ಕರಾವಳಿ

ಕಾಣಿಯೂರು: ಬೋರ್ ಪೈಪ್ ಮೈಮೇಲೆ ಬಿದ್ದು ಕಾರ್ಮಿಕ ಮೃತ್ಯು

(ನ್ಯೂಸ್ ಕಡಬ) newskadaba.com ಬೆಳ್ಳಾರೆ, ನ.19. ಬೋರ್‍ವೆಲ್ ಲಾರಿಯಿಂದ ಕಬ್ಬಿಣದ ಪೈಪೊಂದು ಮೈಮೇಲೆ ಬಿದ್ದ ಪರಿಣಾಮ ಕಾರ್ಮಿಕ ಮೃತಪಟ್ಟ ಘಟನೆ ಭಾನುವಾರ ಸಂಜೆ ಕಾಣಿಯೂರು ಗ್ರಾಮದ ನಾವೂರು ಎಂಬಲ್ಲಿ ನಡೆದಿದೆ. ಮೃತನನ್ನು ಬೋರ್‍ವೆಲ್ ಯಂತ್ರದ ಕಾರ್ಮಿಕ ಛತ್ತಿಸ್‍ಗಡ ನಿವಾಸಿ ಸತೀಶ್(19) ಎಂದು ಗುರುತಿಸಲಾಗಿದೆ. ಭಾನುವಾರದಂದು ಸಂಜೆ ನಾವೂರು ಬಳಿ ಬೋರ್‍ವೆಲ್ ಕೊರೆಸುತ್ತಿದ್ದ ವೇಳೆ ಲಾರಿಯಿಂದ ಡ್ರಿಲ್ಲಿಂಗ್ ಪೈಪ್ ಮೈಮೇಲೆ ಬಿದ್ದ ಪರಿಣಾ‌ಮ ಸತೀಶ್ ಗಂಭೀರ ಗಾಯಗೊಂಡಿದ್ದು, ಆಂಬ್ಯುಲೆನ್ಸ್ ಮೂಲಕ‌ ಪುತ್ತೂರು ಆಸ್ಪತ್ರೆಗೆ ದಾಖಲಿಸುವ ಹಾದಿ ಮಧ್ಯೆ ಮೃತಪಟ್ಟನೆನ್ನಲಾಗಿದೆ. […]

ಕಾಣಿಯೂರು: ಬೋರ್ ಪೈಪ್ ಮೈಮೇಲೆ ಬಿದ್ದು ಕಾರ್ಮಿಕ ಮೃತ್ಯು Read More »

ಕರಾವಳಿ

ಇಚಿಲಂಪಾಡಿ: ಅಪಘಾತಕ್ಕೆ ಕಾರಣವಾಗುತ್ತಿದ್ದ ವಿದ್ಯುತ್ ಕಂಬ, ಮರ ತೆರವು ► ಇಚಿಲಂಪಾಡಿಯ ‘ನೀತಿ’ ತಂಡದಿಂದ ಸಮಾಜಮುಖಿ ಸೇವೆ

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ನ.19. ಪದೇ ಪದೇ ಅಪಘಾತ ಸಂಭವಿಸಿ ಪ್ರಾಣ ಹಾನಿಗೆ ಕಾರಣವಾಗಿದ್ದ ಸುಬ್ರಹ್ಮಣ್ಯ – ಧರ್ಮಸ್ಥಳ ರಾಜ್ಯ ಹೆದ್ದಾರಿಯ ಇಚಿಲಂಪಾಡಿಯ ಅಲಂಗ ಎಂಬಲ್ಲಿನ ಅಪಾಯಕಾರಿ ಮರ ಮತ್ತು ವಿದ್ಯುತ್ ಕಂಬವನ್ನು ನೀತಿ ತಂಡದ ವತಿಯಿಂದ ಅರಣ್ಯ ಇಲಾಖೆ ಮತ್ತು ಮೆಸ್ಕಾಂ ಇಲಾಖೆಯ ಸಹಕಾರದೊಂದಿಗೆ ಭಾನುವಾರದಂದು ತೆರವುಗೊಳಿಸಲಾಯಿತು. ಈ ಸಂದರ್ಭದಲ್ಲಿ ಸುಳ್ಯ ಅರಣ್ಯ ಸಂರಕ್ಷಣಾಧಿಕಾರಿ ಜಗನ್ನಾಥ್, ಪಂಜ ವಲಯ ಅರಣ್ಯಾಧಿಕಾರಿ ಪ್ರವೀಣ್ ಶೆಟ್ಟಿ, ಸಂತೋಷ್, ನೆಲ್ಯಾಡಿ ಮೆಸ್ಕಾಂ ಜೆ.ಇ.ಇ ರಮೇಶ್‌, ಇಚ್ಲಂಪ್ಪಾಡಿ ಲ್ಯೆನ್ ಮ್ಯಾನ್

