ಗಂಭೀರ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಜ.11. ನಿಯಂತ್ರಣ ತಪ್ಪಿದ ಕಾರೊಂದು ಮರಕ್ಕೆ ಢಿಕ್ಕಿಯಾಗಿ ಒಂದು ವರ್ಷದ ಮಗುವೊಂದು ಮೃತಪಟ್ಟು ಆರು ಮಂದಿ ಗಂಭೀರ ಗಾಯಗೊಂಡ ಘಟನೆ ಬಂಟ್ವಾಳ ಜಕ್ರಿಬೆಟ್ಟು ಸಮೀಪದ ಬಡಗುಂಡಿ ಎಂಬಲ್ಲಿ ನಡೆದಿದೆ. ವಿದೇಶದಲ್ಲಿ ಉದೋಗದಲ್ಲಿದ್ದು, ರಜೆಯ ನಿಮಿತ್ತ ಇತ್ತೀಚೆಗಷ್ಟೇ ಊರಿಗೆ ಬಂದಿದ್ದ ಬಡಗುಂಡಿ ನಿವಾಸಿ ರೋಶನ್, ತನ್ನ ಕುಟುಂಬಸ್ಥರೊಂದಿಗೆ ಮಂಗಳೂರು ಬೀಚ್‌ಗೆ ತೆರಳಿ ಹಿಂತಿರುಗುತ್ತಿದ್ದಾಗ ಬಡಗುಂಡಿ ತಿರುವಿನಲ್ಲಿ ಚಾಲಕನ ನಿಯಂತ್ರಣ ಕಳೆದುಕೊಂಡ ಕಾರು ಮರಕ್ಕೆ ಢಿಕ್ಕಿಯಾಗಿ ಜರ್ಮನ್, ಲವಿಟ, ಸಿಸಿಲಿಯಾ ಬರೆಟ್ಟೋ, ಕಾರು ಚಾಲಕ […]

ಜಕ್ರಿಬೆಟ್ಟು: ಮರಕ್ಕೆ ಢಿಕ್ಕಿ ಹೊಡೆದ ಆಮ್ನಿ ಕಾರು ►ಪುಟಾಣಿ ಮಗು ಮೃತ್ಯು, ಆರು ಮಂದಿ ಗಂಭೀರ Read More »

ಕರಾವಳಿ

ಉಪ್ಪಿನಂಗಡಿ: ತಾಯಿ – ಮಗು ನಾಪತ್ತೆ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಜ.11. ಮನೆಯಿಂದ ಹೊರ ಹೋಗಿರುವ ತಾಯಿ ಮತ್ತು ಮಗು ಹಿಂತಿರುಗಿ ಮನೆಗೆ ಬಾರದೆ ನಾಪತ್ತೆಯಾಗಿರುವ ಘಟನೆ ಜನವರಿ 8 ರಂದು ಅಡ್ಡಹೊಳೆ ಎಂಬಲ್ಲಿ ನಡೆದಿದೆ. ನಾಪತ್ತೆಯಾದವರನ್ನು ಪುತ್ತೂರು ತಾಲೂಕಿನ ಶಿರಾಡಿ ಗ್ರಾಮದ ತೆಕ್ಕೆಕೆರೆ ಪುತ್ತನ್ಪುರ ಅಡ್ಡಹೊಳೆ ನಿವಾಸಿ ಜೆಸ್ಲಿನ್(23) ಮತ್ತು ಪುತ್ರಿ ಲಿಯೊನಾ ಎಂದು ಗುರುತಿಸಲಾಗಿದೆ. ಇವರು ಜನವರಿ 8 ರಂದು ಬೆಳಿಗ್ಗೆ 6 ಗಂಟೆಗೆ 12 ಸಾವಿರ ರೂ. ನಗದು ಹಾಗೂ ಚಿನ್ನವನ್ನು ತೆಗೆದುಕೊಂಡು ಹೋಗಿದ್ದು ವಾಪಾಸು ಮನೆಗೆ ಬಾರದೆ ಕಾಣೆಯಾಗಿರುತ್ತಾರೆ.

