ಕರಾವಳಿ

‘ಮಂಗಳೂರು ಚಲೋ’ ಬೈಕ್ ರ್ಯಾಲಿ ತಡೆದ ಪೊಲೀಸರು ► ಸಂಸದ ಕಟೀಲ್ ಹಾಗೂ ಪೊಲೀಸರ ನಡುವೆ ವಾಗ್ವಾದ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ.07. ಬಿಜೆಪಿ ಯುವ ಮೋರ್ಛಾ ಹಮ್ಮಿಕೊಂಡಿರುವ ‘ಮಂಗಳೂರು ಚಲೋ’ ಬೈಕ್ ರ್ಯಾಲಿಯನ್ನು ಪೊಲೀಸರು ಮಂಗಳೂರಿನ ಜ್ಯೋತಿ ವೃತ್ದ ಬಳಿ ತಡೆದ ಹಿನ್ನೆಲೆಯಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್ ಹಾಗೂ ಪೊಲೀಸರ ನಡುವೆ ವಾಗ್ವಾದ ನಡೆಯಿತು. ಪೊಲೀಸರು ತಡೆದ ಕಾರಣ ಕೆರಳಿದ ಸಂಸದ ನಳಿನ್ ಕುಮಾರ್ ಕಟೀಲ್ ಪೊಲೀಸರೊಂದಿಗೆ ವಾಗ್ವಾದ ನಡೆಸಿದ್ದು, ಸ್ಥಳದಲ್ಲಿ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿದೆ. ಈಗಾಗಲೇ ಹೊರ ಜಿಲ್ಲೆಗಳಿಂದ ಬಿಜೆಪಿ ಕಾರ್ಯಕರ್ತರು ಮಂಗಳೂರಿಗೆ ಆಗಮಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಕಚೇರಿ […]

‘ಮಂಗಳೂರು ಚಲೋ’ ಬೈಕ್ ರ್ಯಾಲಿ ತಡೆದ ಪೊಲೀಸರು ► ಸಂಸದ ಕಟೀಲ್ ಹಾಗೂ ಪೊಲೀಸರ ನಡುವೆ ವಾಗ್ವಾದ Read More »

ಕರಾವಳಿ

ಕುಟ್ರುಪ್ಪಾಡಿ ಹಾ.ಉ.ಸ.ಸಂಘದ ವಾರ್ಷಿಕ ಸಾಮಾನ್ಯ ಸಭೆ: 2.80ಲಕ್ಷ ರೂ.ನಿವ್ವಳ ಲಾಭ ► ಪ್ರತಿ ಲೀ.75ಪೈಸೆ ಬೋನಸ್ ಘೋಷಣೆ

(ನ್ಯೂಸ್ ಕಡಬ) newskadaba.com ಕಡಬ,ಸೆ.7, ಕುಟ್ರುಪ್ಪಾಡಿ ಹಾ.ಉ.ಸ.ಸಂಘದ 2016-17ನೇ ಸಾಲಿನ ವಾರ್ಷಿಕ ಸಾಮಾನ್ಯ ಸಭೆಯು ಕುಟ್ರುಪ್ಪಾಡಿ ಹಿ.ಪ್ರಾ.ಶಾಲೆಯಲ್ಲಿ ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ವಹಿಸಿದ್ದ ಕುಟ್ರುಪ್ಪಾಡಿ ಹಾ.ಉ.ಸ.ಸಂಘದ ಅಧ್ಯಕ್ಷ ಕಿರಣ್ ಗೋಗಟೆಯವರು ಮಾತನಾಡಿ 2016-17ನೇ ಸಾಲಿನಲ್ಲಿ ಸಂಘವು 2.80 ಲಕ್ಷ ನಿವ್ವಳ ಲಾಭ ಗಳಿಸಿರುತ್ತದೆ. ಒಟ್ಟು 52,72,690ರೂ. ಹಾಲು ಖರೀದಿ ಮಾಡಿದ್ದು ಸ್ಥಳೀಯವಾಗಿ 2,02,649ರೂ. ಸ್ಥಳೀಯ ಹಾಲು ಮಾರಾಟ ಮಾಡಲಾಗಿದೆ. ಒಕ್ಕೂಟದಿಂದ ಹಾಲು ಮಾರಾಟದಿಂದ 57,86,623ರೂ. ಸಂಘಕ್ಕೆ ಬಂದಿರುತ್ತದೆ. ಜಿಲ್ಲಾ ಹಾಲು ಒಕ್ಕೂಟದಿಂದ ಸಿಗುವ ಸೌಲಭ್ಯಗಳ ಬಗ್ಗೆ ತಿಳಿಸಿ

