ಕರಾವಳಿ

ಉಪ್ಪಿನಂಗಡಿ: ಕುಸಿದು ಬಿದ್ದು ವ್ಯಕ್ತಿ ಮೃತ್ಯು

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಜು.26.  ವ್ಯಕ್ತಿಯೋರ್ವರು ನಡೆದುಕೊಂಡು ಹೋಗುತ್ತಿದ್ದಾಗ  ಕುಸಿದು ಬಿದ್ದು ಮೃತಪಟ್ಟ ಘಟನೆ ಉಪ್ಪಿನಂಗಡಿ ಪೇಟೆಯಲ್ಲಿ  ಬುಧವಾರ ರಾತ್ರಿ ನಡೆದಿದೆ. ಮೃತಪಟ್ಟ ವ್ಯಕ್ತಿಯನ್ನು ಕೇರಳ ಮೂಲದಿಂದ ಬಿದಿರು ಕಡಿಯುವ ಕೆಲಸಕ್ಕೆಂದು ಆಗಮಿಸಿದ್ದ ರಾಮೇಂದ್ರ ಎಂದು ಗುರುತಿಸಲಾಗಿದೆ. ಇವರು ತನ್ನ ಸಹ ಕಾರ್ಮಿಕನೊಂದಿಗೆ ಉಪ್ಪಿನಂಗಡಿ ಪೇಟೆಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಕುಸಿದು ಬಿದ್ದು ಅಸುನೀಗಿದ್ದಾರೆ. ಹೃದಯಾಘಾತದಿಂದ ಮೃತಪಟ್ಟಿರಬಹುದೆಂದು ಶಂಕಿಸಲಾಗಿದೆ.

ಉಪ್ಪಿನಂಗಡಿ: ಕುಸಿದು ಬಿದ್ದು ವ್ಯಕ್ತಿ ಮೃತ್ಯು Read More »

ಕರಾವಳಿ

 ಕಡಬ ತಾಲೂಕು ಪತ್ರಕರ್ತರ ಸಂಘದ ವತಿಯಿಂದ ಪತ್ರಿಕಾ ದಿನಾಚರಣೆ

(ನ್ಯೂಸ್ ಕಡಬ) newskadaba.com ಕಡಬ, ಜು.26. ಸಾಮಾಜಿಕ ಜಾಲತಾಣಗಳು ಮತ್ತು ದೃಶ್ಯ ಮಾಧ್ಯಮಗಳು ಪ್ರಸಕ್ತ ಕಾಲಘಟ್ಟದಲ್ಲಿ ಮುದ್ರಣಾ ಮಾಧ್ಯಮಕ್ಕೆ ಸವಾಲಾಗಿದ್ದು, ವರದಿಗಾರರು ಕ್ಲಿಷ್ಟಕರ ಸನ್ನಿವೇಶದಲ್ಲಿ ಕಾರ್ಯ ನಿರ್ವಹಿಸಬೇಕಾದ ಅನಿವಾರ್ಯತೆ ಎದುರಾಗಿದೆ. ಸಮಾಜದ ಅಭಿವೃದ್ದಿಗೆ ಪುರಕವಾದ ವರದಿ ನೀಡಿದಾಗ ಪತ್ರಕರ್ತನ ಘನತೆ ಹೆಚ್ಚುತ್ತದೆ ಎಂದು ಪುತ್ತೂರು ಉಪವಿಭಾಗ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಎನ್. ಸುಬ್ರಹ್ಮಣ್ಯ ರಾವ್ ಹೇಳಿದರು. ಅವರು ಕಡಬ ತಾಲೂಕು ಪತ್ರಕರ್ತರ ಸಂಘದ ವತಿಯಿಂದ ಶ್ರೀ ರಾಮಕುಂಜೇಶ್ವರ ಮಹಾ ವಿದ್ಯಾಲಯದಲ್ಲಿ ನಡೆದ ಪತ್ರಿಕಾ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ

 ಕಡಬ ತಾಲೂಕು ಪತ್ರಕರ್ತರ ಸಂಘದ ವತಿಯಿಂದ ಪತ್ರಿಕಾ ದಿನಾಚರಣೆ Read More »

