ಕರಾವಳಿ

ಕಡಬ: ಬಿಜೆಪಿ ವಿಸ್ತಾರಕರಿಂದ ಮನೆ ಮನೆ ಭೇಟಿ

(ನ್ಯೂಸ್ ಕಡಬ) newskadaba.com ಕಡಬ, ಜು.14. ಬಿಜೆಪಿ ನೇತೃತ್ವದ ಕೇಂದ್ರ ಸರಕಾರದ ಸಾಧನೆಗಳು ಹಾಗೂ ರಾಜ್ಯದಲ್ಲಿ ಬಿಜೆಪಿ ಸರಕಾರವಿದ್ದ ವೇಳೆ ಜಾರಿಗೊಳಿಸಿದ ಜನಪರ ಯೋಜನೆಗಳ ಬಗ್ಗೆ ಮನೆ ಮನೆಗೆ ತೆರಳಿ ಪ್ರಚಾರಪಡಿಸುವ ಉದ್ದೇಶದಿಂದ ಭಾರತೀಯ ಜನತಾ ಪಾರ್ಟಿಯ ರಾಜ್ಯ ಉಪಾಧ್ಯಕ್ಷ ಕೊಡಗಿನ ಮನು ಮುತ್ತಪ್ಪ ಕಡಬ ಶಕ್ತಿ ಕೇಂದ್ರ ವ್ಯಾಪ್ತಿಯ ಕೋಡಿಂಬಾಳ ಗ್ರಾಮದಲ್ಲಿ ವಿಸ್ತಾರಕರಾಗಿ ಶುಕ್ರವಾರದಂದು ಮನೆ ಮನೆ ಭೇಟಿ ನಡೆಸಿದರು. ಈ ಸಂದರ್ಭದಲ್ಲಿ ಬಿಜೆಪಿ ಕಡಬ ಶಕ್ತಿ ಕೇಂದ್ರದ ಅಧ್ಯಕ್ಷ ವಾಡ್ಯಪ್ಪ ಗೌಡ ಎರ್ಮಾಯಿಲ್, ಕಾರ್ಯದರ್ಶಿ ಪ್ರಕಾಶ್ […]

ಕಡಬ: ಬಿಜೆಪಿ ವಿಸ್ತಾರಕರಿಂದ ಮನೆ ಮನೆ ಭೇಟಿ Read More »

ಕರಾವಳಿ

ಶರತ್ ಕೊಲೆ ನಡೆದು 10 ದಿನ ಕಳೆದರೂ ಆರೋಪಿಗಳ ಬಂಧನವಾಗಿಲ್ಲ ► ಸರಕಾರ ಆರೋಪಿಗಳ ಪರ ನಿಂತಿದೆ : ವಿಹಿಂಪ ಕಾರ್ಯದರ್ಶಿ ಗೋಪಾಲ್

(ನ್ಯೂಸ್ ಕಡಬ) newskadaba.com ಮಂಗಳೂರು, ಜು.14. ಆರೆಸ್ಸೆಸ್ ಕಾರ್ಯಕರ್ತ ಶರತ್ ಮಡಿವಾಳ ಕೊಲೆ ನಡೆದು 10 ದಿನಗಳು ಕಳೆದರೂ ಇನ್ನೂ ಆರೋಪಿಗಳನ್ನು ಬಂಧಿಸಲಾಗಲಿಲ್ಲ. ಸರ್ಕಾರವು ಪೊಲೀಸರಿಗೆ ಬೆಂಬಲ ನೀಡದೆ ಆರೋಪಿಗಳ ಪರವಾಗಿ ನಿಂತಿದೆ. ಪಿಎಫ್ಐ ಮುಖಂಡರನ್ನು ತೀವ್ರ ವಿಚಾರಣೆಗೊಳಪಡಿಸಿದ್ದಲ್ಲಿ ಕೊಲೆ ಆರೋಪಿಗಳು ಯಾರೆಂಬುವುದು ತಿಳಿದು ಬರಲಿದೆ ಎಂದು ವಿಶ್ವ ಹಿಂದೂ ಪರಿಷತ್ ಸಂಘಟನಾ ಕಾರ್ಯದರ್ಶಿ ಗೋಪಾಲ್ ಆರೋಪಿಸಿದ್ದಾರೆ. ಅವರು ಶುಕ್ರವಾರದಂದು ಮಂಗಳೂರಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಹಿಂದೂ ಮುಖಂಡರನ್ನು ಟಾರ್ಗೆಟ್ ಮಾಡಲಾಗುತ್ತಿದ್ದು, ರಾತ್ರೋ ರಾತ್ರಿ ಹಿಂದೂಗಳ ಮನೆಗೆ

