ಕರಾವಳಿ

ಉಪ್ಪಿನಂಗಡಿ: ದರೋಡೆ ಪ್ರಕರಣದ ಆರೋಪಿ ಪೊಲೀಸ್ ಬಲೆಗೆ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಡಿ.18. ದರೋಡೆ ಪ್ರಕರಣಕ್ಕೆ ಸಂಬಂಧಿಸಿ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳಲ್ಲಿ ಓರ್ವನನ್ನು ಉಪ್ಪಿನಂಗಡಿ ಪೊಲೀಸರು ಬಂಧಿಸಿದ ಘಟನೆ ಸೋಮವಾರದಂದು ನಡೆದಿದೆ. ಬಂಧಿತ ಆರೋಪಿಯನ್ನು ಕುಖ್ಯಾತ ಕ್ರಿಮಿನಲ್ ಮಹಮ್ಮದ್ ಅಲ್ತಾಫ್ ಎಂದು ಗುರುತಿಸಲಾಗಿದೆ. ಅಲ್ತಾಫ್ ತಲೆಮರೆಸಿಕೊಂಡಿರುವ ಇನ್ನೋರ್ವ ಆರೋಪಿಯೊಂದಿಗೆ ಸೇರಿಕೊಂಡು ಪಾರ್ಕ್, ನಿರ್ಜನ ಪ್ರದೇಶದಲ್ಲಿ ಸಿಗುವ ಪ್ರೇಮಿಗಳನ್ನು, ಒಬ್ಬಂಟಿ ವ್ಯಕ್ತಿಗಳನ್ನು ಬೆದರಿಸಿ ಚಿನ್ನಾಭರಣ ಹಾಗೂ ಹಣವನ್ನು ದೋಚುವುದನ್ನೇ ವೃತ್ತಿಯಾಗಿಸಿಕೊಂಡಿದ್ದರು. ಆದರೆ ಮರ್ಯಾದೆಗೆ ಅಂಜಿ ಯಾರು ಕೂಡಾ ಈ ಬಗ್ಗೆ ದೂರು ದಾಖಲಿಸಲು ಮುಂದಾಗುತ್ತಿರಲಿಲ್ಲ. ಇತ್ತೀಚೆಗೆ […]

ಉಪ್ಪಿನಂಗಡಿ: ದರೋಡೆ ಪ್ರಕರಣದ ಆರೋಪಿ ಪೊಲೀಸ್ ಬಲೆಗೆ Read More »

ಕರಾವಳಿ

ಗುಜರಾತ್ ಹಾಗೂ ಹಿಮಾಚಲ ಪ್ರದೇಶದಲ್ಲಿ ಬಿಜೆಪಿ ಅಧಿಕಾರಕ್ಕೆ ► ಕಡಬದಲ್ಲಿ ಬಿಜೆಪಿಯಿಂದ ಪಟಾಕಿ ಸಿಡಿಸಿ ಸಂಭ್ರಮಾಚರಣೆ

(ನ್ಯೂಸ್ ಕಡಬ) newskadaba.com ಕಡಬ, ಡಿ.18. ಗುಜರಾತ್ ಹಾಗೂ ಹಿಮಾಚಲ ಪ್ರದೇಶ ಚುನಾವಣೆಯಲ್ಲಿ ಬಿಜೆಪಿ ಪಕ್ಷವು ಬಹುಮತದೊಂದಿಗೆ ವಿಜಯದ ನಗೆ ಬೀರುತ್ತಿದ್ದಂತೆ ರಾಷ್ಟ್ರದಾದ್ಯಂತ ಬಿಜೆಪಿಯಲ್ಲಿ ಸಂಭ್ರಮಾಚರಣೆ ಮನೆಮಾಡಿದೆ. ಕಡಬ ಬಿಜೆಪಿ ಶಕ್ತಿ ಕೇಂದ್ರದ ವತಿಯಿಂದ ಕಡಬ ಪೇಟೆಯಲ್ಲಿ ಬಿಜೆಪಿ ಕಾರ್ಯಕರ್ತರು ಪಟಾಕಿ ಸಿಡಿಸಿ ಸಂಭ್ರಮಿಸಿದರು. ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಸಮಿತಿಯ ಸದಸ್ಯರಾದ ಕೃಷ್ಣ ಶೆಟ್ಟಿ, ಮಾಜಿ‌ ಅಧ್ಯಕ್ಷರಾದ ಸತೀಶ್ ನಾಯ್ಕ್, ಎಪಿಎಂಸಿ ಸದಸ್ಯರಾದ ಪುಲಸ್ತ್ಯಾ ರೈ, ಮೇದಪ್ಪ ಗೌಡ ಡೆಪ್ಪುಣಿ, ಹಿಂದೂ ಮುಖಂಡ ರವಿರಾಜ್ ಶೆಟ್ಟಿ,

