ಕರಾವಳಿ

ಜೂನಿಯರ್ ಅಥ್ಲೆಟಿಕ್ ಮೀಟ್ ಡಿಸ್ಕಸ್ ಥ್ರೋ ► ಕಡಬದ ಸೈಂಟ್ ಆನ್ಸ್ ಶಾಲೆಯ ಗುರುಕಿರಣ್ ಗೆ ಕಂಚು

(ನ್ಯೂಸ್ ಕಡಬ) newskadaba.com ಕಡಬ, ಡಿ.15. ಜೂನಿಯರ್ ಅಥ್ಲೆಟಿಕ್ ಮೀಟ್ ನ ಡಿಸ್ಕಸ್ ಥ್ರೋದಲ್ಲಿ ಕಡಬದ ಸೈಂಟ್ ಆನ್ಸ್‌ ಆಂಗ್ಲಮಾಧ್ಯಮ ಶಾಲೆಯ 9ನೇ ತರಗತಿ ವಿದ್ಯಾರ್ಥಿ ಗುರುಕಿರಣ್ ಕಂಚಿನ ಪದಕ ಪಡೆದಿರುತ್ತಾರೆ. ಇತ್ತೀಚೆಗೆ ಮಂಗಳೂರಿನ ಮಂಗಳಾ ಕ್ರೀಡಾಂಗಣದಲ್ಲಿ ದಕ್ಷಿಣ ಕನ್ನಡ ಅಥ್ಲೆಟಿಕ್ ಅಸೋಶಿಯೇಶನ್ ಸಾರಥ್ಯದಲ್ಲಿ ದಕ್ಷಿಣ ಕನ್ನಡ, ಉಡುಪಿ, ಶ್ರೀಲಂಕಾ ಅತಿಥಿ ಕ್ರೀಡಾಪಟುಗಳನ್ನೊಳಗೊಂಡ ಜೂನಿಯರ್ ಅಥ್ಲೆಟಿಕ್ ಮೀಟ್ ಡಿಸ್ಕಸ್ ಥ್ರೋ ದಲ್ಲಿ ಗುರುಕಿರಣ್ ಕಂಚಿನ ಪದಕವನ್ನು ತನ್ನದಾಗಿಸಿಕೊಂಡಿದ್ದಾರೆ.

ಜೂನಿಯರ್ ಅಥ್ಲೆಟಿಕ್ ಮೀಟ್ ಡಿಸ್ಕಸ್ ಥ್ರೋ ► ಕಡಬದ ಸೈಂಟ್ ಆನ್ಸ್ ಶಾಲೆಯ ಗುರುಕಿರಣ್ ಗೆ ಕಂಚು Read More »

ಕರಾವಳಿ

ಹೊನ್ನಾವರ: ಪರೇಶ್ ಮೇಸ್ತ ಸಾವಿನ ತನಿಖೆಯನ್ನು NIA ಗೆ ವಹಿಸಲು ಆಗ್ರಹ ► ಕಡಬದ ಹಿಂದೂ ಸಂಘಟನೆಗಳ ವತಿಯಿಂದ ಪ್ರತಿಭಟನೆ

(ನ್ಯೂಸ್ ಕಡಬ) newskadaba.com ಕಡಬ, ಡಿ.15. ಹೊನ್ನಾವರದ ಹಿಂದೂ ಸಂಘಟನೆಯ ಕಾರ್ಯಕರ್ತ ಪರೇಶ್ ಮೇಸ್ತ ಹತ್ಯೆಯನ್ನು ಖಂಡಿಸಿ ವಿಶ್ವಹಿಂದೂ ಪರಿಷತ್, ಬಜರಂಗದಳ ಕಡಬ ಪ್ರಖಂಡ ಹಾಗೂ ಹಿಂದೂ ಜಾಗರಣ ವೇದಿಕೆ ಕಡಬ ತಾಲೂಕು ಇದರ ನೇತ್ರತ್ವದಲ್ಲಿ ಕಡಬದಲ್ಲಿ ಶುಕ್ರವಾರದಂದು ಪ್ರತಿಭಟನೆ ನಡೆಯಿತು. ಪ್ರತಿಭಟನೆಯಲ್ಲಿ ಭಾಗವಹಿಸಿ ಸುಳ್ಯ ಶಾಸಕರಾದ ಎಸ್. ಅಂಗಾರ, ಮತೀಯ ಭಯೋತ್ಪಾದಕರು ಅಮಾಯಕ‌ ಹಿಂದೂ ಕಾರ್ಯಕರ್ತರ ಕೊಲೆ ಮಾಡುತ್ತಿದ್ದಾರೆ. ಅದಕ್ಕೆ ರಾಜ್ಯ ಸರಕಾರ ಪ್ರೇರೇಪಣೆ ನೀಡುತ್ತಿದ್ದು, ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರಕಾರದ ಆಡಳಿತ ಯಂತ್ರವು

