ಕರಾವಳಿ

‘ಮುಳುಗು ಸೇತುವೆ’ಯೆಂದೇ ಖ್ಯಾತಿಯ ಹೊಸ್ಮಠ ಸೇತುವೆ ಮುಳುಗಡೆ ► ಉಪ್ಪಿನಂಗಡಿ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿ ಬಂದ್

(ನ್ಯೂಸ್ ಕಡಬ), newskadaba.com ಕಡಬ, ಆ.28. ‘ಮುಳುಗು ಸೇತುವೆ’ಯೆಂದೇ ಖ್ಯಾತಿ ಪಡೆದಿರುವ ಹಲವಾರು ಜೀವಗಳನ್ನು ಬಲಿ ತೆಗೆದುಕೊಂಡಿರುವ ಉಪ್ಪಿನಂಗಡಿ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಹೊಸ್ಮಠ ಸೇತುವೆಯು ಜಲಾವೃತಗೊಂಡು ಮುಳುಗಡೆಗೊಂಡಿದೆ. ಕಳೆದ ಕೆವು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಪ್ರಸಕ್ತ ವರ್ಷದಲ್ಲಿ ಎರಡನೇ ಸಲ ಮುಳಗಡೆಗೊಂಡಿದ್ದು, ಸಾರ್ವಜನಿಕರು ಸಂಕಷ್ಟ ಎದುರಿಸಬೇಕಾಯಿತು. ಸಂಜೆ ಸಮಯವಾದುದರಿಂದ ಕೆಲಸ ಬಿಟ್ಟು ಮನೆಗೆ ತೆರಳುತ್ತಿದ್ದ ವಿವಿಧ ಸಂಸ್ಥೆಗಳ ನೌಕರರು, ಶಾಲಾ ವಿದ್ಯಾರ್ಥಿಗಳು ಸೇರಿದಂತೆ ಅಪಾರ ಜನರು ನೆಲ್ಯಾಡಿ, ಇಚಿಲಂಪಾಡಿ ಮೂಲಕ ಸುತ್ತುಬಳಸಿ ಪ್ರಯಾಣಿಸಬೇಕಾಯಿತು.

‘ಮುಳುಗು ಸೇತುವೆ’ಯೆಂದೇ ಖ್ಯಾತಿಯ ಹೊಸ್ಮಠ ಸೇತುವೆ ಮುಳುಗಡೆ ► ಉಪ್ಪಿನಂಗಡಿ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿ ಬಂದ್ Read More »

ಕರಾವಳಿ

ಮುಳುಗಡೆಯಾದ ನೆಟ್ಟಣ ಕಿರು ಸೇತುವೆ ► ಧರ್ಮಸ್ಥಳ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿ ಬಂದ್

(ನ್ಯೂಸ್ ಕಡಬ), newskadaba.com ಕಡಬ, ಆ.28. ಧರ್ಮಸ್ಥಳ – ಸುಬ್ರಹ್ಮಣ್ಯ ದೇವಸ್ಥಾನವನ್ನು ಸಂಪರ್ಕಿಸುವ ರಾಜ್ಯ ಹೆದ್ದಾರಿಯ ನೆಟ್ಟಣ ಎಂಬಲ್ಲಿನ ಕಿರು ಸೇತುವೆಯು ಜಲಾವೃತಗೊಂಡಿದ್ದು, ರಸ್ತೆ ತಡೆ ಉಂಟಾಗಿದೆ. ಕಳೆದ ಮೂರು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ತಗ್ಗು ಪ್ರದೇಶಗಳು ಜಲಾವೃತವಾಗಿದ್ದು, ಸೇತುವೆಯ ಮೇಲಿನಿಂದ ನೀರು ಹರಿಯುತ್ತಿದೆ. ಇದರಿಂದಾಗಿ ಧರ್ಮಸ್ಥಳ, ಸುಬ್ರಹ್ಮಣ್ಯ ದೇವಸ್ಥಾನಗಳನ್ನು ಹಾಗೂ ಉಪ್ಪಿನಂಗಡಿ, ಮಂಗಳೂರು ಪ್ರಯಾಣಿಸುವ ಪ್ರಯಾಣಿಕರು ಸಂಕಷ್ಟಕ್ಕೊಳಗಾಗಿದ್ದು, ನೀರು ಕಡಿಮೆಯಾಗುವವರೆಗೆ ಕಾಯಬೇಕಾಗಿದೆ.

