ಕರಾವಳಿ

ಸಾಮಾಜಿಕ ಜಾಲತಾಣದಲ್ಲಿ ಕೋಮುಭಾವನೆ ಕೆರಳಿಸಿದ ಪ್ರಕರಣ ► ಕಡಬದ ವ್ಯಕ್ತಿಯ ವಿರುದ್ಧ ಪೊಲೀಸ್ ದೂರು

(ನ್ಯೂಸ್ ಕಡಬ) newskadaba.com ಕಡಬ, ಅ.21. ಮುಸ್ಲಿಮರ ಪವಿತ್ರ ಸ್ಥಳವಾದ ಮಕ್ಕಾದ ಮಸೀದಿಯ ಮೇಲೆ ಹನುಮಂತನ ಭಾವಚಿತ್ರವನ್ನಿರಿಸಿ ಮುಸ್ಲಿಂ ಧರ್ಮವನ್ನು ಅವಹೇಳನ ನಡೆಸಲಾಗಿದೆಯೆಂದು ಕಡಬದ ಪಂಚಾಯತ್ ಬಿಲ್ಡಿಂಗ್ ನಲ್ಲಿರುವ ಗಣೇಶ್ ಮೊಬೈಲ್ ಅಂಗಡಿಯ ನೌಕರ ಪ್ರದೀಪ್ ಎಂಬವರ ಮೇಲೆ ಎಸ್ಕೆಎಸ್ಸೆಸ್ಸೆಫ್ ಕಡಬ ವಲಯದ ವತಿಯಿಂದ ಕಡಬ ಪೊಲೀಸ್‌ ಠಾಣೆಗೆ ದೂರು ನೀಡಲಾಯಿತು. ಪ್ರದೀಪ್ ಕಾಬಾದ ಫೊಟೋವನ್ನು ತಿರುಚಿ ತನ್ನ 9741469893 ಸಂಖ್ಯೆಯ ವಾಟ್ಸಪ್ ಪ್ರೊಫೈಲ್ ಫೊಟೊವನ್ನಾಗಿ ಉಪಯೋಗಿಸಿ ಮಕ್ಕಾವನ್ನು ಅವಮಾನಿಸುವ ಕೃತ್ಯವನ್ನು ಮಾಡಿದ್ದಲ್ಲದೆ ಮುಸ್ಲಿಮರ ಭಾವನೆಯನ್ನು ಕೆರಳಿಸುವಂತಹ […]

ಸಾಮಾಜಿಕ ಜಾಲತಾಣದಲ್ಲಿ ಕೋಮುಭಾವನೆ ಕೆರಳಿಸಿದ ಪ್ರಕರಣ ► ಕಡಬದ ವ್ಯಕ್ತಿಯ ವಿರುದ್ಧ ಪೊಲೀಸ್ ದೂರು Read More »

ಕರಾವಳಿ

ವಿಟ್ಲದಲ್ಲೊಂದು ಹನಿಟ್ರ್ಯಾಪ್ ಪ್ರಕರಣ ► ಯುವಕನಿಗೆ ಹಲ್ಲೆಗೈದು ಕಾರು, ನಗದು, ಚಿನ್ನಾಭರಣ ದರೋಡೆ

