ಕರಾವಳಿ

ಬೆಂಗಳೂರನ್ನು ರಾಷ್ಟ್ರ ರಾಜಧಾನಿ ಮಾಡುವಂತೆ ದೆಹಲಿಯ ಯುವತಿ ಆಗ್ರಹ

(ನ್ಯೂಸ್‌ ಕಡಬ)com,ಡಿ.26: ದೆಹಲಿಯ ಮಹಿಳೆಯೊಬ್ಬರು ಬೆಂಗಳೂರನ್ನು ದೇಶದ ರಾಜಧಾನಿಯಾಗಿ ಮಾಡಬೇಕು ಎಂದು ಅಭಿಪ್ರಾಯಪಟ್ಟಿದ್ದಾರೆ. ಬೆಂಗಳೂರು ಉತ್ತಮ ಗುಣಮಟ್ಟದ ಜೀವನವನ್ನು ನೀಡುತ್ತದೆ. ವಾಯುಗುಣಮಟ್ಟ, ಸುರಕ್ಷತೆ, ರಸ್ತೆ ವ್ಯವಸ್ಥೆ- ಎಲ್ಲ ದೃಷ್ಟಿಯಿಂದಲೂ ದೆಹಲಿಗಿಂತ ಬೆಂಗಳೂರೇ ರಾಜಧಾನಿಯಾಗಲು ಅರ್ಹವಾಗಿದೆ ಎಂದು ಯುವತಿಯೊಬ್ಬರು ಸಾಮಾಜಿಕ ಜಾಲತಾಣದಲ್ಲಿ ವಿಡಿಯೊ ಹಂಚಿಕೊಂಡಿದ್ದಾರೆ. ಈ ವಿಡಿಯೊ ಭಾರೀ ವೈರಲ್ ಆಗಿದ್ದು, ಪರ-ವಿರೋಧ ಚರ್ಚೆಗಳಿಗೆ ಗ್ರಾಸವಾಗಿದೆ. ಸಮೃದ್ಧಿ ಮಖಿಜಾ ಎನ್ನುವ ದೆಹಲಿ ಮೂಲಕ ಯುವತಿ ಅಲ್ಲಿನ ಜೀವನದಿಂದ ಬೇಸತ್ತು 2 ತಿಂಗಳ ಹಿಂದೆ ಬೆಂಗಳೂರಿಗೆ ಸ್ಥಳಾಂತರಗೊಂಡಿದ್ದಾರೆ. ಬೆಂಗಳೂರಿನ ಉತ್ತಮ […]

ಬೆಂಗಳೂರನ್ನು ರಾಷ್ಟ್ರ ರಾಜಧಾನಿ ಮಾಡುವಂತೆ ದೆಹಲಿಯ ಯುವತಿ ಆಗ್ರಹ Read More »

ಕರಾವಳಿ

ಕಾಸರಗೋಡು: ರೈಲು ಬಡಿದು ಕೊಡಗು ನಿವಾಸಿ ಮೃತ್ಯು

(ನ್ಯೂಸ್‌ ಕಡಬ)com,ಡಿ.26: ರೈಲು ಬಡಿದು ಕೊಡಗು ನಿವಾಸಿಯೋರ್ವ ಮೃತಪಟ್ಟ ಘಟನೆ ಶುಕ್ರವಾರ ಮಧ್ಯಾಹ್ನ ಕಾಸರಗೋಡು ನಿಲ್ದಾಣದಲ್ಲಿ ನಡೆದಿದೆ. ಕೊಡಗು ನಿವಾಸಿ ರಾಜೇಶ್ (35) ಮೃತಪಟ್ಟವರು. ರೈಲಿನಿಂದಿಳಿದು ಹಳಿಯ ಮೂಲಕ ಅಡ್ಡದಾಟಿ ಫ್ಲಾಟ್ ಫೋರ್ಮ್ ಹತ್ತಲು ಯತ್ನಿಸುತ್ತಿದ್ದಾಗ ಗೂಡ್ಸ್ ರೈಲು ಬಡಿದು ಘಟನೆ ನಡೆದಿದೆ. ಅಫಘಾತಕ್ಕೀಡಾದ ವ್ಯಕ್ತಿಯ ತಲೆ ಸಂಪೂರ್ಣ ಜಜ್ಜಿ ಹೋಗಿದೆ. ಮೃತದೇಹ ಧರಿಸಿದ್ದ ಅಂಗಿಯ ಜೇಬಿನಿಂದ ದೊರೆತ ಆಧಾರ್ ಕಾರ್ಡಿನಲ್ಲಿ ಮಾಹಿತಿಯಂತೆ ಮೃತ ವ್ಯಕ್ತಿಯನ್ನು ಗುರುತಿಸಲಾಗಿದೆ. ಮೃತ ಶರೀರದ ಅವಶೇಷಗಳನ್ನು ಸಂಗ್ರಹಿಸಿ ಕಾಸರಗೋಡು ಜನರಲ್ ಆಸ್ಪತ್ರೆಯಲ್ಲಿ ಇರಿಸಲಾಗಿದೆ.