ಕುಟ್ರುಪ್ಪಾಡಿ ಹಾ.ಉ.ಸ.ಸಂಘದ ವಾರ್ಷಿಕ ಸಾಮಾನ್ಯ ಸಭೆ: 2.80ಲಕ್ಷ ರೂ.ನಿವ್ವಳ ಲಾಭ ► ಪ್ರತಿ ಲೀ.75ಪೈಸೆ ಬೋನಸ್ ಘೋಷಣೆ Read More »

ಕರಾವಳಿ

ಗೌರಿ ಲಂಕೇಶ್ ಕೊಲೆ ಆರೋಪಿಗಳ ಶೀಘ್ರ ಪತ್ತೆಗೆ ಆಗ್ರಹ ► ಕಡಬ ತಾಲೂಕು ಪತ್ರಕರ್ತರ ಸಂಘದಿಂದ ಮನವಿ

(ನ್ಯೂಸ್ ಕಡಬ) newskadaba.com ಕಡಬ, ಸೆ.06. ಹಿರಿಯ ಪತ್ರಕರ್ತೆ, ವಿಚಾರವಾದಿ ಗೌರಿ ಲಂಕೇಶ್ ರವರನ್ನು ಭೀಕರವಾಗಿ ಕೊಲೆ ಮಾಡಿರುವಂತಹ ಆರೋಪಿಗಳನ್ನು ಶೀಘ್ರವಾಗಿ ಪತ್ತೆಹಚ್ಚಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಕಡಬ ತಾಲೂಕು ಪತ್ರಕರ್ತರ ಸಂಘದಿಂದ ಕಡಬ ತಹಶಿಲ್ದಾರರ ಮೂಲಕ ಗೃಹ ಸಚಿವರಿಗೆ ಮನವಿ ಸಲ್ಲಿಸಲಾಯಿತು.   ದಿಟ್ಟ ಪತ್ರಕರ್ತೆಯಾಗಿ ಗುರುತಿಸಿಕೊಂಡಿದ್ದ ಗೌರಿ ಲಂಕೇಶ್ ರವರನ್ನು ಗುಂಡು ಹಾರಿಸಿ ಭೀಕರವಾಗಿ ಕೊಲೆಗೈದ ಘಟನೆಯನ್ನು ಖಂಡಿಸಿ ಹಾಗೂ ರಾಜ್ಯದಲ್ಲಿ ಪತ್ರಕರ್ತರ ಮೇಲೆ ನಿರಂತರ ಹಲ್ಲೆಗಳಾಗುತ್ತಿರುವುದನ್ನು ತಡೆಯಲು ಸೂಕ್ತ ಕ್ರಮಗಳನ್ನು

ಗೌರಿ ಲಂಕೇಶ್ ಕೊಲೆ ಆರೋಪಿಗಳ ಶೀಘ್ರ ಪತ್ತೆಗೆ ಆಗ್ರಹ ► ಕಡಬ ತಾಲೂಕು ಪತ್ರಕರ್ತರ ಸಂಘದಿಂದ ಮನವಿ Read More »

ಕರಾವಳಿ

ಸೆಪ್ಟೆಂಬರ್ 07 ಗುರುವಾರದಂದು ► ಕಡಬ, ಸುಬ್ರಹ್ಮಣ್ಯ, ನೆಲ್ಯಾಡಿ, ಗುಂಡ್ಯ ಪರಿಸರದಲ್ಲಿ ವಿದ್ಯುತ್ ನಿಲುಗಡೆ

