ಕರಾವಳಿ

ಮಂಗಳೂರು : ವೃದ್ಧೆಯ ಮನೆಗೆ ನುಗ್ಗಿ ಕಳ್ಳತನ – ಮೂವರ ಬಂಧನ

(ನ್ಯೂಸ್‌ ಕಡಬ) newskadaba.com,ಡಿ.16  ಮಂಗಳೂರು : ತಾಲೂಕಿನ ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವೃದ್ಧೆಯೊಬ್ಬರ ಮನೆಗೆ ನುಗ್ಗಿ ಚಿನ್ನ ಹಾಗೂ ನಗದು ದೋಚಿದ ಪ್ರಕರಣವನ್ನು ಪೊಲೀಸರು ಭೇದಿಸಿದ್ದಾರೆ. ಪ್ರಕರಣದಲ್ಲಿ ಮೂವರು ಆರೋಪಿತರನ್ನು ಬಂಧಿಸಲಾಗಿದ್ದು, ಒಬ್ಬ ಆರೋಪಿ ತಲೆಮರೆಸಿಕೊಂಡಿದ್ದಾನೆ.ಸುರತ್ಕಲ್ ಸಮೀಪದ ಮುಕ್ಕ ಪ್ರದೇಶದಲ್ಲಿ ವಾಸವಿರುವ ವೃದ್ಧೆ ಜಲಜ ( 85 ವರ್ಷ) ಅವರ ಮನೆಗೆ ನುಗ್ಗಿ ದರೋಡೆ ನಡೆಸಿದ ಘಟನೆ ಡಿಸೆಂಬರ್ 3ರಂದು ನಡೆದಿತ್ತು. ಅಪರಿಚಿತರು ಕುಡಿಯಲು ನೀರು ಬೇಕೆಂದು ಬಾಗಿಲು ತೆರೆಯುವಂತೆ ಹೇಳಿದ್ದು, ಬಾಗಿಲು ತೆಗೆಯದ ಕಾರಣ ಮನೆಯ […]

ಮಂಗಳೂರು : ವೃದ್ಧೆಯ ಮನೆಗೆ ನುಗ್ಗಿ ಕಳ್ಳತನ – ಮೂವರ ಬಂಧನ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕೆಎಸ್‌ಆರ್‌ಟಿಸಿ ಚಾಲಕರಿಗೆ ಭರ್ಜರಿ ಸಿಹಿ ಸುದ್ದಿ!

(ನ್ಯೂಸ್‌ ಕಡಬ) newskadaba.com,ಡಿ.16 : ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್‌ಟಿಸಿ) ಅಪಘಾತ ರಹಿತ ಸೇವೆ ಸಲ್ಲಿಸುವ ಚಾಲಕರಿಗೆ ನೀಡುವ ಪ್ರೋತ್ಸಾಹ ಧನವನ್ನು ಹೆಚ್ಚಿಸಿ ಆದೇಶ ಹೊರಡಿಸಿದೆ.ಕೆಎಸ್‌ಆರ್‌ಟಿಸಿ ಎಂಡಿ ಅಕ್ರಂ ಪಾಷಾ ಅವರು ಈ ಕುರಿತು ಮಾಹಿತಿ ನೀಡಿದ್ದು, ಪರಿಷ್ಕೃತ ವಿವರಗಳು ಹೀಗಿವೆ: ಚಿನ್ನದ ಪದಕ ವಿಜೇತ ಚಾಲಕರಿಗೆ: ನಗದು ಪುರಸ್ಕಾರವನ್ನು ₹5,000 ರಿಂದ ₹10,000 ಕ್ಕೆ ಹೆಚ್ಚಿಸಲಾಗಿದೆ. ಮಾಸಿಕ ಭತ್ಯೆಯನ್ನು ₹500 ರಿಂದ ₹1,000 ಕ್ಕೆ ಏರಿಕೆ ಮಾಡಲಾಗಿದೆ. ಬೆಳ್ಳಿ ಪದಕ ವಿಜೇತ ಚಾಲಕರಿಗೆ:

ಕೆಎಸ್‌ಆರ್‌ಟಿಸಿ ಚಾಲಕರಿಗೆ ಭರ್ಜರಿ ಸಿಹಿ ಸುದ್ದಿ! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಂಗಳೂರಿನ ಆರ್ಟಿಒ ಕಚೇರಿ ಭವನಕ್ಕೆ ಬಾಂಬ್ ಬೆದರಿಕೆ!

