ಕರಾವಳಿ

ಕೊಲ್ಲರಕೋಡಿ ಪ್ರಾಥಮಿಕ ಶಾಲೆಯ ಬೆಳ್ಳಿಹಬ್ಬ ಪ್ರಯುಕ್ತ ► ಬೃಹತ್ ರಕ್ತದಾನ ಶಿಬಿರ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.06. ದ.ಕ ಜಿಲ್ಲಾ ಹಿರಿಯ ಪ್ರಾಥಮಿಕ ಶಾಲೆ ಕೊಲ್ಲರಕೋಡಿ ಹಳೆವಿದ್ಯಾರ್ಥಿ ಸಂಘದ ಬೆಳ್ಳಿ ಹಬ್ಬದ ಪ್ರಯುಕ್ತ ಬ್ಲಡ್ ಡೋನರ್ಸ್ ಮಂಗಳೂರು ಮತ್ತು ಯೇನಪೋಯ ಮೆಡಿಕಲ್ ಕಾಲೇಜ್ ದೇರಳಕಟ್ಟೆ ಇದರ ಸಹಯೋಗದೊಂದಿಗೆ ಕೊಲ್ಲರಕೋಡಿ ಶಾಲಾ ವಠಾರದಲ್ಲಿ ಬೃಹತ್ ರಕ್ತದಾನ ಶಿಬಿರವು ಇತ್ತೀಚೆಗೆ ನಡೆಯಿತು. ಹಳೇ ವಿದ್ಯಾರ್ಥಿ ಸಂಘದ ಅಧ್ಯಕ್ಷ ನವಾಝ್ ನರಿಂಗಾನ ರಕ್ತದಾನ ಮಾಡುವ ಮೂಲಕ ಶಿಬಿರಕ್ಕೆ ಚಾಲನೆ ನೀಡಿದರು. ಉದ್ಯಮಿ ಮುಸ್ತಾಫ ಎಸ್.ಎಂ ಸಭಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಬಿಜೆಪಿ ಮಂಗಳೂರು […]

ಕೊಲ್ಲರಕೋಡಿ ಪ್ರಾಥಮಿಕ ಶಾಲೆಯ ಬೆಳ್ಳಿಹಬ್ಬ ಪ್ರಯುಕ್ತ ► ಬೃಹತ್ ರಕ್ತದಾನ ಶಿಬಿರ Read More »

ಕರಾವಳಿ

ಕಡಬದ ಸರಸ್ವತೀ ವಿದ್ಯಾಲಯದ ವತಿಯಿಂದ ► ಮನೆಮದ್ದು ಮಾಹಿತಿ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಕಡಬ, ಡಿ.06. ಸರಸ್ವತೀ ವಿದ್ಯಾಲಯ ಪ್ರೌಢ ಮತ್ತು ಪದವಿಪೂರ್ವ ವಿಭಾಗದ ಬಂಟ್ರ ಗ್ರಾಮ ವಿಕಾಸ ಸಮಿತಿಯ ವತಿಯಿಂದ ಮರ್ಧಾಳ ಅಂಬೇಡ್ಕರ್ ಭವನದಲ್ಲಿ ಮನೆಮದ್ದು ಮಾಹಿತಿ ಕಾರ್ಯಕ್ರಮವು ಇತ್ತೀಚೆಗೆ ನಡೆಯಿತು. ಸಂಪನ್ಮೂಲ ವ್ಯಕ್ತಿಯಾಗಿದ್ದ ಉಷಾ ಮನೋಹರ್ ರೈ ಮಾತನಾಡಿ, ನಮ್ಮ ಮನೆ ಸುತ್ತಮುತ್ತಲಿನ ಪರಿಸರದಲ್ಲಿ  ಕೆಲವು ರೋಗಗಳ ಉಪಶಮನಕ್ಕೆ ಔಷಧ ದೊರೆಯುತ್ತದೆ. ಆದರೆ ಇದೆಲ್ಲವುಗಳ ಮಾಹಿತಿ ತಿಳಿಯದೆ ಆಸ್ಪತ್ರೆಯನ್ನೇ ಅವಲಂಬಿಸಿದ್ದೇವೆ. ಮನೆ ಮದ್ದಿನ ಮಾಹಿತಿ ಯುವ ಪೀಳಿಗೆಯ ಮೂಲಕ ಪಸರಿಬೇಕಾದಲ್ಲಿ ಮಾಹಿತಿ ಅಗತ್ಯ. ಸುಮಾರು 25 ರೋಗಗಳಿಗೆ