ಹೊನ್ನಾವರ: ಪರೇಶ್ ಮೇಸ್ತ ಸಾವಿನ ತನಿಖೆಯನ್ನು NIA ಗೆ ವಹಿಸಲು ಆಗ್ರಹ ► ಕಡಬದ ಹಿಂದೂ ಸಂಘಟನೆಗಳ ವತಿಯಿಂದ ಪ್ರತಿಭಟನೆ Read More »

ಕರಾವಳಿ

ನಾಳೆ(ಡಿ.16) ಕಡಬದಲ್ಲಿ 17ನೇ ಕನ್ನಡ ಸಾಹಿತ್ಯ ಸಮ್ಮೇಳನ ► ಅವಿಭಜಿತ ಪುತ್ತೂರು ತಾಲೂಕಿನ ಕೊನೆಯ ಕನ್ನಡ ಸಾಹಿತ್ಯ ಸಮ್ಮೇಳನ

(ನ್ಯೂಸ್ ಕಡಬ) newskadaba.com ಕಡಬ, ಡಿ.15. ದ.ಕ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಪುತ್ತೂರು ತಾಲೂಕು ಘಟಕದ ಆಶ್ರಯದಲ್ಲಿ ಅವಿಭಜಿತ ಪುತ್ತೂರು ತಾಲೂಕಿನ 17 ನೇ ಹಾಗೂ ಕೊನೆಯ ಕನ್ನಡ ಸಾಹಿತ್ಯ ಸಮ್ಮೇಳನ ಕಡಬದ ಸರಕಾರಿ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ ಡಿಸೆಂಬರ್ 16 ನೇ ಶನಿವಾರದಂದು ಬೆಳಿಗ್ಗಿನಿಂದ ಸಂಜೆಯ ತನಕ ನಡೆಯಲಿದೆ. ಕಡಬದಲ್ಲಿ ಇದು ತಾಲೂಕು ಮಟ್ಟದ ಎರಡನೇ ಸಾಹಿತ್ಯ ಸಮ್ಮೇಳನವಾಗಿದೆ. ಕಡಬ ಈಗಾಗಲೇ ತಾಲೂಕು ಕೇಂದ್ರವಾಗಿ ಘೋಷಣೆಯಾಗಿದ್ದು ಬರುವ ಜನವರಿ ತಿಂಗಳಿನಿಂದ ಪೂರ್ಣ ಪ್ರಮಾಣದ

ನಾಳೆ(ಡಿ.16) ಕಡಬದಲ್ಲಿ 17ನೇ ಕನ್ನಡ ಸಾಹಿತ್ಯ ಸಮ್ಮೇಳನ ► ಅವಿಭಜಿತ ಪುತ್ತೂರು ತಾಲೂಕಿನ ಕೊನೆಯ ಕನ್ನಡ ಸಾಹಿತ್ಯ ಸಮ್ಮೇಳನ Read More »

ಕರಾವಳಿ

ಕಡಬದಲ್ಲಿ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣ ಸ್ಥಳದ ಗಡಿಗುರುತು ► ತಿಂಗಳೊಳಗೆ ಕಟ್ಟಡ ಕಾಮಗಾರಿಗೆ ಶಂಕುಸ್ಥಾಪನೆ: ಪಿ.ಪಿ.ವರ್ಗೀಸ್