(ನ್ಯೂಸ್‌ ಕಡಬ) newskadaba.com,  ಡಿ.15: ಮಂಗಳೂರಿನ ಆರ್‌ಟಿಒ ಕಚೇರಿ ಮತ್ತು ಗದಗ ಜಿಲ್ಲಾಡಳಿತ ಭವನ ಸ್ಫೋಟಿಸುವುದಾಗಿ ಬಾಂಬ್ ಬೆದರಿಕೆ ಸಂದೇಶ ಬಂದಿದ್ದು, ಎರಡೂ ಸ್ಥಳಗಳಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಇಮೇಲ್‌ಗೆ ಬಾಂಬ್‌ ಬೆದರಿಕೆ ಸಂದೇಶ ಬಂದಿದ್ದು, ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸುತ್ತಿದ್ದಾರೆ. ಮಂಗಳೂರಿನ ನೆಹರು ಮೈದಾನದಲ್ಲಿರುವ ಆರ್‌ಟಿಒ ಕಚೇರಿಗೆ ಬಾಂಬ್‌ ಬೆದರಿಕೆ ಮೇಲ್ ಬಂದಿದೆ. ಇನ್ನು 5 ಬಾಂಬ್‌ಗಳಿಂದ ಗದಗ ಜಿಲ್ಲಾಡಳಿತ ಭವನ ಸ್ಫೋಟಿಸುವುದಾಗಿ ಸಂದೇಶ ಬಂದಿದ್ದು, ಸಿಬ್ಬಂದಿ ಕಂಗಾಲಾಗಿದ್ದಾರೆ. ಅರ್ನಾ ಅಶ್ವಿನ್ ಶೇಖರ್ ಎಂಬ

ಮಂಗಳೂರಿನ ಆರ್ಟಿಒ ಕಚೇರಿ ಭವನಕ್ಕೆ ಬಾಂಬ್ ಬೆದರಿಕೆ! Read More »

ಕರಾವಳಿ

ಷೇರು ಹೂಡಿಕೆ ಹೆಸರಿನಲ್ಲಿ ಭಾರೀ ವಂಚನೆ

(ನ್ಯೂಸ್‌ ಕಡಬ) newskadaba.com,  ಡಿ.15: ಬೆಂಗಳೂರಿನ ಹಿರಿಯ ಉದ್ಯಮಿಯೊಬ್ಬರು ಸೈಬರ್ ವಂಚಕರ ಜಾಲಕ್ಕೆ ಬಿದ್ದು 8.3 ಕೋಟಿ ರೂಪಾಯಿ ಕಳೆದುಕೊಂಡಿರುವ ಘಟನೆ ನಗರದಲ್ಲಿ ಬೆಳಕಿಗೆ ಬಂದಿದೆ. ಷೇರು ಮಾರುಕಟ್ಟೆಯಲ್ಲಿ ಲಾಭದಾಯಕ ಹೂಡಿಕೆ ಮಾಡುವಂತೆ ನಂಬಿಸಿ ಸೈಬರ್ ವಂಚಕರು ಈ ಮೊತ್ತವನ್ನು ಪೀಕಿದ್ದಾರೆ. ವಂಚನೆಗೆ ಒಳಗಾದವರು 71 ವರ್ಷದ ರಾಜೇಂದ್ರ ನಾಯ್ಡು ಎಂಬ ಉದ್ಯಮಿ. ಅವರು ಅಯೋಧ್ಯೆಯ ರಾಮಮಂದಿರಕ್ಕೆ ಬೆಳ್ಳಿ ಪೂಜಾ ಸಾಮಗ್ರಿಗಳನ್ನು ದೇಣಿಗೆ ನೀಡಿದ್ದ ರಾಮಭಕ್ತರಾಗಿದ್ದಾರೆ.. ಹಿಂದೆ ರಿಲಯನ್ಸ್ ಕ್ಯಾಪಿಟಲ್‌ನಿಂದ ಸಾಲ ಪಡೆದು ಸಂಪೂರ್ಣವಾಗಿ ತೀರಿಸಿದ್ದ ಹಿನ್ನೆಲೆಯನ್ನು