ಇಚಿಲಂಪಾಡಿ: ಅಪಘಾತಕ್ಕೆ ಕಾರಣವಾಗುತ್ತಿದ್ದ ವಿದ್ಯುತ್ ಕಂಬ, ಮರ ತೆರವು ► ಇಚಿಲಂಪಾಡಿಯ ‘ನೀತಿ’ ತಂಡದಿಂದ ಸಮಾಜಮುಖಿ ಸೇವೆ Read More »

ಕರಾವಳಿ

ಕಡಬ: ಟಾಟಾ ನ್ಯಾನೋ – ಬೈಕ್ ಢಿಕ್ಕಿ

(ನ್ಯೂಸ್ ಕಡಬ) newskadaba.com ಕಡಬ, ನ.19. ಟಾಟಾ ನ್ಯಾನೋ ಕಾರು ಹಾಗೂ ಬೈಕ್ ಮಧ್ಯೆ ಢಿಕ್ಕಿ ಸಂಭವಿಸಿ ಸವಾರ ಗಾಯಗೊಂಡ ಘಟನೆ ಕಡಬ ಸಮೀಪದಲ್ಲಿ ನಡೆದಿದೆ. ಕುಟ್ರುಪ್ಪಾಡಿ ಗ್ರಾಮದ ವಿಮಲಗಿರಿ ಎಂಬಲ್ಲಿ ಕಾರು ಹಾಗೂ ಬೈಕ್‌ ಮಧ್ಯೆ ಢಿಕ್ಕಿ ಸಂಭವಿಸಿ ಬೈಕ್ ಸವಾರ ಗಾಯಗೊಂಡಿದ್ದಾರೆ‌. ಢಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ‌. ಸ್ಥಳಕ್ಕೆ ಕಡಬ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಕಡಬ: ಟಾಟಾ ನ್ಯಾನೋ – ಬೈಕ್ ಢಿಕ್ಕಿ Read More »

ಕರಾವಳಿ

ಐಡಿಯಲ್ ಐಸ್‍ಕ್ರೀಂಗೆ ‘ಗ್ರೇಟ್ ಇಂಡಿಯನ್ ಐಸ್‍ಕ್ರೀಂ’ ಪ್ರಶಸ್ತಿ ► ದೇಶದಲ್ಲೇ ಹೆಸರನ್ನು ಪಡೆದ ಮಂಗಳೂರಿನ ಐಡಿಯಲ್ ಐಸ್‍ಕ್ರೀಂ

