ಕರಾವಳಿ

ವಿಟ್ಲ: ಲಾರಿ – ಬೈಕ್ ಢಿಕ್ಕಿ ► ಸವಾರರಿಬ್ಬರು ಗಂಭೀರ

(ನ್ಯೂಸ್ ಕಡಬ) newskadaba.com ವಿಟ್ಲ, ನ.23. ಗೂಡ್ಸ್ ಲಾರಿ ಮತ್ತು ಯಮಹಾ FZ ಬೈಕ್ ನಡುವೆ ಢಿಕ್ಕಿ ಸಂಭವಿಸಿ ಸವಾರರಿಬ್ಬರು ಗಂಭೀರ ಗಾಯಗೊಂಡ ಘಟನೆ ಗುರುವಾರದಂದು ಕಾಡುಮಠ ಸೇತುವೆ ಸಮೀಪದ ಅಪಾಯಕಾರಿ ತಿರುವಿನಲ್ಲಿ ನಡೆದಿದೆ. ಘಟನೆಯಲ್ಲಿ ಮಂಚಿ ಸಮೀಪದ ನಾಡಾಜೆ ನಿವಾಸಿಗಳಿಬ್ಬರು ಗಂಭೀರ ಗಾಯಗೊಂಡಿದ್ದು, ಗಾಯಾಳುಗಳನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾಡುಮಠ ಸೇತುವೆ ಕಾಮಗಾರಿಯು ಅಪೂರ್ಣವಾಗಿ ಇರುವುದರಿಂದ ಹಳೆಯ ರಸ್ತೆ ಮತ್ತು ಹೊಸ ರಸ್ತೆಯ ಬಗ್ಗೆ ವಾಹನ ಚಾಲಕರಲ್ಲಿ ಗೊಂದಲ ಉಂಟಾಗುತ್ತಿದ್ದು, ಕಳೆದ ಎರಡು ತಿಂಗಳಲ್ಲಿ […]

ವಿಟ್ಲ: ಲಾರಿ – ಬೈಕ್ ಢಿಕ್ಕಿ ► ಸವಾರರಿಬ್ಬರು ಗಂಭೀರ Read More »

ಕರಾವಳಿ

ಹಿಂದೂ ಜಾಗರಣಾ ವೇದಿಕೆಯ ಕಡಬ ತಾಲೂಕು ಅಧ್ಯಕ್ಷರಾಗಿ ► ಉದ್ಯಮಿ ಹರೀಶ್ ಉಂಡಿಲ ಆಯ್ಕೆ

(ನ್ಯೂಸ್ ಕಡಬ) newskadaba.com ಕಡಬ, ನ.23. ಹಿಂದೂ ಜಾಗರಣ ವೇದಿಕೆಯ ಕಡಬ ತಾಲೂಕು ಅಧ್ಯಕ್ಷರಾಗಿ ಕಡಬದ ಉದ್ಯಮಿ ಹರೀಶ್ ಉಂಡಿಲ ಮತ್ತು ಕಾರ್ಯದರ್ಶಿಯಾಗಿ ಮಲ್ಲೇಶ್ ಆಲಂಕಾರು ಆಯ್ಕೆಯಾಗಿದ್ದಾರೆ. ಆಲಂಕಾರು ಶ್ರೀ ಭಾರತೀ ಹಿರಿಯ ಪ್ರಾಥಮಿಕ ಶಾಲಾ ಸಭಾಂಗಣದಲ್ಲಿ ಈ ಆಯ್ಕೆ ನಡೆಯಿತು. ಸಂಚಾಲಕರಾಗಿ ವೆಂಕಟ್ರಮಣ ಕುತ್ಯಾಡಿ, ನಿಧಿ ಪ್ರಮುಖರಾಗಿ ಗೋವಿಂದ ರಾಜ್ ಭಟ್ ಮರ್ದಾಳ, ಸಹಸಂಚಾಲಕರಾಗಿ ಪ್ರಮೋದ್ ರೈ ಮರ್ದಾಳ, ಮೋಹನದಾಸ್ ಪುಂಜ ಕುಂತೂರು, ಕಾನೂನು ಸಲಹೆಗಾರರಾಗಿ ನ್ಯಾಯವಾದಿ ಪ್ರಶಾಂತ್ ಪಂಜೋಡಿ ಆಯ್ಕೆಯಾಗಿದ್ದಾರೆ. ಆಯ್ಕೆ ಸಂದರ್ಭದಲ್ಲಿ ಸಂಘಟನೆಯ