(ನ್ಯೂಸ್ ಕಡಬ) newskadaba.com ಕಡಬ, ಸೆ.06. ವಿದ್ಯುತ್ ಮಾರ್ಗದಲ್ಲಿ ತುರ್ತು ಕಾಮಗಾರಿ ನಡೆಯಲಿರುವುದರಿಂದ ಆಲಂಕಾರು, ಕಡಬ, ಸುಬ್ರಹ್ಮಣ್ಯ, ಗುಂಡ್ಯ, ನೆಲ್ಯಾಡಿ ಪರಿಸರದಲ್ಲಿ ಸೆಪ್ಟೆಂಬರ್ 07 ಗುರುವಾರದಂದು ಬೆಳಿಗ್ಗೆ 9.00 ಗಂಟೆಯಿಂದ ಸಂಜೆ 6.00 ಗಂಟೆಯವರೆಗೆ ವಿದ್ಯುತ್ ಸರಬರಾಜು ಇರುವುದಿಲ್ಲ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.

ಸೆಪ್ಟೆಂಬರ್ 07 ಗುರುವಾರದಂದು ► ಕಡಬ, ಸುಬ್ರಹ್ಮಣ್ಯ, ನೆಲ್ಯಾಡಿ, ಗುಂಡ್ಯ ಪರಿಸರದಲ್ಲಿ ವಿದ್ಯುತ್ ನಿಲುಗಡೆ Read More »

ಕರಾವಳಿ

ಮರ್ಧಾಳ: ನಾಡಿಗೆ ಬಂದ ಚಿರತೆ ಮರಳಿ ಕಾಡಿಗೆ ► ಅರಣ್ಯ ಅಧಿಕಾರಿಗಳಿಂದ ಯಶಸ್ವಿ ಕಾರ್ಯಾಚರಣೆ

(ನ್ಯೂಸ್ ಕಡಬ) newskadaba.com ಕಡಬ,‌ ಸೆ.06. ಕಾಡು ಬಿಟ್ಟು ನಾಡಿಗೆ ಬಂದು ಉರುಳಿಗೆ ಸಿಲುಕಿದ್ದ ಚಿರತೆಯನ್ನು ಯಶಸ್ವಿ ಕಾರ್ಯಾಚರಣೆಯ ಮೂಲಕ ವಾಪಾಸ್ ಕಾಡಿಗೆ ಬಿಡಲಾಯಿತು. ಪುತ್ತೂರು ತಾಲೂಕಿನ ಮರ್ಧಾಳದ ಬಂಟ್ರ ಗ್ರಾಮದ ಮುಂಡ್ರಾಡಿ ನಿವಾಸಿ ಶ್ರೀನಿವಾಸ್ ರೈ ಎಂಬವರ ಜಮೀನಿನಲ್ಲಿ ಯಾರೋ ಅಪರಿಚಿತರು ಇಟ್ಟಿದ್ದ ಉರುಳಿಗೆ ಚಿರತೆಯೊಂದು ಸಿಕ್ಕಿ ಹಾಕಿಕೊಂಡಿರುವುದು ಬುಧವಾರ ಬೆಳಗ್ಗೆ ಬೆಳಕಿಗೆ ಬಂದಿತ್ತು. ವಿಷಯ ತಿಳಿದ ಅರಣ್ಯ ಅಧಿಕಾರಿಗಳು ಮಂಗಳೂರಿನ ಪಿಲಿಕುಳ ನಿಸರ್ಗಧಾಮದ ಅರಿವಳಿಕೆ ತಜ್ಞರನ್ನು ಸ್ಥಳಕ್ಕೆ ಕರೆಸಿ ಮೂರು ಸುತ್ತಿನ ಚುಚ್ಚುಮದ್ದು ನೀಡಿ

ಮರ್ಧಾಳ: ನಾಡಿಗೆ ಬಂದ ಚಿರತೆ ಮರಳಿ ಕಾಡಿಗೆ ► ಅರಣ್ಯ ಅಧಿಕಾರಿಗಳಿಂದ ಯಶಸ್ವಿ ಕಾರ್ಯಾಚರಣೆ Read More »

