ಕರಾವಳಿ

ಪುತ್ತೂರು: ತಾ.ಪಂ ಸಾಮಾನ್ಯ ಸಭೆ ► ಎರಡು ವರ್ಷಗಳ ಬೇಡಿಕೆ ಈಡೇರಿಕೆಗಾಗಿ ಕಪ್ಪು ಪಟ್ಟಿ ಧರಿಸಿ ಪ್ರತಿಭಟನೆ..!!!

(ನ್ಯೂಸ್ ಕಡಬ) newskadaba.com ಪುತ್ತೂರು, ಅ.30. ನಿರಂತರ ಎರಡು ವರ್ಷಗಳಿಂದ ಬೇಡಿಕೆ ಮುಂದಿಡುತ್ತಿದ್ದರೂ ಇದುವರೆಗೂ ಯಾವುದೇ ಸ್ಪಂದನೆ ಸಿಕ್ಕಿಲ್ಲ ಎಂದು ಆಗ್ರಹಿಸಿ ತಾಲೂಕು ಪಂಚಾಯತ್‌ ಸದಸ್ಯೆ ಕೆ.ಟಿ. ವಲ್ಸಮ್ಮ ಕಪ್ಪು ಪಟ್ಟಿ ಧರಿಸಿ ಶನಿವಾರ ಪ್ರತಿಭಟನೆ ನಡೆಸಿದರು. ತಾ.ಪಂ. ಅಧ್ಯಕ್ಷೆ ಭವಾನಿ ಚಿದಾನಂದ್‌ ಅಧ್ಯಕ್ಷತೆಯಲ್ಲಿ ತಾ.ಪಂ. ಸಾಮಾನ್ಯ ಸಭೆಯಲ್ಲಿ ನಡೆಯಿತು. ಸಭೆ ಆರಂಭವಾಗುತ್ತಿದ್ದಂತೆ ಕಪ್ಪು ಬಟ್ಟೆ ಹೊದ್ದುಕೊಂಡು ಆಗಮಿಸಿದ  ತಾಲೂಕು ಪಂಚಾಯತ್‌ ಸದಸ್ಯೆ ಕೆ.ಟಿ. ವಲ್ಸಮ್ಮ, ವೇದಿಕೆಯಲ್ಲಿದ್ದವರಿಗೆ ಮನವಿ ನೀಡಿದರು. ಬಳಿಕ ಕಪ್ಪು ಬಟ್ಟೆಯನ್ನು ಬಾಯಿಗೆ ಕಟ್ಟಿ ಸಭೆಯಲ್ಲಿ ಕುಳಿತು […]

ಪುತ್ತೂರು: ತಾ.ಪಂ ಸಾಮಾನ್ಯ ಸಭೆ ► ಎರಡು ವರ್ಷಗಳ ಬೇಡಿಕೆ ಈಡೇರಿಕೆಗಾಗಿ ಕಪ್ಪು ಪಟ್ಟಿ ಧರಿಸಿ ಪ್ರತಿಭಟನೆ..!!! Read More »

