ಕರಾವಳಿ

ಪಟಾಕಿ ಅವಾಂತರ..!!! ► ಬಾಲಕನ 2 ಕಣ್ಣು ಹಾಗೂ ಕೈ ಕಾಲುಗಳಿಗೆ ಗಂಭೀರ ಗಾಯ

(ನ್ಯೂಸ್ ಕಡಬ) newskadaba.com ಬಳ್ಳಾರಿ, ಅ.18. ಬಾಲಕನೊಬ್ಬ ಪಟಾಕಿ ಸಿಡಿಸುವ ವೇಳೆ ಗಂಭೀರವಾಗಿ ಗಾಯಗೊಂಡ ಘಟನೆ ಬಳ್ಳಾರಿಯ ಬೆಂಗಳೂರು ರಸ್ತೆಯ ನಾಲ್ ಕಮಾನ್ ಬಳಿ ಮಂಗಳವಾರ ಬೆಳಿಗ್ಗೆ ನಡೆದಿದೆ. 11 ವರ್ಷದ ಬಾಲಕ ನರಸಿಂಹ ಪಟಾಕಿ ಸಿಡಿಸುವ ವೇಳೆ ಗಂಭೀರವಾಗಿ ಗಾಯಗೊಂಡಿದ್ದಾನೆ. ಏಕಕಾಲಕ್ಕೆ ಸಾಕಷ್ಟು ಪಟಾಕಿಗಳನ್ನು ಒಟ್ಟಾಗಿ ಸೇರಿಸಿ ಸಿಡಿಸುವ ವೇಳೆ ಗಂಭೀರವಾಗಿ ಗಾಯಗೊಂಡಿದ್ದಾನೆ. ಘಟನೆಯಲ್ಲಿ ಬಾಲಕ ನರಸಿಂಹನ 2 ಕಣ್ಣು ಹಾಗೂ ಕೈ ಕಾಲುಗಳು ಸಾಕಷ್ಟು ಸುಟ್ಟಿದ್ದು, ಗಾಯಾಳು ಬಾಲಕನನ್ನು ವಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಕ್ಷಣಾರ್ಧದಲ್ಲೆ ಘಟನೆ […]

ಪಟಾಕಿ ಅವಾಂತರ..!!! ► ಬಾಲಕನ 2 ಕಣ್ಣು ಹಾಗೂ ಕೈ ಕಾಲುಗಳಿಗೆ ಗಂಭೀರ ಗಾಯ Read More »

ಕರಾವಳಿ

ಕೈಕಾಲು ಕಟ್ಟಿದ ರೀತಿಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ನೀರಿನಲ್ಲಿ ಪತ್ತೆ ► ಕೊಲೆ ಶಂಕೆ

(ನ್ಯೂಸ್ ಕಡಬ) newskadaba.com ಮಂಡ್ಯ, ಅ.18. ಜಿಲ್ಲೆಯ ಪಾಂಡವಪುರದ ವಿಶ್ವೇಶ್ವರಯ್ಯ ನಾಲೆಯಲ್ಲಿ ಅಪರಿಚಿತ ವ್ಯಕ್ತಿಯ ಶವವೊಂದು ತೇಲಿ ಬಂದಿರೋ ಘಟನೆ ಬೆಳಕಿಗೆ ಬಂದಿದೆ. ಈ ಅಪರಿಚಿತ ವ್ಯಕ್ತಿಗೆ ಸುಮಾರು 42 ವರ್ಷ ಪ್ರಾಯವಾಗಿರಬಹುದು ಎಂದು ಅಂದಾಜಿಸಲಾಗಿದೆ. ವ್ಯಕ್ತಿಯ ಕೈಕಾಲುಗಳನ್ನು ಕಟ್ಟಿದ ರೀತಿಯಲ್ಲಿ ಶವ ಪತ್ತೆಯಾಗಿದ್ದು, ಕೊಲೆ ಮಾಡಿ ನಾಲೆಗೆ ಎಸೆದಿರುವ ಶಂಕೆ ವ್ಯಕ್ತವಾಗಿದೆ. ನಾಲೆಯಲ್ಲಿ ವ್ಯಕ್ತಿಯ ಮೃತದೇಹ ನೋಡಿ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿರುವ ಪಾಂಡವಪುರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ.  

