ಕರಾವಳಿ

ರಾಜ್ಯ ಸರ್ಕಾರದಿಂದ ಪೊಲೀಸ್ ಇಲಾಖೆಯ ಮೂಲಕ ಹಿಂದೂ ವಿರೋಧಿ ನೀತಿ: ಜಗದೀಶ್ ಶೇಣವ ► ಪುತ್ತೂರು: ಬೃಹತ್ ಹಿಂದೂ ಜಾಗೃತಿ ಸಮಾವೇಶ

(ನ್ಯೂಸ್ ಕಡಬ) newskadaba.com ಪುತ್ತೂರು, ಜ.03. ರಾಜ್ಯ ಸರಕಾರವು ಪೊಲೀಸ್ ಇಲಾಖೆಯನ್ನು ಕೈಗೊಂಬೆಯನ್ನಾಗಿಸಿ ಹಿಂದೂ ಕಾರ್ಯಕರ್ತರಿಗೆ ದೌರ್ಜನ್ಯ ನಡೆಸುತ್ತಿದೆ‌ ಎಂದು ಆರೋಪಿಸಿ ಪುತ್ತೂರಿನ ಶ್ರೀ ಲಕ್ಷ್ಮೀ ವೆಂಕಟರಮಣ ದೇವಸ್ಥಾನದ ವಠಾರದಲ್ಲಿ ಬೃಹತ್ ಹಿಂದೂ ಜಾಗೃತಿ ಸಮಾವೇಶ ನಡೆಯಿತು. ಸಮಾವೇಶದಲ್ಲಿ ಮಾತನಾಡಿದ ವಿಶ್ವ ಹಿಂದೂ ಪರಿಷತ್ ಜಿಲ್ಲಾಧ್ಯಕ್ಷ ಜಗದೀಶ್ ಶೇಣವ, ಹಿಂದೂ ವಿರೋಧಿ ನೀತಿ ಅನುಸರಿಸುತ್ತಿರುವ ಸಂಪ್ಯ ಠಾಣಾ ಎಸ್ಐ ಅಬ್ದಲ್ ಕಾದರ್ ಹಾಗೂ ಕೆಲವು ಸಿಬ್ಬಂದಿಗಳನ್ನು ಜನವರಿ 05 ರ ಒಳಗಾಗಿ ಅಮಾನತ್ತು ಮಾಡಬೇಕು. ಇಲ್ಲದಿದ್ದಲ್ಲಿ ಜನವರಿ […]

ರಾಜ್ಯ ಸರ್ಕಾರದಿಂದ ಪೊಲೀಸ್ ಇಲಾಖೆಯ ಮೂಲಕ ಹಿಂದೂ ವಿರೋಧಿ ನೀತಿ: ಜಗದೀಶ್ ಶೇಣವ ► ಪುತ್ತೂರು: ಬೃಹತ್ ಹಿಂದೂ ಜಾಗೃತಿ ಸಮಾವೇಶ Read More »

ಕರಾವಳಿ

ಸುಬ್ರಹ್ಮಣ್ಯ: ಬಹುಭಾಷಾ ನಟಿ ಹಾಗೂ ಸಹ ನಟನಿಗೆ ಹಲ್ಲೆ ಪ್ರಕರಣ ► ಸುಬ್ರಹ್ಮಣ್ಯ ಠಾಣೆಯ ಇಬ್ಬರು ಪೊಲೀಸರ ಅಮಾನತು

