ಕರಾವಳಿ

ನೆಟ್ಟಣ, ಬಿಳಿನೆಲೆ ಪರಿಸರದಲ್ಲಿ ಕಾಡಾನೆ ಪ್ರತ್ಯಕ್ಷ ► ಕಿದು CPCRIನಲ್ಲಿ ಆನೆ ದಾಳಿ

(ನ್ಯೂಸ್ ಕಡಬ) newskadaba.com ಕಡಬ, ಡಿ.21. ಇಲ್ಲಿಗೆ ಸಮೀಪದ ನೆಟ್ಟಣದಲ್ಲಿರುವ ಕಿದು ಸಿ.ಪಿ.ಸಿ.ಆರ್.ಐ ತೆಂಗು ಹಾಗೂ ಅಡಕೆ ಸಂಶೋಧನಾ ಕೇಂದ್ರಕ್ಕೆ ಆನೆಗಳ ಹಿಂಡು ಲಗ್ಗೆ ಇಟ್ಟು ಅಲ್ಲಿನ ಕೃಷಿ ನಾಶ ಮಾಡಿದ ಘಟನೆ ಮಂಗಳವಾರ ತಡ ರಾತ್ರಿ ನಡೆದಿದೆ. ಕೇಂದ್ರದ ತಡೆ ಬೇಲಿ ಮುರಿದು ಒಳನುಗ್ಗಿರುವ ಆನೆಗಳು ಆರು ತೆಂಗಿನ ಮರ, ಹತ್ತಾರು ಬಾಳೆ ಗಿಡ ಹಾಗೂ ಅಡಕೆ ಸಸಿಗಳನ್ನು ನಾಶ ಮಾಡಿವೆ. ಈ ಬಗ್ಗೆ ಅಲ್ಲಿನ ಅಧಿಕಾರಿಗಳು ಅರಣ್ಯ ಅಧಿಕಾರಿಗಳಿಗೆ ದೂರು ನೀಡಿದ್ದಾರೆ. ನೆಟ್ಟಣ, ಬಿಳಿನೆಲೆ […]

ನೆಟ್ಟಣ, ಬಿಳಿನೆಲೆ ಪರಿಸರದಲ್ಲಿ ಕಾಡಾನೆ ಪ್ರತ್ಯಕ್ಷ ► ಕಿದು CPCRIನಲ್ಲಿ ಆನೆ ದಾಳಿ Read More »

ಕರಾವಳಿ

ಕೇಪು ಶಾಲೆಯಲ್ಲಿ ವಾರ್ಷಿಕೋತ್ಸವ ಪ್ರಯುಕ್ತ ಕ್ರೀಡಾಕೂಟ

(ನ್ಯೂಸ್ ಕಡಬ) newskadaba.com ಕಡಬ, ಡಿ.20. ಕುಟ್ರುಪ್ಪಾಡಿ ಗ್ರಾಮದ ಕೇಪು ಸರಕಾರಿ ಹಿ.ಪ್ರಾ.ಶಾಲೆಯ ವಾರ್ಷಿಕೋತ್ಸವ ಪೂರ್ವಭಾವಿಯಾಗಿ ಶಾಲಾ ಹಿರಿಯ ವಿದ್ಯಾರ್ಥಿಗಳಿಗೆ, ವಿದ್ಯಾರ್ಥಿಗಳ ಪೋಷಕರಿಗೆ ಹಾಗೂ ಊರವರಿಗೆ ಆಯೋಜಿಸಲಾಗಿದ್ದ  ಕ್ರೀಡಾಕೂಟವು ಇತ್ತೀಚೆಗೆ ಶಾಲಾ ಮೈದಾನದಲ್ಲಿ ಜರಗಿತು. ಜೇಸಿಐ ಕಡಬ ಕದಂಬ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ನಾಗರಾಜ್ ಎನ್.ಕೆ. ದೀಪ ಬೆಳಗಿಸಿ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿ, ಕ್ರೀಡೆಯಿಂದ ಮಾನಸಿಕ ಹಾಗೂ ದೈಹಿಕ ಆರೋಗ್ಯ ವೃದ್ಧಿಸುತ್ತದೆ. ಗ್ರಾಮದ ಎಲ್ಲರೂ ಸೇರಿಕೊಂಡು ಕಾರ್ಯಕ್ರಮಗಳನ್ನು ನಡೆಸಿದಾಗ ಗ್ರಾಮದೊಳಿಗನ ಬಾಂಧವ್ಯವೂ ವೃದ್ಧಿಸುತ್ತದೆ ಎಂದರು. ಕ್ರೀಡಾಕೂಟಕ್ಕೆ  ತೆಂಗಿನಕಾಯಿ ಒಡೆದು

