ಕರಾವಳಿ

ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಸದಸ್ಯರಿಂದ ► ಆಲಂಕಾರಿನಲ್ಲಿ ಶ್ರಮದಾನ..!!!

(ನ್ಯೂಸ್ ಕಡಬ) newskadaba.com ಕಡಬ,ಅ.4. ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಆಲಂಕಾರು ಒಕ್ಕೂಟ ಮತ್ತು ಶರವೂರು ಒಕ್ಕೂಟಗಳ ಸಂಯುಕ್ತ ಆಶ್ರಯದಲ್ಲಿ ಆಲಂಕಾರು ಶ್ರೀದುರ್ಗಾಂಬ ಪದವಿ ಪೂರ್ವ ಕಾಲೇಜಿನ ವಠಾರ ಮತ್ತು ನೆಡುತೋಪು ಹಾಗು ಕ್ರೀಡಾಂಗಣದ ಕಳೆಕೀಳುವ ಮೂಲಕ ಒಂದು ದಿನದ ಶ್ರಮದಾನವನ್ನು ನಡೆಸಲಾಯಿತು. ಈ ಸಂದರ್ಭದಲ್ಲಿ ಶಾಲಾ ಆಡಳಿತ ಮಂಡಳಿ ಅಧ್ಯಕ್ಷ ಯಂ.ದಯಾನಂದ ರೈ, ಪ್ರಾಂಶುಪಾಲ ನವೀನ್ ರೈ, ಮುಖ್ಯಗುರು ಸತ್ಯನಾರಾಯಣ ಭಟ್.ಯು, ಶಿಕ್ಷಕ ಶ್ರೀಪತಿ ರಾವ್, ಶಾಲಾ ಆಡಳಿತ ಮಂಡಳಿಯ ಸದಸ್ಯರಾದ ರಾಮರಾಜ ಸಿಂಧುಗುರಿ, ದಯಾನಂದ ಗೌಡ ಆಲಡ್ಕ, […]

ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಸದಸ್ಯರಿಂದ ► ಆಲಂಕಾರಿನಲ್ಲಿ ಶ್ರಮದಾನ..!!! Read More »

ಕರಾವಳಿ

ನೂಜಿ ಶ್ರೀ ಉಳ್ಳಾಲ್ತಿ ಅಮ್ಮನವರ ದೈವಸ್ಥಾನ ► ನವರಾತ್ರಿ ಉತ್ಸವ, ಹೊಸಅಕ್ಕಿ ನೈವೇದ್ಯ

(ನ್ಯೂಸ್ ಕಡಬ) newskadaba.com ಕಡಬ,ಅ.4. ರೆಂಜಿಲಾಡಿ ಗ್ರಾಮದ ನೂಜಿಬೈಲ್ ನೂಜಿ ಶ್ರೀ ಉಳ್ಳಾಲ್ತಿ ಅಮ್ಮನವರ ಸನ್ನಿಧಿಯಲ್ಲಿ ನವರಾತ್ರಿ ಉತ್ಸವ ಅಂಗವಾಗಿ, ಆಯುಧಪೂಜೆ, ಅಕ್ಷರಾಭ್ಯಾಸ ಹಾಗೂ ಹೊಸಅಕ್ಕಿ ನೈವೇದ್ಯ ಕಾರ್ಯಕ್ರಮವು ವಿಜೃಂಭಣೆಯಿಂದ ನಡೆಯಿತು. ಧಾರ್ಮಿಕ ವಿಧಿವಿಧಾನಗಳನ್ನು ಕ್ಷೇತ್ರದ ಪ್ರಧಾನ ಅರ್ಚಕರಾದ ಶಶಿ ಗಿರಿವನ ನಾಲೂರು ನೆರವೇರಿಸಿದರು. ಅರ್ಚಕ ಕೃಷ್ಣ ಹೆಬ್ಬಾರ್ ಸಹಕರಿಸಿದರು. ನವರಾತ್ರಿ ಸಂದರ್ಭದಲ್ಲಿ ದೇವಳದಲ್ಲಿ ಆಯುಧಪೂಜೆ,  ಅಕ್ಷರಾಭ್ಯಾಸ ಹಾಗೂ ಹೊಸಅಕ್ಕಿ ನೈವೇದ್ಯ ಕಾರ್ಯಕ್ರಮವು ಜರುಗಿತು. ದೇವಳದ ಆಡಳಿತ ಸಮಿತಿ ಅಧ್ಯಕ್ಷ ರಾಮಚಂದ್ರ ಗೌಡ ಎಳುವಾಲೆ, ಕಾರ್ಯದರ್ಶಿ ಬಾಲಕೃಷ್ಣ ಗೌಡ