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಜ.02. ಕಳೆದ ಡಿ. 21 ರಂದು ಸುಬ್ರಹ್ಮಣ್ಯದಲ್ಲಿ ನಡೆದ ಬಹುಭಾಷಾ ಚಿತ್ರನಟಿ ಮತ್ತು ಸಹನಟನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿ ಸುಬ್ರಹ್ಮಣ್ಯ ಪೊಲೀಸ್ ಠಾಣೆಯ ಇಬ್ಬರು ಪೊಲೀಸರನ್ನು ಅಮಾನತು ಮಾಡಿ ದಕ್ಷಿಣ ಕನ್ನಡ ಜಿಲ್ಲಾ ಎಸ್ಪಿ ಸುಧೀರ್ ಕುಮಾರ್ ರೆಡ್ಡಿ ಆದೇಶ ನೀಡಿದ್ದಾರೆ. ಸರ್ಪ ಸಂಸ್ಕಾರಕ್ಕೆಂದು ಬಂದಿದ್ದ ಬಹುಭಾಷಾ ಚಿತ್ರನಟಿ ಉಳಿದುಕೊಂಡಿದ್ದ ಛತ್ರದ ಕೊಠಡಿಗೆ ಸಹನಟ ಬೆಳ್ಳಾರೆಯ ಫರ್ವೇಝ್ ಬಂದಿದ್ದನೆಂಬ ಮಾಹಿತಿಯಂತೆ ಸುಬ್ರಹ್ಮಣ್ಯ ಪೊಲೀಸರು ಆಕೆಯನ್ನು ಪೊಲೀಸ್ ಠಾಣೆಗೆ ಕರೆದೊಯ್ದು ಆತನನ್ನೂ ಕರೆಸಿ

ಸುಬ್ರಹ್ಮಣ್ಯ: ಬಹುಭಾಷಾ ನಟಿ ಹಾಗೂ ಸಹ ನಟನಿಗೆ ಹಲ್ಲೆ ಪ್ರಕರಣ ► ಸುಬ್ರಹ್ಮಣ್ಯ ಠಾಣೆಯ ಇಬ್ಬರು ಪೊಲೀಸರ ಅಮಾನತು Read More »

ಕರಾವಳಿ

ಬೆಳ್ಳಾರೆ: ದ.ಕ.ಜಿಲ್ಲಾ ಮಟ್ಟದ ಗಿರಿಜನ ಉತ್ಸವ

(ನ್ಯೂಸ್ ಕಡಬ) newskadaba.com ಬೆಳ್ಳಾರೆ, ಜ.02. ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ನಡೆಸಲ್ಪಡುವ ಜಿಲ್ಲಾ ಮಟ್ಟದ ಗಿರಿಜನ ಉತ್ಸವವು ಬೆಳ್ಳಾರೆ ಸರಕಾರಿ ಪದವಿ ಪೂರ್ವ ಕಾಲೇಜಿನ ನಾರಾಯಣ ಶೇಖ ಸಭಾಂಗಣದಲ್ಲಿ ಜನವರಿ 2 ಮಂಗಳವಾರದಂದು ನಡೆಯಿತು. ಜಿಲ್ಲಾ ಪಂಚಾಯತ್ ಸದಸ್ಯ ರಾದ ಎಸ್.ಎನ್. ಮನ್ಮಥ ಗಿರಿಜನ ಉತ್ಸವವನ್ನು ಉದ್ಘಾಟಿಸಿ ಮಾತನಾಡಿದರು. ಮುಖ್ಯ ಅತಿಥಿಯಾಗಿ ಬೆಳ್ಳಾರೆ ಜೇಸಿಐ ಅಧ್ಯಕ್ಷ ಜಯರಾಮ ಉಮಿಕ್ಕಳ ಭಾಗವಹಿಸಿ ಶುಭ ಹಾರಿಸಿದರು. ಬೆಳ್ಳಾರೆ ಸರಕಾರಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ

ಬೆಳ್ಳಾರೆ: ದ.ಕ.ಜಿಲ್ಲಾ ಮಟ್ಟದ ಗಿರಿಜನ ಉತ್ಸವ Read More »