(ನ್ಯೂಸ್ ಕಡಬ) newskadaba.com ಮಂಗಳೂರು, ನ.19. ನಗರ ಐಡಿಯಲ್ ಐಸ್ ಕ್ರೀಂ ತನ್ನ ವಿಶಿಷ್ಟವಾದ ರುಚಿಯಿಂದಲೇ ದೇಶದಾದ್ಯಂತ ಹೆಸರುವಾಸಿಯಾಗಿದ್ದು, ಇದೀಗ `ಗ್ರೇಟ್ ಇಂಡಿಯನ್ ಐಸ್ ಕ್ರೀಂ’ ಎಂಬ ಹೆಗ್ಗಳಿಕೆಯೊಂದಿಗೆ 8 ಪ್ರಶಸ್ತಿಗಳನ್ನು ತನ್ನದಾಗಿಸಿಕೊಂಡಿದೆ‌. ಕಳೆದ ಗುರುವಾರದಂದು ಹರಿಯಾಣದ ಗುರುಗ್ರಾಮದಲ್ಲಿ ನಡೆದ ಗ್ರೇಟ್ ಇಂಡಿಯನ್ ಐಸ್‍ಕ್ರೀಂ ಹಾಗೂ ಫ್ರೋಜನ್ ಡೆಸಾರ್ಟ್ ಸೀಸನ್ 6ರ ಸ್ಪರ್ಧೆಯಲ್ಲಿ ಮಂಗಳೂರು ಐಡಿಯಲ್ ಐಸ್ ಕ್ರೀಂ 8 ಪ್ರಶಸ್ತಿಗಳನ್ನು ಬಾಚಿಕೊಂಡಿದೆ. ಸುಮಾರು 103 ಐಸ್ ಕ್ರೀಂ ತಯಾರಿಕಾ ಸಂಸ್ಥೆಗಳು ಭಾಗವಹಿಸಿದ್ದ ಈ ಸ್ಪರ್ಧೆಯಲ್ಲಿ ಐಡಿಯಲ್ ಐಸ್

ಐಡಿಯಲ್ ಐಸ್‍ಕ್ರೀಂಗೆ ‘ಗ್ರೇಟ್ ಇಂಡಿಯನ್ ಐಸ್‍ಕ್ರೀಂ’ ಪ್ರಶಸ್ತಿ ► ದೇಶದಲ್ಲೇ ಹೆಸರನ್ನು ಪಡೆದ ಮಂಗಳೂರಿನ ಐಡಿಯಲ್ ಐಸ್‍ಕ್ರೀಂ Read More »

ಕರಾವಳಿ

ಡಿಸೆಂಬರ್‌ನಲ್ಲಿ ಕಡಬದಲ್ಲಿ ನಡೆಯಲಿದೆ ಪುತ್ತೂರು ತಾಲೂಕು ಸಾಹಿತ್ಯ ಸಮ್ಮೇಳನ ► ಸಮ್ಮೇಳದ ಆಮಂತ್ರಣ ಪತ್ರಿಕೆ ಬಿಡುಗಡೆ

(ನ್ಯೂಸ್ ಕಡಬ) newskadaba.com ಮಂಗಳೂರು, ನ.19. ದ.ಕ. ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಪುತ್ತೂರು ತಾಲೂಕು ಘಟಕದ ಆಶ್ರಯದಲ್ಲಿ ಡಿಸೆಂಬರ್ 16 ರಂದು ಕಡಬ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ನಡೆಯಲಿರುವ ಪುತ್ತೂರು ತಾಲೂಕು 17 ನೆಯ ಕನ್ನಡ ಸಾಹಿತ್ಯ ಸಮ್ಮೇಳನದ ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭವು ಕಡಬ ದುರ್ಗಾಂಬಿಕಾ ಅಮ್ಮನವರ ದೇವಸ್ಥಾನದ ವಠಾರದಲ್ಲಿ ಶನಿವಾರ ನಡೆಯಿತು. ಶ್ರೀ ದುರ್ಗಾಂಬಿಕಾ ಅಮ್ಮನವರಿಗೆ ಪೂಜೆ ಸಲ್ಲಿಸಿದ ಬಳಿಕ ಹಿರಿಯ ಸಾಹಿತಿ ಬಿ.ವಿ.ಅರ್ತಿಕಜೆ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಿ ಮಾತಮಾಡಿ, ಹಿಂದೊಮ್ಮೆ ಕಡಬದಲ್ಲಿ

ಡಿಸೆಂಬರ್‌ನಲ್ಲಿ ಕಡಬದಲ್ಲಿ ನಡೆಯಲಿದೆ ಪುತ್ತೂರು ತಾಲೂಕು ಸಾಹಿತ್ಯ ಸಮ್ಮೇಳನ ► ಸಮ್ಮೇಳದ ಆಮಂತ್ರಣ ಪತ್ರಿಕೆ ಬಿಡುಗಡೆ Read More »