(ನ್ಯೂಸ್ ಕಡಬ) newskadaba.com ಕಡಬ, ಡಿ.15. ಕಡಬ ಅಂಬೇಡ್ಕರ್ ಭವನದ ಹತ್ತಿರ ಕೆಎಸ್ಆರ್ಟಿಸಿ ಬಸ್ ನಿಲ್ದಾಣಕ್ಕೆ ಖಾದಿರಿಸಿದ 1.73 ಎಕ್ರೆ ಸ್ಥಳವನ್ನು ಭೂಮಾಪನಾ ಇಲಾಖೆಯಿಂದ ಸರ್ವೇ ಮಾಡಿ ಗಡಿ ಗುರುತು ಮಾಡುವ ಕಾರ್ಯ ಬುಧವಾರದಂದು ನಡೆಯಿತು. ಕಡಬ ತಹಶೀಲ್ದಾರ್ ಜಾನ್ ಪ್ರಕಾಶ್ ರವರ ನೇತೃತ್ವದಲ್ಲಿ ಭೂಮಾಪನಾ ಇಲಾಖೆ ಹಾಗೂ ಕೆಎಸ್ಆರ್ಟಿಸಿ ವತಿಯಿಂದ ಜಂಟಿ ಸರ್ವೇ ನಡೆಸಿ ಬಸ್ ನಿಲ್ದಾಣಕ್ಕೆ ಗಡಿ ಗುರುತು ಮಾಡುವುದರ ಮೂಲಕ ಭೂಮಿ ಕಾದಿರಿಸಲಾಯಿತು. ಈ ಸಂದರ್ಭ ಮಾತನಾಡಿದ ಕಡಬ ಜಿ.ಪಂ.ಸದಸ್ಯ ಪಿ.ಪಿ ವರ್ಗೀಸ್

ಕಡಬದಲ್ಲಿ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣ ಸ್ಥಳದ ಗಡಿಗುರುತು ► ತಿಂಗಳೊಳಗೆ ಕಟ್ಟಡ ಕಾಮಗಾರಿಗೆ ಶಂಕುಸ್ಥಾಪನೆ: ಪಿ.ಪಿ.ವರ್ಗೀಸ್ Read More »

ಕರಾವಳಿ

ಕುಲ್ಕುಂದ: ಸ್ನೇಹಿತರೊಂದಿಗೆ ಮೋಜಿಗಾಗಿ ತೆರಳಿದ ಯುವಕ ನೀರುಪಾಲು ► ಕೊಲೆ ಶಂಕೆ ವ್ಯಕ್ತಪಡಿಸಿದ ಪೋಷಕರು

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಡಿ.14. ಸ್ನೇಹಿತರೊಂದಿಗೆ ಮೋಜು ಮಾಡಲೆಂದು ಸುಬ್ರಹ್ಮಣ್ಯ ರಕ್ಷಿತಾರಣ್ಯದ ಮುಂಗುಳಿಪಾದೆ ಎಂಬಲ್ಲಿನ ಕುಮಾರಧಾರ ನದಿ ತಟಕ್ಕೆ ತೆರಳಿದ್ದ ಯುವಕನೋರ್ವ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಬುಧವಾರದಂದು ನಡೆದಿದೆ. ಮೃತ ಯುವಕನನ್ನು ಕೊಂಬಾರು ಗ್ರಾಮದ ಕಾಯರ್ತಡ್ಕ ನಿವಾಸಿ ಗಣೇಶ ಎಂಬವರ ಪುತ್ರ ಜಯಪ್ರಕಾಶ್ (19) ಎಂದು ಗುರುತಿಸಲಾಗಿದ್ದು, ಈತ ತನ್ನ ಸ್ನೇಹಿತರಾದ ಮಿಥುನ್, ಸತೀಶ್, ಗುರುಪ್ರಸಾದ್, ಪ್ರವೀಣ್, ಅನಿಲ್ ಕುಮಾರ್ ರವರೊಂದಿಗೆ ಮೋಜು ಮಾಡಲೆಂದು ಬುಧವಾರದಂದು ಆಗಮಿಸಿದ್ದರೆನ್ನಲಾಗಿದೆ. ಮಧ್ಯಾಹ್ನ ಹೊಳೆ ಬದಿಯಲ್ಲಿ ಕೋಳಿ ಪದಾರ್ಥ

ಕುಲ್ಕುಂದ: ಸ್ನೇಹಿತರೊಂದಿಗೆ ಮೋಜಿಗಾಗಿ ತೆರಳಿದ ಯುವಕ ನೀರುಪಾಲು ► ಕೊಲೆ ಶಂಕೆ ವ್ಯಕ್ತಪಡಿಸಿದ ಪೋಷಕರು Read More »

