ಕರಾವಳಿ

ಇಂದು ಸಂಜೆ ಕಡಬದಲ್ಲಿ ದಿ| ಗೋಪಾಲರಾವ್ ರವರಿಗೆ ಸಾರ್ವಜನಿಕ ಶ್ರದ್ಧಾಂಜಲಿ

(ನ್ಯೂಸ್ ಕಡಬ) newskadaba.com ಕಡಬ, ನ.16. ಇತ್ತೀಚೆಗೆ ನಿಧನರಾದ ರಾಷ್ಟ್ರಪ್ರಶಸ್ತಿ ವಿಜೇತ ಧಾರ್ಮಿಕ ಮುಂದಾಳು, ಸಾಹಿತ್ಯ, ಸಾಂಸ್ಕೃತಿಕ ಕಾರ್ಯಕ್ರಮಗಳ ಹರಿಕಾರ ದಿ| ಗೋಪಾಲರಾವ್ ಬಿಳಿನೆಲೆರವರಿಗೆ ಕಡಬದ ವಿವಿಧ ಸಂಘ ಸಂಸ್ಥೆಗಳ ಹಾಗೂ ಸಾರ್ವಜನಿಕರ ಪರವಾಗಿ ನುಡಿನಮನ ಕಾರ್ಯಕ್ರಮವು ಇಂದು ನಡೆಯಲಿದೆ. ಇಂದು (ನ.16.) ಸಂಜೆ 4.30 ಗಂಟೆಗೆ ಕಡಬದ ಅನುಗ್ರಹ ಮಿನಿ ಸಭಾಂಗಣದಲ್ಲಿ ಸಾರ್ವಜನಿಕ ಶ್ರದ್ಧಾಂಜಲಿ ಹಾಗೂ ನುಡಿನಮನ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.

ಇಂದು ಸಂಜೆ ಕಡಬದಲ್ಲಿ ದಿ| ಗೋಪಾಲರಾವ್ ರವರಿಗೆ ಸಾರ್ವಜನಿಕ ಶ್ರದ್ಧಾಂಜಲಿ Read More »

ಕರಾವಳಿ

ಡಿ.16 ರಂದು ಕಡಬದಲ್ಲಿ ನಡೆಯಲಿರುವ ಪುತ್ತೂರು ತಾಲೂಕು ಸಾಹಿತ್ಯ ಸಮ್ಮೇಳನ ► ಸರ್ವಾಧ್ಯಕ್ಷರಾಗಿ ಅಂಕಣಕಾರ ನಾ. ಕಾರಂತ ಪೆರಾಜೆ ಆಯ್ಕೆ

(ನ್ಯೂಸ್ ಕಡಬ) newskadaba.com ಪುತ್ತೂರು, ನ.16. ಪುತ್ತೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್‍ನ ವತಿಯಿಂದ ಕಡಬದ ಸರಕಾರಿ ಪದವಿ ಪೂರ್ವ ಕಾಲೇಜಿನ ವಠಾರದಲ್ಲಿ ಡಿ.16. ರಂದು ನಡೆಯಲಿರುವ 17 ನೇ ಪುತ್ತೂರು ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಅಂಕಣಕಾರ, ಯಕ್ಷಗಾನ ಕಲಾವಿದ, ಪತ್ರಕರ್ತ ನಾ. ಕಾರಂತ ಪೆರಾಜೆ ಆಯ್ಕೆಯಾಗಿದ್ದಾರೆ. Len ಯಕ್ಷಗಾನ ಕಲಾವಿದರಾಗಿ, ಪತ್ರಕರ್ತರಾಗಿ ಪರಿಚಿತವಾಗಿರುವ ನಾ.ಕಾರಂತ ಪೆರಾಜೆ ಅವರು ಕೃಷಿ ಪತ್ರಕರ್ತರಾಗಿ ರಾಜ್ಯಾದ್ಯಂತ ಗುರುತಿಸಿಕೊಂಡಿದ್ದಾರೆ. ಗ್ರಾಮೀಣ ಪತ್ರಿಕೋದ್ಯಮದಲ್ಲಿ ಪ್ರಶಸ್ತಿಯೂ ಲಭಿಸಿದೆ. ಇದೀಗ ತಾಲೂಕು ಸಾಹಿತ್ಯ

