ಕರಾವಳಿ

2018ರ ಜನವರಿಯಿಂದ ದಕ್ಷಿಣ ಕನ್ನಡದಲ್ಲೂ 10 ಇಂದಿರಾ ಕ್ಯಾಂಟೀನ್ ► ಎಲ್ಲೆಲ್ಲಿ ಕ್ಯಾಂಟೀನ್ ಆರಂಭವಾಗುತ್ತದೆ ಗೊತ್ತೇ..?

(ನ್ಯೂಸ್ ಕಡಬ) newskadaba.com ಮಂಗಳೂರು, ಅ.16. 2018 ರ ಜನವರಿ 1 ರಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 10 ಇಂದಿರಾ ಕ್ಯಾಂಟೀನ್ ಗಳನ್ನು ತೆಗೆಯಲಾಗುವುದು ಎಂದು ರಾಜ್ಯ ಆಹಾರ ಸಚಿವ ಯು.ಟಿ. ಖಾದರ್ ಹೇಳಿದ್ದಾರೆ. ಅವರು ಸೋಮವಾರದಂದು ನಗರದ ಸರ್ಕ್ಯೂಟ್ ಹೌಸ್ ನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ದ.ಕ.ಜಿಲ್ಲೆಯಲ್ಲಿ 10 ಹೊಸ ಕ್ಯಾಂಟೀನ್ ಗಳು ಆರಂಭವಾಗಲಿದ್ದು, ಅದರಲ್ಲಿ ಮಂಗಳೂರು ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ 5, ಉಳ್ಳಾಲ ನಗರಸಭಾ ವ್ಯಾಪ್ತಿಯಲ್ಲಿ 1, ಬಂಟ್ವಾಳ, ಪುತ್ತೂರು, ಸುಳ್ಯ ಹಾಗೂ ಬೆಳ್ತಂಗಡಿಯಲ್ಲಿ ತಲಾ […]

2018ರ ಜನವರಿಯಿಂದ ದಕ್ಷಿಣ ಕನ್ನಡದಲ್ಲೂ 10 ಇಂದಿರಾ ಕ್ಯಾಂಟೀನ್ ► ಎಲ್ಲೆಲ್ಲಿ ಕ್ಯಾಂಟೀನ್ ಆರಂಭವಾಗುತ್ತದೆ ಗೊತ್ತೇ..? Read More »

ಕರಾವಳಿ

ನಂಬಿ ಬರುತ್ತಿರುವ ದಲಿತರಿಗೆ ದ್ರೋಹ ಬಗೆಯುತ್ತಿರುವ ಕಾಂಗ್ರೆಸ್ – ದಲಿತ್ ಸೇವಾ ಸಮಿತಿ ತಾಲೂಕು ಅಧ್ಯಕ್ಷ ರಾಜು ಹೊಸ್ಮಠ

(ನ್ಯೂಸ್ ಕಡಬ) newskadaba.com ಕಡಬ, ಅ.16. ಜ್ಯಾತತೀತ ನಿಲುವಿನೊಂದಿಗೆ ದಲಿತರನ್ನು ಉದ್ಧಾರ ಮಾಡುತ್ತಾ ಬಂದಿರುವ ಕಾಂಗ್ರೆಸ್ ಈಗಿನ ಜಿಲ್ಲಾ ಉಸ್ತುವಾರಿ ಸಚಿವರಂತಹ ದಲಿತ ವಿರೋಧಿ ನಾಯಕರಿಂದ ದೀನ ದಲಿತರ ಕಡೆಗಣನೆ ನಡೆಯುತ್ತಿದ್ದು ಡಿ.ಸಿ.ಮನ್ನಾ ಭೂಮಿಯಲ್ಲಿ ಕೂಡ ಅನ್ಯಾಯ ಮಾಡುತ್ತಿರುವ ಕಾಂಗ್ರೆಸ್ ನಾಯಕರ ಬಗ್ಗೆ ದಲಿತರು ಎಚ್ಚರವಾಗಬೇಕಾಗಿದೆ ಎಂದು ದಲಿತ್ ಸೇವಾ ಸಮಿತಿ ತಾಲೂಕು ಅಧ್ಯಕ್ಷ ರಾಜು ಹೊಸ್ಮಠ ಹೇಳಿದರು. ಅವರು ಅಲಂಕಾರು ರೈತ ಭವನದಲ್ಲಿ ಅ.15 ರಂದು ನಡೆದ ದಲಿತ್ ಸೇವಾ ಸಮಿತಿ ಮಾಸಿಕ ಸಭೆಯಲ್ಲಿ ಡಾ. ಬಾಬಾಸಾಹೇಬ್