ಗುಜರಾತ್ ಹಾಗೂ ಹಿಮಾಚಲ ಪ್ರದೇಶದಲ್ಲಿ ಬಿಜೆಪಿ ಅಧಿಕಾರಕ್ಕೆ ► ಕಡಬದಲ್ಲಿ ಬಿಜೆಪಿಯಿಂದ ಪಟಾಕಿ ಸಿಡಿಸಿ ಸಂಭ್ರಮಾಚರಣೆ Read More »

ಕರಾವಳಿ

ವಿಟ್ಲ ಪರಿಸರದಲ್ಲಿ ಮುಂದುವರಿದ ಕಳ್ಳರ ಕಾಟ ► ಮನೆಯ ಮುಂಭಾಗದ ಬೀಗ ಮುರಿದು ಕಳ್ಳತನ

(ನ್ಯೂಸ್ ಕಡಬ) newskadaba.com ವಿಟ್ಲ, ಡಿ.18. ವಿಟ್ಲ ಪರಿಸರದಲ್ಲಿ ಕಳ್ಳರ ಕಾಟ ಕಳೆದ ಕೆಲವು ದಿನಗಳಿಂದ ಹೆಚ್ಚಾಗುತ್ತಿದ್ದು, ಯಾರೂ ಇಲ್ಲದ ವೇಳೆ ಮನೆಯೊಂದರ ಒಳನುಗ್ಗಿರುವ ಕಳ್ಳರು ಲಕ್ಷಾಂತರ ರೂ. ಮೌಲ್ಯದ ಸ್ವತ್ತುಗಳನ್ನು ಎಗರಿಸಿದ ಘಟನೆ ಸೋಮವಾರದಂದು ಬೆಳಕಿಗೆ ಬಂದಿದೆ. ಇಲ್ಲಿನ ಕೇಪು ಗ್ರಾಮದ ಕುಕ್ಕೆಬೆಟ್ಟು ನಿವಾಸಿ ಕೆ.ಪಿ ಸುಲೈಮಾನ್ ಎಂಬವರ ಮನೆಯ ಮುಂಬಾಗಿಲು ಮುರಿದು ಒಳ ನುಗ್ಗಿರುವ ಕಳ್ಳರು ಮನೆಯ ನಾಲ್ಕು ಕೋಣೆಯ ಕಪಾಟ್ ಗಳಲ್ಲಿ ಸ್ವತ್ತಿಗಾಗಿ ಜಾಲಾಡಿದ್ದಾರೆ. ನಂತರ ವಿದೇಶಿಯ ವಸ್ತುಗಳಾದ 10 ಹಾಲಿನ ಹುಡಿ

ವಿಟ್ಲ ಪರಿಸರದಲ್ಲಿ ಮುಂದುವರಿದ ಕಳ್ಳರ ಕಾಟ ► ಮನೆಯ ಮುಂಭಾಗದ ಬೀಗ ಮುರಿದು ಕಳ್ಳತನ Read More »

