ಕರಾವಳಿ

ನಿಷೇಧಿತ ಮಾದಕ ವಸ್ತುಗಳ ಮಾರಾಟ ► ಅಂತರ್ರಾಜ್ಯ ಜಾಲವನ್ನು ಭೇದಿಸಿದ ಮಂಗಳೂರು ಪೊಲೀಸರು

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.26. ನಿಷೇಧಿತ ಮಾದಕ ವಸ್ತುಗಳಾದ ಎಲ್ಎಸ್ಡಿ, ಎಂ.ಡಿ ಎಂ.ಎ ಮತ್ತು ಎಂಡಿಎಂ ಟ್ಯಾಬ್ಲೆಟ್ಗಳನ್ನು ನಗರದಲ್ಲಿ ಮಾರಾಟ ಮಾಡುತ್ತಿದ್ದ ಅಂತಾರಾಜ್ಯ ಜಾಲವನ್ನು ಭೇದಿಸಿರುವ ಮಂಗಳೂರು ದಕ್ಷಿಣ ರೌಡಿ ನಿಗ್ರಹ ದಳ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ. ಮಂಗಳೂರು ನಗರದಲ್ಲಿ ನಿಷೇಧಿತ ಮಾದಕ ವಸ್ತುಗಳನ್ನು ಮಾರಾಟ ಮಾಡುತ್ತಿದ್ದ ಬಗ್ಗೆ ಬಂದ ಖಚಿತ ಮಾಹಿತಿಯಂತೆ ನಿಖಿಲ್ ಕೆ.ಬಿ., ಶ್ರವಣ ಪೂಜಾರಿ, ರೋಶನ್ ವೇಗಸ್, ಬಾಶೀಂ ಬಶೀರ್ ಎಂಬವರನ್ನು ಬಂಧಿಸಲಾಗಿತ್ತು. ಬಂಧಿತರು ನೀಡಿದ ಮಾಹಿತಿಯನ್ವಯ ಪ್ರಧಾನ ಆರೋಪಿಗಳಾದ ಹಂಪನಕಟ್ಟೆಯ […]

ನಿಷೇಧಿತ ಮಾದಕ ವಸ್ತುಗಳ ಮಾರಾಟ ► ಅಂತರ್ರಾಜ್ಯ ಜಾಲವನ್ನು ಭೇದಿಸಿದ ಮಂಗಳೂರು ಪೊಲೀಸರು Read More »

ಕರಾವಳಿ

ನಾಳೆ(ಡಿ.26) ಕಡಬದಲ್ಲಿ ಸಂಯುಕ್ತ ಕ್ರಿಸ್ಮಸ್ ಆಚರಣೆ ► ಕ್ರಿಸ್ಮಸ್ ಸಂದೇಶ ರ್ಯಾಲಿ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಕಡಬ, ಡಿ.25. ಪರಿಸರದ ಕ್ರೈಸ್ತ ಬಾಂಧವರು ಒಟ್ಟುಗೂಡಿ ವರ್ಷಂಪ್ರತಿ ನಡೆಸಿಕೊಂಡು ಬರುತ್ತಿರುವ ಸಂಯುಕ್ತ ಕ್ರಿಸ್ಮಸ್ ಆಚರಣೆಯು ಡಿಸೆಂಬರ್ 26ನೇ ಮಂಗಳವಾರದಂದು ಕಡಬದಲ್ಲಿ ನಡೆಯಲಿದೆ. ಸಂಜೆ 5.30 ಕ್ಕೆ ಕಡಬದ ಆರೋಗ್ಯ ಮಾತಾ ಶಿಲುಬೆ ಗೋಪುರದ ಬಳಿಯಿಂದ ವಿಜೃಂಭಣೆಯ ಕ್ರಿಸ್ಮಸ್ ಸಂದೇಶ ರ್ಯಾಲಿ ಆರಂಭಗೊಂಡು, ಕಡಬ ಪೇಟೆಯ ಮೂಲಕ ಸಂಚರಿಸಿ ಸಂಜೆ 06.30 ಗಂಟೆಗೆ ಕಡಬ ಸೈಂಟ್ ಜೋಕಿಮ್ಸ್ ದೇವಾಲಯದ ವಠಾರದಲ್ಲಿ ಸಭಾ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ. ರೆ| ಫಾ| ರೊನಾಲ್ಡ್ ಲೋಬೋ