ಡಿ.16 ರಂದು ಕಡಬದಲ್ಲಿ ನಡೆಯಲಿರುವ ಪುತ್ತೂರು ತಾಲೂಕು ಸಾಹಿತ್ಯ ಸಮ್ಮೇಳನ ► ಸರ್ವಾಧ್ಯಕ್ಷರಾಗಿ ಅಂಕಣಕಾರ ನಾ. ಕಾರಂತ ಪೆರಾಜೆ ಆಯ್ಕೆ Read More »

ಕರಾವಳಿ

ಖಾಸಗಿ ಆಸ್ಪತ್ರೆಗಳ ತಿದ್ದುಪಡಿ ವಿಧೇಯಕ ವಿರೋಧಿಸಿ ತಾರಕಕ್ಕೇರಿದ ವೈದ್ಯರ ಮುಷ್ಕರ ► ನಾಳೆಯಿಂದ OPD ಬಂದ್

(ನ್ಯೂಸ್ ಕಡಬ) newskadaba.com ಬೆಳಗಾವಿ, ನ.15. ರಾಜ್ಯದಾದ್ಯಂತ ನಡೆಯುತ್ತಿರುವ ವೈದ್ಯರ ಮುಷ್ಕರ ನಾಳೆಯಿಂದ ಮತ್ತಷ್ಟು ತೀವ್ರಗೊಳ್ಳುವ ಸಾಧ್ಯತೆಯಿದ್ದು, ಖಾಸಗಿ ಆಸ್ಪತ್ರೆಗಳ ನಿಯಂತ್ರಣ ವಿಧೇಯಕ ತಿದ್ದುಪಡಿ ವಿರೋಧಿಸಿ ನಡೆಯುತ್ತಿರುವ ಪ್ರತಿಭಟನೆ ಕುರಿತು ಐಎಂಎ, ಪಾನಾ ಸೇರಿದಂತೆ ಖಾಸಗಿ ಆಸ್ಪತ್ರೆಗಳ ಐದು ಸಂಘಗಳು ಜಂಟಿ ಸುದ್ದಿಗೋಷ್ಠಿ ನಡೆಸಿ ನಾಳೆಯಿಂದ ಓಪಿಡಿ ವ್ಯವಸ್ಥೆ ಕೂಡ ಸ್ಥಗಿತಗೊಳ್ಳಲಿದೆ ಎಂಬ ಮಾಹಿತಿ ನೀಡಿದೆ. ಇದರಿಂದ ರಾಜ್ಯದಾದ್ಯಂತ ರೋಗಿಗಳು ಇನ್ನಷ್ಟು ಸಂಕಷ್ಟಕ್ಕೀಡಾಗುವ ಸಾಧ್ಯತೆ ಇದೆ. PHANA ಚುನಾಯಿತ ಅಧ್ಯಕ್ಷ ಡಾ.ಜಯಣ್ಣ ಮಾತನಾಡಿದ್ದು, ಕಾಯಿದೆ ತಿದ್ದುಪಡಿ ಮಾಡದಂತೆ

ಖಾಸಗಿ ಆಸ್ಪತ್ರೆಗಳ ತಿದ್ದುಪಡಿ ವಿಧೇಯಕ ವಿರೋಧಿಸಿ ತಾರಕಕ್ಕೇರಿದ ವೈದ್ಯರ ಮುಷ್ಕರ ► ನಾಳೆಯಿಂದ OPD ಬಂದ್ Read More »