ಉಪ್ಪಿನಂಗಡಿ: ತಾಯಿ – ಮಗು ನಾಪತ್ತೆ Read More »

ಕರಾವಳಿ

ರಸ್ತೆ ದಾಟುವಾಗ ಆಟೋರಿಕ್ಷಾ ಢಿಕ್ಕಿ ►ಬಂಟ್ವಾಳದ ಉದ್ಯಮಿ ಮೃತ್ಯು

(ನ್ಯೂಸ್ ಕಡಬ) newskadaba.com ಮಂಗಳೂರು, ಜ.10. ರಸ್ತೆ‌ ದಾಟುತ್ತಿದ್ದ ಸಂದರ್ಭದಲ್ಲಿ ಆಟೋ ರಿಕ್ಷಾವೊಂದು ಢಿಕ್ಕಿ ಹೊಡೆದ ಪರಿಣಾಮ ಬಂಟ್ವಾಳದ ಉದ್ಯಮಿಯೋರ್ವರು ಮೃತಪಟ್ಟ ಘಟನೆ ಮಂಗಳೂರಿನ ಆರ್ಟಿಓ ಕಛೇರಿಯ ಸಮೀಪದಲ್ಲಿ ಬುಧವಾರ ಸಂಜೆ ನಡೆದಿದೆ. ಮೃತ ಉದ್ಯಮಿಯನ್ನು ಸಾಮಾಜಿಕ, ಧಾರ್ಮಿಕ ಮುಂದಾಳು ಬಂಟ್ವಾಳ ತಾಲೂಕಿನ ಅರಳ ಗ್ರಾಮದ ನಿವಾಸಿ ಮಾವಂತೂರು ದೇವಪ್ಪ ಶೆಟ್ಟಿ(70) ಎಂದು ಗುರುತಿಸಲಾಗಿದೆ. ಬಂಟ್ವಾಳ ಲಯನ್ಸ್ ಕ್ಲಬ್‌ನ ಪೂರ್ವಾಧ್ಯಕ್ಷರಾಗಿದ್ದ ಇವರು ಪ್ರಸ್ತುತ ಲಯನ್ಸ್ ಕ್ಲಬ್‌ನ ಪ್ರಾಂತ್ಯ ಸಂಯೋಜಕರಾಗಿದ್ದರು.

ರಸ್ತೆ ದಾಟುವಾಗ ಆಟೋರಿಕ್ಷಾ ಢಿಕ್ಕಿ ►ಬಂಟ್ವಾಳದ ಉದ್ಯಮಿ ಮೃತ್ಯು Read More »

ಕರಾವಳಿ

‌ಮೂಡಿಗೆರೆಯ ಧನ್ಯಶ್ರೀ ಆತ್ಮಹತ್ಯೆ ಪ್ರಕರಣ ►ವಾಟ್ಸಪ್, ಫೇಸ್‌ಬುಕ್‌ ಗಳಲ್ಲಿ ಮಾನ ಹಾನಿ ನಡೆಸಿದವರ ವಿರುದ್ಧ ಕಠಿಣ ಕ್ರಮ

(ನ್ಯೂಸ್ ಕಡಬ) newskadaba.com ಚಿಕ್ಕಮಗಳೂರು, ಜ.10. ಇತ್ತೀಚೆಗೆ ಮೂಡಿಗೆರೆಯ ಕಾಲೇಜು ವಿದ್ಯಾರ್ಥಿನಿ ಧನ್ಯಶ್ರೀ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಧನ್ಯಶ್ರೀಯ ಮಾನಹಾನಿ ನಡೆಸಿದ, ಆತ್ಮಹತ್ಯೆಗೆ ಪ್ರೇರೇಪಿಸಿದ ಎಲ್ಲರ ವಿರುದ್ಧವೂ ಪ್ರಕರಣ ದಾಖಲಿಸಲಾಗುವುದು ಎಂದು ಚಿಕ್ಕಮಗಳೂರು ಎಸ್‌ಪಿ ಅಣ್ಣಾಮಲೈ ಸ್ಪಷ್ಟಪಡಿಸಿದ್ದಾರೆ. ಗುರುವಾರದಂದು ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಸಂತೋಷ್‌ ಸೇರಿದಂತೆ ನಾಲ್ಕೈದು ಜನ ಧಮ್ಕಿ ಹಾಕಿದ ಹಿನ್ನೆಲೆಯಲ್ಲಿ ಧನ್ಯಶ್ರೀ ಸಾಯುವ ಮುನ್ನ ಎರಡು ದಿನಗಳ ಕಾಲ ಊಟ ಮಾಡಿರಲಿಲ್ಲ. ಪ್ರಕರಣವನ್ನು ಗಂಭೀರವಾಗಿ ಪರಗಣಿಸಿದ್ದು, ಧನ್ಯಶ್ರೀ ಅವರ ತಂದೆಯಲ್ಲಿ ಸುಳ್ಳು ಪ್ರಕರಣ ನೀಡಲು