ನಂಬಿ ಬರುತ್ತಿರುವ ದಲಿತರಿಗೆ ದ್ರೋಹ ಬಗೆಯುತ್ತಿರುವ ಕಾಂಗ್ರೆಸ್ – ದಲಿತ್ ಸೇವಾ ಸಮಿತಿ ತಾಲೂಕು ಅಧ್ಯಕ್ಷ ರಾಜು ಹೊಸ್ಮಠ Read More »

ಕರಾವಳಿ

ನೆಲ್ಯಾಡಿ: ಬೈಕ್ – ಲಾರಿ ಢಿಕ್ಕಿ ► ಸವಾರ ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ) newskadaba.com ನೆಲ್ಯಾಡಿ, 15. ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ನೆಲ್ಯಾಡಿ ಸಮೀಪದ ಬೆದ್ರೋಡಿ ಎಂಬಲ್ಲಿ ಈಚರ್ ಹಾಗೂ ಬೈಕ್ ಮಧ್ಯೆ ಢಿಕ್ಕಿ ಸಂಭವಿಸಿದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಭಾನುವಾರದಂದು ನಡೆದಿದೆ. ಮೃತ ಸವಾರನನ್ನು ಕೊಕ್ಕಡ ನಿವಾಸಿ ಬಾಳಪ್ಪ ಗೌಡ ಎಂಬವರ ಪುತ್ರ ಪೂವಪ್ಪ ಗೌಡ(44) ಎಂದು ಗುರುತಿಸಲಾಗಿದೆ. ಇವರು ತನ್ನ ಬೈಕಿನಲ್ಲಿ ಉಪ್ಪಿನಂಗಡಿ ಕಡೆಗೆ ತೆರಳುತ್ತಿದ್ದಾಗ ವಿರುದ್ಧ ದಿಕ್ಕಿನಿಂದ ಬಂದ ಈಚರ್ ಲಾರಿಯು ಢಿಕ್ಕಿ ಹೊಡೆದಿದ್ದು, ರಸ್ತೆಗೆ ಎಸೆಯಲ್ಪಟ್ಟ

ನೆಲ್ಯಾಡಿ: ಬೈಕ್ – ಲಾರಿ ಢಿಕ್ಕಿ ► ಸವಾರ ಸ್ಥಳದಲ್ಲೇ ಮೃತ್ಯು Read More »

ಕರಾವಳಿ

ಲೈಸೆನ್ಸ್ ಇಲ್ಲದೆ ಮಕ್ಕಳು ವಾಹನ ಚಲಾಯಿಸಿದರೆ ಹೆತ್ತವರು ಹೊಣೆ ► ಜಿಲ್ಲಾ ಎಸ್ಪಿ ಸುಧೀರ್ ಕುಮಾರ್ ರೆಡ್ಡಿ