ನೂಜಿ ಶ್ರೀ ಉಳ್ಳಾಲ್ತಿ ಅಮ್ಮನವರ ದೈವಸ್ಥಾನ ► ನವರಾತ್ರಿ ಉತ್ಸವ, ಹೊಸಅಕ್ಕಿ ನೈವೇದ್ಯ Read More »

ಕರಾವಳಿ

ಅಡೆಂಜ ಶ್ರೀ ಮಹಾಗಣಪತಿ ಪಂಚಲಿಂಗೇಶ್ವರ ದೇವಸ್ಥಾನ ► ನವರಾತ್ರಿ ವಿಶೇಷ ಪೂಜೆ

(ನ್ಯೂಸ್ ಕಡಬ) newskadaba.com ಕಡಬ,ಅ.4. ನೂಜಿಬಾಳ್ತಿಲ ಗ್ರಾಮದ ಅಡೆಂಜ ಶ್ರೀಮಹಾಗಣಪತಿ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ನವರಾತ್ರಿ ವಿಶೇಷ ಪೂಜೆ, ಆಯುಧ ಪೂಜೆಯು ವಿಜೃಂಭಣೆಯಿಂದ ನಡೆಯಿತು. ನವರಾತ್ರಿ ಅಂಗವಾಗಿ ಪ್ರತಿದಿನ ರಾತ್ರಿ ದೇವರ ಸನ್ನಿಧಿಯಲ್ಲಿ ಭಜನಾ ಕಾರ್ಯಕ್ರಮ, ಶ್ರೀದುರ್ಗಾಪೂಜೆ, ಶ್ರೀದೇವಿಗೆ ಪಂಚಾಮೃತ ಅಭಿಷೇಕ, ಮತ್ತು ಅಲಂಕಾರ,ಅರ್ಚನೆ ಹೂವಿನ ಪೂಜೆ ವಿಶೇಷ ಸೇವೆಗಳು ನಡೆದು ದೇವರಿಗೆ ನೈವೇದ್ಯ ಸಮರ್ಪಣೆ, ಮಹಾಮಂಗಳಾರತಿ, ತೀರ್ಥಪ್ರಸಾದ ವಿತರಣೆ ನಡೆದವು. ವಿಶೇಷವಾಗಿ ಮಕ್ಕಳಿಗೆ ಅಕ್ಷರಾಭ್ಯಾಸ ನಡೆಸಲಾಯಿತು. ಆಯುಧ ಪೂಜೆ ನಡೆಯಿತು. ದೇವಸ್ಥಾನದ ಪ್ರಧಾನ ಅರ್ಚಕರಾದ ನಾರಾಯಣ ಅಭ್ಯಾಂಕರ್

ಅಡೆಂಜ ಶ್ರೀ ಮಹಾಗಣಪತಿ ಪಂಚಲಿಂಗೇಶ್ವರ ದೇವಸ್ಥಾನ ► ನವರಾತ್ರಿ ವಿಶೇಷ ಪೂಜೆ Read More »