ಕರಾವಳಿ

ಪಿಜಕಳ ಶಾಲಾ ವಾರ್ಷಿಕೋತ್ಸವ: ಆವರಣ ಗೋಡೆ ಉದ್ಘಾಟನೆ

(ನ್ಯೂಸ್ ಕಡಬ) newskadaba.com ಕಡಬ, ಜ.02.  ಸಂಸ್ಕಾರಯುತ ಶಿಕ್ಷಣ ನೀಡಿದಾಗ ಆ ಶಾಲೆಯು ಅಭಿವೃದ್ದಿಯೊಂದಿಗೆ, ಅಲ್ಲಿನ ವಿದ್ಯಾರ್ಥಿಗಳು ಸಮಾಜದಲ್ಲಿ ಉತ್ತಮ ವ್ಯಕ್ತಿಗಳಾಗಿ ಮೂಡಿ ಬರಲು ಸಾಧ್ಯ ಎಂದು ಪುತ್ತೂರು ಶಾಸಕಿ ಶಕುಂತಳಾ ಶೆಟ್ಟಿ ಹೇಳಿದರು. ಕಡಬ ಪಿಜಕಳ ಕಿ.ಪ್ರಾ.ಶಾಲೆಯ ವಾರ್ಷಿಕೋತ್ಸವದಂದು ಶಾಲಾ ಆವರಣ ಗೋಡೆ ಉದ್ಘಾಟಿಸಿ ಮಾತನಾಡಿದರು. ಪಿಜಕಳ ಸರಕಾರಿ ಶಾಲೆಯಾದರೂ ಯಾವುದೇ ಖಾಸಗಿ ಶಾಲೆಯ ವಿದ್ಯಾರ್ಥಿಗಿಂತ ಕಡಿಮೆ ಇಲ್ಲದಂತೆ ಶಿಕ್ಷಣ ನೀಡುತ್ತಿರುವುದು ಶ್ಲಾಘನೀಯ, ಈ ಶಾಲೆಯ ಮುಖ್ಯ ಶಿಕ್ಷಕಿ ಚೇತನರವರು ಉತ್ತಮವಾಗಿ ಕಾರ್ಯನಿರ್ವಹಿಸುವುದರಿಂದ ಶಾಲೆಯ ಮಕ್ಕಳು

ಪಿಜಕಳ ಶಾಲಾ ವಾರ್ಷಿಕೋತ್ಸವ: ಆವರಣ ಗೋಡೆ ಉದ್ಘಾಟನೆ Read More »

ಕರಾವಳಿ

ಬರಮೇಲು-ಕೊೖಲ ಶಿರಾಡಿ ಹಾಗೂ ಸಹಪರಿವಾರ ದೈವಗಳ ನೇಮೋತ್ಸವ

(ನ್ಯೂಸ್ ಕಡಬ) newskadaba.com ಕಡಬ, ಜ.02. ಪುತ್ತೂರು ತಾಲೂಕು ಕೊೖಲ ಗ್ರಾಮದ ಕೊೖಲ-ಬರಮೇಲು ಶ್ರೀ ಶಿರಾಡಿ ಹಾಗೂ ಸಹಪರಿವಾರ ದೈವಗಳ ನೇಮೋತ್ಸವ ಭಾನುವಾರ ಹಾಗೂ ಸೋಮವಾರ ನಡೆಯಿತು. ಗೊನೆ ಮಹೋರ್ತ, ನೂಜಿಮಾರಿನಲ್ಲಿ ದೈವಗಳಿಗೆ ತಂಬಿಲ, ನಡೆದು ಭಾನುವಾರ ಬೆಳಿಗ್ಗೆ ದೈವಸ್ಥಾನದಲ್ಲಿ ದೇವತಾ ಪ್ರಾರ್ಥನೆ, ಸ್ವಸ್ತಿ ಪುಣ್ಯಾಹ, ಗಣಪತಿ ಹೋಮ, ದೈವಗಳಿಗೆ ಪರ್ವ, ಮಹಾಪುಜೆ, ಪ್ರಸಾದ ವಿತರಣೆ, ಬಾಳೆ ಹಾಕುವ ಗದ್ದೆಯಲ್ಲಿರುವ ನಾಗನ ಕಟ್ಟೆಯಲ್ಲಿ ನಾಗತಂಬಿಲ ನಡೆಯಿತು. ಸಂಜೆ ಶ್ರೀ ಶಿರಾಡಿ, ಶ್ರೀ ಪಂಜುರ್ಲಿ, ಮತ್ತು ಮೊಗೇರ ದೈವಗಳ

ಬರಮೇಲು-ಕೊೖಲ ಶಿರಾಡಿ ಹಾಗೂ ಸಹಪರಿವಾರ ದೈವಗಳ ನೇಮೋತ್ಸವ Read More »