ಕರಾವಳಿ

ಗ್ರಾ.ಪಂ.ಗಳಲ್ಲಿ ಡಾಟಾ ಎಂಟ್ರಿ ಆಪರೇಟರ್ ಹುದ್ದೆ ಸೃಷ್ಟಿ ► ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ನ.15. ರಾಜ್ಯದ ಪ್ರತಿ ಗ್ರಾಮ ಪಂಚಾಯತಿಗೆ ಹೊಸದಾಗಿ ಒಂದು ಡಾಟಾ ಎಂಟ್ರಿ ಆಪರೇಟರ್ ಹುದ್ದೆ ಸೃಷ್ಠಿಸಲಾಗಿದ್ದು, ಮಂಗಳೂರು ತಾಲೂಕಿನ 55 ಗ್ರಾಮ ಪಂಚಾಯತ್‍ಗಳಿಗೆ ತಲಾ ಒಂದರಂತೆ ಡಾಟಾ ಎಂಟ್ರಿ ಆಪರೇಟರುಗಳನ್ನು ನೇಮಕ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅಭ್ಯರ್ಥಿಗಳು ಯಾವ ಗ್ರಾಮ ಪಂಚಾಯತಿಗೆ ಅರ್ಜಿ ಸಲ್ಲಿಸಲು ಬಯಸಿರುವರೋ ಆ ಗ್ರಾಮ ಪಂಚಾಯತಿಯ ಅಭಿವೃದ್ಧಿ ಅಧಿಕಾರಿಯವರಿಗೆ ಅರ್ಜಿಯನ್ನು ನಿಗದಿತ ಅವಧಿಯೊಳಗೆ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ನವೆಂಬರ್ 30 ಕೊನೆಯ ದಿನವಾಗಿದ್ದು,

ಗ್ರಾ.ಪಂ.ಗಳಲ್ಲಿ ಡಾಟಾ ಎಂಟ್ರಿ ಆಪರೇಟರ್ ಹುದ್ದೆ ಸೃಷ್ಟಿ ► ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ Read More »

ಕರಾವಳಿ

ಕಲ್ಲೇರಿ: ಮೊಬೈಲ್ ಅಂಗಡಿಗೆ ಬೆಂಕಿ ಹಾಕಿ‌ ಕೋಮು ಗಲಭೆಗೆ ಯತ್ನಿಸಿದ ಪ್ರಕರಣ ► ಮೂವರು ಆರೋಪಿಗಳ ಬಂಧನ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ನ.15. ಬೆಳ್ತಂಗಡಿ ತಾಲೂಕಿನ ಕರಾಯದ ಕಲ್ಲೇರಿಯ ಮೊಬೈಲ್ ಅಂಗಡಿಯಲ್ಲಿ ಕಳ್ಳತನ ನಡೆಸಿದ್ದಲ್ಲದೆ, ಅಂಗಡಿಗೆ ಬೆಂಕಿ ಹಚ್ಚಿದ ಪ್ರಕರಣವನ್ನು ಉಪ್ಪಿನಂಗಡಿ ಪೊಲೀಸರು ವಾರದೊಳಗೆ ಬೇಧಿಸಿದ್ದು, ಸಾರ್ವಜನಿಕ ವಲಯದಲ್ಲಿ ಭಾರೀ ಪ್ರಶಂಸೆಗೆ ಪಾತ್ರರಾಗಿದ್ದಾರೆ. ಮುಹಮ್ಮದ್ ಶಮೀರ್ ಅವರ ಅಂಗಡಿಗೆ ಬೆಂಕಿ ಹಚ್ಚಿರುವ ಪ್ರಕರಣ ಬೆಳಕಿಗೆ ನ.08 ರಂದು ಬೆಳಗ್ಗೆ ಬೆಳಕಿಗೆ ಬಂದಿತ್ತು. ಬೆಂಕಿ ಹಚ್ಚಿದ್ದರಿಂದ ಅವರ ಅಂಗಡಿ ಸಂಪೂರ್ಣ ಭಸ್ಮವಾಗಿತ್ತು. ಟಿಪ್ಪು ಜಯಂತಿ ಹಾಗೂ ಬಿಜೆಪಿಯ ಪರಿವರ್ತನಾ ಯಾತ್ರೆ ದ.ಕ. ಜಿಲ್ಲೆಗೆ ಕಾಲಿಟ್ಟ ಸಂದರ್ಭ ಅದಾಗಿದ್ದರಿಂದ