ಶರತ್ ಕೊಲೆ ನಡೆದು 10 ದಿನ ಕಳೆದರೂ ಆರೋಪಿಗಳ ಬಂಧನವಾಗಿಲ್ಲ ► ಸರಕಾರ ಆರೋಪಿಗಳ ಪರ ನಿಂತಿದೆ : ವಿಹಿಂಪ ಕಾರ್ಯದರ್ಶಿ ಗೋಪಾಲ್ Read More »

ಕರಾವಳಿ

ಶಾಂತಿಮೊಗರು ಸೇತುವೆ ಲೋಕಾರ್ಪಣೆಗೂ ಮುನ್ನ ಸಂಚಾರ ಮುಕ್ತ ► ಸುಳ್ಯದಿಂದ ಧರ್ಮಸ್ಥಳಕ್ಕೆ 30 ಕಿ.ಮೀ. ಅಂತರ ಕಡಿತ

(ನ್ಯೂಸ್ ಕಡಬ) newskadaba.com ಕಡಬ, ಜು.14. ಪುತ್ತೂರು ತಾಲೂಕಿನ ಶಾಂತಿಮೊಗೇರು ಎಂಬಲ್ಲಿ ಕುಮಾಧಾರ ನದಿಗೆ ನಿರ್ಮಾಣವಾದ ಸೇತುವೆಯಲ್ಲಿ ಬುಧವಾರ ರಾತ್ರಿಯಿಂದ ವಾಹನ ಸಂಚಾರಕ್ಕೆ ಮುಕ್ತಗೊಳಿಸಲಾಗಿದೆ. ಸೇತುವೆ ಉದ್ಘಾಟನೆಗೂ ಮುನ್ನ ಸಂಚಾರ ಆರಂಭವಾಗಿದ್ದು ಜನ ಸಂತಸ ಪಟ್ಟಿದ್ದಾರೆ. ಸುಮಾರು 14 ಕೋಟಿ ರೂ ವೆಚ್ಚದಲ್ಲಿ ನಿರ್ಮಾಣವಾದ ಸೇತುವೆ ಕಾಮಗಾರಿ ಮುಗಿದು ಎರಡು ತಿಂಗಳುಗಳೇ ಕಳೆದಿದ್ದರೂ ಉದ್ಘಾಟನೆಗಾಗಿ ಸಂಚಾರವನ್ನು ತಡೆಹಿಡಿಯಲಾಗಿತ್ತು. ಹಲವು ಸಲ ಉದ್ಘಾಟನೆ ದಿನಾಂಕ ನಿಗದಿಯಾಗಿ ಮುಂದೂಡಿಕೆಯಾಗಿತ್ತು. ಇತ್ತ ಜನತೆ ಸೇತುವೆ ಕಾಮಗಾರಿ ಮುಗಿದರೂ ಸಂಚಾರ ಮುಕ್ತಗೊಳಿಸಲು ಒತ್ತಾಯಿಸುತ್ತಿದ್ದರು. ಬುಧವಾರ

ಶಾಂತಿಮೊಗರು ಸೇತುವೆ ಲೋಕಾರ್ಪಣೆಗೂ ಮುನ್ನ ಸಂಚಾರ ಮುಕ್ತ ► ಸುಳ್ಯದಿಂದ ಧರ್ಮಸ್ಥಳಕ್ಕೆ 30 ಕಿ.ಮೀ. ಅಂತರ ಕಡಿತ Read More »