ಕರಾವಳಿ

ಶಾಂತಿಮೊಗರು: ನೀರುಪಾಲಾದ ಸಹೋದರರು ► ಓರ್ವನ ಶವ ಪತ್ತೆ

(ನ್ಯೂಸ್ ಕಡಬ) newskadaba.com ಕಡಬ,ಸೆ.6, ಇಲ್ಲಿಗೆ ಸಮೀಪದ ಕುಟ್ರುಪ್ಪಾಡಿ ಗ್ರಾಮದ ಕುಮಾರಧಾರಾ ನದಿಯಲ್ಲಿ ಮಂಗಳವಾರ ಸಂಜೆ ನೀರುಪಾಲಾದ ಯುವಕರಿಬ್ಬರ ಪೈಕಿ ಓರ್ವನ ಶವ ಬುಧವಾರ ಪತ್ತೆಯಾಗಿದೆ.  ಇನ್ನೊಂದು ಶವಕ್ಕಾಗಿ ಶೋಧ ಕಾರ್ಯ ಮುಂದುವರಿಸಿದೆ. ಕುಟ್ರುಪ್ಪಾಡಿ ಗ್ರಾಮದ ಅಲರ್ಮೆ ದಿ. ಚೆನ್ನಪ್ಪ ಪೂಜಾರಿಯವರ ಪುತ್ರರಾದ ಹರಿಪ್ರಸಾದ್(30) ಹಾಗೂ ಸತ್ಯಪ್ರಸಾದ್(25) ನೀರುಪಾಲಾದವರು. ಜೊತೆಗಿದ್ದ ಅವರ ಚಿಕ್ಕಪ್ಪನ ಮಗ ರೋಹಿತ್ ಬದುಕುಳಿದಿದ್ದಾರೆ. ಕುದ್ಮಾರು ಗ್ರಾಮದ ಶಾಂತಿಮೊಗರು ಸೇತುವೆ ಬಳಿ ಸ್ನಾನಕ್ಕೆಂದು ಮೂವರು ನದಿಗಿಳಿದಿದ್ದು ನೀರಿನ ಸೆಳತಕ್ಕೆ ಕೊಚ್ಚಿಹೋಗಿದ್ದಾರೆ. ಸ್ಥಳಿಯ ಈಜು ಪರಿಣತರು, ಅಗ್ನಿಶಾಮಕ

ಶಾಂತಿಮೊಗರು: ನೀರುಪಾಲಾದ ಸಹೋದರರು ► ಓರ್ವನ ಶವ ಪತ್ತೆ Read More »

ಕರಾವಳಿ

APL ಪಡಿತರ ಕಾರ್ಡನ್ನು BPL ಆಗಿ ಬದಲಾಯಿಸಲು ಹೋಗಿ ವಂಚಿತರಾದ ► ಎಂಡೋ ಸತ್ರಸ್ತ ಕುಟುಂಬಗಳು

(ನ್ಯೂಸ್ ಕಡಬ) newskadaba.com ಕಡಬ,ಸೆ.06, ಜಿಲ್ಲಾಧಿಕಾರಿಗಳ ಆದೇಶದಂತೆ ಎಂಡೋ ಸಂತ್ರಸ್ತರ ಕೆಲವು ಕುಟುಂಬಗಳು ತಮ್ಮ ಎ.ಪಿಎಲ್ ಪಡಿತರ ಚೀಟಿಯನ್ನು ಬಿಪಿಎಲ್ ಕಾರ್ಡಾಗಿ ಬದಲಾಯಿಸಲು ಹೋಗಿ ಅತ್ತ ಎಪಿಎಲ್ ಇಲ್ಲ ಇತ್ತ ಬಿಪಿಎಲ್ ಪಡಿತರ ಚೀಟಿ  ಕೂಡಾ ಇಲ್ಲದಂತ ಸಂಕಟ ಅನುಭವಿಸುತ್ತಿದ್ದಾರೆ. ಈ ಬಗ್ಗೆ ಕೆಲವು ಎಂಡೋ ಸಂತ್ರಸ್ತರ ಕುಟುಂಬದವರು ಜಿಲ್ಲಾಧಿಕಾರಿಯವರಿಗೆ ಪತ್ರ ಬರೆದು ನಿವೇದನೆ ಮಾಡಿಕೊಂಡ ಬಳಿಕ ಅವರ ಉತ್ತರಕ್ಕಾಗಿ ಕಾಯುತ್ತಿದ್ದಾರೆ. ಮೂರು ತಿಂಗಳ ಹಿಂದೆ ಬೆಳ್ತಂಗಡಿ ತಾಲೂಕಿನ ಕೊಕ್ಕಡದಲ್ಲಿ ಎಂಡೋ ವಿರೋಧಿ ಹೋರಾಟ ಸಮಿತಿಯ ಅಧ್ಯಕ್ಷ ಶ್ರೀಧರ