(ನ್ಯೂಸ್ ಕಡಬ) newskadaba.com ಮಂಗಳೂರು, ಅ.15. ಅಪ್ರಾಪ್ತ ವಯಸ್ಸಿನ ಶಾಲಾ ವಿದ್ಯಾರ್ಥಿಗಳು ಚಾಲನಾ ಪರವಾನಿಗೆ ಇಲ್ಲದೆ ವಾಹನ ಚಲಾಯಿಸುವಷ್ಟೇ ಅಪರಾಧ ಅವರಿಗೆ ವಾಹನ ಕೊಡುವ ಪೋಷಕರದ್ದಾಗಿರುತ್ತದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸುಧೀರ್ ಕುಮಾರ್ ರೆಡ್ಡಿ ಹೇಳಿದ್ದಾರೆ. ಅವರು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವತಿಯಿಂದ ಬಿ ಸಿ ರೋಡಿನ ರೋಟರಿ ಭವನದಲ್ಲಿ ಶನಿವಾರ ಸಂಜೆ ಕಾಲೇಜು ಮುಖ್ಯಸ್ಥರಿಗೆ ನಡೆದ ಸಭೆಯಲ್ಲಿ ಮಾತನಾಡಿ, ಕೆಲವು ಅಪ್ರಾಪ್ತ ಬಾಲಕರು ಎಲ್ಲೆಂದರಲ್ಲಿ ನಿಯಮಗಳನ್ನು ಉಲ್ಲಂಘಿಸಿ ವಾಹನ ಚಲಾಯಿಸಿ

ಲೈಸೆನ್ಸ್ ಇಲ್ಲದೆ ಮಕ್ಕಳು ವಾಹನ ಚಲಾಯಿಸಿದರೆ ಹೆತ್ತವರು ಹೊಣೆ ► ಜಿಲ್ಲಾ ಎಸ್ಪಿ ಸುಧೀರ್ ಕುಮಾರ್ ರೆಡ್ಡಿ Read More »

ಕರಾವಳಿ

ಕಳ್ಳರ ಪಾಲಾಗಿದ್ದ ಸಿಎಂ ಕಾರು ಉತ್ತರ ಪ್ರದೇಶದಲ್ಲಿ ಪತ್ತೆ ► ಆರೋಪಿಗಳ ಮುಖ ಚಹರೆ ಸಿಸಿಟಿವಿಯಲ್ಲಿ ಸೆರೆ..!!!

(ನ್ಯೂಸ್ ಕಡಬ) newskadaba.com ನವದೆಹಲಿ, ಅ.14. ಗುರುವಾರ ಕಳುವಾಗಿದ್ದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಕಾರು ಉತ್ತರಪ್ರದೇಶದ ಘಾಜಿಯಾಬಾದ್‌ನಲ್ಲಿ ಪತ್ತೆಯಾಗಿದೆ. ಅಕ್ಟೋಬರ್‌ 12 ರಂದು ಮಧ್ಯಾಹ್ನ 2 ಗಂಟೆ ಸುಮಾರಿಗೆ ರಾಜ್ಯ ಸರ್ಕಾರದ ಸಚಿವಾಲಯದ ಬಳಿ ನಿಲ್ಲಿಸಿದ್ದ ನೀಲಿ ಬಣ್ಣದ ವ್ಯಾಗನಾರ್ ಕಾರನ್ನು ಕಳ್ಳರು ಕದ್ದೊಯ್ದಿದ್ದರು. ಉತ್ತರಪ್ರದೇಶ ಪೊಲೀಸರು ಕಾರನ್ನು ಪತ್ತೆ ಮಾಡಿ ದೆಹಲಿ ಪೊಲೀಸರಿಗೆ ಮಾಹಿತಿ ನೀಡಿದರೆಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ. ಆದ್ರೆ ಕಳ್ಳತನಕ್ಕೆ ಸಂಬಂಧಿಸಿದಂತೆ ಯಾವುದೇ ಬಂಧನವಾಗಿಲ್ಲ. ಸಿಸಿಟಿವಿ ದೃಶ್ಯಗಳನ್ನ ಆಧರಿಸಿ ಕಳ್ಳನನ್ನು

ಕಳ್ಳರ ಪಾಲಾಗಿದ್ದ ಸಿಎಂ ಕಾರು ಉತ್ತರ ಪ್ರದೇಶದಲ್ಲಿ ಪತ್ತೆ ► ಆರೋಪಿಗಳ ಮುಖ ಚಹರೆ ಸಿಸಿಟಿವಿಯಲ್ಲಿ ಸೆರೆ..!!! Read More »

ಕರಾವಳಿ

ಮಾರ್ಚ್‌ನಿಂದ ರಾಜ್ಯಾದ್ಯಂತ ಕೆಎಸ್ಸಾರ್ಟಿಸಿ ಬಸ್‌ಗಳಲ್ಲಿ ಉಚಿತ ವೈಫೈ ಸೇವೆ ಲಭ್ಯ…!!!