ಕೈಕಾಲು ಕಟ್ಟಿದ ರೀತಿಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ನೀರಿನಲ್ಲಿ ಪತ್ತೆ ► ಕೊಲೆ ಶಂಕೆ Read More »

ಕರಾವಳಿ

ಐತ್ತೂರು: ಸುಳ್ಯ-ನೇಲ್ಯಡ್ಕ ರಸ್ತೆ ಕಾಂಕ್ರೀಟೀಕರಣಕ್ಕೆ ಚಾಲನೆ

(ನ್ಯೂಸ್ ಕಡಬ) newskadaba.com ಕಡಬ, ಅ.18. ಐತ್ತೂರು ಗ್ರಾಮದ ಸುಳ್ಯ-ನೇಲ್ಯಡ್ಕ ಪರಿಶಿಷ್ಠ ಜಾತಿಯ ಕಾಲೋನಿ ರಸ್ತೆಗೆ ತಾ.ಪಂ. ಸದಸ್ಯರ 2017-18ರ ರೂ 1 ಲಕ್ಷ  ಅನುದಾನದಲ್ಲಿ ಕಾಂಕ್ರೀಟೀಕರಣಕ್ಕೆ ತಾ.ಪಂ.ಸದಸ್ಯೆ ಪಿ.ವೈ ಕುಸುಮರವರು ಗುದ್ದಲಿ ಪೂಜೆ ನೆರವೇರಿಸಿದರು. ಈ ಸಂದರ್ಭದಲ್ಲಿ ಮರ್ದಾಳ ಗ್ರಾ,ಪಂ.ಅಧ್ಯಕ್ಷೆ ಲಲಿತಾ ರೈ ಮೈಕಾಜೆ, ಎ.ಪಿ.ಎಂ.ಸಿ. ನಿರ್ದೇಶಕ ಮೇದಪ್ಪ ಗೌಡ ಡೆಪ್ಪುಣಿ, ಮರ್ದಾಳ ಗ್ರಾ.ಪಂ.ಸದಸ್ಯ ಹರೀಶ್ ಕೋಡಂದೂರು, ನೇಲ್ಯಡ್ಕ ಹಿರಿಯ ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕಿ ಜೆಮಿನಿ ಈಶೋಫಿಲಿಪ್, ಗುತ್ತಿಗೆದಾರ ಅಭಿಲಾಷ್ ಬಿಳಿನೆಲೆ, ಪತ್ರಿಕಾ ವಿತರಕ ರಮೇಶ್

ಐತ್ತೂರು: ಸುಳ್ಯ-ನೇಲ್ಯಡ್ಕ ರಸ್ತೆ ಕಾಂಕ್ರೀಟೀಕರಣಕ್ಕೆ ಚಾಲನೆ Read More »

ಕರಾವಳಿ

ಸಬಳೂರು: ಶ್ರೀ ರಾಮ ಭಜನಾ ಮಂದಿರ ► ದೀಪಾವಳಿ ಸಂಭ್ರಮ, ಸಾಮೂಹಿಕ ಗೋಪೂಜೆ

(ನ್ಯೂಸ್ ಕಡಬ) newskadaba.com ಪುತ್ತೂರು, ಅ.18. ಪುತ್ತೂರು ತಾಲೂಕು ಕೊಯಿಲ ಗ್ರಾಮದ ಸಬಳೂರು ಅಯೋಧ್ಯಾ ನಗರ ಶ್ರೀ ರಾಮ ಭಜನಾ ಮಂದಿರದಲ್ಲಿ ಕಳೆದ 10 ವರ್ಷಗಳಿಂದ ದೀಪಾವಳಿ ಆಚರಣೆಯನ್ನು ಅದ್ದೂರಿಯಾಗಿ ಆಚರಿಸಿಕೊಂಡು ಬಂದಿದ್ದು, ಈ ವರ್ಷವೂ 11ನೇ ವರ್ಷದ ದೀಪಾವಳಿ ಆಚರಣೆಯನ್ನು ಮಂಗಳವಾರ ಆಚರಿಸಲಾಯಿತು. ಸಬಳೂರು ಶ್ರೀ ರಾಮ ಗೆಳೆಯರ ಬಳಗದ ವತಿಯಿಂದ ಅಯೋಧ್ಯಾ ನಗರ ಶ್ರೀ ರಾಮ ಭಜನಾ ಮಂದಿರದಲ್ಲಿ ಅಯೋಜಿಸಲಾದ 11ನೇ ವರ್ಷದ ದೀಪಾವಳಿ ಕ್ರೀಡಾಕೂಟಕ್ಕೆ ಜೇಸಿಐ ಮುಖಂಡ ಪ್ರಶಾಂತ್ ರೈ ಸಬಳೂರು ಚಾಲನೆ ನೀಡಿದರು. ಬಳಿಕ ಮಾತನಾಡಿದ ಪ್ರಶಾಂತ್ ರೈ ಅವರು