ಕೇಪು ಶಾಲೆಯಲ್ಲಿ ವಾರ್ಷಿಕೋತ್ಸವ ಪ್ರಯುಕ್ತ ಕ್ರೀಡಾಕೂಟ Read More »

ಕರಾವಳಿ

ಕೊಯಿಲ: ಗ್ರಾ.ಪಂ. ಉಪ ಚುನಾವಣೆ ► ಬಿಜೆಪಿ ಬೆಂಬಲಿತ ಅಭ್ಯರ್ಥಿ ಲಿಂಗಪ್ಪ ಕುಂಬಾರ ಗೆಲುವು

(ನ್ಯೂಸ್ ಕಡಬ) newskadaba.com ಪುತ್ತೂರು, ಡಿ.20. ಸದಸ್ಯರೋರ್ವರ ನಿಧನದಿಂದ ತೆರವುಗೊಂಡಿದ್ದ ಕೊಯಿಲ ಗ್ರಾಮ ಪಂಚಾಯತ್‌ನ ಒಂದು ಸ್ಥಾನಕ್ಕೆ ನಡೆದ ಉಪಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿ ಲಿಂಗಪ್ಪ ಕುಂಬಾರ ಗೆಲುವು ಸಾಧಿಸಿದ್ದಾರೆ. ಹಿಂದುಳಿದ ವರ್ಗ ‘ಎ’ ಗೆ ಮೀಸಲಾಗಿದ್ದ 4ನೇ ವಾರ್ಡ್‌ನಲ್ಲಿ ಪ್ರತಿನಿಧಿಸಿದ್ದ ಬಿಜೆಪಿ ಬೆಂಬಲಿತ ಸದಸ್ಯ ನಾಗೇಶ ಕುಂಬಾರರವರ ನಿಧನದ ಹಿನ್ನೆಲೆಯಲ್ಲಿ ನಡೆದ ಉಪಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿ ಲಿಂಗಪ್ಪ ಕುಂಬಾರರು ಕಾಂಗ್ರೆಸ್ ಅಭ್ಯರ್ಥಿ ದಯಾನಂದ ಸಾಲಿಯಾನ್‌ರವರನ್ನು 95 ಮತಗಳ ಅಂತರದಿಂದ ಸೋಲಿಸಿದರು.

ಕೊಯಿಲ: ಗ್ರಾ.ಪಂ. ಉಪ ಚುನಾವಣೆ ► ಬಿಜೆಪಿ ಬೆಂಬಲಿತ ಅಭ್ಯರ್ಥಿ ಲಿಂಗಪ್ಪ ಕುಂಬಾರ ಗೆಲುವು Read More »