ಮುಳುಗಡೆಯಾದ ನೆಟ್ಟಣ ಕಿರು ಸೇತುವೆ ► ಧರ್ಮಸ್ಥಳ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿ ಬಂದ್ Read More »

ಕರಾವಳಿ

ತೂಫಾನ್ – ಟ್ರಕ್ ನಡುವೆ ಮುಖಾಮುಖಿ ಢಿಕ್ಕಿ ► ಒಂದೇ ಕುಟುಂಬದ 10 ಮಂದಿ ವಿಧಿವಶ

(ನ್ಯೂಸ್ ಕಡಬ) newskadaba.com ಅಹಮದಾಬಾದ್, ಆ.28, ಟ್ರಕ್ ಹಾಗೂ ತೂಫಾನ್ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿದ ಪರಿಣಾಮ ಒಂದೇ ಕುಟುಂಬದ 10 ಮಂದಿ ದಾರುಣವಾಗಿ ಮೃತಪಟ್ಟ ಘಟನೆ ಅಹಮದಾಬಾದ್‍ನ ಧಂಡುಕಾ- ಬರ್ವಾಲಾ ರಾಷ್ಟ್ರೀಯ ಹೆದ್ದಾರಿಯಲ್ಲಿ ಸೋಮವಾರದಂದು ನಡೆದಿದೆ. ವಡೋದರಾದ ಕುಟುಂಬವೊಂದು ತೂಫಾನ್ ವಾಹನದಲ್ಲಿ ದೇವಸ್ಥಾನಕ್ಕೆ ಹೊರಟಿದ್ದ ವೇಳೆ ಟ್ರಕ್‍ಗೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಚಾಲಕ ಸೇರಿ 10 ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಚಾಲಕ ನಿದ್ದೆಯ ಮಂಪರಿನಲ್ಲಿದ್ದ ವಾಹನ ಚಲಾಯಿಸಿದ್ದೇ ಘಟನೆಗೆ ಕಾರಣವಾಗಿರಬಹುದೆಂದು ಪೊಲೀಸರು ಶಂಕಿಸಿದ್ದಾರೆ. ಓರ್ವ ವ್ಯಕ್ತಿಯನ್ನು ಆಸ್ಪತ್ರೆಗೆ

ತೂಫಾನ್ – ಟ್ರಕ್ ನಡುವೆ ಮುಖಾಮುಖಿ ಢಿಕ್ಕಿ ► ಒಂದೇ ಕುಟುಂಬದ 10 ಮಂದಿ ವಿಧಿವಶ Read More »

ಕರಾವಳಿ

ವಲಯ ಮಟ್ಟದ ಕಬಡ್ಡಿ ► ಸೈಂಟ್ ಆ್ಯನ್ಸ್‌ ಅಂಗ್ಲ ಮಾಧ್ಯಮ ಶಾಲೆ ತಾಲೂಕು ಮಟ್ಟಕ್ಕೆ

(ನ್ಯೂಸ್ ಕಡಬ) newskadaba.com ಕಡಬ, ಆ.28, ಆತೂರು ಬದ್ರಿಯಾ ಆಂಗ್ಲಮಾಧ್ಯಮ ಶಾಲೆಯಲ್ಲಿ ನಡೆದ ವಲಯ ಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ಸೈಂಟ್ ಆಂಗ್ಲಮಾಧ್ಯಮ ಶಾಲೆಯ ಬಾಲಕಿಯರ ತಂಡವು ಪ್ರಥಮ ಸ್ಥಾನ ಗಳಿಸಿ ತಾಲೂಕು ಮಟ್ಟಕ್ಕೆ ಆಯ್ಕೆಯಾಗಿರುತ್ತದೆ. ವಿಜೇತ ವಿದ್ಯಾರ್ಥಿಗಳಿಗೆ ಶಾಲಾ ಸಂಚಾಲಕರಾದ ಫಾ| ರೊನಾಲ್ಡ್‌ ಲೋಬೋ ಅಭಿನಂದನೆ ಸಲ್ಲಿಸಿದ್ದಾರೆ.