ಕರಾವಳಿ

ಜಿಲ್ಲೆಯಲ್ಲಿ ಕಳೆದೆರಡು ದಿನಗಳಿಂದ ಯಾವುದೇ ಕೋಮು ಘರ್ಷಣೆಗಳು ನಡೆದಿಲ್ಲ ► ಕೆಲವು ಘಟನೆಗಳು ವೈಯಕ್ತಿಕ: ಪೊಲೀಸ್ ಅಧಿಕಾರಿಗಳಿಂದ ಸ್ಪಷ್ಟನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜು.12. ಇತ್ತೀಚಿನ ದಿನಗಳಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಮಂಗಳೂರು ನಗರದಲ್ಲಿ ಕೆಲವು ಅಹಿತಕರ ಘಟನೆಗಳು ಜರುಗಿದ್ದು, ಕಳೆಡೆರಡು ದಿನಗಳಲ್ಲಿ ಯಾವುದೇ ಮತೀಯ ಗಲಭೆಗೆ ಹಾಗೂ ಅಹಿತಕರ ಘಟನೆಗಳು ಜರುಗದಂತೆ ಸೂಕ್ತ ಕ್ರಮಗಳನ್ನು ತಗೆದುಕೊಂಡದ್ದು ಇರುತ್ತದೆ. ಕಳೆದ 24 ಗಂಟೆಗಳಲ್ಲಿ ನಡೆದಂತಹ ಘಟನೆಗಳು ಯಾವುದೇ ಮತೀಯ ವಿಚಾರಗಳಿಗೆ ಸಂಬಂಧಿಸಿದ್ದಾಗಿರುವುದಿಲ್ಲ. ಹಾಗೂ ಈ ವೇಳೆಯಲ್ಲಿ ನಡೆದಂತಹ ಮೂರು ಪ್ರಕರಣಗಳ ಸಂಕ್ಷಿಪ್ತ ವಿವರ ಕೆಳಕಂಡಂತೆ ಇರುತ್ತದೆ. ದಿನಾಂಕ 10-07-2017 ರಂದು ಸುಮಾರು 07-00 ಗಂಟೆಗೆ

ಜಿಲ್ಲೆಯಲ್ಲಿ ಕಳೆದೆರಡು ದಿನಗಳಿಂದ ಯಾವುದೇ ಕೋಮು ಘರ್ಷಣೆಗಳು ನಡೆದಿಲ್ಲ ► ಕೆಲವು ಘಟನೆಗಳು ವೈಯಕ್ತಿಕ: ಪೊಲೀಸ್ ಅಧಿಕಾರಿಗಳಿಂದ ಸ್ಪಷ್ಟನೆ Read More »

ಕರಾವಳಿ

ಇಚಿಲಂಪಾಡಿ ಚರ್ಚಿನಲ್ಲಿ ಮತ್ತೆ ಕಳ್ಳತನಕ್ಕೆ ವಿಫಲ ಯತ್ನ ► ಸಿ.ಸಿ. ಕ್ಯಾಮೆರಾದಲ್ಲಿ ಸೆರೆಯಾಯ್ತು ಕಳ್ಳರ ಫೋಟೊ

(ನ್ಯೂಸ್ ಕಡಬ) newskadaba.com ಕಡಬ,ಜು.11. ಠಾಣಾ ವ್ಯಾಪ್ತಿಯ ಇಚಿಲಂಪಾಡಿ ಸೈಂಟ್ ಜಾರ್ಜ್ ಸಿರಿಯನ್ ಜಾಕೋಬೈಟ್ ಚರ್ಚಿಗೆ ನುಗಿರುವ ಕಳ್ಳರು ಕಳ್ಳತನಕ್ಕೆ ವಿಫಲ ಯತ್ನ ನಡೆಸಿರುವುದು ತಡವಾಗಿ ಬೆಳಕಿಗೆ ಬಂದಿದೆ. ಭಾನುವಾರದಂದು ರಾತ್ರಿ ಸಮಯದಲ್ಲಿ ಚರ್ಚಿಗೆ ಮುಂಭಾಗದಲ್ಲಿ ಬೈಕ್ ನಿಲ್ಲಿಸಿ ಇಬ್ಬರು ಯುವಕರು ಚರ್ಚಿಗೆ ಆಗಮಿಸಿ ಕಳ್ಳತನಕ್ಕೆ ಯತ್ನಿಸಿರುವ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.  ಘಟನೆ ಸೋಮವಾರದಂದು ಬೆಳಕಿಗೆ ಬಂದಿದ್ದು, ಮಂಗಳವಾರದಂದು ಕಡಬ ಠಾಣೆಗೆ ದೂರು ನೀಡಲಾಗಿದೆ. ಕಳೆದ ಜೂ. 15ರಂದು ಇದೇ ಚರ್ಚಿಗೆ ನುಗ್ಗಿದ್ದ ಕಳ್ಳರು ಚರ್ಚಿನ