ಹಿಂದೂ ಜಾಗರಣಾ ವೇದಿಕೆಯ ಕಡಬ ತಾಲೂಕು ಅಧ್ಯಕ್ಷರಾಗಿ ► ಉದ್ಯಮಿ ಹರೀಶ್ ಉಂಡಿಲ ಆಯ್ಕೆ Read More »

ಕರಾವಳಿ

ಉಡುಪಿ: ಬೈಕಿನಲ್ಲಿ ಸಾಗಿಸುತ್ತಿದ್ದ ನಾಡ ಬಾಂಬ್ ಪತ್ತೆ ► ಮೂವರು ಆರೋಪಿಗಳ ಸೆರೆ

(ನ್ಯೂಸ್ ಕಡಬ) newskadaba.com ಉಡುಪಿ, ನ.22. ನಾಡ ಬಾಂಬ್ ತಯಾರಿಸಿ ಮಾರಾಟ ಮಾಡುವುದಲ್ಲದೆ ಕಾಡುಪ್ರಾಣಿಗಳನ್ನು ಕೊಲ್ಲುತ್ತಿದ್ದ ಪ್ರಕರಣವನ್ನು ಪತ್ತೆ ಹಚ್ಚಿರುವ ಕಾರ್ಕಳ ಪೊಲೀಸರು ಪ್ರಕರಣಕ್ಕೆ ಸಂಬಂಧಿಸಿ ಮೂವರನ್ನು ಬಂಧಿಸಿ, 33 ನಾಡಾ ಬಾಂಬ್‌ಗಳನ್ನು ವಶಪಡಿಸಿಕೊಂಡಿದ್ದಾರೆ. ಬಂಧಿತ ಆರೋಪಿಗಳನ್ನು ಶಂಕರನಾರಾಯಣ ಆಲ್ಬಾಡಿ ಗ್ರಾಮದ ಆರ್ಡಿ ಕೊಳಲಾಡಿಯ ಗುಣಕರ ಶೆಟ್ಟಿ (56), ಲಕ್ಷ್ಮಣ ಶೆಟ್ಟಿ ಯಾನೆ ಲಚ್ಚು ಶೆಟ್ಟಿ (67), ಹೆಬ್ರಿ ಕನ್ಯಾನ ಅರ್ಕುಂಜೆಯ ನಾಗೇಶ್ ನಾಯಕ್ (35) ಎಂದು ಗುರುತಿಸಲಾಗಿದೆ. ಈ ಸಂಬಂಧ ಉಡುಪಿ ಎಸ್ಪಿ ಕಚೇರಿಯಲ್ಲಿ ಬುಧವಾರ

ಉಡುಪಿ: ಬೈಕಿನಲ್ಲಿ ಸಾಗಿಸುತ್ತಿದ್ದ ನಾಡ ಬಾಂಬ್ ಪತ್ತೆ ► ಮೂವರು ಆರೋಪಿಗಳ ಸೆರೆ Read More »

ಕರಾವಳಿ

ಕುಮಾರಧಾರ ನದಿಗೆ ಸ್ನಾನಕ್ಕಿಳಿದ ವಿದ್ಯಾರ್ಥಿ ನೀರುಪಾಲು

(ನ್ಯೂಸ್ ಕಡಬ) newskadaba.com ಪುತ್ತೂರು, ನ.22. ಕುಮಾರಧಾರ ನದಿಯಲ್ಲಿ ಸ್ನಾನಕ್ಕೆಂದು ಇಳಿದ ವಿದ್ಯಾರ್ಥಿಯೋರ್ವ ನೀರುಪಾಲಾದ ಘಟನೆ ಬುಧವಾರ ಸಂಜೆ ಪುತ್ತೂರಿನ ಅಂಬ್ರಿಗೇರಿ ಎಂಬಲ್ಲಿ ನಡೆದಿದೆ. ನೀರುಪಾಲಾದ ವಿದ್ಯಾರ್ಥಿಯನ್ನು ನಗರದ ವಿವೇಕಾನಂದ ಕಾಲೇಜಿನ ಇಂಜಿನಿಯರಿಂಗ್ ವಿಭಾಗದ ಅಂತಿಮ ವರ್ಷದ ವಿದ್ಯಾರ್ಥಿ ಹೇಮಂತ್ ಎಂದು ಗುರುತಿಸಲಾಗಿದೆ. ಹೇಮಂತ್ ತನ್ನ ಐವರು ಸಹಪಾಠಿಗಳೊಂದಿಗೆ ಪುತ್ತೂರಿನ ಬೆಳ್ಳಿಪ್ಪಾಡಿ ಗ್ರಾಮದ ಕಟಾರ ಎಂಬಲ್ಲಿನ ಅಂಬ್ರಿಗೇರಿಯಲ್ಲಿ ಹರಿಯುತ್ತಿರುವ ಕುಮಾರಧಾರ ನದಿಗೆ ಸ್ನಾನಕ್ಕೆಂದು ತೆರಳಿದ್ದು, ನೀರಿನಲ್ಲಿ ಕಣ್ಮರೆಯಾಗಿದ್ದಾನೆ ಎನ್ನಲಾಗಿದೆ. ಘಟನಾ ಸ್ಥಳಕ್ಕೆ ಪುತ್ತೂರು ಪೊಲೀಸರು ಮತ್ತು ಅಗ್ನಿಶಾಮಕ