ಕಲ್ಲೇರಿ: ಮೊಬೈಲ್ ಅಂಗಡಿಗೆ ಬೆಂಕಿ ಹಾಕಿ‌ ಕೋಮು ಗಲಭೆಗೆ ಯತ್ನಿಸಿದ ಪ್ರಕರಣ ► ಮೂವರು ಆರೋಪಿಗಳ ಬಂಧನ Read More »

ಕರಾವಳಿ

ದೇಯಿಬೈದೇತಿಗೆ ಅವಮಾನ ಪ್ರಕರಣ ► ಆರೋಪಿಗೆ ಜಾಮೀನು ಮಂಜೂರು

(ನ್ಯೂಸ್ ಕಡಬ) newskadaba.com ಪುತ್ತೂರು, ನ.14. ತುಳುನಾಡಿನ ವೀರ ಪುರುಷರಾದ ಕೋಟಿ ಚೆನ್ನಯರ ತಾಯಿ ದೇಯಿಬೈದೆತಿಯ ಪುತ್ತಳಿಯ ಸಮೀಪ ಕುಳಿತು ಅಶ್ಲೀಲವಾಗಿ ಫೊಟೊ ತೆಗೆದು ಸಾಮಾಜಿಕ ಜಾಲತಾಣಗಳಲ್ಲಿ ಹರಿಯಬಿಟ್ಟ ಪ್ರಕರಣದ ಆರೋಪಿಗೆ ಪುತ್ತೂರು ಹೆಚ್ಚುವರಿ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜೆ.ಎಮ್.ಎಫ್.ಸಿ ನ್ಯಾಯಾಲಯ ಮಂಗಳವಾರದಂದು ಜಾಮೀನು ಮಂಜೂರು ಮಾಡಿದೆ. ಪ್ರಕರಣದ‌ ಆರೋಪಿ ಈಶ್ವರ ಮಂಗಲ ನಿವಾಸಿ ಮಹಮ್ಮದ್ ಎಂಬವರ ಪುತ್ರ ಹನೀಫ್ ವಿರುದ್ಧ ಸಂಪ್ಯ ಠಾಣೆಯಲ್ಲಿ ಜಾಮೀನು ರಹಿತ ದೂರು ದಾಖಲಾಗಿತ್ತು. ಅರೋಪಿ ಪರವಾಗಿ ವಕೀಲರಾದ ಅಶ್ರಫ್

ದೇಯಿಬೈದೇತಿಗೆ ಅವಮಾನ ಪ್ರಕರಣ ► ಆರೋಪಿಗೆ ಜಾಮೀನು ಮಂಜೂರು Read More »

ಕರಾವಳಿ

ಮೈಸೂರಲ್ಲಿ ಭೀಕರ ಅಪಘಾತ ► ಉಳ್ಳಾಲ ಮೂಲದ ಮೂವರು ಮೃತ್ಯು

(ನ್ಯೂಸ್ ಕಡಬ) newskadaba.com ಮೈಸೂರು, ನ.14. ಇಲ್ಲಿನ ಹುಣಸೂರು ರಸ್ತೆಯಲ್ಲಿ ಸಂಭವಿಸಿದ ಭೀಕರ ಅಪಘಾತವೊಂದರಲ್ಲಿ ಮಂಗಳೂರು ನಗರದ ಉಳ್ಳಾಲ ಮೂಲದ ಮೂವರು ಸಾವನಪ್ಪಿದ ಘಟನೆ ಮಂಗಳವಾರ ಮುಂಜಾನೆ ನಡೆದಿದೆ. ಮೃತರನ್ನು ತೊಕ್ಕೊಟು ಸಮೀಪದ ಉಳ್ಳಾಲದ ಅಬ್ದುಲ್ ಹಮೀದ್(47), ಸಹೋದರ ಮಹಮದ್ ಇಕ್ಬಾಲ್(37) ಹಾಗೂ ಹಮೀದ್ ಪುತ್ರ ಶೇಕ್ ಹಕೀಬ್(18) ಎಂದು ಗುರುತಿಸಲಾಗಿದೆ. ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸೋಮವಾರ ಸಂಜೆ ಪ್ರವಾಸಕ್ಕೆಂದು ತೊಕ್ಕೊಟ್ಟು ವಿನಿಂದ ಊಟಿಗೆ ಕುಟುಂಬ ಸಮೇತ ತೆರಳುತ್ತಿದ್ದರು. ಈ ವೇಳೆ ಮೈಸೂರಿನ ಬಸರಿಕಟ್ಟೆ ಬಳಿ ಟೆಂಪೋ