ಕರಾವಳಿ

ಸಂಪೂರ್ಣ ಹದಗೆಟ್ಟಿರುವ ಕಾಯರಡ್ಕ – ಪೆರಿಯಶಾಂತಿ ರಸ್ತೆ ದುರಸ್ತಿಗೆ ಆಗ್ರಹ ► ನಾಳೆ ‘ನೀತಿ ತಂಡ’ದಿಂದ ಸಾರ್ವಜನಿಕ ಭಿಕ್ಷಾಟನೆ

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಡಿ.13. ಧರ್ಮಸ್ಥಳ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಇಚಿಲಂಪಾಡಿಯ ಕಾಯರಡ್ಕ- ಪೆರಿಯಶಾಂತಿ ನಡುವಿನ ಎರಡು ಕಿಮೀ ರಸ್ತೆಯು ಸಂಪೂರ್ಣವಾಗಿ ಹದಗೆಟ್ಟಿದ್ದು, ರಸ್ತೆ ಕಾಮಗಾರಿಗೆ ಆಗ್ರಹಿಸಿ ಇಚಿಲಂಪಾಡಿಯ ನೀತಿ ತಂಡದ ವತಿಯಿಂದ ಡಿಸೆಂಬರ್ 14 ಗುರುವಾರದಂದು ಸಾರ್ವಜನಿಕ ಭಿಕ್ಷಾಟನೆ ನಡೆಸಿ ಲೋಕೋಪಯೋಗಿ ಇಲಾಖೆಗೆ ಹಸ್ತಾಂತರಿಸುವ ಕಾರ್ಯಕ್ರಮ ನಡೆಯಲಿದೆ ಎಂದು ನೀತಿ ತಂಡದ ರಾಜ್ಯಾಧ್ಯಕ್ಷರಾದ ಜಯನ್ ಟಿ. ತಿಳಿಸಿದ್ದಾರೆ. ಈ ರಸ್ತೆಯ ಅವ್ಯವಸ್ಥೆ ಬಗ್ಗೆ ನೀತಿ ತಂಡವು ಸಾರ್ವಜನಿಕರ ಸಹಕಾರದೊಂದಿಗೆ 2017 ಮಾರ್ಚ್ 22

ಸಂಪೂರ್ಣ ಹದಗೆಟ್ಟಿರುವ ಕಾಯರಡ್ಕ – ಪೆರಿಯಶಾಂತಿ ರಸ್ತೆ ದುರಸ್ತಿಗೆ ಆಗ್ರಹ ► ನಾಳೆ ‘ನೀತಿ ತಂಡ’ದಿಂದ ಸಾರ್ವಜನಿಕ ಭಿಕ್ಷಾಟನೆ Read More »

ಕರಾವಳಿ

ಜಿಲ್ಲಾ ಮಟ್ಟದ ‘ಸ್ಥಳದಲ್ಲೇ ಮಾದರಿ ತಯಾರಿ’ ಸ್ಪರ್ಧೆ ► ರಾಮಕುಂಜೇಶ್ವರ ಪ್ರೌಢಶಾಲೆಯ ಶಿಕ್ಷಕ ವೆಂಕಟೇಶ ದಾಮ್ಲೆ ರಾಜ್ಯ ಮಟ್ಟಕ್ಕೆ

(ನ್ಯೂಸ್ ಕಡಬ) newskadaba.com ಕಡಬ, ಡಿ.13. ಜಿಲ್ಲಾಮಟ್ಟದ “ಸ್ಥಳದಲ್ಲೇ ಮಾದರಿ ತಯಾರಿ” ಸ್ಪರ್ಧೆಯಲ್ಲಿ ಹೈಸ್ಕೂಲು ವಿಭಾಗದಿಂದ ಶ್ರೀ ರಾಮಕುಂಜೇಶ್ವರ  ಪ್ರೌಢಶಾಲೆಯ (ಕನ್ನಡ ಮಾಧ್ಯಮ) ಗಣಿತ ಶಿಕ್ಷಕರಾದ ಶ್ರೀ ವೆಂಕಟೇಶ ದಾಮ್ಲೆಯವರು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಇತ್ತೀಚೆಗೆ ಮಂಗಳೂರಿನಲ್ಲಿ ನಡೆದ ದ.ಕ. ಜಿಲ್ಲಾ ಪಂಚಾಯತ್ ಸಾರ್ವಜನಿಕ ಶಿಕ್ಷಣ ಇಲಾಖೆ, ರಾಷ್ಟ್ರೀಯ ಶಿಕ್ಷಕರ ಕಲ್ಯಾಣ ಪ್ರತಿಪ್ಠಾನ ಮತ್ತು ಕರ್ನಾಟಕ ರಾಜ್ಯ ಶಿಕ್ಷಕರ ಕಲ್ಯಾಣ ನಿಧಿ – ಇವುಗಳ ಸಂಯುಕ್ತ ಆಶ್ರಯದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ “ಸ್ಥಳದಲ್ಲೇ ಮಾದರಿ ತಯಾರಿ”