(ನ್ಯೂಸ್ ಕಡಬ) newskadaba.com ದಾವಣಗೆರೆ, ಅ.14. ಕೆಎಸ್ಸಾರ್ಟಿಸಿ ಬಸ್ಸುಗಳಲ್ಲಿ ಪ್ರಾಯೋಗಿಕವಾಗಿ ನೀಡಲಾಗಿರುವ ಉಚಿತ ವೈಫೈ ಸೇವೆಯನ್ನು ಮಾರ್ಚ್‌ನಿಂದ ರಾಜ್ಯಾದ್ಯಂತ ವಿಸ್ತರಣೆ ಮಾಡಲಾಗುವುದು ಎಂದು ಸಾರಿಗೆ ಸಚಿವ ಎಚ್.ಎಂ. ರೇವಣ್ಣ ತಿಳಿಸಿದರು. ಈಗಾಗಲೇ ಕೆಲ ಕಡೆ ಪ್ರಾಯೋಗಿಕವಾಗಿ ವೈಫೈ ಸೇವೆಯನ್ನು ಕೆಎಸ್ಸಾರ್ಟಿಸಿ ಬಸ್ಸುಗಳಲ್ಲಿ ಒದಗಿಸಿದ್ದು, ಪ್ರಯಾಣಿಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾದ ಹಿನ್ನೆಲೆ ಯಲ್ಲಿ ರಾಜ್ಯಾದ್ಯಂತ ವಿಸ್ತರಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಸಾರಿಗೆ ಸಚಿವ ಎಚ್.ಎಂ. ರೇವಣ್ಣ, ಕೆಪಿಐಟಿ ಕಂಪನಿಗೆ ವೈಫೈ ಸೇವೆ ಕಲ್ಪಿಸಲು ಟೆಂಡರ್ ನೀಡಿದ್ದು, 200 ಬಸ್‌ಗಳಲ್ಲಿ

ಮಾರ್ಚ್‌ನಿಂದ ರಾಜ್ಯಾದ್ಯಂತ ಕೆಎಸ್ಸಾರ್ಟಿಸಿ ಬಸ್‌ಗಳಲ್ಲಿ ಉಚಿತ ವೈಫೈ ಸೇವೆ ಲಭ್ಯ…!!! Read More »

ಕರಾವಳಿ

ಫರಂಗಿಪೇಟೆ: ಝಿಯಾ, ಫಯಾಝ್ ಕೊಲೆ ಪ್ರಕರಣ ► ಏಳು ಮಂದಿ ಆರೋಪಿಗಳ ಬಂಧನ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಅ.13. ಇತ್ತೀಚೆಗೆ ಫರಂಗಿಪೇಟೆಯ ಪೊಲೀಸ್ ಹೊರ ಠಾಣೆಯ ಎದುರಿನ ರಿಕ್ಷಾ ನಿಲ್ದಾಣದ ಬಳಿ ನಡೆದಿದ್ದ ಕೊಲೆ ಪ್ರಕರಣವನ್ನು ಭೇದಿಸಿರುವ ಪೊಲೀಸರು 7 ಜನ ಆರೋಪಿಗಳನ್ನು ಬಂಧಿಸಿದ ಘಟನೆ ಶುಕ್ರವಾರದಂದು ನಡೆದಿದೆ. ಅಡ್ಯಾರ್-ಕಣ್ಣೂರು ನಿವಾಸಿ ಫಯಾಝ್ ಹಾಗೂ ಝಿಯಾ ಎಂಬವರನ್ನು ರಾತ್ರಿ ವೇಳೆ ಕಡಿದು ಕೊಲೆ ಮಾಡಲಾಗಿತ್ತು. ಘಟನೆಯಲ್ಲಿ ಅಡ್ಯಾರ್ ನಿವಾಸಿ ಹನೀಸ್, ಮುಸ್ತಫಾ ಹಾಗೂ ನಜ್ಮಾನ್ ಎಂಬವರು ಗಂಭೀರ ಗಾಯಗೊಂಡಿದ್ದರು. ಪ್ರಕರಣದ ಬಗ್ಗೆ ವಿವಿಧ ತಂಡಗಳನ್ನು ರಚಿಸಿ ತೀವ್ರ ತನಿಖೆ ನಡೆಸಿದ