‌ಮೂಡಿಗೆರೆಯ ಧನ್ಯಶ್ರೀ ಆತ್ಮಹತ್ಯೆ ಪ್ರಕರಣ ►ವಾಟ್ಸಪ್, ಫೇಸ್‌ಬುಕ್‌ ಗಳಲ್ಲಿ ಮಾನ ಹಾನಿ ನಡೆಸಿದವರ ವಿರುದ್ಧ ಕಠಿಣ ಕ್ರಮ Read More »

ಕರಾವಳಿ

ಅಡ್ಡಹೊಳೆ: ಟ್ಯಾಂಕರ್ ಪಲ್ಟಿಯಾಗಿ ಗ್ಯಾಸ್ ಸೋರಿಕೆಯ ಹಿನ್ನೆಲೆ ►ಗುರುವಾರ ಬೆಳಿಗ್ಗೆಯವರೆಗೆ ವಾಹನ ಸಂಚಾರ ತಡೆ ಹಿಡಿಯಲು ಆದೇಶ

(ನ್ಯೂಸ್ ಕಡಬ) newskadaba.com ಮಂಗಳೂರು, ಜ.10. ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಶಿರಾಡಿ ಘಾಟ್ ನ ಕೊಟ್ಟಿಕ್ಕಲ್ ಎಂಬಲ್ಲಿ ಗ್ಯಾಸ್ ಟ್ಯಾಂಕರ್ ಪಲ್ಟಿಯಾದ ಹಿನ್ನೆಲೆಯಲ್ಲಿ ತಕ್ಷಣದಿಂದಲೇ ಅನ್ವಯವಾಗುವಂತೆ ಜ.11 ಗುರುವಾರ ಬೆಳಿಗ್ಗೆ 7.30 ಗಂಟೆಯವರೆಗೆ ಶಿರಾಡಿ ಘಾಟಿಯಲ್ಲಿ ಎಲ್ಲಾ ತರಹದ ವಾಹನಗಳ ಸಂಚಾರವನ್ನು ತಡೆ ಹಿಡಿಯಲಾಗಿದೆ. ಮಂಗಳೂರು ಬೆಂಗಳೂರು ತೆರಳುವ ವಾಹನಗಳು ಪರ್ಯಾಯವಾಗಿ ಚಾರ್ಮಾಡಿ ಅಥವಾ ಮಾಣಿ-ಮಡಿಕೇರಿ ಮಾರ್ಗದಲ್ಲಿ ಸಂಚರಿಸುವಂತೆ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

ಅಡ್ಡಹೊಳೆ: ಟ್ಯಾಂಕರ್ ಪಲ್ಟಿಯಾಗಿ ಗ್ಯಾಸ್ ಸೋರಿಕೆಯ ಹಿನ್ನೆಲೆ ►ಗುರುವಾರ ಬೆಳಿಗ್ಗೆಯವರೆಗೆ ವಾಹನ ಸಂಚಾರ ತಡೆ ಹಿಡಿಯಲು ಆದೇಶ Read More »