ಜಿಲ್ಲಾ ಮಟ್ಟದ ‘ಸ್ಥಳದಲ್ಲೇ ಮಾದರಿ ತಯಾರಿ’ ಸ್ಪರ್ಧೆ ► ರಾಮಕುಂಜೇಶ್ವರ ಪ್ರೌಢಶಾಲೆಯ ಶಿಕ್ಷಕ ವೆಂಕಟೇಶ ದಾಮ್ಲೆ ರಾಜ್ಯ ಮಟ್ಟಕ್ಕೆ Read More »

ಕರಾವಳಿ

ನೆಲ್ಯಾಡಿ-ಬಲ್ಯ ರಸ್ತೆ ಕಾಮಗಾರಿಗೆ ಬಿಡುಗಡೆಯಾಯಿತು 6 ಕೋಟಿ ಅನುದಾನ ► ಸಂಸದ ನಳಿನ್ ಕುಮಾರ್ ಕಟೀಲ್ ರಿಂದ ನಡೆಯಿತು ಗುದ್ದಲಿಪೂಜೆ

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಡಿ.13. ಕೇಂದ್ರ ರಸ್ತೆ ನಿಧಿ(ಸಿಆರ್ಎಫ್)ಯಿಂದ ಬಿಡುಗಡೆಗೊಂಡ 6 ಕೋಟಿ ರೂ.ಅನುದಾನದಲ್ಲಿ ನಡೆಯುವ ನೆಲ್ಯಾಡಿ-ಬಲ್ಯ ರಸ್ತೆಯ ಅಗಲೀಕರಣ ಹಾಗೂ ಮರು ಡಾಮರೀಕರಣ ಕಾಮಗಾರಿಗೆ ಮಂಗಳವಾರದಂದು ಹೊಸಮಜಲುನಲ್ಲಿ ಗುದ್ದಲಿಪುಜೆ ನೆರವೇರಿಸಲಾಯಿತು. ಸಂಸದ ನಳಿನ್ ಕುಮಾರ್ ಕಟೀಲ್ ಗುದ್ದಲಿಪೂಜೆ ನೆರವೇರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಸುಳ್ಯ ಶಾಸಕ ಎಸ್.ಅಂಗಾರರವರು, ಕೇಂದ್ರದಲ್ಲಿ ನರೇಂದ್ರ ಮೋದಿ ಸರಕಾರ ಅಧಿಕಾರಕ್ಕೆ ಬಂದ ಬಳಿಕ ಸುಳ್ಯ ವಿಧಾನಸಭಾ ಕ್ಷೇತ್ರಕ್ಕೆ ಸಿಆರ್ಎಫ್ ಯೋಜನೆಯಡಿ ಸಂಸದ ನಳಿನ್ಕುಮಾರ್ ಕಟೀಲ್ 20 ಕೋಟಿ ರೂ. ಅನುದಾನ

ನೆಲ್ಯಾಡಿ-ಬಲ್ಯ ರಸ್ತೆ ಕಾಮಗಾರಿಗೆ ಬಿಡುಗಡೆಯಾಯಿತು 6 ಕೋಟಿ ಅನುದಾನ ► ಸಂಸದ ನಳಿನ್ ಕುಮಾರ್ ಕಟೀಲ್ ರಿಂದ ನಡೆಯಿತು ಗುದ್ದಲಿಪೂಜೆ Read More »

