ಕರಾವಳಿ

ವೀರಕಂಬ: ದುಷ್ಕರ್ಮಿಗಳಿಂದ ಮಸೀದಿಗೆ ಕಲ್ಲೆಸೆತ

(ನ್ಯೂಸ್ ಕಡಬ) newskadaba.com ವಿಟ್ಲ, ಡಿ.28. ಕಲ್ಲಡ್ಕ ಸಮೀಪದ ವೀರಕಂಬ ಎಂಬಲ್ಲಿನ ಮಸೀದಿಯೊಂದಕ್ಕೆ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದ ಘಟನೆ ಬುಧವಾರದಂದು ತಡರಾತ್ರಿ ನಡೆದಿದೆ. ಘಟನೆಯಿಂದ ವೀರಕಂಬ ಬಳಿಯ ಮಸೀದಿಯ ನಾಲ್ಕು ಕಿಟಕಿಯ ಗಾಜುಗಳಿಗೆ ಹಾನಿಯಾಗಿದೆ. ಗುರುವಾರ ಬೆಳಿಗ್ಗೆ ನಮಾಝ್ ಮಾಡಲು ಬಂದ ವೇಳೆ ಈ ಕೃತ್ಯ ಬೆಳಕಿಗೆ ಬಂದಿದೆ. ವಿಟ್ಲ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆರೋಪಿಗಳ ಪತ್ತೆಗೆ ಬಲೆ ಬೀಸಲಾಗಿದೆ.

ವೀರಕಂಬ: ದುಷ್ಕರ್ಮಿಗಳಿಂದ ಮಸೀದಿಗೆ ಕಲ್ಲೆಸೆತ Read More »

ಕರಾವಳಿ

ಅಂತರ್ರಾಜ್ಯ ಮಟ್ಟದ ಜೂನಿಯರ್ ವಿಭಾಗದ ಕರಾಟೆ ಚಾಂಪಿಯನ್‌ಶಿಪ್ ► ಕಡಬದ ಕು| ಯಾನ್ವಿತಾ ಯಂ.ಕೆ. ಪ್ರಥಮ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.28. ಕಮಲ್ ಮಾರ್ಷಲ್ ಆರ್ಟ್ಸ್ ಅಕಾಡೆಮಿ ವತಿಯಿಂದ ಮಂಗಳೂರಿನ ಕೆಪಿಟಿಯಲ್ಲಿ ನಡೆದ ಜೂನಿಯರ್ ವಿಭಾಗದ ಕರ್ನಾಟಕ ಮತ್ತು ಕೇರಳ ಅಂತರ್ರಾಜ್ಯ ಒಪನ್ ಕರಾಟೆ ಚಾಂಪಿಯನ್‌ ಶಿಪ್ ಸ್ಪರ್ಧೆಯಲ್ಲಿ ಕಡಬದ ಕ್ನಾನಾಯ ಜ್ಯೋತಿ ಆಂಗ್ಲ ಮಾಧ್ಯಮ ಶಾಲೆಯ 3 ನೇ ತರಗತಿಯ ವಿದ್ಯಾರ್ಥಿನಿ ಕು| ಯಾನ್ವಿತಾ ಯಂ.ಕೆ. ಪ್ರಥಮ ಸ್ಥಾನವನ್ನು ತನ್ನದಾಗಿಸಿಕೊಂಡಿದ್ದಾಳೆ. ಮರ್ದಾಳ ತನು ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷರೂ, ಜೇಸಿಐ ಕಡಬ ಕದಂಬದ ಪೂರ್ವಾಧ್ಯಕ್ಷರೂ ಆದ ಮಂಜುನಾಥ ಕೋಲಂತಾಡಿ ಮತ್ತು ಪದ್ಮಾ ದಂಪತಿಯ ಪುತ್ರಿಯಾಗಿರುವ ಈಕೆಗೆ