ಕರಾವಳಿ

ಅಡ್ಡಹೊಳೆ: ಟ್ಯಾಂಕರ್ ಪಲ್ಟಿಯಾಗಿ ಗ್ಯಾಸ್ ಸೋರಿಕೆ ► ರಾಷ್ಟ್ರೀಯ ಹೆದ್ದಾರಿ ತಡೆ

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಜ.10. ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಶಿರಾಡಿ ಗ್ರಾಮದ ಕೊಟ್ಟಿಕ್ಕಲ್ ಎಂಬಲ್ಲಿ ಗ್ಯಾಸ್ ಟ್ಯಾಂಕರೊಂದು ಚಾಲಕನ ನಿಯಂತ್ರಣ ಕಳೆದುಕೊಂಡು ಪಲ್ಟಿಯಾದ ಘಟನೆ ಬುಧವಾರ ಸಂಜೆ ನಡೆದಿದೆ. ಪಲ್ಟಿಯಾದ ಪರಿಣಾಮ ಗ್ಯಾಸ್ ಸೋರಿಕೆಯುಂಟಾಗಿದ್ದು, ಸ್ಥಳದಲ್ಲಿ ಆತಂಕದ ಪರಿಸ್ಥಿತಿ ನಿರ್ಮಾಣವಾಗಿದೆ. ಮುಂಜಾಗ್ರತೆಯಾಗಿ ಅಗ್ನಿಶಾಮಕ ವಾಹನಗಳ ಮೂಲಕ ಬೆಂಕಿ ಉರಿಯದಂತೆ ಕಾರ್ಯಾಚರಣೆ ನಡೆಸಲಾಗುತ್ತಿದೆ. ಘಟನೆಯಿಂದ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಾಗುವ ವಾಹನ ಸಂಚಾರವನ್ನು ತಡೆಹಿಡಿಯಲಾಗಿದ್ದು, ಬದಲಿಯಾಗಿ ಇಚಿಲಂಪಾಡಿ, ಕೈಕಂಬ, ಗುಂಡ್ಯ ಹಾಗೂ ಕಡಬ, ಕೈಕಂಬ, ಗುಂಡ್ಯ ರಸ್ತೆಯ ಮೂಲಕ ಸಂಚಾರ

ಅಡ್ಡಹೊಳೆ: ಟ್ಯಾಂಕರ್ ಪಲ್ಟಿಯಾಗಿ ಗ್ಯಾಸ್ ಸೋರಿಕೆ ► ರಾಷ್ಟ್ರೀಯ ಹೆದ್ದಾರಿ ತಡೆ Read More »

ಕರಾವಳಿ

ನಾವು ಸಾಮರಸ್ಯದಿಂದ ಬದುಕಿ ಬುದ್ದಿವಂತರೆಂದು ಸಾಬೀತುಪಡಿಸಬೇಕಾಗಿದೆ: ಡಾ| ಹೆಗ್ಗಡೆ ►ಡಾ| ಡಿ.ವೀರೇಂದ್ರ ಹೆಗ್ಗಡೆಯವರಿಂದ ‘ಅಮೈ ಕೆರೆ’ ಲೋಕಾರ್ಪಣೆ

(ನ್ಯೂಸ್ ಕಡಬ) newskadaba.com ಕಡಬ, ಜ‌.10. ಬುದ್ಧಿವಂತರ ಜಿಲ್ಲೆಯಾಗಿರುವ ದಕ್ಷಿಣ ಕನ್ನಡದಲ್ಲಿ ನಡೆಯುತ್ತಿರುವ ಕೋಮು ಸಂಘರ್ಷದಿಂದಾಗಿ ಜಿಲ್ಲೆಗೆ ಇದೀಗ ಕೆಟ್ಟ ಹೆಸರು ಬರುತ್ತಿದೆ. ಜಿಲ್ಲೆಯ ಜನತೆ ವೈಷಮ್ಯ ಬಿಟ್ಟು ಸಾಮರಸ್ಯದಿಂದ ಬದುಕಿ ಜಿಲ್ಲೆಯ ಜನತೆ ಬುದ್ದಿವಂತರೆನ್ನುವುದನ್ನು ಸಾಬೀತು ಪಡಿಸಬೇಕಾಗಿದೆ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರು ಹೇಳಿದರು. ಅವರು ವಿವಿಧ ಇಲಾಖೆಗಳ ಸಂಯೋಜನೆಯಲ್ಲಿ ರಾಮಕುಂಜ ಗ್ರಾಮದ ಅಮೈ ಎಂಬಲ್ಲಿ ನಿರ್ಮಿಸಲಾಗಿರುವ ‘ಅಮೈ ಕೆರೆ’ಯನ್ನು ಲೋಕಾರ್ಪಣೆ ಮಾಡಿ ಮಾತನಾಡಿದರು. ಮುಖ್ಯ ಅತಿಥಿಗಳಾಗಿ ಜಿಲ್ಲಾ