ಕುಮಾರಧಾರ ನದಿಗೆ ಸ್ನಾನಕ್ಕಿಳಿದ ವಿದ್ಯಾರ್ಥಿ ನೀರುಪಾಲು Read More »

ಕರಾವಳಿ

ಡಿ.03: ಎಸ್ಸೆಸ್ಸೆಫ್ ಮಾಣಿ ಸೆಕ್ಟರ್ ಪ್ರತಿಭೋತ್ಸವ ► ಮರ್ಕಝ್ ರೂಬಿ ಜುಬಿಲಿ ಪ್ರಚಾರ ಸಮ್ಮೇಳನ

(ನ್ಯೂಸ್ ಕಡಬ) newskadaba.com ಮಾಣಿ, ನ.22. ಸುನ್ನೀ ಸ್ಟೂಡೆಂಟ್ ಫೆಡರೇಶನ್ ಎಸ್ಸೆಸ್ಸೆಫ್ ಮಾಣಿ ಸೆಕ್ಟರ್ ಇದರ ವತಿಯಿಂದ ಪ್ರತಿಭೋತ್ಸವ ಹಾಗೂ ಮರ್ಕಝ್ ರೂಬಿ ಜುಬಿಲಿ ಪ್ರಚಾರ ಸಮ್ಮೇಳನವು ಡಿಸೆಂಬರ್ 3 ಆದಿತ್ಯವಾರ ಮಿತ್ತೂರು ಸಮೀಪದ ಪಾಟ್ರಕೋಡಿ ಎಂಬಲ್ಲಿ ನಡೆಯಲಿದೆ. ಅಂದು ಬೆಳಿಗ್ಗೆ 8 ಗಂಟೆಯಿಂದ ಆರಂಭಗೊಳ್ಳಲಿರುವ ಕಾರ್ಯಕ್ರಮ ಸಂಜೆ 6 ಗಂಟೆಗೆ ಸಮಾರೋಪಗೊಳ್ಳಲಿದ್ದು, ಆಕರ್ಷಕ ರ್ಯಾಲಿಯೊಂದಿಗೆ ಆರಂಭಗೊಳ್ಳಲಿರುವ ಕಾರ್ಯಕ್ರಮದಲ್ಲಿ ಅಸ್ಸಯ್ಯಿದ್ ಹಂಝ ಹಾದಿ ತಂಙಳ್ ಪಾಟ್ರಕೋಡಿ ಧ್ವಜಾರೋಹಣಗೈಯ್ಯಲಿದ್ದಾರೆ. ಉದ್ಘಾಟನೆಯನ್ನು ಸುನ್ನೀ ಜಂಇಯ್ಯತುಲ್ ಉಲಮಾ ಕರ್ನಾಟಕ ಇದರ ಪ್ರಧಾನ

ಡಿ.03: ಎಸ್ಸೆಸ್ಸೆಫ್ ಮಾಣಿ ಸೆಕ್ಟರ್ ಪ್ರತಿಭೋತ್ಸವ ► ಮರ್ಕಝ್ ರೂಬಿ ಜುಬಿಲಿ ಪ್ರಚಾರ ಸಮ್ಮೇಳನ Read More »