ಕಡಬದ ಸರಸ್ವತೀ ವಿದ್ಯಾಲಯದ ವತಿಯಿಂದ ► ಮನೆಮದ್ದು ಮಾಹಿತಿ ಕಾರ್ಯಕ್ರಮ Read More »

ಕರಾವಳಿ

ಕಡಬ ಠಾಣೆಯ ಸ್ವಾಧೀನದಲ್ಲಿರುವ ವಿವಿಧ ವಾಹನಗಳ ಮಾಲಕರಿಗೆ ಸೂಚನೆ ► ವಾರದೊಳಗೆ ವಾಹನಗಳನ್ನು ಬಿಡಿಸದಿದ್ದಲ್ಲಿ ಬಹಿರಂಗ ಹರಾಜಿಗೆ ಚಾಲನೆ

(ನ್ಯೂಸ್ ಕಡಬ) newskadaba.com ಕಡಬ, ಡಿ.05. ಠಾಣಾ ವ್ಯಾಪ್ತಿಯಲ್ಲಿ ವಿವಿಧ ಪ್ರಕರಣಗಳಲ್ಲಿ ಸ್ವಾಧೀನಪಡಿಸಿಕೊಂಡ ನೋಂದಣಿಯಾಗದ ಬೈಕ್ ಸೇರಿ 9 ಬೈಕುಗಳು ಹಾಗೂ ಸ್ವಿಫ್ಟ್ ಕಾರಿನ ಮಾಲಕರಿಗೆ ವಾಹನಗಳನ್ನು ಮಾನ್ಯ ನ್ಯಾಯಾಲಯದೊಂದಿಗೆ ವ್ಯವಹರಿಸಿ ಬಿಡುಗಡೆಗೊಳಿಸಿಕೊಳ್ಳುವಂತೆ ಸೂಚನೆ ನೀಡಲಾಗಿದ್ದರೂ ಇದುವರೆಗೂ ಯಾವುದೇ ವಾಹನಗಳನ್ನು ಬಿಡುಗಡೆಗೊಳಿಸಿರುವುದಿಲ್ಲ. ಈ ಪ್ರಕಟಣೆಯ ಒಂದು ವಾರದೊಳಗೆ ವಾಹನಗಳನ್ನು ಬಿಡುಗಡೆಗೊಳಿಸದೆ ಇದ್ದಲ್ಲಿ ಮಾನ್ಯ ನ್ಯಾಯಾಲಯದ ಅನುಮತಿ ಪಡೆದುಕೊಂಡು ಸದ್ರಿ ವಾಹನಗಳನ್ನು ಬಹಿರಂಗ ಹರಾಜು ಹಾಕಲಾಗುವುದು ಎಂದು ಕಡಬ ಠಾಣಾ ಉಪನಿರೀಕ್ಷಕರಾದ ಪ್ರಕಾಶ್ ದೇವಾಡಿಗ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕಡಬ ಠಾಣೆಯ ಸ್ವಾಧೀನದಲ್ಲಿರುವ ವಿವಿಧ ವಾಹನಗಳ ಮಾಲಕರಿಗೆ ಸೂಚನೆ ► ವಾರದೊಳಗೆ ವಾಹನಗಳನ್ನು ಬಿಡಿಸದಿದ್ದಲ್ಲಿ ಬಹಿರಂಗ ಹರಾಜಿಗೆ ಚಾಲನೆ Read More »