(ನ್ಯೂಸ್ ಕಡಬ) newskadaba.com ವಿಟ್ಲ, ಅ.21. ಯುವಕನೋರ್ವನ ಮೇಲೆ ಹಲ್ಲೆ‌ ನಡೆಸಿ ಸ್ವತ್ತುಗಳನ್ನು ದರೋಡೆಗೈದ ಘಟನೆ ಶನಿವಾರ ಮುಂಜಾನೆ ವಿಟ್ಲ ಸಮೀಪದ ಕುಡ್ತಮೊಗೇರು ಎಂಬಲ್ಲಿ ನಡೆದಿದೆ. ಹನೀಫ್ ಎಂಬಾತನೇ ತಂಡದಿಂದ ಹಲ್ಲೆಗೊಳಗಾದ ಯುವಕ. ಕುಡ್ತಮೊಗೇರು ಫ್ಲ್ಯಾಟ್ ನಲ್ಲಿ ಮುಂಜಾನೆ ಮೂರು ಗಂಟೆ ಸುಮಾರಿಗೆ ತಂಡವೊಂದು ಹಲ್ಲೆ ನಡೆಸಿ ಹನೀಫ್ ಬಳಿಯಿದ್ದ ಸ್ವಿಫ್ಟ್ ಕಾರು, ಐದು ಪವನ್ ಚಿನ್ನಾಭರಣ ಹಾಗೂ ನಗದು ಹಣದೊಂದಿಗೆ ಪರಾರಿಯಾಗಿದ್ದಾರೆ. ಹಲ್ಲೆಗೊಳಗಾಗಿರುವ ಹನೀಫ್ ನನ್ನು ವಿಟ್ಲ ಸಮುದಾಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ವಿಟ್ಲದಲ್ಲೊಂದು ಹನಿಟ್ರ್ಯಾಪ್ ಪ್ರಕರಣ ► ಯುವಕನಿಗೆ ಹಲ್ಲೆಗೈದು ಕಾರು, ನಗದು, ಚಿನ್ನಾಭರಣ ದರೋಡೆ Read More »

ಕರಾವಳಿ

ಕೊಂಬಾರು: ಮರಕ್ಕೆ ಢಿಕ್ಕಿ ಹೊಡೆದ ಕಾರು ► ಇಬ್ಬರು ಗಂಭೀರ

(ನ್ಯೂಸ್ ಕಡಬ) newskadaba.com ಕಡಬ, ಅ.21. ಗುಂಡ್ಯ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಕೆಂಜಾಳ ಎಂಬಲ್ಲಿ ಕಾರೊಂದು ಮರಕ್ಕೆ ಢಿಕ್ಕಿ ಹೊಡೆದ ಪರಿಣಾಮ ಇಬ್ಬರು ಗಂಭೀರ ಗಾಯಗೊಂಡು, ಮೂವರು ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾದ ಘಟನೆ ಶನಿವಾರ ಬೆಳಿಗ್ಗೆ ನಡೆದಿದೆ. ಬೆಂಗಳೂರು ಸುಂಕದಕಟ್ಟೆ ನಿವಾಸಿಗಳಿದ್ದ ತಂಡ ಧರ್ಮಸ್ಥಳ, ಸೌತಡ್ಕ ದೇವರ ದರ್ಶನ ಮುಗಿಸಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ತೆರಳುತ್ತಿದ್ದ ಸಂದರ್ಭ ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆ ಬದಿಯಲ್ಲಿನ ಮರಕ್ಕೆ ಢಿಕ್ಕಿ ಹೊಡೆದುದರಿಂದ ಈ ದುರ್ಘಟನೆ ಸಂಭವಿಸಿದೆ. ಗಾಯಾಳುಗಳನ್ನು

ಕೊಂಬಾರು: ಮರಕ್ಕೆ ಢಿಕ್ಕಿ ಹೊಡೆದ ಕಾರು ► ಇಬ್ಬರು ಗಂಭೀರ Read More »

ಕರಾವಳಿ

ಅಪಘಾತ ತಡೆಯಲು ರಾಜ್ಯ ಸರ್ಕಾರದ ಚಿಂತನೆ ► 100 ಸಿಸಿ ವಾಹನಗಳಲ್ಲಿ ಹಿಂಬದಿಯಲ್ಲಿ ಸವಾರಿ ಮಾಡುವಂತಿಲ್ಲ..!!!