ಕರಾವಳಿ

ಬೆಳ್ತಂಗಡಿ: ರಿಕ್ಷಾ – ಪಿಕಪ್ ಢಿಕ್ಕಿ ► ಎಲ್.ಕೆ.ಜಿ ವಿದ್ಯಾರ್ಥಿ ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ನ.22. ಶಾಲಾ ಮಕ್ಕಳನ್ನು ಕರೆದುಕೊಂಡು ಹೋಗುತ್ತಿದ್ದ ರಿಕ್ಷಾ ಮತ್ತು ಪಿಕಪ್ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ LKG ವಿದ್ಯಾರ್ಥಿ ಮೃತಪಟ್ಟ ಘಟನೆ ಬೆಳ್ತಂಗಡಿ ತಾಲೂಕಿನ ಬಾರ್ಯ ಎಂಬಲ್ಲಿ ಬುಧವಾರದಂದು ನಡೆದಿದೆ. ಮೃತ ವಿದ್ಯಾರ್ಥಿಯನ್ನು ಬಾರ್ಯ ಗ್ರಾಮದ ಮುದ್ದಡ್ಕ ಮದೀನತ್ತುಲ್ ಮುನವ್ವರ ಆಂಗ್ಲ ಮಾಧ್ಯಮ ಶಾಲೆಯ ಎಲ್.ಕೆ.ಜಿ. ವಿದ್ಯಾರ್ಥಿ ಮಹಮ್ಮದ್ ಸನದ್ ಎಂದು ಗುರುತಿಸಲಾಗಿದೆ. ವಾಹನದಲ್ಲಿದ್ದ ಉಳಿದ ವಿದ್ಯಾರ್ಥಿಗಳು ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ. ಘಟನಾ ಸ್ಥಳಕ್ಕೆ ಬೆಳ್ತಂಗಡಿ

ಬೆಳ್ತಂಗಡಿ: ರಿಕ್ಷಾ – ಪಿಕಪ್ ಢಿಕ್ಕಿ ► ಎಲ್.ಕೆ.ಜಿ ವಿದ್ಯಾರ್ಥಿ ಸ್ಥಳದಲ್ಲೇ ಮೃತ್ಯು Read More »

ಕರಾವಳಿ

ನವಂಬರ್ 24 ಉಡುಪಿಯಲ್ಲಿ ಹಿಂದೂ ಧರ್ಮ ಸಂಸತ್ ಅಧಿವೇಶನ ► ಕಡಬದಲ್ಲಿ ಸಮಾಲೋಚನಾ ಸಭೆ ಹಾಗೂ ಸ್ಟಿಕ್ಕರ್ ಅಂಟಿಸುವ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಕಡಬ, ನ.22. ಉಡುಪಿಯಲ್ಲಿ ನವಂಬರ್ 24 ರಿಂದ 26 ರವರೆಗೆ ನಡೆಯಲಿರುವ ಹಿಂದೂ ಧರ್ಮ ಸಂಸತ್ ಅಧಿವೇಶನ ಮತ್ತು ಹಿಂದೂ ಸಮಜೋತ್ಸವದ ಆಮಂತ್ರಣ ಪತ್ರಿಕೆ ಹಾಗೂ ವಾಹನ,  ಅಂಗಡಿಗಳಿಗೆ ಸ್ಟಿಕ್ಕರ್ ಅಂಟಿಸುವ ಕಾರ್ಯಕ್ರಮ ಕಡಬ ಪೇಟೆಯಲ್ಲಿ ನಡೆಯಿತು. ಹಿಂಜಾವೇ  ಮಂಗಳೂರು ವಿಭಾಗ ಸಹ ಸಂಚಾಲಕ ರವಿರಾಜ್ ಶೆಟ್ಟಿ,  ಕಡಬ ಸರಸ್ವತಿ ವಿದ್ಯಾಲಯ ಸಂಚಾಲಕ  ವೆಂಕಟ್ರಮಣ ರಾವ್ ಮಂಕುಡೆ, ಕಡಬ ಸಿ ಎ ಬ್ಯಾಂಕ್ ಅಧ್ಯಕ್ಷ ಸುಂದರ ಗೌಡ ಮಂಡೆಕರ, ಎಪಿಎಂಸಿ ನಿರ್ದೇಶಕಿ ಪುಲಸ್ತ್ಯಾ

ನವಂಬರ್ 24 ಉಡುಪಿಯಲ್ಲಿ ಹಿಂದೂ ಧರ್ಮ ಸಂಸತ್ ಅಧಿವೇಶನ ► ಕಡಬದಲ್ಲಿ ಸಮಾಲೋಚನಾ ಸಭೆ ಹಾಗೂ ಸ್ಟಿಕ್ಕರ್ ಅಂಟಿಸುವ ಕಾರ್ಯಕ್ರಮ Read More »