ನಾಳೆ(ಡಿ.26) ಕಡಬದಲ್ಲಿ ಸಂಯುಕ್ತ ಕ್ರಿಸ್ಮಸ್ ಆಚರಣೆ ► ಕ್ರಿಸ್ಮಸ್ ಸಂದೇಶ ರ್ಯಾಲಿ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ Read More »

ಕರಾವಳಿ

ಮಂಗಳೂರು: ಕ್ರಿಸ್‌ಮಸ್ ದಿನದಂದೇ ತಲವಾರು ದಾಳಿ ► ಯುವಕನ ಬರ್ಬರ ಹತ್ಯೆ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.25. ಯುವಕನೋರ್ವನನ್ನು ತಂಡವೊಂದು ತಲವಾರಿನಿಂದ ಕಡಿದು ಬರ್ಬರವಾಗಿ ಹತ್ಯೆಗೈದ ಘಟನೆ ಪಾಂಡೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯ ಗೋರಿಗುಡ್ಡೆಯ ಪರ್ಪಲ್ ಸ್ಟ್ರೀಟ್ ಎಂಬಲ್ಲಿ ಭಾನುವಾರ ತಡರಾತ್ರಿ ನಡೆದಿದೆ. ಮೃತ ಯುವಕನನ್ನು ಗೋರಿಗುಡ್ಡೆ ನಿವಾಸಿ ಮೆರ್ಲಿಕ್ ಡಿಸೋಜ(26) ಎಂದು ಗುರುತಿಸಲಾಗಿದೆ. ರೌಡಿ ಶೀಟರ್ ಆಗಿದ್ದ ಈತ ರೌಡಿ ಮಂಕಿ ಸ್ಟ್ಯಾಂಡ್ ವಿಜಯ್ ಸಹಚರ ಎಂದು ಹೇಳಲಾಗಿದೆ. ಐದು ಮಂದಿ ತಂಡವೊಂದು ನಿನ್ನೆ ತಡರಾತ್ರಿ ಮನೆಗೆ ನುಗ್ಗಿ ಮೆರ್ಲಿಕ್ ಮೇಲೆ ಯದ್ವಾತದ್ವಾ ತಲವಾರು ಬೀಸಿದ್ದರಿಂದ ಗಂಭೀರ

ಮಂಗಳೂರು: ಕ್ರಿಸ್‌ಮಸ್ ದಿನದಂದೇ ತಲವಾರು ದಾಳಿ ► ಯುವಕನ ಬರ್ಬರ ಹತ್ಯೆ Read More »

ಕರಾವಳಿ

ಸಂವಿಧಾನವನ್ನು ಬದಲಾಯಿಸಲೆಂದೇ ನಾವು ಬಂದಿದ್ದೇವೆ ► ಕೇಂದ್ರ ಸಚಿವ ಅನಂತ್ ಕುಮಾರ್ ಹೆಗ್ಡೆ ವಿವಾದಿತ ಭಾಷಣ