ಕರಾವಳಿ

ಐತ್ತೂರು ಗ್ರಾ.ಪಂ. ಜಮಾಬಂದಿ ಸಭೆ ► ವಿವಿಧ ಕಾಮಗಾರಿಗಳ ಪರಿಶೀಲನೆ

(ನ್ಯೂಸ್ ಕಡಬ) newskadaba.com ಕಡಬ, ಅ.30. ಐತ್ತೂರು ಗ್ರಾಮ ಪಂಚಾಯತ್ ಜಮಾಬಂದಿ ಸಭೆಯು ಗ್ರಾ.ಪಂ. ಅಧ್ಯಕ್ಷರಾದ ಸತೀಶ್ ಕೆ.ಯವರ ಅಧ್ಯಕ್ಷತೆಯಲ್ಲಿ  ಪಂಚಾಯತ್ ಸಭಾಭವನದಲ್ಲಿ ಇತ್ತೀಚೆಗೆ ನಡೆಯಿತು. ತಾಲೂಕು ಯೋಜನಾಧಿಕಾರಿ ಗಣಪತಿ ಭಟ್ ಜಮಾಬಂದಿ ಸಭೆಯ ಅಧಿಕಾರಿಯಾಗಿದ್ದರು. 2016-17ನೇ ವಾರ್ಷಿಕ ಲೆಕ್ಕಪತ್ರ ಹಾಗೂ ವಿವಿಧ ದಾಖಲೆ ಪರಿಶೀಲನೆಯ ಕುರಿತು ಜಮಾಬಂದಿ ಅಧಿಕಾರಿ ಸಭೆಗೆ ಮಾಹಿತಿ ನೀಡಿದರು. ಬಳಿಕ ವಿವಿಧ ಕಾಮಗಾರಿಗಳಾದ ಬಜಕೆರೆ ರಸ್ತೆ ಕಾಂಕ್ರೀಟೀಕರಣ, ಭ್ರಾಂತಿಕಟ್ಟೆ-ಕೋಡಿಂಕಿರಿ ರಸ್ತೆಯ ಬಜಕೆರೆ ಎಂಬಲ್ಲಿ ರಸ್ತೆ ಕಾಂಕ್ರೀಟೀಕರಣ ಕಾಮಗಾರಿ, ಹಾಗೂ ಕಲ್ಲಾಜೆ-ಅಂತಿಬೆಟ್ಟು ರಸ್ತೆಯ ಕಲ್ಲಾಜೆ

ಐತ್ತೂರು ಗ್ರಾ.ಪಂ. ಜಮಾಬಂದಿ ಸಭೆ ► ವಿವಿಧ ಕಾಮಗಾರಿಗಳ ಪರಿಶೀಲನೆ Read More »

ಕರಾವಳಿ

ಹೊಸಮಠ: ಸಾಲ ಮನ್ನಾ ಸೌಲಭ್ಯದಿಂದ ವಂಚಿತರಾಗಿರುವ 80 ಮಂದಿ ಸಾಲಗಾರು..!!!

(ನ್ಯೂಸ್ ಕಡಬ) newskadaba.com ಕಡಬ, ಅ.30. ಸರಕಾರದ ಸಾಲಮನ್ನಾ ಯೋಜನೆಯಿಂದ ಕುಟ್ರುಪ್ಪಾಡಿ ಸಿಎ ಬ್ಯಾಂಕ್ಗೆ 3.5ಕೋಟಿ ರೂ.ಬರಲು ಬಾಕಿ, 80 ಜನ ಸದಸ್ಯರು ಸಾಲಮನ್ನಾದಿಂದ ವಂಚಿತರಾಗಿದ್ದಾರೆ. ಸಾಲಮನ್ನಾ ಘೋಷಿಸಿದ ಹಣವನ್ನು ಕೂಡಲೇ ಸಂಘಕ್ಕೆ ಜಮೆ ಮಾಡುವುದರೊಂದಿಗೆ ಸಮಯಕ್ಕೆ ಸರಿಯಾಗಿ ಸಾಲ ಮರುಪಾವತಿ ಮಾಡಿ ಸಾಲ ಮನ್ನಾ ಸೌಲಭ್ಯದಿಂದ ವಂಚಿತರಾಗಿರುವ 80 ಮಂದಿ ಸಾಲಗಾರರಿಗೂ ಸೌಲಭ್ಯ ಒದಗಿಸಬೇಕಾಗಿದೆ ಎಂದು ಹೊಸಮಠ ಪ್ರಾ.ಕೃ.ಸ.ಸಂಘದಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ ನಿರ್ಣಯಿಸಲಾಗಿದೆ. ಸಭೆಯಲ್ಲಿ ವಿಷಯ ಪ್ರಸ್ತಾಪಿಸಿದ ನಿರ್ದೇಶಕ ಜಯಚಂದ್ರ ರೈ ಕುಂಟೋಡಿಯವರು ಸರಕಾರ ರೈತರ