ಇಚಿಲಂಪಾಡಿ ಚರ್ಚಿನಲ್ಲಿ ಮತ್ತೆ ಕಳ್ಳತನಕ್ಕೆ ವಿಫಲ ಯತ್ನ ► ಸಿ.ಸಿ. ಕ್ಯಾಮೆರಾದಲ್ಲಿ ಸೆರೆಯಾಯ್ತು ಕಳ್ಳರ ಫೋಟೊ Read More »

ಕರಾವಳಿ

ಉಪ್ಪಿನಂಗಡಿ: ಪಿಕಪ್ ಚಾಲಕನಿಗೆ ತಂಡದಿಂದ ಹಲ್ಲೆ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಜು.11. ವ್ಯಕ್ತಿಯೋರ್ವರ ಮೇಲೆ ದುಷ್ಕರ್ಮಿಗಳ ತಂಡವೊಂದು ಹಲ್ಲೆ ನಡೆಸಿ ಪರಾರಿಯಾದ ಘಟನೆ ಮಂಗಳವಾರದಂದು ಉಪ್ಪಿನಂಗಡಿಯಲ್ಲಿ ನಡೆದಿದೆ. ಮಠ ನಿವಾಸಿ ಅಬ್ದುಲ್ ರಹ್ಮಾನ್ (೪೫) ಹಲ್ಲೆಗೊಳಗಾದವರು. ಇವರು ಗ್ಯಾಸ್ ಸಿಲಿಂಡರ್ ವಿತರಕ ಪಿಕಪ್ ಚಾಲಕನಾಗಿದ್ದು, ಎಂದಿನಂತೆ ಮಂಗಳವಾರ ಕೂಡ ಸೇಲ್ಸ್ ಮೆನ್ ರಝಾಕ್ ಅವರನ್ನು ಕರೆದುಕೊಂಡು ಬರಲು ಮೇದರಬೆಟ್ಟಿಗೆ ಬರುತಿದ್ದರು. ಆ ಸಂದರ್ಭ ಮೇದರಬೆಟ್ಟು ಬಳಿ ಇವರ ಟೆಂಪೋವನ್ನು ಅಡ್ಡಗಟ್ಟಿದ ಓಮ್ನಿಯಲ್ಲಿದ್ದ ತಂಡವೊಂದು ಹಲ್ಲೆ ನಡೆಸಿ, ಟೆಂಪೋಗೆ ಕಲ್ಲು ಹೊಡೆದು ಪರಾರಿಯಾಗಿದೆ. ಗಾಯಾಳು ಅಬ್ದುಲ್

ಉಪ್ಪಿನಂಗಡಿ: ಪಿಕಪ್ ಚಾಲಕನಿಗೆ ತಂಡದಿಂದ ಹಲ್ಲೆ Read More »

ಕರಾವಳಿ

ಇಂದಿನಿಂದ ಕಡಬದ ನವದುರ್ಗಾ ಟೆಕ್ಸ್ ಟೈಲ್ಸ್ ನಲ್ಲಿ ಮಾನ್ಸೂನ್ ಡಿಸ್ಕೌಂಟ್ ಸೇಲ್

(ನ್ಯೂಸ್ ಕಡಬ) newskadaba.com ಕಡಬ, ಜು.11. ಇಲ್ಲಿನ ಪೊಲೀಸ್ ಠಾಣೆಯ ಮುಂಭಾಗದಲ್ಲಿರುವ ದುರ್ಗಾಂಬಿಕಾ ಟವರ್ ನಲ್ಲಿ ಕಳೆದ ಹಲವಾರು ವರ್ಷಗಳಿಂದ ಕಾರ್ಯಾಚರಿಸುತ್ತಿದ್ದ ನವದುರ್ಗಾ ಟೆಕ್ಸ್ ಟೈಲ್ಸ್ ನಲ್ಲಿ ಮಾನ್ಸೂನ್ ಡಿಸ್ಕೌಂಟ್ ಸೇಲ್ ಜುಲೈ 11 ಮಂಗಳವಾರದಿಂದ ಪ್ರಾರಂಭಗೊಂಡು ಜುಲೈ 20 ಗುರುವಾರದವರೆಗೆ ನಡೆಯಲಿದೆ. ಮಳೆಗಾಲದ ಹೊಚ್ಚ ಹೊಸ ಸಂಗ್ರಹದೊಂದಿಗೆ ಅತ್ಯಾಕರ್ಷಕ ವಿನ್ಯಾಸಗಳ ವಿನೂತನ ವಸ್ತ್ರಗಳನ್ನು ತರಿಸಲಾಗಿದ್ದು, ಗ್ರಾಹಕರು ಎಂದಿನಂತೆ ಸಹಕರಿಸಬೇಕಾಗಿ ಸಂಸ್ಥೆಯ ಪ್ರಕಟಣೆ ತಿಳಿಸಿದೆ. ಹೆಚ್ಚಿನ ಮಾಹಿತಿಗಳಿಗಾಗಿ 9449302183 ಸಂಖ್ಯೆಯನ್ನು ಸಂಪರ್ಕಿಸಬಹುದು.