ಕರಾವಳಿ

ಮರ್ಧಾಳ: ಕ್ಯಾನ್ಸರ್ ಪೀಡಿತ ಬಾಲಕನ ಚಿಕಿತ್ಸೆಗೆ ► ಬೇಕಾಗಿದೆ ದಾನಿಗಳ ಸಹಾಯಹಸ್ತ

(ನ್ಯೂಸ್ ಕಡಬ) newskadaba.com ಕಡಬ, ಡಿ.05. ಶಾಲೆಗೆ ಹೋಗಿ ಶಿಕ್ಷಣ ಕಲಿತು ಉನ್ನತ ಮಟ್ಟಕ್ಕೇರಬೇಕಿದ್ದ ಬಾಲಕನೋರ್ವ ಕ್ಯಾನ್ಸರ್ ಎಂಬ ಮಹಾಮಾರಿಗೆ ತುತ್ತಾಗಿ ಇದೀಗ ಆಸ್ಪತ್ರೆಯಲ್ಲಿ ದಿನದೂಡುತ್ತಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ದಾನಿಗಳ ಸಹಾಯಹಸ್ತ ಬೇಕಾಗಿದೆ. ಪುತ್ತೂರು ತಾಲೂಕಿನ ಬಂಟ್ರ ಗ್ರಾಮದ ಕಂಪ ನಿವಾಸಿ ಸುರೇಶ್ ಗೌಡ ಹಾಗೂ ಲಲಿತಾ ದಂಪತಿಯ ಪ್ರಥಮ ಪುತ್ರ ಮರ್ಧಾಳ ಸೈಂಟ್ ಮೇರೀಸ್ ಪ್ರೌಢಶಾಲೆಯ 9ನೇ ತರಗತಿ ವಿದ್ಯಾರ್ಥಿ ರಾಜೇಶ್ ಕ್ಯಾನ್ಸರ್ ರೋಗಕ್ಕೀಡಾಗಿ ಮಂಗಳೂರಿನ ಕೆಎಂಸಿ ಆಸ್ಪತ್ರೆಯಲ್ಲಿ ಒಳರೋಗಿಯಾಗಿ ಚಿಕಿತ್ಸೆ ಪಡೆಯುತ್ತಿದ್ದಾನೆ. 2014 ರಲ್ಲಿ ಮೈ

ಮರ್ಧಾಳ: ಕ್ಯಾನ್ಸರ್ ಪೀಡಿತ ಬಾಲಕನ ಚಿಕಿತ್ಸೆಗೆ ► ಬೇಕಾಗಿದೆ ದಾನಿಗಳ ಸಹಾಯಹಸ್ತ Read More »

ಕರಾವಳಿ

ಗೇರುಕಟ್ಟೆ: ಪೂರ್ವದ್ವೇಷದ ಹಿನ್ನಲೆ ► ಮೂವರಿಗೆ ಚೂರಿ ಇರಿತ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಡಿ.04. ತಂಡವೊಂದು ಯುವಕರ ಮೇಲೆ ಮಾರಕಾಯುಧಗಳಿಂದ ಹಲ್ಲೆ ನಡೆಸಿದ ಪರಿಣಾಮ ಮೂವರು ಯುವಕರು ಗಾಯಗೊಂಡ ಘಟನೆ ಬೆಳ್ತಂಗಡಿ ಠಾಣಾ ವ್ಯಾಪ್ತಿಯ ಗೇರುಕಟ್ಟೆ ಎಂಬಲ್ಲಿ ಸೋಮವಾರ ರಾತ್ರಿ ನಡೆದಿದೆ. ಗಾಯಾಳುಗಳನ್ನು ಗೇರುಕಟ್ಟೆ ನಿವಾಸಿಗಳಾದ ತಸ್ಲೀಂ, ಅವರ ಸಹೋದರ ಹಾರಿಸ್ ಹಾಗೂ ಶಿಹಾಬ್ ಎಂದು ಗುರುತಿಸಲಾಗಿದ್ದು, ಇವರು ಸೋಮವಾರ ರಾತ್ರಿ ಗೇರುಕಟ್ಟೆ ಬಸ್ ತಂಗುದಾಣದ ಸಮೀಪದ ಅಂಗಡಿಯೊಂದರಲ್ಲಿ ಕುಳಿತಿದ್ದರೆನ್ನಲಾಗಿದೆ. ಅಲ್ಲಿಗೆ ಬಂದ ಸ್ಥಳೀಯ ನಿವಾಸಿಗಳಾದ ಯಾಕುಬ್, ಉಮರಬ್ಬ, ರವೂಫ್ ಹಾಗೂ ಇತರರ ತಂಡವೊಂದು ಮೂವರ