ಫರಂಗಿಪೇಟೆ: ಝಿಯಾ, ಫಯಾಝ್ ಕೊಲೆ ಪ್ರಕರಣ ► ಏಳು ಮಂದಿ ಆರೋಪಿಗಳ ಬಂಧನ Read More »

ಕರಾವಳಿ

ಸಂಪ್ಯ: ನಾಲ್ವರು ಖತರ್ನಾಕ್ ಕಳ್ಳರ ಬಂಧನ ► ಆರ್ಲಪದವು ಕಾಳುಮೆಣಸು ಕಳವು ಪ್ರಕರಣ ಬೇಧಿಸಿದ ಪೊಲೀಸರು

(ನ್ಯೂಸ್ ಕಡಬ) newskadaba.com ಪುತ್ತೂರು, ಅ.13. ಇಲ್ಲಿನ ಗ್ರಾಮಾಂತರ ಠಾಣಾ ವ್ಯಾಪ್ತಿಯ ಆರ್ಲಪದವು ಎಂಬಲ್ಲಿನ ಮಳಿಗೆಯೊಂದರಲ್ಲಿ ಸೆಪ್ಟೆಂಬರ್ 24 ರಂದು ನಡೆದಿದ್ದ ಲಕ್ಷಾಂತರ ಮೌಲ್ಯದ ಕಾಳುಮೆಣಸು ಕಳವು ಪ್ರಕರಣವನ್ನು ಭೇದಿಸಿರುವ ಸಂಪ್ಯ ಠಾಣಾ ಪೊಲೀಸರು ಎರಡು ಕಾರು, ನಾಲ್ವರು ಆರೋಪಿಗಳೊಂದಿಗೆ 741 ಕೆಜಿ ಕಾಳುಮೆಣಸನ್ನು ವಶಪಡಿಸಿಕೊಂಡಿದ್ದಾರೆ. ಬೊಲೆರೋ ವಾಹನದಲ್ಲಿ ಏನೋ ಸಾಗಿಸಲಾಗುತ್ತಿದೆ ಎನ್ನುವ ಖಚಿತ ಮಾಹಿತಿ ಮೇರೆಗೆ ದಾಳಿ‌ ದಾಳಿ ನಡೆಸಿರುವ ಪೊಲೀಸರು ಆರೋಪಿಗಳನ್ನು ಬಂಧಿಸಿ ವಿಚಾರಿಸಿದಾಗ ಆರ್ಲಪದವು ಕಳವು ಪ್ರಕರಣ ಬೆಳಕಿಗೆ ಬಂದಿದೆ. ಈ ಸಂಬಂಧ

ಸಂಪ್ಯ: ನಾಲ್ವರು ಖತರ್ನಾಕ್ ಕಳ್ಳರ ಬಂಧನ ► ಆರ್ಲಪದವು ಕಾಳುಮೆಣಸು ಕಳವು ಪ್ರಕರಣ ಬೇಧಿಸಿದ ಪೊಲೀಸರು Read More »