ಕರಾವಳಿ

ಕಳಾರ – ಅಡ್ಕಾಡಿ ರಸ್ತೆ ಅಭಿವೃದ್ಧಿಗೆ ಶಾಸಕ ಅಂಗಾರ ಚಾಲನೆ

(ನ್ಯೂಸ್ ಕಡಬ) newskadaba.com ಕಡಬ, ಡಿ.20. ಸರಕಾರದ ಅನುದಾನದಲ್ಲಿ ನಡೆಯುವ ಕಾಮಗಾರಿಗಳು ಸುಸೂತ್ರವಾಗಿ ಮತ್ತು ಗುಣಮಟ್ಟದ ಕೊರತೆಯಾಗದಂತೆ ನಡೆಯಲು ಸ್ಥಳೀಯ ಜನರು ಹಾಗೂ ಜನಪ್ರತಿನಿಧಿಗಳು ಹೆಚ್ಚಿನ ಮುತುವರ್ಜಿ ವಹಿಸಬೇಕು ಎಂದು ಸುಳ್ಯ ಶಾಸಕ ಎಸ್.ಅಂಗಾರ ಅವರು ನುಡಿದರು. ಅವರು ಕರ್ನಾಟಕ ಅಲ್ಪಸಂಖ್ಯಾತ ಕಾಲನಿಗಳ ಮೂಲಭೂತ ಸೌಕರ್ಯ ಅಭಿವೃದ್ಧಿ ಕಾಮಗಾರಿ ಯೋಜನೆಯಡಿಯಲ್ಲಿ 08 ಲಕ್ಷ ರೂ. ಅನುದಾನದಲ್ಲಿ  ನಡೆಯಲಿರುವ ಕುಟ್ರುಪ್ಪಾಡಿ ಗ್ರಾಮದ ಕಳಾರ-ಅಡ್ಕಾಡಿ ರಸ್ತೆಯ ಅಭಿವೃದ್ಧಿ ಕಾಮಗಾರಿಗೆ ಗುದ್ದಲಿಪೂಜೆ ನೆರವೇರಿಸಿ ಮಾತನಾಡಿದರು. ಕಾಮಗಾರಿ ನಡೆಯುವ ವೇಳೆ ಸ್ಥಳೀಯವಾಗಿ ಎದುರಾಗುವ

ಕಳಾರ – ಅಡ್ಕಾಡಿ ರಸ್ತೆ ಅಭಿವೃದ್ಧಿಗೆ ಶಾಸಕ ಅಂಗಾರ ಚಾಲನೆ Read More »

ಕರಾವಳಿ

ಪದವು: ಬೈಕ್ ಗಳ ಮಧ್ಯೆ ಢಿಕ್ಕಿ ► ಸವಾರರಿಬ್ಬರು ಗಂಭೀರ

(ನ್ಯೂಸ್ ಕಡಬ) newskadaba.com ಕಡಬ, ಡಿ.19. ಉಪ್ಪಿನಂಗಡಿ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಕುಂತೂರು ಪದವು ಎಂಬಲ್ಲಿ ಬೈಕ್ ಮಧ್ಯೆ ಅಪಘಾತ ಉಂಟಾಗಿ ಎರಡೂ ಬೈಕಿನ ಸವಾರರೂ ಗಂಭೀರ ಗಾಯಗೊಂಡ ಘಟನೆ ಮಂಗಳವಾರದಂದು ನಡೆದಿದೆ. ಗಾಯಗೊಂಡವರನ್ನು ಪುತ್ತೂರು ಒಕ್ಕಲಿಗ ಗೌಡ ಸಹಕಾರಿ ಸಂಘದ ಕಡಬ ಶಾಖೆಯ ಪಿಗ್ಮಿ ಸಂಗ್ರಾಹಕ ಪುತ್ತೂರು ತಾಲೂಕಿನ ಕೊಂಬಾರು ಗ್ರಾಮದ ಆರ್ದೇಲ್ ನಿವಾಸಿ ಈಶ್ವರ ಗೌಡರ ಪುತ್ರ ಬೆಳಿಯಪ್ಪ ಗೌಡ(32) ಎಂದು ಗುರುತಿಸಲಾಗಿದೆ. ಇನ್ನೊಂದು ಬೈಕಿನ ಸವಾರ ಪೆರಾಬೆ ನಿವಾಸಿ ಭುವನ್(22) ಎಂದು

ಪದವು: ಬೈಕ್ ಗಳ ಮಧ್ಯೆ ಢಿಕ್ಕಿ ► ಸವಾರರಿಬ್ಬರು ಗಂಭೀರ Read More »