ಮೈಸೂರಲ್ಲಿ ಭೀಕರ ಅಪಘಾತ ► ಉಳ್ಳಾಲ ಮೂಲದ ಮೂವರು ಮೃತ್ಯು Read More »

ಕರಾವಳಿ

ಹೊಸ್ಮಠ: ಫ್ಯಾನ್ಸಿ ಮತ್ತು ಟೈಲರಿಂಗ್ ಅಂಗಡಿ ಬೆಂಕಿಗಾಹುತಿ ► ಲಕ್ಷಾಂತರ ರೂ. ನಷ್ಟ

(ನ್ಯೂಸ್ ಕಡಬ) newskadaba.com ಕಡಬ, ನ.14. ಇಲ್ಲಿನ ಹೊಸ್ಮಠ ಬಸ್ ನಿಲ್ದಾಣದ ಕುಟ್ರುಪ್ಪಾಡಿ ಗ್ರಾಮ ಪಂಚಾಯತ್ ಕಟ್ಟಡದಲ್ಲಿ ಕಾರ್ಯಾಚರಿಸುತ್ತಿದ್ದ ಸುಗುಣಾ ದಯಾನಂದ ಎಂಬವರ ಫ್ಯಾನ್ಸಿ ಮತ್ತು ಟೈಲರಿಂಗ್ ಅಂಗಡಿಯೊಂದು ಬೆಂಕಿಗಾಹುತಿಯಾದ ಘಟನೆ ಮಂಗಳವಾರ ಬೆಳಗ್ಗಿನ ಜಾವ ನಡೆದಿದೆ. ಘಟನೆಯಲ್ಲಿ ಕುಟ್ರುಪ್ಪಾಡಿ ಗ್ರಾಮ ಪಂಚಾಯತಿಯ ಕೇಂದ್ರ ಗ್ರಂಥಾಲಯ ಹಾಗೂ ಫ್ಯಾನ್ಸಿ ಅಂಗಡಿ ಸಂಪೂರ್ಣ ಸುಟ್ಟು ಕರಕಲಾಗಿದೆ. ಅಂಗಡಿಯಲ್ಲಿದ್ದ ಟೈಲರಿಂಗ್ ಮೆಷಿನ್,   ಮದುವೆ ಸಮಾರಂಭಗಳ ಕೃತಕ ಆಭರಣಗಳು, ಅಗತ್ಯ ದಾಖಲೆ ಪತ್ರಗಳು ಸೇರಿದಂತೆ ಲಕ್ಷಾಂತರ ರೂ. ನಷ್ಟ ಅಂದಾಜಿಸಲಾಗಿದೆ. ಘಟನೆಗೆ ನಿಖರವಾದ

ಹೊಸ್ಮಠ: ಫ್ಯಾನ್ಸಿ ಮತ್ತು ಟೈಲರಿಂಗ್ ಅಂಗಡಿ ಬೆಂಕಿಗಾಹುತಿ ► ಲಕ್ಷಾಂತರ ರೂ. ನಷ್ಟ Read More »