ಕರಾವಳಿ

ಕಡಬ ದಲಿತ್ ಸೇವಾ ಸಮಿತಿಯಿಂದ ► ಬಡ ದಲಿತರಿಗೆ ಅಕ್ಕಿ ವಿತರಿಸುವ ಮೂಲಕ ಹೊಸವರ್ಷಾಚರಣೆ

(ನ್ಯೂಸ್ ಕಡಬ) newskadaba.com ಕಡಬ, ಜ.02. ದಲಿತ್ ಸೇವಾ ಸಮಿತಿ ಕಡಬ ತಾಲೂಕು ಶಾಖಾ ವತಿಯಿಂದ ಜ.1 ರಂದು ರೆಂಜಿಲಾಡಿ ಗ್ರಾಮದ ಗೋಳಿಯಡ್ಕ ದಲಿತ ಬಡವರಾದ ಬಾಬು ದುಗ್ಗಮ್ಮ ದಂಪತಿಗಳಿಗೆ ಅಕ್ಕಿ ವಿತರಿಸುವ ಮೂಲಕ ಹೊಸವರ್ಷವನ್ನು ಆಚರಿಸಲಾಯಿತು. ಕಡಬ ತಾಲೂಕು ಅಧ್ಯಕ್ಷ ಕೇಶವ ಕುಪ್ಲಾಜೆ ಅಕ್ಕಿ ಚೀಲ ಹಸ್ತಾಂತರಿಸಿ ಮಾತನಾಡಿ ಹೊಸವರ್ಷವು ಎಲ್ಲರಿಗೂ ಶುಭವನ್ನು ತರುವುದರೊಂದಿಗೆ ಎಲ್ಲರೂ ಸಂತೋಷಪಡುವಂತಾಗಲಿ ಎಂದು ಶುಭಹಾರೈಸಿದರು. ಬಳಿಕ ಲಲಿತ ನಡುಗುಡ್ಡೆ, ಲತಾ ಪುಂಜಮನೆ, ದಯಾನಂದ ಮುಳಿಮಜಲುರವರಿಗೆ ಅಕ್ಕಿ ಚೀಲ ವಿತರಿಸಲಾಯಿತು. ಈ

ಕಡಬ ದಲಿತ್ ಸೇವಾ ಸಮಿತಿಯಿಂದ ► ಬಡ ದಲಿತರಿಗೆ ಅಕ್ಕಿ ವಿತರಿಸುವ ಮೂಲಕ ಹೊಸವರ್ಷಾಚರಣೆ Read More »

ಕರಾವಳಿ

ಕುಟ್ರುಪ್ಪಾಡಿ ಗ್ರಾ.ಪಂ.ನ ವತಿಯಿಂದ ► ಬಲ್ಯ ದೇರಾಜೆಯಲ್ಲಿ ಸ್ವಚ್ಚತೆಯೊಂದಿಗೆ ಹೊಸ ವರ್ಷಾಚರಣೆ

(ನ್ಯೂಸ್ ಕಡಬ) newskadaba.com ಕಡಬ, ಜ.02. ಕುಟ್ರುಪ್ಪಾಡಿ ಗ್ರಾ.ಪಂ.ನ ವತಿಯಿಂದ ಬಲ್ಯ ಗ್ರಾಮದ ದೇರಾಜೆಯಲ್ಲಿ 2018ನೇ ಜನವರಿ 1 ರಂದು ಅಂಗಡಿ ಮುಂಗಟ್ಟುಗಳು, ಬಸ್ಸ್ಟಾಂಡ್, ಮಸೀದಿ ವಠಾರ ಸೇರಿದಂತೆ ಪರಿಸರ ಸ್ವಚ್ಚಗೋಲಿಸುವ ಮೂಲಕ ಹೊಸವರ್ಷಾಚರಣೆ ಆಚರಿಸಲಾಯಿತು. ಕುಟ್ರುಪ್ಪಾಡಿ ಗ್ರಾ.ಪಂ.ನ ಬಲ್ಯ ವಾರ್ಡ್ನ ಸದಸ್ಯ ಮಹಮ್ಮದ್ ಆಲಿಯವರ ನೇತೃತ್ವದಲ್ಲಿ ನಡೆದ ಸ್ವಚ್ಚತಾ ಕಾರ್ಯಕ್ರಮದಲ್ಲಿ ಕುಟ್ರುಪ್ಪಾಡಿ ಗ್ರಾ.ಪಂ.ಅಧ್ಯಕ್ಷೆ ಜಾನಕಿಸುಂದರ ಗೌಡ, ಸದಸ್ಯರಾದ ತನಿಯಪ್ಪ ಸಂಪಡ್ಕ, ಸುಳ್ಯ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಸುಧೀರ್ ದೇವಾಡಿಗ, ದೇರಾಜೆ ಅಂಗಡಿ ಮಾಲಕ