ಕಾಸರಗೋಡು: ರೈಲು ಬಡಿದು ಕೊಡಗು ನಿವಾಸಿ ಮೃತ್ಯು Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ನೆಟ್ಟಣ: ಬಾರ್ ಮಾಲಕರಿಗೆ ಲಕ್ಷಾಂತರ ರೂಪಾಯಿ ವಂಚಿಸಿ ಸಿಬ್ಬಂದಿ ಪರಾರಿ-ಪ್ರಕರಣ ದಾಖಲು

(ನ್ಯೂಸ್‌ ಕಡಬ)com,ಡಿ.26:  ವ್ಯವಹಾರದಲ್ಲಿ ವಂಚಿಸಿ ಬಾರ್ ಸಿಬ್ಬಂದಿಯೋರ್ವ ಪರಾರಿಯಾಗಿರುವ ಬಗ್ಗೆ ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಿಳಿನೆಲೆ ಗ್ರಾಮದ ವಿಶಾಲ್ ಸ್ಟೀಫನ್ (25) ಎಂಬವರು ಠಾಣೆಗೆ ದೂರು ನೀಡಿದ್ದಾರೆ. ಸ್ಟೀಫನ್ ಅವರ ತಾಯಿ ನೆಟ್ಟಣ ಎಂಬಲ್ಲಿ ಬಾರ್ ಹೊಂದಿದ್ದು, ಬಾರ್ ನಲ್ಲಿ ಕಡಬದ ಹರ್ಷಿತ್ ಬಿ.ಕೆ. ಎಂಬಾತ ಸುಮಾರು 7 ವರ್ಷಗಳಿಂದ ಕೆಲಸ ಮಾಡುತ್ತಿದ್ದ. ಆತನೇ ನಿತ್ಯದ ಹಣಕಾಸಿನ ವ್ಯವಹಾರ, ಸ್ಟಾಕ್ ನಿರ್ವಹಣೆ ಹಾಗೂ ಮೇಲ್ವಿಚಾರಣೆ ನಿರ್ವಹಿಸುತ್ತಿದ್ದ. ಡಿ.21ರಂದು ಸ್ಟೀಫನ್ ಅವರು ಬಾರಿನ ವಹಿವಾಟು ಬಗ್ಗೆ

ನೆಟ್ಟಣ: ಬಾರ್ ಮಾಲಕರಿಗೆ ಲಕ್ಷಾಂತರ ರೂಪಾಯಿ ವಂಚಿಸಿ ಸಿಬ್ಬಂದಿ ಪರಾರಿ-ಪ್ರಕರಣ ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್
Theft, crime, Robbery