ಕರಾವಳಿ

ಬೆಳ್ತಂಗಡಿ: ಧರ್ಮಸ್ಥಳದ ಮಂಜುನಾಥನ ಸನ್ನಿಧಿಯಲ್ಲಿ ಲಕ್ಷದೀಪೋತ್ಸವದ ಸಂಭ್ರಮ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ನ.14. ಧರ್ಮಸ್ಥಳದ ಮಂಜುನಾಥನ ಸನ್ನಿಧಿಯಲ್ಲಿ ಐದು ದಿನಗಳ ದೀಪಗಳ ಉತ್ಸವಕ್ಕೆ ಚಾಲನೆ ದೊರತಿದ್ದು,  ಕ್ಷೇತ್ರದ ಪರಿಸರ ಬಣ್ಣ ಬಣ್ಣದ ವಿದ್ಯುತ್ ದೀಪಗಳಿಂದ ಕಂಗೊಳಿಸುತ್ತಿದೆ. ದೀಪೋತ್ಸವದ ವೇಳೆ ಕ್ಷೇತ್ರದ ಮುಖ್ಯ ದೇವರು ಮಂಜುನಾಥ, ಕ್ಷೇತ್ರದ ಹೊರಗೆ ಬಂದು ಭಕ್ತರಿಂದ ಪೂಜೆ ಪಡೆಯುವುದು ಇಲ್ಲಿನ ವಿಶೇಷ. ಕ್ಷೇತ್ರದ ಪರಿಸರದಲ್ಲಿ ದೇವರನ್ನು ಒಂದೊಂದು ಕಟ್ಟೆಯಲ್ಲಿಟ್ಟು ಪೂಜಿಸುತ್ತಾರೆ. ದೇವರ ಪೂಜಾ ಕಾರ್ಯಗಳು ಪ್ರತಿದಿನ ಬೆಳಗ್ಗೆ 5.30ಕ್ಕೆ ಆರಂಭವಾಗಲಿದೆ. ನವೆಂಬರ್ 16 ಮತ್ತು 17ರಂದು ನಡೆಯುವ 85ನೇ ವರ್ಷದ ಸರ್ವ ಧರ್ಮ

ಬೆಳ್ತಂಗಡಿ: ಧರ್ಮಸ್ಥಳದ ಮಂಜುನಾಥನ ಸನ್ನಿಧಿಯಲ್ಲಿ ಲಕ್ಷದೀಪೋತ್ಸವದ ಸಂಭ್ರಮ Read More »

ಕರಾವಳಿ

ಕೊೖಲ: ಊರಿನ ಹಿರಿಯ ನಾಗರೀಕ ಐತ್ತಪ್ಪ ನಾಯ್ಕ ಅವರಿಗೆ ಸನ್ಮಾನ

(ನ್ಯೂಸ್ ಕಡಬ) newskadaba.com ಪುತ್ತೂರು, ನ.14. ಇಲ್ಲಿನ ಕೊೖಲ ಗ್ರಾಮದ ಏಣಿತಡ್ಕ-2 ಅಂಗನವಾಡಿ ಕೇಂದ್ರದ ನೂತನ ಕಟ್ಟಡದ ಉದ್ಘಾಟನಾ ಸಮಾರಂಭ ಇತ್ತೀಚೆಗೆ ನಡೆಯಿತು. ಕಟ್ಟಡದ ಉದ್ಘಾಟನಾ ಸಮಾರಂಭಕ್ಕೆ ಶಾಸಕರಾದ ಎಸ್. ಅಂಗಾರ ಅವರು ಚಾಲನೆ ನೀಡಿ ಬಳಿಕ ಊರಿನ ಹಿರಿಯ ನಾಗರೀಕರಾದ ಐತ್ತಪ್ಪ ನಾಯ್ಕ ಅವರನ್ನು ಸನ್ಮಾನಿಸಿ ಗೌರವಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯಿತಿ ಸದಸ್ಯ ಸರ್ವೋತ್ತಮ ಗೌಡ, ತಾಲೂಕು ಪಂಚಾಯಿತಿ ಸದಸ್ಯರಾದ ಜಯಂತಿ ಆರ್ ಗೌಡ, ತೇಜಸ್ವಿನಿ ಶೇಖರ ಗೌಡ, ಕೊೖಲ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಮೀನಾಕ್ಷಿ

ಕೊೖಲ: ಊರಿನ ಹಿರಿಯ ನಾಗರೀಕ ಐತ್ತಪ್ಪ ನಾಯ್ಕ ಅವರಿಗೆ ಸನ್ಮಾನ Read More »

ಕರಾವಳಿ
Scroll to Top