ಇಂದಿನಿಂದ ಕಡಬದ ನವದುರ್ಗಾ ಟೆಕ್ಸ್ ಟೈಲ್ಸ್ ನಲ್ಲಿ ಮಾನ್ಸೂನ್ ಡಿಸ್ಕೌಂಟ್ ಸೇಲ್ Read More »

ಕರಾವಳಿ

ಅಪಘಾತದ ಗಾಯಾಳು ಮುಸಲ್ಮಾನರನ್ನು ಆಸ್ಪತ್ರೆಗೆ ದಾಖಲಿಸಿದ ಹಿಂಜಾವೇ ಅಧ್ಯಕ್ಷ ► ಕರಾವಳಿಯ ಕೋಮು ಸಂಘರ್ಷದ ಮಧ್ಯೆಯೂ ಮಾನವೀಯತೆ ಜೀವಂತ

(ನ್ಯೂಸ್ ಕಡಬ) newskadaba.com ಮಂಗಳೂರು, ಜು.10. ಕರಾವಳಿಯು ಕಳೆದ ಒಂದು ತಿಂಗಳಿನಿಂದ ಕೋಮು ದಳ್ಳುರಿಯಿಂದ ಹೊತ್ತಿ ಉರಿಯುತ್ತಿದ್ದು, ಕೋಮು ಸಂಘರ್ಷಕ್ಕೆ ಎರಡು ಹೆಣಗಳು ಉರುಳಿವೆ. ಎರಡೂ ಧರ್ಮಗಳ ನಡುವೆ ಸರಿಪಡಿಸಲಾಗದಷ್ಟು ದೊಡ್ಡ ಕಂದಕ ನಿರ್ಮಾಣವಾಗಿದೆ. ದಿನಂಪ್ರತಿ ಕೋಮು ಪ್ರಚೋದಿತ ಹಿಂಸಾಚಾರಗಳ ಬಗ್ಗೆ ಮಾಧ್ಯಮಗಳಲ್ಲಿ ಬರುವ ವರದಿಗಳು ಜಿಲ್ಲೆಯ ಶಾಂತಿಪ್ರಿಯ ನಾಗರೀಕರನ್ನು ಆತಂಕಕ್ಕೀಡುಮಾಡಿದೆ. ಇವೆಲ್ಲದರ ಮಧ್ಯೆ 5 ದಿನಗಳ ಹಿಂದೆ ಪುತ್ತೂರಿನ ಅರಿಯಡ್ಕದಲ್ಲಿ ನಡೆದ ಅಪಘಾತ ಪ್ರಕರಣದಲ್ಲಿ ಮುಸ್ಲಿಂ ಸಮುದಾಯಕ್ಕೆ ಸೇರಿದ ಗಾಯಾಳು ಯುವಕರನ್ನು ಹಿಂದೂ ಸಂಘಟನೆಯ ಪ್ರಮುಖರೊಬ್ಬರು ಆಸ್ಪತ್ರೆಗೆ

ಅಪಘಾತದ ಗಾಯಾಳು ಮುಸಲ್ಮಾನರನ್ನು ಆಸ್ಪತ್ರೆಗೆ ದಾಖಲಿಸಿದ ಹಿಂಜಾವೇ ಅಧ್ಯಕ್ಷ ► ಕರಾವಳಿಯ ಕೋಮು ಸಂಘರ್ಷದ ಮಧ್ಯೆಯೂ ಮಾನವೀಯತೆ ಜೀವಂತ Read More »