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ.21. 100 ಸಿಸಿ ವಾಹನಗಳಿಗೆ ಅನ್ವಯವಾಗುವಂತೆ ಹಿಂಬದಿ ಸವಾರರನ್ನು ನಿರ್ಬಂಧಿಸಲು ಸರ್ಕಾರ ಚಿಂತನೆ ನಡೆಸಿದೆ. ಬೆಂಗಳೂರಿನಲ್ಲಿ ಗುಂಡಿಗಳಿಗೆ ಬಿದ್ದು ಬಲಿಯಾಗುತ್ತಿರುವವರ ಸಂಖ್ಯೆ ಏರುತ್ತಲೇ ಇದೆ. ಅದರಲ್ಲೂ ದ್ವಿಚಕ್ರ ವಾಹನದಲ್ಲಿ ಸಂಚರಿಸುವಾಗ ಹಿಂಬದಿ ಕುಳಿತಿದ್ದ ಮಕ್ಕಳು ಸಾವನ್ನಪ್ಪಿರೋ ಪ್ರಕರಣಗಳು ಹೆಚ್ಚಾಗಿ ದಾಖಲಾಗಿರುವ ಹಿನ್ನಲೆಯಲ್ಲಿ ಸಾವು ನೋವು ತಪ್ಪಿಸಲು ರಾಜ್ಯ ಸರ್ಕಾರ  ಹೊಸ ಆದೇಶ ತರಲು ನಿರ್ಧರಿಸಿದೆ.  ಈ ಕುರಿತು ಹೈಕೋರ್ಟ್ ಗೆ ಸರ್ಕಾರ ಈಗಾಗಲೇ ಅಫಿಡವಿಟ್ ಸಲ್ಲಿಸಿದ್ದು ಒಂದು ವಾರದೊಳಗೆ ಅಧಿಕೃತ ಆದೇಶ ಹೊರ

ಅಪಘಾತ ತಡೆಯಲು ರಾಜ್ಯ ಸರ್ಕಾರದ ಚಿಂತನೆ ► 100 ಸಿಸಿ ವಾಹನಗಳಲ್ಲಿ ಹಿಂಬದಿಯಲ್ಲಿ ಸವಾರಿ ಮಾಡುವಂತಿಲ್ಲ..!!! Read More »

ಕರಾವಳಿ

ಅ.22: ಮುಖ್ಯಮಂತ್ರಿ ಸಿದ್ದರಾಮಯ್ಯ ಬಂಟ್ವಾಳಕ್ಕೆ ► ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಅ.20. ಬಂಟ್ವಾಳ ವಿಧಾನಸಭಾ ಕ್ಷೇತ್ರದಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ಹಾಗೂ ಶಿಲಾನ್ಯಾಸ ಕಾರ್ಯಕ್ರಮಕ್ಕಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅ. 22ರಂದು ಕ್ಷೇತ್ರಕ್ಕೆ ಭೇಟಿ ನೀಡಲಿದ್ದಾರೆ ಎಂದು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಬಿ. ರಮಾನಾಥ ರೈ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಮುಖ್ಯಮಂತ್ರಿ 148.29 ಕೋಟಿ ರೂ.ಗಳ ವಿವಿಧ ಯೋಜನೆಗಳ ಲೋಕಾರ್ಪಣೆ ಹಾಗೂ 104.21 ಕೋಟಿ ರೂ.ಗಳ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ ಎಂದು ಹೇಳಿದರು. ಉದ್ಘಾಟನೆಗೊಳ್ಳಲಿರುವ ಯೋಜನೆಗಳು: ಬಿಸಿರೋಡ್‌ನಲ್ಲಿ

ಅ.22: ಮುಖ್ಯಮಂತ್ರಿ ಸಿದ್ದರಾಮಯ್ಯ ಬಂಟ್ವಾಳಕ್ಕೆ ► ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ Read More »

