ಕರಾವಳಿ

ಇಂದಿನ ಹವಾಮಾನ ವರದಿ

(ನ್ಯೂಸ್‌ ಕಡಬ) newskadaba.com,ಡಿ.31: ರಾಜ್ಯದಲ್ಲಿ ಒಣಹವೆ ಮುಂದುವರಿದಿದ್ದು, ಮುಂದಿನ ದಿನಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬೆಂಗಳೂರಿನಲ್ಲಿ ಜ.3ರವರೆಗೂ ಚಳಿಯ ವಾತಾವರಣ ಮುಂದುವರಿಯಲಿದೆ.   ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 28 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 19 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 28 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 16 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

ಇಂದಿನ ಹವಾಮಾನ ವರದಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ದಿಲ್ಲಿಯಲ್ಲಿ ದಟ್ಟ ಮಂಜು – 118 ವಿಮಾನಗಳ ಹಾರಾಟ ರದ್ದು

(ನ್ಯೂಸ್‌ ಕಡಬ) newskadaba.com,ಡಿ.29:  ಉತ್ತರ ಭಾರತದಾದ್ಯಂತ ವಿಮಾನ ಕಾರ್ಯಾಚರಣೆಯ ಮೇಲೆ ಪರಿಣಾಮ ಬೀರುವ ಮಂಜು ಮತ್ತು ಕಡಿಮೆ ಗೋಚರತೆಯ ಮಧ್ಯೆ ನಾಗರಿಕ ವಿಮಾನಯಾನ ಸಚಿವಾಲಯ ಮಂಗಳವಾರ ವಿಮಾನಯಾನ ಸಂಸ್ಥೆಗಳಿಗೆ ಪ್ರಯಾಣಿಕರ ಸೌಲಭ್ಯ ಮಾನದಂಡಗಳನ್ನು ಪಾಲಿಸುವಂತೆ ಸೂಚನೆ ನೀಡಿದೆ. ಮಂಗಳವಾರ ದೆಹಲಿ ವಿಮಾನ ನಿಲ್ದಾಣದಲ್ಲಿ 118 ವಿಮಾನಗಳ ಸಂಚಾರ ರದ್ದಾದ ನಂತರ, 16 ವಿಮಾನಗಳ ಸಂಚಾರ ಮಾರ್ಗ ಬದಲಾವಣೆ ಮತ್ತು 130 ಸೇವೆಗಳ ಸಂಚಾರ ವಿಳಂಬವಾದ ನಂತರ ಈ ಕ್ರಮ ಕೈಗೊಳ್ಳಲಾಗಿದೆ. ವಿಮಾನ ನಿಲ್ದಾಣದಲ್ಲಿ 60 ಆಗಮನ ಮತ್ತು 58

ದಿಲ್ಲಿಯಲ್ಲಿ ದಟ್ಟ ಮಂಜು – 118 ವಿಮಾನಗಳ ಹಾರಾಟ ರದ್ದು Read More »

ಕರಾವಳಿ

ದೇಶದಾದ್ಯಂತ ಚಿನ್ನದ ಮೇಲೆ ಲೋನ್ ಗೆ 6 ಹೊಸ ರೂಲ್ಸ್! 2026 ರಿಂದಲೇ ಜಾರಿ.

(ನ್ಯೂಸ್‌ ಕಡಬ) newskadaba.com,ಡಿ.30 ಭಾರತೀಯ ರಿಸರ್ವ್ ಬ್ಯಾಂಕ್ ಇತ್ತೀಚೆಗೆ ಹೊರಡಿಸಿರುವ ಮಹತ್ವದ ಆದೇಶವೊಂದು ಚಿನ್ನದ ಸಾಲದ ಮಾರುಕಟ್ಟೆಯಲ್ಲಿ ದೊಡ್ಡ ಸಂಚಲನ ಮೂಡಿಸಿದೆ. ಸಾಮಾನ್ಯವಾಗಿ ಚಿನ್ನದ ಸಾಲದ ನಿಯಮಗಳು ಬ್ಯಾಂಕ್ ಮತ್ತು ಹಣಕಾಸು ಸಂಸ್ಥೆಗಳಿಗೆ ಬೇರೆ ಬೇರೆಯಾಗಿರುತ್ತಿದ್ದವು. ಆದರೆ, ಈ ಗೊಂದಲಗಳನ್ನು ನಿವಾರಿಸಲು ಮತ್ತು ಗ್ರಾಹಕರ ಹಿತರಕ್ಷಣೆಗೆ ಆರ್‌ಬಿಐ ಒಂದು ಕಠಿಣ ಹೆಜ್ಜೆ ಇಟ್ಟಿದೆ. ಆರ್‌ಬಿಐ ‘ಮಾಸ್ಟರ್ ಡೈರೆಕ್ಷನ್ ಆನ್ ಗೋಲ್ಡ್ ಲೋನ್’ ಎಂಬ ಹೊಸ ಸಮಗ್ರ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ. ಈ ಹೊಸ ನಿಯಮಗಳನ್ನು ಜಾರಿಗೆ ತರಲು