ಕರಾವಳಿ

ಕಡಬ: ನೀರಿನಲ್ಲಿ ಮುಳುಗಿ ಯುವಕ ಮೃತ್ಯು

(ನ್ಯೂಸ್ ಕಡಬ) newskadaba.com ಕಡಬ, ಜು.25. ಠಾಣಾ ವ್ಯಾಪ್ತಿಯ ಕೊಲ್ಯದ ಕಟ್ಟೆ ಎಂಬಲ್ಲಿ ಯುವಕನೋರ್ವ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಬುಧವಾರದಂದು ನಡೆದಿದೆ. ಮೃತ ಯುವಕನನ್ನು ಗೋಳಿಯಡ್ಕ ನಿವಾಸಿ ಅಮ್ಮು ಮುಗೇರ ಎಂಬವರ ಪುತ್ರ ವಸಂತ (26) ಎಂದು ಗುರುತಿಸಲಾಗಿದೆ. ಬುಧವಾರದಂದು ಬೆಳಿಗ್ಗೆ ಸ್ಥಳೀಯ ವ್ಯಕ್ತಿಯೊಂದಿಗೆ ಮೀನು ಹಿಡಿಯಲೆಂದು ತೆರಳಿದ್ದ ವಸಂತ ಕೊಲ್ಯದಕಟ್ಟೆ ಪವರ್ ಡ್ಯಾಂ ಬಳಿ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಇಂದು ಬೆಳಿಗ್ಗೆ ಎದೆನೋವು ಇದೆಯೆಂದು ಮನೆಯವರಲ್ಲಿ ತಿಲಿಸಿದ್ದಾರೆನ್ನಲಾಗಿದ್ದು, ಮರಣೋತ್ತರ ಪರೀಕ್ಷೆಯ ನಂತರ ಕಾರಣ

ಕಡಬ: ನೀರಿನಲ್ಲಿ ಮುಳುಗಿ ಯುವಕ ಮೃತ್ಯು Read More »

ಕರಾವಳಿ

ಬೇಲಿಯೇ ಎದ್ದು ಹೊಲ ಮೇಯ್ದರೆ ಏನೆನ್ನಬಹುದು…? ► ಬಜ್ಪೆ: 34 ಲಕ್ಷ ಮೌಲ್ಯದ ಚಿನ್ನ ವಶಕ್ಕೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜು.25. ವಿಮಾನ ನಿಲ್ದಾಣದ ಸಿಬ್ಬಂದಿಯೇ ಅಕ್ರಮವಾಗಿ ಚಿನ್ನವನ್ನು ಸಾಗಿಸುತ್ತಿದ್ದ ವೇಳೆ ದಾಳಿ ನಡೆಸಿರುವ ಕಂದಾಯ ಗುಪ್ತಚರ ನಿರ್ದೇಶಾನಲಯ ಅಧಿಕಾರಿಗಳು 34 ಲಕ್ಷ ಮೌಲ್ಯದ ಚಿನ್ನವನ್ನು ವಶಪಡಿಸಿಕೊಂಡ ಘಟನೆ ಮಂಗಳವಾರದಂದು ನಡೆದಿದೆ. ಬಜ್ಪೆ ವಿಮಾನ ನಿಲ್ದಾಣದಲ್ಲಿ ಜೆಟ್ ಏರ್‌ವೇಸ್‌ನ ಏರ್‌ಕ್ರಾಫ್ಟ್ ನಿರ್ವಹಣೆಯ ತಾಂತ್ರಿಕ ಸಿಬಂದಿಯನ್ಬು ಬಂಧಿಸಿ ಆತನಿಂದ 1166.5 ಗ್ರಾಂ ತೂಕದ 34.41 ಲಕ್ಷ ಮೌಲ್ಯದ ಚಿನ್ನವನ್ನು ವಶಪಡಿಸಿಕೊಳ್ಳಲಾಗಿದೆ. ಈತ ಗಲ್ಫ್ ರಾಷ್ಟ್ರದಿಂದ ಮಂಗಳೂರಿಗೆ ಬರುವ ವಿಮಾನದ ಶೌಚಾಲಯಲ್ಲಿ ಚಿನ್ನವನ್ನು ಬಚ್ಚಿಟ್ಟು ಕಳ್ಳ

ಬೇಲಿಯೇ ಎದ್ದು ಹೊಲ ಮೇಯ್ದರೆ ಏನೆನ್ನಬಹುದು…? ► ಬಜ್ಪೆ: 34 ಲಕ್ಷ ಮೌಲ್ಯದ ಚಿನ್ನ ವಶಕ್ಕೆ Read More »