ಕರಾವಳಿ

ಮಕ್ಕಳನ್ನು ಸಮಾಜಕ್ಕೆ ಪೂರಕವಾಗಿ ರೂಪಿಸುವ ಶಿಕ್ಷಣ ಬೇಕಾಗಿದೆ: ಸುಬ್ರಹ್ಮಣ್ಯಶ್ರೀ

(ನ್ಯೂಸ್ ಕಡಬ) newskadaba.com ಕಡಬ, ಡಿ.19. ಶಿಕ್ಷಣವೆಂಬುದು ಕೇವಲ ಬದುಕಿಗೋಸ್ಕರ ಎನ್ನುವ ಧೋರಣೆಯನ್ನು ಅಳಿಸಿ ಹಾಕಿ ಮಕ್ಕಳು ಸಮಾಜಕ್ಕೆ ಪೂರಕವಾಗಿ ರೂಪುಗೊಳ್ಳುವ ಶಿಕ್ಷಣವನ್ನು ನೀಡಬೇಕು ಎಂದು ಸುಬ್ರಹ್ಮಣ್ಯ ಮಠಾಧೀಶ ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿ ನುಡಿದರು. ಅವರು ಸೋಮವಾರ ರಾಮಕುಂಜದ ಶ್ರೀ ರಾಮಕುಂಜೇಶ್ವರ ಪ.ಪೂ.ಕಾಲೇಜು ಮತ್ತು ಶ್ರೀ ರಾಮಕುಂಜೇಶ್ವರ ಪ್ರೌಢಶಾಲೆಯ ವಾರ್ಷಿಕೋತ್ಸವದ ಪ್ರಯುಕ್ತ ಹಮ್ಮಿಕೊಳ್ಳಲಾದ ಕಲೋತ್ಸವ ಕಾರ್ಯಕ್ರಮದಲ್ಲಿ ಸಾನಿಧ್ಯ ವಹಿಸಿ ಆಶೀರ್ವಚನ ನೀಡುತ್ತಿದ್ದರು. ಇಂದು ಸಮಾಜದ ತುಂಬಾ ಕ್ರೌರ್ಯದಿಂದ ಖುಷಿ ಅನುಭವಿಸುವ ಮನಸ್ಸುಗಳು ಹೆಚ್ಚಾಗಿವೆ. ಆದುದರಿಂದ ಶಿಕ್ಷಣವು

ಮಕ್ಕಳನ್ನು ಸಮಾಜಕ್ಕೆ ಪೂರಕವಾಗಿ ರೂಪಿಸುವ ಶಿಕ್ಷಣ ಬೇಕಾಗಿದೆ: ಸುಬ್ರಹ್ಮಣ್ಯಶ್ರೀ Read More »

ಕರಾವಳಿ

ಕಡಬದ 108 ಆಂಬ್ಯುಲೆನ್ಸ್ ನಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ ಮಹಿಳೆ

(ನ್ಯೂಸ್ ಕಡಬ) newskadaba.com ಕಡಬ, ಡಿ.19. ಹೆರಿಗೆ ನೋವಿನಿಂದ ಆಸ್ಪತ್ರೆಗೆ ತೆರಳುವ ಹಾದಿ ಮಧ್ಯೆ ಕಡಬದ 108 ಆಂಬ್ಯುಲೆನ್ಸ್ ನಲ್ಲಿ ಮಹಿಳೆಯೋರ್ವರು ಗಂಡು ಮಗುವಿಗೆ ಜನ್ಮ ನೀಡಿದ ಘಟನೆ ಮಂಗಳವಾರದಂದು ಮುಂಜಾನೆ 4.45ರ ಸುಮಾರಿಗೆ ನಡೆದಿದೆ. ಹೆರಿಗೆ ನೋವೆಂದು ಕಡಬದ 108 ಆಂಬ್ಯುಲೆನ್ಸ್ ನಲ್ಲಿ ಆಸ್ಪತ್ರೆಗೆ ತೆರಳುತ್ತಿದ್ದ ಆಲಂಕಾರು ಸಮೀಪದ ನಡುಗುಡ್ಡೆ ನಿವಾಸಿ ಲಲಿತಾ(38) ಪುತ್ತೂರು ಕೋಡಿಯಾಡಿ ಮಾರ್ಗ ಮಧ್ಯೆ ಗಂಡು ಗಂಡು ಮಗುವಿಗೆ ಜನ್ಮ ನೀಡಿದ್ದಾರೆ‌. ಇದೀಗ ತಾಯಿ-ಮಗು ಆರೋಗ್ಯದಿಂದಿದ್ದು, ಪುತ್ತೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಸುಸೂತ್ರ