(ನ್ಯೂಸ್ ಕಡಬ) newskadaba.com ಕೊಪ್ಪಳ, ಡಿ.25. ಸದಾ ಒಂದಲ್ಲ ಒಂದು ವಿವಾದಾತ್ಮಕ ಹೇಳಿಕೆಯಿಂದಲೇ ಸುದ್ದಿಯಲ್ಲಿರುವ ಕೇಂದ್ರ ಕೌಶಲ್ಯಾಭಿವೃದ್ಧಿ ಸಚಿವ ಅನಂತ್ ಕುಮಾರ್ ಹೆಗ್ಡೆ ಇದೀಗ ಸಂವಿಧಾನವನ್ನು ಬದಲಾಯಿಸಲು ನಾವು ಬಂದಿದ್ದೇವೆ ಎಂದು ಹೇಳುವುದರ ಮೂಲಕ ವಿವಾದವನ್ನು ಮೈಮೇಲೆ ಎಳೆದುಕೊಂಡಿದ್ದಾರೆ. ಅವರು ಕೊಪ್ಪಳದ ಯಲಬುರ್ಗಾ ತಾಲೂಕಿನ ಕೊಕನೂರಿನಲ್ಲಿ ಬ್ರಾಹ್ಮಣ ಯುವ ಪರಿಷತ್ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಿದ್ದ ವೇಳೆ, ಜಾತ್ಯಾತೀತರು ಎಂದರೆ ಯಾರೆಂದು ಗೊತ್ತಾಗುವುದಿಲ್ಲ. ಅಪ್ಪ ಅಮ್ಮನ ಗುರುತು ಇಲ್ಲದವರನ್ನು ಜಾತ್ಯಾತೀತರು ಎನ್ನಬಹುದು. ನಾವು ಸಂವಿಧಾನಕ್ಕೆ ಗೌರವ ಕೊಡುತ್ತೇವೆ. ಆದ್ರೆ

ಸಂವಿಧಾನವನ್ನು ಬದಲಾಯಿಸಲೆಂದೇ ನಾವು ಬಂದಿದ್ದೇವೆ ► ಕೇಂದ್ರ ಸಚಿವ ಅನಂತ್ ಕುಮಾರ್ ಹೆಗ್ಡೆ ವಿವಾದಿತ ಭಾಷಣ Read More »

ಕರಾವಳಿ

ದ.ಕ. ಕೇಂದ್ರ ಸಹಕಾರಿ ಬ್ಯಾಂಕ್ ಮೂಲಕ ಮಲೇಷ್ಯಾ ಮರಳು ವಿತರಣೆ: ರಾಜೇಂದ್ರ ಕುಮಾರ್ ► ಕಡಬ ಸಿ.ಎ.ಬ್ಯಾಂಕ್ ನೂತನ ಕಟ್ಟಡ ‘ಯೋಗಕ್ಷೇಮ’ ಲೋಕಾರ್ಪಣೆ

(ನ್ಯೂಸ್ ಕಡಬ) newskadaba.com ಕಡಬ, ಡಿ.24. ಮಲೇಷಿಯಾದಿಂದ ಮರಳನ್ನು ಆಮದು ಮಾಡಿಕೊಂಡು ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಮೂಲಕ ಜನಸಾಮಾನ್ಯರಿಗೆ ವಿತರಿಸಲು ನಿರ್ಧರಿಸಲಾಗಿದೆ ಎಂದು ಬ್ಯಾಂಕಿನ ಅಧ್ಯಕ್ಷ ಡಾ| ಎಂ.ಎನ್.ರಾಜೇಂದ್ರ ಕುಮಾರ್ ಹೇಳಿದರು. ಅವರು ಭಾನುವಾರದಂದು ಕಡಬ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ಸುಮಾರು ಎರಡು ಕೋಟಿ ರೂ. ವೆಚ್ಚದ ಸುಸಜ್ಜಿತ ನೂತನ ಕಟ್ಟಡ ‘ಯೋಗ ಕ್ಷೇಮ’ ಸಹಕಾರಿ ಭವನವನ್ನು ಲೋಕಾರ್ಪಣೆ ಮಾಡಿ ಮಾತನಾಡುತ್ತಿದ್ದರು. ಸರಕಾರದ ಈಗಿನ ಮರಳು ನೀತಿಯಿಂದಾಗಿ ಜಿಲ್ಲೆಯಲ್ಲಿ ಮರಳಿನ ಅಭಾವ ತಲೆದೋರಿದೆ. ಹೊಸ