ಕರಾವಳಿ

ರೈಲಿಗೆ ತಲೆಕೊಟ್ಟು ಯುವಕ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಡಿ.13. ಅಪರಿಚಿತ ಯುವಕನೋರ್ವ ರೈಲಿಗೆ ತಲೆಕೊಟ್ಟು ಸಾವನ್ನಪ್ಪಿದ ಘಟನೆ ಬುಧವಾರದಂದು ಬಿ.ಸಿ.ರೊಡಿನ ರೈಲು ನಿಲ್ದಾಣದ ಬಳಿ ನಡೆದಿದೆ. ಮೃತ ಯುವಕನಿಗೆ ಸುಮಾರು 25 ವರ್ಷ ಪ್ರಾಯವಾಗಿರಬಹುದು ಎಂದು ಅಂದಾಜಿಸಲಾಗಿದ್ದು, ಈತ ರಾತ್ರಿ ವೇಳೆಯಲ್ಲಿ ಗೂಡ್ಸ್ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿರಬೇಕು ಎಂದು ಶಂಕಿಸಲಾಗಿದೆ. ಇಂದು ಬೆಳಗ್ಗೆ ಸ್ಥಳೀಯರು ಮೃತದೇಹವನ್ನು ಗಮನಿಸಿ ರೈಲ್ವೆ ಇಲಾಖೆಗೆ ಮಾಹಿತಿ ನೀಡಿದ್ದು, ಮಂಗಳೂರು ವಿಭಾಗದ ರೈಲ್ವೆ ಪೊಲೀಸ್ ಇನ್ ಸ್ಪೆಕ್ಟರ್ ಜಯಾನಂದ ಕೆ. ಸ್ಥಳಕ್ಕೆ ಭೇಟಿ

ರೈಲಿಗೆ ತಲೆಕೊಟ್ಟು ಯುವಕ ಆತ್ಮಹತ್ಯೆ Read More »

ಕರಾವಳಿ

ಶ್ರೀರಾಮ ಸೇನೆ ಕಡಬ ತಾಲೂಕು ಪದಾಧಿಕಾರಿಗಳ ಆಯ್ಕೆ ► ಅಧ್ಯಕ್ಷರಾಗಿ ಮೋಹನ್ ಕೆರೆಕೋಡಿ ಹಾಗೂ ಸಂಚಾಲಕರಾಗಿ ಗಣೇಶ್ ಮೀನಾಡಿ

(ನ್ಯೂಸ್ ಕಡಬ) newskadaba.com ಕಡಬ, ಡಿ.12. ಶ್ರೀ ರಾಮ ಸೇನೆ ಕಡಬ ತಾಲೂಕ್ ಅಧ್ಯಕ್ಷರಾಗಿ ಮೋಹನ್ ಕೆರೆಕೋಡಿ ಹಾಗೂ ಸಂಚಾಲಕರಾಗಿ ಗಣೇಶ್ ಮೀನಾಡಿ ಆಯ್ಕೆಯಾಗಿದ್ದಾರೆ. ಇತ್ತೀಚೆಗೆ ಕಡಬ ಶ್ರೀ ದುರ್ಗಾಂಬಿಕ ಅಮ್ಮನವರ ದೇವಸ್ಥಾನದ ಸನ್ನಿಧಿಯಲ್ಲಿ ನಡೆದ ಶ್ರೀರಾಮ ಸೇನೆ ಕಡಬ ತಾಲೂಕು ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆಯಲ್ಲಿ ಸಹ ಸಂಚಾಲಕರಾಗಿ ಅರುಣ್ ಕುಮಾರ್ ರೈ, ಕಡಬ ನಗರ ಸಮಿತಿ ಅಧ್ಯಕ್ಷರಾಗಿ ಗಿರೀಶ್ ರೈ ಕಾಯಂದೂರು, ಸಂಚಾಲಕರಾಗಿ ಮೋಹನ್ ಮಠಂತ್ತಡಿ, ಸಹ ಸಂಚಾಲಕರಾಗಿ ಪ್ರದೀಪ್ ಕಡಬ ಮತ್ತು ಮೇಗೇಶ್ ರವರನ್ನು

ಶ್ರೀರಾಮ ಸೇನೆ ಕಡಬ ತಾಲೂಕು ಪದಾಧಿಕಾರಿಗಳ ಆಯ್ಕೆ ► ಅಧ್ಯಕ್ಷರಾಗಿ ಮೋಹನ್ ಕೆರೆಕೋಡಿ ಹಾಗೂ ಸಂಚಾಲಕರಾಗಿ ಗಣೇಶ್ ಮೀನಾಡಿ Read More »

ಕರಾವಳಿ
Scroll to Top