ಕರಾವಳಿ

ಗಂಡಿಬಾಗಿಲು: ಎಸ್.ಕೆ.ಎಸ್.ಬಿ.ವಿ.ನೂತನ ಅಧ್ಯಕ್ಷರಾಗಿ ► ಮಹಮ್ಮದ್ ಫಝಲ್ ಆಯ್ಕೆ

(ನ್ಯೂಸ್ ಕಡಬ) newskadaba.com ಕಡಬ,ಅ.4, ಗಂಡಿಬಾಗಿಲು ಹಿಮಾಯತುಲ್ ಇಸ್ಲಾಂ ಮದ್ರಸದ ವಿದ್ಯಾರ್ಥಿ ಸಂಘಟನೆ ಸಮಸ್ತ ಕೇರಳ ಸುನ್ನಿ ಬಾಲವೇದಿ (ಎಸ್.ಕೆ.ಎಸ್.ಬಿ.ವಿ.) ಇದರ 2017-18ನೇ ಸಾಲಿನ ನೂತನ ಅಧ್ಯಕ್ಷರಾಗಿ ಮಹಮ್ಮದ್ ಫಝಲ್, ಕಾರ್ಯದರ್ಶಿಯಾಗಿ ಅನ್ವರ್ ಹುಸೈನ್, ಆಯ್ಕೆಯಾಗಿದ್ದಾರೆ. ಗಂಡಿಬಾಗಿಲು ಕುತುಬಿಯಾ ಜುಮಾ ಮಸೀದಿ ಖತೀಬ್ ಅನಸ್ ತಂಙಳ್ ಅಧ್ಯಕ್ಷತೆಯಲ್ಲಿ ಸದರ್ ಮುಅಲ್ಲಿಂ ಅಬ್ದುಲ್ ರಹಿಮಾನ್ ಅರ್ಶದಿ, ಮುಅಲ್ಲಿಂ ರಫೀಕ್ ಮುಸ್ಲಿಯಾರ್ ಉಪಸ್ಥಿತಿಯಲ್ಲಿ ನಡೆದ ಮಹಾಸಭೆಯಲ್ಲಿ ಈ ಆಯ್ಕೆ ಮಾಡಲಾಯಿತು. ಕೋಶಾಧಿಕಾರಿಯಾಗಿ ರಾಶಿದ್ . ಉಪಾಧ್ಯಕ್ಷರಾಗಿ ಅಹ್ಮದ್ ಅಫ್ಸಲ್, ಮಹಮ್ಮದ್ ಮುಸ್ತಫ

ಗಂಡಿಬಾಗಿಲು: ಎಸ್.ಕೆ.ಎಸ್.ಬಿ.ವಿ.ನೂತನ ಅಧ್ಯಕ್ಷರಾಗಿ ► ಮಹಮ್ಮದ್ ಫಝಲ್ ಆಯ್ಕೆ Read More »

ಕರಾವಳಿ

ಕಡಬ ಸ.ಪ.ಪೂ.ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ವತಿಯಿಂದ ► ನೂಜಿಬಾಳ್ತಿಲ ಬೆಥನಿ ಕಾಲೇಜಿನಲ್ಲಿ ವಾರ್ಷಿಕ ವಿಶೇಷ ಶಿಬಿರ

(ನ್ಯೂಸ್ ಕಡಬ) newskadaba.com ಕಡಬ,ಅ.4. ದೇವರು ನಮ್ಮನ್ನು ಮನುಷ್ಯರನ್ನಾಗಿ ಈ ಲೋಕದಲ್ಲಿ ಸೃಷ್ಟಿಸಿದ್ದು ನಾವು ಉತ್ತಮ ಶಿಕ್ಷಣ ಪಡೆಯುವುದರೊಂದಿಗೆ ಸಾಮಾಜಿಕ ವಿಚಾರಧಾರೆಗಳನ್ನು ಅರಿತುಕೊಂಡು ಸಮಾಜದಲ್ಲಿ ಪ್ರೀತಿ, ವಿಶ್ವಾಸದಿಂದ ಶಾಂತಿ ಸೌಹಾರ್ದತೆಯಿಂದ ಬದುಕಬೇಕು ಎಂದು ಪುತ್ತೂರು ಧರ್ಮಪ್ರಾಂತ್ಯ ನೂತನ ಧರ್ಮಾಧ್ಯಕ್ಷ ಡಾ. ಗೀವರ್ಗೀಸ್ ಮಾರ್ ಮಕಾರಿಯೋಸ್ ಹೇಳಿದರು. ನೂಜಿಬಾಳ್ತಿಲ ಬೆಥನಿ ಸಂ.ಪ.ಪೂ.ಕಾಲೇಜಿನಲ್ಲಿ ಕಡಬ ಸ.ಪ.ಪೂ.ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಒಂದು ವಾರಗಳ ನಡೆಯುವ ವಾರ್ಷಿಕ ವಿಶೇಷ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು. ಎಲ್ಲರ ಒಳಿತನ್ನು ಬಯಸಿ ಜೀವನ ಮಾಡುವುದೆ ನಿಜವಾದ ಧರ್ಮ.