ಕರಾವಳಿ

ಕೊಯಿಲ: ಮಕ್ಕಳ ಗ್ರಾಮಸಭೆ ► ವಿದ್ಯಾರ್ಥಿಗಳಿಂದ ವಿವಿಧ ಬೇಡಿಕೆಗಳ ಮಂಡನೆ

(ನ್ಯೂಸ್ ಕಡಬ) newskadaba.com ಕಡಬ, ನ.22.   ಕೊಯಿಲ ಗ್ರಾ.ಪಂ. ಮಕ್ಕಳ ಗ್ರಾಮಸಭೆಯು ಗ್ರಾ.ಪಂ. ಸಭಾಭವನದಲ್ಲಿ ಇತ್ತೀಚೆಗೆ ನಡೆಯಿತು. ಆತೂರು ಬದ್ರಿಯಾ ಶಾಲಾ ನಾಯಕ ಮೊಹಮ್ಮದ್ ಮುಹಸೀನ್ ಅಧ್ಯಕ್ಷತೆ ವಹಿಸಿದ್ದರು. ಸಭೆಯಲ್ಲಿ ಕೊಯಿಲ ಗ್ರಾ.ಪಂ.ವ್ಯಾಪ್ತಿಯ ವಳಕಡಮ ಕಿ.ಪ್ರಾ.ಶಾಲೆ, ಗಂಡಿಬಾಗಿಲು ಹಿ.ಪ್ರಾ.ಶಾಲೆ, ಕೊಯಿಲ ಹಿ.ಪ್ರಾ.ಶಾಲೆ ಹಾಗೂ ಸಬಳೂರು ಹಿ.ಪ್ರಾ.ಶಾಲೆಯ ವಿದ್ಯಾರ್ಥಿಗಳು ಭಾಗವಿಸಿದ್ದು ವಿವಿಧ ಬೇಡಿಕೆಗಳನ್ನು ಮಂಡಿಸಿದ್ದಾರೆ. ಆತೂರು ಬದ್ರಿಯಾ ಶಾಲೆಯ ವಿದ್ಯಾರ್ಥಿ ಮಾತನಾಡಿ, ಶಾಲೆಗೆ ಕಸದಬುಟ್ಟಿ ಕೊಟ್ಟಿದ್ದು ಇದರಲ್ಲಿ ಕಸ ತುಂಬಿದೆ. 1 ವರ್ಷವಾದರೂ ವಿಲೇವಾರಿ ಆಗಿಲ್ಲ ಎಂದರು.

ಕೊಯಿಲ: ಮಕ್ಕಳ ಗ್ರಾಮಸಭೆ ► ವಿದ್ಯಾರ್ಥಿಗಳಿಂದ ವಿವಿಧ ಬೇಡಿಕೆಗಳ ಮಂಡನೆ Read More »

ಕರಾವಳಿ

ಅಧಿಕಾರಿಗಳಿಗೆ, ಜನಪ್ರತಿನಿಧಿಗಳಿಗೆ ಮುಳುವಾಗಲಿದೆಯೇ ಸರಕಾರದ‌ ನೂತನ ಕಾನೂನು…? ► ಮಂತ್ರಿಗಳ, ಸರ್ಕಾರಿ ಅಧಿಕಾರಿಗಳ ಮಕ್ಕಳು ಸರ್ಕಾರಿ ಶಾಲೆಯಲ್ಲಿ ಓದುವುದು ಕಡ್ಡಾಯ..!