ಕರಾವಳಿ

ರಾಮಕುಂಜ: ಮಲೇರಿಯಾ ವಿರೋಧಿ ಮಾಸಾಚರಣೆ

(ನ್ಯೂಸ್ ಕಡಬ) newskadaba.com ರಾಮಕುಂಜ ಜು.10. ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ದಕ್ಷಿಣ ಕನ್ನಡ ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿಗಳ ಕಛೇರಿ ದ.ಕ. ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರ ಕೊೖಲ, ಶ್ರೀ ರಾಮಕುಂಜೇಶ್ವರ ಮಹಾವಿದ್ಯಾಲಯದ ರೆಡ್ ಕ್ರಾಸ್ ಸಂಘ ಇದರ ಸಹಯೋಗದಲ್ಲಿ ಮಲೇರಿಯಾ ವಿರೋಧಿ ಮಾಸಾಚರಣೆಯು ರಾಮಕುಂಜ ಪಂಚಾಯತ್ ಸಭಾಭವನದಲ್ಲಿ ಜರಗಿತು. ಈ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಾದ ರವಿಚಂದ್ರ ಯು ಸ್ವಚ್ಛತೆ, ಆರೋಗ್ಯ

ರಾಮಕುಂಜ: ಮಲೇರಿಯಾ ವಿರೋಧಿ ಮಾಸಾಚರಣೆ Read More »

ಕರಾವಳಿ

ಬಂಟ್ವಾಳ ಗಲಭೆ ಹಿನ್ನೆಲೆಯಲ್ಲಿ ಪ್ರತ್ಯೇಕ ಸೈಬರ್‍ಸೆಲ್ ತಂಡ ರಚನೆ ► ವಾಟ್ಸ್ಅಪ್‍ಗಳಲ್ಲಿ ಪ್ರಚೋದನಕಾರಿ ಸಂದೇಶ ಕಳುಹಿಸಿದರೆ ಅಡ್ಮಿನ್‍ಗಳು ಜೈಲಿಗೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜು.09. ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಕಾರಿ, ಸುಳ್ಳು ಮೆಸೇಜ್‌ಗಳನ್ನು ಕಳುಹಿಸುವವರ ಪತ್ತೆ ಹಚ್ಚಲು ಪ್ರತ್ಯೇಕ ಸೈಬರ್ ಸೆಲ್ ತಂಡ ರಚಿಸಲಾಗಿದೆ. ವಾಟ್ಸ್‌ಅಪ್‌ನಲ್ಲಿ ಪ್ರಚೋದನಕಾರಿ ಮೆಸೇಜ್ ಯಾರು ಕಳುಹಿಸಿದರೂ ಅಡಿಮಿನ್ ಹೊಣೆಯಾಗುತ್ತಾನೆ ಎಂದು ಎಂದು ಪಶ್ಚಿಮ ವಲಯ ಐಜಿಪಿ ಪಿ.ಹರಿಶೇಖರನ್ ಎಚ್ಚರಿಸಿದ್ದಾರೆ. ಅವರು ಭಾನುವಾರದಂದು ಬಂಟ್ವಾಳದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಬಂಟ್ವಾಳ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇದೀಗ ಪರಿಸ್ಥಿತಿ ಶಾಂತವಾಗಿದೆ. ಯಾವುದೇ ಅಹಿತಕರ ಕ್ರಮ ನಡೆಯದಂತೆ ಜಾಗ್ರತೆ ವಹಿಸಲಾಗಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ರಾಜ್ಯದ ವಿವಿಧ ಜಿಲ್ಲೆಗಳಿಂದ

ಬಂಟ್ವಾಳ ಗಲಭೆ ಹಿನ್ನೆಲೆಯಲ್ಲಿ ಪ್ರತ್ಯೇಕ ಸೈಬರ್‍ಸೆಲ್ ತಂಡ ರಚನೆ ► ವಾಟ್ಸ್ಅಪ್‍ಗಳಲ್ಲಿ ಪ್ರಚೋದನಕಾರಿ ಸಂದೇಶ ಕಳುಹಿಸಿದರೆ ಅಡ್ಮಿನ್‍ಗಳು ಜೈಲಿಗೆ Read More »

ಕರಾವಳಿ
Scroll to Top