ಕರಾವಳಿ

ಮಂಗಳೂರು: ಹೋಟೆಲ್ ಶೌಚಾಲಯ ಬಳಕೆಕೆ ಆಕ್ಷೇಪಣೆ ► ತಂಡದಿಂದ ಮಾರಣಾಂತಿಕ ಹಲ್ಲೆ

 (ನ್ಯೂಸ್ ಕಡಬ) newskadaba.com ಮಂಗಳೂರು, ಅ.13. ಹೋಟೆಲ್ ನ ಶೌಚಾಲಯವನ್ನು ಉಪಯೋಗಿಸಲು ಆಕ್ಷೇಪಿಸಿದ ಹೋಟೆಲ್ ಮ್ಯಾನೇಜರ್ ಗೆ ತಂಡವೊಂದು ಮಾರಣಾಂತಿಕವಾಗಿ ಹಲ್ಲೆ ಮಾಡಿದ ಘಟನೆ ಮಂಗಳೂರಿನಲ್ಲಿ ನಡೆದಿದೆ. ಸರ್ಕಾರಿ ಬಸ್ ನಿಲ್ದಾಣದ ಮುಂದಿರುವ ಪಂಚಮಿ ಹೋಟೆಲ್ ಶೌಚಾಲಯವನ್ನು ಸಮೀಪದ ಮೊಬೈಲ್ ಸರ್ವಿಸ್ ಅಂಗಡಿಯ ಸಿಬ್ಬಂದಿಗಳು ಬಳಸುತ್ತಿದ್ದುದನ್ನು ಆಕ್ಷೇಪಿಸಿದ ಹೋಟೆಲ್ ಮ್ಯಾನೇಜರ್ ಪ್ರಸನ್ನ ಎಂಬುವರ ಮೇಲೆ ಆರು ಮಂದಿ ಯುವಕರ ತಂಡವೊಂದು ದಾಳಿ ನಡೆಸಿದೆ. ತಡೆಯಲು ತೆರಳಿದ ಸೆಕ್ಯೂರಿಟಿ ಸಿಬ್ಬಂದಿಗೆ ಮೇಲೂ ತಂಡ ಹಲ್ಲೆ ನಡೆಸಿದೆ. ಈ ಸಂದರ್ಭದಲ್ಲಿ ಹೋಟೆಲ್

ಮಂಗಳೂರು: ಹೋಟೆಲ್ ಶೌಚಾಲಯ ಬಳಕೆಕೆ ಆಕ್ಷೇಪಣೆ ► ತಂಡದಿಂದ ಮಾರಣಾಂತಿಕ ಹಲ್ಲೆ Read More »

ಕರಾವಳಿ

► ಕಡಬ: ಚಾಲಕನ ನಿಯಂತ್ರಣ ತಪ್ಪಿದ ಕಾರು ಚರಂಡಿಗೆ

(ನ್ಯೂಸ್ ಕಡಬ) newskadaba.com ಕಡಬ, ಅ.13. ಉಪ್ಪಿನಂಗಡಿ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಕಳಾರ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಹ್ಯುಂಡೈ ಐ20 ಕಾರೊಂದು ಚರಂಡಿಗಿಳಿದ ಘಟನೆ ಗುರುವಾರ ತಡರಾತ್ರಿ ನಡೆದಿದೆ. ಉಪ್ಪಿನಂಗಡಿಯಿಂದ ಕಡಬ ಕಡೆಗೆ ತೆರಳುತ್ತಿದ್ದ ಕಾರು ತಿರುವಿನಲ್ಲಿ ಚಾಲಕನ ನಿಯಂತ್ರಣ ಕಳೆದುಕೊಂಡಿದೆ. ಘಟನೆಯಿಂದ ಕಾರಿನಲ್ಲಿದ್ದ ಪ್ರಯಾಣಿಕರು ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದು, ಕಾರು ಜಖಂಗೊಂಡಿದೆ‌.

► ಕಡಬ: ಚಾಲಕನ ನಿಯಂತ್ರಣ ತಪ್ಪಿದ ಕಾರು ಚರಂಡಿಗೆ Read More »

ಕರಾವಳಿ
Scroll to Top