ನಾವು ಸಾಮರಸ್ಯದಿಂದ ಬದುಕಿ ಬುದ್ದಿವಂತರೆಂದು ಸಾಬೀತುಪಡಿಸಬೇಕಾಗಿದೆ: ಡಾ| ಹೆಗ್ಗಡೆ ►ಡಾ| ಡಿ.ವೀರೇಂದ್ರ ಹೆಗ್ಗಡೆಯವರಿಂದ ‘ಅಮೈ ಕೆರೆ’ ಲೋಕಾರ್ಪಣೆ Read More »

ಕರಾವಳಿ

ರಾಜಕಾರಣಿ ಆಗುವುದಕ್ಕಾಗಿ ವೃತ್ತಿ ಜೀವನಕ್ಕೆ ಗುಡ್ ಬೈ ಹೇಳಿದ ಪೊಲೀಸ್ ಅಧಿಕಾರಿ ► ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲಿದ್ದಾರೆ ಬಜ್ಪೆ ಸಬ್ ಇನ್ಸ್‌ಪೆಕ್ಟರ್ ಮದನ್

(ನ್ಯೂಸ್ ಕಡಬ) newskadaba.com ಮಂಗಳೂರು, ಜ.10. ರಾಜಕೀಯಕ್ಕೆ ಧುಮುಕುವುದಕ್ಕಾಗಿ ಪೊಲೀಸ್ ಇಲಾಖೆಯಲ್ಲಿ ಸಬ್ ಇನ್ಸ್‌ಪೆಕ್ಟರ್ ಆಗಿದ್ದ ವ್ಯಕ್ತಿಯೋರ್ವರು ಖಾಕಿ ಕಳಚಿಟ್ಟು ವೃತ್ತಿ ಜೀವನಕ್ಕೆ ವಿದಾಯ ಹೇಳಿದ ಘಟನೆ ಮಂಗಳೂರಿನಲ್ಲಿ ನಡೆದಿದೆ. ಮಂಗಳೂರು ನಗರ ಪೋಲಿಸ್ ಕಮಿಷನರೇಟ್ ವ್ಯಾಪ್ತಿಯ ಬಜಪೆ ಸ್ಟೇಷನ್ ನಲ್ಲಿ ಸಬ್ ಇನ್ಸ್ ಪೆಕ್ಟರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಮದನ್ ತಮ್ಮ ಪೊಲೀಸ್ ಡ್ಯೂಟಿಗೆ ಗುಡ್ ಬೈ ಹೇಳಿ ಸಕ್ರಿಯ ರಾಜಕೀಯಕ್ಕೆ ಇಳಿಯಲು ನಿರ್ಧರಿಸಿದ್ದಾರೆ. ಮೂಲತಃ ಕೊಡಗಿನವರಾದ ಮದನ್ ಮಂಗಳೂರಿನ ಕದ್ರಿ ಪೊಲೀಸ್ ಠಾಣೆಯಲ್ಲಿ ಸಬ್ ಇನ್ಸ್

ರಾಜಕಾರಣಿ ಆಗುವುದಕ್ಕಾಗಿ ವೃತ್ತಿ ಜೀವನಕ್ಕೆ ಗುಡ್ ಬೈ ಹೇಳಿದ ಪೊಲೀಸ್ ಅಧಿಕಾರಿ ► ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲಿದ್ದಾರೆ ಬಜ್ಪೆ ಸಬ್ ಇನ್ಸ್‌ಪೆಕ್ಟರ್ ಮದನ್ Read More »

ಕರಾವಳಿ

ಜ.16 ರಿಂದ 21: ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದ ಜಾತ್ರಾ ಮಹೋತ್ಸವ ► ಇಂದು(ಜ.10) ಗೊನೆ ಮುಹೂರ್ತ