ವಲಯ ಮಟ್ಟದ ಕಬಡ್ಡಿ ► ಸೈಂಟ್ ಆ್ಯನ್ಸ್‌ ಅಂಗ್ಲ ಮಾಧ್ಯಮ ಶಾಲೆ ತಾಲೂಕು ಮಟ್ಟಕ್ಕೆ Read More »

ಕರಾವಳಿ

ಗಡಿಯಾರ: ಹೋಂಡಾ ಆಕ್ಟಿವಾ – ಬ್ರೆಝಾ ಕಾರು ಢಿಕ್ಕಿ ► ಇಬ್ಬರು ಗಂಭೀರ

(ನ್ಯೂಸ್ ಕಡಬ) newskadaba.com ಮಾಣಿ, ಆ‌.27. ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಗಡಿಯಾರ ಎಂಬಲ್ಲಿ ಮಾರುತಿ ಬ್ರೆಝಾ ಕಾರು ಮತ್ತು ಆಕ್ಟಿವಾ ನಡುವೆ ಢಿಕ್ಕಿ ಸಂಭವಿಸಿ ಸವಾರರಿಬ್ಬರು ಗಾಯಗೊಂಡ ಘಟನೆ ಭಾನುವಾರ ಸಂಜೆ ನಡೆದಿದೆ. ಗಾಯಗೊಂಡ ಆಕ್ಟಿವಾ ಸವಾರರನ್ನು ಗಡಿಯಾರದ ನಿವಾಸಿಗಳಾದ ಮೋನು ಕರಾಯ ಮತ್ತು ಅವರ ಪುತ್ರಿ ಗಾಯಗೊಂಡಿದ್ದು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೋನುರವರು ತನ್ನ ಮಗಳೊಂದಿಗೆ ಮನೆ ಕಡೆಗೆ ತೆರಳುತ್ತಿದ್ದಾಗ ಘಟನೆ ಸಂಭವಿಸಿದೆ ಎನ್ನಲಾಗಿದೆ.

ಗಡಿಯಾರ: ಹೋಂಡಾ ಆಕ್ಟಿವಾ – ಬ್ರೆಝಾ ಕಾರು ಢಿಕ್ಕಿ ► ಇಬ್ಬರು ಗಂಭೀರ Read More »

ಕರಾವಳಿ

ಕಡಬ: ವಿಜೃಂಭಣೆಯಿಂದ ನಡೆದ ಸಾರ್ವಜನಿಕ ಶ್ರೀ ಗಣೇಶೋತ್ಸವ ► ಕಡಬದಿಂದ ಹೊಸ್ಮಠ ವರೆಗೆ ಮೆರವಣಿಗೆಯಲ್ಲಿ ಸಾಗಿ ವಿಸರ್ಜನೆ

(ನ್ಯೂಸ್ ಕಡಬ) newskadaba.com ಕಡಬ, ಆ.27. ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ವತಿಯಿಂದ 44 ನೇ ವರ್ಷದ ಕಡಬ ಸಾರ್ವಜನಿಕ ಶ್ರೀ ಗಣೇಶೋತ್ಸವವು ಆ.25 ರಿಂದ 27 ರವರೆಗೆ ಬಹಳ ವಿಜೃಂಭಣೆಯಿಂದ ನಡೆಯಿತು. ಕಡಬ ಶ್ರೀ ದುರ್ಗಾಂಬಿಕಾ ಅಮ್ಮನವರ ದೇವಸ್ಥಾನದ ಸಭಾಂಗಣದಲ್ಲಿ ಆಗಸ್ಟ್ 25 ಶುಕ್ರವಾರದಂದು ಗಣೇಶನ ವಿಗ್ರಹವನ್ನು ಪ್ರತಿಷ್ಠಾಪಿಸಲಾಗಿ, ಆಗಸ್ಟ್ 27 ನೇ ಭಾನುವಾರ ಸಂಜೆ ಕಡಬ ಪೇಟೆಯಿಂದ ಬಹಳ ವಿಜೃಂಭಣೆಯಿಂದ ಮೆರವಣಿಗೆ ಮೂಲಕ ಹೊಸ್ಮಠ ಕ್ಕೆ ತೆರಳಿ ಸೇತುವೆಯ ಕೆಳಭಾಗದಲ್ಲಿ ವಿಸರ್ಜಿಸಲಾಯಿತು. ಧಾರ್ಮಿಕ ಮುಖಂಡರು,