ಹೊಸಮಠ: ಸಾಲ ಮನ್ನಾ ಸೌಲಭ್ಯದಿಂದ ವಂಚಿತರಾಗಿರುವ 80 ಮಂದಿ ಸಾಲಗಾರು..!!! Read More »

ಕರಾವಳಿ

ಬೆಳ್ತಂಗಡಿ: ಕಾರುಗಳ ಮಧ್ಯೆ ಢಿಕ್ಕಿ ► ಇಬ್ಬರು ಮೃತ್ಯು, ನಾಲ್ವರು ಗಂಭೀರ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಅ.29. ಕಾರುಗಳೆರಡರ ನಡುವೆ ಮುಖಾಮುಖಿ ಢಿಕ್ಕಿಯುಂಟಾದ ಪರಿಣಾಮ ಇಬ್ಬರು ಮೃತಪಟ್ಟು,‌ ನಾಲ್ವರು ಗಂಭೀರ ಗಾಯಗೊಂಡ ಘಟನೆ ಬೆಳ್ತಂಗಡಿ ಸಮೀಪದ ಗರಡಾಡಿ ಎಂಬಲ್ಲಿ ಭಾನುವಾರ ರಾತ್ರಿ ನಡೆದಿದೆ. ಘಟನೆಯಲ್ಲಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಮೃತಪಟ್ಟವರನ್ನು ಗುರುವಾಯನಕೆರೆ ಸಮೀಪದ ಕುವೆಟ್ಟು ನಿವಾಸಿಗಳಾದ ವಿನಾಯಕ ಹಾಗು ವಿಶ್ವಾಸ್ ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದು, ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಬೆಳ್ತಂಗಡಿ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ‌.

ಬೆಳ್ತಂಗಡಿ: ಕಾರುಗಳ ಮಧ್ಯೆ ಢಿಕ್ಕಿ ► ಇಬ್ಬರು ಮೃತ್ಯು, ನಾಲ್ವರು ಗಂಭೀರ Read More »

ಕರಾವಳಿ

ತನ್ನ ಇಬ್ಬರು ಮಕ್ಕಳೊಂದಿಗೆ ಬಾವಿಗೆ ಹಾರಿ ತಾಯಿ ಆತ್ಮಹತ್ಯೆ ► ಧರ್ಮಸ್ಥಳದಲ್ಲಿ ನಡೆದ ಹೃದಯ ವಿದ್ರಾವಕ ಘಟನೆ

ಬೆಳ್ತಂಗಡಿ, ಅ.29.‌ತನ್ನ ಇಬ್ಬರು ಮಕ್ಕಳೊಂದಿಗೆ ಬಾವಿಗೆ ಹಾರಿ ತಾಯಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಧರ್ಮಸ್ಥಳ ಠಾಣಾ ವ್ಯಾಪ್ತಿಯ ಕಳೆಂಜ ಎಂಬಲ್ಲಿ ಭಾನುವಾರದಂದು ನಡೆದಿದೆ. ಆತ್ಮಹತ್ಯೆ ಮಾಡಿಕೊಂಡವರನ್ನು ಧರ್ಮಸ್ಥಳ ಸಮೀಪದ ಕಳೆಂಜ ನಿವಾಸಿ ಉಮೇಶ್ ಗೌಡ ಎಂಬವರ ಪತ್ನಿ ವಿಜಯಲಕ್ಷ್ಮೀ(27) ಮಕ್ಕಳಾದ ದೀಕ್ಷಿತ್(5) ಹಾಗೂ ಆರು ತಿಂಗಳ ಮಗು ಎಂದು ಗುರುತಿಸಲಾಗಿದೆ. ಕೇರಳದಲ್ಲಿ ಉದ್ಯೋಗಿಯಾಗಿರುವ ಉಮೇಶ್ ಗೌಡ ಅವರು ಇತ್ತೀಚೆಗೆ ಊರಿಗೆ ಆಗಮಿಸಿದ್ದವರು ಮೂರು ದಿನಗಳ ಹಿಂದೆಯಷ್ಟೇ ಊರಿಂದ ತೆರಳಿದ್ದರು. ಆತ್ಮಹತ್ಯೆಗೆ ಸ್ಪಷ್ಟ ಕಾರಣ ತಿಳಿದುಬಂದಿಲ್ಲ. ಈ ಬಗ್ಗೆ