ಕಡಬ ಸ.ಪ.ಪೂ.ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ವತಿಯಿಂದ ► ನೂಜಿಬಾಳ್ತಿಲ ಬೆಥನಿ ಕಾಲೇಜಿನಲ್ಲಿ ವಾರ್ಷಿಕ ವಿಶೇಷ ಶಿಬಿರ Read More »

ಕರಾವಳಿ

ರಾಮಕುಂಜೇಶ್ವರ ಪ್ರೌಢ ಶಾಲೆಯಲ್ಲಿ ಗಾಂಧಿಜಯಂತಿ ►ಅಹಿಂಸೆಯಿಂದ ಸಾಮಾಜಿಕ ಬದಲಾವಣೆ ಸಾಧ್ಯ – ಎಂ. ಸತೀಶ್ ಭಟ್ 

(ನ್ಯೂಸ್ ಕಡಬ) newskadaba.com ಕಡಬ,ಅ.4. ಸತ್ಯ ಧರ್ಮ ನ್ಯಾಯ ನೀತಿಯ ಪರಿಪಾಲನೆ ಮಾಡಿದ ಮಹಾತ್ಮ ಗಾಂಧೀಜಿಯ ಜೀವನ ಶೈಲಿಯನ್ನು ನಾವೆಲ್ಲ ಜೀವನದಲ್ಲಿ ಆಳವಡಿಸಿಕೊಳ್ಳಬೇಕು ಎಂದು ಶ್ರೀ ರಾಮಕುಂಜೇಶ್ವರ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಎಂ. ಸತೀಶ್ ಭಟ್  ತಿಳಿಸಿದರು. ಶ್ರೀ ರಾಮಕುಂಜೇಶ್ವರ ಕನ್ನಡ ಮಾಧ್ಯಮ ಪ್ರೌಢ ಶಾಲೆಯಲ್ಲಿ ಗಾಂಧಿ ಜಯಂತಿಯನ್ನು ಆಚರಿಸಲಾಯಿತು. ಗಾಂಧೀಜಿ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಬಳಿಕ ಮಾತನಾಡಿದ  ಪ್ರಾಂಶುಪಾಲ ಎಂ. ಸತೀಶ್ ಭಟ್  ಅವರು ಅಹಿಂಸೆಯಿಂದಲೇ ಸಾಮಾಜಿಕ ಬದಲಾವಣೆ ಸಾಧ್ಯ ಎಂದು ತೋರಿಸಿಕೊಟ್ಟ ಗಾಂಧೀಜಿ ನಮಗೆಲ್ಲ ಆದರ್ಶ ಎಂದರು.

ರಾಮಕುಂಜೇಶ್ವರ ಪ್ರೌಢ ಶಾಲೆಯಲ್ಲಿ ಗಾಂಧಿಜಯಂತಿ ►ಅಹಿಂಸೆಯಿಂದ ಸಾಮಾಜಿಕ ಬದಲಾವಣೆ ಸಾಧ್ಯ – ಎಂ. ಸತೀಶ್ ಭಟ್  Read More »

ಕರಾವಳಿ

► ಕಡಬ ಶ್ರೀ ದುರ್ಗಾಂಬಿಕಾ ಅಮ್ಮನವರ ದೇವಸ್ಥಾನದಲ್ಲಿ ನವರಾತ್ರಿ ಪೂಜೆ, ಹೊಸ್ತಾರೋಹಣ, ಆಯುಧ ಪೂಜೆ