ಕರಾವಳಿ

ಕಲ್ಲುಗುಡ್ಡೆ: ಬಿರುವೆರ್ ಕುಡ್ಲ ಪುತ್ತೂರು ಘಟಕದ ಸದಸ್ಯತ್ವ ಅಭಿಯಾನ

(ನ್ಯೂಸ್ ಕಡಬ) newskadaba.com ಕಡಬ, ನ.17. ಬಿರುವೆರ್ ಕುಡ್ಲ ಪುತ್ತೂರು ಘಟಕದ ಸದಸ್ಯತ್ವ ಅಭಿಯಾನವು ಇತ್ತೀಚಿಗೆ ಕಡಬ ಕಲ್ಲುಗುಡ್ಡೆಯಲ್ಲಿ ನಡೆಯಿತು. ಪುತ್ತೂರು ಘಟಕದ ಪ್ರಧಾನ ಕಾರ್ಯದರ್ಶಿ ತೇಜಸ್ ಬಿರ್ವ ಕೇಪುಳು ಮಾತನಾಡಿ ಬಿರುವೆರ್ ಕುಡ್ಲದ ವತಿಯಿಂದ ಸಮಾಜದ ಎಲ್ಲಾ ವರ್ಗದ ಬಡಮಕ್ಕಳಿಗೆ ಉನ್ನತ ಶಿಕ್ಷಣ ನೀಡುವಲ್ಲಿ ನೆರವಾಗುವುದು ಸೇರಿದಂತೆ ಸಮಾಜದ ಪ್ರತಿಭಾವಂತ ವಿದ್ಯಾರ್ಥಿಗಳ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸುವುದರೊಂದಿಗೆ ತುಳುನಾಡಿನ ಸಂಸ್ಕೃತಿ ಆಚಾರ-ವಿಚಾರಗಳನ್ನು ಉಳಿಸಿ ಬೆಳೆಸಬೇಕೆಂದರು. ಕಡಬ ಪರಿಸರದಲ್ಲಿ ಸದಸ್ಯತ್ವ ಅಭಿಯಾನಕ್ಕೆ ಚಾಲನೆ ನೀಡಲಾಯಿತು. ಈ ಸಂದರ್ಭದಲ್ಲಿ ಚೇತನ್

ಕಲ್ಲುಗುಡ್ಡೆ: ಬಿರುವೆರ್ ಕುಡ್ಲ ಪುತ್ತೂರು ಘಟಕದ ಸದಸ್ಯತ್ವ ಅಭಿಯಾನ Read More »

ಕರಾವಳಿ

ಮಂಗಳೂರು: ಎಂಬಿಎ ವಿದ್ಯಾರ್ಥಿಯ ಮೇಲೆ ದಾಳಿ ನಡೆಸಿದ ರಾಟ್ ವೀಲರ್ ನಾಯಿ ► ನಾಯಿಯ ಮಾಲಕರ ವಿರುದ್ಧ ಪೊಲೀಸ್ ದೂರು

(ನ್ಯೂಸ್ ಕಡಬ) newskadaba.com ಮಂಗಳೂರು, ನ.18. ಕಾಲೇಜು ವಿದ್ಯಾರ್ಥಿಯೋರ್ವ ನಡೆದುಕೊಂಡು ಹೋಗುತ್ತಿದ್ದಾಗ ಸಾಕು ನಾಯಿಯೊಂದು ದಾಳಿ ನಡೆಸಿ ಹಲ್ಲೆ ನಡೆಸಿದ ಘಟನೆ ಮಂಗಳೂರಿನಲ್ಲಿ ನಡೆದಿದೆ. ನಗರದ ಪತ್ರಾವೋ ಲೇನ್ ನ ಮಹೇಂದ್ರ ಮ್ಯಾನರ್ ಅಪಾರ್ಟ್‌ಮೆಂಟ್ ನಲ್ಲಿ ವಾಸವಾಗಿದ್ದ ಕುಟುಂಬವೊಂದು ಸಾಕುತ್ತಿದ್ದ ರಾಟ್ ವೀಲರ್ ಜಾತಿಗೆ ಸೇರಿದ ನಾಯಿಯು ನಗರದ ಕಾಲೇಜೊಂದರ ಎಂಬಿಎ ವಿದ್ಯಾರ್ಥಿಯ ಮೇಲೆ ದಾಳಿ ನಡೆಸಿ ಹಲ್ಲೆ ನಡೆಸಿತ್ತೆನ್ನಲಾಗಿದೆ. ಈ ವೇಳೆ ವಿದ್ಯಾರ್ಥಿ ಬೊಬ್ಬೆ ಹಾಕಿದ್ದನ್ನು ಕೇಳಿ ನಾಯಿಯ ಮಾಲಕರು‌ ಹಾಗೂ ಸಾರ್ವಜನಿಕರು ಬಂದು ವಿದ್ಯಾರ್ಥಿಯನ್ನು