ಕರಾವಳಿ

ಕೋರಿಯಾರ್: ಕುಮಾರಧಾರಾ ನದಿಯಲ್ಲಿ ಮುಳುಗಿ ಬಾಲಕ ಮೃತ್ಯು

(ನ್ಯೂಸ್ ಕಡಬ) newskadaba.com ಕಡಬ, ಡಿ.18. ಮನೆಕೆಲಸಕ್ಕಾಗಿ ಮರಳು ತೆಗೆಯಲೆಂದು ಮನೆಯವರೊಂದಿಗೆ ನದಿಗೆ ತೆರಳಿದ್ದ ಬಾಲಕನೋರ್ವ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಸುಳ್ಯ ತಾಲೂಕಿನ ಕೇನ್ಯ ಗ್ರಾಮದ ಕೋರಿಯಾರ್ ಕುಮಾರಧಾರಾ ನದಿಯಲ್ಲಿ ಭಾನುವಾರದಂದು ನಡೆದಿದೆ. ಮೃತ ಬಾಲಕನನ್ನು ಸುಳ್ಯ ತಾಲೂಕಿನ ಐವತ್ತೊಕ್ಳು ಗ್ರಾಮದ ಕಂಡೂರು ನಿವಾಸಿ ನಾರಾಯಣ ಗೌಡ ಎಂಬವರ ಪುತ್ರ ಮನೋಜ್(14) ಎಂದು ಗುರುತಿಸಲಾಗಿದೆ. ಮನೋಜ್ ತನ್ನ ಚಿಕ್ಕಪ್ಪನಿಗೆ ಆಶ್ರಯ ಯೋಜನೆಯಲ್ಲಿ ಮಂಜೂರಾದ ಮನೆಯ ಕಾಮಗಾರಿಗಾಗಿ ಮರಳನ್ನು ತರಲು ಪೋಷಕರೊಂದಿಗೆ ಕುಮಾರಧಾರ ನದಿಗೆ ತೆರಳಿದ್ದು, ಮಧ್ಯಾಹ್ನ

ಕೋರಿಯಾರ್: ಕುಮಾರಧಾರಾ ನದಿಯಲ್ಲಿ ಮುಳುಗಿ ಬಾಲಕ ಮೃತ್ಯು Read More »

ಕರಾವಳಿ

ಮಹಿಳೆಯರು ಹೈನುಗಾರಿಕೆಯಲ್ಲಿ ತೊಡಗಿಸಿಕೊಳ್ಳಬೇಕು: ಸೀತಾರಾಮ ರೈ ► ಸರಸ್ವತೀ ವಿದ್ಯಾಲಯದಲ್ಲಿ ‘ಹೈನುರಾಸು ನಿರ್ವಹಣಾ ತರಬೇತಿ ಕಾರ್ಯಗಾರ’

(ನ್ಯೂಸ್ ಕಡಬ) newskadaba.com ಕಡಬ, ಡಿ.18. ಹೈನುಗಾರಿಕೆಯು ಒಂದು ಉತ್ತಮ ಉದ್ಯೋಗವಾಗಿದ್ದು, ವೈಜ್ಞಾನಿಕ ಕಾಲಘಟ್ಟದಲ್ಲಿ ದನಗಳಿಗೆ ಉತ್ತಮ ಪಶು ಆಹಾರವನ್ನು ನೀಡಿ ಅದರ ಆರೋಗ್ಯವನ್ನು ಕಾಪಾಡುವುದು ಕೂಡ ನಮ್ಮೆಲ್ಲರ ಕರ್ತವ್ಯವಾಗಿದೆ ಎಂದು ದ.ಕ.ಸ.ಹಾ.ಉ ಒಕ್ಕೂಟ ಮಂಗಳೂರು ಇದರ ನಿರ್ದೇಶಕರಾದ ಸೀತಾರಾಮ ರೈ ಸವಣೂರು ಹೇಳಿದರು. ಅವರು ಭಾನುವಾರದಂದು ಕಡಬದ ಶ್ರೀ ಸರಸ್ವತೀ ವಿದ್ಯಾಲಯದ ಸಭಾಂಗಣದಲ್ಲಿ ನಡೆದ ಹೈನುರಾಸು ನಿರ್ವಹಣಾ ತರಬೇತಿ ಕಾರ್ಯಾಗಾರವನ್ನು ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿ ಮಾತನಾಡಿದರು. ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಹೈನುಗಾರಿಕೆ ಉದ್ಯಮದಲ್ಲಿ ತೊಡಗಿಸಿಕೊಳ್ಳುವ