ಕರಾವಳಿ

ಆಲಂಕಾರು: ಅಕ್ರಮ ಮದ್ಯ ಮಾರಾಟ ಪ್ರಕರಣ ► ಬೈಕ್, ಮದ್ಯದೊಂದಿಗೆ ಆರೋಪಿ ಸೆರೆ

(ನ್ಯೂಸ್ ಕಡಬ) newskadaba.com ಕಡಬ, ಜು.25. ಠಾಣಾ ವ್ಯಾಪ್ತಿಯ ಆಲಂಕಾರು ಪರಿಸರದಲ್ಲಿ ಅಕ್ರಮ ಮದ್ಯ ಮಾರಾಟದ ಬಗ್ಗೆ ಆಲಂಕಾರು ಗ್ರಾಮ ಪಂಚಾಯಿತಿಯಿಂದ ನೀಡಿದ ದೂರಿನಂತೆ ದಾಳಿ ನಡೆಸಿದ ಅಬಕಾರಿ ಇಲಾಖಾ ಅಧಿಕಾರಿಗಳು ಒರ್ವನನ್ನು ಬಂಧಿಸಿ ಬೈಕ್ ಹಾಗೂ 5ಸಾವಿರ ಮೌಲ್ಯದ ಮದ್ಯದ ಬಾಟಲಿಗಳನ್ನು ವಶಪಡಿಸಿಕೊಂಡ ಘಟನೆ ಸೋಮವಾರ ತಡರಾತ್ರಿ ಆಲಂಕಾರಿನಲ್ಲಿ ನಡೆದಿದೆ. ಪೆರಾಬೆ ಗ್ರಾಮದ ಸುರುಳಿ ಮೋನಪ್ಪ ಗೌಡರ ಪುತ್ರ ಕಿಟ್ಟಣ್ಣ ಗೌಡ(53ವ) ಬಂಧಿತ ಆರೋಪಿಯಾಗಿದ್ದು, ಈತ ಆಲಂಕಾರು ಪರಿಸರದಲ್ಲಿ ಅಕ್ರಮ ಮದ್ಯ ಮಾರಾಟ ಮಾಡುತ್ತಿದ್ದ ಬಗ್ಗೆ ಆರೋಪಗಳು

ಆಲಂಕಾರು: ಅಕ್ರಮ ಮದ್ಯ ಮಾರಾಟ ಪ್ರಕರಣ ► ಬೈಕ್, ಮದ್ಯದೊಂದಿಗೆ ಆರೋಪಿ ಸೆರೆ Read More »

ಕರಾವಳಿ

ಮಂಗಳೂರು: ರೌಡಿಶೀಟರ್ ಪುತ್ರನ ಬರ್ಬರ ಹತ್ಯೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜು.25. ಮಾಜಿ ರೌಡಿಶೀಟರ್ ವಾಮಂಜೂರು ರೋಹಿಯ ಪುತ್ರನನ್ನು ತಂಡವೊಂದು ಕೊಚ್ಚಿ ಕೊಲೆಗೈದ ಘಟನೆ ವಾಮಂಜೂರಿನಲ್ಲಿ ಮಂಗಳವಾರದಂದು ಬೆಳಿಗ್ಗೆ ನಡೆದಿದೆ. ರೌಡಿಶೀಟರ್ ವಾಮಂಜೂರು ರೋಹಿಯ ಪುತ್ರ ಇತ್ತೀಚೆಗಷ್ಟೆ ಜೈಲಿನಿಂದ ಬಿಡುಗಡೆಗೊಂಡಿದ್ದ ರೌಡಿಶೀಟರ್ ಪವನ್ ರಾಜ್ ಶೆಟ್ಟಿ (22) ಎಂಬಾತನನ್ನು ವಾಮಂಜೂರು ಕುಕ್ಕಿಪಲ್ಕೆ ಎಂಬಲ್ಲಿ ನಾಲ್ವರು ದುಷ್ಕರ್ಮಿಗಳ ತಂಡವೊಂದು ತಲವಾರಿನಿಂದ ಕೊಚ್ಚಿ ಕೊಲೆಗೈದಿದೆ ಎನ್ನಲಾಗಿದೆ. ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.