ಗೇರುಕಟ್ಟೆ: ಪೂರ್ವದ್ವೇಷದ ಹಿನ್ನಲೆ ► ಮೂವರಿಗೆ ಚೂರಿ ಇರಿತ Read More »

ಕರಾವಳಿ

ಕಲ್ಲಾಜೆ: ಸವಾರನ ನಿಯಂತ್ರಣ ತಪ್ಪಿ ಸ್ಕಿಡ್ ಆದ ಬೈಕ್ ► ರಸ್ತೆಗೆಸೆಯಲ್ಪಟ್ಟ ಸವಾರ ಗಂಭೀರ

(ನ್ಯೂಸ್ ಕಡಬ) newskadaba.com ಕಡಬ, ಡಿ.04. ಬೈಕ್ ಸ್ಕಿಡ್ ಆಗಿ ಬಿದ್ದ ಪರಿಣಾಮ ಸವಾರ ರಸ್ತೆಗೆಸೆಯಲ್ಪಟ್ಟು ಗಂಭೀರ ಗಾಯಗೊಂಡ ಘಟನೆ ಸೋಮವಾರದಂದು ಸುಬ್ರಹ್ಮಣ್ಯ-ಉಪ್ಪಿನಂಗಡಿ ರಾಜ್ಯ ಹೆದ್ದಾರಿಯ ಕಲ್ಲಾಜೆ ಎಂಬಲ್ಲಿ ನಡೆದಿದೆ. ಗಂಭೀರ ಗಾಯಗೊಂಡಿರುವ ಗಾಯಾಳುವನ್ನು ಕೊಂಬಾರು ನಿವಾಸಿ ಚಿದಾನಂದ (26) ಎಂದು ಗುರುತಿಸಲಾಗಿದೆ. ಈತ ಮರ್ಧಾಳದಿಂದ ತನ್ನ ಮನೆಯ ಕಡೆಗೆ ಬೈಕಿನಲ್ಲಿ ತೆರಳುತ್ತಿದ್ದಾಗ ಸ್ಕಿಡ್ ಆಗಿ ನಿಯಂತ್ರಣ ತಪ್ಪಿದ ಬೈಕ್ ರಸ್ತೆಗೆ ಬಿದ್ದಿದ್ದು, ಚಿದಾನಂದದ ತಲೆಗೆ ಏಟಾಗಿದೆ. ತಕ್ಷಣವೇ ಕಡಬ ಸಮುದಾಯ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ

ಕಲ್ಲಾಜೆ: ಸವಾರನ ನಿಯಂತ್ರಣ ತಪ್ಪಿ ಸ್ಕಿಡ್ ಆದ ಬೈಕ್ ► ರಸ್ತೆಗೆಸೆಯಲ್ಪಟ್ಟ ಸವಾರ ಗಂಭೀರ Read More »

ಕರಾವಳಿ

ಕಡಬ: ಕಾರು ಢಿಕ್ಕಿ ► ಪಾದಚಾರಿಗೆ ಗಾಯ

(ನ್ಯೂಸ್ ಕಡಬ) newskadaba.com ಕಡಬ, ಡಿ.04. ಕಾರೊಂದು ಢಿಕ್ಕಿ ಹೊಡೆದು ಪಾದಚಾರಿಯೋರ್ವರು ಗಾಯಗೊಂಡ ಘಟನೆ ಇಲ್ಲಿನ ಮುಖ್ಯ ಪೇಟೆಯ ಗಣೇಶ್ ಬಿಲ್ಡಿಂಗ್ ಸಮೀಪ ಸೋಮವಾರ ರಾತ್ರಿ ನಡೆದಿದೆ. ಗಾಯಾಳುವನ್ನು ಕಡಬ ತಾಲೂಕು ಕಛೇರಿಯ ಮುಂಭಾಗದಲ್ಲಿ ಕ್ಯಾಂಟೀನ್ ನಡೆಸುತ್ತಿದ್ದ ಆನಂದ ಶೆಟ್ಟಿ ಎಂದು ಗುರುತಿಸಲಾಗಿದೆ. ಇವರು ರಸ್ತೆ ದಾಟುತ್ತಿದ್ದಾಗ ಕಾರು ಢಿಕ್ಕಿಯಾಗಿದ್ದು, ಇವರನ್ನು ಕಡಬ ಸಮುದಾಯ ಆಸ್ಪತ್ರೆಗೆ ದಾಖಲಿಸಲಾಗಿ ಚಿಕಿತ್ಸೆ ನೀಡಲಾಯಿತು.