ಸಬಳೂರು: ಶ್ರೀ ರಾಮ ಭಜನಾ ಮಂದಿರ ► ದೀಪಾವಳಿ ಸಂಭ್ರಮ, ಸಾಮೂಹಿಕ ಗೋಪೂಜೆ Read More »

ಕರಾವಳಿ

ತಾ.ಪಂ. ಹಾಗೂ ಗ್ರಾ.ಪಂ. ಅನುದಾನದಲ್ಲಿ ► ಮರ್ದಾಳ ರಸ್ತೆ ದುರಸ್ತಿಗೆ ಚಾಲನೆ

(ನ್ಯೂಸ್ ಕಡಬ) newskadaba.com ಕಡಬ, ಅ.17. 2017-18ನೇ ಸಾಲಿನ ತಾ.ಪಂ. ಸದಸ್ಯರ ರೂ 75.000 ಹಾಗೂ ಗ್ರಾ.ಪಂ. ರೂ 31.000 ಅನುದಾನದಲ್ಲಿ ಮರ್ದಾಳ ಗ್ರಾಮದ ನೀರಾಜೆ- ಮುಂಡ್ರಾಡಿ ರಸ್ತೆ ದುರಸ್ತಿಗೊಳಿಸಲು ಸೋಮವಾರ ಚಾಲನೆ ನೀಡಲಾಯಿತು. ತಾ.ಪಂ.ಸದಸ್ಯೆ ಪಿ.ವೈ ಕುಸುಮ ತೆಂಗಿನಕಾಯಿ ಒಡೆಯುವ ಮೂಲಕ ದುರಸ್ತಿ ಕಾರ್ಯಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಗ್ರಾ,ಪಂ.ಅಧ್ಯಕ್ಷೆ ಲಲಿತಾ ರೈ ಮೈಕಾಜೆ, ಎ.ಪಿ.ಎಂ.ಸಿ. ನಿರ್ದೇಶಕ ಮೇದಪ್ಪ ಗೌಡ ಡೆಪ್ಪುಣಿ, ಗ್ರಾ.ಪಂ.ಸದಸ್ಯ ದಾಮೋದರ ಗೌಡ ಡೆಪ್ಪುಣಿ, ಗುತ್ತಿಗೆದಾರ ಅಭಿಲಾಷ್ ಬಿಳಿನೆಲೆ, ಬಿಜೆಪಿ ಗ್ರಾಮ ಸಮಿತಿ ಅಧ್ಯಕ್ಷ ಗಣೇಶ್

ತಾ.ಪಂ. ಹಾಗೂ ಗ್ರಾ.ಪಂ. ಅನುದಾನದಲ್ಲಿ ► ಮರ್ದಾಳ ರಸ್ತೆ ದುರಸ್ತಿಗೆ ಚಾಲನೆ Read More »

ಕರಾವಳಿ

ವಿದ್ಯುತ್ ಕಂಬ ಬಿದ್ದು ಮೃತಪಟ್ಟ ಯುವಕನ ಕುಟುಂಬಕ್ಕೆ ► ಮೆಸ್ಕಾಂ ಇಲಾಖೆಯಿಂದ ಪರಿಹಾರ ಚೆಕ್ ವಿತರಣೆ