ಷೇರು ಹೂಡಿಕೆ ಹೆಸರಿನಲ್ಲಿ ಭಾರೀ ವಂಚನೆ Read More »

ಕರಾವಳಿ

ಕಾರವಾರ ಜಿಲ್ಲಾ ಕಾರಾಗೃಹದಲ್ಲಿ ಕೈದಿಗಳ ಬಳಿ ಮೊಬೈಲ್ ಪತ್ತೆ!

(ನ್ಯೂಸ್‌ ಕಡಬ) newskadaba.com,  ಡಿ.15:  ಉತ್ತರ ಕನ್ನಡ ಜಿಲ್ಲೆಯ ಕಾರವಾರ ಜೈಲಿನಲ್ಲಿ ಅಕ್ರಮವಾಗಿ ಕೈದಿಗಳು ಮೊಬೈಲ್ ಇಟ್ಟುಕೊಂಡಿರುವುದು ತಪಾಸಣೆ ವೇಳೆ ಬೆಳಕಿಗೆ ಬಂದಿದೆ. ಕಾರವಾರ ಜಿಲ್ಲಾ ಕಾರಾಗೃಹದಲ್ಲಿ ಮತ್ತಷ್ಟು ಮತ್ತಷ್ಟು ಮೊಬೈಲ್‌ಗಳು ಕೈದಿಗಳ ಬಳಿ ಸಿಕ್ಕಿವೆ. ಪ್ರಭಾರ ಜೈಲು ಅಧೀಕ್ಷಕ ಮಲ್ಲಿಕಾರ್ಜುನ ಕೊಣ್ಣೂರು ಅವರು ಜೈಲಿನಲ್ಲಿ ತಪಾಸಣೆ ನಡೆಸಿದಾಗ 7 ಮೊಬೈಲ್ ಸೇರಿ ಇನ್ನೂ ಹಲವು ನಿಷೇಧಿತ ವಸ್ತುಗಳು ಕಂಡುಬಂದಿವೆ. ಜೈಲಿನಲ್ಲಿ ಒಂದೇ ವಾರದಲ್ಲಿ ಎರಡು ಬಾರಿ ಗಲಾಟೆ ನಡೆದಿತ್ತು. ಮಾದಕ ಪದಾರ್ಥ ಕೊಡಲಿಲ್ಲ ಎಂಬ ಕಾರಣಕ್ಕೆ

ಕಾರವಾರ ಜಿಲ್ಲಾ ಕಾರಾಗೃಹದಲ್ಲಿ ಕೈದಿಗಳ ಬಳಿ ಮೊಬೈಲ್ ಪತ್ತೆ! Read More »

ಕರಾವಳಿ, ಕರ್ನಾಟಕ

ಅರ್ಜಿ ಸಲ್ಲಿಸಿದ 3 ದಿನಗಳಲ್ಲಿ ಖಾತೆ ಸೇರುವುದು ಪಿಎಫ್ ಹಣ!