ಅಂತರ್ರಾಜ್ಯ ಮಟ್ಟದ ಜೂನಿಯರ್ ವಿಭಾಗದ ಕರಾಟೆ ಚಾಂಪಿಯನ್‌ಶಿಪ್ ► ಕಡಬದ ಕು| ಯಾನ್ವಿತಾ ಯಂ.ಕೆ. ಪ್ರಥಮ Read More »

ಕರಾವಳಿ

ಸುಳ್ಯ: ಬಟ್ಟೆ ಒಗೆಯುತ್ತಿದ್ದಾಗ ಹೃದಯಾಘಾತ ► ಮಹಿಳೆ ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ) newskadaba.com ಸುಳ್ಯ, ಡಿ.28. ಮಹಿಳೆಯೊಬ್ಬರು ಬಟ್ಟೆ ಒಗೆಯುತ್ತಿದ್ದ ವೇಳೆ ಹೃದಯಾಘಾತಕೊಳ್ಳಗಾಗಿ ಮೃತಪಟ್ಟ ಘಟನೆ ಮಂಗಳವಾರದಂದು ತಾಲೂಕಿನ ಮಂಡೆಕೋಲು ಎಂಬಲ್ಲಿ ನಡೆದಿದೆ. ಮೃತರನ್ನು ಮಂಡೆಕೋಲು ಗ್ರಾಮದ ಆಲಂಕಳ್ಯ ನಿವಾಸಿ ದಿವಂಗತ ಮೋಹನ ಗೌಡ ಎಂಬವು ಪತ್ನಿ ಮೀನಾಕ್ಷಿ ಎಂದು ಗುರುತಿಸಲಾಗಿದೆ. ಇವರು ಬಟ್ಟೆ ಒಗೆಯುತ್ತಿದ್ದಾಗ ಹೃದಯಾಘಾತಕ್ಕೊಳಗಾಗಿ ಬಿದ್ದಿದ್ದು, ಪಕ್ಕದ ಮನೆಯ ಇವರ ಅತ್ತಿಗೆ ಮೀನಾಕ್ಷಿಯವರನ್ನು ಕರೆದಾಗ ಪ್ರತಿಕ್ರಿಯೆ ಇಲ್ಲದಿದ್ದುದರಿಂದ ಮತ್ತು ಮೀನಾಕ್ಷಿಯವರ ಮನೆಯ ಪೋನ್ ರಿಂಗಣಿಸುತ್ತಿದ್ದರೂ ಕರೆ ಸ್ವೀಕರಿಸದೆ ಇರುವುದನ್ನು ಗಮನಿಸಿ, ಮೀನಾಕ್ಷಿಯವರನ್ನು ಕರೆಯುತ್ತಾ ಅಂಗಳಕ್ಕೆ

ಸುಳ್ಯ: ಬಟ್ಟೆ ಒಗೆಯುತ್ತಿದ್ದಾಗ ಹೃದಯಾಘಾತ ► ಮಹಿಳೆ ಸ್ಥಳದಲ್ಲೇ ಮೃತ್ಯು Read More »