ಕುಟ್ರುಪ್ಪಾಡಿ ಗ್ರಾ.ಪಂ.ನ ವತಿಯಿಂದ ► ಬಲ್ಯ ದೇರಾಜೆಯಲ್ಲಿ ಸ್ವಚ್ಚತೆಯೊಂದಿಗೆ ಹೊಸ ವರ್ಷಾಚರಣೆ Read More »

ಕರಾವಳಿ

ಹೊಸಮಠ ಸಿಎ ಬ್ಯಾಂಕ್: 2018ರ ಕ್ಯಾಲೆಂಡರ್ ಬಿಡುಗಡೆ

(ನ್ಯೂಸ್ ಕಡಬ) newskadaba.com ಕಡಬ, ಜ.02. ಹೊಸಮಠ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ 2018ನೇ ವರ್ಷದ ಕ್ಯಾಲೆಂಡರ್ನ್ನು ಆಡಳಿತ ಮಂಡಳಿ ಅಧ್ಯಕ್ಷ ಕರುಣಾಕರ ಗೋಗಟೆ ಇತ್ತೀಚೆಗೆ ಬಿಡುಗಡೆಗೊಳಿಸಿದರು. ಬಳಿಕ ಮಾತನಾಡಿದ ಅವರು ಸಂಘದಿಂದ ಸದಸ್ಯರಿಗೆ ಸಂಪುರ್ಣ ಸಾಲ ಸೌಲಭ್ಯ ಒದಗಿಸುವುದರೊಂದಿಗೆ ಸಂಘದ ಅಭಿವೃದ್ದಿಗೆ ಅವಿರತ ಶ್ರಮಿಸಲಾಗುತ್ತಿದೆ ಅಲ್ಲದೆ ಸಂಘದ ಸದಸ್ಯರ ಮಕ್ಕಳ ವಿದ್ಯಾಭ್ಯಾಸ ಸೇರಿದಂತೆ ಎಲ್ಲಾ ರೀತಿಯ ಅಭಿವೃದ್ದಿಗೆ ಸಂಘವು ಪ್ರಾಮಾಣಿಕ ಪ್ರಯತ್ನ ಮಾಡುತ್ತಿದ್ದು ಸದಸ್ಯರು ಸಂಘದಿಂದ ಪಡೆದುಕೊಂಡ ಸಾಲವನ್ನು ಸಕಾಲಕ್ಕೆ ಪಾವತಿಸುವುದರೊಂದಿಗೆ ಸಹಕರಿಸಬೇಕೆಂದು ಹೇಳಿದರು.

ಹೊಸಮಠ ಸಿಎ ಬ್ಯಾಂಕ್: 2018ರ ಕ್ಯಾಲೆಂಡರ್ ಬಿಡುಗಡೆ Read More »