APL ಪಡಿತರ ಕಾರ್ಡನ್ನು BPL ಆಗಿ ಬದಲಾಯಿಸಲು ಹೋಗಿ ವಂಚಿತರಾದ ► ಎಂಡೋ ಸತ್ರಸ್ತ ಕುಟುಂಬಗಳು Read More »

ಕರಾವಳಿ

ಕಡಬ: ಉರುಳಿಗೆ ಬಿದ್ದ ಚಿರತೆ* *► ಸ್ಥಳಕ್ಕಾಗಮಿಸಿದ ಅರಣ್ಯ ಇಲಾಖಾಧಿಕಾರಿಗಳು

(ನ್ಯೂಸ್ ಕಡಬ) newskadaba.com ಕಡಬ, ಸೆ.06. ಇಲ್ಲಿಗೆ ಸಮೀಪದ ಮುಂಡ್ರಾಡಿ ಶ್ರೀನಿವಾಸ ರೈ ಎಂಬವರ ಜಾಗದಲ್ಲಿ ಚಿರತೆಯೊಂದು ಉರುಳಿಗೆ ಬಿದ್ದ ಘಟನೆ ಬುಧವಾರದಂದು ನಡೆದಿದೆ. ವಿಷಯ ತಿಳಿದ ಊರವರು ತಕ್ಷಣವೇ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದು, ಸ್ಥಳಕ್ಕಾಗಮಿಸಿದ ಅರಣ್ಯ ಇಲಾಖಾಧಿಕಾರಿಗಳು ಅರಿವಳಿಕೆ ತಜ್ಞರಿಗೆ ಮಾಹಿತಿ ನೀಡಿದ್ದು, ಪಿಲಿಕುಳದಿಂದ ತಜ್ಞರು ಆಗಮಿಸುತ್ತಿದ್ದಾರೆ.

ಕಡಬ: ಉರುಳಿಗೆ ಬಿದ್ದ ಚಿರತೆ* *► ಸ್ಥಳಕ್ಕಾಗಮಿಸಿದ ಅರಣ್ಯ ಇಲಾಖಾಧಿಕಾರಿಗಳು Read More »

ಕರಾವಳಿ

ಮಾರ್ ಇವಾನಿಯೋಸ್ ಕಾಲೇಜಿನಲ್ಲಿ ಓಣಂ ಆಚರಣೆ ► ಮೆರುಗು ನೀಡಿದ ಪೂಕಳಂ, ತಿರುವಾದಿರ ನೃತ್ಯ

(ನ್ಯೂಸ್ ಕಡಬ) newskadaba.com ಕಡಬ,ಸೆ.6, ಇಲ್ಲಿನ ಕುಂತೂರು ಮಾರ್ ಇವಾನಿಯೋಸ್ ಶಿಕ್ಷಕ ಶಿಕ್ಷಣ ಸಂಸ್ಥೆ ಮತ್ತು ಪದವಿ ವಿದ್ಯಾಲಯ ಜಂಟಿ ಆಶ್ರಯದಲ್ಲಿ ಓಣಂ ಆಚರಣೆಯನ್ನು  ಸೋಮವಾರ ಆಚರಿಸಲಾಯಿತು. ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದ ಕೊಂತೂರು ಮಾರ್ ಇವಾನಿಯೋಸ್ ವಿದ್ಯಾ ಸಂಸ್ಥೆಯ ಪ್ರಿನ್ಸಿಪಾಲ್ ಫಿಲಿಪ್ ನೆಲ್ಲಿವಿಲ ಶಾಲಾ-ಕಾಲೇಜುಗಳಲ್ಲಿ ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಹಬ್ಬಗಳನ್ನು ಎಲ್ಲರೂ ಒಟ್ಟು ಸೇರಿ ಆಚರಣೆ ಮಾಡುವುದರಿಂದ, ಸೌಹಾರ್ದತೆ ಹಾಗೂ ಐಕ್ಯತೆ ಮೂಡುತ್ತದೆ. ಪ್ರತಿಯೊಂದು ಹಬ್ಬ ಆಚರಣೆಗಳಲ್ಲೂ ಆದರದ್ದೇ ಆದ ವೈಶಿಷ್ಠತೆಗಳಿವೆ. ಕೇರಳದ ನಾಡ ಹಬ್ಬವಾದ