ದ.ಕ. ಕೇಂದ್ರ ಸಹಕಾರಿ ಬ್ಯಾಂಕ್ ಮೂಲಕ ಮಲೇಷ್ಯಾ ಮರಳು ವಿತರಣೆ: ರಾಜೇಂದ್ರ ಕುಮಾರ್ ► ಕಡಬ ಸಿ.ಎ.ಬ್ಯಾಂಕ್ ನೂತನ ಕಟ್ಟಡ ‘ಯೋಗಕ್ಷೇಮ’ ಲೋಕಾರ್ಪಣೆ Read More »

ಕರಾವಳಿ

ಮೂರೇ ತಿಂಗಳಲ್ಲಿ ತುಳು ಕಲಿತ ಜಿಲ್ಲಾ ಎಸ್ಪಿ ಸುಧೀರ್ ಕುಮಾರ್ ರೆಡ್ಡಿ ► ತುಳು ಭಾಷೆಯ ವ್ಯಾಮೋಹದಿಂದ ಮನೆಯಲ್ಲೂ ತುಳುಭಾಷೆ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.24. ತುಳುನಾಡಿನ ಜನಪ್ರಿಯ ಭಾಷೆಯಾದ ತುಳುವನ್ನು ಕೇವಲ ಮೂರು ತಿಂಗಳಲ್ಲಿ ಕಲಿತು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸುಧೀರ್ ಕುಮಾರ್ ರೆಡ್ಡಿಯವರು ಮಾದರಿಯಾಗಿದ್ದಾರೆ. ಮೂಲತಃ ಆಂಧ್ರಪ್ರದೇಶದ ಗುಂಟೂರು ಜಿಲ್ಲೆಯವರಾದ ಸುಧೀರ್ ಕುಮಾರ್ ರೆಡ್ಡಿಯವರು ಕಳೆದ ಆರು ತಿಂಗಳ ಹಿಂದೆ ಜಿಲ್ಲಾ ಎಸ್ಪಿಯಾಗಿ ಅಧಿಕಾರ ಸ್ವೀಕರಿಸುವಾಗ ತೆಲುಗು, ತಮಿಳು, ಕನ್ನಡ, ಹಿಂದಿ, ಇಂಗ್ಲೀಷ್ ಭಾಷೆಗಳಲ್ಲಿ ಪರಿಣತಿಯನ್ನು ಹೊಂದಿದ್ದರು. ಆದರೆ ಕೆಲವು ಹಿರಿಯರು ಕನ್ನಡ ಭಾಷೆ ಮಾತನಾಡಲಾಗದೆ ತಮ್ಮ ಸಮಸ್ಯೆಗಳನ್ನು ತಿಳಿಸಲು ಚಡಪಡಿಸುತ್ತಿದ್ದುದನ್ನು

ಮೂರೇ ತಿಂಗಳಲ್ಲಿ ತುಳು ಕಲಿತ ಜಿಲ್ಲಾ ಎಸ್ಪಿ ಸುಧೀರ್ ಕುಮಾರ್ ರೆಡ್ಡಿ ► ತುಳು ಭಾಷೆಯ ವ್ಯಾಮೋಹದಿಂದ ಮನೆಯಲ್ಲೂ ತುಳುಭಾಷೆ Read More »