ಮಂಗಳೂರು: ರೌಡಿಶೀಟರ್ ಪುತ್ರನ ಬರ್ಬರ ಹತ್ಯೆ Read More »

ಕರಾವಳಿ

ಸಾಂಸ್ಕೃತಿಕ ಲೋಕದ ದಿಗ್ಗಜ, ಡಿಂಡಿಮ ಚಿದಾನಂದ ಕಾಮತ್ ಇನ್ನಿಲ್ಲ

(ನ್ಯೂಸ್ ಕಡಬ) newskadaba.com ಪುತ್ತೂರು, ಜು.24. ಸಾಂಸ್ಕೃತಿಕ ಲೋಕದ ದಿಗ್ಗಜ, ಮೇರುನಟ, ಮಕ್ಕಳ ಪ್ರತಿಭೆಗಳಿಗೆ ಸ್ಪೂರ್ತಿಯಾಗಿದ್ದುಕೊಂಡಿದ್ದ ರಂಗಭೂಮಿಯಲ್ಲಿ ಮತ್ತು ಚಿತ್ರದಲ್ಲೂ ನಟನಾಗಿದ್ದ ಬೊಳುವಾರು ಸಾಂಸ್ಕೃತಿಕ ಕಲಾ ವೇದಿಕೆಯ ಅಧ್ಯಕ್ಷ ಚಿದಾನಂದ ಕಾಮತ್ ಕಾಸರಗೋಡುರವರು ಸೋಮವಾರ ಬೆಳಗಿನ ಜಾವ ನಿಧನರಾದರು. ರಾತ್ರಿ ತೀವ್ರ ಎದೆ ನೋವಿನಿಂದ ಬಳಲುತ್ತಿದ್ದ ಅವರನ್ನು ಪುತ್ತೂರು ಖಾಸಗಿ ಆಸ್ಪತ್ರೆಗೆ ಕರೆದೊಯ್ಯುವ ವೇಳೆ ಮೃತಪಟ್ಟಿದ್ದಾರೆಂದು ತಿಳಿದು ಬಂದಿದೆ. ಮೃತರು ಪತ್ನಿ, ಪುತ್ರ, ಪುತ್ರಿಯನ್ನು ಅಗಲಿದ್ದಾರೆ.

ಸಾಂಸ್ಕೃತಿಕ ಲೋಕದ ದಿಗ್ಗಜ, ಡಿಂಡಿಮ ಚಿದಾನಂದ ಕಾಮತ್ ಇನ್ನಿಲ್ಲ Read More »

ಕರಾವಳಿ

ಎಸ್ಕೆಎಸ್ಸೆಸ್ಸೆಫ್ ಮಾಡಾವು ಯುನಿಟ್ ಅಧ್ಯಕ್ಷರಾಗಿ ಹಾರಿಸ್ ಪಾತುಂಜ ಆಯ್ಕೆ

(ನ್ಯೂಸ್ ಕಡಬ) newskadaba.com ಪುತ್ತೂರು, ಜು.24.  ಎಸ್ಕೆ ಎಸ್ ಎಸ್ ಎಫ್ ಮಾಡಾವು ಯುನಿಟ್ ಇದರ ಅಧ್ಯಕ್ಷರಾಗಿ ಹಾರಿಸ್ ಪಾತುಂಜ, ಪ್ರ್ರಧನ ಕಾರ್ಯದರ್ಶಿಯಾಗಿ ಇಬ್ರಾಹಿಂ ಅಯ್ಯನಕಟ್ಟೆ, ಉಪಾಧ್ಯಕ್ಷರಾಗಿ ನಿಝಾಮ್ ಹೊನೆಸ್ಟ್, ಜೊತೆ ಕಾರ್ಯದರ್ಶಿಯಾಗಿ ಮಸೂದ್ ಮಾಡಾವು ಹಾಗೂ ಸಿರಾಜ್ ಎ.ಕೆ, ಕೋಶಾಧಿಕಾರಿಯಾಗಿ ಸುಲೈಮಾನ್ ಮುಸ್ಲಿಯಾರ್, ಲೆಕ್ಕ ಪರಿಶೋಧಕರಾಗಿ ಹನೀಫ್ ಹಾಜಿ ಹಾಗೂ ಶಾಫಿ ಕಣಿಯಾರ್, ಸಂಘಟನಾ ಕಾರ್ಯದರ್ಶಿಯಾಗಿ ಖಾದರ್ ಮುಸ್ಲಿಯಾರ್ ಹಾಗೂ ಇಸ್ಮಾಯಿಲ್ ಮುಸ್ಲಿಯಾರ್ ಆಯ್ಕೆಯಾಗಿದ್ದಾರೆ. ಗೌರವ ಅಧ್ಯಕ್ಷರಾಗಿ ಇಬ್ರಾಹಿಂ ಹಾಜಿ ಹಾಗೂ ಗೌರವ ಸಲಹೆಗಾರರಾಗಿ ಮೂಸಾ