ಕಡಬದ 108 ಆಂಬ್ಯುಲೆನ್ಸ್ ನಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ ಮಹಿಳೆ Read More »

ಕರಾವಳಿ

ಗುಜರಾತ್, ಹಿಮಾಚಲ ಪ್ರದೇಶ ಚುನಾವಣೆಯಲ್ಲಿ ಬಿಜೆಪಿ ಜಯಭೇರಿ ► ಗೋಳಿತ್ತಡಿಯಲ್ಲಿ ಬಿಜೆಪಿ ಕಾರ್ಯಕರ್ತರಿಂದ ಸಂಭ್ರಮಾಚರಣೆ

(ನ್ಯೂಸ್ ಕಡಬ) newskadaba.com ಕಡಬ, ಡಿ.18. ಉಪ್ಪಿನಂಗಡಿ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಗೋಳಿತ್ತಡಿಯಲ್ಲಿ ಬಿಜೆಪಿ ಕಾರ್ಯಕರ್ತರಿಂದ ಹರ್ಷಾಚರಣೆ ನಡೆಯಿತು. ಈ ಸಂದರ್ಭದಲ್ಲಿ ಬಿಜೆಪಿ ನೆಲ್ಯಾಡಿ ಶಕ್ತಿ ಕೇಂದ್ರದ ಅಧ್ಯಕ್ಷ ಧರ್ಮಪಾಲ ರಾವ್, ಸುಳ್ಯ ಮಂಡಲ ಕಾರ್ಯದರ್ಶಿ ಲಕ್ಷ್ಮೀ ನಾರಾಯಣ ರಾವ್, ತಾಲೂಕು ಪಂಚಾಯಿತಿ ಸದಸ್ಯರಾದ ಜಯಂತಿ ಆರ್., ತೇಜಸ್ವಿನಿ ಕಟ್ಟಪುಣಿ, ರಾಮಕುಂಜ ಗ್ರಾಮ ಪಂಚಾಯಿತಿ ಅಧ್ಯಕ್ಷ ಪ್ರಶಾಂತ್ ಅರ್.ಕೆ. ಮೊದಲಾದವರು ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಸಿಡಿಸಲಾದ ಪಟಾಕಿಯ ಕಸವನ್ನು ಕಾರ್ಯಕರ್ತರು ಗುಡಿಸಿ ಸ್ವಚ್ಚಗೊಳಿಸಿ ಸ್ವಚ್ಛ ಭಾರತದ

ಗುಜರಾತ್, ಹಿಮಾಚಲ ಪ್ರದೇಶ ಚುನಾವಣೆಯಲ್ಲಿ ಬಿಜೆಪಿ ಜಯಭೇರಿ ► ಗೋಳಿತ್ತಡಿಯಲ್ಲಿ ಬಿಜೆಪಿ ಕಾರ್ಯಕರ್ತರಿಂದ ಸಂಭ್ರಮಾಚರಣೆ Read More »