ಕರಾವಳಿ

ಕಲ್ಲಡ್ಕ: ಬಸ್ಸಿಗೆ ಕಲ್ಲೆಸೆತ ಪ್ರಕರಣ ► ಆರೋಪಿಯ ಬಂಧನ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಡಿ.27. ಮಂಗಳವಾರ ರಾತ್ರಿ ಕಲ್ಲಡ್ಕದಲ್ಲಿ ನಡೆದ ಚೂರಿ ಇರಿತ ಸಂದರ್ಭದಲ್ಲಿ ಬಸ್ಸೊಂದಕ್ಕೆ ಕಲ್ಲೆಸೆದ ಪ್ರಕರಣದಲ್ಲಿ ಓರ್ವನನ್ನು ಬಂಟ್ವಾಳ ನಗರ ಠಾಣೆ ಪೊಲೀಸರು ಬಂಧಿಸಿದ ಘಟನೆ ಬುಧವಾರದಂದು ನಡೆದಿದೆ. ಬಂಧಿತ ಆರೋಪಿಯನ್ನು ಕಲ್ಲಡ್ಕದ ಅಮ್ಟೂರು ನಿವಾಸಿ ಕೌಶಿಲ್(23) ಎಂದು ಗುರುತಿಸಲಾಗಿದೆ. ಕರೋಪಾಡಿ ಗ್ರಾಮ ಪಂಚಾಯತ್‌ನ ಉಪಾಧ್ಯಕ್ಷರಾಗಿದ್ದ ಜಲೀಲ್ ಕರೋಪಾಡಿ ಕೊಲೆ ಪ್ರಕರಣದ ಅರೋಪಿ ಕೇಶವ ಎಂಬಾತನಿಗೆ ಮಂಗಳವಾರ ರಾತ್ರಿ ಚೂರಿಯಿಂದ ಇರಿಯಲಾಗಿತ್ತು. ಈ ಸಂದರ್ಭದಲ್ಲಿ ಕೌಶಿಲ್ ಬಸ್ಸೊಂದಕ್ಕೆ ಕಲ್ಲೆಸೆದು ಹಾನಿಗೊಳಿಸಿದ್ದನೆನ್ನಲಾಗಿದ್ದು, ಈ ಬಗ್ಗೆ

ಕಲ್ಲಡ್ಕ: ಬಸ್ಸಿಗೆ ಕಲ್ಲೆಸೆತ ಪ್ರಕರಣ ► ಆರೋಪಿಯ ಬಂಧನ Read More »

ಕರಾವಳಿ

ಕಲ್ಲಡ್ಕ: ಚೂರಿ ಇರಿತ ಪ್ರಕರಣದ ಆರೋಪಿ ಪೊಲೀಸ್ ವಶಕ್ಕೆ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಡಿ.27. ಮಂಗಳವಾರ ರಾತ್ರಿ ಕಲ್ಲಡ್ಕದಲ್ಲಿ ನಡೆದ ಚೂರಿ ಇರಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವನನ್ನು ಬಂಟ್ವಾಳ ನಗರ ಠಾಣೆ ಪೊಲೀಸರು ವಶಕ್ಕೆ ಪಡೆದುಕೊಂಡ ಘಟನೆ ಬುಧವಾರದಂದು ನಡೆದಿದೆ. ಬಂಧಿತ ಆರೋಪಿಯನ್ನು ಕಲ್ಲಡ್ಕ ನಿವಾಸಿ ಖಲೀಲ್ ಎಂದು ಗುರುತಿಸಲಾಗಿದೆ. ಈತ ಕರೋಪಾಡಿ ಗ್ರಾಮ ಪಂಚಾಯತ್‌ನ ಉಪಾಧ್ಯಕ್ಷರಾಗಿದ್ದ ಜಲೀಲ್ ಕರೋಪಾಡಿ ಕೊಲೆ ಪ್ರಕರಣದ ಅರೋಪಿ ಕೇಶವ ಎಂಬಾತನಿಗೆ ಮಂಗಳವಾರ ರಾತ್ರಿ ಚೂರಿಯಿಂದ ಇರಿದಿದ್ದ. ತಕ್ಷಣ ಕಾರ್ಯಪ್ರವೃತ್ತರಾದ ಜಿಲ್ಲಾ ಪೊಲೀಸ್ ಇಲಾಖೆ ನಾಲ್ಕು ತಂಡಗಳನ್ನು ರಚಿಸಿ ಆರೋಪಿಗಳ

ಕಲ್ಲಡ್ಕ: ಚೂರಿ ಇರಿತ ಪ್ರಕರಣದ ಆರೋಪಿ ಪೊಲೀಸ್ ವಶಕ್ಕೆ Read More »