ಮಂಗಳೂರು : ಮಹಿಳೆಯ ಕತ್ತಿನಲ್ಲಿದ್ದ ಚಿನ್ನದ ಸರ ಕಸಿದು ಕಳ್ಳ ಪರಾರಿ – ಪ್ರಕರಣ ದಾಖಲು

(ನ್ಯೂಸ್‌ ಕಡಬ)com,ಡಿ.26: ಕೆಲಸ ಮುಗಿಸಿ ಮನೆಗೆ ವಾಪಸ್ ಹೋಗುತ್ತಿದ್ದ ಮಹಿಳೆಯ ಕತ್ತಿನಲ್ಲಿದ್ದ ಮೂರುವರೆ ಪವನ್ ತೂಕದ ಚಿನ್ನದ ಸರ ಕಸಿದು ಕಳ್ಳನೊಬ್ಬ ಪರಾರಿಯಾದ ಘಟನೆ ಮಂಗಳೂರಿನ ಕೊಂಚಾಡಿ ಕೊಪ್ಪಲಕಾಡಿನಲ್ಲಿ ಗುರುವಾರ ಸಂಜೆ ನಡೆದಿದೆ. ಈ ಬಗ್ಗೆ ಪ್ರಕರಣ ದಾಖಲಾಗಿದೆ. ಸರ ಎಗರಿಸಿದ ವ್ಯಕ್ತಿ ಸ್ವಲ್ಪ ದೂರ ಹೋದ ಬಳಿಕ ತನ್ನ ಬಟ್ಟೆ ಬದಲಾವಣೆ ಮಾಡಿ, ಕಣ್ಮರೆಯಾಗಿದ್ದಾನೆ. ಇನ್ನು ಘಟನಾ ಸ್ಥಳಕ್ಕೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇನ್ನು ಸರಗಳ್ಳನ ಚಲನ ವಲನದ ದೃಶ್ಯಾವಳಿಗಳು ಮನೆಯ

ಮಂಗಳೂರು : ಮಹಿಳೆಯ ಕತ್ತಿನಲ್ಲಿದ್ದ ಚಿನ್ನದ ಸರ ಕಸಿದು ಕಳ್ಳ ಪರಾರಿ – ಪ್ರಕರಣ ದಾಖಲು Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಪೆರ್ನೆ: ಪ್ರಯಾಣಿಕನ ಸಮಯಪ್ರಜ್ಙೆಯಿಂದ ತಪ್ಪಿದ ಭಾರೀ ದೊಡ್ಡ ಅವಘಡ

(ನ್ಯೂಸ್‌ ಕಡಬ)com,ಡಿ.26: ಬಸ್ ಚಾಲಕನಿಗೆ ಎದೆ ನೋವು ಕಾಣಿಸಿಕೊಂಡಿದ್ದು, ಪ್ರಯಾಣಿಕರೋರ್ವರ ಸಮಯ ಪ್ರಜ್ಞೆಯಿಂದ ಸಂಭವನೀಯ ಅಪಾಯ ತಪ್ಪಿಸಿ ಬಸ್ ಚಾಲಕನನ್ನು ಆಸ್ಪತ್ರೆಗೆ ದಾಖಲಿಸಿದ ಘಟನೆ ಉಪ್ಪಿನಂಗಡಿಯ ಪೆರ್ನೆ ಎಂಬಲ್ಲಿ ನಡೆದಿದೆ. ಗುರುವಾರ ಸುಬ್ರಹ್ಮಣ್ಯದಿಂದ ಕಾರವಾರಕ್ಕೆ ಕೆಎಸ್ಸಾರ್ಟಿಸಿ ಬಸ್ ಅನ್ನು ಚಾಲನೆ ಮಾಡುತ್ತಿದ್ದ ಚಾಲಕ ಗೋವಿಂದ ನಾಯ್ಕ ಎಂಬವರಿಗೆ ಪೆರ್ನೆ ಗ್ರಾಮದ ಕರ್ವೇಲು ಎಂಬಲ್ಲಿ ಸಮೀಪಿಸುತ್ತಿದ್ದಾಗ ಎದೆನೋವು ಕಾಣಿಸಿಕೊಂಡಿದ್ದು, ಬಸ್ ಚಾಲನೆಯಲ್ಲಿ ವ್ಯತ್ಯಾಸ ಕಂಡು ಬಂದಿತ್ತು. ಇದನ್ನು ಗಮನಿಸಿದ ಬಸ್ಸಿನಲ್ಲಿದ್ದ ನ್ಯಾಯವಾದಿ ನೆಲ್ಯಾಡಿಯ ಇಸ್ಮಾಯೀಲ್ ಅವರ ಪುತ್ರ ಸಲ್ಮಾನುಲ್‌