(ನ್ಯೂಸ್‌ ಕಡಬ) newskadaba.com,  ಡಿ.15 ಪಿಎಫ್ ಹಣವನ್ನು ತಕ್ಷಣ ಬಯಸುವವರಿಗೆ ಇಪಿಎಫ್‌ಒ ಇತ್ತೀಚಿನ ನವೀಕರಣವನ್ನು ನೀಡಿದೆ. ಈ ಸೂಚನೆಗಳನ್ನು ಅನುಸರಿಸುವವರಿಗೆ ಗರಿಷ್ಠ 3 ದಿನಗಳಲ್ಲಿ ಪಿಎಫ್ ಹಣ ಖಾತೆ ಸೇರುತ್ತದೆ ಎಂದು ಇಪಿಎಫ್‌ಒ ಹೇಳಿದೆ. ಪಿಎಫ್ ಹಣಕ್ಕಾಗಿ ಅರ್ಜಿ ಸಲ್ಲಿಸುವ ವೇಳೆ ನೀವು ಅನುಸರಿಸುವ ಹಂತಗಳು, ಹಣ ನಿಮ್ಮ ಖಾತೆಗೆ ಸೇರಲು ಎಷ್ಟು ದಿನಗಳನ್ನು ತೆಗೆದುಕೊಳ್ಳುತ್ತದೆ ಎಂಬುದನ್ನು ನಿರ್ಧರಿಸುತ್ತದೆ ಎಂದು ಇಪಿಎಫ್‌ಒ ಹೇಳಿದೆ. ಆದ್ದರಿಂದ, ಬುದ್ಧಿವಂತಿಕೆಯಿಂದ ವರ್ತಿಸಿದರೆ ಕೇವಲ 3 ದಿನಗಳಲ್ಲಿ ಪಿಎಫ್ ಹಣವನ್ನು ಪಡೆಯಬಹುದು. ಮೂರು

ಅರ್ಜಿ ಸಲ್ಲಿಸಿದ 3 ದಿನಗಳಲ್ಲಿ ಖಾತೆ ಸೇರುವುದು ಪಿಎಫ್ ಹಣ! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸುಳ್ಯ: ರಸ್ತೆ ಬದಿ ಕಸ ಎಸೆದ ವಿದ್ಯಾರ್ಥಿಗಳು; ವಿಡಿಯೋ ವೈರಲ್ ಬೆನ್ನಲ್ಲೇ ಎಚ್ಚೆತ್ತ ಶಿಕ್ಷಕರು

(ನ್ಯೂಸ್‌ ಕಡಬ) newskadaba.com,  ಡಿ.15:  ಶೈಕ್ಷಣಿಕ ಪ್ರವಾಸಕ್ಕೆ ಬಂದಿದ್ದ ವಿದ್ಯಾರ್ಥಿಗಳು ರಸ್ತೆ ಬದಿಯಲ್ಲಿ ಕಸ ಎಸೆದ ವಿಡಿಯೋ ವೈರಲ್ ಆದ ಬೆನ್ನಲ್ಲೇ ಆ ಶಾಲೆಯ ಶಿಕ್ಷಕರು ಸ್ಥಳೀಯ ಗ್ರಾಮ ಪಂಚಾಯಿತಿಯನ್ನು ಸಂಪರ್ಕಿಸಿ, ತಾವೇ ಖುದ್ದಾಗಿ ಬಂದು ತ್ಯಾಜ್ಯವನ್ನು ತೆರವುಗೊಳಿಸಿ ದಂಡ ಪಾವತಿಸುವುದಾಗಿ ಭರವಸೆ ನೀಡಿದ ಘಟನೆ ಸಂಪಾಜೆಯಲ್ಲಿ ನಡೆದಿದೆ. ಡಿಸೆಂಬರ್ 12 ರಂದು ಬೆಳಿಗ್ಗೆ, ಪ್ರವಾಸಕ್ಕೆ ತೆರಳಿದ್ದ ಬೆಳ್ತಂಗಡಿ ತಾಲೂಕಿನ ಶಿಕ್ಷಣ ಸಂಸ್ಥೆಯೊಂದರ ವಿದ್ಯಾರ್ಥಿಗಳು ಊಟದ ನಂತರ ತ್ಯಾಜ್ಯವನ್ನು ಸರಿಯಾಗಿ ವಿಲೇವಾರಿ ಮಾಡುವ ಬದಲು ರಸ್ತೆ ಬದಿಯಲ್ಲಿ

ಸುಳ್ಯ: ರಸ್ತೆ ಬದಿ ಕಸ ಎಸೆದ ವಿದ್ಯಾರ್ಥಿಗಳು; ವಿಡಿಯೋ ವೈರಲ್ ಬೆನ್ನಲ್ಲೇ ಎಚ್ಚೆತ್ತ ಶಿಕ್ಷಕರು Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಮಂಗಳೂರು: ಶಿಕ್ಷಣಕ್ಕೆ ಹೆಸರಾಗಿರುವ ಮಂಗಳೂರು, ಇನ್ನೊಂದು ಮಗ್ಗುಲಲ್ಲಿ ಡ್ರಗ್ಸ್‌ ಮಾರುಕಟ್ಟೆಯಾಗಿಯೂ ಕುಖ್ಯಾತಿ ಗಳಿಸಿದೆ!…