ತನ್ನ ಇಬ್ಬರು ಮಕ್ಕಳೊಂದಿಗೆ ಬಾವಿಗೆ ಹಾರಿ ತಾಯಿ ಆತ್ಮಹತ್ಯೆ ► ಧರ್ಮಸ್ಥಳದಲ್ಲಿ ನಡೆದ ಹೃದಯ ವಿದ್ರಾವಕ ಘಟನೆ Read More »

ಕರಾವಳಿ

ಧರ್ಮಸ್ಥಳದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಪ್ರಧಾನಿ ► ಅದ್ದೂರಿಯಾಗಿ ಸ್ವಾಗತಿಸಿದ ಧರ್ಮಾಧಿಕಾರಿ

(ನ್ಯೂಸ್ ಕಡಬ) newskadaba.com ಧರ್ಮಸ್ಥಳ, ಅ.29. ಪ್ರಧಾನಿ ನರೇಂದ್ರ ಮೋದಿಯವರು ಭಾನುವಾರದಂದು ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥೇಶ್ವರ ಸನ್ನಿಧಿಯಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ನಂತರ ಉಜಿರೆಯಲ್ಲಿ ರೂಪೇ ಕಾರ್ಡ್ ವಿತರಣಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ, ಹರ್ಷೇಂದ್ರ‌ ಹೆಗ್ಗಡೆ ಹಾಗೂ ಕುಟುಂಬಸ್ಥರು, ಸಚಿವರು, ಸಂಸದರು, ಶಾಸಕರು ಸೇರಿದಂತೆ ಅಪಾರ ಜನಸ್ತೋಮವನ್ನು ಉದ್ದೇಶಿಸಿ ಪ್ರಧಾನಿಯವರು ಮಾತನಾಡಿದರು.

ಧರ್ಮಸ್ಥಳದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಪ್ರಧಾನಿ ► ಅದ್ದೂರಿಯಾಗಿ ಸ್ವಾಗತಿಸಿದ ಧರ್ಮಾಧಿಕಾರಿ Read More »

ಕರಾವಳಿ

ಮರ್ಧಾಳ: ಬೈಕ್ – ಕಾರು ಢಿಕ್ಕಿ ► ಸವಾರರಿಬ್ಬರಿಗೆ ಗಾಯ

(ನ್ಯೂಸ್ ಕಡಬ) newskadaba.com ಕಡಬ, ಅ.29. ಬೈಕ್ ಹಾಗೂ ಮಧ್ಯೆ ಢಿಕ್ಕಿ ಸಂಭವಿಸಿದ ಪರಿಣಾಮ ಇಬ್ಬರು ಗಾಯಗೊಂಡ ಘಟನೆ ಮರ್ಧಾಳ ಬೊಳ್ಳೂರು ರಸ್ತೆಯ ಮಿತ್ತೋಡಿ ಎಂಬಲ್ಲಿ ಭಾನುವಾರ ಬೆಳಿಗ್ಗೆ ನಡೆದಿದೆ. ಘಟನೆಯಲ್ಲಿ ಬೈಕ್ ಸವಾರರಾದ ಮರ್ಧಾಳ ನಿವಾಸಿ ಮಂಜು ಹಾಗೂ ಸಂತೋಷ್ ಎಂಬವರು ಗಾಯಗೊಂಡಿದ್ದಾರೆ. ಬೊಳ್ಳೂರು ಕಡೆಗೆ ತೆರಳುತ್ತಿದ್ದ ಕಾರು ಹಾಗೂ ಮರ್ಧಾಳ ಕಡೆಗೆ ತೆರಳುತ್ತಿದ್ದ ಬೈಕ್ ಮಧ್ಯೆ ಢಿಕ್ಕಿ ಸಂಭವಿಸಿದೆ. ಗಾಯಾಳುಗಳನ್ನು ಪುತ್ತೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮರ್ಧಾಳ: ಬೈಕ್ – ಕಾರು ಢಿಕ್ಕಿ ► ಸವಾರರಿಬ್ಬರಿಗೆ ಗಾಯ Read More »