ಪೆರ್ನೆ: ಪ್ರಯಾಣಿಕನ ಸಮಯಪ್ರಜ್ಙೆಯಿಂದ ತಪ್ಪಿದ ಭಾರೀ ದೊಡ್ಡ ಅವಘಡ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಸಂಪಾಜೆ: ಬಾವಿಗೆ ಬಿದ್ದ ಮಹಿಳೆಯನ್ನು ರಕ್ಷಿಸಿದ ರಿಕ್ಷಾಚಾಲಕ

(ನ್ಯೂಸ್‌ ಕಡಬ)com,ಡಿ.25: ಸಂಪಾಜೆ ಗ್ರಾಮದ ಕಲ್ಲುಗುಂಡಿ ಕೈಪಡ್ಕ ಎಂಬಲ್ಲಿ ಆಕಸ್ಮಿಕವಾಗಿ ಬಾವಿಗೆ ಬಿದ್ದ ಮಹಿಳೆಯೊಬ್ಬರನ್ನು ಆಟೋ ಚಾಲಕ ಗುರುಪ್ರಕಾಶ್ ಅವರು ರಕ್ಷಿಸಿದ್ದಾರೆ. ಮಂಗಳವಾರದಂದು ಕೈಪಡ್ಕದಲ್ಲಿ ಮಹಿಳೆಯೊಬ್ಬರು ಆಕಸ್ಮಿಕವಾಗಿ ಬಾವಿಗೆ ಬಿದ್ದಿದ್ದರು. ಈ ಸಂದರ್ಭದಲ್ಲಿ ಅದೇ ರಸ್ತೆಯಲ್ಲಿ ಆಟೋ ಚಾಲನೆ ಮಾಡಿಕೊಂಡು ಹೋಗುತ್ತಿದ್ದ ಗುರುಪ್ರಕಾಶ್ ಅವರಿಗೆ ವಿಷಯ ತಿಳಿದಿದೆ. ಕೂಡಲೇ ಕಾರ್ಯಪ್ರವೃತ್ತರಾದ ಅವರು ಬಾವಿಗೆ ಜಿಗಿದು, ಸ್ಥಳೀಯರ ಸಹಾಯದೊಂದಿಗೆ ಮಹಿಳೆಯನ್ನು ಸುರಕ್ಷಿತವಾಗಿ ಮೇಲೆತ್ತಿದ್ದಾರೆ. ಬಳಿಕ ಮಹಿಳೆಯನ್ನು ಚಿಕಿತ್ಸೆಗಾಗಿ ಸುಳ್ಯದ ಆಸ್ಪತ್ರೆಗೆ ದಾಖಲಿಸಲಾಗಿದೆ. ಗುರುಪ್ರಕಾಶ್ ಅವರ ಸಮಯಪ್ರಜ್ಞೆಗೆ, ಅವರ ಧೈರ್ಯಕ್ಕೆ

ಸಂಪಾಜೆ: ಬಾವಿಗೆ ಬಿದ್ದ ಮಹಿಳೆಯನ್ನು ರಕ್ಷಿಸಿದ ರಿಕ್ಷಾಚಾಲಕ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಬಂಟ್ವಾಳ: ಹಿಟ್ & ರನ್ ಪ್ರಕರಣ-ಆರೋಪಿ ರಿಕ್ಷಾ ಚಾಲಕ ಅರೆಸ್ಟ್

(ನ್ಯೂಸ್‌ ಕಡಬ)com,ಡಿ.25: ಬಂಟ್ವಾಳದಲ್ಲಿ ಸ್ಕೂಟರ್ ಒಂದಕ್ಕೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ರಿಕ್ಷಾವನ್ನು ಬಂಟ್ವಾಳ ಟ್ರಾಫಿಕ್ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ರಾಮಲ್ ಕಟ್ಟೆ ನಿವಾಸಿ ಉಸ್ಮಾನ್ ಎಂಬವರ ಸ್ಕೂಟರ್ ಗೆ ಅಪರಿಚಿತ ರಿಕ್ಷಾ ಡಿಕ್ಕಿ ಹೊಡೆದು ಬಳಿಕ ಪರಾರಿಯಾಗಿತ್ತು. ಗಂಭೀರವಾಗಿ ಗಾಯಗೊಂಡಿದ್ದ ಉಸ್ಮಾನ್ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದರು. ಆದರೆ ಎರಡು ಹಿಟ್ ರನ್ ಆಗಿದ್ದ ರಿಕ್ಷಾ ಪತ್ತೆಯಾಗಿರಲಿಲ್ಲ. ರಿಕ್ಷಾ ಡಿಕ್ಕಿಯಾಗಿ ಪರಾರಿಯಾಗಿರುವುದನ್ನು ಅಲ್ಲಿನ ಸ್ಥಳೀಯರು ನೋಡಿದ್ದಲ್ಲದೆ, ಸಿ.ಸಿ.ಕ್ಯಾಮರಾದಲ್ಲಿ