ಕರಾವಳಿ

ಪಿಜಕಳ: ವಿದ್ಯುತ್ ಲೈನ್ ಮತ್ತು ಟ್ರಾನ್ಸ್‌ಫಾರ್ಮರ್ ಬದಲಾಯಿಸಲು ಮೆಸ್ಕಾಂಗೆ ಮನವಿ

(ನ್ಯೂಸ್ ಕಡಬ) newskadaba.com ಕಡಬ, ಜ.02. ವಿದ್ಯುತ್ ಪರಿವರ್ತಕದ ಬಳಕೆದಾರರಿಂದ ಕಡಬ ಮೆಸ್ಕಾಂನ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರಿಗೆ ವಿದ್ಯುತ್ ಸಮಸ್ಯೆಯ ಬಗ್ಗೆ ಜ.1ರಂದು ಮನವಿ ಸಲ್ಲಿಸಿ ಹಳೆಯ ಟ್ರಾನ್ಸ್‌ಫಾರ್ಮರ್ ಹಾಗು ಲೈನನ್ನು ಬದಲಾಯಿಸಿ ಹೊಸ ಟ್ರಾನ್ಸ್‌ಫಾರ್ಮರ್ ಅಳವಡಿಸುವಂತೆ ಮನವಿ ಸಲ್ಲಿಸಿ ಒತ್ತಾಯಿಸಲಾಯಿತು. ಕಡಬ ಪಿಜಕಳ-ಕಲ್ಲರ್ಪೆ ಟಿ.ಸಿ ಯಿಂದ ಕಳೆದ ಹಲವು ವರ್ಷಗಳಿಂದ ವಿದ್ಯುತ್ ವೋಲ್ಟೇಜ್ ಸಮಸ್ಯೆಯನ್ನು ಎದುರಿಸುತ್ತಿದ್ದು ಟಿ.ಸಿ ಮತ್ತು ಅದರಿಂದ ವಿದ್ಯುತ್ ಪುರೈಕೆಯಾಗುತ್ತಿರುವ ಲೈನ್ 25 ವರ್ಷಗಳ ಹಿಂದೆ ಅಳವಡಿಸಲಾಗಿದ್ದು ತುಕ್ಕುಹಿಡಿದು ಪದೇ ಪದೇ ತುಂಡಾಗಿ

ಪಿಜಕಳ: ವಿದ್ಯುತ್ ಲೈನ್ ಮತ್ತು ಟ್ರಾನ್ಸ್‌ಫಾರ್ಮರ್ ಬದಲಾಯಿಸಲು ಮೆಸ್ಕಾಂಗೆ ಮನವಿ Read More »

ಕರಾವಳಿ

ರಾಷ್ಟ್ರೀಯ ಸ್ವಯಂ ಸೇವಕ ಸಂಘ ಕೊೖಲ ► ಸಬಳೂರು ಅಯೋಧ್ಯಾನಗರ ಶಾಖಾ ವಾರ್ಷಿಕೋತ್ಸವ

(ನ್ಯೂಸ್ ಕಡಬ) newskadaba.com ಕಡಬ, ಜ.02. ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಕೊೖಲ ಗ್ರಾಮದ ಸಬಳೂರು ಅಯೋಧ್ಯಾನಗರ ಶಾಖಾ ವಾರ್ಷಿಕೋತ್ಸವ ಕಾರ್ಯಕ್ರಮವು ಭಾನುವಾರ ಸಂಜೆ ಅಯೋಧ್ಯಾನಗರ ಶ್ರೀ ರಾಮ ಭಜನಾ ಮಂದಿರದ ಕ್ರೀಡಾಂಗಣದಲ್ಲಿ ನಡೆಯಿತು. ಶಾರೀರಿಕ ಆಟೋಟಗಳ ಬಳಿಕ ನಡೆದ ಸಭೆಯಲ್ಲಿ ಭೌದ್ಧಿಕ್ ನೀಡಿದ ಆರ್ಎಸ್ಎಸ್ ಮುಖಂಡ ಆಲಂಕಾರು ಶ್ರೀ ಭಾರತಿ ಶಾಲಾ ಶಿಕ್ಷಕ ಯಧುಶ್ರೀ ಆನೆಗುಂಡಿ ಮಾತನಾಡಿ ರಾಷ್ಟ್ರೀಯ ಸ್ವಯಂ ಸೇವಕ ಸಂಘ ಇಡೀ ವಿಶ್ವದಲ್ಲಿ ಶಾಖೆಗಳನ್ನು ಹೊಂದಿದ್ದು ಭಾರತದ ಸಾಂಸ್ಕೃತಿಕ ಪರಂಪರೆಯನ್ನು ಉಳಿಸಿ ಬೆಳೆಸುವಲ್ಲಿ ಕಾರ್ಯನಿರ್ವಹಿಸುತ್ತಿದೆ.

ರಾಷ್ಟ್ರೀಯ ಸ್ವಯಂ ಸೇವಕ ಸಂಘ ಕೊೖಲ ► ಸಬಳೂರು ಅಯೋಧ್ಯಾನಗರ ಶಾಖಾ ವಾರ್ಷಿಕೋತ್ಸವ Read More »

ಕರಾವಳಿ
Scroll to Top