ಕರಾವಳಿ

ಹುದ್ದೆ ಖಾಯಂಗೊಳಿಸುವಂತೆ ಪುನರ್ವಸತಿ ಕಾರ್ಯಕರ್ತರಿಂದ ಆಗ್ರಹ ► ಜಿಲ್ಲಾ ಉಸ್ತುವಾರಿ ಸಚಿವರಿಗೆ ಮನವಿ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಅ.29. ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖಾ ಸಮಿತಿಯ 24,26ನೇ ವರದಿಯ ಶಿಫಾರಸ್ಸನ್ನು ಯಥಾವತ್ತಾಗಿ ಜಾರಿಗೊಳಿಸಿ ವಿಕಲಚೇತನರ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಎಂಆರ್ಡಬ್ಲ್ಯೂ ಮತ್ತು ವಿಆರ್ಡಬ್ಲ್ಯೂ ಪುನರ್ವಸತಿ ಕಾರ್ಯಕರ್ತರ ಗೌರವಧನ ಹೆಚ್ಚಳ ಮಾಡಿ ಹುದ್ದೆಯನ್ನು ಖಾಯಂಗೊಳಿಸುವಂತೆ ಕರ್ನಾಟಕ ರಾಜ್ಯ ವಿಕಲಚೇತನ ವಿವಿದ್ದೋದ್ದೇಶ(ಎಂಆರ್ಡಬ್ಲ್ಯೂ) ಮತ್ತು ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ(ವಿಆರ್ಡಬ್ಲ್ಯೂ)ಜಿಲ್ಲಾ ಒಕ್ಕೂಟದ, ಪುತ್ತೂರು ಶಾಖೆ ವತಿಯಿಂದ ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈಗೆ ಮನವಿ ಸಲ್ಲಿಸಿದ್ದಾರೆ. ಎಂಆರ್ಡಬ್ಲ್ಯೂ ಮತ್ತು ವಿಆರ್ಡಬ್ಲ್ಯೂ ಪುನರ್ವಸತಿ ಕಾರ್ಯಕರ್ತರ ಗೌರವಧನ

ಹುದ್ದೆ ಖಾಯಂಗೊಳಿಸುವಂತೆ ಪುನರ್ವಸತಿ ಕಾರ್ಯಕರ್ತರಿಂದ ಆಗ್ರಹ ► ಜಿಲ್ಲಾ ಉಸ್ತುವಾರಿ ಸಚಿವರಿಗೆ ಮನವಿ Read More »