ಮಹಿಳೆಯರು ಹೈನುಗಾರಿಕೆಯಲ್ಲಿ ತೊಡಗಿಸಿಕೊಳ್ಳಬೇಕು: ಸೀತಾರಾಮ ರೈ ► ಸರಸ್ವತೀ ವಿದ್ಯಾಲಯದಲ್ಲಿ ‘ಹೈನುರಾಸು ನಿರ್ವಹಣಾ ತರಬೇತಿ ಕಾರ್ಯಗಾರ’ Read More »

ಕರಾವಳಿ

ಡಿ.21: ಬೆಳ್ಳಾರೆ ಝಕರಿಯಾ ಜುಮಾ ಮಸೀದಿಯಲ್ಲಿ ► ವಾರ್ಷಿಕ ದಫ್ ರಾತೀಬ್ ಹಾಗೂ ಧಾರ್ಮಿಕ ಮತ ಪ್ರವಚನ

(ನ್ಯೂಸ್ ಕಡಬ) newskadaba.com ಬೆಳ್ಳಾರೆ, ಡಿ.18. ಝಕರಿಯಾ ಜುಮಾ ಮಸೀದಿ ಬೆಳ್ಳಾರೆಯ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ಅನ್ಸಾರುದ್ದೀನ್ ರಿಫಾಯಿಯಾ ದಫ್ ಕಮಿಟಿಯು ವರ್ಷಂಪ್ರತಿ ಆಚರಿಸಿಕೊಂಡು ಬರುತ್ತಿರುವ ವಾರ್ಷಿಕ ದಫ್ ರಾತೀಬ್ ಹಾಗೂ ಧಾರ್ಮಿಕ ಮತಪ್ರವಚನವು ಡಿಸೆಂಬರ್ 21 ರಂದು ಝಕರಿಯಾ ಜುಮಾ ಮಸೀದಿಯಲ್ಲಿ ನಡೆಯಲಿದೆ. ಸಂಜೆ ಘಂಟೆ 4.30 ರಿಂದ ದಫ್ ರಾತೀಬ್, ಮಗ್ರಿಬ್ ನಮಾಝಿನ ಬಳಿಕ ಸ್ವಲಾತ್ ಮಜ್ಲಿಸ್, ರಾತ್ರಿ ಘಂಟೆ 8.00 ರಿಂದ ಬಹು| ಇಬ್ರಾಹೀಂ ಬಾಖವಿ ಕೆ.ಸಿ. ರೋಡ್ ಮುಖ್ಯ ಪ್ರಭಾಷಣ ಮಾಡಲಿದ್ದಾರೆ. ಬಹು|

ಡಿ.21: ಬೆಳ್ಳಾರೆ ಝಕರಿಯಾ ಜುಮಾ ಮಸೀದಿಯಲ್ಲಿ ► ವಾರ್ಷಿಕ ದಫ್ ರಾತೀಬ್ ಹಾಗೂ ಧಾರ್ಮಿಕ ಮತ ಪ್ರವಚನ Read More »

ಕರಾವಳಿ

ರಾಮಕುಂಜ: ಮ್ಯಾಗ್ಸೇಸೆ ಪ್ರಶಸ್ತಿ ಪುರಸ್ಕೃತ ವಿಜ್ಞಾನಿ ಡಾ| ಹರೀಶ್ ಹಂದೆ ಭೇಟಿ ► ರಾಮಕುಂಜೇಶ್ವರ ವಿದ್ಯಾಲಯದ ವಿದ್ಯಾರ್ಥಿಗಳೊಂದಿಗೆ ಶೈಕ್ಷಣಿಕ ಸಂವಾದ