(ನ್ಯೂಸ್ ಕಡಬ) newskadaba.com ಕಡಬ, ಅ.18. ಕೊಂಬಾರು ಗ್ರಾಮದ 16 ಸಿ.ಆರ್.ಸಿ ಕಾಲೋನಿಯ ವಾಸುದೇವರವರ ಪುತ್ರ ಮನೋಹರ (19ವ) ಕುಟುಂಬಕ್ಕೆ ಮೆಸ್ಕಾಂ ಇಲಾಖೆಯಿಂದ ರೂ.1 ಲಕ್ಷ ಪರಿಹಾರದ ಚೆಕ್ಕನ್ನು ಮಂಗಳವಾರ ಕಡಬ ಮೆಸ್ಕಾಂ ಕಚೇರಿಯಲ್ಲಿ ವಿತರಿಸಲಾಯಿತು. ಕಳೆದ ಫೆ.16ರಂದು ಕೊಂಬಾರಿನಿಂದ ಕಡಬಕ್ಕೆ ಬೈಕ್ನಲ್ಲಿ ಪ್ರಯಾಣಿಸುತ್ತಿರುವ ಸಂದರ್ಭದಲ್ಲಿ  ಮನೋಹರ ಅವರ ಮೇಲೆ ವಿದ್ಯುತ್ ಕಂಬ ಬಿದ್ದು ಮೃತಪಟ್ಟಿದ್ದರು. ಕಡಬ ಜಿ.ಪಂ.ಸದಸ್ಯ ಪಿ.ಪಿ ವರ್ಗೀಸ್ರವರು ಮೃತರ ತಂದೆ ವಾಸುದೇವ, ತಾಯಿ ಧನಮ್ಮ ರವರಿಗೆ ಚೆಕ್ಕನ್ನು ಹಸ್ತಾಂತರಿಸಿ ಮಾತನಾಡಿ ಕಳೆದ ಫೆ.16 ರಂದು ಕೊಂಬಾರಿನಿಂದ

ವಿದ್ಯುತ್ ಕಂಬ ಬಿದ್ದು ಮೃತಪಟ್ಟ ಯುವಕನ ಕುಟುಂಬಕ್ಕೆ ► ಮೆಸ್ಕಾಂ ಇಲಾಖೆಯಿಂದ ಪರಿಹಾರ ಚೆಕ್ ವಿತರಣೆ Read More »

ಕರಾವಳಿ

ಉಪ್ಪಿನಂಗಡಿ: ಬೈಕ್ – ಬಸ್ ಢಿಕ್ಕಿ ► ದಂಪತಿ ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಅ.17. ಬೈಕ್ ಹಾಗೂ ಬಸ್ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಗಂಡ-ಹೆಂಡತಿ ಸ್ಥಳದಲ್ಲೇ ಮೃತಪಟ್ಟ ಘಟನೆ ಮಂಗಳವಾರ ರಾತ್ರಿ ಉಪ್ಪಿನಂಗಡಿ ನೇತ್ರಾವತಿ ಸೇತುವೆಯ ಮೇಲೆ ನಡೆದಿದೆ. ಮೃತಪಟ್ಟ ದಂಪತಿಯನ್ನು ಪುತ್ತೂರು ತಾಲೂಕಿನ ಒಳಮೊಗ್ರು ಗ್ರಾಮದ ಕೊಯಿಲತಡ್ಡ ನಿವಾಸಿ ಶೀನಪ್ಪ ಆಚಾರ್ಯ ಹಾಗೂ ಅವರ ಪತ್ನಿ ವಿಶಾಲಾಕ್ಷಿ ಎಂದು ಗುರುತಿಸಲಾಗಿದೆ. ಇವರು ಉಪ್ಪಿನಂಗಡಿಯಿಂದ ಗುರುವಾಯನಕೆರೆ ಕಡೆಗೆ ತೆರಳುತಿದ್ದಾಗ ಉಪ್ಪಿನಂಗಡಿಯಿಂದ ಬೆಳ್ತಂಗಡಿಗೆ ತೆರಳುತ್ತಿದ್ದ ವರುಣ್ ಟ್ರಾವೆಲ್ಸ್ ಎಂಬ ಖಾಸಗಿ ಬಸ್ ನಡುವೆ ಢಿಕ್ಕಿ ಸಂಭವಿಸಿದ್ದು, ಢಿಕ್ಕಿಯ