ಮಂಗಳೂರು: ಎಂಬಿಎ ವಿದ್ಯಾರ್ಥಿಯ ಮೇಲೆ ದಾಳಿ ನಡೆಸಿದ ರಾಟ್ ವೀಲರ್ ನಾಯಿ ► ನಾಯಿಯ ಮಾಲಕರ ವಿರುದ್ಧ ಪೊಲೀಸ್ ದೂರು Read More »

ಕರಾವಳಿ

ಬಿ.ಸಿ.ರೋಡ್: ಸರಣಿ ಅಪಘಾತದೊಂದಿಗೆ ವಿದ್ಯುತ್ ಕಂಬಕ್ಕೆ ಅಪ್ಪಳಿಸಿದ ಡಸ್ಟರ್ ► ಚಾಲಕ ಸ್ಥಳದಲ್ಲೇ

(ನ್ಯೂಸ್ ಕಡಬ) newskadaba.com ಬಂಟ್ವಾಳ, ನ.18. ಚಾಲಕನ ನಿಯಂತ್ರಣ ತಪ್ಪಿದ ಡಸ್ಟರ್ ಕಾರೊಂದು ಎದುರಿನಲ್ಲಿದ್ದ ವಾಹನಗಳಿಗೆ ಗುದ್ದಿಕೊಂಡು ವಿದ್ಯುತ್ ಕಂಬಕ್ಕೆ ಅಪ್ಪಳಿಸಿದ ಪರಿಣಾಮ ಚಾಲಕ ಸ್ಥಳದಲ್ಲೇ ಮೃತಪಟ್ಟ ಘಟನೆ ಬಿ.ಸಿ.ರೋಡ್ ನೇತ್ರಾವತಿ ಸೇತುವೆ ಬಳಿ ಶನಿವಾರದಂದು ನಡೆದಿದೆ. ಮೃತರನ್ನು ನೆಟ್ಲ ಮುಡ್ನೂರು ನಿವಾಸಿ ಮಾಧು ನಾಯ್ಕ ಎಂಬವರ ಪುತ್ರ ರಾಕೇಶ್ ನಾಯ್ಕ(30) ಎಂದು ಗುರುತಿಸಲಾಗಿದೆ. ಅವಿವಾಹಿತರಾಗಿರುವ ಇವರು‌ ನೇರಳಕಟ್ಟೆ ಕೋ – ಅಪರೇಟಿವ್ ಬ್ಯಾಂಕ್ನ ನೌಕರನಾಗಿದ್ದು, ಬಿ.ಸಿ.ರೋಡ್ ನಲ್ಲಿ ಎಸ್ಸಿಡಿಸಿಸಿ ಬ್ಯಾಂಕ್ ಗೆ ಹಣ ತುಂಬಿಸಲೆಂದು ಬರುತ್ತಿದ್ದಾಗ

ಬಿ.ಸಿ.ರೋಡ್: ಸರಣಿ ಅಪಘಾತದೊಂದಿಗೆ ವಿದ್ಯುತ್ ಕಂಬಕ್ಕೆ ಅಪ್ಪಳಿಸಿದ ಡಸ್ಟರ್ ► ಚಾಲಕ ಸ್ಥಳದಲ್ಲೇ Read More »