ದೇಶದಾದ್ಯಂತ ಚಿನ್ನದ ಮೇಲೆ ಲೋನ್ ಗೆ 6 ಹೊಸ ರೂಲ್ಸ್! 2026 ರಿಂದಲೇ ಜಾರಿ. Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಕೆಗೆ ಅನುಮತಿ….!

(ನ್ಯೂಸ್‌ ಕಡಬ) newskadaba.com,ಡಿ.30 ಕರ್ನಾಟಕದಲ್ಲಿ ಪಂಚ ಗ್ಯಾರಂಟಿ ಯೋಜನೆಗಳು ಜನಪ್ರಿಯಗೊಂಡಿರುವುದರೊಂದಿಗೆ, ಆಹಾರ ಧಾನ್ಯ ಸಬ್ಸಿಡಿ, ಗೃಹಲಕ್ಷ್ಮೀ ಮತ್ತು ಅನ್ನಭಾಗ್ಯದಂತಹ ಸೌಲಭ್ಯಗಳನ್ನು ಪಡೆಯಲು ರೇಷನ್ ಕಾರ್ಡ್ ಅಗತ್ಯವಾಗಿದೆ. ಆದರೆ, ಅನರ್ಹ ಕಾರ್ಡ್‌ಗಳ ರದ್ದತಿ ಅಭಿಯಾನದಿಂದ ಹೊಸ ಅರ್ಜಿಗಳು ನಿಲ್ಲಿಸಲ್ಪಟ್ಟಿದ್ದವು. ಇದೀಗ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯು ವಿಶೇಷ ವರ್ಗಗಳಿಗೆ ಮಾತ್ರ ಹೊಸ ಬಿಪಿಎಲ್ ಮತ್ತು ಅಂತ್ಯೋದಯ ರೇಷನ್ ಕಾರ್ಡ್‌ಗಳಿಗೆ ಅವಕಾಶ ನೀಡಿದೆ.ಈ ಯೋಜನೆಯ ಮೂಲಕ, ಅಸಂಘಟಿತ ಕಾರ್ಮಿಕರು, ಬುಡಕಟ್ಟು ಸಮುದಾಯಗಳು ಮತ್ತು ತುರ್ತು ವೈದ್ಯಕೀಯ ಅಗತ್ಯರಿಗಳು ಸಬ್ಸಿಡಿ

ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಕೆಗೆ ಅನುಮತಿ….! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಟೆಂಪೋ ಡಿಕ್ಕಿ, ಕಾಸರಗೋಡು ಮೂಲದ ಶಿಕ್ಷಕ ಮೃತ್ಯು

(ನ್ಯೂಸ್‌ ಕಡಬ) newskadaba.com,ಡಿ.30  ಕಡಬ-ಡಿಸೆಂಬರ್ ೨೯ ರಂದು ಮಧ್ಯಾಹ್ನ ಅತ್ತೂರಿನಲ್ಲಿ ಟೆಂಪೋ ಡಿಕ್ಕಿ ಹೊಡೆದ ಪರಿಣಾಮ ಪಾದಚಾರಿಯೊಬ್ಬರು ಸಾವನ್ನಪ್ಪಿದ್ದಾರೆ. ಮೃತರನ್ನು ಕಡಬದ ಸುಂಕದಕಟ್ಟೆ ನಿವಾಸಿ ಅಬ್ದುಲ್ ಖಾದರ್ ಸಖಾಫಿ (೫೩) ಎಂದು ಗುರುತಿಸಲಾಗಿದ್ದು, ಕಾಸರಗೋಡಿನ ಧಾರ್ಮಿಕ ಸಂಸ್ಥೆಯಲ್ಲಿ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದರು. ಸಂಬಂಧಿಕರೊಬ್ಬರ ಮದರಂಗಿ ಸಮಾರಂಭದಲ್ಲಿ ಭಾಗವಹಿಸಲು ಅವರು ತಮ್ಮ ಕುಟುಂಬದೊಂದಿಗೆ ಬಂದಿದ್ದರು. ಉಪ್ಪಿನಂಗಡಿ-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಅತೂರಿನಲ್ಲಿ ಬಸ್ಸಿನಿಂದ ಇಳಿದ ನಂತರ, ಅವರು ತಮ್ಮ ಕುಟುಂಬವನ್ನು ಆಟೋರಿಕ್ಷಾದಲ್ಲಿ ಮುಂದೆ ಕಳುಹಿಸಿ ಸ್ಥಳದ ಕಡೆಗೆ ನಡೆದುಕೊಂಡು ಹೋಗುತ್ತಿದ್ದಾಗ