ಉಪ್ಪಿನಂಗಡಿ: ಬೈಕ್ – ಬಸ್ ಢಿಕ್ಕಿ ► ದಂಪತಿ ಸ್ಥಳದಲ್ಲೇ ಮೃತ್ಯು Read More »

ಕರಾವಳಿ

ಗೋಳಿತ್ತಡಿಯಿಂದ ತ್ರಿವೇಣಿ ಸರ್ಕಲ್ ಮರು ಡಾಮರೀಕರಣ ► ನಬಾರ್ಡ್‌ನಿಂದ 49 ಲಕ್ಷ ರೂ.ಬಿಡುಗಡೆ

(ನ್ಯೂಸ್ ಕಡಬ) newskadaba.com ಕಡಬ, ಅ.17. ಸಾರ್ವಜನಿಕರ ಹಲವು ವರ್ಷಗಳ ಬೇಡಿಕೆ ಮೇರೆಗೆ ಕೊೖಲ ಗ್ರಾಮದ ಏಣಿತ್ತಡ್ಕ ಜಿ.ಪಂ.ರಸ್ತೆಯಲ್ಲಿ ಗೋಳಿತ್ತಡಿಯಿಂದ ತ್ರಿವೇಣಿ ಸರ್ಕಲ್ ತನಕ ಮರು ಡಾಮರೀಕರಣಕ್ಕೆ ರಾಮಕುಂಜ ಗ್ರಾ.ಪಂ.ಸದಸ್ಯರಾದ ಯತೀಶ್ ಬಾನಡ್ಕರವರ ಮುತುವರ್ಜಿಯಿಂದಾಗಿ ನಬಾರ್ಡ್‌ನಿಂದ 49 ಲಕ್ಷ ರೂ.ಬಿಡುಗಡೆಗೊಳಿಸುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ಜಿ.ಪಂ.ಸದಸ್ಯ ಸರ್ವೋತ್ತಮ ಗೌಡ ತಿಳಿಸಿದ್ದಾರೆ. ರಾಜೀವಗಾಂಧಿ ವಿವಿ ನಿರ್ದೇಶಕ ಡಾ.ರಘು, ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈಯವರ ಶಿಫಾರಸ್ಸಿನ ಮೇರೆಗೆ ಗ್ರಾಮೀಣಾಭಿವೃದ್ಧಿ ಸಚಿವ ಹೆಚ್.ಕೆ.ಪಾಟೀಲ್‌ರವರ ಸೂಚನೆ ಮೇರೆಗೆ ನಬಾರ್ಡ್‌ನಿಂದ 49 ಲಕ್ಷ ರೂ.ಬಿಡುಗಡೆಗೊಂಡಿದೆ. ಈ ಅನುದಾನ ಬಿಡುಗಡೆಗೊಳಿಸುವಲ್ಲಿ ರಾಮಕುಂಜ

ಗೋಳಿತ್ತಡಿಯಿಂದ ತ್ರಿವೇಣಿ ಸರ್ಕಲ್ ಮರು ಡಾಮರೀಕರಣ ► ನಬಾರ್ಡ್‌ನಿಂದ 49 ಲಕ್ಷ ರೂ.ಬಿಡುಗಡೆ Read More »