ಕರಾವಳಿ

ಬಿಳಿನೆಲೆ: ಇನ್ನೋವಾ ವಾಹನಗಳೆರಡರ ಮಧ್ಯೆ ಢಿಕ್ಕಿ

(ನ್ಯೂಸ್ ಕಡಬ) newskadaba.com ಕಡಬ, ನ.18. ಇನೋವಾ ವಾಹನಗಳೆರಡರ ಮಧ್ಯೆ ಢಿಕ್ಕಿ ಸಂಭವಿಸಿದ ಘಟನೆ ಶನಿವಾರದಂದು ಉಪ್ಪಿನಂಗಡಿ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಬಿಳಿನೆಲೆ ಸಿಪಿಸಿಆರ್‌ಐ ಸಮೀಪ ನಡೆದಿದೆ. ಮಂಗಳೂರಿನ ಮುರಳೀಧರ ಎಂಬವರು ಚಲಾಯಿಸುತ್ತಿದ್ದ ಇನ್ನೋವಾ ವಾಹನಕ್ಕೆ ಸುಬ್ರಹ್ಮಣ್ಯ ಕಡೆಗೆ ತೆರಳುತ್ತಿದ್ದ ಉಪ್ಪಿನಂಗಡಿಯ ವಿವೇಕ್ ಎಂಬವರು ಚಲಾಯಿಸುತ್ತಿದ್ದ ಇನ್ನೋವಾ ಬಸ್ಸೊಂದನ್ನು ಓವರ್ಟೇಕ್ ಮಾಡುವ ಭರದಲ್ಲಿ ಢಿಕ್ಕಿಯಾಗಿದೆ. ಘಟನೆಯಲ್ಲಿ ಪ್ರಯಾಣಿಕರು ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ.

ಬಿಳಿನೆಲೆ: ಇನ್ನೋವಾ ವಾಹನಗಳೆರಡರ ಮಧ್ಯೆ ಢಿಕ್ಕಿ Read More »

ಕರಾವಳಿ

ನ್ಯಾಷನಲ್ ಲೆವೆಲ್ ಓಪನ್ ಕರಾಟೆ ಟೂರ್ನಮೆಂಟ್ ► ಕಡಬದ ಸೈಂಟ್ ಆ್ಯನ್ಸ್ ಶಾಲೆಗೆ ಹಲವು ಪ್ರಶಸ್ತಿ

(ನ್ಯೂಸ್ ಕಡಬ) newskadaba.com ಕಡಬ, ನ.18. ಮಂಗಳೂರಿನ ನೆಹರು ಮೈದಾನದಲ್ಲಿ ನಡೆದ ನ್ಯಾಷನಲ್ ಲೆವೆಲ್ ಓಪನ್ ಕರಾಟೆ ಟೂರ್ನಮೆಂಟ್ ಚಾಂಪಿಯನ್ – 2017 ಸ್ಪರ್ಧೆಯಲ್ಲಿ ಭಾಗವಹಿಸಿದ ಕಡಬದ ಸೈಂಟ್ ಆ್ಯನ್ಸ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಹಲವು ಪ್ರಶಸ್ತಿಗಳನ್ನು ಪಡೆದಿದ್ದಾರೆ. ಬಹುಮಾನ ವಿಜೇತ ವಿದ್ಯಾರ್ಥಿಗಳಾದ ವಸುಧಾ, ಸಾನ್ವಿ, ಸುಮುಖ್, ಪ್ರೇಕ್ಷಕ್, ಪ್ರೀತಮ್, ಪ್ರಕ್ಷಿತ್, ಸಾಯಿ ಪ್ರಣವ್, ಸಾತ್ವಿಕ್, ಸಾಕೇತ್, ಸಿದ್ದಾರ್ಥ್ ಆರ್., ಆವರ್ಿನ್, ಮಹಮ್ಮದ್ ಶಿಫಾನ್, ಸುಶ್ಮಿತಾ, ಶಮಿತಾ ಕೆ. ಹಾಗೂ ಸರ್ವೇಶ್ ಎಂ.ಕೆ. ಅವರನ್ನು ಶಾಲಾ ಸಭಾಂಗಣದಲ್ಲಿ

ನ್ಯಾಷನಲ್ ಲೆವೆಲ್ ಓಪನ್ ಕರಾಟೆ ಟೂರ್ನಮೆಂಟ್ ► ಕಡಬದ ಸೈಂಟ್ ಆ್ಯನ್ಸ್ ಶಾಲೆಗೆ ಹಲವು ಪ್ರಶಸ್ತಿ Read More »

ಕರಾವಳಿ
Scroll to Top