ಬಂಟ್ವಾಳ: ಹಿಟ್ & ರನ್ ಪ್ರಕರಣ-ಆರೋಪಿ ರಿಕ್ಷಾ ಚಾಲಕ ಅರೆಸ್ಟ್ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಮಂಗಳೂರು: ಚಾಲಕನಿಲ್ಲದೇ ಕಾರು ಚಲಿಸಿ, ವಿದ್ಯುತ್ ಕಂಬಕ್ಕೆ ಡಿಕ್ಕಿ- ತಪ್ಪಿದ ಅನಾಹುತ

(ನ್ಯೂಸ್‌ ಕಡಬ) newskadaba.com,ಡಿ.24: ಪಾರ್ಕ್ ಮಾಡಿದ್ದ ಕಾರೊಂದು ಚಾಲಕನಿಲ್ಲದೇ ಸ್ವಯಂಚಾಲಿತವಾಗಿ ಚಲಿಸಿ, ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ಮಂಗಳೂರು ಜೈಲ್ ರೋಡ್ ನಲ್ಲಿ ನಡೆದಿದೆ. ಮುಂದೆಯೇ ಇಳಿಜಾರು ರಸ್ತೆ ಇದ್ದು, ಸದ್ಯ ಸಂಭಾವ್ಯ ಅಪಾಯ ತಪ್ಪಿದೆ.   ರಸ್ತೆಯಲ್ಲಿ ವಾಹನ ಸಂಚಾರ ಮತ್ತು ಪಾದಚಾರಿಗಳ ಓಡಾಟ ಹೆಚ್ಚಿರುವುದರಿಂದ, ದೊಡ್ಡ ಅನಾಹುತ ಸಂಭವಿಸುವ ಸಾಧ್ಯತೆ ಇತ್ತು. ಆದರೆ ಘಟನೆ ಸಂದರ್ಭ ಕಾರಿನಲ್ಲೂ ಯಾರೂ ಇಲ್ಲದಿರುವುದರಿಂದ ಅಪಾಯ ತಪ್ಪಿದಂತಾಗಿದೆ.

ಮಂಗಳೂರು: ಚಾಲಕನಿಲ್ಲದೇ ಕಾರು ಚಲಿಸಿ, ವಿದ್ಯುತ್ ಕಂಬಕ್ಕೆ ಡಿಕ್ಕಿ- ತಪ್ಪಿದ ಅನಾಹುತ Read More »