ಕಡಬ: ವಿಜೃಂಭಣೆಯಿಂದ ನಡೆದ ಸಾರ್ವಜನಿಕ ಶ್ರೀ ಗಣೇಶೋತ್ಸವ ► ಕಡಬದಿಂದ ಹೊಸ್ಮಠ ವರೆಗೆ ಮೆರವಣಿಗೆಯಲ್ಲಿ ಸಾಗಿ ವಿಸರ್ಜನೆ Read More »

ಕರಾವಳಿ

ಕೋಡಿಂಬಾಳ: ಅಕ್ರಮ ಜುಗಾರಿ ಅಡ್ಡೆಗೆ ದಾಳಿ ► ಹತ್ತು ಮಂದಿಯ ಬಂಧನ

(ನ್ಯೂಸ್ ಕಡಬ) newskadaba.com ಕಡಬ, ಆ.27. ಠಾಣಾ ವ್ಯಾಪ್ತಿಯ 102 ನೇ ನೆಕ್ಕಿಲಾಡಿ ಗ್ರಾಮದ ಬೊಳ್ಳೂರು ಎಂಬಲ್ಲಿ ಗೇರಬೀಜ ತೋಟವೊಂದರಲ್ಲಿ ನಡೆಯುತ್ತಿದ್ದ ಇಸ್ಪೀಟ್ ಅಡ್ಡೆಗೆ ದಾಳಿ ನಡೆಸಿರುವ ಕಡಬ ಪೊಲೀಸರು ಪ್ರಕರಣಕ್ಕೆ ಸಂಬಂಧಿಸಿದಂತೆ 10 ಮಂದಿಯನ್ನು ಬಂಧಿಸಿದ್ದಾರೆ. ಇಸ್ಪೀಟು ಆಟದಲ್ಲಿ ನಿರತರಾಗಿದ್ದ ವೇಳೆ ಖಚಿತ ಮಾಹಿತಿಯನ್ವಯ ದಾಳಿ ನಡೆಸಿರುವ ಕಡಬ ಪೊಲೀಸರು ದಾಳಿ ನಡೆಸಿ ಆರೋಪಿಗಳಾದ ರೆಂಜಿಲಾಡಿಯ ಜಗದೀಶ್, ಬಾಬು ಕುದ್ಮಾರು, ಅಶ್ರಫ್ ಕಳಾರ, ಹಮೀದ್ ಕಳಾರ, ಸುಂದರ ಆಲಂಕಾರು, ರಾಮ ಮರ್ಕಂಜ ಸುಳ್ಯ, ಕೊರಗು ಗೋಳಿಯಡ್ಕ, ಆನಂದ

ಕೋಡಿಂಬಾಳ: ಅಕ್ರಮ ಜುಗಾರಿ ಅಡ್ಡೆಗೆ ದಾಳಿ ► ಹತ್ತು ಮಂದಿಯ ಬಂಧನ Read More »