ಕರಾವಳಿ

ಉಪ್ಪಿನಂಗಡಿ: ಬೃಹತ್ ಪ್ರಮಾಣದ ಗಾಂಜಾ ಸಾಗಾಟ ಪತ್ತೆ ► 80 ಕೆಜಿ ಗಾಂಜಾ ಸಹಿತ ಕಾರು ವಶಕ್ಕೆ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಡಿ.24. ಕಾರೊಂದರಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಸುಮಾರು 80 ಕಿಲೋಗ್ರಾಂ ಗಾಂಜಾವನ್ನು ಪತ್ತೆಹಚ್ಚಿರುವ ಉಪ್ಪಿನಂಗಡಿ ಪೊಲೀಸರು ಗಾಂಜಾ ಸಹಿತ ಕಾರನ್ನು ವಶಪಡಿಸಿಕೊಂಡ ಘಟನೆ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75 ರ ಶಿರಾಡಿ ಘಾಟ್ ಎಂಬಲ್ಲಿ ಶನಿವಾರ ತಡರಾತ್ರಿ ನಡೆದಿದೆ. ಹೋಂಡಾ ಸಿಟಿ ಕಾರಿನಲ್ಲಿ ಸುಮಾರು ಆರು ಲಕ್ಷ ರೂ. ಮೌಲ್ಯದ 80 ಕೆ.ಜಿ. ಗಾಂಜಾವನ್ನು ಸಾಗಿಸುತ್ತಿದ್ದ ಆರೋಪಿಗಳು ಪೊಲೀಸರ ಕಾರ್ಯಾಚರಣೆ ವೇಳೆ ಕಾಡಿನಲ್ಲಿ ಪರಾರಿಯಾಗಿದ್ದಾರೆ. ಈ ಬಗ್ಗೆ ಉಪ್ಪಿನಂಗಡಿ ಪೊಲೀಸ್

ಉಪ್ಪಿನಂಗಡಿ: ಬೃಹತ್ ಪ್ರಮಾಣದ ಗಾಂಜಾ ಸಾಗಾಟ ಪತ್ತೆ ► 80 ಕೆಜಿ ಗಾಂಜಾ ಸಹಿತ ಕಾರು ವಶಕ್ಕೆ Read More »

ಕರಾವಳಿ

ಮುಲ್ಕಿ: ಉದ್ಯಮಿಯ ಮನೆಯಲ್ಲಿ ಶೂಟೌಟ್ ► ಮನೆಗೆ ಹಾಗೂ ಕಾರಿಗೆ ಹಾನಿ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.24. ಉದ್ಯಮಿಯೋರ್ವರ ಮನೆಗೆ 3 ಸುತ್ತು ಗುಂಡು ಹಾರಾಟ ನಡೆಸಿರುವ ಘಟನೆ ನಗರದ ಹೊರವಲಯದ ಮುಲ್ಕಿ ಬಸ್ ನಿಲ್ದಾಣದ ಬಳಿ ಶನಿವಾರ ರಾತ್ರಿ ನಡೆದಿದೆ. ಬೈಕಿನಲ್ಲಿ ಆಗಮಿಸಿದ ಇಬ್ಬರು ದುಷ್ಕರ್ಮಿಗಳು ಮುಲ್ಕಿ ನಿವಾಸಿ ಉದ್ಯಮಿಯಾಗಿ ಗುರುತಿಸಿಕೊಂಡಿರುವ ನಾಗರಾಜ್ ಮನೆಗೆ ಶೂಟೌಟ್ ನಡೆಸಿದ್ದು, ಇದರಿಂದಾಗಿ ಮನೆಯ ಬಾಗಿಲಿಗೆ ಹಾಗೂ ಕಾರಿಗೆ ಗುಂಡು ತಗುಲಿ ಹಾನಿಯಾಗಿವೆ. ಸ್ಥಳಕ್ಕೆ ಮಂಗಳೂರು ನಗರ ಪೊಲೀಸ್ ಕಮಿಷನರ್ ಟಿ.ಆರ್.ಸುರೇಶ್, ಅಪರಾಧ ವಿಭಾಗದ ಡಿಸಿಪಿ ಉಮಾಪ್ರಶಾಂತ್ ಮತ್ತಿತರ ಹಿರಿಯ ಅಧಿಕಾರಿಗಳು

ಮುಲ್ಕಿ: ಉದ್ಯಮಿಯ ಮನೆಯಲ್ಲಿ ಶೂಟೌಟ್ ► ಮನೆಗೆ ಹಾಗೂ ಕಾರಿಗೆ ಹಾನಿ Read More »