ಕರಾವಳಿ

ಕಡಬ: ಕಾಡುಹಂದಿ ದಾಳಿಗೆ ಮಹಿಳೆ ತೀವ್ರ ಗಾಯ; ಸಾರ್ವಜನಿಕರಲ್ಲಿ ಮನೆಮಾಡಿದ ಆತಂಕ

(ನ್ಯೂಸ್‌ ಕಡಬ) newskadaba.com,ಡಿ.24: ಕಡಬ ತಾಲೂಕು ಕೌಕ್ರಾಡಿ ಗ್ರಾಮದ ಪೊಟ್ಟುಕೆರೆ ಎಂಬಲ್ಲಿ ಡಿ.20ರಂದು ಬೆಳಗ್ಗೆ ಕಾಡುಹಂದಿಯೊಂದು ಮಹಿಳೆಯ ಮೇಲೆ ದಾಳಿ ನಡೆಸಿ ತೀವ್ರವಾಗಿ ಗಾಯಗೊಳಿಸಿರುವ ಘಟನೆ ನಡೆದಿದೆ. ಗಾಯಗೊಂಡ ಮಹಿಳೆಯನ್ನು ಕೌಕ್ರಾಡಿ ಗ್ರಾಮದ ಪೊಟ್ಟುಕೆರೆ ನಿವಾಸಿ ಉಮೇಶ್ ಗೌಡರ ಪತ್ನಿ ಲೀಲಾವತಿ (36) ಎಂದು ಗುರುತಿಸಲಾಗಿದೆ. ಶನಿವಾರ ಬೆಳಗ್ಗೆ ತಮ್ಮ ತೋಟದಲ್ಲಿ ಹುಲ್ಲು ಕೊಯ್ಯುತ್ತಿದ್ದ ವೇಳೆ ಅರಣ್ಯ ಪ್ರದೇಶದಿಂದ ಬಂದ ಕಾಡುಹಂದಿಯು ಏಕಾಏಕಿ ದಾಳಿ ನಡೆಸಿದ್ದು, ಮಹಿಳೆಯ ಎರಡು ಕೈಗಳಿಗೆ ಗಂಭೀರ ಗಾಯಗಳಾಗಿವೆ. ಗಾಯಗೊಂಡ ಮಹಿಳೆಯನ್ನು ತಕ್ಷಣವೇ

ಕಡಬ: ಕಾಡುಹಂದಿ ದಾಳಿಗೆ ಮಹಿಳೆ ತೀವ್ರ ಗಾಯ; ಸಾರ್ವಜನಿಕರಲ್ಲಿ ಮನೆಮಾಡಿದ ಆತಂಕ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಬೆಂಗಳೂರು – ಕರಾವಳಿ ಜಿಲ್ಲೆಗಳಿಗೆ ಸಂಪರ್ಕ ಕಲ್ಪಿಸುವ ವಂದೇ ಭಾರತ್‌ ರೈಲು ಆರಂಭಕ್ಕೆ ಹೆಚ್ಡಿಕೆ ಮನವಿ

(ನ್ಯೂಸ್‌ ಕಡಬ) newskadaba.com,ಡಿ.24: ಕೇಂದ್ರದ ಭಾರಿ ಕೈಗಾರಿಕೆ ಮತ್ತು ಉಕ್ಕು ಸಚಿವ ಎಚ್‌.ಡಿ.ಕುಮಾರಸ್ವಾಮಿ ಅವರು, ರಾಜ್ಯದ ಕರಾವಳಿ ಭಾಗದ ಜನರಿಗೆ ಅನುಕೂಲವಾಗುವಂತೆ ಬೆಂಗಳೂರು-ಗೋವಾದ ಮಡಗಾಂವ್‌ ಮಾರ್ಗದಲ್ಲಿ ವಂದೇ ಭಾರತ್‌ ಎಕ್ಸ್ ಪ್ರೆಸ್‌‍ ರೈಲು ಸೇವೆ ಆರಂಭಿಸುವಂತೆ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್‌ ಅವರಿಗೆ ಮನವಿ ಮಾಡಿದ್ದಾರೆ. ಈ ಸಂಬಂಧ ರೈಲ್ವೆ ಸಚಿವರಿಗೆ ಪತ್ರ ಬರೆದಿರುವ ಅವರು, ಬೆಂಗಳೂರಿನಿಂದ ಹಾಸನ- ಮಂಗಳೂರು ಜಂಕ್ಷನ್‌- ಉಡುಪಿ ಮತ್ತು ಕಾರವಾರ ಮಾರ್ಗವಾಗಿ ಗೋವಾದ ಮಡಗಾಂವ್‌ವರೆಗೆ ಅತಿವೇಗದ ವಂದೇ ಭಾರತ್‌ ರೈಲು

ಬೆಂಗಳೂರು – ಕರಾವಳಿ ಜಿಲ್ಲೆಗಳಿಗೆ ಸಂಪರ್ಕ ಕಲ್ಪಿಸುವ ವಂದೇ ಭಾರತ್‌ ರೈಲು ಆರಂಭಕ್ಕೆ ಹೆಚ್ಡಿಕೆ ಮನವಿ Read More »

ಕರಾವಳಿ, ಕರ್ನಾಟಕ
Scroll to Top