ಕರಾವಳಿ

ಕಡಬ: ನಿದ್ದೆಯ ಮಂಪರಿನಲ್ಲಿ ವಾಣಿಜ್ಯ ಕಟ್ಟಡಕ್ಕೆ ಢಿಕ್ಕಿ ಹೊಡೆದ ಕಾರು ► ಮೂವರು ಅಪಾಯದಿಂದ ಪಾರು

(ನ್ಯೂಸ್ ಕಡಬ) newskadaba.com ಕಡಬ, ಡಿ.27. ನಿದ್ದೆಯ ಮಂಪರಿನಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಮಾರುತಿ ಬ್ರೆಝಾ ಕಾರೊಂದು ವಾಣಿಜ್ಯ ಸಂಕೀರ್ಣವೊಂದಕ್ಕೆ ಢಿಕ್ಕಿಯಾಗಿ ಮೂವರು ಗಾಯಗೊಂಡ ಘಟನೆ ಮಂಗಳವಾರ ತಡರಾತ್ರಿ ಕಡಬದಲ್ಲಿ ನಡೆದಿದೆ. ಗಾಯಾಳುಗಳನ್ನು ಸುಳ್ಯ ತಾಲೂಕಿನ ಕರಿಕ್ಕಳ ಮೂಲೂರು ಫಾರ್ಮ್ ನಿವಾಸಿಗಳಾದ ಶ್ರೀಶ(23), ಪತ್ನಿ ಸಂಧ್ಯಾ(20) ಹಾಗೂ ಸತ್ಯಾವತಿ(50) ಎಂದು ಗುರುತಿಸಲಾಗಿದೆ. ಇವರನ್ನು ಮಂಗಳೂರಿನ ಎ.ಜೆ. ಆಸ್ಪತ್ರೆಗೆ ದಾಖಲಿಸಲಾಗಿದೆ. ಕಡಬದ ಮುಖ್ಯಪೇಟೆಯ ಅನುಗ್ರಹ ಸಭಾಭವನದ ಸಮೀಪದಲ್ಲಿರುವ ವಾಣಿಜ್ಯ ಕಟ್ಟಡಕ್ಕೆ ಢಿಕ್ಕಿ ಹೊಡೆದು ಈ ದುರ್ಘಟನೆ ಸಂಭವಿಸಿದೆ. ನವ

ಕಡಬ: ನಿದ್ದೆಯ ಮಂಪರಿನಲ್ಲಿ ವಾಣಿಜ್ಯ ಕಟ್ಟಡಕ್ಕೆ ಢಿಕ್ಕಿ ಹೊಡೆದ ಕಾರು ► ಮೂವರು ಅಪಾಯದಿಂದ ಪಾರು Read More »

ಕರಾವಳಿ

ಬಲ್ಯ: ಬೈಕಿಗೆ ಅಡ್ಡ ಬಂದ ಕಡವೆ ► ಮಹಿಳೆ ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ) newskadaba.com ಕಡಬ, ಡಿ.27. ಕಡವೆಯೊಂದು ಅಡ್ಡ ಬಂದ ಪರಿಣಾಮ ಸವಾರನ ನಿಯಂತ್ರಣ ತಪ್ಪಿ ಬೈಕ್ ಧರೆಗೆ ಢಿಕ್ಕಿ ಹೊಡೆದುದರಿಂದ ಮಹಿಳೆಯೋರ್ವರು ಮೃತಪಟ್ಟ ಘಟನೆ ಉಪ್ಪಿನಂಗಡಿ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಬಲ್ಯ ಎಂಬಲ್ಲಿ ಬುಧವಾರದಂದು ಮುಂಜಾನೆ ನಡೆದಿದೆ. ಮೃತರನ್ನು ಕೊಂಬಾರು ನಿವಾಸಿ ವಿಶ್ವನಾಥ ಪೂಜಾರಿ ಎಂಬವರ ಪತ್ನಿ ಸಾವಿತ್ರಿ ಎಂದು ಗುರುತಿಸಲಾಗಿದೆ. ಇವರು ತನ್ನ ಪತಿಯೊಂದಿಗೆ ಬೈಕಿನಲ್ಲಿ ಉಪ್ಪಿನಂಗಡಿ ಕಡೆಗೆ ತೆರಳುತ್ತಿದ್ದಾಗ ಹಠಾತ್ತನೆ ರಸ್ತೆಗೆ ಬಂದ ಪರಿಣಾಮ ಸವಾರನ ನಿಯಂತ್ರಣ ತಪ್ಪಿದ ಬೈಕ್ ಧರೆಗೆ