ಕರಾವಳಿ

ಮರ್ದಾಳ: ಶ್ರೀ ವಿವೇಕಾನಂದ ಯುವಕ ಮಂಡಲ ಸಮಿತಿ ರಚನೆ ► ಅಧ್ಯಕ್ಷರಾಗಿ ಪ್ರಮೋದ್ ರೈ ಕುಡಾಲ ಆಯ್ಕೆ

(ನ್ಯೂಸ್ ಕಡಬ) newskadaba.com ಕಡಬ, ಅ.17. ಮರ್ದಾಳ ಶ್ರೀ ವಿವೇಕಾನಂದ ಯುವಕ ಮಂಡಲದ ವಾರ್ಷಿಕ ಸಭೆಯು ಶ್ರೀಅಯ್ಯಪ್ಪ ಭಜನಾ ಮಂದಿರದಲ್ಲಿ ನಡೆಯಿತು. ವಾರ್ಷಿಕ ಸಭೆಯಲ್ಲಿ ನೂತನ ಸಮಿತಿಯನ್ನು ರಚಿಸಲಾಯಿತು. ಅಧ್ಯಕ್ಷರಾಗಿ ಪ್ರಮೋದ್ ರೈ ಕುಡಾಲ, ಕಾರ್ಯದರ್ಶಿಯಾಗಿ ವಿನಯ ಕೇನ್ಯ ಅವರನ್ನು ಅಯ್ಕೆ ಮಾಡಲಾಯಿತು. ಗೌರವಾಧ್ಯಕ್ಷರಾಗಿ ಉಮೇಶ್ ಬ್ರಹ್ಮಶ್ರೀ, ಕ್ರೀಡಾ ಕಾರ್ಯದರ್ಶಿಯಾಗಿ ತೀರ್ಥಪ್ರಸಾದ್ ಮೀನಾಡಿ, ಸಾಂಸ್ಕ್ರತಿಕ ಕಾರ್ಯದರ್ಶಿಯಾಗಿ ಸಂತೋಷ್ ರೈ ಪಾಲೆತ್ತಡ್ಕ, ಜತೆ ಕಾರ್ಯದರ್ಶಿಯಾಗಿ ಉದಯ ಕುಮಾರ್ ರೈ ಮರ್ದಾಳ ಆಯ್ಕೆಯಾಗಿದ್ದಾರೆ.

ಮರ್ದಾಳ: ಶ್ರೀ ವಿವೇಕಾನಂದ ಯುವಕ ಮಂಡಲ ಸಮಿತಿ ರಚನೆ ► ಅಧ್ಯಕ್ಷರಾಗಿ ಪ್ರಮೋದ್ ರೈ ಕುಡಾಲ ಆಯ್ಕೆ Read More »

ಕರಾವಳಿ

ವಿಟ್ಲ: ವಿದ್ಯುತ್ ಶಾಕ್‍ನಿಂದ ವ್ಯಕ್ತಿ ಮೃತ್ಯು

(ನ್ಯೂಸ್ ಕಡಬ) newskadaba.com ವಿಟ್ಲ, ಅ.17. ವಿದ್ಯುತ್ ಶಾಕ್ ಹೊಡೆದುರ ಪರಿಣಾಮ  ಮೆಡಿಕಲ್ ಶಾಪ್ ಮಾಲಕರೋರ್ವರು ಮೃತಪಟ್ಟ ಘಟನೆ ವಿಟ್ಲದ ಕೊಳ್ನಾಡು ಗ್ರಾಮದ ಕರೈ ಎಂಬಲ್ಲಿ ಮಂಗಳವಾರದಂದು ನಡೆದಿದೆ. ಮೃತರನ್ನು ವಿಟ್ಲ ಸಮೀಪದ ಕೊಳ್ನಾಡು ಗ್ರಾಮದ ಕರೈ ನಿವಾಸಿ ದೇವಪ್ಪ ಬಂಗೇರ ಎಂಬವರ ಪುತ್ರ ರಾಜಶೇಖರ ಎಂದು ಗುರುತಿಸಲಾಗಿದೆ. ಇವರು ತೊಕ್ಕೊಟ್ಟಿನಲ್ಲಿ ಧನ್ವಂತರಿ ಆಯುರ್ವೇದ ಔಷಧಾಲಯವನ್ನು ಹೊಂದಿದ್ದು, ಇಂದು  ತನ್ನ ನಿವಾಸದ ಸಮೀಪದಲ್ಲಿನ ತನ್ನದೇ ಕೋಳಿ ಫಾರಂ ಒಳಗೆ ಏನೋ ಕೆಲಸ ಮಾಡುತ್ತಿದ್ದ ವೇಳೆ ಕರೆಂಟ್ ಶಾಕ್ ಹೊಡೆದಿದೆ.

ವಿಟ್ಲ: ವಿದ್ಯುತ್ ಶಾಕ್‍ನಿಂದ ವ್ಯಕ್ತಿ ಮೃತ್ಯು Read More »

ಕರಾವಳಿ
Scroll to Top