ಟೆಂಪೋ ಡಿಕ್ಕಿ, ಕಾಸರಗೋಡು ಮೂಲದ ಶಿಕ್ಷಕ ಮೃತ್ಯು Read More »

ಕರಾವಳಿ

ಸೈನಿಕ್ ಶಾಲೆ ನೇಮಕಾತಿ 2026: ಟೀಚರ್ ಮತ್ತು ವಾರ್ಡ್ ಬಾಯ್ ಹುದ್ದೆಗಳಿಗೆ ಅರ್ಜಿ ಆಹ್ವಾನ

(ನ್ಯೂಸ್‌ ಕಡಬ) newskadaba.com,ಡಿ.30:  ಮನೆಯಲ್ಲಿ ಕೆಲಸವಿಲ್ಲದೆ ಕುಳಿತಿರುವ ಪದವೀಧರರು ಅಥವಾ 10ನೇ ತರಗತಿ ಪಾಸಾದ ಅಭ್ಯರ್ಥಿಗಳಿದ್ದಾರೆಯೇ? ಪ್ರತಿಷ್ಠಿತ ಸೈನಿಕ್ ಶಾಲೆಯಲ್ಲಿ ಕೆಲಸ ಗಿಟ್ಟಿಸಿಕೊಳ್ಳಬೇಕು ಎಂಬುದು ನಿಮ್ಮ ಕನಸೇ? ಹಾಗಿದ್ದರೆ ನಿಮಗೊಂದು ಸಿಹಿ ಸುದ್ದಿ ಇದೆ. ವಿಜಯಪುರ ಸೈನಿಕ್ ಶಾಲೆಯು ಖಾಲಿ ಇರುವ ವಿವಿಧ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಈ ನೇಮಕಾತಿಯಲ್ಲಿ ಕೇವಲ ಶಿಕ್ಷಕರಿಗೆ ಮಾತ್ರವಲ್ಲದೆ, ಇತರೆ ಸೇವಾ ವಿಭಾಗಗಳಿಗೂ ಆದ್ಯತೆ ನೀಡಲಾಗಿದೆ. PGT ಮತ್ತು TGT ಶಿಕ್ಷಕರು,

ಸೈನಿಕ್ ಶಾಲೆ ನೇಮಕಾತಿ 2026: ಟೀಚರ್ ಮತ್ತು ವಾರ್ಡ್ ಬಾಯ್ ಹುದ್ದೆಗಳಿಗೆ ಅರ್ಜಿ ಆಹ್ವಾನ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಂಗಳೂರು : ಜೈಲಿನಲ್ಲಿ ದಿಢೀರ್ ತಪಾಸಣೆ – 2 ಮೊಬೈಲ್, ಸಿಮ್ ಕಾರ್ಡ್ ಪತ್ತೆ

(ನ್ಯೂಸ್‌ ಕಡಬ) newskadaba.com,ಡಿ.29:  ಕಾರಾಗೃಹದ ಅಧೀಕ್ಷಕರ ನೇತೃತ್ವದಲ್ಲಿ ಕಾರಾಗೃಹದ ಅಧಿಕಾರಿ ಹಾಗೂ ಸಿಬ್ಬಂದಿ ಸೋಮವಾರ ತಡರಾತ್ರಿ ನಡೆಸಿದ ದಿಢೀರ್ ತಪಾಸಣೆ ಸಂದರ್ಭ 2 ಮೊಬೈಲ್‌ಗಳು, 1 ಸಿಮ್ ಕಾರ್ಡ್ ಮತ್ತು 1 ಕೇಬಲ್ ರಹಿತ ಮೊಬೈಲ್ ಚಾರ್ಜ ರ್ ಜಪ್ತಿ ಮಾಡಿ ವಶಕ್ಕೆ ತೆಗೆದುಕೊಳ್ಳಲಾಗಿದೆ. ಇವು ಕಾರಾಗೃಹದಲ್ಲಿ ನಿಷೇಧಿತ ವಸ್ತುಗಳಾಗಿರುವುದರಿಂದ ಮಂಗಳೂರು ಬರ್ಕೆ ಪೊಲೀಸ್ ಠಾಣೆಗೆ ನೀಡಿ ಪ್ರಕರಣ ದಾಖಲಿಸಲಾಗಿರುತ್ತದೆ. ಇದೇ ದಿನ ಇಲಾಖೆಯ ಮುಖ್ಯಸ್ಥರಾದ ಮಾನ್ಯ ಅಲೋಕ್ ಕುಮಾರ್ ಐ.ಪಿ.ಎಸ್. ಮಹಾನಿರ್ದೇಶಕರು ಕರ್ನಾಟಕ ಕಾರಾಗೃಹ ಮತ್ತು