(ನ್ಯೂಸ್ ಕಡಬ) newskadaba.com ಕಡಬ, ಅ.3. ಶ್ರೀ ದುರ್ಗಾಂಬಿಕಾ ಅಮ್ಮನವರ ದೇವಸ್ಥಾನದಲ್ಲಿ ನವರಾತ್ರಿ ಪೂಜೆ (ಹೊಸಅಕ್ಕಿ ನೈವೇದ್ಯ) ಕಾರ್ಯಕ್ರಮ ಆಯುಧ ಪೂಜೆ  ನಡೆಯಿತು. ದೇವಳದ ಪ್ರಧಾನ ಅರ್ಚಕ ಶ್ರೀಗೋಪಾಲಕೃಷ್ಣ ಕೆದಿಲಾಯ ಧಾರ್ಮಿಕ ವಿಧಿವಿಧಾನಗಳನ್ನು ನೇರವೇರಿಸಿದರು. ಸೆ 28ರಂದು ಮಧ್ಯಾಹ್ನ ಹೊಸಅಕ್ಕಿ ನೈವೇದ್ಯ, ಸಾರ್ವಜನಿಕ ಅನ್ನ ಸಂತರ್ಪಣೆ, ಸೆ 29ರಂದು ಬೆಳಗ್ಗೆ ಆಯುಧ ಪುಜೆಯು ನಡೆಯಿತು ಪ್ರತಿದಿನ ದೇವರಿಗೆ ನವರಾತ್ರಿ ವಿಶೇಷ ಪುಜೆ ಹಾಗೂ ಶ್ರೀದುರ್ಗಾಂಬಿಕಾ ಭಜನಾ ಮಂಡಳಿ ವತಿಯಿಂದ ಭಜನಾ ಸೇವೆ ನಡೆಯಿತು. ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ

► ಕಡಬ ಶ್ರೀ ದುರ್ಗಾಂಬಿಕಾ ಅಮ್ಮನವರ ದೇವಸ್ಥಾನದಲ್ಲಿ ನವರಾತ್ರಿ ಪೂಜೆ, ಹೊಸ್ತಾರೋಹಣ, ಆಯುಧ ಪೂಜೆ Read More »

ಕರಾವಳಿ

ಕಡಬ: ಮರದಿಂದ ಬಿದ್ದು ವ್ಯಕ್ತಿ ಮೃತ್ಯು

(ನ್ಯೂಸ್ ಕಡಬ) newskadaba.com ಕಡಬ, ಅ.03. ಇಲ್ಲಿಗೆ ಸಮೀಪದ ಕುಟ್ರುಪ್ಪಾಡಿ ಎಂಬಲ್ಲಿ ಮರದಿಂದ ಬಿದ್ದು ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಸೋಮವಾರದಂದು ನಡೆದಿದೆ. ಮೃತರನ್ನು ಕುಟ್ರುಪ್ಪಾಡಿ ಗ್ರಾಮದ ಮೀನಾಡಿ ಪುಂಡೋಯಿ ಕೊಚ್ಚಿ ನಿವಾಸಿ ದಿ| ಹೊನ್ನಪ್ಪ ಗೌಡ ಎಂಬವರ ಪುತ್ರ ಜತ್ತಪ್ಪ ಗೌಡ(55) ಎಂದು ಗುರುತಿಸಲಾಗಿದೆ. ಇವರು ತನ್ನ ತನ್ನ ಜಮೀನಿನಲ್ಲಿದ್ದ ಮರದಿಂದ ತೋಟಕ್ಕೆ ಹಾಕಲೆಂದು ಸೊಪ್ಪು ಕಡಿಯುತ್ತಿದ್ದ ವೇಳೆ ಆಯತಪ್ಪಿ ಜಾರಿ ಬಿದ್ದಿದ್ದು, ಆಸ್ಪತ್ರೆಗೆ ಸಾಗಿಸುವ ಹಾದಿ ಮಧ್ಯೆ ಮೃತಪಟ್ಟರೆನ್ನಲಾಗಿದೆ‌. ಈ ಬಗ್ಗೆ ಕಡಬ ಠಾಣೆಯಲ್ಲಿ ದೂರು

ಕಡಬ: ಮರದಿಂದ ಬಿದ್ದು ವ್ಯಕ್ತಿ ಮೃತ್ಯು Read More »

ಕರಾವಳಿ

ನಾಳೆ (ಅ.05 ರಂದು) ಆಲಂಕಾರಿನಲ್ಲಿ ► ಎಸ್ಸಿ ಮೋರ್ಚಾದ “ಸಮರ್ಥನಾ ಸಮಾವೇಶ”