(ನ್ಯೂಸ್ ಕಡಬ) newskadaba.com ಕಡಬ, ಡಿ.18. ಮ್ಯಾಗ್ಸೇಸೆ ಪ್ರಶಸ್ತಿ ಪುರಸ್ಕೃತ ವಿಜ್ಞಾನಿ, ಸೆಲ್ಕೋ ಇಂಡಿಯಾದ ಸಂಸ್ಥಾಪಕ ಡಾ.ಹರೀಶ್ ಹಂದೆ ಶುಕ್ರವಾರದಂದು ರಾಮಕುಂಜ ವಿದ್ಯಾಸಂಸ್ಥೆಗೆ ಭೇಟಿ ನೀಡಿದ್ದು ವಿದ್ಯಾರ್ಥಿಗಳೊಂದಿಗೆ ಶೈಕ್ಷಣಿಕ ಸಂವಾದ ನಡೆಸಿದರು. ಸಂಸ್ಥೆಯಲ್ಲಿ ಆಯೋಜಿಸಿದ್ದ ಗಣಿತ ಮಾದರಿಗಳ ಪ್ರದರ್ಶನವನ್ನು ಡಾ.ಹರೀಶ್ ಹಂದೆಯವರು ಈ ವೇಳೆ ಉದ್ಘಾಟಿಸಿದರು. ಭಾರತ ಅಭಿವೃದ್ಧಿ ಹೊಂದಿದಲ್ಲಿ ಮಾತ್ರ ವಿಶ್ವ ಅಭಿವೃದ್ಧಿಗೊಳ್ಳಲಿದೆ ಎಂಬುದು ದೆಹಲಿಯಲ್ಲಿ ಎರಡು ವರ್ಷ ವ್ಯಾಸಾಂಗ ಮಾಡಿದ ಅಮೆರಿಕನ್ ಪ್ರಜೆಯೊಬ್ಬರ ಅಭಿಪ್ರಾಯವಾಗಿದೆ. ಆತನಲ್ಲಿ ಭಾರತದ ಗ್ರಾಮೀಣ ಪ್ರದೇಶಗಳು ಅಭಿವೃದ್ಧಿಗೊಳ್ಳದೇ ಇದ್ದಲ್ಲಿ ವಿಶ್ವ

ರಾಮಕುಂಜ: ಮ್ಯಾಗ್ಸೇಸೆ ಪ್ರಶಸ್ತಿ ಪುರಸ್ಕೃತ ವಿಜ್ಞಾನಿ ಡಾ| ಹರೀಶ್ ಹಂದೆ ಭೇಟಿ ► ರಾಮಕುಂಜೇಶ್ವರ ವಿದ್ಯಾಲಯದ ವಿದ್ಯಾರ್ಥಿಗಳೊಂದಿಗೆ ಶೈಕ್ಷಣಿಕ ಸಂವಾದ Read More »

ಕರಾವಳಿ

ಕಡಬದ ಹಿರಿಯ ಬಿಜೆಪಿ ಮುಖಂಡ ಮನವಳಿಕೆ ಉಮೇಶ್ ರೈ ಇನ್ನಿಲ್ಲ

(ನ್ಯೂಸ್ ಕಡಬ) newskadaba.com ಕಡಬ, ಡಿ.17. ಕಡಬದ ಹಿರಿಯ ಬಿಜೆಪಿ ಮುಖಂಡ ನೂಜಿಬಾಳ್ತಿಲ ಗ್ರಾಮದ ಪದಕ ನಿವಾಸಿ ಮನವಳಿಕೆ ಉಮೇಶ್ ರೈ(72) ಭಾನುವಾರ ರಾತ್ರಿ ವಿಧಿವಶರಾದರು. ಮೂಲತ ಆಲಂಕಾರು ಮನವಳಿಕೆ ಗುತ್ತು ಮನೆತನದ ಉಮೇಶ್ ರೈ ಕಡಬ ಪರಿಸರದಲ್ಲಿ ಬಿಜೆಪಿ ಪಕ್ಷವನ್ನು ಕಟ್ಟಿ ಬೆಳೆಸುವಲ್ಲಿ ಅಪಾರ ಶ್ರಮ ವಹಿಸಿದ್ದರು. ಜಿಲ್ಲಾ ಸ್ಕ್ಯಾಡ್ಸ್ ಅಧ್ಯಕ್ಷರಾಗಿ, ಪಿಎಲ್ಡಿ ಬ್ಯಾಂಕ್ ನಿರ್ದೇಶಕರಾಗಿ ಸಹಕಾರಿ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿದ್ದ ಇವರು ಕೆಲದಿನಗಳ ಅಸೌಖ್ಯದಿಂದಾಗಿ ಭಾನುವಾರ ರಾತ್ರಿ ನೂಜಿಬಾಳ್ತಿಲ ಗ್ರಾಮದ ಪದಕದ ತನ್ನ