ಕಡಬ: ಕಾರು ಢಿಕ್ಕಿ ► ಪಾದಚಾರಿಗೆ ಗಾಯ Read More »

ಕರಾವಳಿ

ಪುಷ್ಪಗಿರಿ ವನ್ಯಧಾಮ ಮತ್ತು ಆನೆ ಕಾರಿಡಾರ್ ಯೋಜನೆಗೆ ತೀವ್ರ ವಿರೋಧ ► ಕಡಬ ತಾಲೂಕು ಕಛೇರಿಯ ಮುಂಭಾಗದಲ್ಲಿ ಪ್ರತಿಭಟನೆ

(ನ್ಯೂಸ್ ಕಡಬ) newskadaba.com ಕಡಬ, ಡಿ.04. ಸರಕಾರವು ಜಾರಿಗೆ ತರಲು ಉದ್ದೇಶಿಸಿರುವ ಕಸ್ತೂರಿ ರಂಗನ್, ಗಾಡ್ಗಿಲ್ ವರದಿ, ವೈಲ್ಡ್ ಲೈಫ್, ಪುಷ್ಪಗಿರಿ ವನ್ಯಧಾಮ ಮತ್ತು ಆನೆ ಕಾರಿಡಾರ್ ಯೋಜನೆಗಳ ವಿರೋಧಿಸಿ ಕಡಬ ತಾಲೂಕು ಕಛೇರಿಯ ಮುಂಭಾಗದಲ್ಲಿ ಬೃಹತ್ ಪ್ರತಿಭಟನೆ ನಡೆಯಿತು. ಕಡಬ ತಾಲೂಕು ವ್ಯಾಪ್ತಿಯ ಬಲ್ಯ, ಕೌಕ್ರಾಡಿ, ಶಿರಾಡಿ, ಶಿಬಾಜೆ, ಕೊಂಬಾರು, ಬಿಳಿನೆಲೆ, ಸುಬ್ರಹ್ಮಣ್ಯ, ಐನೆಕಿದು, ಹರಿಹರ, ಕೊಲ್ಲಮೊಗ್ರು, ಏನೆಕಲ್, ಬಳ್ಪ, ಕೂತ್ಕುಂಜ ಸೇರಿದಂತೆ ಹಲವು ಗ್ರಾಮಗಳನ್ನು ಕಸ್ತೂರಿ ರಂಗನ್ ವರದಿಯಲ್ಲಿ ಉಲ್ಲೇಖಿಸಲಾಗಿದೆ ಮತ್ತು ಗಾಡ್ಗಿಲ್ ವರದಿಯಲ್ಲಿ

ಪುಷ್ಪಗಿರಿ ವನ್ಯಧಾಮ ಮತ್ತು ಆನೆ ಕಾರಿಡಾರ್ ಯೋಜನೆಗೆ ತೀವ್ರ ವಿರೋಧ ► ಕಡಬ ತಾಲೂಕು ಕಛೇರಿಯ ಮುಂಭಾಗದಲ್ಲಿ ಪ್ರತಿಭಟನೆ Read More »