ಕರಾವಳಿ

ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.23. ದಕ್ಷಿಣ ಕನ್ನಡ ಜಿಲ್ಲೆಯ 7 ಶಿಶು ಅಭಿವೃದ್ಧಿ ಯೋಜನೆಗಳಲ್ಲಿ ಖಾಲಿ ಇರುವ 9 ಅಂಗನವಾಡಿ ಕಾರ್ಯಕರ್ತೆ ಹಾಗೂ 23 ಅಂಗನವಾಡಿ ಸಹಾಯಕಿ ಹುದ್ದೆಗಳನ್ನು ಭರ್ತಿ ಮಾಡಲು ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜನವರಿ 22 ದಿನವಾಗಿದ್ದು, ಆಸಕ್ತರು ಕೆಳಗಿನ ವೆಬ್‍ಸೈಟ್ ವಿಳಾಸವನ್ನು ಸಂಪರ್ಕಿಸಬಹುದಾಗಿದೆ. http://www.anganwadirecruit.kar.nic.in ಹೆಚ್ಚಿನ ಮಾಹಿತಿಗಾಗಿ ಸಂಬಂಧಪಟ್ಟ ಶಿಶು ಅಭಿವೃದ್ಧಿ ಯೋಜನಾ ಕಛೇರಿಯನ್ನು ಸಂಪರ್ಕಿಸಬಹುದೆಂದು ಪ್ರಕಟಣೆ ತಿಳಿಸಿದೆ.

ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ ಅರ್ಜಿ ಆಹ್ವಾನ Read More »

ಕರಾವಳಿ

ಬೆದ್ರಾಳ: ಕೆಎಸ್ಸಾರ್ಟಿಸಿ ಬಸ್ ದ್ವಿಚಕ್ರ ವಾಹನಕ್ಕೆ ಢಿಕ್ಕಿ ► ತಾಯಿ-ಮಗಳು ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ) newskadaba.com ಪುತ್ತೂರು, ಡಿ.23. ಕೆಎಸ್ಸಾರ್ಟಿಸಿ ಬಸ್ಸೊಂದು ಹೀರೋ ಪ್ಲೆಶರ್ ದ್ವಿಚಕ್ರ ವಾಹನಕ್ಕೆ ಢಿಕ್ಕಿ ಹೊಡೆದ ಪರಿಣಾಮ ತಾಯಿ – ಮಗು ಸ್ಥಳದಲ್ಲೇ ಮೃತಪಟ್ಟ ಘಟನೆ ಶನಿವಾರ ಸಂಜೆ ಇಲ್ಲಿಗೆ ಸಮೀಪದ ಬೆದ್ರಾಳ ಎಂಬಲ್ಲಿ ನಡೆದಿದೆ. ಪುತ್ತೂರಿನಿಂದ ಶಾಂತಿಗೋಡು ತೆರಳುತ್ತಿದ್ದ‌ ಕೆಎಸ್ಸಾರ್ಟಿಸಿ ಬಸ್ ಬೆದ್ರಾಳ ರೈಲ್ವ ಮೇಲ್ಸೇತುವೆ ಸಮೀಪ ದ್ವಿಚಕ್ರ ವಾಹನವನ್ನು ಓವರ್ ಟೇಕ್ ಮಾಡಿ ಮುಂದುಗಡೆ ಹೋಗುವ ಧಾವಂತದಲ್ಲಿ ಬಸ್ಸಿನ ಹಿಂಭಾಗ ದ್ವಿಚಕ್ರ ವಾಹನಕ್ಕೆ ಢಿಕ್ಕಿ ಹೊಡೆದಿದ್ದು, ವಾಹನದಿಂದ ರಸ್ತೆಗೆ ಎಸೆಯಲ್ಪಟ್ಟ ತಾಯಿ-ಮಗು ಸ್ಥಳದಲ್ಲೇ

ಬೆದ್ರಾಳ: ಕೆಎಸ್ಸಾರ್ಟಿಸಿ ಬಸ್ ದ್ವಿಚಕ್ರ ವಾಹನಕ್ಕೆ ಢಿಕ್ಕಿ ► ತಾಯಿ-ಮಗಳು ಸ್ಥಳದಲ್ಲೇ ಮೃತ್ಯು Read More »

ಕರಾವಳಿ
Scroll to Top