ಮಂಗಳೂರು : ಜೈಲಿನಲ್ಲಿ ದಿಢೀರ್ ತಪಾಸಣೆ – 2 ಮೊಬೈಲ್, ಸಿಮ್ ಕಾರ್ಡ್ ಪತ್ತೆ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಬಂಟ್ವಾಳ : ಸಹೃದಯಿ ದಾನಿಗಳ ಸಹಾಯದಿಂದ ನಿರ್ಮಾಣಗೊಂಡ ಮನೆಯ ಕೀಲಿ ಕೈ ಹಸ್ತಾಂತರ

(ನ್ಯೂಸ್‌ ಕಡಬ) newskadaba.com,ಡಿ.30  ಬಂಟ್ವಾಳ: ಕಡು ಬಡವರಿಗೆ ಆಶಾದೀಪವಾಗಿರುವ ಯುವ ಉದ್ಯಮಿ ರೊನಾಲ್ಡ್ ಮಾರ್ಟೀಸ್ ನೇತೃತ್ವದಲ್ಲಿ ಸಜೀಪ ದಸರಾ ಶತಮಾನೋತ್ಸವ ಸಮಿತಿಯ ವತಿಯಿಂದ ಹಾಗೂ ಸಹೃದಯಿ ದಾನಿಗಳ ಸಹಾಯದಿಂದ ನಿರ್ಮಾಣಗೊಂಡ ಮನೆಯ ಕೀಲಿ ಕೈ ಹಸ್ತಾಂತರ ಕಾರ್ಯಕ್ರಮ ನಡೆಯಿತು. ಶ್ರೀ ಶಾರದಾ ಪೂಜಾ ಮಹೋತ್ಸವ ಸುಭಾಷ್ ಯುವಕ ಮಂಡಲ (ರಿ.) ಸುಭಾಷ್ ನಗರ ಹಾಗೂ ಶಾರದಾ ಪೂಜಾ ಮಹೋತ್ಸವದ 100ನೇ ವರ್ಷದ ಸಜೀಪ ದಸರಾ ಮಹೋತ್ಸವದ ಅಂಗವಾಗಿ ಅಸಹಾಯಕರಿಗೆ “ಆಸರೆ ಯೋಜನೆ” ಅಡಿಯಲ್ಲಿ ಬಂಟ್ವಾಳ ತಾಲೂಕಿನ ಸಜೀಪಮೂಡ

ಬಂಟ್ವಾಳ : ಸಹೃದಯಿ ದಾನಿಗಳ ಸಹಾಯದಿಂದ ನಿರ್ಮಾಣಗೊಂಡ ಮನೆಯ ಕೀಲಿ ಕೈ ಹಸ್ತಾಂತರ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಪುಷ್ಪರಥವಾಗಿ ರೂಪಾಂತರಗೊಂಡು ಸುಳ್ಯ ಚೆನ್ನಕೇಶವ ದೇವಸ್ಥಾನಕ್ಕೆ ಬಂದ ಹಳೆರಥ