ಕರಾವಳಿ

ಅಮಾಯಕ ಹಿಂದೂ ಯುವಕರ ಮೇಲೆ ಪೊಲೀಸ್ ದಬ್ಬಾಳಿಕೆ ಆರೋಪ ► ಕಡಬ ಬಂದ್ ಯಶಸ್ವಿ

(ನ್ಯೂಸ್ ಕಡಬ) newskadaba.com ಕಡಬ, ಅ.28. ಅಮಾಯಕ ಹಿಂದೂ ಯುವಕರ ಮೇಲೆ ಪೊಲೀಸರು ದಬ್ಬಾಳಿಕೆ ನಡೆಸುತ್ತಿದ್ದಾರೆ ಎಂದು ಆರೋಪಿಸಿ ಹಿಂದೂಪರ ಸಂಘಟನೆಗಳು ನೀಡಿದ್ದ ಕಡಬ ಬಂದ್ ಗೆ ಪೂರ್ಣ ಬೆಂಬಲ ವ್ಯಕ್ತವಾಗಿದ್ದು, ಕಡಬ ಪರಿಸರದಲ್ಲಿ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಿ ವ್ಯಾಪಾರಸ್ಥರು ಬೆಂಬಲಿಸಿದ್ದಾರೆ. ಕಡಬದಲ್ಲಿ ಈ ಹಿಂದೆ ಮಕ್ಕಾ ಮಸೀದಿಯ ಅವಹೇಳನ ನಡೆಸಿರುವ ಪ್ರಕರಣದಲ್ಲಿ ಆರೋಪಿಯನ್ನು ಹಿಂದೂ ಸಂಘಟನೆಯ ಮುಖಂಡರೇ ಠಾಣೆಗೆ ಒಪ್ಪಿಸಿದ್ದರೂ ಅಮಾಯಕ ಹಿಂದೂ ಕಾರ್ಯಕರ್ತರನ್ನು ಪೊಲೀಸರು ಪ್ರಕರಣದಲ್ಲಿ ಸಿಲುಕಿಸುತ್ತಿದ್ದಾರೆ‌. ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರಿಗೆ ಸಹಕಾರ

ಅಮಾಯಕ ಹಿಂದೂ ಯುವಕರ ಮೇಲೆ ಪೊಲೀಸ್ ದಬ್ಬಾಳಿಕೆ ಆರೋಪ ► ಕಡಬ ಬಂದ್ ಯಶಸ್ವಿ Read More »

ಕರಾವಳಿ

ಟಿಪ್ಪು ಸುಲ್ತಾನ್ ಮತ್ತು ಸಿದ್ದರಾಮಯ್ಯರವರ ಅವಹೇಳನ ► ಓರ್ವ ಉಪ್ಪಿನಂಗಡಿ ಪೊಲೀಸರ ವಶಕ್ಕೆ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಅ.27. ಸ್ವಾತಂತ್ರ ಸೇನಾನಿ ಟಿಪ್ಪು ಸುಲ್ತಾನ್ ಹಾಗೂ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಭಾವಚಿತ್ರವನ್ನು ಅಸಹ್ಯವಾಗಿ ಚಿತ್ರಿಸಿ ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಡಲಾಗಿದೆ ಎಂದು ಆರೋಪಿಸಿ ಉಪ್ಪಿನಂಗಡಿ ಯುವ ಕಾಂಗ್ರೆಸ್ ಉಪ್ಪಿನಂಗಡಿ ಪೊಲೀಸ್ ಠಾಣೆಗೆ ನೀಡಿದ್ದ ದೂರಿನ ಮೇರೆಗೆ ಓರ್ವನನ್ನು ವಶಕ್ಕೆ ತೆಗೆದುಕೊಂಡ ಘಟನೆ ಶುಕ್ರವಾರ ನಡೆದಿದೆ. 34ನೇ ನೆಕ್ಕಿಲಾಡಿಯಲ್ಲಿನ ಕಾರ್ ಕ್ಲಬ್ ಮಾಲಕ ಸದಾನಂದ ಹಾಗೂ ಯೊಗೀಶ್ ಪ್ರಭು ಅವರ ಮೇಲೆ ದೂರು ದಾಖಲಾಗಿದ್ದು, ಯೊಗೀಶ್ ಪ್ರಭು ಎಂಬವರು ಸ್ವಾತಂತ್ರ್ಯ ಸೇನಾನಿ ಟಿಪ್ಪು ಸುಲ್ತಾನ್

ಟಿಪ್ಪು ಸುಲ್ತಾನ್ ಮತ್ತು ಸಿದ್ದರಾಮಯ್ಯರವರ ಅವಹೇಳನ ► ಓರ್ವ ಉಪ್ಪಿನಂಗಡಿ ಪೊಲೀಸರ ವಶಕ್ಕೆ Read More »

ಕರಾವಳಿ
Scroll to Top