ಕರಾವಳಿ

ಮಂಗಳೂರು: ತಂಡದಿಂದ ಚೂರಿ ಇರಿತ ► ನಾಲ್ವರಿಗೆ ಗಾಯ, ಓರ್ವ ಗಂಭೀರ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.18. ತಂಡವೊಂದು ನಾಲ್ಕು ಮಂದಿಗೆ ತಲವಾರಿನಿಂದ ಇರಿದಿದ್ದರಿಂದ ಓರ್ವ ಗಂಭೀರ ಗಾಯಗೊಂಡು, ಮೂವರು ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾದ ಘಟನೆ ನಗರದ ರಾವ್ ಆ್ಯಂಡ್ ರಾವ್ ಸರ್ಕಲ್ ಸಮೀಪದ ಹರ್ಷ ಬಾರ್ ಬಳಿ ಸೋಮವಾರ ರಾತ್ರಿ ನಡೆದಿದೆ. ಗಂಭೀರ ಗಾಯಗೊಂಡಿರುವ ಗಾಯಾಳುವನ್ನು ಬಂದರ್‌ ನಿವಾಸಿ ಶಫೀಕ್ (45) ಎಂದು ಗುರುತಿಸಲಾಗಿದ್ದು, ಶಫೀಕ್‌ಗೆ ಮೂವರ ತಂಡವೊಂದು ಹಿಗ್ಗಾಮುಗ್ಗ ಥಳಿಸುವುದನ್ನು ಕಂಡ ಅನೀಸ್ (22), ಹಫೀಝ್ (22) ಹಾಗೂ ಸ್ಥಳೀಯ ಪಾನ್ ಅಂಗಡಿ ವ್ಯಾಪಾರಿಯೊಬ್ಬರು

ಮಂಗಳೂರು: ತಂಡದಿಂದ ಚೂರಿ ಇರಿತ ► ನಾಲ್ವರಿಗೆ ಗಾಯ, ಓರ್ವ ಗಂಭೀರ Read More »

ಕರಾವಳಿ

ಕೌಕ್ರಾಡಿ: ಪೂಜೆಗೆ ಮಾವಿನ ಎಲೆ ಬೇಕೆಂದು ನಂಬಿಸಿ ಕಳ್ಳತನ ► ನಗ, ನಗದನ್ನು ದೋಚಿದ ಅಪರಿಚಿತ ವ್ಯಕ್ತಿ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಡಿ.18. ಪೂಜೆಗೆ ಮಾವಿನ ಎಲೆ ಹಾಗೂ ಹಿಂಗಾರ ಬೇಕೆಂದು ನಂಬಿಸಿ ಮನೆಯ ಮಾಲಕನನ್ನು ತೋಟಕ್ಕೆ ಕಳುಹಿಸಿ ಮನೆಯಿಂದ ನಗ ನಗದನ್ನು ಕದ್ದೊಯ್ದ ಘಟನೆ ಕೌಕ್ರಾಡಿ ಗ್ರಾಮದ ಪೊಟ್ಲಡ್ಕ ಎಂಬಲ್ಲಿ ಸೋಮವಾರ ಸಂಜೆ ನಡೆದಿದೆ. ಅಪರಿಚಿತ ವ್ಯಕ್ತಿಯಿಂದ ಮೋಸಕ್ಕೊಳಗಾದವರನ್ನು ಕೌಕ್ರಾಡಿ ಗ್ರಾಮದ ಪೊಟ್ಲಡ್ಕ ನಿವಾಸಿ ಎಲ್ಯಣ್ಣ ಗೌಡ (70) ಎಂದು ಗುರುತಿಸಲಾಗಿದೆ. ಸೋಮವಾರ ಸಂಜೆ ಅವರ ಮನೆಗೆ ಬೈಕೊಂದರಲ್ಲಿ ಬಂದ ಯುವಕನೋರ್ವ ನಾಳೆ ನಮ್ಮ ಮನೆಯಲ್ಲಿ ಪೂಜೆ ಇದ್ದು ಅದಕ್ಕೆ ಮಾವಿನ ಎಲೆ

ಕೌಕ್ರಾಡಿ: ಪೂಜೆಗೆ ಮಾವಿನ ಎಲೆ ಬೇಕೆಂದು ನಂಬಿಸಿ ಕಳ್ಳತನ ► ನಗ, ನಗದನ್ನು ದೋಚಿದ ಅಪರಿಚಿತ ವ್ಯಕ್ತಿ Read More »

ಕರಾವಳಿ
Scroll to Top