ಮಾರ್ ಇವಾನಿಯೋಸ್ ಕಾಲೇಜಿನಲ್ಲಿ ಓಣಂ ಆಚರಣೆ ► ಮೆರುಗು ನೀಡಿದ ಪೂಕಳಂ, ತಿರುವಾದಿರ ನೃತ್ಯ Read More »

ಕರಾವಳಿ

ಕಡಬ ಸರಸ್ವತೀ ವಿದ್ಯಾಲಯ ಶಿಕ್ಷಕರ ದಿನಾಚರಣೆ ►“ಸಾಧನಶ್ರೀ” ಪ್ರಶಸ್ತಿ ಪಡೆದ ಸಾಧಕರಿಗೆ ಗೌರವಾರ್ಪಣೆ

(ನ್ಯೂಸ್ ಕಡಬ) newskadaba.com ಕಡಬ,ಸೆ.6, ಕಡಬ ಸರಸ್ವತೀ ವಿದ್ಯಾಲಯ ಪ್ರಾಥಮಿಕ ವಿಭಾಗದಲ್ಲಿ ಶಿಕ್ಷಕರಿಗೆ ವಿದ್ಯಾರ್ಥಿಗಳು ಹೂ ನೀಡಿ ಗೌರವಾರ್ಪಣೆ ಮಾಡಿ ಆಶೀರ್ವಾದ ಪಡೆಯುವುದರ ಮೂಲಕ ಶಿಕ್ಷಕರ ದಿನಾಚರಣೆಯನ್ನು ಮಂಗಳವಾರ ಆಚರಿಸಲಾಯಿತು. ಈ ಸಂದರ್ಭದಲ್ಲಿ “ಸಾಧನಶ್ರೀ” ಪ್ರಶಸ್ತಿ ಪಡೆದ ಕದಂಬ ಜೆ.ಸಿ.ಐ ಕಡಬ ಪೂರ್ವಾಧ್ಯಕ್ಷ  ಹಾಗೂ ಸರಸ್ವತೀ ವಿದ್ಯಾಲಯದ ಆಡಳಿತ ಮಂಡಳಿ ನಿರ್ದೇಶಕ  ಶಿವಪ್ರಸಾದ್ ಮೈಲೇರಿಯವರನ್ನು ಶಿಕ್ಷಕರ ವತಿಯಿಂದ ಶಾಲಾ ಮುಖ್ಯ ಶಿಕ್ಷಕ  ಮಾಧವ ಕೋಲ್ಪೆ  ಅವರು  ಗೌರವಿಸಿದರು. ಶಿವಪ್ರಸಾದ್ ಮೈಲೇರಿಯವರು ಅಭಿನಂದನೆಯನ್ನು ಸ್ವೀಕರಿಸಿ, ಕೃತಜ್ಞತೆಯನ್ನು ಸಲ್ಲಿಸಿದರು.  ಭಾರತೀ

ಕಡಬ ಸರಸ್ವತೀ ವಿದ್ಯಾಲಯ ಶಿಕ್ಷಕರ ದಿನಾಚರಣೆ ►“ಸಾಧನಶ್ರೀ” ಪ್ರಶಸ್ತಿ ಪಡೆದ ಸಾಧಕರಿಗೆ ಗೌರವಾರ್ಪಣೆ Read More »

ಕರಾವಳಿ
Scroll to Top