(ನ್ಯೂಸ್ ಕಡಬ) newskadaba.com ಸುಳ್ಯ, ಜ.10. ಇಲ್ಲಿನ ಶ್ರೀ ಕ್ಷೇತ್ರ ಪೆರುವಾಜೆ ಶ್ರೀ ಜಲದುರ್ಗಾ ದೇವಿ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವವು ಜನವರಿ 16 ರಿಂದ 21 ರ ವರೆಗೆ ನಡೆಯಲಿದೆ. ಜಾತ್ರಾ ಮಹೋತ್ಸವದ ಪ್ರಯುಕ್ತ ಜನವರಿ 10 ಬುಧವಾರ ಬೆಳಿಗ್ಗೆ 9.00 ಗಂಟೆಗೆ ಗೊನೆ ಮುಹೂರ್ತ ನಡೆಯಲಿದ್ದು, ಭಕ್ತಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕಾಗಿ ಆಡಳಿತ ಮಂಡಳಿಯು ಪ್ರಕಟಣೆಯಲ್ಲಿ ತಿಳಿಸಿದೆ.

ಜ.16 ರಿಂದ 21: ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದ ಜಾತ್ರಾ ಮಹೋತ್ಸವ ► ಇಂದು(ಜ.10) ಗೊನೆ ಮುಹೂರ್ತ Read More »

ಕರಾವಳಿ

ಸುಳ್ಯ ವಿಧಾನಸಭಾ ಕ್ಷೇತ್ರದಲ್ಲಿ ಡಾ| ರಘು ನಿರಂತರ ಸೋತ ಹಿನ್ನೆಲೆ ►ಕಾಂಗ್ರೆಸ್ ಅಭ್ಯರ್ಥಿಯಾಗಿ ಶಶಿಧರ್ ಬೊಟ್ಟಡ್ಕರವರಿಗೆ ಸೀಟು ನೀಡಲು ಆಗ್ರಹ

(ನ್ಯೂಸ್ ಕಡಬ) newskadaba.com ಕಡಬ, ಜ.10. ಜಿಲ್ಲೆಯ ಮೀಸಲು ವಿಧಾನಸಭಾ ಕ್ಷೇತ್ರವಾಗಿರುವ ಸುಳ್ಯದಿಂದ ನಿರಂತರ 3 ಬಾರಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿ ಪರಾಭವಗೊಂಡಿರುವ ಡಾ|ರಘು ಅವರ ಬದಲಿಗೆ ದಲಿತ ಮುಖಂಡ, ಕಡಬ ಬ್ಲಾಕ್ ಕಾಂಗ್ರೆಸ್‌ನ ಪರಿಶಿಷ್ಟ ಜಾತಿ ಮತ್ತು ಪಂಗಡ ವಿಭಾಗದ ಅಧ್ಯಕ್ಷ ಶಶಿಧರ ಬೊಟ್ಟಡ್ಕ ಅವರನ್ನು ಸುಳ್ಯ ಕ್ಷೇತ್ರಕ್ಕೆ  ಕಾಂಗ್ರೆಸ್ ಅಭ್ಯರ್ಥಿಯಾಗಿ ಪರಿಗಣಿಸಬೇಕೆಂದು ಕಡಬದ ಯುವ ದಲಿತ ಮುಖಂಡ ವಸಂತ ಕುಬಲಾಡಿ ಅವರು ಆಗ್ರಹಿಸಿದ್ದಾರೆ. ಅವರು ಮಂಗಳವಾರ ಕಡಬದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿ, ಡಾ|ರಘು ಅವರು ಅಭ್ಯರ್ಥಿಯಾಗಿ 3

ಸುಳ್ಯ ವಿಧಾನಸಭಾ ಕ್ಷೇತ್ರದಲ್ಲಿ ಡಾ| ರಘು ನಿರಂತರ ಸೋತ ಹಿನ್ನೆಲೆ ►ಕಾಂಗ್ರೆಸ್ ಅಭ್ಯರ್ಥಿಯಾಗಿ ಶಶಿಧರ್ ಬೊಟ್ಟಡ್ಕರವರಿಗೆ ಸೀಟು ನೀಡಲು ಆಗ್ರಹ Read More »

ಕರಾವಳಿ
Scroll to Top