ಕರಾವಳಿ

ಬಿಳಿನೆಲೆ: ಮರದಿಂದ ಬಿದ್ದು ವ್ಯಕ್ತಿಗೆ ಗಾಯ

(ನ್ಯೂಸ್ ಕಡಬ) newskadaba.com ಕಡಬ, ಆ.27. ತೆಂಗಿನಕಾಯಿಯ ಕೀಳಲೆಂದು ತೆಂಗಿನಮರ ಏರಿದ್ದ ವ್ಯಕ್ತಿಯೋರ್ವರು ಕೆಳಗಡೆ ಬಿದ್ದು ಗಾಯಗೊಂಡ ಘಟನೆ ಭಾನುವಾರದಂದು ಪುತ್ತೂರು ತಾಲೂಕಿನ ಬಿಳಿನೆಲೆ ಗ್ರಾಮದ ನೆಟ್ಟಣ ಎಂಬಲ್ಲಿ ನಡೆದಿದೆ.   ಗಾಯಾಳುವನ್ನು ಬಿಳಿನೆಲೆ ಗ್ರಾಮದ ನೆಟ್ಟಣ ಚೆಂಡೆಹಿತ್ಲು ನಿವಾಸಿ ಸುರೇಶ್ ಕುಮಾರ್ ಎಂದು ಗುರುತಿಸಲಾಗಿದೆ. ಇವರು ತೆಂಗಿನಕಾಯಿ ಕೀಳಲು ತನ್ನ ಮನೆಯ ಸಮೀಪದ ತೆಂಗಿನ ಮರಕ್ಕೆ ಏರಿದ್ದ ಸಂದರ್ಭದಲ್ಲಿ ಆಯತಪ್ಪಿ ಕೆಳಗಡೆ ಬಿದ್ದರೆನ್ನಲಾಗಿದೆ. ತಕ್ಷಣವೇ ಅವರಿಗೆ ಕಡಬ ಸಮುದಾಯ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಪುತ್ತೂರಿನ

ಬಿಳಿನೆಲೆ: ಮರದಿಂದ ಬಿದ್ದು ವ್ಯಕ್ತಿಗೆ ಗಾಯ Read More »

ಕರಾವಳಿ

ಇಂದು ಕಡಬದಲ್ಲಿ ಬುರ್ಖಾ ಪ್ಯಾಲೇಸ್ ಶುಭಾರಂಭ ► ವಿವಿಧ ವಿನ್ಯಾಸದ ಬುರ್ಖಾಗಳ ಸುಸಜ್ಜಿತ ಮಳಿಗೆ

(ನ್ಯೂಸ್ ಕಡಬ) newskadaba.com ಕಡಬ, ಆ.27. ಮುಸಲ್ಮಾನ ಮಹಿಳೆಯರು ಧರಿಸುವಂತಹ ವಿವಿಧ ವಿನ್ಯಾಸದ ರೆಡಿಮೇಡ್ ಹಾಗೂ ಸ್ಟಿಚಿಂಗ್ ಬುರ್ಖಾಗಳ ಸುಸಜ್ಜಿತ ಮಳಿಗೆ ‘ಬುರ್ಖಾ ಪ್ಯಾಲೇಸ್’ ಇಲ್ಲಿನ ಮುಖ್ಯಪೇಟೆಯ ಅನುಗ್ರಹ ಕಾಂಪ್ಲೆಕ್ಸ್ ನ ಪ್ರಥಮ ಮಹಡಿಯಲ್ಲಿ ಆದಿತ್ಯವಾರದಂದು ಶುಭಾರಂಭಗೊಳ್ಳಲಿದೆ‌. ಅರೇಬಿಕ್ ವಿನ್ಯಾಸಗಳಾದ ಅಬಯ, ನಿಕಾಬ್, ಬುರ್ಖಾ, ಪರ್ಷಿಯನ್ ಚಾದರ್, ದುಪಟ್ಟಾ, ಸಲ್ವಾರ್ ಕಮೀಝ್ ಗಳಲ್ಲದೆ ನವನವೀನ ವಿನ್ಯಾಸಗಳ ಉತ್ತಮ ಗುಣಮಟ್ಟದ ಬುರ್ಖಾಗಳ ಹೊಲಿಗೆಯನ್ನು ಮಾಡಲಾಗುತ್ತದೆ ಎಂದು ಸಂಸ್ಥೆಯ ಪಾಲುದಾರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ 9663189916 ಸಂಖ್ಯೆಯನ್ನು ಸಂಪರ್ಕಿಸಬಹುದಾಗಿದೆ.

ಇಂದು ಕಡಬದಲ್ಲಿ ಬುರ್ಖಾ ಪ್ಯಾಲೇಸ್ ಶುಭಾರಂಭ ► ವಿವಿಧ ವಿನ್ಯಾಸದ ಬುರ್ಖಾಗಳ ಸುಸಜ್ಜಿತ ಮಳಿಗೆ Read More »

ಕರಾವಳಿ
Scroll to Top