(ನ್ಯೂಸ್‌ ಕಡಬ) newskadaba.com,ಡಿ.30 :ಸುಳ್ಯ ಶ್ರೀ ಚೆನ್ನಕೇಶವ ದೇವಸ್ಥಾನಕ್ಕೆ ಕಳೆದ ವರ್ಷ ಡಾ.ಕೆ.ವಿ.ಚಿದಾನಂದರು ನೂತನ ಬ್ರಹ್ಮರಥ ಕೊಡುವವರೆಗೆ ಚಿನ್ನಕೇಶವ ದೇವರ ರಥವಾಗಿ ಜಾತ್ರೆಯ ಸಮಯದಲ್ಲಿ ಎಳೆಯಲ್ಪಡುತ್ತಿದ್ದ ಹಳೆಯ ರಥವು ಈಗ ಪುಷ್ಪರಥವಾಗಿ ರೂಪಾಂತರಗೊಂಡು ಮತ್ತೆ ಚೆನ್ನಕೇಶವ ದೇವಸ್ಥಾನಕ್ಕೆ ಬಂದಿದೆ. ಕಳೆದ ವರ್ಷ ನೂತನ ಬ್ರಹ್ಮರಥ ಸುಳ್ಯಕ್ಕೆ ಬರುವ ಮೊದಲು ಹಳಿರಥವನ್ನು ಕುಂದಾಪುರಕ್ಕೆ ಕೊಂಡೊಯ್ದು ಕೋಟೇಶ್ವರದಲ್ಲಿರುವ ರಥ ಶಿಲ್ಪಿ ರಾಜಗೋಪಾಲಾಚಾರ್ಯರ ಪಕ ನೀಡಲಾಗಿತ್ತು. ಅದನ್ನು ಕಿರಿದುಗೊಳಿಸಿ. ದೇವಸ್ಥಾನದ ಒಳಭಾಗದಲ್ಲಿ ಭಕ್ತರ ಪುಸ್ತರದ ಸೇವೆಗೆ ಬಳಸಿಕೊಳ್ಳಲು ನಿರ್ಧರಿಸಲಾಗಿತ್ತು. ಅದನ್ನು ಕಿರಿದುಗೊಳಿಸಿ

ಪುಷ್ಪರಥವಾಗಿ ರೂಪಾಂತರಗೊಂಡು ಸುಳ್ಯ ಚೆನ್ನಕೇಶವ ದೇವಸ್ಥಾನಕ್ಕೆ ಬಂದ ಹಳೆರಥ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸುಳ್ಯ ಜಿಎಲ್ ಆಚಾರ್ಯ ಜ್ಯುವೆಲ್ಲರ್ಸ್ ನಲ್ಲಿ ವರ್ಷಾಂತ್ಯದ ಕೊಡುಗೆಗಳು

(ನ್ಯೂಸ್‌ ಕಡಬ) newskadaba.com,ಡಿ.30 :ಸುಳ್ಯ ಮುಖ್ಯ ರಸ್ತೆಯಲ್ಲಿರುವ ಪ್ರತಿಷ್ಠಿತ ಜಿನ್ನಾಭರಣಗಳ ಮಳಿಗೆ ಜಿಎಲ್ ಆಚಾರ್ಯ ಜ್ಯುವೆಲ್ಲರ್ಸ್ ತನ್ನ ಗ್ರಾಹಕರಿಗೆ ವರ್ಷಾಂತ್ಯದ ಕೊಡುಗೆಗಳನ್ನು ಘೋಷಿಸಿದೆ. ಚಿನ್ನದ ಬೆಲೆ ಗಗನಮುಖಿಯಾಗುತ್ತಿರುವ ನಡುವೆ ಜಿಲ್ ಆಚಾರ್ಯ ಜ್ಯುವೆಲ್ಲರ್ಸ್ ಚಿನ್ನಾಭರಣಗಳ ತಯಾರಿಕಾ ವೆಚ್ಚದ (ಮೇಕಿಂಗ್ ಚಾರ್ಜ್) ಮೇಲೆ ಪ್ರತೀ ಗ್ರಾಂಗೆ 400 ರೂ. ವರೆಗೆ ರಿಯಾಯಿತಿ ನೀಡುತ್ತಿದೆ. ಈ ಕೊಡುಗೆ ಡಿ.25 ರಿಂದ ಪ್ರಾರಂಭವಾಗಿದ್ದು, ಡಿ.31ರ ವರೆಗೆ ಇರಲಿದೆ. ಹೆಚ್ಚಿನ ಮಾಹಿತಿಗಾಗಿ 9482383606 ಸಂಪರ್ಕಿಸುವಂತೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಈಗಾಗಲೇ ಸಂಸ್ಥೆಯಲ್ಲಿ ಗೊ ಫೆಸ್ಟ್

ಸುಳ್ಯ ಜಿಎಲ್ ಆಚಾರ್ಯ ಜ್ಯುವೆಲ್ಲರ್ಸ್ ನಲ್ಲಿ ವರ್ಷಾಂತ್ಯದ ಕೊಡುಗೆಗಳು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top