ಬಲ್ಯ: ಬೈಕಿಗೆ ಅಡ್ಡ ಬಂದ ಕಡವೆ ► ಮಹಿಳೆ ಸ್ಥಳದಲ್ಲೇ ಮೃತ್ಯು Read More »

ಕರಾವಳಿ

ಪೊಲೀಸ್ ಬಂದೋಬಸ್ತ್ ನಲ್ಲಿ ಸಹಜ ಸ್ಥಿತಿಯತ್ತ ಮರಳುತ್ತಿರುವ ಕಲ್ಲಡ್ಕ ► ಚೂರಿ ಇರಿತ ಆರೋಪಿಗಳ ಪತ್ತೆಗೆ ನಾಲ್ಕು ತಂಡಗಳ ರಚನೆ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಡಿ.27. ಕಲ್ಲಡ್ಕದಲ್ಲಿ ಮಂಗಳವಾರ ರಾತ್ರಿ ನಡೆದ ಯುವಕನ ಕೊಲೆಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳ ಪತ್ತೆಗೆ ನಾಲ್ಕು ತಂಡವನ್ನು ರಚಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸುದೀರ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ. ಆರೋಪಿಗಳ ಪೈಕಿ ಒರ್ವನ ಸುಳಿವು ಲಭ್ಯವಾಗಿದ್ದು, ಶೀಘ್ರದಲ್ಲೇ ಕೃತ್ಯಕ್ಕೆ ಸಂಬಂಧಿಸಿದ ಆರೋಪಿಗಳನ್ನು ಬಂಧಿಸಲಾಗುವುದು ಎಂದು ತಿಳಿಸಿದ್ದಾರೆ. ಕಲ್ಲಡ್ಕದ ಅಂಗಡಿಯೊಂದರ ಬಳಿ ನಿಂತಿದ್ದ ವೀರಕಂಬದ ಕೇಶವ ಎಂಬಾತನಿಗೆ ಹೆಲ್ಮೆಟ್ ಧರಿಸಿದ್ದ ಇಬ್ಬರು ಚೂರಿಯಿಂದ ಇರಿದು ಪರಾರಿಯಾಗಿದ್ದರು. ಗಾಯಾಳುವನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ

ಪೊಲೀಸ್ ಬಂದೋಬಸ್ತ್ ನಲ್ಲಿ ಸಹಜ ಸ್ಥಿತಿಯತ್ತ ಮರಳುತ್ತಿರುವ ಕಲ್ಲಡ್ಕ ► ಚೂರಿ ಇರಿತ ಆರೋಪಿಗಳ ಪತ್ತೆಗೆ ನಾಲ್ಕು ತಂಡಗಳ ರಚನೆ Read More »