ಕರಾವಳಿ

ಮಂಗಳೂರು: ದರೋಡೆಗೆ ಯತ್ನಿಸಿದ 7 ಮಂದಿಯ ಬಂಧನ ► ಆಕಾಶಭವನ ಶರಣ್ ಸಹಚರರು ಸಿಸಿಬಿ ಬಲೆಗೆ

(ನ್ಯೂಸ್ ಕಡಬ) newskadaba.com ಮಂಗಳೂರು, ಅ.20. ನಗರದ ಬಿಜೈಯಲ್ಲಿರುವ ಬಿಗ್‌ಬಝಾರ್ ಶಾಪಿಂಗ್ ಕಾಂಪ್ಲೆಕ್ಸ್ ಎದುರು ದರೋಡೆಗೆ ಯತ್ನಿಸಿದ ಆರೋಪದಲ್ಲಿ ಆಕಾಶಭವನ ಶರಣ್ ಸಹಚರರೆನ್ನಲಾದ 7 ಮಂದಿ ಆರೋಪಿಗಳನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಕಾಪಿಗುಡ್ಡೆ ಆಕಾಶಭವನದ ಪ್ರೀತಂ ಪೂಜಾರಿ(23), ದೇವಿನಗರ ಕುಂಜತ್‌ಬೈಲ್‌ನ ಶಾಲ್ ಕುಮಾರ್ (23), ದೇರೇಬೈಲ್ ಕೊಂಚಾಡಿಯ ಗೌತಮ್ ದೇವಾಡಿಗ (23), ಮೂಡುಶೆಡ್ಡೆಯ ವಿನೋದ್ ರಾಜ್ (21), ಮೂಡುಶೆಡ್ಡೆ ಎದುರು ಪದವಿನ ದಿವಾಕರ (29), ತೊಕ್ಕೊಟ್ಟು ಕೃಷ್ಣನಗರದ ಪ್ರವೀಣ್ (25), ಯೆಯ್ಯೊಡಿ ಗುಂಡಳಿಕೆ

ಮಂಗಳೂರು: ದರೋಡೆಗೆ ಯತ್ನಿಸಿದ 7 ಮಂದಿಯ ಬಂಧನ ► ಆಕಾಶಭವನ ಶರಣ್ ಸಹಚರರು ಸಿಸಿಬಿ ಬಲೆಗೆ Read More »

ಕರಾವಳಿ

► ದಕ್ಷಿಣ ಕನ್ನಡದ ನೂತನ ಜಿಲ್ಲಾಧಿಕಾರಿಯಾಗಿ ಶಶಿಕಾಂತ್ ಸೆಂಥಿಲ್ ಅಧಿಕಾರ ಸ್ವೀಕಾರ

(ನ್ಯೂಸ್ ಕಡಬ) newskadaba.com ಮಂಗಳೂರು, ಅ.19. ದಕ್ಷಿಣ ಕನ್ನಡ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ನಿರ್ದೇಶಕರಾಗಿದ್ದ ಶಶಿಕಾಂತ್ ಸೆಂಥಿಲ್ ಗುರುವಾರ ಅಧಿಕಾರ ಸ್ವೀಕರಿಸಿದರು. ಪ್ರಭಾರ ಜಿಲ್ಲಾಧಿಕಾರಿ ಕುಮಾರ್ ಅವರು ನೂತನ ಜಿಲ್ಲಾಧಿಕಾರಿಗಳಿಗೆ ಅಧಿಕಾರ ಹಸ್ತಾಂತರಿಸಿ, ಸ್ವಾಗತಿಸಿದರು. ಈ ಸಂದರ್ಭ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಎಂ.ಆರ್. ರವಿ, ಮಂಗಳೂರು ಸಹಾಯಕ ಆಯುಕ್ತ ರೇಣುಕಾ ಪ್ರಸಾದ್, ಜಿ.ಪಂ. ಉಪ ಕಾರ್ಯದರ್ಶಿ ಎನ್.ಆರ್. ಉಮೇಶ್ ಹಾಗೂ ಜಿಲ್ಲಾ ಮಟ್ಟದ ವಿವಿಧ ಇಲಾಖಾಧಿಕಾರಿಗಳು ಉಪಸ್ಥಿತರಿದ್ದರು.