ಕರಾವಳಿ

ಕೈಕಂಬ: ಕೆಎಸ್ಸಾರ್ಟಿಸಿ ಬಸ್ ಢಿಕ್ಕಿ ► ಪಾದಚಾರಿ ಗಂಭೀರ

(ನ್ಯೂಸ್ ಕಡಬ) newskadaba.com ಕಡಬ, ಡಿ.03. ಪಾದಚಾರಿ ವ್ಯಕ್ತಿಯೋರ್ವರಿಗೆ ಕೆಎಸ್ಸಾರ್ಟಿಸಿ ಬಸ್ಸೊಂದು ಢಿಕ್ಕಿ ಹೊಡೆದ ಪರಿಣಾಮ ಪಾದಚಾರಿ ಗಂಭೀರ ಗಾಯಗೊಂಡ ಘಟನೆ ಭಾನುವಾರ ಸಂಜೆ ಕೈಕಂಬ ಎಂಬಲ್ಲಿ ನಡೆದಿದೆ. ಧರ್ಮಸ್ಥಳದಿಂದ ಸುಬ್ರಹ್ಮಣ್ಯ ಮೂಲಕ ಬೆಂಗಳೂರಿಗೆ ತೆರಳುತ್ತಿದ್ದ ಬಸ್ ಕೈಕಂಬ ಸರಕಾರಿ ಶಾಲೆಯ ಬಳಿಯಿಂದ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಗೆ ಢಿಕ್ಕಿ ಹೊಡೆದಿದೆ. ತಕ್ಷಣವೇ ಗಾಯಾಳುವನ್ನು ಪಿಕಪ್ ವಾಹನದ ಮೂಲಕ ಕರೆದುಕೊಂಡು ಬಂದು ಕಡಬ ಸಮುದಾಯ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಎ.ಜೆ. ಆಸ್ಪತ್ರೆಗೆ ಕರೆದುಕೊಂಡು

ಕೈಕಂಬ: ಕೆಎಸ್ಸಾರ್ಟಿಸಿ ಬಸ್ ಢಿಕ್ಕಿ ► ಪಾದಚಾರಿ ಗಂಭೀರ Read More »

ಕರಾವಳಿ

ಇಂದು ರಾತ್ರಿ ಕಡಬ ಟೌನ್‌ ಜುಮಾ ಮಸೀದಿಯಲ್ಲಿ ► ‘ಡ್ರೀಂ ಯೂತ್’ ಮಾದಕ‌ ವಸ್ತುಗಳ ಜಾಗೃತಿ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಕಡಬ, ಡಿ.03. ದೇಶದ ಯುವ ಜನತೆಗೆ‌ ಮಾರಕವಾಗಿರುವ ಗಾಂಜಾ, ಅಫೀಮುಗಳ ಬಗ್ಗೆ ಜಾಗೃತಿ ಮೂಡಿಸುವ ಸಲುವಾಗಿ ‘ಡ್ರೀಂ ಯೂತ್’ ಎಂಬ ವಿಷಯದಲ್ಲಿ ಕಡಬದಲ್ಲಿ ಇಂದು ರಾತ್ರಿ 7.30 ಗಂಟೆಗೆ ವಿಚಾರ ಸಂಕಿರಣ ನಡೆಯಲಿದೆ. ಕಡಬ ರಹ್ಮಾನಿಯಾ ಜುಮಾ‌‌ ಮಸೀದಿಯ ವಠಾರದಲ್ಲಿ ಕಡಬದ ಮುಈನುಲ್ ಇಸ್ಲಾಂ ಮದ್ರಸದ ಹಳೆ ವಿದ್ಯಾರ್ಥಿ ಸಂಘದ ವತಿಯಿಂದ ನಡೆಯಲಿರುವ ಈ ವಿಚಾರಗೋಷ್ಠಿಯನ್ನು ಮಂಗಳೂರಿನ ಕೇಂದ್ರ ಮಸೀದಿಯ ಖತೀಬರಾದ ಸ್ವದಕತುಲ್ಲಾ ಫೈಝಿ ಮಂಡಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ಇಂದು ರಾತ್ರಿ ಕಡಬ ಟೌನ್‌ ಜುಮಾ ಮಸೀದಿಯಲ್ಲಿ ► ‘ಡ್ರೀಂ ಯೂತ್’ ಮಾದಕ‌ ವಸ್ತುಗಳ ಜಾಗೃತಿ ಕಾರ್ಯಕ್ರಮ Read More »

ಕರಾವಳಿ
Scroll to Top