(ನ್ಯೂಸ್ ಕಡಬ) newskadaba.com ಕಡಬ,ಅ.3.  ಸುಳ್ಯ ಮಂಡಲ ಎಸ್ಸಿ ಮೋರ್ಚಾದ ವತಿಯಿಂದ ಅ.05 ರಂದು(ಗುರುವಾರ) ಆಲಂಕಾರಿನಲ್ಲಿ ನಡೆಯಲಿರುವ ಸಮರ್ಥನಾ ಸಮಾವೇಶದ ಹಿನ್ನೆಲೆಯಲ್ಲಿ ಸಮಲೋಚನ ಸಭೆಯು ಕಡಬ ಬಿಜೆಪಿ ಶಕ್ತಿ ಕೇಂದ್ರದ ವತಿಯಿಂದ ಮರ್ದಾಳ ಅಂಬೇಡ್ಕರ್ ಭವನದಲ್ಲಿ ಭಾನುವಾರ ನಡೆಯಿತು. ಬಿಜೆಪಿ ಜಿಲ್ಲಾ ಸಮಿತಿಯ ಸದಸ್ಯ ಕೃಷ್ಣ ಶೆಟ್ಟಿ ಕಡಬ ಮಾತನಾಡಿ, ಪ್ರದಾನಿ ನರೇಂದ್ರ ಮೋದಿಯವರ ನೇತೃತ್ವದ ಕೇಂದ್ರ ಸರಕಾರದ ಯೋಜನೆಗಳ ಮಾಹಿತಿ ಹಾಗೂ ಈ ಹಿಂದೆ ರಾಜ್ಯವನ್ನಾಳಿದ ಬಿಜೆಪಿ ಸರಕಾರದ ಅವಧಿಯಲ್ಲಿನ ಜನಪರ ಯೋಜನೆಗಳನ್ನು ಜನರ ಮುಂದಿಡುವ ಮೂಲಕ

ನಾಳೆ (ಅ.05 ರಂದು) ಆಲಂಕಾರಿನಲ್ಲಿ ► ಎಸ್ಸಿ ಮೋರ್ಚಾದ “ಸಮರ್ಥನಾ ಸಮಾವೇಶ” Read More »

ಕರಾವಳಿ

ಬಲ್ಯ ಶ್ರೀ ಉಮಾಮಹೇಶ್ವರಿ ದೇವಸ್ಥಾನ ► ನವರಾತ್ರಿ ಉತ್ಸವ, ಅಕ್ಷರಭ್ಯಾಸ

(ನ್ಯೂಸ್ ಕಡಬ) newskadaba.com ಕಡಬ,ಅ.3. ಬಲ್ಯ ಗ್ರಾಮದ ಶ್ರೀ ಉಮಾಮಹೇಶ್ವರಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವದ ಪ್ರಯುಕ್ತ  ಪ್ರತಿ ದಿನ ವೈದಿಕ ಕಾರ್ಯಕ್ರಮ, ವಿವಿಧ ಭಜನಾ ಮಂಡಳಿಗಳಿಂದ ಭಜನಾ ಸೇವೆಗಳು ನಡೆಯಿತು. ವಿಶೇಷವಾಗಿ ಆಯುಧ ಪೂಜೆಯ ದಿನದಂದು ವಾಹನ ಪೂಜೆ ಹಾಗೂ ವಿಜಯದಶಮಿಯಂದು ನವನ್ನಾ ಭೋಜನ, ಅಕ್ಷರಾಭ್ಯಸ, ಅನ್ನಪ್ರಸಾನ ಮೊದಲಾದ ಕಾರ್ಯಕ್ರಮಗಳು ನಡೆಯಿತು. ಈ ಸಂದರ್ಭ ದೇವಳದ ಆಡಳಿತ ಸಮಿತಿ ಅಧ್ಯಕ್ಷ ಚಿತ್ತರಂಜನ್ ರೈ ಮಾಣಿಗ, ಕಾರ್ಯದರ್ಶಿ ನಾರಾಯಣ ಬಲ್ಯ, ಧಾರ್ಮಿಕ ಉತ್ಸವ ಸಮಿತಿ ಅಧ್ಯಕ್ಷ ಜಗನ್ನಾಥ ರೈ ಮೊದಲಾದವರು

ಬಲ್ಯ ಶ್ರೀ ಉಮಾಮಹೇಶ್ವರಿ ದೇವಸ್ಥಾನ ► ನವರಾತ್ರಿ ಉತ್ಸವ, ಅಕ್ಷರಭ್ಯಾಸ Read More »

ಕರಾವಳಿ
Scroll to Top