ಕರಾವಳಿ

► ಕಡಬ: 38 ನೇ ವರ್ಷದ ಸಂಭ್ರಮದ ಸಂಯುಕ್ತ ಕ್ರಿಸ್ಮಸ್ ಆಚರಣೆ

(ನ್ಯೂಸ್ ಕಡಬ) newskadaba.com ಕಡಬ, ಡಿ.26. ಪರಿಸರದ ಕ್ರೈಸ್ತ ಬಾಂಧವರು ಒಟ್ಟುಗೂಡಿ ವರ್ಷಂಪ್ರತಿ ನಡೆಸಿಕೊಂಡು ಬರುತ್ತಿರುವ ಸಂಯುಕ್ತ ಕ್ರಿಸ್ಮಸ್ ಆಚರಣೆಯನ್ನು ಪುತ್ತೂರು ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ ಪರಮ ಪೂಜ್ಯ ಗೀವರ್ಗೀಸ್ ಮಾರ್ ಮಕಾರಿಯೋಸ್ ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಸಂಜೆ ಕಡಬದ ಆರೋಗ್ಯ ಮಾತಾ ಶಿಲುಬೆ ಗೋಪುರದ ಬಳಿಯಿಂದ ವಿಜೃಂಭಣೆಯ ಕ್ರಿಸ್ಮಸ್ ಸಂದೇಶ ರ್ಯಾಲಿಯು ಆರಂಭಗೊಂಡು, ಕಡಬ ಪೇಟೆಯ ಮೂಲಕ ಸಂಚರಿಸಿ ಬಳಿಕ ಕಡಬ ಸೈಂಟ್ ಜೋಕಿಮ್ಸ್ ದೇವಾಲಯದ ವಠಾರದಲ್ಲಿ ಸಭಾ ಕಾರ್ಯಕ್ರಮ ನಡೆಯಿತು. ಅತಿಥಿಯಾಗಿ ಕಡಬ ತಹಶೀಲ್ದಾರರಾದ ಜಾನ್

► ಕಡಬ: 38 ನೇ ವರ್ಷದ ಸಂಭ್ರಮದ ಸಂಯುಕ್ತ ಕ್ರಿಸ್ಮಸ್ ಆಚರಣೆ Read More »

ಕರಾವಳಿ

ಕಲ್ಲಡ್ಕ: ಜಲೀಲ್‌ ಕರೋಪಾಡಿ ಕೊಲೆ ಆರೋಪಿಗೆ ಚೂರಿ ಇರಿತ ► ಹತ್ಯೆಗೆ ವಿಫಲ ಯತ್ನ, ಕಲ್ಲಡ್ಕ ಬಂದ್

(ನ್ಯೂಸ್ ಕಡಬ) newskadaba.com ಬಂಟ್ವಾಳ, ಡಿ.26. ವಿಟ್ಲ ಕರೋಪಾಡಿಯ ಜಲೀಲ್ ಕೊಲೆ ಆರೋಪಿ ಕೇಶವ ಎಂಬವರಿಗೆ ಚೂರಿ‌ಇರಿದ ಘಟನೆ ಮಂಗಳವಾರ ಸಂಜೆ ಕಲ್ಲಡ್ಕದಲ್ಲಿ ನಡೆದಿದೆ. ಮೇಲೆ ಹೆಲ್ಮೆಟ್ ಧರಿಸಿದ್ದ ಇಬ್ಬರು ಚೂರಿ‌ ಇರಿದು ಪರಾರಿಯಾಗಿದ್ದು, ಕೇಶವರವರ ಕೊಲೆಗೆ ವಿಫಲ ಯತ್ನ ನಡೆದಿದೆ. ಘಟನೆಯಿಂದಾಗಿ ಕಲ್ಲಡ್ಕ ಪೇಟೆ ಸ್ವಯಂಪ್ರೇರಿತವಾಗಿ ಬಂದ್ ಆಗಿದ್ದು, ಪೊಲೀಸರು ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ.  

ಕಲ್ಲಡ್ಕ: ಜಲೀಲ್‌ ಕರೋಪಾಡಿ ಕೊಲೆ ಆರೋಪಿಗೆ ಚೂರಿ ಇರಿತ ► ಹತ್ಯೆಗೆ ವಿಫಲ ಯತ್ನ, ಕಲ್ಲಡ್ಕ ಬಂದ್ Read More »

ಕರಾವಳಿ
Scroll to Top