(ನ್ಯೂಸ್‌ ಕಡಬ) newskadaba.com,  ಡಿ.15 : ರಾಜ್ಯದಲ್ಲಿ ಬೆಂಗಳೂರಿನಿಂದಾಚೆಗೆ ಮಾದಕ ದ್ರವ್ಯದ ಮಾರಕ ಜಾಲ ದೊಡ್ಡಮಟ್ಟದಲ್ಲಿ ವಿಸ್ತರಿಸಿರುವುದು ಮಂಗಳೂರಿನಲ್ಲಿ. ಶಿಕ್ಷಣಕ್ಕೆ ಹೆಸರಾಗಿರುವ ಮಂಗಳೂರು, ಇನ್ನೊಂದು ಮಗ್ಗುಲಲ್ಲಿ ಡ್ರಗ್ಸ್‌ ಮಾರುಕಟ್ಟೆಯಾಗಿಯೂ ಕುಖ್ಯಾತಿ ಗಳಿಸಿದೆ!. ಆದರೆ, ಕಳೆದ ಕೆಲವು ತಿಂಗಳುಗಳಿಂದ ಜಿಲ್ಲೆಯ ಇಡೀ ಪೊಲೀಸ್‌ ಇಲಾಖೆ ಡ್ರಗ್ಸ್‌ ವಿರುದ್ಧ ಆಖಾಡಕ್ಕಿಳಿದು ನೇರ ಸಮರಕ್ಕೆ ಧುಮುಕಿದ್ದು, ಡ್ರಗ್ಸ್‌ ಪೆಡ್ಲರ್‌ಗಳಲ್ಲಿ ನಡುಕ ಹುಟ್ಟಿಸಿದೆ. ಈ ಕಾರಣದಿಂದ ದೊಡ್ಡಮಟ್ಟದ ಧನಾತ್ಮಕ ಬದಲಾವಣೆ ಜಿಲ್ಲೆಯಲ್ಲಿ ಕಂಡು ಬಂದಿದೆ.ಆದರೆ, ಕಳೆದೊಂದು ದಶಕದಿಂದ ವಿಸ್ತಾರವಾಗಿ ಚಾಚಿಕೊಂಡಿರುವ ಮಾದಕ ದ್ರವ್ಯದ

ಮಂಗಳೂರು: ಶಿಕ್ಷಣಕ್ಕೆ ಹೆಸರಾಗಿರುವ ಮಂಗಳೂರು, ಇನ್ನೊಂದು ಮಗ್ಗುಲಲ್ಲಿ ಡ್ರಗ್ಸ್‌ ಮಾರುಕಟ್ಟೆಯಾಗಿಯೂ ಕುಖ್ಯಾತಿ ಗಳಿಸಿದೆ!… Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸಾಮಾಜಿಕ ಜಾಲತಾಣ ಇನ್‌ಸ್ಟಾಗ್ರಾಮ್ ನಲ್ಲಿ ಅನ್ಯ ಧರ್ಮದ ಬಗ್ಗೆ ಅವಹೇಳನಕಾರಿ ಮತ್ತು ಪ್ರಚೋದನಕಾರಿ ಪೋಸ್ಟ್ –ಆರೋಪಿ ಬಂಧನ