► ದಕ್ಷಿಣ ಕನ್ನಡದ ನೂತನ ಜಿಲ್ಲಾಧಿಕಾರಿಯಾಗಿ ಶಶಿಕಾಂತ್ ಸೆಂಥಿಲ್ ಅಧಿಕಾರ ಸ್ವೀಕಾರ Read More »

ಕರಾವಳಿ

ಅ.22: ತೆಗೆರ್ ತುಳುಕೂಟದಿಂದ ದೀಪಾವಳಿ ಪ್ರಯುಕ್ತ ► ರೆಂಜಿಲಾಡಿಯಲ್ಲಿ ‘ಬೆನ್ನಿದ ಕಂಡೊಡ್ ನಮ್ಮ ಜವನೆರ್’ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಕಡಬ, ಅ.19. ನೂಜಿಬಾಳ್ತಿಲ ಗ್ರಾಮದ ನೂಜಿಬೈಲ್ ತೆಗೆರ್ ತುಳುಕೂಟೊ ವತಿಯಿಂದ ದೀಪಾವಳಿ ಪ್ರಯುಕ್ತ ಮಾರಪ್ಪೆ ದಿ| ಜಿನ್ನಪ್ಪ ಗೌಡರ ಸ್ಮರಣಾರ್ಥ ಅ.22 ರಂದು ಶ್ರೀ ನೂಜಿ ಉಳ್ಳಾಲ್ತಿ ಅಮ್ಮನವರ ಕ್ಷೇತ್ರದಲ್ಲಿನ ಕೇಪುಂಜ ಗದ್ದೆಯಲ್ಲಿ ಬೆನ್ನಿದ ಕಂಡೊಡ್ ನಮ್ಮ ಜವನೆರ್ ಕ್ರೀಡಾಕೂಟ ನಡೆಯಲಿದೆ. ಕ್ರೀಡಾಕೂಟವನ್ನು ಪ್ರಗತಿಪರ ಕೃಷಿಕರಾದ ಮೃತ್ಯುಂಜಯ ಭಿಡೆ ಕೆರೆತೋಟ ಉದ್ಘಾಟಿಸಲಿದ್ದು, ಅಧ್ಯಕ್ಷತೆಯನ್ನು ನೂಜಿಶ್ರೀ ಉಳ್ಳಾಲ್ತಿ ಕ್ಷೇತ್ರದ ಆಡಳಿತ ಮಂಡಳಿ ಅಧ್ಯಕ್ಷ ರಾಮಚಂದ್ರ ಗೌಡ ಎಲುವಾಳೆ ವಹಿಸಲಿದ್ದು . ಪುತ್ತೂರು ಕೋಟಿಚೆನ್ನಯ ಕಂಬಳ ಸಮಿತಿ

ಅ.22: ತೆಗೆರ್ ತುಳುಕೂಟದಿಂದ ದೀಪಾವಳಿ ಪ್ರಯುಕ್ತ ► ರೆಂಜಿಲಾಡಿಯಲ್ಲಿ ‘ಬೆನ್ನಿದ ಕಂಡೊಡ್ ನಮ್ಮ ಜವನೆರ್’ ಕಾರ್ಯಕ್ರಮ Read More »