ಎಸ್ಕೆಎಸ್ಸೆಸ್ಸೆಫ್ ಮಾಡಾವು ಯುನಿಟ್ ಅಧ್ಯಕ್ಷರಾಗಿ ಹಾರಿಸ್ ಪಾತುಂಜ ಆಯ್ಕೆ Read More »

ಕರಾವಳಿ

ಕಡಬ ಸರಕಾರಿ ಪದವಿ ಪೂರ್ವ ಕಾಲೇಜು: ವನಮಹೋತ್ಸವ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಕಡಬ, ಜು.24. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಕಡಬ ಬಿ ಒಕ್ಕೂಟ, ,ಕಡಬ ಸರಕಾರಿ ಪದವಿ ಪೂರ್ವ ಕಾಲೇಜ್ ಹಳೇವಿದ್ಯಾಥಿ೯ ಸಂಘ, ಕಡಬ ರಾಷ್ಟ್ರೀಯ ಸೇವಾ ಯೋಜನೆ ಘಟಕ ದ ಸಂಯುಕ್ತ ಆಶ್ರಯ ದಲ್ಲಿ “ವನಮಹೋತ್ಸವ” ಹಾಗೂ ಬೀಜದಉಂಡೆ ಬಿತ್ತೋತ್ಸವ ಕಾರ್ಯಕ್ರಮವು ಕಡಬ ‌ಸರಕಾರಿ ಪದವಿ ಪೂರ್ವ ಕಾಲೇಜ್ ನ‌ ವಠಾರದಲ್ಲಿ ಶನಿವಾರದಂದು ನಡೆಯಿತು. ಈ ಕಾರ್ಯ ಕ್ರಮದ ಅಧ್ಯಕ್ಷ ತೆಯನ್ನು ಕಡಬ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ರಾದ

ಕಡಬ ಸರಕಾರಿ ಪದವಿ ಪೂರ್ವ ಕಾಲೇಜು: ವನಮಹೋತ್ಸವ ಕಾರ್ಯಕ್ರಮ Read More »

ಕರಾವಳಿ

ಕಡಬ: ಸಾಲ ಬಾಧೆಯಿಂದ ರೈತ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಕಡಬ, ಜು.24. ಠಾಣಾ ವ್ಯಾಪ್ತಿಯ ಕುಟ್ರುಪ್ಪಾಡಿ ನಿವಾಸಿ ರೈತನೋರ್ವ ಸಾಲ ಬಾಧೆಯಿಂದಾಗಿ ಬೇಸತ್ತು ಶನಿವಾರದಂದು ವಿಷ ಸೇವಿಸಿದ್ದು, ಭಾನುವಾರ ರಾತ್ರಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಮೃತಪಟ್ಟ ರೈತನನ್ನು ಕುಟ್ರುಪ್ಪಾಡಿ ಕಾಂಞರವಿಳ ನಿವಾಸಿ ರಾಜು(54) ಎಂದು ಗುರುತಿಸಲಾಗಿದೆ‌. ಅಪಾರ ಸಾಲದಿಂದಿದ್ದು, ಕೃಷಿಯಲ್ಲಿನ ಬೆಲೆಯೇರಿಕೆಯಿಂದಾಗಿ ಬೇಸತ್ತು ಶನಿವಾರ ಸಂಜೆ ವಿಷ ಸೇವಿಸಿದ ರಾಜುರವರು ಪುತ್ತೂರಿನ ಪ್ರಗತಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿದ್ದರು. ಭಾನುವಾರ ರಾತ್ರಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟರೆನ್ನಲಾಗಿದೆ‌.

ಕಡಬ: ಸಾಲ ಬಾಧೆಯಿಂದ ರೈತ ಆತ್ಮಹತ್ಯೆ Read More »

ಕರಾವಳಿ
Scroll to Top