(ನ್ಯೂಸ್‌ ಕಡಬ) newskadaba.com,  ಡಿ.15 ಮಂಗಳೂರು: ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ-ಪ್ರಚೋದನಕಾರಿ ಪೋಸ್ಟ್ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯೋರ್ವನನ್ನು ಬಜಪೆ ಠಾಣಾ ಪೊಲೀಸರು ಭಾನುವಾರ ವಶಕ್ಕೆ ಪಡೆದಿದ್ದಾರೆ.ಮಂಗಳೂರು, ಉಳಾಯಿಬೆಟ್ಟು, ಕೊಟ್ಟಾನ ಹೌಸ್ ನ ಪ್ರಸ್ತುತ ಬಂಟ್ವಾಳ ತಾಲೂಕಿನ ಪಾಣೆ ಮಂಗಳೂರು, ಸಜಿಪಮುನ್ನೂರು ಗ್ರಾಮದ ಸೌದಿ ಅರೆಬಿಯಾದಲ್ಲಿರುವ ಅಬ್ದುಲ್ ಖಾದರ್ ನೇಹಾದ್ (27) ಆರೋಪಿಯಾಗಿರುತ್ತಾನೆ. ಇದೇ ಅಕ್ಟೋಬರ್ 11ರಂದು ಸಾಮಾಜಿಕ ಜಾಲತಾಣ ಇನ್‌ಸ್ಟಾಗ್ರಾಮ್ ನಲ್ಲಿ  _sdpi_2025_ID ಎಂಬ ಖಾತೆಯಲ್ಲಿ ಅನ್ಯ ಧರ್ಮದ ಬಗ್ಗೆ ಅವಹೇಳನಕಾರಿ ಮತ್ತು ಪ್ರಚೋದನಕಾರಿ ಪೋಸ್ಟ್ ಹಾಕಿದ ಬಗ್ಗೆ ಬಜಪೆ ಪೊಲೀಸ್

ಸಾಮಾಜಿಕ ಜಾಲತಾಣ ಇನ್‌ಸ್ಟಾಗ್ರಾಮ್ ನಲ್ಲಿ ಅನ್ಯ ಧರ್ಮದ ಬಗ್ಗೆ ಅವಹೇಳನಕಾರಿ ಮತ್ತು ಪ್ರಚೋದನಕಾರಿ ಪೋಸ್ಟ್ –ಆರೋಪಿ ಬಂಧನ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕೇರಳ ರಾಜಧಾನಿಯಲ್ಲಿ ಬಿಜೆಪಿ ಗೆಲುವು

(ನ್ಯೂಸ್‌ ಕಡಬ) newskadaba.com,  ಡಿ.13: ಕೇರಳ ರಾಜಕೀಯದಲ್ಲಿ ಮಹತ್ವದ ತಿರುವು ಕಂಡುಬಂದಿದ್ದು, ರಾಜಧಾನಿ ತಿರುವನಂತಪುರಂ ಕಾರ್ಪೋರೇಶನ್‌ನಲ್ಲಿ ಇದೇ ಮೊದಲ ಬಾರಿಗೆ ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟ ಅಧಿಕಾರಕ್ಕೇರಿದೆ. ಸುಮಾರು 45 ವರ್ಷಗಳಿಂದ ಎಲ್‌ಡಿಎಫ್ (ಕಮ್ಯೂನಿಸ್ಟ್) ಹಿಡಿತದಲ್ಲಿದ್ದ ಕಾರ್ಪೋರೇಶನ್‌ನ್ನು ಗೆಲ್ಲುವ ಮೂಲಕ ಬಿಜೆಪಿ ಹೊಸ ಇತಿಹಾಸ ನಿರ್ಮಿಸಿದೆ. ತಿರುವನಂತಪುರಂ ಕಾರ್ಪೋರೇಶನ್‌ನ 101 ಸ್ಥಾನಗಳ ಪೈಕಿ 100 ಸ್ಥಾನಗಳಿಗೆ ಚುನಾವಣೆ ನಡೆದಿದ್ದು, ಒಂದು ಸ್ಥಾನದಲ್ಲಿ ಅಭ್ಯರ್ಥಿ ನಿಧನರಾದ ಹಿನ್ನೆಲೆಯಲ್ಲಿ ಮತದಾನ ಮುಂದೂಡಲಾಗಿತ್ತು. ಫಲಿತಾಂಶದಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ 50 ಸ್ಥಾನಗಳನ್ನು

ಕೇರಳ ರಾಜಧಾನಿಯಲ್ಲಿ ಬಿಜೆಪಿ ಗೆಲುವು Read More »

ಕರಾವಳಿ, ಬ್ರೇಕಿಂಗ್ ನ್ಯೂಸ್
Scroll to Top