ಕರಾವಳಿ

ಬಿಜೈ: ಲಾಂಡ್ರಿ ಬೆಂಕಿಗಾಹುತಿ ► ದುಬಾರಿ ಸೀರೆ ಸೇರಿ ಲಕ್ಷಕ್ಕೂ ಅಧಿಕ ನಷ್ಟ

(ನ್ಯೂಸ್ ಕಡಬ) newskadaba.com ಮಂಗಳೂರು, ಅ.19. ಇಲ್ಲಿನ ಬಿಜೈನಲ್ಲಿರುವ ಲಾಂಡ್ರಿ ಅಂಗಡಿಯೊಂದಕ್ಕೆ ಬೆಂಕಿ ಬಿದ್ದ ಪರಿಣಾಮ ಅಪಾರ ಹಾನಿ ಸಂಭವಿಸಿದ್ದು, ಒಂದು ಲಕ್ಷ ರೂ. ನಷ್ಟು ನಷ್ಟ ಉಂಟಾದ ಘಟನೆ ಬುಧವಾರ ಬೆಳಗ್ಗಿನ ಜಾವ ನಡೆದಿದೆ. ರೆನ್ವಿಕ್ ಎಂಬವರ ಮಾಲಕತ್ವದ ಆಧುನಿಕ ತಂತ್ರಜ್ಞಾನವಿರುವ ಮೈ ಆಂಗರ್ ಲಾಂಡ್ರಿಗೆ ಬೆಂಕಿ ಹೊತ್ತಿಕೊಂಡು ದುಬಾರಿ ಮೌಲ್ಯದ ಸೀರೆಗಳು ಸೇರಿದಂತೆ ಇತರ ಸೊತ್ತುಗಳು ಬೆಂಕಿಗಾಹುತಿಯಾಗಿವೆ. ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಬಿದ್ದಿರಬಹುದೆಂದು ಶಂಕಿಸಲಾಗಿದೆ. ಕದ್ರಿ ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು

ಬಿಜೈ: ಲಾಂಡ್ರಿ ಬೆಂಕಿಗಾಹುತಿ ► ದುಬಾರಿ ಸೀರೆ ಸೇರಿ ಲಕ್ಷಕ್ಕೂ ಅಧಿಕ ನಷ್ಟ Read More »

ಕರಾವಳಿ

ಮರ್ಧಾಳ: ಬೈಕ್ – ಕಾರು ಢಿಕ್ಕಿ ► ಮಹಿಳೆ ಸೇರಿ ಇಬ್ಬರಿಗೆ ಗಾಯ

(ನ್ಯೂಸ್ ಕಡಬ) newskadaba.com ಕಡಬ, ಅ.18 ಸುಬ್ರಹ್ಮಣ್ಯ – ಧರ್ಮಸ್ಥಳ ರಾಜ್ಯ ಹೆದ್ದಾರಿಯ ಮರ್ಧಾಳ ಎಂಬಲ್ಲಿ ಆಮ್ನಿ ಕಾರು ಮತ್ತು ಬೈಕ್ ನಡುವೆ ಢಿಕ್ಕಿ ಸಂಭವಿಸಿ ಇಬ್ಬರು ಗಾಯಗೊಂಡ ಘಟನೆ ಬುಧವಾರ ಸಂಜೆ ನಡೆದಿದೆ. ಕಡಬದಿಂದ ಕೊಂಬಾರು ಕಡೆಗೆ ತೆರಳುತ್ತಿದ್ದ ಬೈಕ್ ಮತ್ತು ವಿರುದ್ಧ ದಿಕ್ಕಿನಿಂದ ಆಗಮಿಸಿದ ಕಾರು ಮಧ್ಯೆ ಅಪಘಾತ ಸಂಭವಿಸಿದ ಪರಿಣಾಮ ಬೈಕ್ ಸವಾರ ಕೊಂಬಾರು ಗ್ರಾಮದ ಕೆರೆಂದೇಲು ನಿವಾಸಿ ಬಾಲಕೃಷ್ಣ ಗೌಡ ಮತ್ತು ಸಂಬಂಧಿ ಮೋಹಿನಿ ಎಂಬವರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಪುತ್ತೂರು ಖಾಸಗಿ

ಮರ್ಧಾಳ: ಬೈಕ್ – ಕಾರು ಢಿಕ್ಕಿ ► ಮಹಿಳೆ ಸೇರಿ ಇಬ್ಬರಿಗೆ ಗಾಯ Read More »

ಕರಾವಳಿ
Scroll to Top