ಕಡಬದ ಹಿರಿಯ ಬಿಜೆಪಿ ಮುಖಂಡ ಮನವಳಿಕೆ ಉಮೇಶ್ ರೈ ಇನ್ನಿಲ್ಲ Read More »

ಕರಾವಳಿ

ಕೊಯಿಲ ಗ್ರಾ.ಪಂ. ಉಪಚುನಾವಣೆ ► 65.03% ಶಾಂತಿಯುತ ಮತದಾನ

(ನ್ಯೂಸ್ ಕಡಬ) newskadaba.com ಕಡಬ, ಡಿ.17. ಸುಳ್ಯ ವಿಧಾನಸಭಾ ಕ್ಷೇತ್ರಕ್ಕೆ ಒಳಪಟ್ಟ ಕೊಯಿಲ ಗ್ರಾಮ ಪಂಚಾಯತ್ ನ ವಾರ್ಡ್ ನಂ4 ರ ಹಿಂದುಳಿದ ವರ್ಗ ‘ಎ’ಯ ಸದಸ್ಯ ಸ್ಥಾನಕ್ಕೆ ಉಪ ಚುನಾವಣೆಯು ವಳಕಡಮೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಂತಿಯುತವಾಗಿ ನಡೆಯಿತು. ಒಟ್ಟು 1184 ಮತದಾರರ ಪೈಕಿ 770 ಮತದಾರರು ಮತವನ್ನು ಚಲಾಯಿಸುವ ಮೂಲಕ 65.03% ಶಾಂತಿಯುತ ಮತದಾನ ನಡೆಯಿತು.

ಕೊಯಿಲ ಗ್ರಾ.ಪಂ. ಉಪಚುನಾವಣೆ ► 65.03% ಶಾಂತಿಯುತ ಮತದಾನ Read More »

ಕರಾವಳಿ

ಮರ್ಧಾಳ ಸೈಂಟ್ ಮೇರೀಸ್ ಪ್ರೌಢಶಾಲಾ ವಾರ್ಷಿಕೋತ್ಸವ ► ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಕಡಬ, ಡಿ.17. ಓರ್ವ ವಿದ್ಯಾರ್ಥಿಯ ಭವಿಷ್ಯದ ಅಡಿಪಾಯವು ತನ್ನ ಪ್ರೌಢಶಿಕ್ಷಣದಿಂದ ಆರಂಭವಾಗುತ್ತದೆ. ಪ್ರತಿಯೋರ್ವ ವಿದ್ಯಾರ್ಥಿಯೂ ಪ್ರೌಢಶಾಲೆಯಲ್ಲಿ ಕಲಿಯುವಂತಹ ವಿದ್ಯೆಯನ್ನು ತನ್ನ ಜೀವನದಲ್ಲಿ ರೂಪಿಸಿಕೊಂಡಾಗ ಜೀವನ ಯಶಸ್ವಿಯಾಗುತ್ತದೆ ಎಂದು ಕೊಕ್ಕಡ ಸರಕಾರಿ ಪದವಿಪೂರ್ವ ಕಾಲೇಜಿನ ಉಪನ್ಯಾಸಕರಾದ ವಿಶ್ವನಾಥ್ ರೈ ಪೆರ್ಲ ಹೇಳಿದರು. ಅವರು ಭಾನುವಾರದಂದು ಮರ್ಧಾಳ ಸೈಂಟ್ ಮೇರೀಸ್ ಪ್ರೌಢಶಾಲೆಯ ವಾರ್ಷಿಕೋತ್ಸವ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡುತ್ತಿದ್ದರು‌. ವಿದ್ಯಾರ್ಥಿಗಳು ಸಮಾಜದ ಮುನ್ನೆಲೆಗೆ ಬರುವಲ್ಲಿ ತನ್ನ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಅತ್ಯಗತ್ಯವಾದುದು. ಆದುದರಿಂದ

ಮರ್ಧಾಳ ಸೈಂಟ್ ಮೇರೀಸ್ ಪ್ರೌಢಶಾಲಾ ವಾರ್ಷಿಕೋತ್ಸವ ► ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ Read More »

ಕರಾವಳಿ
Scroll to Top