(ನ್ಯೂಸ್ ಕಡಬ) newskadaba.com ಬೆಂಗಳೂರು, ನ.22. ಬೀದಿ ಬೀದಿಗಳಲ್ಲಿ ಖಾಸಗಿ ಶಾಲೆಗಳು ತಲೆಯೆತ್ತುತ್ತಿದ್ದು, ಇವುಗಳ ಅಭಿವೃದ್ಧಿಯ ಮುಂದೆ ಸರಕಾರಿ ಶಾಲೆಗಳು ಇಂದೋ ನಾಳೆಯೋ ಬಾಗಿಲು ಮುಚ್ಚುವ ಭೀತಿಯಲ್ಲಿ ಕಾರ್ಯಾಚರಿಸುತ್ತಿದೆ. ಒಂದೆಡೆ ಸರಕಾರಿ ಶಾಲೆಯಲ್ಲಿನ ಸೌಲಭ್ಯಗಳ ಕೊರತೆ, ಇನ್ನೊಂದೆಡೆ ಖಾಸಗಿ ಶಾಲೆಗಳ ದೌಲತ್ತಿನ ನಡುವೆ ಇದೀಗ ಚಳಿಗಾಲದ ಅಧಿವೇಶನದಲ್ಲಿ ಹೊಸದೊಂದು ಮಸೂದೆಯು ಮಂಡನೆಯಾಗುವ ಸಾಧ್ಯತೆಯಿದೆ. ಸರಕಾರಿ ಅಧಿಕಾರಿಗಳು ಮತ್ತು ರಾಜಕಾರಣಿಗಳ ಮಕ್ಕಳು ಅಂತಾರಾಷ್ಟ್ರೀಯ ಮಟ್ಟದ ಗುಣಮಟ್ಟವುಳ್ಳ ಶಿಕ್ಷಣವನ್ನು ಪಡೆಯುತ್ತಿದ್ದರೆ, ಇನ್ನೊಂದೆಡೆ ಬಡಮಕ್ಕಳು ಸರಕಾರಿ ಶಾಲೆಯಲ್ಲಿ ಶಿಕ್ಷಣ ಪಡೆಯುತ್ತಿದ್ದಾರೆ. ಅಧಿಕಾರಿಗಳ

ಅಧಿಕಾರಿಗಳಿಗೆ, ಜನಪ್ರತಿನಿಧಿಗಳಿಗೆ ಮುಳುವಾಗಲಿದೆಯೇ ಸರಕಾರದ‌ ನೂತನ ಕಾನೂನು…? ► ಮಂತ್ರಿಗಳ, ಸರ್ಕಾರಿ ಅಧಿಕಾರಿಗಳ ಮಕ್ಕಳು ಸರ್ಕಾರಿ ಶಾಲೆಯಲ್ಲಿ ಓದುವುದು ಕಡ್ಡಾಯ..! Read More »

ಕರಾವಳಿ

ವಿಟ್ಲ: ಚರಂಡಿಗಿಳಿದ ಟಾಟಾ ಮ್ಯಾಜಿಕ್ ಐರಿಸ್ ► ನಾಲ್ವರಿಗೆ ಗಾಯ

(ನ್ಯೂಸ್ ಕಡಬ) newskadaba.com ವಿಟ್ಲ, ನ.22. ಪ್ರಯಾಣಿಕರನ್ನು ಕುಳ್ಳಿರಿಸಿ ಚಾಲಕ ಕೆಳಗಿಳಿದಾಗ ಹಠಾತ್ ಚಲಿಸಿದ ಟಾಟಾ ಮ್ಯಾಜಿಕ್ ಐರಿಸ್ ವಾಹನವೊಂದು ಪ್ರಪಾತಕ್ಕೆ ಉರುಳಿಬಿದ್ದ ಘಟನೆ ಕಲ್ಲಡ್ಕ ಸಮೀಪದ ಪಡಿಬಾಗಿಲು ಎಂಬಲ್ಲಿ ಮಂಗಳವಾರ ನಡೆದಿದೆ. ಟಾಟಾ ಮ್ಯಾಜಿಕ್ ಐರಿಸ್ ವಾಹನದಲ್ಲಿದ್ದ ಪ್ರಯಾಣಿಕ ಮಹಿಳೆಯೋರ್ವರು ಪಡಿಬಾಗಿಲು ಜಂಕ್ಷನ್ ನಲ್ಲಿ ಅಂಗಡಿಯಿಂದ ಸಾಮಾನು ಖರೀದಿಸಲೆಂದು ತೆರಳಿದ್ದು, ಆ ಸಂದರ್ಭದಲ್ಲಿ ಚಾಲಕನೂ ವಾಹನದಿಂದ ಇಳಿದು ಹೋಗಿದ್ದಾರೆ ಎನ್ನಲಾಗಿದೆ. ಆ ಸಮಯದಲ್ಲಿ ಇದ್ದಕ್ಕಿಂದಂತೆ ಚಲಿಸಿದ ಟಾಟಾ ಮ್ಯಾಜಿಕ್ ಸುಮಾರು ೨೦ ಅಡಿ ಆಳದ ಕಂದಕಕ್ಕೆ

ವಿಟ್ಲ: ಚರಂಡಿಗಿಳಿದ ಟಾಟಾ ಮ್ಯಾಜಿಕ್ ಐರಿಸ್ ► ನಾಲ್ವರಿಗೆ ಗಾಯ Read More »

ಕರಾವಳಿ
Scroll to Top